LIVE NOW
Published : Mar 05, 2026, 06:42 AM ISTUpdated : Mar 05, 2026, 09:50 AM IST

Karnataka News Live: ರಾಜ್ಯಾದ್ಯಂತ ಲೋಕಾಯುಕ್ತ ಮಹಾಬೇಟೆ - ಬೆಚ್ಚಿಬಿದ್ದ ಭ್ರಷ್ಟ ಅಧಿಕಾರಿಗಳು, ಒಬ್ಬೊಬ್ಬರಂದೂ ಒಂದೊಂದು ಕಥೆ!

ಸಾರಾಂಶ

ಕೊಪ್ಪಳ: ಒಬ್ಬ ವಿದ್ಯಾರ್ಥಿನಿಯ ಪರೀಕ್ಷೆಗಾಗಿ ಹತ್ತು ಸಿಬ್ಬಂದಿ ಪರೀಕ್ಷಾ ಕೇಂದ್ರದಲ್ಲಿ ಸಿದ್ಧವಾಗಿದ್ದರು, ಆದರೆ ವಿದ್ಯಾರ್ಥಿನಿ ಪರೀಕ್ಷೆಗೆ ಬರಲೇ ಇಲ್ಲ. ಇದರಿಂದ ಸಿಬ್ಬಂದಿ ಸಮಯ ಮುಗಿಯುವವರೆಗೂ ಕಾದು ಪರೀಕ್ಷಾ ಕೇಂದ್ರ ಬಂದ್ ಮಾಡಿಕೊಂಡು, ವಾಪಸ್ಸಾದರು. ಹಿರೇಸಿಂದೋಗಿ ಮೊರಾರ್ಜಿ ವಸತಿ ಶಾಲೆಯ ಪಿಯುಸಿ ದ್ವಿತೀಯ ವರ್ಷದ ವಿದ್ಯಾರ್ಥಿನಿ ಅಲಿಯಾ ಬುಧವಾರ ಉರ್ದು ವಿಷಯ ಪರೀಕ್ಷೆ ಬರೆಯಬೇಕಾಗಿತ್ತು.

ಓರ್ವ ವಿದ್ಯಾರ್ಥಿನಿಯ ಪರೀಕ್ಷೆ ಬರೆಯಲು ಹತ್ತು ಸಿಬ್ಬಂದಿ ಸಕಲ ಸಿದ್ಧತೆ ಮಾಡಿಕೊಂಡಿದ್ದರು. ಪರೀಕ್ಷಾ ಸಮಯ ಹತ್ತು ಗಂಟೆಗೆ ಇದ್ದರೂ ವಿದ್ಯಾರ್ಥಿನಿ ಹತ್ತುವರೆಯಾದರೂ ಬರಲೇ ಇಲ್ಲ. ನಿಯಮಾನುಸಾರ ಅರ್ಧಗಂಟೆ ಮೀರಿದ ಮೇಲೆ ಪರೀಕ್ಷೆಗೆ ಅವಕಾಶ ನೀಡುವುದಕ್ಕೆ ಸಾಧ್ಯವಿಲ್ಲ. ಹಾಗಾಗಿ ಹತ್ತುವರೆ ಗಂಟೆಯವರೆಗೂ ಕಾಯ್ದು ಪರೀಕ್ಷಾ ಕೇಂದ್ರ ಬಂದ್ ಮಾಡಲಾಯಿತು.

 

09:50 AM (IST) Mar 05

ರಾಜ್ಯಾದ್ಯಂತ ಲೋಕಾಯುಕ್ತ ಮಹಾಬೇಟೆ - ಬೆಚ್ಚಿಬಿದ್ದ ಭ್ರಷ್ಟ ಅಧಿಕಾರಿಗಳು, ಒಬ್ಬೊಬ್ಬರಂದೂ ಒಂದೊಂದು ಕಥೆ!

ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ಪೊಲೀಸರು ಏಕಕಾಲಕ್ಕೆ ದಾಳಿ ನಡೆಸಿ, ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಮೇಲೆ ಹಿರಿಯ ಇಂಜಿನಿಯರ್‌ಗಳು ಸೇರಿದಂತೆ ಹಲವು ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ಮಾಡಿದ್ದು, ದಾಖಲೆಗಳ ಪರಿಶೀಲನೆ ಮಾಡಲಾಗುತ್ತಿದೆ.

Read Full Story

09:44 AM (IST) Mar 05

ತೆಂಗಿನಕಾಯಿ ಸುಲಭವಾಗಿ ಒಡೆದು ಚಿಪ್ಪಿನಿಂದ ಕೊಬ್ಬರಿ ಸಲೀಸಾಗಿ ಬೇರ್ಪಡಿಸುವ ಸರಳ ವಿಧಾನ

ಅಡುಗೆ ಮನೆಯಲ್ಲಿ ಗೃಹಿಣಿಯರು ಎದುರಿಸುವ ತೆಂಗಿನಕಾಯಿ ಒಡೆಯುವ ಕಷ್ಟದ ಕೆಲಸಕ್ಕೆ ಈ ಲೇಖನದಲ್ಲಿ ಸುಲಭ ಪರಿಹಾರ ನೀಡಲಾಗಿದೆ. ತೆಂಗಿನಕಾಯಿಯನ್ನು ಸುಲಭವಾಗಿ ಒಡೆದು, ಚಿಪ್ಪಿನಿಂದ ಕೊಬ್ಬರಿಯನ್ನು ಬೇರ್ಪಡಿಸುವ ಸರಳ ಕಿಚನ್ ಹ್ಯಾಕ್ ಅನ್ನು ಇಲ್ಲಿ ವಿವರಿಸಲಾಗಿದೆ.

Read Full Story

09:33 AM (IST) Mar 05

2 ಹಳ್ಳಿಗೆ ಇರೋದು ಒಂದೇ ಟ್ಯಾಂಕ್, 15 ದಿನಕೊಮ್ಮೆ ನೀರು; ಬತ್ತಿದ ನಲ್ಲಿ, ಬರಿದಾದ ಭರವಸೆ

ನರಗುಂದ ತಾಲೂಕಿನ ಮೂಗನೂರು ಗ್ರಾಮಕ್ಕೆ 15 ದಿನಗಳಿಗೊಮ್ಮೆ ನೀರು ಪೂರೈಕೆಯಾಗುತ್ತಿದ್ದು, ಗ್ರಾಮಸ್ಥರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಬನಹಟ್ಟಿ ಮತ್ತು ಮೂಗನೂರು ಗ್ರಾಮಗಳಿಗೆ ಒಂದೇ ನೀರಿನ ಟ್ಯಾಂಕ್, ಪೈಪ್‌ಲೈನ್‌ ಹಾನಿ ಮತ್ತು ಸಾಂಪ್ರದಾಯಿಕ ಕೆರೆಗಳ ನಿರ್ಲಕ್ಷ್ಯದಿಂದಾಗಿ ಈ ಸಮಸ್ಯೆ ಉಲ್ಬಣಗೊಂಡಿದೆ.

Read Full Story

09:21 AM (IST) Mar 05

ಫಸ್ಟ್‌ ಮದುವೆ ಯಾಕೆ ಮುರಿದು ಬಿತ್ತು? ಸತ್ಯ ಹೇಳಿದ Lakshmi Nivasa Serial ನಟಿ ಮಾನಸಾ ಮನೋಹರ್

Actress Mansa Manohar: ಲಕ್ಷ್ಮೀ ನಿವಾಸ, ಜೊತೆ ಜೊತೆಯಲಿ ಧಾರಾವಾಹಿ ನಟಿ ಮಾನಸಾ ಮನೋಹರ್‌ ಅವರು ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈಗ ಅವರು ಮೊದಲ ಮದುವೆ ಯಾಕೆ ಮುರಿದು ಬಿತ್ತು ಎಂದು ಕನ್ನಡ ವೆಬ್‌ಸೈಟ್‌ವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ್ದಾರೆ.

 

Read Full Story

09:10 AM (IST) Mar 05

ಬೆಂಗಳೂರು ಏರ್‌ಪೋರ್ಟ್‌ ವಿಶ್ವದಲ್ಲೇ ಬೆಸ್ಟ್‌ - ಅರೈವಲ್ಸ್‌ನಲ್ಲಿ ಸತತ 4ನೇ ವರ್ಷ ಈ ಬಿರುದು

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಏರ್ಪೋರ್ಟ್ಸ್ ಕೌನ್ಸಿಲ್ ಇಂಟರ್ನ್ಯಾಷನಲ್‌ (ACI) ನಿಂದ ಸತತ ನಾಲ್ಕನೇ ವರ್ಷವೂ 'ಅತ್ಯುತ್ತಮ ಆಗಮಸ್ಥಾನ' ಪ್ರಶಸ್ತಿಗೆ ಪಾತ್ರವಾಗಿದೆ. ವೇಗ, ಸೌಕರ್ಯ ಮತ್ತು ಉತ್ತಮ ಅನುಭವ ನೀಡಲು ಸಿಬ್ಬಂದಿ ಹಾಗೂ ಪಾಲುದಾರರ ಸಾಮೂಹಿಕ ಬದ್ಧತೆ

Read Full Story

08:55 AM (IST) Mar 05

ಬೆಂಗಳೂರಿನ ಪ್ರತಿಷ್ಠಿತ ಕಾಲೇಜುಗಳು, ಹಾಸ್ಟೆಲ್‌ಗಳಲ್ಲಿ ದಿಢೀರ್ ಡ್ರಗ್ ಡೆಸ್ಟ್ - ಸಿಕ್ಕಿಬಿದ್ದ ವಿದ್ಯಾರ್ಥಿಗಳೆಷ್ಟು ಜನ

ಬೆಂಗಳೂರಿನ 8 ಖಾಸಗಿ ಕಾಲೇಜುಗಳ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಪೊಲೀಸರು ಮಾದಕ ವಸ್ತು ಪರೀಕ್ಷೆಗೆ ಒಳಪಡಿಸಿದ್ದಾರೆ. ಈ ತಪಾಸಣೆಯಲ್ಲಿ ಕೆಲ ವಿದ್ಯಾರ್ಥಿಗಳು ಡ್ರಗ್ಸ್ ಸೇವಿಸಿದ್ದು ದೃಢಪಟ್ಟಿದ್ದು, ಅವರಿಗೆ 'ಸನ್ಮಿತ್ರ' ಯೋಜನೆಯಡಿ ವ್ಯಸನಮುಕ್ತರಾಗಲು ಪೊಲೀಸರು ನೆರವು ನೀಡಲಿದ್ದಾರೆ.
Read Full Story

08:18 AM (IST) Mar 05

ಹಾಸನ ಬಾಗಲಕೋಟೆಯಲ್ಲಿ ಲೋಕಾಯುಕ್ತ ದಾಳಿ - ಲೋಕಾ ಅಧಿಕಾರಿಗಳಿಗೆ ಮನೆ ಬಾಗಿಲು ತೆರೆಯದ ಇಂಜಿನಿಯರ್ ಸತ್ಯಾನಾರಾಯಣ

ಹಾಸನ ಮತ್ತು ಬಾಗಲಕೋಟೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿದ್ದಾರೆ. ಹಾಸನದಲ್ಲಿ ಪಾಲಿಕೆ ಇಂಜಿನಿಯರ್ ಬಾಗಿಲು ತೆರೆಯಲು ನಿರಾಕರಿಸಿದರೆ, ಬಾಗಲಕೋಟೆಯಲ್ಲಿ ರಸ್ತೆ ಅಭಿವೃದ್ಧಿ ನಿಗಮದ ಚೀಫ್ ಇಂಜಿನಿಯರ್ ಮನೆ ಮೇಲೆ ಏಕಕಾಲದಲ್ಲಿ ದಾಳಿ ನಡೆದಿದೆ.

Read Full Story

08:01 AM (IST) Mar 05

ಕಳೆದ ವರ್ಷ ಸಿದ್ದು ಬಜೆಟ್‌ನಲ್ಲಿ ಬಳ್ಳಾರಿಗೆ ಸಿಕ್ಕಿದ್ದೆಷ್ಟು? ಅನುಷ್ಠಾನ ಆಗಿದ್ದೆಷ್ಟು?

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕಳೆದ ವರ್ಷ ಬಜೆಟ್‌ನಲ್ಲಿ ಗಣಿ ಜಿಲ್ಲೆ ಬಳ್ಳಾರಿಗೆ 7 ಯೋಜನೆಗಳನ್ನು ಘೋಷಿಸಿದ್ದರು.  ಏಳು ಯೋಜನೆಗಳ ಮಾಹಿತಿಯನ್ನು ಈ ಲೇಖನ ಒಳಗೊಂಡಿದೆ.

Read Full Story

07:41 AM (IST) Mar 05

2025ರ ಬಜೆಟ್‌ನಲ್ಲಿ ರಾಮನಗರಕ್ಕೆ 6 ಯೋಜನೆ ಘೋಷಣೆ - 3ಕ್ಕೆ ಚಾಲನೆ, 3ಕ್ಕೆ ಗ್ರಹಣ?

ಕಳೆದ ಬಜೆಟ್‌ನಲ್ಲಿ ರಾಮನಗರ ಜಿಲ್ಲೆಗೆ ಘೋಷಿಸಲಾದ 6 ಯೋಜನೆಗಳ ಪೈಕಿ, ಹೈಟೆಕ್ ರೇಷ್ಮೆ ಮಾರುಕಟ್ಟೆ, ಮಾಗಡಿ ಆಸ್ಪತ್ರೆ ನವೀಕರಣ ಮತ್ತು ಹಾರೋಹಳ್ಳಿ ಪ್ರಜಾಸೌಧ ನಿರ್ಮಾಣ ಸೇರಿದಂತೆ 3 ಯೋಜನೆಗಳು ಪ್ರಗತಿಯಲ್ಲಿವೆ. 

Read Full Story

07:36 AM (IST) Mar 05

ಲೋಕಾ ದಾಳಿಗೊಳಗಾದ KREIS ಎಂಜಿನಿಯರ್ ಜನಾರ್ಧನ್ ಒಂದು ತಿಂಗಳಿಂದ ನಿಗೂಢ ನಾಪತ್ತೆ

ಲೋಕಾಯುಕ್ತ ದಾಳಿಗೊಳಗಾಗಿದ್ದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ (ಕೆಆರ್‌ಇಐಎಸ್) ಅಧೀಕ್ಷಕ ಅಭಿಯಂತರ ಎಚ್.ಎಂ. ಜನಾರ್ಧನ್ ಅವರು ಒಂದು ತಿಂಗಳಿನಿಂದ ನಿಗೂಢವಾಗಿ ನಾಪತ್ತೆಯಾಗಿದ್ದಾರೆ. ಅವರ ಪತ್ತೆಗೆ ಒತ್ತಾಯಿಸಿ ಕೆಆರ್‌ಎಸ್ ಪಕ್ಷವು ಪೊಲೀಸ್ ಆಯುಕ್ತರಿಗೆ ದೂರು ನೀಡಿದೆ.

Read Full Story

07:25 AM (IST) Mar 05

ಪವಿತ್ರಾ ಗೌಡಗೆ ಮತ್ತೊಂದು ಶಾಕ್; ಟ್ರಯಲ್‌ ಕೋರ್ಟ್‌ ಆದೇಶ ರದ್ದು ಮಾಡಿದ ಹೈಕೋರ್ಟ್‌

ಅಧೀನ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ. ವೈದ್ಯಕೀಯ ವರದಿ ಇಲ್ಲದೆ ಮನೆ ಊಟಕ್ಕೆ ಅನುಮತಿಸಲಾಗದು ಎಂದು ಸ್ಪಷ್ಟಪಡಿಸಿದ ನ್ಯಾಯಾಲಯ, ಜೈಲಿನ ಆಹಾರದ ಗುಣಮಟ್ಟ ಪರಿಶೀಲನೆ ಮತ್ತು ಪಾರದರ್ಶಕತೆಗೆ ಸರ್ಕಾರಕ್ಕೆ ಹಲವು ನಿರ್ದೇಶನ ನೀಡಿದೆ.

Read Full Story

07:15 AM (IST) Mar 05

Bengaluru - ಬಾಡಿಗೆ ಮನೆ ಹಣಕ್ಕಾಗಿ ಕಾಲಲ್ಲಿ ತುಳಿದು ಸೋದರಮಾವನ ಕೊಲೆಗೈದ ಯುವಕನ ಬಂಧನ

ಯುವಕನೊಬ್ಬ ತನ್ನ ಸೋದರಮಾವನನ್ನು ಹತ್ಯೆ ಮಾಡಿದ್ದಾನೆ. ನಂತರ ಇದನ್ನು ಅಸಹಜ ಸಾವು ಎಂದು ಬಿಂಬಿಸಿ ಅಂತ್ಯಕ್ರಿಯೆಗೆ ಯತ್ನಿಸಿದಾಗ, ವಿವೇಕನಗರ ಪೊಲೀಸರು ಮಧ್ಯಪ್ರವೇಶಿಸಿ ಮರಣೋತ್ತರ ಪರೀಕ್ಷೆಯ ಮೂಲಕ ಸತ್ಯವನ್ನು ಬಯಲಿಗೆಳೆದು ಆರೋಪಿಯನ್ನು ಬಂಧಿಸಿದ್ದಾರೆ.

Read Full Story

06:57 AM (IST) Mar 05

ಸಿದ್ದಾಪುರ ಠಾಣೆಯಲ್ಲಿ 7 ಕೋಟಿ - ಪೊಲೀಸರಿಗೆ ನಿದ್ದೆಯಿಲ್ಲದ ರಾತ್ರಿ!

ಕಳೆದ ನಾಲ್ಕು ತಿಂಗಳಿನಿಂದ ಬೃಹತ್ ಮೊತ್ತದ ಹಣ ಬೆಂಗಳೂರಿನ ಸಿದ್ಧಾಪುರ ಠಾಣೆಯಲ್ಲಿಯೇ ಇದ್ದು, ಪೊಲೀಸರು ಹದ್ದಿನ ಕಣ್ಣು ಇಟ್ಟು ಅದನ್ನು ಕಾವಲು ಕಾಯುತ್ತಿದ್ದಾರೆ. ಇನ್ನು ನೈಟ್ ಬೀಟ್ ಮಾಡುವ ಸಿಬ್ಬಂದಿ ಬಹಳ ಎಚ್ಚರದಿಂದ ಕೆಲಸ ಮಾಡುತ್ತಿದ್ದಾರೆ.

 

Read Full Story

More Trending News