ಕೊಪ್ಪಳ: ಒಬ್ಬ ವಿದ್ಯಾರ್ಥಿನಿಯ ಪರೀಕ್ಷೆಗಾಗಿ ಹತ್ತು ಸಿಬ್ಬಂದಿ ಪರೀಕ್ಷಾ ಕೇಂದ್ರದಲ್ಲಿ ಸಿದ್ಧವಾಗಿದ್ದರು, ಆದರೆ ವಿದ್ಯಾರ್ಥಿನಿ ಪರೀಕ್ಷೆಗೆ ಬರಲೇ ಇಲ್ಲ. ಇದರಿಂದ ಸಿಬ್ಬಂದಿ ಸಮಯ ಮುಗಿಯುವವರೆಗೂ ಕಾದು ಪರೀಕ್ಷಾ ಕೇಂದ್ರ ಬಂದ್ ಮಾಡಿಕೊಂಡು, ವಾಪಸ್ಸಾದರು. ಹಿರೇಸಿಂದೋಗಿ ಮೊರಾರ್ಜಿ ವಸತಿ ಶಾಲೆಯ ಪಿಯುಸಿ ದ್ವಿತೀಯ ವರ್ಷದ ವಿದ್ಯಾರ್ಥಿನಿ ಅಲಿಯಾ ಬುಧವಾರ ಉರ್ದು ವಿಷಯ ಪರೀಕ್ಷೆ ಬರೆಯಬೇಕಾಗಿತ್ತು.
ಓರ್ವ ವಿದ್ಯಾರ್ಥಿನಿಯ ಪರೀಕ್ಷೆ ಬರೆಯಲು ಹತ್ತು ಸಿಬ್ಬಂದಿ ಸಕಲ ಸಿದ್ಧತೆ ಮಾಡಿಕೊಂಡಿದ್ದರು. ಪರೀಕ್ಷಾ ಸಮಯ ಹತ್ತು ಗಂಟೆಗೆ ಇದ್ದರೂ ವಿದ್ಯಾರ್ಥಿನಿ ಹತ್ತುವರೆಯಾದರೂ ಬರಲೇ ಇಲ್ಲ. ನಿಯಮಾನುಸಾರ ಅರ್ಧಗಂಟೆ ಮೀರಿದ ಮೇಲೆ ಪರೀಕ್ಷೆಗೆ ಅವಕಾಶ ನೀಡುವುದಕ್ಕೆ ಸಾಧ್ಯವಿಲ್ಲ. ಹಾಗಾಗಿ ಹತ್ತುವರೆ ಗಂಟೆಯವರೆಗೂ ಕಾಯ್ದು ಪರೀಕ್ಷಾ ಕೇಂದ್ರ ಬಂದ್ ಮಾಡಲಾಯಿತು.
07:32 AM (IST) Mar 06
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಡಿ. ಕೆ.ಸುರೇಶ್ ಹೆಸರಿನಲ್ಲಿ ಬಹು ಕೋಟಿ ವಂಚನೆ ಪ್ರಕರಣ ಸಂಬಂಧ ನಟ ಧರ್ಮ ಅವರನ್ನು ರಾಜ್ಯ ಅಪರಾಧ ತನಿಖಾ ಇಲಾಖೆ ಸಿಐಡಿ ಧ್ವನಿ ಪರೀಕ್ಷೆಗೆ ಒಳಪಡಿಸಿದೆ.
11:44 PM (IST) Mar 05
ಬಜೆಟ್ ಅಧಿವೇಶನ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ನಡೆಸಿದರು. ಸರ್ಕಾರಕ್ಕೆ ಚಾಟಿ ಬೀಸುವಂತೆ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ತಮ್ಮ ಶಾಸಕರಿಗೆ ಹೇಳಿದ್ದಾರೆ.
10:41 PM (IST) Mar 05
ರಾಜ್ಯದಲ್ಲಿ 56 ಸಾವಿರ ಹುದ್ದೆಯನ್ನು ಭರ್ತಿ ಮಾಡುತ್ತಿರುವುದು ಐತಿಹಾಸಿಕ ನಿರ್ಧಾರ. ದೇಶದ ಯಾವ ರಾಜ್ಯದಲ್ಲೂ ಇಷ್ಟು ದೊಡ್ಡ ಪ್ರಮಾಣದ ನೇಮಕಾತಿ ನಡೆದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.
09:56 PM (IST) Mar 05
ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ 8 ಸರ್ಕಾರಿ ಅಧಿಕಾರಿಗಳಿಗೆ ಸಂಬಂಧಿಸಿದ 42 ಸ್ಥಳಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಈ ಶೋಧ ಕಾರ್ಯಾಚರಣೆಯಲ್ಲಿ ಕೋಟ್ಯಾಂತರ ರೂಪಾಯಿ ಮೌಲ್ಯದ ಅಕ್ರಮ ಸ್ಥಿರ ಮತ್ತು ಚರ ಆಸ್ತಿಗಳು ಪತ್ತೆಯಾಗಿದೆ.
09:16 PM (IST) Mar 05
ಸಾಮಾನ್ಯ ಪಡ್ಡು ಹಿಟ್ಟಿಗೆ ಒಂದು ವಸ್ತು ಸೇರಿಸುವುದರಿಂದ ಅದರ ರುಚಿ ಹೆಚ್ಚುತ್ತದೆ. ಹಾಗೆಯೇ ಈರುಳ್ಳಿಯನ್ನು ಹುರಿದು ಹಿಟ್ಟಿಗೆ ಸೇರಿಸಿದರೆ ಪಡ್ಡು ಹೊರಗಿನಿಂದ ಗರಿಗರಿಯಾಗಿ ಮತ್ತು ಒಳಗಿನಿಂದ ಮೃದುವಾಗಿ ಬರುತ್ತದೆ, ಇದು ಉತ್ತರ ಕರ್ನಾಟಕದ ವಿಶೇಷ ವಿಧಾನವಾಗಿದೆ.
08:49 PM (IST) Mar 05
ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕಿಡ್ನಿ ಕಸಿ ಶಸ್ತ್ರಚಿಕಿತ್ಸೆ ವೇಳೆ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ವೈದ್ಯರ ನಿರ್ಲಕ್ಷ್ಯವೇ ಸಾವಿಗೆ ಕಾರಣ ಎಂದು ಆರೋಪಿಸಿದೆ. ಗಂಡನಿಗೆ ಕಿಡ್ನಿ ದಾನ ಮಾಡಿದ ಪತ್ನಿಗೆ ಈ ದುರಂತದ ವಿಷಯ ಇನ್ನೂ ತಿಳಿದಿಲ್ಲ.
07:59 PM (IST) Mar 05
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಲಿರುವ 2026-27ನೇ ಸಾಲಿನ ರಾಜ್ಯ ಬಜೆಟ್ ಅನ್ನು ಇದೇ ಮೊದಲ ಬಾರಿಗೆ ರಾಜ್ಯದ ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರ ಮಾಡಲಾಗುತ್ತಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಮಾರ್ಚ್ 6 ರಿಂದ 230 ಬಸ್ ನಿಲ್ದಾಣಗಳಲ್ಲಿನ ಎಲ್ಇಡಿ ಪರದೆಗಳ ವ್ಯವಸ್ಥೆ ಮಾಡಿದೆ.
07:42 PM (IST) Mar 05
'ಶ್ರೀರಸ್ತು ಶುಭಮಸ್ತು' ಧಾರಾವಾಹಿಯ ಸಮರ್ಥ್ ಪಾತ್ರಧಾರಿ ನಟ ದರ್ಶಿತ್ ಗೌಡ ಅವರ ಮದುವೆಯ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಆದರೆ, ಇದು ನಿಜವಾದ ಮದುವೆಯೇ ಅಥವಾ ಕೇವಲ ಶೂಟಿಂಗಿನ ಭಾಗವೇ ಎಂಬ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಲಭ್ಯವಿಲ್ಲ.
07:36 PM (IST) Mar 05
ಇರಾನ್-ಇಸ್ರೇಲ್ ಸಂಘರ್ಷದಿಂದಾಗಿ ಭಾರತದಲ್ಲಿ ಡ್ರೈಫ್ರೂಟ್ಸ್ ಬೆಲೆ ಏರಿಕೆಯಾಗುವ ಭೀತಿ ಎದುರಾಗಿದೆ. ರಂಜಾನ್ ಹಿನ್ನೆಲೆಯಲ್ಲಿ ಸಾಕಷ್ಟು ದಾಸ್ತಾನು ಇರುವುದರಿಂದ ದರ ಸ್ಥಿರವಾಗಿದ್ದರೂ, ಯುದ್ಧ ಮುಂದುವರಿದರೆ ಮುಂದಿನ ದಿನಗಳಲ್ಲಿ ಆಮದು ಸ್ಥಗಿತಗೊಂಡು ಬೆಲೆಗಳು ಗಣನೀಯವಾಗಿ ಹೆಚ್ಚಾಗುವ ಸಾಧ್ಯತೆಯಿದೆ.
07:18 PM (IST) Mar 05
ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಅವರು ಅಭಿವೃದ್ಧಿಯಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಆರೋಪಿಸಿದ್ದಾರೆ.
07:05 PM (IST) Mar 05
ನಮ್ಮ ಜಿಲ್ಲೆಯ ಕೆಲಸಗಳು ಬಜೆಟ್ ಮೇಲೆ ನಿಂತಿಲ್ಲ. ಬೇರೆಯವರಿಗೆ ಬಜೆಟ್ ಬೇಕಾಗಿರಬಹುದು, ನಮಗೆ ಬೇಡ. ಪೆನ್ನು ಪೇಪರ್ ನನ್ನ ಹತ್ತಿರವಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.
06:54 PM (IST) Mar 05
2022ರಲ್ಲಿ ಪರಿಷ್ಕರಿಸಬೇಕಿದ್ದ ಕನಿಷ್ಠ ವೇತನವನ್ನು ರಾಜ್ಯ ಸರ್ಕಾರ ಇನ್ನೂ ಜಾರಿಗೆ ತರದ ಕಾರಣ ಕಾರ್ಮಿಕ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಕನಿಷ್ಠ ವೇತನ ಸಲಹಾ ಮಂಡಳಿಯ ಶಿಫಾರಸಿನಂತೆ ವೇತನವನ್ನು ತಕ್ಷಣ ಪರಿಷ್ಕರಿಸಬೇಕು ಮತ್ತು ಗುತ್ತಿಗೆ ಕಾರ್ಮಿಕರಿಗೆ ಸೇವಾ ಭದ್ರತೆ ಒದಗಿಸಬೇಕೆಂದು ಒತ್ತಾಯಿಸಿದರು.
06:32 PM (IST) Mar 05
ನಟಿ ಕಾವ್ಯಾ ಗೌಡರ ಕೌಟುಂಬಿಕ ಆಸ್ತಿ ಕಲಹವು ಇದೀಗ ಬೀದಿ ರಂಪಾಟವಾಗಿ ಮಾರ್ಪಟ್ಟಿದೆ. ತಮ್ಮ ಮೇಲೆ ಹಲ್ಲೆ ನಡೆದಿದೆ ಎಂದು ಆರೋಪಿಸಿದ್ದ ಕಾವ್ಯಾ, ಇದೀಗ ತಾವೇ ಮಾವನಿಗೆ ತೊಡೆ ತಟ್ಟಿ ದರ್ಪ ತೋರಿದ ವಿಡಿಯೋ ವೈರಲ್ ಆಗಿದ್ದು, ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ.
06:30 PM (IST) Mar 05
ಬೆಂಗಳೂರಿನ ಬೃಹತ್ ಬಾರ್ ಮತ್ತು ರೆಸ್ಟೋರೆಂಟ್ ನಿರ್ಮಾಣದಲ್ಲಿ ಭಾರೀ ಭ್ರಷ್ಟಾಚಾರ ನಡೆದಿದೆ ಎಂದು ಬಿಜೆಪಿ ಮುಖಂಡ ಎನ್.ಆರ್. ರಮೇಶ್ ಆರೋಪಿಸಿದ್ದಾರೆ. ನಕ್ಷೆ ಮಂಜೂರಾತಿಯಿಂದ ಹಿಡಿದು ಮದ್ಯ ಪರವಾನಗಿ ನೀಡುವವರೆಗೆ ಹಲವು ಇಲಾಖೆಗಳ ಅಧಿಕಾರಿಗಳು ಕೋಟ್ಯಂತರ ರೂಪಾಯಿ ಲಂಚ ಪಡೆದಿದ್ದಾರೆ.
06:30 PM (IST) Mar 05
ನಾವು ಸುಳ್ಳು ಹೇಳಿ ಕೆಲಸ ಮಾಡುವವರಲ್ಲ, ನಿಮ್ಮ ಬಳಿ ಅತ್ತು ಕರೆದು ನಾಟಕ ಮಾಡುವವರಲ್ಲ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.
06:15 PM (IST) Mar 05
ಇಸ್ರೇಲ್-ಅಮೆರಿಕಾ ದಾಳಿಯಲ್ಲಿ ಹತರಾದ ಇರಾನ್ ನಾಯಕ ಅಯತೊಲ್ಲಾ ಖಮೇನಿ ಸಾವಿಗೆ ಭಾರತ ಸರ್ಕಾರವು 5 ದಿನಗಳ ನಂತರ ಸಂತಾಪ ಸೂಚಿಸಿದೆ. ಭಾರತ ಸರ್ಕಾರ ಸಂತಾಪ ಸೂಚಿಸದ ಬಗ್ಗೆ ವಿರೋಧ ಪಕ್ಷಗಳು ವ್ಯಾಪಕ ಟೀಕೆ ವ್ಯಕ್ತಪಡಿಸಿದ್ದವು.
06:02 PM (IST) Mar 05
Celebrities Home: ಸಲ್ಮಾನ್ ಖಾನ್ನಿಂದ ಶಾರುಖ್ ಖಾನ್ವರೆಗೆ, ದುಬೈನಲ್ಲಿ ಸ್ವಂತ ಮನೆ ಹೊಂದಿದ್ದಾರೆ. ದುಬೈನ ಐಷಾರಾಮಿ ಜೀವನಶೈಲಿ, ತೆರಿಗೆ ವಿನಾಯಿತಿಗಳು ಭಾರತದ ಸ್ಟಾರ್ಗಳನ್ನು ಆಕರ್ಷಿಸುತ್ತಿವೆ. ಬೀಚ್ಫ್ರಂಟ್ ವಿಲ್ಲಾಗಳಿಂದ ಹಿಡಿದು ಗಗನಚುಂಬಿ ಅಪಾರ್ಟ್ಮೆಂಟ್ ಹೊಂದಿದ್ದಾರೆ.
05:39 PM (IST) Mar 05
ಮೀಸಲಾತಿ ಪ್ರಮಾಣ ಶೇ.50ಕ್ಕೆ ಏರಿಕೆಯಾಗುತ್ತಿದೆ ಎಂದು ಪ್ರಶ್ನಿಸಿ ಕೆಲವರು ಕೋರ್ಟ್ ಮೊರೆ ಹೋಗಿದ್ದಾರೆ. ಈ ವ್ಯಕ್ತಿಗಳು ಕಾನೂನಾತ್ಮಕ ಹೋರಾಟ ನಡೆಸಲು ಕಾಂಗ್ರೆಸ್ ಸರ್ಕಾರವೇ ಕುಮ್ಮಕ್ಕು ನೀಡಿದೆ.
05:34 PM (IST) Mar 05
ನಟ ಪುನೀತ್ ರಾಜ್ಕುಮಾರ್ ಅವರು ಸೃಜನ್ ಲೋಕೇಶ್ ಅವರೊಂದಿಗಿನ ಸಂದರ್ಶನದಲ್ಲಿ ಚಿತ್ರಾನ್ನ ಮಾಡುವ ವಿಧಾನವನ್ನು ತಮಾಷೆಯಾಗಿ ವಿವರಿಸಿದ ವಿಡಿಯೋವೊಂದು ವೈರಲ್ ಆಗಿದೆ. ಈ ವಿಡಿಯೋದಲ್ಲಿ ಅಪ್ಪು, ಅಡುಗೆಗೆ ಬೇಕಾದ ಪ್ರಮುಖ ಸಾಮಗ್ರಿ ಮರೆತು ಹೇಳಿದ್ದು, ತಮಾಷೆಯ ಕ್ಷಣವನ್ನು ನೆನಪಿಸುತ್ತದೆ.
05:33 PM (IST) Mar 05
05:30 PM (IST) Mar 05
ವಾಹನ ಸಾಲವನ್ನು ಸಂಪೂರ್ಣವಾಗಿ ತೀರಿಸಿದ ನಂತರ ಆರ್ಸಿ ಬ್ಯಾಂಕ್ನ ಹೆಸರನ್ನು ಸ್ವಯಂಚಾಲಿತವಾಗಿ ತೆಗೆದುಹಾಕುವ ಹೊಸ ಡಿಜಿಟಲ್ ವ್ಯವಸ್ಥೆಯನ್ನು ಜಾರಿಗೆ ತಂದಿದೆ. ಇದರಿಂದಾಗಿ, ವಾಹನ ಮಾಲೀಕರು ಇನ್ನು ಮುಂದೆ ಹೈಪೊಥಿಕೇಷನ್ ರದ್ದುಗೊಳಿಸಲು ಬ್ಯಾಂಕ್ ಮತ್ತು ಆರ್ಟಿಒ ಕಚೇರಿಗಳಿಗೆ ಅಲೆಯುವ ಅಗತ್ಯವಿಲ್ಲ.
04:55 PM (IST) Mar 05
ಬೆಂಗಳೂರಿನ ಚೂಡಸಂದ್ರದ 'ಅಹದ್ ಸೆರೆನಿಟಿ' ಅಪಾರ್ಟ್ಮೆಂಟ್ ನಿವಾಸಿಗಳು ಬೀದಿ ನಾಯಿಗಳ ಹಾವಳಿಯಿಂದ ತತ್ತರಿಸಿದ್ದಾರೆ. ಕೈಯಲ್ಲಿ ಲಾಠಿ ಹಿಡಿದು ಓಡಾಡುವ ಪರಿಸ್ಥಿತಿ ನಿರ್ಮಾಣ, ಮಕ್ಕಳು ಮತ್ತು ನಿವಾಸಿಗಳ ಮೇಲೆ ನಾಯಿಗಳು ದಾಳಿ ಮಾಡುತ್ತಿವೆ. ಈ ಬಗ್ಗೆ ಅಧಿಕಾರಿಗಳಿಗೆ ದೂರು ನೀಡಿದರೂ ಪ್ರಯೋಜನವಾಗಿಲ್ಲ.
04:53 PM (IST) Mar 05
ಕಂದಾಯ ಇಲಾಖೆಯಲ್ಲಿ 1219 ಲೈಸೆನ್ಸ್ ಸರ್ವೇಯರ್ ಇದ್ದಾರೆ. ಈಗಾಗಲೇ 1000 ಗ್ರಾಮ ಲೆಕ್ಕಾಧಿಕಾರಿಗಳನ್ನು ನೇಮಕ ಮಾಡಲಾಗಿದ್ದು, 750 ಸರ್ವೇಯರ್ ನೇಮಕಾತಿ ಶೀಘ್ರವಾಗಿ ಮಾಡಲಾಗುತ್ತದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.
04:43 PM (IST) Mar 05
ಸ್ಯಾಂಡಲ್ವುಡ್ನ ಕ್ಯೂಟ್ ಜೋಡಿ ಯಶ್ ಮತ್ತು ರಾಧಿಕಾ ಪಂಡಿತ್ 9 ವರ್ಷಗಳ ದಾಂಪತ್ಯವನ್ನು ಪೂರೈಸಿದ್ದಾರೆ. ಮದುವೆಯ ನಂತರದ ಜೀವನದ ಬಗ್ಗೆ ಕೇಳಿದ ಪ್ರಶ್ನೆಗೆ ರಾಧಿಕಾ ನೀಡಿದ ಉತ್ತರಕ್ಕೆ ಯಶ್ ಅವರೇ ಒಂದು ಕ್ಷಣ ಅವಾಕ್ಕಾಗಿದ್ದಾರೆ.
04:35 PM (IST) Mar 05
ಚಿಕ್ಕೋಡಿ ತಾಲೂಕಿನ ಯಡೂರ ಗ್ರಾಮದ ವೀರಭದ್ರೇಶ್ವರ ದೇವಾಲಯದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಧರ್ಮ, ದೇವರು ಮತ್ತು ಗುರುವಿನ ಮಹತ್ವವನ್ನು ಒತ್ತಿ ಹೇಳಿದರು. ರಾಜಕಾರಣದಲ್ಲಿ ಧರ್ಮವಿರಬೇಕು ಆದರೆ ಧರ್ಮದಲ್ಲಿ ರಾಜಕಾರಣವಿರಬಾರದು ಎಂದು ಪ್ರತಿಪಾದಿಸಿದರು.
04:18 PM (IST) Mar 05
ಬಿಗ್ಬಾಸ್ ಸ್ಪರ್ಧಿ 'ಡಾಗ್ ಸತೀಶ್' ಮತ್ತು ಕಂಟೆಂಟ್ ಕ್ರಿಯೇಟರ್ 'ಟಾಟ್ ಸುಭಾಷ್' ವಿರುದ್ಧ ಪ್ರಾಣಿ ಕಾಮ ಮತ್ತು ಪ್ರಾಣಿ ಹಿಂಸೆಯನ್ನು ಪ್ರೋತ್ಸಾಹಿಸುವ ಅಶ್ಲೀಲ ವಿಡಿಯೋ ಹರಿಬಿಟ್ಟ ಆರೋಪದ ಮೇಲೆ ಬೆಂಗಳೂರಿನಲ್ಲಿ ದೂರು ದಾಖಲಾಗಿದೆ.
04:18 PM (IST) Mar 05
ಗುಂಡ್ಲುಪೇಟೆಯ ಸೋಮಹಳ್ಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು, ಜಾಗತಿಕ ಯುದ್ಧದ ಭೀತಿಯ ನಡುವೆ ಶಾಂತಿಯ ಮಹತ್ವ ಸಾರಿದ್ದಾರೆ. ಕೋಪ, ದ್ವೇಷದಿಂದ ಶಾಂತಿ ಅಸಾಧ್ಯ, ಆಧ್ಯಾತ್ಮಿಕ ಮಾರ್ಗ ಆತ್ಮಸ್ಥೈರ್ಯವೇ ನಿಜವಾದ ಶಕ್ತಿ ಎಂದರು.
04:18 PM (IST) Mar 05
04:11 PM (IST) Mar 05
ಒಬ್ಬ ನಟಿ ತನ್ನ ಶ್ರಮದಿಂದ ಭಾರತದ ನಂಬರ್ ಒನ್ ನಟಿಯಾಗಿ ಬೆಳೆದಾಗ ಆಕೆಯನ್ನು ಪ್ರೋತ್ಸಾಹಿಸಬೇಕೇ ಹೊರತು, ಹಳೆಯ ವಿಚಾರಗಳನ್ನು ಕೆದಕಿ ಕೀಳು ಅಭಿರುಚಿಯ ಕಾಮೆಂಟ್ ಹಾಕುವುದು ಸರಿಯಲ್ಲ. ಇಡೀ ಭಾರತವೇ ಹೆಮ್ಮೆ ಪಡುವಂತೆ ಬೆಳೆದಿರುವ ಈ ಕನ್ನಡತಿ ಬಗ್ಗೆ ಜೆನ್ ಜಿ ಹೀಗ್ ಹೇಳಿದೆ ನೋಡಿ..
04:06 PM (IST) Mar 05
Rani Kannada Serial Episode: ಅಮ್ಮ-ಮಗಳ ನಿಷ್ಕಲ್ಮಶ ಪ್ರೀತಿಯ ಮಹಾಕಾವ್ಯ ‘ರಾಣಿ’! ಇದೇ ಮಾರ್ಚ್ 9 ರಿಂದ ಸಂಜೆ 6 ಗಂಟೆಗೆ ಕಲರ್ಸ್ ಕನ್ನಡದಲ್ಲಿ ಈ ಧಾರಾವಾಹಿ ಪ್ರಸಾರ ಆರಂಭಿಸಲಿದ್ದು, ವೀಕ್ಷಕರಿಗೆ ಹೊಸದೊಂದು ಭಾವಲೋಕವನ್ನು ಪರಿಚಯಿಸಲಿದೆ.
03:50 PM (IST) Mar 05
Krishna Rukku Kannada Serial: ಜೀ ಕನ್ನಡ ವಾಹಿನಿಯಲ್ಲಿ ಪ್ರೀತಿ, ಪ್ರತೀಕಾರ ಮತ್ತು ವಿಧಿಯಾಟದ ಸುತ್ತ ನಡೆಯುವ ಹೊಚ್ಚಹೊಸ ಧಾರಾವಾಹಿ 'ಕೃಷ್ಣ ರುಕ್ಕು' ಇದೇ ಮಾರ್ಚ್ 9 ರಿಂದ 6:30 ಕ್ಕೆ ಪ್ರಸಾರ ಆಗಲಿದೆ.
03:42 PM (IST) Mar 05
03:24 PM (IST) Mar 05
ಮಧ್ಯಪ್ರಾಚ್ಯದ ಉದ್ವಿಗ್ನತೆಯಿಂದ ಇಂಧನ ಕೊರತೆ ಅಥವಾ ದರ ಏರಿಕೆಯಾಗಲಿದೆ ಎಂಬ ಸಾಮಾಜಿಕ ಜಾಲತಾಣದ ವದಂತಿಯಿಂದಾಗಿ ಉತ್ತರ ಕನ್ನಡದ ಭಟ್ಕಳ ಮತ್ತು ದಾಂಡೇಲಿಯಲ್ಲಿ ಜನರು ಆತಂಕಗೊಂಡು ಪೆಟ್ರೋಲ್ ಬಂಕ್ಗಳಿಗೆ ಮುಗಿಬಿದ್ದಿದ್ದಾರೆ.
02:50 PM (IST) Mar 05
ರಿಸೆಪ್ಷನ್ಗಾಗಿ ರಶ್ಮಿಕಾ ಮಂದಣ್ಣ, ಮೈಸೂರಿನ 'ಗಂಡಭೇರುಂಡ' ಮತ್ತು ಕೊಡವ ಸಂಸ್ಕೃತಿಯ 'ಪಿಚಕತ್ತಿ' ವಿನ್ಯಾಸಗಳಿದ್ದ ಕೆಂಪು ಮೈಸೂರು ಸಿಲ್ಕ್ ಸೀರೆ ಧರಿಸಿದ್ದರು. ಆಭರಣಗಳು ಮತ್ತು ಸಾಂಪ್ರದಾಯಿಕ ಅಲಂಕಾರದಲ್ಲಿ ಅವರು ಕಂಗೊಳಿಸಿದರೆ, ವಿಜಯ್ ದೇವರಕೊಂಡ ಕೂಡ 'ಗಜ-ಕೇಸರಿ' ವಿನ್ಯಾಸದ ಉಡುಪಿನಲ್ಲಿ ಮಿಂಚಿದರು.
02:20 PM (IST) Mar 05
The Couplebuns Bharath gowda: ಕನ್ನಡದ ಯುಟ್ಯೂಬರ್ ಭರತ್ ಗೌಡ ಅವರು ಪತ್ನಿ, ಮುದ್ದಾದ ಮಗನ ಜೊತೆ ಫೋಟೋ, ವಿಡಿಯೋಗಳನ್ನು ಶೇರ್ ಮಾಡುತ್ತಿದ್ದರು. ಒಳ್ಳೆಯ ಉದ್ಯೋಗ, ಪತ್ನಿ, ಮಗ ಎಲ್ಲವೂ ಇತ್ತು. ಇವರ ಸಾವಿನ ಬಗ್ಗೆ ರಮ್ಯಾ ಜಗತ್ ಮೈಸೂರು ಅವರು ಬರೆದುಕೊಂಡಿದ್ದಾರೆ.
02:13 PM (IST) Mar 05
ಬೆಂಗಳೂರು: ಭಾರತದ ಪ್ರತಿಭಾನ್ವಿತ ವೇಗಿ ಹಾಗೂ ಆರ್ಸಿಬಿ ಮಾಜಿ ಕ್ರಿಕೆಟಿಗ ವೈಶಾಕ್ ವಿಜಯ್ಕುಮಾರ್ ಇಂದು ದಾಂಪತ್ಯ ಜೀವನಕ್ಕೆ ಕಾಲಿಸಿದ್ದಾರೆ. ಈ ಸಂದರ್ಭದಲ್ಲಿ ಸ್ಯಾಂಡಲ್ವುಡ್ ನಟ ಕಿಚ್ಚ ಸುದೀಪ್ ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನವ ಜೋಡಿಗೆ ಶುಭ ಹಾರೈಸಿದ್ದಾರೆ.
02:13 PM (IST) Mar 05
US Iran Conflict: ಇರಾನ್-ಇಸ್ರೇಲ್ ಯುದ್ಧದ ಕಾರಣದಿಂದಾಗಿ ಇರಾನ್ನಲ್ಲಿ ನಾಪತ್ತೆಯಾಗಿದ್ದ ಚಿಕ್ಕಮಗಳೂರಿನ ಯುವಕ ನಿಶ್ಚಿತ್ ಇದೀಗ ಸುರಕ್ಷಿತವಾಗಿರುವುದು ದೃಢಪಟ್ಟಿದೆ. ಭಾರತೀಯ ರಾಯಭಾರಿ ಕಚೇರಿಯ ಕ್ಷಿಪ್ರ ಕಾರ್ಯಾಚರಣೆಯಿಂದಾಗಿ ಸಂಪರ್ಕಕ್ಕೆ ಸಿಕ್ಕಿದ್ದು, ಕುಟುಂಬಸ್ಥರು ನಿಟ್ಟುಸಿರು
02:07 PM (IST) Mar 05
ವಿಜಯನಗರ ಜಿಲ್ಲೆಯ ಬೀರಬ್ಬಿಯಲ್ಲಿ 15 ದಿನಗಳಿಂದ ನಾಪತ್ತೆಯಾಗಿದ್ದ ಯುವಕನ ಶವ ಗೋಣಿ ಚೀಲದಲ್ಲಿ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಪ್ರಾಣಿ ಸತ್ತಂತೆ ವಾಸನೆ ಬರುತ್ತಿದೆ ಎಂದು ನೋಡಿದಾಗ ಮನೆಯವರಿಗೆ ತಮ್ಮದೇ ಮನೆ ಹಿಂದೆ ಮಗನ ಶವ ಸಿಕ್ಕಿದೆ.
01:42 PM (IST) Mar 05
ಕಲಬುರಗಿಯಲ್ಲಿ ನಡೆದ ದಿಶಾ ಸಭೆಗೆ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಸಂಸದ ರಾಧಾಕೃಷ್ಣ ದೊಡ್ಮನಿ ಆನ್ಲೈನ್ನಲ್ಲಿ ಭಾಗವಹಿಸಿದ್ದನ್ನು ಮಾಜಿ ಸಂಸದ ಉಮೇಶ್ ಜಾಧವ್ ತೀವ್ರವಾಗಿ ಟೀಕಿಸಿದ್ದಾರೆ. ಇವರನ್ನು 'ಆನ್ಲೈನ್ ಮಂತ್ರಿಗಳು' ಎಂದು ಕರೆದ ಜಾಧವ್, ಕಾಟಾಚಾರಕ್ಕೆ ಸಭೆ ನಡೆಸಿದ್ದಾರೆ ಎಂದು ಕಿಡಿಕಾರಿದರು..
01:27 PM (IST) Mar 05
Kannada Actress Husband Flop Movie: ಸೌಥ್ ಸ್ಟಾರ್ ತಮ್ಮ ಮೊದಲ ಬಾಲಿವುಡ್ ಚಿತ್ರದಲ್ಲಿಯೇ ಹೀನಾಯ ಸೋಲು ಕಂಡಿದ್ದಾರೆ. 125 ಕೋಟಿ ಬಜೆಟ್ನ ಈ ಚಿತ್ರ ವಿಫಲವಾದ ನಂತರ, ಅವರು ಮತ್ತೆ ಹಿಂದಿ ಚಿತ್ರರಂಗದತ್ತ ಮುಖ ಮಾಡಿಲ್ಲ.