ಬೆಂಗಳೂರು: ಈ ಹಿಂದೆ ನೀಡಿದ ದಿನಾಂಕಗಳ ಪ್ರಕಾರ ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಬೇಕಿತ್ತು. ಆದ್ರೆ ತಾಂತ್ರಿಕ ಕಾರಣಗಳಿಂದ ಫಲಿತಾಂಶ ಏಪ್ರಿಲ್ 8 ಅಥವಾ ಏಪ್ರಿಲ್ 9ರ ನಂತರ ಪ್ರಕಟವಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಏಪ್ರಿಲ್ 9ರಂದು ರಾಜ್ಯದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ಈ ಕಾರಣದಿಂದಲೂ ಫಲಿತಾಂಶ ಪ್ರಕಟದ ದಿನಾಂಕ ಮುಂದೂಡಿಕೆಯಾಗಿರುವ ಬಗ್ಗೆ ಅನುಮಾನಗಳು ಮೂಡಿವೆ.
ಈ ಕುರಿತು ಶಿಕ್ಷಣ ಇಲಾಖೆಯಿಂದ ಅಧಿಕೃತ ಮಾಹಿತಿ ಹೊರಬಂದಿಲ್ಲ. ವಿದ್ಯಾರ್ಥಿಗಳು ಯಾವುದೇ ವದಂತಿಗಳಿಗೆ ಕಿವಿಗೊಡಬಾರದು. ಶಿಕ್ಷಣ ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿ ಪ್ರಕಟವಾಗುವ ಮಾಹಿತಿಯನ್ನು ಮಾತ್ರ ನಂಬಬೇಕು ಎಂದು ಅಧಿಕಾರಿಗಳು ಸಲಹೆ ನೀಡಿದ್ದಾರೆ.
10:14 AM (IST) Apr 06
ಜೀ ಕನ್ನಡದ 'ಲಕ್ಷ್ಮೀ ನಿವಾಸ' ಧಾರಾವಾಹಿಯಲ್ಲಿ, ಹಿಂದೆ ತನ್ನ ಸೈಕೋ ಗಂಡ ಜಯಂತ್ಗೆ ಹೆದರುತ್ತಿದ್ದ ಜಾನು ಈಗ ಸಂಪೂರ್ಣ ಬದಲಾಗಿದ್ದಾಳೆ. ತಾನು ಅನುಭವಿಸಿದ ಕಷ್ಟಗಳನ್ನೇ ಜಯಂತ್ಗೆ ನೀಡಿ, ಆತನಿಗೆ ನರಕ ದರ್ಶನ ಮಾಡಿಸುತ್ತಿದ್ದಾಳೆ. ಈ ಹೊಸ ತಿರುವು ವೀಕ್ಷಕರಲ್ಲಿ ಭಾರೀ ಕುತೂಹಲ ಮೂಡಿಸಿದೆ.
09:48 AM (IST) Apr 06
Kalaburagi teacher murder case: ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಕಲ್ಮೂಡ ಗ್ರಾಮದ ಬಳಿ ಸರ್ಕಾರಿ ಶಾಲಾ ಶಿಕ್ಷಕಿ ಜ್ಯೋತಿ ಕಪಾಳೆ (57) ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ನಂತರ ಪೆಟ್ರೋಲ್ ಸುರಿದು ಶವವನ್ನು ಸುಟ್ಟು ಹಾಕಿದ್ದಾರೆ.
09:20 AM (IST) Apr 06
Husband shooting training to kill wife: ಬೆಂಗಳೂರಿನಲ್ಲಿ ಬ್ಯಾಂಕ್ ಉದ್ಯೋಗಿ ಪತ್ನಿಯನ್ನು ಗುಂಡಿಕ್ಕಿ ಕೊಂದ ಪತಿ ಬಾಲಮುರುಗನ್, ಈ ಹತ್ಯೆಗಾಗಿಯೇ ವೈಟ್ಫೀಲ್ಡ್ನ ಶೂಟಿಂಗ್ ಅಕಾಡೆಮಿಯಲ್ಲಿ ತರಬೇತಿ ಪಡೆದಿದ್ದ ಎಂದು ಪೊಲೀಸರು ಸಲ್ಲಿಸಿರುವ ಚಾರ್ಜ್ಶೀಟ್ನಲ್ಲಿ ಉಲ್ಲೇಖಿಸಲಾಗಿದೆ.
09:02 AM (IST) Apr 06
ಸುಮಾರು 20 ವರ್ಷಗಳ ನಂತರ, ಕನಕಪುರದಿಂದ ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣಕ್ಕೆ ರಾಜ್ಯ ರಸ್ತೆ ಸಾರಿಗೆ ಬಸ್ ಸಂಚಾರ ಪುನರಾರಂಭಿಸಲಾಗಿದೆ. ವಿದ್ಯಾರ್ಥಿಗಳು, ಕಾರ್ಮಿಕರು ಮತ್ತು ಸಾರ್ವಜನಿಕರ ಅನುಕೂಲಕ್ಕಾಗಿ ಬೆಳಿಗ್ಗೆ ಮತ್ತು ಸಂಜೆ ನಿರ್ದಿಷ್ಟ ಸಮಯಗಳಲ್ಲಿ ನಾಲ್ಕು ಬಸ್ಗಳ ಸೇವೆಯನ್ನು ಕಲ್ಪಿಸಲಾಗಿದೆ.
08:43 AM (IST) Apr 06
K-RIDE vs L&T tender dispute: ಸಬರ್ಬನ್ ಯೋಜನೆ ಅನುಷ್ಠಾನಗೊಳಿಸಲು ವಿಫಲವಾಗಿ ಟೆಂಡರ್ ನಿಯಮ ಉಲ್ಲಂಘಿಸಿದ ಎಲ್ ಆ್ಯಂಡ್ ಟಿ ಕಂಪನಿಯ ₹57 ಕೋಟಿಯನ್ನು ಕರ್ನಾಟಕ ರೈಲು ಮೂಲಸೌಕರ್ಯ ಅಭಿವೃದ್ಧಿ ಕಂಪನಿ (ಕೆ-ರೈಡ್) ಮುಟ್ಟುಗೋಲು ಹಾಕಿಕೊಂಡಿದೆ.
08:41 AM (IST) Apr 06
08:19 AM (IST) Apr 06
IOCL auto gas supply: ಜಾಗತಿಕ ವಿದ್ಯಮಾನಗಳು ಮತ್ತು ಖಾಸಗಿ ಬಂಕ್ಗಳ ಮುಚ್ಚುವಿಕೆಯಿಂದ ಬೆಂಗಳೂರಿನಲ್ಲಿ ಆಟೋ ಎಲ್ಪಿಜಿ ಕೊರತೆ ತೀವ್ರಗೊಂಡಿದೆ. ಪೂರೈಕೆ ಹೆಚ್ಚಿಸಿದ್ದರೂ ಬೇಡಿಕೆ ನೀಗಿಸಲು ಸಾಧ್ಯವಾಗದ ಕಾರಣ, ಐಒಸಿಎಲ್ ತಾತ್ಕಾಲಿಕವಾಗಿ ಪೆಟ್ರೋಲ್ ಬಳಸಲು ಚಾಲಕರಿಗೆ ಸಲಹೆ ನೀಡಿದೆ.
07:54 AM (IST) Apr 06
07:35 AM (IST) Apr 06
ಬಿಜೆಪಿ ಶಾಸಕ ಸುರೇಶ್ ಗೌಡರು ತಮ್ಮ ದೀರ್ಘಕಾಲದ ಆ್ಯಸಿಡಿಟಿ ಸಮಸ್ಯೆಗೆ ಆಸ್ಟ್ರೇಲಿಯಾದ ಔಷಧದಿಂದ ಪರಿಹಾರ ಕಂಡುಕೊಂಡಿದ್ದನ್ನು ವಿಧಾನಸಭೆಯಲ್ಲಿ ಹಂಚಿಕೊಂಡಿದ್ದಾರೆ. ಮತ್ತೊಂದೆಡೆ, ಇರಾನ್ ಯುದ್ಧದ ಸುಳ್ಳು ಸುದ್ದಿಯಿಂದಾಗಿ ಬೆಳಗಾವಿಯಲ್ಲಿ ಪೆಟ್ರೋಲ್-ಡೀಸೆಲ್ಗಾಗಿ ಜನರು ಮುಗಿಬಿದ್ದಿದ್ದು, ಪ್ಲಾಸ್ಟಿಕ್ ಬಾಟಲಿಗಳ ಮಾರಾಟ ಜೋರಾಗಿತ್ತು
07:04 AM (IST) Apr 06
Bengaluru businessman arrested: ಬೆಂಗಳೂರಿನಲ್ಲಿ ಮಹಿಳಾ ಕಸ್ಟಮ್ಸ್ ಅಧಿಕಾರಿಯೊಬ್ಬರಿಗೆ ಬ್ಲ್ಯಾಕ್ಮೇಲ್ ಮಾಡಿ, ಸುಮಾರು ಏಳು ವರ್ಷಗಳ ಕಾಲ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಉದ್ಯಮಿ ಕೃಪಲಾನಿಯನ್ನು ಇಂದಿರಾನಗರ ಪೊಲೀಸರು ಬಂಧಿಸಿದ್ದಾರೆ.
06:48 AM (IST) Apr 06
ಬೆಳಗಾವಿಯಲ್ಲಿ ಇನ್ಸ್ಟಾಗ್ರಾಂ ಮೂಲಕ ಪರಿಚಯವಾದ ಯುವಕ, ಮದುವೆಯಾಗುವುದಾಗಿ ನಂಬಿಸಿ ಯುವತಿಯ ಮೇಲೆ ಅತ್ಯಾ*ಚಾರ ಎಸಗಿದ್ದಾನೆ. ನಂತರ ಖಾಸಗಿ ಫೋಟೋ ಮತ್ತು ವಿಡಿಯೋಗಳನ್ನಿಟ್ಟುಕೊಂಡು ಬ್ಲ್ಯಾಕ್ಮೇಲ್ ಮಾಡಿ 1500 ಗ್ರಾಂ ಚಿನ್ನ ಹಾಗೂ 19 ಲಕ್ಷ ರೂಪಾಯಿ ಪಡೆದು ವಂಚಿಸಿದ್ದಾನೆ.
06:24 AM (IST) Apr 06
ಮಧ್ಯಪ್ರಾಚ್ಯ ಯುದ್ಧದಿಂದ ಉಂಟಾದ ಅಡುಗೆ ಅನಿಲದ ಕೊರತೆಯ ನಡುವೆಯೂ, ಎಚ್.ಡಿ. ಕೋಟೆ ಮತ್ತು ಸರಗೂರು ತಾಲೂಕಿನ ಗ್ರಾಮಗಳು ಜೈವಿಕ ಅನಿಲ ಬಳಸಿ ಸ್ವಾವಲಂಬಿಯಾಗಿವೆ. ನೂರಾರು ಕುಟುಂಬಗಳು ಇಂಧನಕ್ಕಾಗಿ ಜೈವಿಕ ಅನಿಲವನ್ನು ಅವಲಂಬಿಸಿ, ಆರ್ಥಿಕ ಉಳಿತಾಯ ಮಾಡುತ್ತಿವೆ.
05:24 AM (IST) Apr 06
ಲೋಕಸಭಾ ಕ್ಷೇತ್ರ ಮರುವಿಂಗಡಣೆ ಪ್ರಸ್ತಾವನೆಯು ದಕ್ಷಿಣದ ರಾಜ್ಯಗಳ ಧ್ವನಿಯನ್ನು ದುರ್ಬಲಗೊಳಿಸುವ ರಾಜಕೀಯ ತಂತ್ರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ. ಜನಸಂಖ್ಯೆ ನಿಯಂತ್ರಿಸಿದ ರಾಜ್ಯಗಳಿಗೆ ಇದರಿಂದ ಅನ್ಯಾಯವಾಗಲಿದೆ.