LIVE NOW
Published : Apr 06, 2026, 05:10 AM ISTUpdated : Apr 06, 2026, 10:14 AM IST

Karnataka News Live: ಸೈಕೋ ಜಯಂತ್‌ಗೆ ನರಕ ತೋರಿಸಿದ ಜಾನು; ಇದು ಚಿನ್ನುಮರಿಯ 2.O ಅಧ್ಯಾಯ, ವೀಕ್ಷಕರು ಹ್ಯಾಪಿ

ಸಾರಾಂಶ

ಬೆಂಗಳೂರು: ಈ ಹಿಂದೆ ನೀಡಿದ ದಿನಾಂಕಗಳ ಪ್ರಕಾರ ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಬೇಕಿತ್ತು. ಆದ್ರೆ ತಾಂತ್ರಿಕ ಕಾರಣಗಳಿಂದ ಫಲಿತಾಂಶ ಏಪ್ರಿಲ್ 8 ಅಥವಾ ಏಪ್ರಿಲ್ 9ರ ನಂತರ ಪ್ರಕಟವಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಏಪ್ರಿಲ್ 9ರಂದು ರಾಜ್ಯದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ಈ ಕಾರಣದಿಂದಲೂ ಫಲಿತಾಂಶ ಪ್ರಕಟದ ದಿನಾಂಕ ಮುಂದೂಡಿಕೆಯಾಗಿರುವ ಬಗ್ಗೆ ಅನುಮಾನಗಳು ಮೂಡಿವೆ. 

ಈ ಕುರಿತು ಶಿಕ್ಷಣ ಇಲಾಖೆಯಿಂದ ಅಧಿಕೃತ ಮಾಹಿತಿ ಹೊರಬಂದಿಲ್ಲ. ವಿದ್ಯಾರ್ಥಿಗಳು ಯಾವುದೇ ವದಂತಿಗಳಿಗೆ ಕಿವಿಗೊಡಬಾರದು. ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟವಾಗುವ ಮಾಹಿತಿಯನ್ನು ಮಾತ್ರ ನಂಬಬೇಕು ಎಂದು ಅಧಿಕಾರಿಗಳು ಸಲಹೆ ನೀಡಿದ್ದಾರೆ.

10:14 AM (IST) Apr 06

ಸೈಕೋ ಜಯಂತ್‌ಗೆ ನರಕ ತೋರಿಸಿದ ಜಾನು; ಇದು ಚಿನ್ನುಮರಿಯ 2.O ಅಧ್ಯಾಯ, ವೀಕ್ಷಕರು ಹ್ಯಾಪಿ

ಜೀ ಕನ್ನಡದ 'ಲಕ್ಷ್ಮೀ ನಿವಾಸ' ಧಾರಾವಾಹಿಯಲ್ಲಿ, ಹಿಂದೆ ತನ್ನ ಸೈಕೋ ಗಂಡ ಜಯಂತ್‌ಗೆ ಹೆದರುತ್ತಿದ್ದ ಜಾನು ಈಗ ಸಂಪೂರ್ಣ ಬದಲಾಗಿದ್ದಾಳೆ. ತಾನು ಅನುಭವಿಸಿದ ಕಷ್ಟಗಳನ್ನೇ ಜಯಂತ್‌ಗೆ ನೀಡಿ, ಆತನಿಗೆ ನರಕ ದರ್ಶನ ಮಾಡಿಸುತ್ತಿದ್ದಾಳೆ. ಈ ಹೊಸ ತಿರುವು ವೀಕ್ಷಕರಲ್ಲಿ ಭಾರೀ ಕುತೂಹಲ ಮೂಡಿಸಿದೆ.

Read Full Story

09:48 AM (IST) Apr 06

ಕಲಬುರಗಿ - ನಡುರಸ್ತೆಯಲ್ಲೇ ಸರ್ಕಾರಿ ಶಾಲಾ ಶಿಕ್ಷಕಿಯ ಬರ್ಬರ ಹತ್ಯೆ

Kalaburagi teacher murder case: ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಕಲ್ಮೂಡ ಗ್ರಾಮದ ಬಳಿ ಸರ್ಕಾರಿ ಶಾಲಾ ಶಿಕ್ಷಕಿ ಜ್ಯೋತಿ ಕಪಾಳೆ (57) ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ನಂತರ ಪೆಟ್ರೋಲ್ ಸುರಿದು ಶವವನ್ನು ಸುಟ್ಟು ಹಾಕಿದ್ದಾರೆ.

Read Full Story

09:20 AM (IST) Apr 06

ಬ್ಯಾಂಕ್ ಉದ್ಯೋಗಿ ಕೊಲೆ ಪ್ರಕರಣ - ಪತ್ನಿಯ ಕೊಲ್ಲಲು ಶೂಟಿಂಗ್ ತರಬೇತಿ ಪಡೆದಿದ್ದ ಟೆಕ್ಕಿ ಪತಿ ಮುರುಗನ್

Husband shooting training to kill wife: ಬೆಂಗಳೂರಿನಲ್ಲಿ ಬ್ಯಾಂಕ್ ಉದ್ಯೋಗಿ ಪತ್ನಿಯನ್ನು ಗುಂಡಿಕ್ಕಿ ಕೊಂದ ಪತಿ ಬಾಲಮುರುಗನ್, ಈ ಹತ್ಯೆಗಾಗಿಯೇ ವೈಟ್‌ಫೀಲ್ಡ್‌ನ ಶೂಟಿಂಗ್ ಅಕಾಡೆಮಿಯಲ್ಲಿ ತರಬೇತಿ ಪಡೆದಿದ್ದ ಎಂದು ಪೊಲೀಸರು ಸಲ್ಲಿಸಿರುವ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ.

Read Full Story

09:02 AM (IST) Apr 06

20 ವರ್ಷಗಳಿಂದ ಸ್ಥಗಿತಗೊಂಡಿದ್ದ ಸೇವೆಗೆ ಮರುಜೀವ; ಮೆಜೆಸ್ಟಿಕ್‌ಗೆ ಡೈರೆಕ್ಟ್ 4 ಬಸ್

ಸುಮಾರು 20 ವರ್ಷಗಳ ನಂತರ, ಕನಕಪುರದಿಂದ ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣಕ್ಕೆ ರಾಜ್ಯ ರಸ್ತೆ ಸಾರಿಗೆ ಬಸ್ ಸಂಚಾರ ಪುನರಾರಂಭಿಸಲಾಗಿದೆ. ವಿದ್ಯಾರ್ಥಿಗಳು, ಕಾರ್ಮಿಕರು ಮತ್ತು ಸಾರ್ವಜನಿಕರ ಅನುಕೂಲಕ್ಕಾಗಿ ಬೆಳಿಗ್ಗೆ ಮತ್ತು ಸಂಜೆ ನಿರ್ದಿಷ್ಟ ಸಮಯಗಳಲ್ಲಿ ನಾಲ್ಕು ಬಸ್‌ಗಳ ಸೇವೆಯನ್ನು ಕಲ್ಪಿಸಲಾಗಿದೆ.

Read Full Story

08:43 AM (IST) Apr 06

ಎಲ್‌&ಟಿಯ ₹57 ಕೋಟಿ ಹಣ ಕೆ ರೈಡ್‌ನಿಂದ ಮುಟ್ಟುಗೋಲು

K-RIDE vs L&T tender dispute: ಸಬರ್ಬನ್ ಯೋಜನೆ ಅನುಷ್ಠಾನಗೊಳಿಸಲು ವಿಫಲವಾಗಿ ಟೆಂಡರ್ ನಿಯಮ ಉಲ್ಲಂಘಿಸಿದ ಎಲ್ ಆ್ಯಂಡ್ ಟಿ ಕಂಪನಿಯ ₹57 ಕೋಟಿಯನ್ನು ಕರ್ನಾಟಕ ರೈಲು ಮೂಲಸೌಕರ್ಯ ಅಭಿವೃದ್ಧಿ ಕಂಪನಿ (ಕೆ-ರೈಡ್) ಮುಟ್ಟುಗೋಲು ಹಾಕಿಕೊಂಡಿದೆ.

Read Full Story

08:41 AM (IST) Apr 06

ನುಗ್ಗೇಹಳ್ಳಿಯಲ್ಲಿ ವರ್ಷದ ಉತ್ತಮ ಮಳೆಗಾಗಿ ತಿಂಗಳ ಮಾಮನ ತೇರು ಹಬ್ಬ; ಮದುವೆ ಮಾಡಿ ಆಚರಣೆ

ಹಾಸನದ ನುಗ್ಗೇಹಳ್ಳಿಯಲ್ಲಿ ಮಳೆಗಾಗಿ 'ತಿಂಗಳಮಾಮನ ತೇರು' ಎಂಬ ವಿಶಿಷ್ಟ ಹಬ್ಬವನ್ನು ಆಚರಿಸಿದರೆ, ಸಕಲೇಶಪುರದಲ್ಲಿ 16 ಅಡಿ ಎತ್ತರದ ಏಕಶಿಲಾ ಆಂಜನೇಯ ವಿಗ್ರಹವನ್ನು ಪ್ರತಿಷ್ಠಾಪಿಸಲಾಯಿತು. ಇದರೊಂದಿಗೆ, ಮದ್ದೂರಿನಲ್ಲಿ ಸಾಯಿಬಾಬಾರ 21ನೇ ವರ್ಷದ ಪಲ್ಲಕ್ಕಿ ಮಹೋತ್ಸವವು ವಿಜೃಂಭಣೆಯಿಂದ ಜರುಗಿತು.
Read Full Story

08:19 AM (IST) Apr 06

ಬೆಂಗಳೂರು - 80% ಖಾಸಗಿ ಆಟೋ ಗ್ಯಾಸ್‌ ಬಂಕ್‌ಗಳು ಬಂದ್‌

IOCL auto gas supply: ಜಾಗತಿಕ ವಿದ್ಯಮಾನಗಳು ಮತ್ತು ಖಾಸಗಿ ಬಂಕ್‌ಗಳ ಮುಚ್ಚುವಿಕೆಯಿಂದ ಬೆಂಗಳೂರಿನಲ್ಲಿ ಆಟೋ ಎಲ್‌ಪಿಜಿ ಕೊರತೆ ತೀವ್ರಗೊಂಡಿದೆ. ಪೂರೈಕೆ ಹೆಚ್ಚಿಸಿದ್ದರೂ ಬೇಡಿಕೆ ನೀಗಿಸಲು ಸಾಧ್ಯವಾಗದ ಕಾರಣ, ಐಒಸಿಎಲ್ ತಾತ್ಕಾಲಿಕವಾಗಿ ಪೆಟ್ರೋಲ್ ಬಳಸಲು ಚಾಲಕರಿಗೆ ಸಲಹೆ ನೀಡಿದೆ.

Read Full Story

07:54 AM (IST) Apr 06

ನನಗಾಗ 15 ವರ್ಷ ಪೋರ್ನ್ ಸೈಟ್‌ನಲ್ಲಿ ನನ್ನ ಮುಖ ಕಂಡು ಬೆಚ್ಚಿಬಿದ್ದಿದ್ದೆ - ಕರಾಳ ನೆನಪು ಹಂಚಿಕೊಂಡ ನಟಿ

ಬಾಲಿವುಡ್ ನಟಿ ಜಾನ್ವಿ ಕಪೂರ್, ತಮ್ಮ 15ನೇ ವಯಸ್ಸಿನಲ್ಲಿ ಶಾಲಾ ದಿನಗಳಲ್ಲಿ ನಡೆದ ಆಘಾತಕಾರಿ ಘಟನೆಯೊಂದನ್ನು ಹಂಚಿಕೊಂಡಿದ್ದಾರೆ. ಪೋರ್ನ್ ಸೈಟ್‌ನಲ್ಲಿ ತಮ್ಮ ಅಶ್ಲೀಲ ಚಿತ್ರವನ್ನು ಕಂಡ ಅನುಭವ ಮತ್ತು ಡೀಪ್ ಫೇಕ್ ತಂತ್ರಜ್ಞಾನದ ದುಷ್ಪರಿಣಾಮಗಳ ಬಗ್ಗೆ ಅವರು ವಿವರಿಸಿದ್ದಾರೆ.
Read Full Story

07:35 AM (IST) Apr 06

61 ವರ್ಷದಲ್ಲೂ ಸುರೇಶ್ ಗೌಡ 45ರಂತಿದ್ದಾರೆ

ಬಿಜೆಪಿ ಶಾಸಕ ಸುರೇಶ್ ಗೌಡರು ತಮ್ಮ ದೀರ್ಘಕಾಲದ ಆ್ಯಸಿಡಿಟಿ ಸಮಸ್ಯೆಗೆ ಆಸ್ಟ್ರೇಲಿಯಾದ ಔಷಧದಿಂದ ಪರಿಹಾರ ಕಂಡುಕೊಂಡಿದ್ದನ್ನು ವಿಧಾನಸಭೆಯಲ್ಲಿ ಹಂಚಿಕೊಂಡಿದ್ದಾರೆ. ಮತ್ತೊಂದೆಡೆ, ಇರಾನ್ ಯುದ್ಧದ ಸುಳ್ಳು ಸುದ್ದಿಯಿಂದಾಗಿ ಬೆಳಗಾವಿಯಲ್ಲಿ ಪೆಟ್ರೋಲ್-ಡೀಸೆಲ್‌ಗಾಗಿ ಜನರು ಮುಗಿಬಿದ್ದಿದ್ದು, ಪ್ಲಾಸ್ಟಿಕ್ ಬಾಟಲಿಗಳ ಮಾರಾಟ ಜೋರಾಗಿತ್ತು

Read Full Story

07:04 AM (IST) Apr 06

ಮಹಿಳಾ ಕಸ್ಟಮ್ಸ್ ಅಧಿಕಾರಿ ಮೇಲೆ ಅತ್ಯಾ*ಚಾರ - ಖಾಸಗಿ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್‌ಮೇಲ್ - ಉದ್ಯಮಿ ಅಂದರ್

Bengaluru businessman arrested: ಬೆಂಗಳೂರಿನಲ್ಲಿ ಮಹಿಳಾ ಕಸ್ಟಮ್ಸ್ ಅಧಿಕಾರಿಯೊಬ್ಬರಿಗೆ ಬ್ಲ್ಯಾಕ್‌ಮೇಲ್ ಮಾಡಿ, ಸುಮಾರು ಏಳು ವರ್ಷಗಳ ಕಾಲ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಉದ್ಯಮಿ ಕೃಪಲಾನಿಯನ್ನು ಇಂದಿರಾನಗರ ಪೊಲೀಸರು ಬಂಧಿಸಿದ್ದಾರೆ. 

Read Full Story

06:48 AM (IST) Apr 06

Belagavi - ನಿನ್ನೇ ಪ್ರೀತಿಸುವೆ ಎಂದು ಹಣ, ಮಾನ, ಚಿನ್ನ ದೋಚಿದ! ನ್ಯಾಯಕ್ಕಾಗಿ ಯುವತಿ ಕಣ್ಣೀರು

ಬೆಳಗಾವಿಯಲ್ಲಿ ಇನ್‌ಸ್ಟಾಗ್ರಾಂ ಮೂಲಕ ಪರಿಚಯವಾದ ಯುವಕ, ಮದುವೆಯಾಗುವುದಾಗಿ ನಂಬಿಸಿ ಯುವತಿಯ ಮೇಲೆ ಅತ್ಯಾ*ಚಾರ ಎಸಗಿದ್ದಾನೆ. ನಂತರ ಖಾಸಗಿ ಫೋಟೋ ಮತ್ತು ವಿಡಿಯೋಗಳನ್ನಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ 1500 ಗ್ರಾಂ ಚಿನ್ನ ಹಾಗೂ 19 ಲಕ್ಷ ರೂಪಾಯಿ ಪಡೆದು ವಂಚಿಸಿದ್ದಾನೆ.

Read Full Story

06:24 AM (IST) Apr 06

ಮೈಸೂರು ಜಿಲ್ಲೆಯ ಎರಡು ಗ್ರಾಮದ ಜನರು LPGಯೇ ಬಳಸಲ್ಲ; ಇವರಿಗೆಲ್ಲಾ ಇಲ್ಲ ಟೆನ್ಷನ್

ಮಧ್ಯಪ್ರಾಚ್ಯ ಯುದ್ಧದಿಂದ ಉಂಟಾದ ಅಡುಗೆ ಅನಿಲದ ಕೊರತೆಯ ನಡುವೆಯೂ, ಎಚ್‌.ಡಿ. ಕೋಟೆ ಮತ್ತು ಸರಗೂರು ತಾಲೂಕಿನ ಗ್ರಾಮಗಳು ಜೈವಿಕ ಅನಿಲ ಬಳಸಿ ಸ್ವಾವಲಂಬಿಯಾಗಿವೆ.  ನೂರಾರು ಕುಟುಂಬಗಳು ಇಂಧನಕ್ಕಾಗಿ ಜೈವಿಕ ಅನಿಲವನ್ನು ಅವಲಂಬಿಸಿ, ಆರ್ಥಿಕ ಉಳಿತಾಯ ಮಾಡುತ್ತಿವೆ.

Read Full Story

05:24 AM (IST) Apr 06

ಪ್ರಧಾನಿಗಳಿಂದ ದಕ್ಷಿಣ ರಾಜ್ಯಗಳ ಧ್ವನಿ ದುರ್ಬಲಗೊಳಿಸುವ ರಾಜಕೀಯ ತಂತ್ರ - ಸಿದ್ದರಾಮಯ್ಯ

ಲೋಕಸಭಾ ಕ್ಷೇತ್ರ ಮರುವಿಂಗಡಣೆ ಪ್ರಸ್ತಾವನೆಯು ದಕ್ಷಿಣದ ರಾಜ್ಯಗಳ ಧ್ವನಿಯನ್ನು ದುರ್ಬಲಗೊಳಿಸುವ ರಾಜಕೀಯ ತಂತ್ರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ. ಜನಸಂಖ್ಯೆ ನಿಯಂತ್ರಿಸಿದ ರಾಜ್ಯಗಳಿಗೆ ಇದರಿಂದ ಅನ್ಯಾಯವಾಗಲಿದೆ.

Read Full Story

More Trending News