ಖಾತೆ ಹಂಚಿಕೆಯಾದ ಬೆನ್ನಲ್ಲೇ ಆರೋಗ್ಯ ಸಚಿವ ಯುಟಿ ಖಾದರ್ ಕಾರ್ಯಪ್ರವೃತ್ತರಾಗಿದ್ದಾರೆ. ಜಯನಗರದ ಜನರಲ್ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ್ದಾರೆ. ಆಸ್ಪತ್ರೆಯ ಸ್ವಚ್ಛತೆ, ರೋಗಿಗಳಿಗೆ ಚಿಕಿತ್ಸೆ ಸರಿಯಾಗಿ ಸಿಗುತ್ತಿದೆಯಾ ಎಂದು ಪರಿಶೀಲನೆ ನಡೆಸಿದ್ದಾರೆ. ರಾತ್ರಿ ಪಾಳಯದ ವೈದ್ಯರು ಗೈರಾಗಿರುವುದನ್ನು ಖಾದರ್ ಗಮನಿಸಿದ್ದಾರೆ. ಈ ಬಗ್ಗೆ ವಿಚಾರಣೆ ನಡೆಸಲಾಗುತ್ತದೆ ಎಂದು ಯುಟಿ ಖಾದರ್ ಹೇಳಿದ್ದಾರೆ. ಹೊಸ ಸಚಿವರ ಕೆಲಸ, ರಾಜ್ಯ ರಾಜಕಾರಣ ಸೇರಿದಂತೆ ಇಂದಿನ ಪ್ರಮುಖ ಸುದ್ದಿಗಳ ಕ್ಷಣ ಕ್ಷಣದ ಲೈವ್ ಅಪ್ಡೇಟ್ ಇಲ್ಲಿದೆ.

09:12 PM (IST) Jun 05
ಆಟವಾಡುತ್ತಿದ್ದ ವೇಳೆ ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 9 ವರ್ಷದ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ದುರ್ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಸೈಯದ್ ಸಾಬ್ ಪಾಳ್ಯದಲ್ಲಿ ನಡೆದಿದೆ.
08:54 PM (IST) Jun 05
ಸರ್ಕಾರ ಬದಲಾವಣೆ ಆದಾಗ ಸಹಜವಾಗಿ ಇವೆಲ್ಲಾ ನಡೆಯುತ್ತವೆ, ಅಂತಹ ಸಂದರ್ಭದಲ್ಲಿ ಮನಸ್ತಾಪಗಳು ಇದ್ದೇ ಇರುತ್ತವೆ ಎಂದು ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ಅವರು ರಾಜೀನಾಮೆ ನೀಡಿರುವ ವಿಚಾರಕ್ಕೆ ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಪ್ರತಿಕ್ರಿಯಿಸಿದ್ದಾರೆ.
08:25 PM (IST) Jun 05
ಅವರೆಲ್ಲ ಸ್ವಂತ ಸೂರಿಲ್ಲದೆ ಲೈನ್ ಮನೆಗಳಲ್ಲಿ ಬದುಕು ದೂಡುತ್ತಿದ್ದವರು. 9 ವರ್ಷಗಳ ಹಿಂದೆ ಬಂದು ಇಂಚಿಂಚು ಜಾಗಕ್ಕೆ ಹೋರಾಟ ನಡೆಸಿದ್ದರು. ಸ್ವಂತ ಸೂರಿನ ಹೋರಾಟಕ್ಕೆ ಕೊನೆಗೂ ಫಲ ಸಿಕ್ಕಿದೆ.
07:53 PM (IST) Jun 05
ಲವ್ ಮಾಕ್ಟೇಲ್-3 ಯಶಸ್ಸಿನ ನಂತರ, ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್ ದಂಪತಿ ಮಹೀಂದ್ರಾದ ವಿಶೇಷ ಆವೃತ್ತಿಯ XEV 9e Cineluxe ಕಾರನ್ನು ಖರೀದಿಸಿದ್ದಾರೆ. ಈ ಕಾರು 500+ ಕಿ.ಮೀ ರೇಂಜ್, ಹೋಮ್ ಥಿಯೇಟರ್ ಅನುಭವ ನೀಡುವ ಡಿಸ್ಪ್ಲೇ ಇದರಲ್ಲಿದೆ.
07:49 PM (IST) Jun 05
ಬಾತ್ರೂಂಗೆ ಯಾವ ಬಾಗಿಲು ಹಾಕಿಸೋದು ಬೆಸ್ಟ್? ನೀರು ಬಿದ್ದು ಹಾಳಾಗದ ಡೋರ್ ಯಾವುದು? WPC ಮತ್ತು uPVC ಬಾಗಿಲುಗಳು ತೇವಾಂಶಕ್ಕೆ ಹಾಳಾಗುವುದಿಲ್ಲವೇ? ಮರದ ಬಾಗಿಲುಗಳನ್ನು ಯಾಕೆ ಬಾತ್ರೂಂಗೆ ಬಳಸಬಾರದು? ಈ ಎಲ್ಲಾ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ.
07:27 PM (IST) Jun 05
ಕಾಂಗ್ರೆಸ್ ಸರ್ಕಾರದಿಂದ ಯಾವುದೇ ಒಳ್ಳೆಯ ಕೆಲಸ ಆಗಿಲ್ಲ. ಮುಂದಿನ ಎರಡು ವರ್ಷವಾದರೂ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರ ಒಳ್ಳೆಯ ಕೆಲಸ ಮಾಡಲಿ ಎಂಬ ನಿರೀಕ್ಷೆ ಹೊಂದಿದ್ದೇವೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ತಿಳಿಸಿದರು.
07:23 PM (IST) Jun 05
07:07 PM (IST) Jun 05
06:57 PM (IST) Jun 05
06:24 PM (IST) Jun 05
ಹೈಕಮಾಂಡ್ ಬೆಂಬಲಿಗರು ಮಾತ್ರ ಆಗಿದ್ದು ಡಿಕೆಶಿ ಕೇವಲ ಕೀಲುಗೊಂಬೆಯಾಗಿದ್ದು ಸಿದ್ಧರಾಮಯ್ಯ ಮತ್ತು ಹೈಕಮಾಂಡ್ ಹೇಳಿದಂತೆ ನಡೆಯಬೇಕಾಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವ್ಯಂಗ್ಯವಾಡಿದರು.
05:31 PM (IST) Jun 05
ನಕಲಿ ಸಿಮ್ ನೀಡಿ 'ಸಿಮ್ ಸ್ವಾಪ್' ವಂಚನೆಗೆ ದಾರಿ ಮಾಡಿಕೊಟ್ಟರೆ, ಅದರಿಂದ ಗ್ರಾಹಕರಿಗೆ ಉಂಟಾಗುವ ಹಣಕಾಸಿನ ನಷ್ಟಕ್ಕೆ ಟೆಲಿಕಾಂ ಕಂಪನಿಗಳೇ ಹೊಣೆ ಎಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದೆ. ನಿರ್ಲಕ್ಷ್ಯ ವಹಿಸಿದ ಬಿಎಸ್ಎನ್ಎಲ್ಗೆ ಸಹಕಾರಿ ಬ್ಯಾಂಕ್ಗೆ ₹55.5 ಲಕ್ಷ ದಂಡ ಪಾವತಿಸಲು ಆದೇಶಿಸಿದೆ.
04:38 PM (IST) Jun 05
ಪೆದ್ದಿ ಬಿಡುಗಡೆಗೆ ಮುನ್ನ ನಟ ರಾಮ್ ಚರಣ್ ಮತ್ತು ನಿರ್ದೇಶಕ ಬುಚ್ಚಿ ಬಾಬು ಸನಾ ಈ ಸಿನಿಮಾ ಕುರಿತು ಕೊಂಚ ಅತಿಯೇ ಅನ್ನಿಸುವಷ್ಟು ಬಿಲ್ಡಪ್ ಕೊಟ್ಟಿದ್ದರು. ಸಿನಿಮಾ ರಂಗದಲ್ಲೇ ಇದೊಂದು ಹೊಸ ಇತಿಹಾಸ ಸೃಷ್ಟಿಸಲಿದೆ.
04:30 PM (IST) Jun 05
04:29 PM (IST) Jun 05
04:21 PM (IST) Jun 05
ಪಾತ್ರ ಚಿತ್ರಣ. ಸಾಮಾನ್ಯವಾಗಿ ಒಬ್ಬ ನಾಯಕ ನಟನನ್ನು ಪರಿಚಯಿಸುವಾಗ ದೊಡ್ಡ ಪ್ರಮಾಣದಲ್ಲಿ ಸಿನಿಮಾ ಮಾಡಲು ಮುಂದಾಗುತ್ತಾರೆ. ಪಾತ್ರದ ಶೇಡ್ಸ್ ಅದ್ಭುತವಾಗಿತ್ತು ಎಂದು ಪ್ರಿಯಾ ಸುದೀಪ್ ಸಂದರ್ಶನದಲ್ಲಿ ಹೇಳಿದರು.
03:10 PM (IST) Jun 05
02:34 PM (IST) Jun 05
01:58 PM (IST) Jun 05
01:41 PM (IST) Jun 05
ಡಿಕೆ ಶಿವಕುಮಾರ್ ನೇತೃತ್ವದ ಸರ್ಕಾರಕ್ಕೆ ಆರಂಭದಲ್ಲೇ ಸಂಕಷ್ಟಗಳು ಎದುರಾಗುತ್ತಿವೆ. ಖಾತೆ ಹಂಚಿಕೆ ವಿಚಾರವಾಗಿ ಅಸಮಾಧಾನಗೊಂಡು ಸಚಿವ ರಾಮಲಿಂಗಾ ರೆಡ್ಡಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ, ಕೆಎಚ್ ಮುನಿಯಪ್ಪ ಕೂಡ ಡಿಕೆಶಿ ನಡೆಗೆ ಅಸಮಾಧಾನ ಹೊರಹಾಕಿದ ಬೆನ್ನಲ್ಲೆ ಇದೀಗ ಕೆಜೆ ಜಾರ್ಜ್ ಕೂಡ ಅಸಮಾಧಾನ.
12:42 PM (IST) Jun 05
12:14 PM (IST) Jun 05
11:38 AM (IST) Jun 05
ಡಿಕೆ ಶಿವಕುಮಾರ್ಗೆ ಖಾತೆ ಹಂಚಿಕೆ ದಿನದಿಂದ ದಿನಕ್ಕೆ ಕಗ್ಗಾಂಟಾಗುತ್ತಿದೆ. ಆಹಾರ ಖಾತೆ ಸಚಿವ ಕೆಹೆಚ್ ಮುನಿಯಪ್ಪ ಮುನಿಸಾಗಿದ್ದಾರೆ. ರಾಮಲಿಂಗಾ ರೆಡ್ಡಿ ರಾಜೀನಾಮೆ ಬೆನ್ನಲ್ಲೇ ಮುನಿಯಪ್ಪ ಇದೀಗ ಬೇರೆ ಖಾತೆಗೆ ಪಟ್ಟು ಹಿಡಿದಿದ್ದಾರೆ.
11:37 AM (IST) Jun 05
ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದ ನೂತನ ಸರ್ಕಾರದಲ್ಲಿ, ಬಯಸಿದ ಖಾತೆ ಸಿಗದ ಕಾರಣಕ್ಕೆ ಹಿರಿಯ ಸಚಿವ ರಾಮಲಿಂಗಾ ರೆಡ್ಡಿ ರಾಜೀನಾಮೆ ನೀಡಿದ್ದಾರೆ. ಈ ಬೆಳವಣಿಗೆ ಬಗ್ಗೆ ಸಿಟಿ ರವಿ ಅವರು ಪ್ರತಿಕ್ರಿಯಿಸಿದ್ದು ಈ ಸರ್ಕಾರದಲ್ಲಿ ಎಲ್ಲವೂ ಸರಿಯಿಲ್ಲ ಎಂಬುದನ್ನು ಇದು ಸೂಚಿಸಿದೆ ಎಂದರು.
11:20 AM (IST) Jun 05
10:47 AM (IST) Jun 05
ಮುರಿನ ಕಟ್ಟೆ ಧ್ವಂಸ ಪ್ರಕರಣ ಸಂಬಂಧ ಹಿಂದೂ ಸಂಘಟನೆಗಳು ಕೆರಳಿದೆ. ಅನ್ಯ ಕೋಮಿನ ಸಮುದಾಯದ ಉದ್ರಿಕ್ತರು ಮುರಿನ ಕಟ್ಟೆ ಧ್ವಂಸಗೊಳಿಸಿರುವುದು ಹಾಗೂ ಕಟ್ಟೆ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿ ಇಂದು ಬಂದ್ ನಡೆಸಲಾಗುತ್ತಿದೆ.
10:44 AM (IST) Jun 05
ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಬೆಡಶೆಟ್ಟಹಳ್ಳಿಯಲ್ಲಿ ಆಘಾತಕಾರಿ, ಅಮಾನವೀಯ ಘಟನೆ ನಡೆದಿದೆ, ರಾತ್ರಿ ಶೆಡ್ನಲ್ಲಿ ಮಲಗಿದ್ದ 50ಕ್ಕು ಹೆಚ್ಚು ಕುರಿಗಳ ಮೇಲೆ ದುಷ್ಮರ್ಮಿಗಳು ಚಾಕು ಮಚ್ಚು ದಾಳಿಸಿದ್ದಾರೆ. ಐದು ಕುರಿಗಳು ನರಳಾಡಿ ಸತ್ತಿವೆ ಉಳಿದ ಕುರಿಗಳು ಸ್ಥಿತಿ ಗಂಭೀರವಾಗಿದೆ.
10:38 AM (IST) Jun 05
ಕರ್ನಾಟಕ ಸರ್ಕಾರದಲ್ಲಿ ಬೆಂಗಳೂರು ನಗರಾಭಿವೃದ್ಧಿ ಖಾತೆಗಾಗಿ ಸಚಿವರ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಈ ಖಾತೆಯು ಬೃಹತ್ ಬಜೆಟ್, ಪ್ರಮುಖ ಸಂಸ್ಥೆಗಳ ಮೇಲಿನ ನಿಯಂತ್ರಣ, ಮತ್ತು ಅಪಾರ ರಾಜಕೀಯ ಪ್ರಭಾವವನ್ನು ನೀಡುವುದರಿಂದ, ಸಚಿವರು ಇದಕ್ಕಾಗಿ ಪಟ್ಟು ಹಿಡಿಯುತ್ತಾರೆ.
10:34 AM (IST) Jun 05
ರಾಮಲಿಂಗಾ ರೆಡ್ಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಇದೀಗ ಸರ್ಕಾರಕ್ಕೆ ಮತ್ತೊಂದು ಶಾಕ್ ಎದುರಾಗಿದೆ. ಸಾಮೂಹಿಕ ರಾಜೀನಾಮೆಗೆ ಕಾಂಗ್ರೆಸ್ ಕಾರ್ಯಕರ್ತರು ಆಗಮಿಸಿದ್ದಾರೆ. ಸರ್ಕಾರ ರಚನೆಯಾದ ಕೆಲವೇ ದಿನಕ್ಕೆ ಕೋಲಾಹಲ ತೀವ್ರಗೊಂಡಿದೆ.
10:07 AM (IST) Jun 05
ಡಿಕೆ ಶಿವಕುಮಾರ್ ಸರ್ಕಾರದಲ್ಲಿ ಮೊದಲ ವಿಕೆಟ್ ಪತನಗೊಂಡಿದೆ. ಸಚಿವ ರಾಮಲಿಂಗಾ ರೆಡ್ಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದೇ ವೇಳೆ ತಮ್ಮ ರಾಜೀನಾಮೆಗೆ ಖಾತೆ ಕಾರವಲ್ಲ, ನೋವು ಎಂದಿದ್ದಾರೆ.
09:55 AM (IST) Jun 05
09:42 AM (IST) Jun 05
ತೀವ್ರ ಬೇಸರಗೊಂಡಿರುವ ಸಚಿವ ರಾಮಲಿಂಗಾ ರೆಡ್ಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನನಗೆ ಕೊಡ್ತೇನೆ ಎಂದು ಕಿತ್ತುಕೊಂಡಿದ್ದಾರೆ. ಇದು ನನಗೆ ತೀವ್ರ ಬೇಸರ ತರಿಸಿದೆ. ಯಾವುದೇ ಮಾತುಕತೆಗೆ ನಾನು ಮಣಿಯುವುದಿಲ್ಲ ಎಂದಿದ್ದಾರೆ.
09:28 AM (IST) Jun 05
ಮುನಿಸಿಕೊಂಡಿರುವ ಸಚಿವ ರಾಮಲಿಂಗಾ ರೆಡ್ಡಿ ಪಟ್ಟು ಬಿಗಿಗೊಳಿಸಿದ್ದಾರೆ. ಯಾವುದೇ ಮನ ಒಲಿಕೆಗೆ ರಾಮಲಿಂಗಾ ರೆಡ್ಡಿ ಜಗ್ಗಿಲ್ಲ. ಇದೀಗ ರಾಜೀನಾಮೆ ಪತ್ರಕ್ಕೆ ಅಧಿಕೃತ ಸಹಿ ಮಾಡಿದ್ದಾರೆ. ಇದೇ ವೇಳೆ ನಾನು ರಾಜೀನಾಮೆ ಕೊಡುತ್ತೇನೆ ಎಂದಿದ್ದಾರೆ.
08:59 AM (IST) Jun 05
ಸಚಿವ ರಾಮಲಿಂಗಾ ರೆಡ್ಡಿ ತಮಗೆ ನೀಡಿರುವ ಜಲಸಂಪನ್ಮೂಲ ಖಾತೆಯಿಂದ ಮುನಿಸಿಕೊಂಡಿದ್ದಾರೆ ಅನ್ನೋ ಮಾತುಗಳು ಕೇಳಿಬರುತ್ತಿದೆ. ಪರಿಣಾಮ ಇಂದು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
08:40 AM (IST) Jun 05
ವಿದೇಶಿ ಶಂಕಿತ ಉಗ್ರರ ಜೊತೆ ನಿರಂತರ ಸಂಪರ್ಕದಲ್ಲಿದ್ದ ತುಮಕೂರಿನ 24ರ ಹರೆಯದ ಯುವಕ ಅಲ್ಲಾ ಬಕ್ಷುವನ್ನು ಪೊಲೀಸರು ಬಂಧಿಸಿದ್ದಾರೆ. ಹಲವು ಚಾಟ್ಗಳು, ಉಗ್ರರ ಚಟುವಟಿಕೆ ಕುರಿತು ಚಾಟ್ ಮಾಡಿರುವುದು ಬಯಲಾಗಿದೆ.
07:54 AM (IST) Jun 05
ಕಳೆದ 2 ದಶಕಗಳಿಂದ ನಡೆಸುತ್ತಿದ್ದ ಡಿವೋರ್ಸ್ ಹೋರಾಟದಲ್ಲಿ ಕೊನೆಗೂ ಭಾರತೀಯ ಮಹಿಳೆ ಗೆದ್ದಿದ್ದಾರೆ. ಪರಿಣಾಮ ಇದೀಗ ಜೀವನಾಂಶವಾಗಿ ಬರೋಬ್ಬರಿ 85 ಕೋಟಿ ರೂಪಾಯಿ ಪಡೆದಿದ್ದಾರೆ. ಆರಂಭದಲ್ಲಿ ಕೋರ್ಟ್ 3.5 ಕೋಟಿ ರೂ ಪಡೆದಿದ್ದರು. ಏನಿದು ಪ್ರಕರಣ?
07:50 AM (IST) Jun 05
07:07 AM (IST) Jun 05
ಜಯನಗರ ಜನರಲ್ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ ವೇಳೆ ಆರೋಗ್ಯ ಸಚಿವ ಯುಟಿ ಖಾದರ್, ವೈದ್ಯಾಧಿಕಾರಿಗಳು, ಸಿಬ್ಬಂದಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಗರ್ಭಿಣಿಯೊಬ್ಬರು ನೆಲದ ಮೇಲೆ ಕುಳಿತಿರುವುದು ಕಂಡಿದ್ದಾರೆ. ಸ್ಥಳದಲ್ಲೆ ಸಿಬ್ಬಂದಿಗಳನ್ನು, ವೈದ್ಯರನ್ನು ಪ್ರಶ್ನಿಸಿದ್ದಾರೆ.