Published : Apr 06, 2026, 05:10 AM ISTUpdated : Apr 06, 2026, 10:34 PM IST

Karnataka News Live: ಯುವತಿ ವಿಚಾರಕ್ಕೆ ಎರಡು ಮುಸ್ಲಿಂ ಕುಟುಂಬಗಳ ನಡುವೆ ಮಾರಾಮರಿ, ತುಮಕೂರು ರಸ್ತೆಯಲ್ಲಿ ಗಲಾಟೆ

ಸಾರಾಂಶ

ಬೆಂಗಳೂರು: ಈ ಹಿಂದೆ ನೀಡಿದ ದಿನಾಂಕಗಳ ಪ್ರಕಾರ ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಬೇಕಿತ್ತು. ಆದ್ರೆ ತಾಂತ್ರಿಕ ಕಾರಣಗಳಿಂದ ಫಲಿತಾಂಶ ಏಪ್ರಿಲ್ 8 ಅಥವಾ ಏಪ್ರಿಲ್ 9ರ ನಂತರ ಪ್ರಕಟವಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಏಪ್ರಿಲ್ 9ರಂದು ರಾಜ್ಯದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ಈ ಕಾರಣದಿಂದಲೂ ಫಲಿತಾಂಶ ಪ್ರಕಟದ ದಿನಾಂಕ ಮುಂದೂಡಿಕೆಯಾಗಿರುವ ಬಗ್ಗೆ ಅನುಮಾನಗಳು ಮೂಡಿವೆ. 

ಈ ಕುರಿತು ಶಿಕ್ಷಣ ಇಲಾಖೆಯಿಂದ ಅಧಿಕೃತ ಮಾಹಿತಿ ಹೊರಬಂದಿಲ್ಲ. ವಿದ್ಯಾರ್ಥಿಗಳು ಯಾವುದೇ ವದಂತಿಗಳಿಗೆ ಕಿವಿಗೊಡಬಾರದು. ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟವಾಗುವ ಮಾಹಿತಿಯನ್ನು ಮಾತ್ರ ನಂಬಬೇಕು ಎಂದು ಅಧಿಕಾರಿಗಳು ಸಲಹೆ ನೀಡಿದ್ದಾರೆ.

10:34 PM (IST) Apr 06

ಯುವತಿ ವಿಚಾರಕ್ಕೆ ಎರಡು ಮುಸ್ಲಿಂ ಕುಟುಂಬಗಳ ನಡುವೆ ಮಾರಾಮರಿ, ತುಮಕೂರು ರಸ್ತೆಯಲ್ಲಿ ಗಲಾಟೆ

ಯುವತಿ ವಿಚಾರಕ್ಕೆ ಎರಡು ಮುಸ್ಲಿಂ ಕುಟುಂಬಗಳ ನಡುವೆ ಮಾರಾಮರಿ, ತುಮಕೂರು ರಸ್ತೆಯಲ್ಲಿ ಗಲಾಟೆ ನಡೆದಿದೆ. ಹಲವರ ಮೊಬೈಲ್‌ನಲ್ಲಿ ಗಲಾಟೆ ದೃಶ್ಯಗಳು ಸೆರೆಯಾಗಿದ್ದು ಸಾಮಾಜಿಕ ತಾಣಗಳಲ್ಲಿ ಹರಿದಾಡುತ್ತಿದೆ.

 

Read Full Story

10:04 PM (IST) Apr 06

ಬೆಳಗಾವಿಯಲ್ಲಿ ದುರಂತ, ಟಿಪ್ಪರ್ ಡಿಕ್ಕಿಯಾಗಿ ತಂದೆ ಕಣ್ಣೆದುರೇ ನಾಲ್ಕು ವರ್ಷದ ಮಗು ಸಾವು

ಬೆಳಗಾವಿಯಲ್ಲಿ ದುರಂತ, ಟಿಪ್ಪರ್ ಡಿಕ್ಕಿಯಾಗಿ ತಂದೆ ಕಣ್ಣೆದುರೇ ನಾಲ್ಕು ವರ್ಷದ ಮಗು ಸಾವು, ತಂದೆ ಮಗ ಬೈಕ್‌ನಲ್ಲಿ ಹೋಗುವಾಗ ಈ ಅಪಘಾತ ಸಂಭವಿಸಿದೆ. ಕುಟುಂಬಸ್ಥರು ಆಕ್ರಂದನ ಮುಗಿಲು ಮುಟ್ಟಿದೆ.

 

Read Full Story

09:47 PM (IST) Apr 06

ದಾವಣಗೆರೆ ಅಹಿಂದ ಅಭ್ಯರ್ಥಿಗೆ ಯಾಕೆ ಸೋಲಿಸಬೇಕಪ್ಪಾ? ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಬಿಜೆಪಿ ಅಭ್ಯರ್ಥಿ ಗೆಲ್ಲಿಸಬೇಡಿ ಎನ್ನುವ ಸಿದ್ದರಾಮಯ್ಯ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಅಹಿಂದ ಸಮಾಜದ ವ್ಯಕ್ತಿಯೇ ನಿಂತಿದ್ದರೂ ಯಾಕಪ್ಪಾ ಸೋಲಿಸಬೇಕು ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದರು.

Read Full Story

09:38 PM (IST) Apr 06

ಮೋದಿ ಪೂರೈಸಿದ ಅಕ್ಕಿ ಜನರಿಗೆ ಕೊಟ್ಟಿದ್ದನ್ನು ಬಿಟ್ಟರೆ ಕಾಂಗ್ರೆಸ್ ಏನೂ ಕೊಟ್ಟಿಲ್ಲ - ಛಲವಾದಿ ನಾರಾಯಣಸ್ವಾಮಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅನ್ನ ರಾಮಯ್ಯನಲ್ಲ. ಅವರೊಬ್ಬ ಡೋಂಗಿ ರಾಜಕಾರಣಿ, ಎಲ್ಲದಕ್ಕೂ ಕನ್ನ ಹಾಕುತ್ತಿದ್ದಾರೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯವಾಡಿದ್ದಾರೆ.

Read Full Story

09:07 PM (IST) Apr 06

Haircare Foods - ಈ 11 ಆಹಾರ ಅಷ್ಟೇ; ರಾಶಿ ರಾಶಿ ಕೂದಲು ಸೋಂಪಾಗಿ ಬೆಳೆಯುತ್ತೆ!

Food for hair growth: ಪ್ರೋಟೀನ್, ಕಬ್ಬಿಣ, ಒಮೆಗಾ-3 ಮತ್ತು ವಿಟಮಿನ್‌ಗಳಂತಹ ಪೋಷಕಾಂಶಗಳಿಂದ ಸಮೃದ್ಧವಾಗಿರುವ ಆಹಾರವು ಕೂದಲನ್ನು ಬಲಪಡಿಸುತ್ತದೆ, ಬೆಳವಣಿಗೆಯನ್ನು ಹೆಚ್ಚಿಸುತ್ತದೆ ಮತ್ತು ನೆತ್ತಿಯ ಆರೋಗ್ಯವನ್ನು ಸುಧಾರಿಸುತ್ತದೆ. ಆರೋಗ್ಯಕರ, ಹೊಳೆಯುವ ಕೂದಲಿಗಾಗಿ ಸಹಾಯ ಮಾಡುವ 11 ಆಹಾರಗಳ ಪಟ್ಟಿ.

 

Read Full Story

08:10 PM (IST) Apr 06

Paneer Side Effects - ಪ್ರೋಟೀನ್‌ ಅಂತ ಪನೀರ್‌ ತಿಂತೀರಾ? ಈ ಸಮಸ್ಯೆ ಇದ್ದವ್ರು ತಿಂದ್ರೆ ಅಷ್ಟೇ ಕಥೆ!

Paneer Consumption Guide: ಹಾಲಿನಿಂದ ತಯಾರಿಸುವ ಪನ್ನೀರ್ ಇಷ್ಟಪಡದವರು ತುಂಬಾ ಕಡಿಮೆ. ಮದುವೆ, ಪಾರ್ಟಿ ಅಥವಾ ಯಾವುದೇ ಶುಭ ಸಮಾರಂಭವಿರಲಿ, ಪನ್ನೀರ್ ಇರಲೇಬೇಕು. ಆದರೆ, ಈ ಪನ್ನೀರ್ ಎಲ್ಲರಿಗೂ ಒಳ್ಳೆಯದಲ್ಲ, ಕೆಲವರು ಇದನ್ನು ತಿನ್ನಲೇಬಾರದು. ಅದು ಯಾರೆಂದು ನಿಮಗೆ ಗೊತ್ತಾ?

Read Full Story

07:55 PM (IST) Apr 06

ಆಡಳಿತ ಪಕ್ಷ ಕಾಂಗ್ರೆಸ್ ವಿರುದ್ಧ ಜನರ ದಂಗೆ ಎದ್ದಿದ್ದೇಕೆ? - ಬಿ.ವೈ.ವಿಜಯೇಂದ್ರ ಹೇಳಿದ್ದೇನು?

ಉಪ ಕ್ಷೇತ್ರಗಳ ಚುನಾವಣೆಯಲ್ಲಿ ಭಾರೀ ಮತಗಳ ಅಂತರದಲ್ಲಿ ಗೆಲ್ಲಲೇಬೇಕೆಂಬ ರಣೋತ್ಸಾಹ ನಮ್ಮೆಲ್ಲಾ ಕಾರ್ಯಕರ್ತರು, ಮುಖಂಡರಲ್ಲಿ ಕಂಡುಬರುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

Read Full Story

07:51 PM (IST) Apr 06

OTT Release This Week - ಒಟಿಟಿಯಲ್ಲಿ ತೆರೆಕಂಡ ಜನರನ್ನು ಕಾಡು ಸಿನಿಮಾಗಳು; ಸಿನಿಪ್ರೇಮಿಗಳಿಗೆ ಹಬ್ಬದೂಟ

OTT Movie Release This Week: ಏಪ್ರಿಲ್ 6 ರಿಂದ 12ರ ವರೆಗೆ ನೆಟ್‌ಫ್ಲಿಕ್ಸ್‌, ಪ್ರೈಮ್ ವಿಡಿಯೋ ಮತ್ತು ಜಿಯೋಹಾಟ್‌ಸ್ಟಾರ್‌ನಲ್ಲಿ ಹಲವು ಹೊಸ ಸಿನಿಮಾ ಹಾಗೂ ಸಿರೀಸ್‌ಗಳು ಬಿಡುಗಡೆಯಾಗಲಿವೆ. ಹಾಗಾದರೆ ಯಾವ ಸಿನಿಮಾಗಳು ರಿಲೀಸ್‌ ಆಗಲಿವೆ? ಅವುಗಳ ಸಂಪೂರ್ಣ ವಿವರ ಇಲ್ಲಿದೆ.

 

Read Full Story

07:09 PM (IST) Apr 06

ಆ್ಯಕ್ಟಿಂಗ್​ ಬರಲ್ಲ ಎಂದು ಹೆಂಗಸರೆದುರೇ ಉಗಿದುಬಿಟ್ಟರು - ಕಣ್ಣೀರು ಹಾಕುತ್ತಲೇ ಆಕೆಗಾಗಿ ಸಹಿಸಿಕೊಂಡೆ- ಪ್ರಮೋದ್​ ಶೆಟ್ಟಿ ಮೆಲುಕು

ರಂಗಭೂಮಿ ಹಿನ್ನೆಲೆಯ ನಟ ಪ್ರಮೋದ್ ಶೆಟ್ಟಿ ಅವರು, ಸೀರಿಯಲ್ ಒಂದರ ಶೂಟಿಂಗ್ ವೇಳೆ ನಿರ್ದೇಶಕರಿಂದ 'ನಟನೆ ಬರುವುದಿಲ್ಲ' ಎಂದು ನೂರಾರು ಮಹಿಳೆಯರ ಮುಂದೆ ಅವಮಾನಕ್ಕೊಳಗಾಗಿದ್ದರು.  ಪ್ರೇಯಸಿ ಸುಪ್ರೀತಾಳಿಗಾಗಿ ಗಟ್ಟಿ ಮನಸ್ಸು ಮಾಡಿ, ಅದೇ ನಿರ್ದೇಶಕರಿಂದ ಶಹಬ್ಬಾಸ್ ಗಿರಿ ಪಡೆದ ಅನುಭವ ಹಂಚಿಕೊಂಡಿದ್ದಾರೆ.

Read Full Story

06:34 PM (IST) Apr 06

ಡ್ರಗ್ಸ್​ ಕೇಸ್​ನಲ್ಲಿ ಹೆಸರು ಬಂದಾಗ ನಡೆದದ್ದೇನು? ಆ ಕರಾಳ ದಿನಗಳನ್ನು ನೆನೆದ Anchor Anushree

2020ರ ಸ್ಯಾಂಡಲ್​ವುಡ್​ ಡ್ರಗ್ಸ್ ಕೇಸ್​ನಲ್ಲಿ ತಮ್ಮ ಹೆಸರು ಕೇಳಿಬಂದಾಗ ಅನುಭವಿಸಿದ ನರಕಯಾತನೆಯ ಬಗ್ಗೆ ಆ್ಯಂಕರ್ ಅನುಶ್ರೀ ಮಾತನಾಡಿದ್ದಾರೆ. ಪೊಲೀಸರು ಕೇವಲ ವಿಚಾರಣೆಗೆ ಕರೆದಿದ್ದರೂ, ಮಾಧ್ಯಮಗಳು ತಮ್ಮನ್ನು ತಪ್ಪಿತಸ್ಥೆಯಂತೆ ಬಿಂಬಿಸಿ 'ಮಾನಸಿಕ ಅ*ತ್ಯಾಚಾರ' ನಡೆಸಿದವು ಎಂದು ನೋವು ಹಂಚಿಕೊಂಡಿದ್ದಾರೆ.

Read Full Story

06:16 PM (IST) Apr 06

ಬೆಂಗಳೂರಿನ DRDO ಸಂಸ್ಥೆಗೆ ಬಾಂಬ್ ಬೆದರಿಕೆ - ಉದಯನಿಧಿ ಸ್ಟಾಲಿನ್ ಪುತ್ರನ ಕಿಡ್ನ್ಯಾಪ್‌ಗೆ ಸಂಚು

ಬೆಂಗಳೂರಿನ ಪ್ರತಿಷ್ಠಿತ DRDO ಕಚೇರಿಗಳಿಗೆ ಸರಣಿ ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿದ್ದು, ಭದ್ರತಾ ವಲಯದಲ್ಲಿ ಆತಂಕ ಸೃಷ್ಟಿಸಿದೆ. ಈ ಇಮೇಲ್‌ನಲ್ಲಿ ಸ್ಫೋಟಕಗಳನ್ನು ಇಟ್ಟಿರುವುದಾಗಿ ಹೇಳಿರುವುದಲ್ಲದೆ, ತಮಿಳುನಾಡು ಉಪ ಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಅವರ ಪುತ್ರನ ಅಪಹರಣದ ಎಚ್ಚರಿಕೆಯನ್ನೂ ನೀಡಲಾಗಿದೆ.

Read Full Story

06:13 PM (IST) Apr 06

Photos - 33ನೇ ವಯಸ್ಸಿಗೆ ಎಂಗೇಜ್‌ ಆದ ಖ್ಯಾತ ನಟ; ಹುಡುಗಿ ಅಪ್ಪ ವಕೀಲ, ಅಜ್ಜ ನ್ಯಾಯಾಧೀಶ!

ಬೆಲ್ಲಂಕೊಂಡ ಶ್ರೀನಿವಾಸ್ ಮತ್ತು ಕಾವ್ಯಾ ರೆಡ್ಡಿ ಅವರ ನಿಶ್ಚಿತಾರ್ಥ ಹೈದರಾಬಾದ್‌ನಲ್ಲಿ ಅದ್ದೂರಿಯಾಗಿ ನಡೆದಿದೆ. ಇವರ ಮದುವೆ ದಿನಾಂಕವೂ ನಿಗದಿಯಾಗಿದೆ. ಈ ಕುರಿತ ವಿವರ ಇಲ್ಲಿದೆ. ಟಾಲಿವುಡ್ ಯುವ ನಟ ಬೆಲ್ಲಂಕೊಂಡ ಸಾಯಿ ಶ್ರೀನಿವಾಸ್ ತಮ್ಮ ವೈಯಕ್ತಿಕ ಜೀವನದಲ್ಲಿ ಹೊಸ ಅಧ್ಯಾಯ ಆರಂಭಿಸಿದ್ದಾರೆ.

 

Read Full Story

04:54 PM (IST) Apr 06

ದೊಡ್ಡ ದೊಡ್ಡ ಅವಕಾಶವಿದ್ರೂ ಚಿತ್ರರಂಗಕ್ಕೆ ಗುಡ್‌ಬೈ ಹೇಳಿದ ಬೆಂಗಳೂರಿನ ನಟಿ, Lankesh Pathrike ನಾಯಕಿ, ಯಾಕೆ?

Vasundhara Das: ಬೆಂಗಳೂರಿನ ವಸುಂಧರಾ ದಾಸ್ ಅವರು ಇತ್ತೀಚೆಗೆ ಸುದ್ದಿಯಲ್ಲಿದ್ದಾರೆ. ಒಂದು ಕಾಲದಲ್ಲಿ ವಸುಂಧರಾ ಅವರು ಬಾಲಿವುಡ್, ದಕ್ಷಿಣ ಭಾರತದ ಚಿತ್ರರಂಗದಲ್ಲಿ ತಮ್ಮ ವಿಶಿಷ್ಟ ಧ್ವನಿಯ ಮೂಲಕ ಸಂಚಲನ ಮೂಡಿಸಿದ್ದರು. ಕಮಲ್ ಹಾಸನ್ ಎದುರು ನಟಿಸಿ ಮಿಂಚಿದ್ದ ಇವರು ಹಠಾತ್ತನೆ ಚಿತ್ರರಂಗದಿಂದ ದೂರವಾದರು. 

Read Full Story

04:50 PM (IST) Apr 06

ಕರ್ನಾಟಕದ ಎರಡು ಜಿಲ್ಲೆಗಳಲ್ಲಿ ಹೊಸ ಫುಡ್ ಪಾರ್ಕ್ ಭಾಗ್ಯ - ಕೃಷಿ ಉತ್ಪನ್ನಗಳ ಸಂಸ್ಕರಣೆಗೆ ಸಿಗಲಿದೆ ಬೂಸ್ಟ್!

ಕರ್ನಾಟಕದ ಶಿವಮೊಗ್ಗ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಎರಡು ಹೊಸ ಫುಡ್‌ ಪಾರ್ಕ್‌ಗಳು ಶೀಘ್ರದಲ್ಲೇ ಸ್ಥಾಪನೆಯಾಗಲಿವೆ. ನಬಾರ್ಡ್ ನೆರವಿನೊಂದಿಗೆ, ಈ ಪಾರ್ಕ್‌ಗಳು ಸ್ಥಳೀಯ ಕೃಷಿ ಉತ್ಪನ್ನಗಳಾದ ಹಣ್ಣು, ತರಕಾರಿ, ಮತ್ತು ಹಾಲು ಸಂಸ್ಕರಣೆಗೆ ಆದ್ಯತೆ ನೀಡಲಿವೆ. 

Read Full Story

04:42 PM (IST) Apr 06

ಬೇಸಿಗೆಯಲ್ಲಿ ಸ್ಪೆಷಲ್ ಬ್ಯುಸಿನೆಸ್ ಐಡಿಯಾ! ದಿನಕ್ಕೆ 3 ಗಂಟೆ ಕೆಲಸ ಮಾಡಿ, ತಿಂಗಳಿಗೆ ಲಕ್ಷ ಗಳಿಸಿ!

ಬೇಸಿಗೆ ಕಾಲದಲ್ಲಿ ಐಸ್ ಕ್ರೀಮ್ ಪಾರ್ಲರ್‌ಗಳಿಗಿಂತ ಮೊಬೈಲ್ ಐಸ್ ಕ್ರೀಮ್ ಟ್ರಕ್‌ಗಳು ಹೆಚ್ಚು ಲಾಭ ತರುತ್ತವೆ. ಸೆಕೆಂಡ್ ಹ್ಯಾಂಡ್ ವಾಹನ, ಫ್ರೀಜರ್‌ಗಳು, ಬ್ರ್ಯಾಂಡಿಂಗ್ ಮತ್ತು ಸ್ಟಾಕ್ ಸೇರಿ ಸುಮಾರು 10 ಲಕ್ಷ ರೂಪಾಯಿ ಹೂಡಿಕೆಯೊಂದಿಗೆ ಈ ಬ್ಯುಸಿನೆಸ್ ಶುರು ಮಾಡಬಹುದು.
Read Full Story

04:29 PM (IST) Apr 06

ಕೆಲಸ ಹೋದ್ರೂ ಕೆಡದ ನೆಮ್ಮದಿ - ಬೆಂಗಳೂರಿನ ಒರಾಕಲ್ ಟೆಕ್ಕಿಯ 'ಓಲ್ಡ್ ಸ್ಕೂಲ್' ಸೇವಿಂಗ್ಸ್ ಪ್ಲ್ಯಾನ್ ಈಗ ವೈರಲ್!

ಬೆಂಗಳೂರಿನ ಒರಾಕಲ್ ಕಂಪನಿಯಿಂದ ಲೇ-ಆಫ್ ಆದ 14 ವರ್ಷಗಳ ಅನುಭವಿ ಉದ್ಯೋಗಿಯೊಬ್ಬರು, ಆತಂಕಪಡದೆ ತಮ್ಮ ಊರಿಗೆ ಮರಳಿದ್ದಾರೆ. ತಮ್ಮ ಉತ್ತಮ ಆರ್ಥಿಕ ಯೋಜನೆಯಿಂದಾಗಿ, ಅಂಚೆ ಕಚೇರಿ ಮತ್ತು ಬ್ಯಾಂಕ್ ಎಫ್‌ಡಿಗಳಿಂದ ತಿಂಗಳಿಗೆ ₹43,000 ನಿಷ್ಕ್ರಿಯ ಆದಾಯ ಗಳಿಸುತ್ತಿದ್ದು, ಸಾಲಮುಕ್ತರಾಗಿ ಹೊಸ ಜೀವನ ಆರಂಭಿಸಿದ್ದಾರೆ.

Read Full Story

03:39 PM (IST) Apr 06

ಬೆಂಗಳೂರು ನಿವಾಸಿಗೆ ಶಾಕ್ ಕೊಟ್ಟ ಬಾಡಿಗೆ, 1BHK ಮನೆಗೆ ತಿಂಗಳಿಗೆ 32 ಸಾವಿರ ರೂ

ಬೆಂಗಳೂರು ನಿವಾಸಿಗೆ ಶಾಕ್ ಕೊಟ್ಟ ಬಾಡಿಗೆ, 1BHK ಮನೆಗೆ ತಿಂಗಳಿಗೆ 32 ಸಾವಿರ ರೂ, ಬೆಂಗಳೂರಲ್ಲಿ ಮನೆ ಹುಡಕುವುದು ಸುಲಭದ ಮಾತಲ್ಲ, ಇಷ್ಟೇ ಅಲ್ಲ ಬಜೆಟ್‌ಗೆ ಹೊಂದಿಕೊಳ್ಳುವ ಮನೆಯೂ ಸಿಗುವುದಿಲ್ಲ.

 

Read Full Story

03:19 PM (IST) Apr 06

ವಿಧಾನಸಭೆಯಲ್ಲಿ ಭಾರಿ ಭದ್ರತಾ ಲೋಪ - ಗೇಟ್ ಮುರಿದು ಒಳನುಗ್ಗಿದ ಕಾರು, ಸ್ಪೀಕರ್‌ ವಾಹನಕ್ಕೆ ಕಪ್ಪುಮಸಿ

ದೆಹಲಿಯ ಅತಿ ಸುರಕ್ಷಿತ ಪ್ರದೇಶವಾದ ವಿಧಾನಸಭೆಯ ಮುಖ್ಯ ಗೇಟ್‌ಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಆವರಣಕ್ಕೆ ನುಗ್ಗಿದೆ. ನಂತರ ಸ್ಪೀಕರ್ ಕಾರಿಗೆ ಕಪ್ಪು ಮಸಿ ಬಳಿದು ಪರಾರಿಯಾಗಿದ್ದು, ಈ ಗಂಭೀರ ಭದ್ರತಾ ಲೋಪದ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.
Read Full Story

03:04 PM (IST) Apr 06

ತನಗಿಂತ 21 ವರ್ಷ ದೊಡ್ಡವನಾದ ಗಂಡನನ್ನು ಬಿಟ್ಟು ಲವರ್‌ ಜೊತೆ ಹೋಗ್ತಿನಿ ಎಂದ 19ರ ಯುವತಿ, ಒಕೆ ಎಂದ ಕೋರ್ಟ್

ಗ್ವಾಲಿಯರ್ ಹೈಕೋರ್ಟ್‌ನಲ್ಲಿ, 19 ವರ್ಷದ ಯುವತಿಯೊಬ್ಬಳು ತನ್ನ 40 ವರ್ಷದ ಪತಿಯನ್ನು ತೊರೆದು ಪ್ರಿಯತಮನೊಂದಿಗೆ ಬದುಕುವ ಇಚ್ಛೆಯನ್ನು ವ್ಯಕ್ತಪಡಿಸಿದ್ದಾಳೆ. ವಯಸ್ಕರ 'ಜೀವನ ಸಂಗಾತಿಯ ಆಯ್ಕೆಯ ಹಕ್ಕನ್ನು' ಎತ್ತಿಹಿಡಿದ ನ್ಯಾಯಾಲಯವು, ಪತಿಯ ಅರ್ಜಿಯನ್ನು ವಜಾಗೊಳಿಸಿದೆ.

Read Full Story

02:26 PM (IST) Apr 06

Amrthadhaare ಜೈ ಜೊತೆ ಮದ್ವೆ ಖುಷಿಯ ನಡುವೆಯೇ ಲೈವ್​ನಲ್ಲಿ ದುಃಖ ತೋಡಿಕೊಂಡ ನಟಿ ರಾಧಾ ಭಗವತಿ

ನಟಿ ರಾಧಾ ಭಗವತಿ ಅವರ 'ನಾನು ಕರುಣಾಕರ' ಚಿತ್ರಕ್ಕೆ ಥಿಯೇಟರ್​ಗಳ ಕೊರತೆ ಎದುರಾಗಿದೆ. ಈ ಬಗ್ಗೆ ಲೈವ್​ನಲ್ಲಿ ಬೇಸರ ವ್ಯಕ್ತಪಡಿಸಿರುವ ಅವರು, ಪರಭಾಷಾ ಚಿತ್ರಗಳಿಂದ ಕನ್ನಡ ಸಿನಿಮಾಗಳಿಗೆ ಅನ್ಯಾಯವಾಗುತ್ತಿದೆ ಎಂದು ನೋವು ತೋಡಿಕೊಂಡಿದ್ದಾರೆ. ಕನ್ನಡ ಚಿತ್ರರಂಗವನ್ನು ಬೆಂಬಲಿಸುವಂತೆ ಅವರು ಮನವಿ ಮಾಡಿದ್ದಾರೆ

Read Full Story

02:05 PM (IST) Apr 06

ಕರೆಂಟ್ ​ಫ್ರೀ ಇದ್ರೂ ಹೆಚ್ಚುವರಿ ದುಡ್ಡು ಬರ್ತಿದ್ಯಾ? ಈ ಸಿಂಪಲ್​ ಟಿಪ್ಸ್​ ಫಾಲೋ ಮಾಡಿದ್ರೆ ಇನ್ಮುಂದೆ ಹಣ ಕಟ್ಟಲೇಬೇಕಿಲ್ಲ

ಕರ್ನಾಟಕದಲ್ಲಿ  ವಿದ್ಯುತ್  ಉಚಿತವಾಗಿದ್ದರೂ ಹಲವು ಬಾರಿ ಹೆಚ್ಚುವರಿ ಮೊತ್ತ ಬರುತ್ತದೆ.  ಹೆಚ್ಚು ವಿದ್ಯುತ್ ಬಳಸುವ ಉಪಕರಣಗಳನ್ನು ಒಂದೇ ಸಮಯದಲ್ಲಿ ಉಪಯೋಗಿಸುವುದರಿಂದ ಬಿಲ್ ಹೆಚ್ಚಾಗುತ್ತದೆ. ಇವುಗಳನ್ನು ಬೇರೆ ಬೇರೆ ಸಮಯದಲ್ಲಿ ಬಳಸುವ ಮೂಲಕ ನಿಮ್ಮ ಮಾಸಿಕ ವಿದ್ಯುತ್ ಬಿಲ್ ಅನ್ನು ಗಣನೀಯವಾಗಿ ಕಡಿಮೆ ಮಾಡಬಹುದು. ಇದರ ಡಿಟೇಲ್ಸ್​ ಇಲ್ಲಿದೆ.

 

Read Full Story

12:30 PM (IST) Apr 06

ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿತಾರೆ - ಸಿದ್ದು ಪರ ಪರಮೇಶ್ವರ್ ಬ್ಯಾಟಿಂಗ್

Karnataka CM change news: ಸಿದ್ದರಾಮಯ್ಯನವರೇ ಪೂರ್ಣ 5 ವರ್ಷ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ಹೈಕಮಾಂಡ್ ಈ ಬಗ್ಗೆ ಯಾವುದೇ ಗೊಂದಲ ಸೃಷ್ಟಿಸಿಲ್ಲ, ಸಿಎಂ ಬದಲಾವಣೆ ಚರ್ಚೆಗಳು ಕೇವಲ ವೈಯಕ್ತಿಕ ಅಭಿಪ್ರಾಯಗಳಷ್ಟೇ ಎಂದು ಅವರು ಹೇಳಿದ್ದಾರೆ. 

Read Full Story

11:41 AM (IST) Apr 06

ಬೈಕ್ ಗೆ ಗುದ್ದಿದ ಬುಲೇರೋ ಗೂಡ್ಸ್ ವಾಹನ - ಕರ್ತವ್ಯದಲ್ಲಿದ್ದ ಅರಣ್ಯ ಇಲಾಖೆಯ ಇಬ್ಬರು ವಾಚರ್ಸ್ ಸಾವು

Vijayanagara forest watchers death: ವಿಜಯನಗರ ಜಿಲ್ಲೆಯ ಹೊಸಪೇಟೆ ಬಳಿ ಬೊಲೆರೋ ವಾಹನ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ, ರಾತ್ರಿ ಪಾಳಿಯಲ್ಲಿದ್ದ ಇಬ್ಬರು ಅರಣ್ಯ ಇಲಾಖೆ ವಾಚರ್‌ಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ಕೃಷ್ಣ ಮತ್ತು ಹನುಮಂತಪ್ಪ ಎಂದು ಗುರುತಿಸಲಾಗಿದೆ.

Read Full Story

10:14 AM (IST) Apr 06

ಸೈಕೋ ಜಯಂತ್‌ಗೆ ನರಕ ತೋರಿಸಿದ ಜಾನು; ಇದು ಚಿನ್ನುಮರಿಯ 2.O ಅಧ್ಯಾಯ, ವೀಕ್ಷಕರು ಹ್ಯಾಪಿ

ಜೀ ಕನ್ನಡದ 'ಲಕ್ಷ್ಮೀ ನಿವಾಸ' ಧಾರಾವಾಹಿಯಲ್ಲಿ, ಹಿಂದೆ ತನ್ನ ಸೈಕೋ ಗಂಡ ಜಯಂತ್‌ಗೆ ಹೆದರುತ್ತಿದ್ದ ಜಾನು ಈಗ ಸಂಪೂರ್ಣ ಬದಲಾಗಿದ್ದಾಳೆ. ತಾನು ಅನುಭವಿಸಿದ ಕಷ್ಟಗಳನ್ನೇ ಜಯಂತ್‌ಗೆ ನೀಡಿ, ಆತನಿಗೆ ನರಕ ದರ್ಶನ ಮಾಡಿಸುತ್ತಿದ್ದಾಳೆ. ಈ ಹೊಸ ತಿರುವು ವೀಕ್ಷಕರಲ್ಲಿ ಭಾರೀ ಕುತೂಹಲ ಮೂಡಿಸಿದೆ.

Read Full Story

09:48 AM (IST) Apr 06

ಕಲಬುರಗಿ - ನಡುರಸ್ತೆಯಲ್ಲೇ ಸರ್ಕಾರಿ ಶಾಲಾ ಶಿಕ್ಷಕಿಯ ಬರ್ಬರ ಹತ್ಯೆ

Kalaburagi teacher murder case: ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಕಲ್ಮೂಡ ಗ್ರಾಮದ ಬಳಿ ಸರ್ಕಾರಿ ಶಾಲಾ ಶಿಕ್ಷಕಿ ಜ್ಯೋತಿ ಕಪಾಳೆ (57) ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ನಂತರ ಪೆಟ್ರೋಲ್ ಸುರಿದು ಶವವನ್ನು ಸುಟ್ಟು ಹಾಕಿದ್ದಾರೆ.

Read Full Story

09:20 AM (IST) Apr 06

ಬ್ಯಾಂಕ್ ಉದ್ಯೋಗಿ ಕೊಲೆ ಪ್ರಕರಣ - ಪತ್ನಿಯ ಕೊಲ್ಲಲು ಶೂಟಿಂಗ್ ತರಬೇತಿ ಪಡೆದಿದ್ದ ಟೆಕ್ಕಿ ಪತಿ ಮುರುಗನ್

Husband shooting training to kill wife: ಬೆಂಗಳೂರಿನಲ್ಲಿ ಬ್ಯಾಂಕ್ ಉದ್ಯೋಗಿ ಪತ್ನಿಯನ್ನು ಗುಂಡಿಕ್ಕಿ ಕೊಂದ ಪತಿ ಬಾಲಮುರುಗನ್, ಈ ಹತ್ಯೆಗಾಗಿಯೇ ವೈಟ್‌ಫೀಲ್ಡ್‌ನ ಶೂಟಿಂಗ್ ಅಕಾಡೆಮಿಯಲ್ಲಿ ತರಬೇತಿ ಪಡೆದಿದ್ದ ಎಂದು ಪೊಲೀಸರು ಸಲ್ಲಿಸಿರುವ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ.

Read Full Story

09:02 AM (IST) Apr 06

20 ವರ್ಷಗಳಿಂದ ಸ್ಥಗಿತಗೊಂಡಿದ್ದ ಸೇವೆಗೆ ಮರುಜೀವ; ಮೆಜೆಸ್ಟಿಕ್‌ಗೆ ಡೈರೆಕ್ಟ್ 4 ಬಸ್

ಸುಮಾರು 20 ವರ್ಷಗಳ ನಂತರ, ಕನಕಪುರದಿಂದ ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣಕ್ಕೆ ರಾಜ್ಯ ರಸ್ತೆ ಸಾರಿಗೆ ಬಸ್ ಸಂಚಾರ ಪುನರಾರಂಭಿಸಲಾಗಿದೆ. ವಿದ್ಯಾರ್ಥಿಗಳು, ಕಾರ್ಮಿಕರು ಮತ್ತು ಸಾರ್ವಜನಿಕರ ಅನುಕೂಲಕ್ಕಾಗಿ ಬೆಳಿಗ್ಗೆ ಮತ್ತು ಸಂಜೆ ನಿರ್ದಿಷ್ಟ ಸಮಯಗಳಲ್ಲಿ ನಾಲ್ಕು ಬಸ್‌ಗಳ ಸೇವೆಯನ್ನು ಕಲ್ಪಿಸಲಾಗಿದೆ.

Read Full Story

08:43 AM (IST) Apr 06

ಎಲ್‌&ಟಿಯ ₹57 ಕೋಟಿ ಹಣ ಕೆ ರೈಡ್‌ನಿಂದ ಮುಟ್ಟುಗೋಲು

K-RIDE vs L&T tender dispute: ಸಬರ್ಬನ್ ಯೋಜನೆ ಅನುಷ್ಠಾನಗೊಳಿಸಲು ವಿಫಲವಾಗಿ ಟೆಂಡರ್ ನಿಯಮ ಉಲ್ಲಂಘಿಸಿದ ಎಲ್ ಆ್ಯಂಡ್ ಟಿ ಕಂಪನಿಯ ₹57 ಕೋಟಿಯನ್ನು ಕರ್ನಾಟಕ ರೈಲು ಮೂಲಸೌಕರ್ಯ ಅಭಿವೃದ್ಧಿ ಕಂಪನಿ (ಕೆ-ರೈಡ್) ಮುಟ್ಟುಗೋಲು ಹಾಕಿಕೊಂಡಿದೆ.

Read Full Story

08:41 AM (IST) Apr 06

ನುಗ್ಗೇಹಳ್ಳಿಯಲ್ಲಿ ವರ್ಷದ ಉತ್ತಮ ಮಳೆಗಾಗಿ ತಿಂಗಳ ಮಾಮನ ತೇರು ಹಬ್ಬ; ಮದುವೆ ಮಾಡಿ ಆಚರಣೆ

ಹಾಸನದ ನುಗ್ಗೇಹಳ್ಳಿಯಲ್ಲಿ ಮಳೆಗಾಗಿ 'ತಿಂಗಳಮಾಮನ ತೇರು' ಎಂಬ ವಿಶಿಷ್ಟ ಹಬ್ಬವನ್ನು ಆಚರಿಸಿದರೆ, ಸಕಲೇಶಪುರದಲ್ಲಿ 16 ಅಡಿ ಎತ್ತರದ ಏಕಶಿಲಾ ಆಂಜನೇಯ ವಿಗ್ರಹವನ್ನು ಪ್ರತಿಷ್ಠಾಪಿಸಲಾಯಿತು. ಇದರೊಂದಿಗೆ, ಮದ್ದೂರಿನಲ್ಲಿ ಸಾಯಿಬಾಬಾರ 21ನೇ ವರ್ಷದ ಪಲ್ಲಕ್ಕಿ ಮಹೋತ್ಸವವು ವಿಜೃಂಭಣೆಯಿಂದ ಜರುಗಿತು.
Read Full Story

08:19 AM (IST) Apr 06

ಬೆಂಗಳೂರು - 80% ಖಾಸಗಿ ಆಟೋ ಗ್ಯಾಸ್‌ ಬಂಕ್‌ಗಳು ಬಂದ್‌

IOCL auto gas supply: ಜಾಗತಿಕ ವಿದ್ಯಮಾನಗಳು ಮತ್ತು ಖಾಸಗಿ ಬಂಕ್‌ಗಳ ಮುಚ್ಚುವಿಕೆಯಿಂದ ಬೆಂಗಳೂರಿನಲ್ಲಿ ಆಟೋ ಎಲ್‌ಪಿಜಿ ಕೊರತೆ ತೀವ್ರಗೊಂಡಿದೆ. ಪೂರೈಕೆ ಹೆಚ್ಚಿಸಿದ್ದರೂ ಬೇಡಿಕೆ ನೀಗಿಸಲು ಸಾಧ್ಯವಾಗದ ಕಾರಣ, ಐಒಸಿಎಲ್ ತಾತ್ಕಾಲಿಕವಾಗಿ ಪೆಟ್ರೋಲ್ ಬಳಸಲು ಚಾಲಕರಿಗೆ ಸಲಹೆ ನೀಡಿದೆ.

Read Full Story

07:54 AM (IST) Apr 06

ನನಗಾಗ 15 ವರ್ಷ ಪೋರ್ನ್ ಸೈಟ್‌ನಲ್ಲಿ ನನ್ನ ಮುಖ ಕಂಡು ಬೆಚ್ಚಿಬಿದ್ದಿದ್ದೆ - ಕರಾಳ ನೆನಪು ಹಂಚಿಕೊಂಡ ನಟಿ

ಬಾಲಿವುಡ್ ನಟಿ ಜಾನ್ವಿ ಕಪೂರ್, ತಮ್ಮ 15ನೇ ವಯಸ್ಸಿನಲ್ಲಿ ಶಾಲಾ ದಿನಗಳಲ್ಲಿ ನಡೆದ ಆಘಾತಕಾರಿ ಘಟನೆಯೊಂದನ್ನು ಹಂಚಿಕೊಂಡಿದ್ದಾರೆ. ಪೋರ್ನ್ ಸೈಟ್‌ನಲ್ಲಿ ತಮ್ಮ ಅಶ್ಲೀಲ ಚಿತ್ರವನ್ನು ಕಂಡ ಅನುಭವ ಮತ್ತು ಡೀಪ್ ಫೇಕ್ ತಂತ್ರಜ್ಞಾನದ ದುಷ್ಪರಿಣಾಮಗಳ ಬಗ್ಗೆ ಅವರು ವಿವರಿಸಿದ್ದಾರೆ.
Read Full Story

07:35 AM (IST) Apr 06

61 ವರ್ಷದಲ್ಲೂ ಸುರೇಶ್ ಗೌಡ 45ರಂತಿದ್ದಾರೆ

ಬಿಜೆಪಿ ಶಾಸಕ ಸುರೇಶ್ ಗೌಡರು ತಮ್ಮ ದೀರ್ಘಕಾಲದ ಆ್ಯಸಿಡಿಟಿ ಸಮಸ್ಯೆಗೆ ಆಸ್ಟ್ರೇಲಿಯಾದ ಔಷಧದಿಂದ ಪರಿಹಾರ ಕಂಡುಕೊಂಡಿದ್ದನ್ನು ವಿಧಾನಸಭೆಯಲ್ಲಿ ಹಂಚಿಕೊಂಡಿದ್ದಾರೆ. ಮತ್ತೊಂದೆಡೆ, ಇರಾನ್ ಯುದ್ಧದ ಸುಳ್ಳು ಸುದ್ದಿಯಿಂದಾಗಿ ಬೆಳಗಾವಿಯಲ್ಲಿ ಪೆಟ್ರೋಲ್-ಡೀಸೆಲ್‌ಗಾಗಿ ಜನರು ಮುಗಿಬಿದ್ದಿದ್ದು, ಪ್ಲಾಸ್ಟಿಕ್ ಬಾಟಲಿಗಳ ಮಾರಾಟ ಜೋರಾಗಿತ್ತು

Read Full Story

07:04 AM (IST) Apr 06

ಮಹಿಳಾ ಕಸ್ಟಮ್ಸ್ ಅಧಿಕಾರಿ ಮೇಲೆ ಅತ್ಯಾ*ಚಾರ - ಖಾಸಗಿ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್‌ಮೇಲ್ - ಉದ್ಯಮಿ ಅಂದರ್

Bengaluru businessman arrested: ಬೆಂಗಳೂರಿನಲ್ಲಿ ಮಹಿಳಾ ಕಸ್ಟಮ್ಸ್ ಅಧಿಕಾರಿಯೊಬ್ಬರಿಗೆ ಬ್ಲ್ಯಾಕ್‌ಮೇಲ್ ಮಾಡಿ, ಸುಮಾರು ಏಳು ವರ್ಷಗಳ ಕಾಲ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಉದ್ಯಮಿ ಕೃಪಲಾನಿಯನ್ನು ಇಂದಿರಾನಗರ ಪೊಲೀಸರು ಬಂಧಿಸಿದ್ದಾರೆ. 

Read Full Story

06:48 AM (IST) Apr 06

Belagavi - ನಿನ್ನೇ ಪ್ರೀತಿಸುವೆ ಎಂದು ಹಣ, ಮಾನ, ಚಿನ್ನ ದೋಚಿದ! ನ್ಯಾಯಕ್ಕಾಗಿ ಯುವತಿ ಕಣ್ಣೀರು

ಬೆಳಗಾವಿಯಲ್ಲಿ ಇನ್‌ಸ್ಟಾಗ್ರಾಂ ಮೂಲಕ ಪರಿಚಯವಾದ ಯುವಕ, ಮದುವೆಯಾಗುವುದಾಗಿ ನಂಬಿಸಿ ಯುವತಿಯ ಮೇಲೆ ಅತ್ಯಾ*ಚಾರ ಎಸಗಿದ್ದಾನೆ. ನಂತರ ಖಾಸಗಿ ಫೋಟೋ ಮತ್ತು ವಿಡಿಯೋಗಳನ್ನಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ 1500 ಗ್ರಾಂ ಚಿನ್ನ ಹಾಗೂ 19 ಲಕ್ಷ ರೂಪಾಯಿ ಪಡೆದು ವಂಚಿಸಿದ್ದಾನೆ.

Read Full Story

06:24 AM (IST) Apr 06

ಮೈಸೂರು ಜಿಲ್ಲೆಯ ಎರಡು ಗ್ರಾಮದ ಜನರು LPGಯೇ ಬಳಸಲ್ಲ; ಇವರಿಗೆಲ್ಲಾ ಇಲ್ಲ ಟೆನ್ಷನ್

ಮಧ್ಯಪ್ರಾಚ್ಯ ಯುದ್ಧದಿಂದ ಉಂಟಾದ ಅಡುಗೆ ಅನಿಲದ ಕೊರತೆಯ ನಡುವೆಯೂ, ಎಚ್‌.ಡಿ. ಕೋಟೆ ಮತ್ತು ಸರಗೂರು ತಾಲೂಕಿನ ಗ್ರಾಮಗಳು ಜೈವಿಕ ಅನಿಲ ಬಳಸಿ ಸ್ವಾವಲಂಬಿಯಾಗಿವೆ.  ನೂರಾರು ಕುಟುಂಬಗಳು ಇಂಧನಕ್ಕಾಗಿ ಜೈವಿಕ ಅನಿಲವನ್ನು ಅವಲಂಬಿಸಿ, ಆರ್ಥಿಕ ಉಳಿತಾಯ ಮಾಡುತ್ತಿವೆ.

Read Full Story

05:24 AM (IST) Apr 06

ಪ್ರಧಾನಿಗಳಿಂದ ದಕ್ಷಿಣ ರಾಜ್ಯಗಳ ಧ್ವನಿ ದುರ್ಬಲಗೊಳಿಸುವ ರಾಜಕೀಯ ತಂತ್ರ - ಸಿದ್ದರಾಮಯ್ಯ

ಲೋಕಸಭಾ ಕ್ಷೇತ್ರ ಮರುವಿಂಗಡಣೆ ಪ್ರಸ್ತಾವನೆಯು ದಕ್ಷಿಣದ ರಾಜ್ಯಗಳ ಧ್ವನಿಯನ್ನು ದುರ್ಬಲಗೊಳಿಸುವ ರಾಜಕೀಯ ತಂತ್ರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ. ಜನಸಂಖ್ಯೆ ನಿಯಂತ್ರಿಸಿದ ರಾಜ್ಯಗಳಿಗೆ ಇದರಿಂದ ಅನ್ಯಾಯವಾಗಲಿದೆ.

Read Full Story

More Trending News