ಬಳ್ಳಾರಿ: ಜನವರಿ 1ರ ರಾತ್ರಿ ಬಳ್ಳಾರಿಯಲ್ಲಿ ನಡೆದ ಬ್ಯಾನರ್ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ವಿಡಿಯೋ ಬಹಿರಂಗವಾಗಿದ್ದು, ಅಂದು ಗಲಾಟೆ ನಡೆಯಲು ಜನಾರ್ದನ ರೆಡ್ಡಿಯವರ ಬೆಂಬಲಿಗರೇ ಕಾರಣ ಎಂಬ ಸಂಗತಿ ಬಯಲಾಗಿದೆ ಎಂದು ತಿಳಿದು ಬಂದಿದೆ.
ಬ್ಯಾನರ್ ತೆರವು ಖಂಡಿಸಿ ಜನಾರ್ದನ ರೆಡ್ಡಿ ಮನೆಯ ಮುಂದೆ ಕಾಂಗ್ರೆಸ್ ಮುಖಂಡರು ಪ್ರತಿಭಟನೆ ನಡೆಸುತ್ತಿದ್ದರು. ಆ ವೇಳೆ, ಪ್ರತಿಭಟನೆಗೆ ಕುಳಿತವರ ಮೇಲೆ ಮೊದಲು ದಾಳಿ ಮಾಡಿದ್ದು ಜನಾರ್ದನ ರೆಡ್ಡಿ ಕಡೆಯವರು ಎಂಬ ಸಂಗತಿ ಬಯಲಾಗಿದೆ.
ಈ ಮಧ್ಯೆ, ಜನಾರ್ದನ ರೆಡ್ಡಿ ನಿವಾಸದಲ್ಲಿ ರಾಶಿ ರಾಶಿ ದೊಣ್ಣೆಗಳನ್ನು ಇಟ್ಟಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಬ್ಯಾನರ್ ಗಲಾಟೆ ವೇಳೆ ನಡೆದ ಗುಂಪು ಘರ್ಷಣೆ ಒಂದೇ ಕಡೆಯಿಂದ ನಡೆದಿಲ್ಲ. ಎರಡೂ ಕಡೆಯಿಂದ ಆಗಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರು ವಿಶ್ಲೇಷಿಸುತ್ತಿದ್ದಾರೆ.
12:17 AM (IST) Jan 07
ಕೊಪ್ಪಳದ ಗವಿಸಿದ್ದೇಶ್ವರ ಜಾತ್ರೆಯ ದಾಸೋಹದಲ್ಲಿ ಭಾರಿ ಜನಸಂದಣಿಯಿಂದ ನೂಕುನುಗ್ಗಲು ಉಂಟಾಗಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಎಸ್ಪಿ ಡಾ. ರಾಮ್ ಎಲ್. ಅರಸಿದ್ದಿ, ಕುರ್ಚಿಯ ಮೇಲೆ ನಿಂತು ಜನರನ್ನು ನಿಯಂತ್ರಿಸಿದರು. ಅಲ್ಲೇ ಕಚೇರಿ ಕಡತಗಳಿಗೆ ಸಹಿ ಹಾಕಿ ಕರ್ತವ್ಯನಿಷ್ಠೆ ಮೆರೆದರು.
11:06 PM (IST) Jan 06
ಧಾರವಾಡ ಜಿಲ್ಲೆಯ ರಾಮಾಪುರ-ವೀರಾಪುರ ಗ್ರಾಮದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದಾಗಿ 20 ಎಕರೆ ಕಬ್ಬಿನ ಹೊಲಕ್ಕೆ ಬೆಂಕಿ ತಗುಲಿದೆ. ಈ ಘಟನೆಯಲ್ಲಿ ರೈತ ಬಸಪ್ಪ ಜಿರಿಗವಾಡ ಅವರಿಗೆ ಸೇರಿದ ಅಂದಾಜು 30 ಲಕ್ಷ ರೂಪಾಯಿ ಮೌಲ್ಯದ ಬೆಳೆ ಸಂಪೂರ್ಣ ನಾಶವಾಗಿದೆ.
10:49 PM (IST) Jan 06
ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಬಳಿ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಬುಲೆರೋ ವಾಹನ ಮರಕ್ಕೆ ಡಿಕ್ಕಿಯಾಗಿ ನಾಲ್ವರು ದಾರುಣವಾಗಿ ಮೃತಪಟ್ಟಿದ್ದಾರೆ. ಈ ಸಂಬಂಧ ಚಿಕ್ಕಜಾಜೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
09:56 PM (IST) Jan 06
09:22 PM (IST) Jan 06
Bangalore Pay & Park: Fees Set for 35 Major Roads Including CBD ಬೆಂಗಳೂರು ನಗರ ಕೇಂದ್ರ ನಿಗಮವು ಈ ರಸ್ತೆಗಳಲ್ಲಿ ಪಾರ್ಕಿಂಗ್ ಶುಲ್ಕವನ್ನು ಪಡೆಯಲು ಮೂರು ವರ್ಷಗಳ ಅವಧಿಗೆ ಖಾಸಗಿ ನಿರ್ವಾಹಕರನ್ನು ತೊಡಗಿಸಿಕೊಳ್ಳಲು ಪ್ರಸ್ತಾಪಿಸಿದೆ, ಇದನ್ನು ಇನ್ನೂ ಎರಡು ವರ್ಷಗಳವರೆಗೆ ವಿಸ್ತರಿಸಬಹುದು.
08:31 PM (IST) Jan 06
ತುಮಕೂರು ಸಮೀಪದ ಸಿಂಗನಹಳ್ಳಿ ಕಾಲೋನಿಯಲ್ಲಿ ತಾಯಿಯೊಬ್ಬಳು ತನ್ನ ಐದು ವರ್ಷದ ಅವಳಿ ಮಕ್ಕಳೊಂದಿಗೆ ನೀರಿನ ಸಂಪ್ಗೆ ಹಾರಿ ಆತ್ಮ೧ಹತ್ಯೆ ಮಾಡಿಕೊಂಡಿದ್ದಾರೆ. ಮಾನಸಿಕ ಖಿನ್ನತೆಯಿಂದ ಈ ಕೃತ್ಯ ಎಸಗಿರಬಹುದು ಎಂದು ಶಂಕಿಸಲಾಗಿದ್ದು, ಕ್ಯಾತಸಂದ್ರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
08:12 PM (IST) Jan 06
ಮಕ್ಕಳು ಎಷ್ಟೇ ದೊಡ್ಡವರಾದ್ರೂ ಪಾಲಕರಿಗೆ ಮಕ್ಕಳೇ. ಆದ್ರೆ ಪಾಲಕರು ಮಾಡುವ ಕೆಲ್ಸ ಮಕ್ಕಳ ಮನಸ್ಸಿನ ಮೇಲೆ ಗಾಢವಾದ ಪರಿಣಾಮ ಬೀರಿರುತ್ತೆ. ಮಕ್ಕಳ ಭವಿಷ್ಯ ಚೆನ್ನಾಗಿರ್ಬೇಕೆಂದ್ರೆ ಸಣ್ಣಪುಟ್ಟ ವಿಷ್ಯ ಕೂಡ ಪಾಲಕರಿಗೆ ಗೊತ್ತಿರಬೇಕು.
08:01 PM (IST) Jan 06
ಬಳ್ಳಾರಿ ಗಲಾಟೆ ಪ್ರಕರಣ ಮೃತಪಟ್ಟ ರಾಜಶೇಖರ್ ಮೃತದೇಹ ಸಾಕ್ಷಿ ನಾಶಪಡಿಸಲು ಸಂಪ್ರದಾಯ ಮೀರಿ ದಹನ ಮಾಡಲಾಗಿದೆ ಎಂದು ಮಾಜಿ ಸಚಿವ ಶ್ರೀರಾಮುಲು ಆರೋಪಿಸಿದ್ದಾರೆ. ಮೃತದೇಹದಲ್ಲಿ ಬುಲೆಟ್ಗಳಿದ್ದು, ಎಎಸ್ಪಿ ರವಿಕುಮಾರ್ ನೇತೃತ್ವದಲ್ಲಿ ಈ ಕೃತ್ಯ ನಡೆದಿದೆ ಎಂದು ದೂರಿದ್ದು, ಪ್ರಕರಣದ ಸಿಬಿಐ ತನಿಖೆಗೆ ಆಗ್ರಹ.
07:46 PM (IST) Jan 06
ಮಾಜಿ ಸಂಸದೆ ಸುಮಲತಾ ಅಂಬರೀಷ್ ಅವರು ಮುಂದಿನ ಚುನಾವಣೆಯಲ್ಲಿ ಸಕ್ರಿಯ ರಾಜಕೀಯಕ್ಕೆ ಮರಳುವ ಇಂಗಿತ ವ್ಯಕ್ತಪಡಿಸಿದ್ದು, ಪಕ್ಷದ ಹೈಕಮಾಂಡ್ ನಿರ್ಧಾರಕ್ಕೆ ಬದ್ಧ ಎಂದಿದ್ದಾರೆ. ಇದೇ ವೇಳೆ, ಜೆಡಿಎಸ್ ವಿರುದ್ಧ ಅಸಮಾಧಾನ ಹೊರಹಾಕಿದ ನಾರಾಯಣ ಗೌಡರು ಮಂಡ್ಯದಲ್ಲಿ ಬಿಜೆಪಿ ಬಲವರ್ಧನೆಗೆ ಶಪಥಗೈದಿದ್ದಾರೆ.
07:24 PM (IST) Jan 06
07:10 PM (IST) Jan 06
ಬಳ್ಳಾರಿಯ ಬ್ಯಾನರ್ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಾಜಿ ಸಚಿವ ಶ್ರೀರಾಮುಲು ಮತ್ತು ಶಾಸಕ ಜನಾರ್ದನ ರೆಡ್ಡಿ ಜಂಟಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಶಾಸಕ ಭರತ್ ರೆಡ್ಡಿ ಅವರು ಜನಾರ್ದನ ರೆಡ್ಡಿ ಅವರನ್ನು ಮುಗಿಸಲು ಪೂರ್ವನಿಯೋಜಿತ ಸಂಚು ರೂಪಿಸಿದ್ದರು ಎಂದು ಗಂಭೀರ ಆರೋಪ ಮಾಡಿದ್ದಾರೆ
07:06 PM (IST) Jan 06
06:53 PM (IST) Jan 06
06:23 PM (IST) Jan 06
ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾಗಿ 6 ವರ್ಷಗಳ ಕಾಲ ಪ್ರೀತಿಸಿದರೂ, ಇಬ್ಬರೂ ಒಟ್ಟಾಗಿ 6 ದಿನವೂ ಇರಲು ಸಾಧ್ಯವಾಗಲಿಲ್ಲ. ಬೆಂಗಳೂರಿನಲ್ಲಿದ್ದ ಪ್ರೇಮಿ ರಾಘವೇಂದ್ರನ ಮನೆಗೆ ಹಾಸನದಿಂದ ಬಂದಿದ್ದ ಯುವತಿ ನಿಖಿತಾ, ಪ್ರೇಮಿಯ ಮನೆಯಲ್ಲಿಯೇ ಉಸಿರು ಚೆಲ್ಲಿದ್ದಾಳೆ.
06:18 PM (IST) Jan 06
ಕಲಬುರಗಿ ಜಿಲ್ಲೆಯ ಸೇಡಂ ತಹಶೀಲ್ದಾರ್ ಕಚೇರಿಗೆ ಅನಾಮಧೇಯ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ. ಆತಂಕ ಸೃಷ್ಟಿಯಾಗಿತ್ತು. ತಕ್ಷಣ ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ ಹಾಗೂ ಪೊಲೀಸರು ಭೇಟಿ ನೀಡಿ ತಪಾಸಣೆ ನಡೆಸಿದಾಗ, ಇದು ಹುಸಿ ಬೆದರಿಕೆ ಎಂಬುದು ದೃಢಪಟ್ಟಿದೆ. ಈ ಸಂಬಂಧ ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.
06:16 PM (IST) Jan 06
ಐಟಿ ದೈತ್ಯ ವಿಪ್ರೋ ತನ್ನ ಹೈಬ್ರಿಡ್ ಕೆಲಸದ ನೀತಿಯನ್ನು ಕಠಿಣಗೊಳಿಸಿದೆ. ಹೊಸ ನಿಯಮದ ಪ್ರಕಾರ, ಉದ್ಯೋಗಿಗಳು ವಾರದಲ್ಲಿ ಮೂರು ದಿನ ಕಚೇರಿಗೆ ಹಾಜರಾಗಬೇಕು ಮತ್ತು ಆ ದಿನಗಳಲ್ಲಿ ಕನಿಷ್ಠ ಆರು ಗಂಟೆಗಳ ಕಾಲ ಕಚೇರಿಯಲ್ಲಿಯೇ ಇರಬೇಕು.
06:13 PM (IST) Jan 06
ಮೈಸೂರು-ಕೊಡಗು ಸಂಸದ ಯದುವೀರ್ ಒಡೆಯರ್ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ನಿರೀಕ್ಷಿತ ಅಭಿವೃದ್ಧಿ ಆಗಿಲ್ಲ, ಮೈಸೂರು ವಿಮಾನ ನಿಲ್ದಾಣ ಯೋಜನೆ ನೆನೆಗುದಿಗೆ ಬಿದ್ದಿದೆ ಎಂದು ಆರೋಪಿಸಿದ್ದಾರೆ.
05:35 PM (IST) Jan 06
Wife Swapping:ಇತ್ತೀಚೆಗೆ ಎಷ್ಟೋ ಜೋಡಿಗಳ ದಾಂಪತ್ಯ ಅಥವಾ ಸಂಸಾರ ಎನ್ನೋದು ಒಂದು ದಿನ ಕೂಡ ಬಾಳಿಕೆ ಬರುತ್ತಿಲ್ಲ. ಯಾವುದೋ ಕಾರಣಕ್ಕೆ ಡಿವೋರ್ಸ್ ಪಡೆಯುತ್ತಾರೆ, ಅಕ್ರಮ ಸಂಬಂಧ ಕೂಡ ಹೆಚ್ಚಾಗುತ್ತಿದೆ. ಇದರ ಮಧ್ಯೆ ಈಗ ಭಾರತದಲ್ಲಿ 'ವೈಫ್ ಸ್ವಾಪಿಂಗ್' ಅಥವಾ ಹೆಂಡತಿ ವಿನಿಮಯ ಹೆಚ್ಚಾಗ್ತಿದೆ. ಕಾರಣ ಏನು?
05:19 PM (IST) Jan 06
ಬಳ್ಳಾರಿ ಗಲಾಟೆ ವಿಚಾರವಾಗಿ ಮಾತನಾಡಿದ ಎಂಪಿ ರೇಣುಕಾಚಾರ್ಯ, ಇದು ಜನಾರ್ದನ ರೆಡ್ಡಿ ಅವರನ್ನು ಹತ್ಯೆ ಮಾಡಲು ಕಾಂಗ್ರೆಸ್ ಸರ್ಕಾರ ರೂಪಿಸಿದ ಸಂಚು ಎಂದು ಆರೋಪಿಸಿದ್ದಾರೆ. ಶಾಸಕ ಭರತ್ ರೆಡ್ಡಿ ಅವರೇ ಈ ಗಲಾಟೆಗೆ ಮತ್ತು ರಾಜಶೇಖರ್ ಸಾವಿಗೆ ನೇರ ಕಾರಣ ಎಂದು ವಾಗ್ದಾಳಿ ನಡೆಸಿದರು.
05:17 PM (IST) Jan 06
ಇನ್ಸ್ಟಾದಲ್ಲಿ 2K ಫಾಲೋವರ್ಸ್, ಬೆಂಗಳೂರು ಮಹಿಳಾ ಉದ್ಯೋಗಿಗೆ ಅಚ್ಚರಿ ಪಾರ್ಟಿ ಆಯೋಜಿಸಿದ ಬಾಸ್, ಬಾಸ್ ಕಿರಿಕಿರಿ ಕುರಿತು ಸದಾ ಸುದ್ದಿಯಾಗುತ್ತದೆ. ಆದರೆ ಇಲ್ಲೊಬ್ಬ ಬಾಸ್ ಎಲ್ಲಾ ಉದ್ಯೋಗಿಳ ಮೋಟಿವೇಟರ್.
05:17 PM (IST) Jan 06
ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿ, ಗಂಡನಿಂದ ದೂರವಿದ್ದ ಮೂರು ಮಕ್ಕಳ ತಾಯಿ ಉಮಾ (28) ಎಂಬುವವರನ್ನು ಮನೆಯ ಮೇಲ್ಮಹಡಿಯಲ್ಲಿ ಕತ್ತು ಕೊಯ್ದು ಭೀಕರವಾಗಿ ಹತ್ಯೆ ಮಾಡಲಾಗಿದೆ. ಈ ಘಟನೆ ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದ್ದು, ಪೊಲೀಸರು ಆರೋಪಿಗಳ ಪತ್ತೆಗಾಗಿ ವಿಶೇಷ ತಂಡಗಳನ್ನು ರಚಿಸಿ ತನಿಖೆ ನಡೆಸುತ್ತಿದ್ದಾರೆ.
04:48 PM (IST) Jan 06
ಬೆಂಗಳೂರು ಉತ್ತರ ತಾಲ್ಲೂಕಿನ ಅಂಚೇಪಾಳ್ಯದಲ್ಲಿ, ಪ್ರೀತಿಯ ಹೆಸರಿನಲ್ಲಿ ಯುವಕನೊಬ್ಬ ನೀಡುತ್ತಿದ್ದ ಕಿರುಕುಳಕ್ಕೆ ಬೇಸತ್ತು 17 ವರ್ಷದ ಬಾಲಕಿ ಆತ್ಮ*ಹತ್ಯೆ ಮಾಡಿಕೊಂಡಿದ್ದಾಳೆ. ಮಗಳ ಸಾವಿಗೆ ಯುವಕನೇ ಕಾರಣ ಎಂದು ಪೋಷಕರು ಆರೋಪಿಸಿದ್ದು, ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
04:46 PM (IST) Jan 06
ಬಳ್ಳಾರಿಯಲ್ಲಿ ನಡೆದ ಬ್ಯಾನರ್ ಗಲಾಟೆ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಜನಾರ್ದನ ರೆಡ್ಡಿ ಮತ್ತು ಶ್ರೀರಾಮುಲು ಅವರ ನಡೆಯನ್ನು ಖಂಡಿಸಿದ್ದಾರೆ. ಕೊಲೆ ಸಂಚಿನ ಆರೋಪವನ್ನ ತಳ್ಳಿಹಾಕಿರುವ ಅವರು, ಕಾನೂನು ತನ್ನ ಕ್ರಮ ಕೈಗೊಳ್ಳಲಿದೆ ಎಂದು ಎಚ್ಚರಿಸಿದರು
04:33 PM (IST) Jan 06
ಬೆಳಗಾವಿಯಲ್ಲಿ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಅವರ ಕಾರು ಚಾಲಕ ಬಸವಂತ ಕಡೋಲ್ಕರ್ ಮೇಲೆ ದುಷ್ಕರ್ಮಿಗಳು ಚಾಕುವಿನಿಂದ ಹಲ್ಲೆ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
04:29 PM (IST) Jan 06
Actress Raasi News: ಚಿತ್ರರಂಗದಲ್ಲೀಗ ಇಬ್ಬರು ನಟಿಯರು ಜಗಳ ಆಡಿಕೊಂಡಿದ್ದಾರೆ. ರಿಯಾಲಿಟಿ ಶೋನಲ್ಲಿ ನಟಿ ಬಗ್ಗೆ ಮಾಡಿದ ಕಾಮೆಂಟ್ನಿಂದ ಜಡೆ ಜಗಳ ಆಗಿದೆ. ಹಾಗಾದರೆ ಏನಾಯ್ತು? ಈ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ.
04:11 PM (IST) Jan 06
03:53 PM (IST) Jan 06
ಕರ್ನಾಟಕದ ಬಾಗಲಕೋಟೆ, ಮೈಸೂರು, ಗದಗ, ಧಾರವಾಡ ಹಾಗೂ ಹಾಸನ ಸೇರಿದಂತೆ పలు ಜಿಲ್ಲೆಗಳ ನ್ಯಾಯಾಲಯಗಳಿಗೆ ಇ-ಮೇಲ್ ಮತ್ತು ಕರೆಗಳ ಮೂಲಕ ಸರಣಿ ಬಾಂಬ್ ಬೆದರಿಕೆಗಳು ಬಂದಿವೆ. ಈ ಹಿನ್ನೆಲೆಯಲ್ಲಿ, ಭದ್ರತಾ ಕ್ರಮವಾಗಿ ಎಲ್ಲಾ ನ್ಯಾಯಾಲಯಗಳ ಕಲಾಪಗಳನ್ನು ಸ್ಥಗಿತಗೊಳಿಸಿ, ತಪಾಸಣೆ ನಡೆಸಲಾಗಿದೆ.
02:57 PM (IST) Jan 06
ನಟ ಯಶ್ ಜನ್ಮದಿನದ ಅಂಗವಾಗಿ, ಬೆಂಗಳೂರಿನ 'ನಮ್ಮ ಮೆಟ್ರೋ' ರೈಲಿನ ಮೇಲೆ ಅವರ ಬೃಹತ್ ಚಿತ್ರವಿರುವ ಜಾಹೀರಾತನ್ನು ಅಳವಡಿಸಿ ವಿನೂತನವಾಗಿ ಶುಭ ಕೋರಲಾಗಿದೆ. ಅಭಿಮಾನಿಗಳು ಈ ಪ್ರಚಾರ ಕೈಗೊಂಡಿರಬಹುದೆಂದು ಚರ್ಚೆಯಾಗುತ್ತಿದೆ. ಯಶ್ ಚಿತ್ರ ಹೊತ್ತ ಮೆಟ್ರೋ ಸಂಚರಿಸುವ ವಿಡಿಯೋಗಳು ವೈರಲ್ ಆಗಿದೆ.
02:53 PM (IST) Jan 06
2024-25ನೇ ಸಾಲಿನಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನವು 36.24 ಕೋಟಿ ರೂ. ಆದಾಯ ಗಳಿಸಿ, ರಾಜ್ಯದ ಮುಜರಾಯಿ ದೇವಾಲಯಗಳ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಪಡೆದಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಆದಾಯದಲ್ಲಿ ಮೂರೂವರೆ ಕೋಟಿ ರೂ. ಹೆಚ್ಚಳವಾಗಿವೆ.
02:53 PM (IST) Jan 06
ನಾಮಿನೇಷನ್ ಬಳಿಕ ಕಿತ್ತಾಡಿಕೊಂಡಿದ್ದ ಸ್ಪರ್ಧಿಗಳಿಗೆ ಬಿಗ್ಬಾಸ್ ಹೊಸ ಟ್ವಿಸ್ಟ್ ನೀಡಿದ್ದಾರೆ. ಇಬ್ಬರು ಮಹಿಳೆ ಮತ್ತು ಓರ್ವ ಪುರುಷನಿರುವ ತಂಡಗಳನ್ನು ರಚಿಸುವಂತೆ ಸೂಚಿಸಿದ್ದು, ಇದು ಮನೆಯಲ್ಲಿ ಹೊಸ ಜಗಳ ಮತ್ತು ಸಮೀಕರಣಗಳಿಗೆ ಕಾರಣವಾಗಿದೆ. ರಘು ತಂಡಕ್ಕೆ ಯಾರು ಸೇರಬೇಕು ಎಂಬ ಗೊಂದಲ ತಾರಕಕ್ಕೇರಿದೆ.
01:14 PM (IST) Jan 06
Annayya Kannada Serial Episode: ಅಣ್ಣಯ್ಯ ಧಾರಾವಾಹಿಯಲ್ಲಿ ಜಿಮ್ ಸೀನ ಹಾಗೂ ಮನು ಗೌಡ್ರ ಅಸಲಿಯತ್ತು ಏನು ಎಂದು ಇನ್ನೂ ಶಿವುಗೆ ಗೊತ್ತಾಗಿರಲಿಲ್ಲ. ಈಗ ಈ ಧಾರಾವಾಹಿಯಲ್ಲಿ ಸತ್ಯ ಸ್ಫೋಟವಾಗಿದೆ. ಹೀಗಾಗಿ ಮುಂದೆ ಏನಾಗಲಿದೆ ಎಂಬ ಕುತೂಹಲ ಶುರುವಾಗಿದೆ.
01:10 PM (IST) Jan 06
12:51 PM (IST) Jan 06
ಬೆಂಗಳೂರಿನಲ್ಲಿ 60 ಸ್ಪ್ಲೆಂಡರ್ ಬೈಕ್ಗಳನ್ನು ಕದ್ದಿದ್ದ ನಾಲ್ವರು ಖತರ್ನಾಕ್ ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ನಕಲಿ ಕೀ ಬಳಸಿ ಬೈಕ್ ಕದ್ದು, ತಮಿಳುನಾಡಿನ ಬೆಟ್ಟ ಪ್ರದೇಶಗಳಲ್ಲಿ ಹಾಗೂ 'ಪುಷ್ಪ' ಸಿನಿಮಾ ಶೂಟಿಂಗ್ ನಡೆದ ಸ್ಥಳಗಳಲ್ಲಿ ಮಾರಾಟ ಮಾಡುತ್ತಿದ್ದರು.
12:50 PM (IST) Jan 06
ಬೆಂಗಳೂರಿನ ಯಲಹಂಕ ಸಮೀಪದ ಕೋಗಿಲು ಅಕ್ರಮ ನಿವಾಸಿಗಳ ತೆರವು ಪ್ರಕರಣದಲ್ಲಿ, ಪುನರ್ವಸತಿಗಾಗಿ ಅರ್ಜಿ ಸಲ್ಲಿಸಿದ್ದ 262 ಕುಟುಂಬಗಳ ಪೈಕಿ ಕೇವಲ 37 ಮಾತ್ರ ಅರ್ಹರೆಂದು ತಿಳಿದುಬಂದಿದೆ. 5 ವರ್ಷಗಳ ನಿರಂತರ ವಾಸದ ದಾಖಲೆಗಳನ್ನು ಹೊಂದಿದವರನ್ನು ಮಾತ್ರ ಪರಿಗಣಿಸಲಾಗಿದೆ.
12:44 PM (IST) Jan 06
Bigg Boss Gilli Nata: ಬಿಗ್ ಬಾಸ್ ಕನ್ನಡ ಸೀಸನ್ 12 ಶೋನಲ್ಲಿ ಗಿಲ್ಲಿ ನಟ ಹಾಗೂ ಅಶ್ವಿನಿ ಗೌಡ ಮಧ್ಯೆ ಮತ್ತೆ ಒಂದಿಷ್ಟು ಜಗಳಗಳು ಆಗಿವೆ. ಈ ಮಧ್ಯೆ ಗಿಲ್ಲಿ ನಟ ಅವರು ಬಳಸಿದ ಪದ ಅನೇಕರಿಗೆ ಇಷ್ಟವಾಗಿಲ್ಲ. ಗಿಲ್ಲಿ ನಟ ಹೀಗೆ ಮಾಡುತ್ತಾರೆ ಎಂದು ಯಾರೂ ನಿರೀಕ್ಷೆ ಮಾಡಿರಲಿಲ್ಲ.
12:04 PM (IST) Jan 06
11:54 AM (IST) Jan 06
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೂರ್ಣಾವಧಿ ಸಿಎಂ ಆಗುವ ಬಗ್ಗೆ ಪರಿಪೂರ್ಣ ವಿಶ್ವಾಸ ವ್ಯಕ್ತಪಡಿಸಿದ್ದು, ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದಿದ್ದಾರೆ. ದೇವರಾಜ ಅರಸು ಅವರ ದಾಖಲೆ ಸರಿಗಟ್ಟಿದ್ದು ಜನರ ಆಶೀರ್ವಾದದಿಂದ ಎಂದ ಅವರು, ಸಂಪುಟ ಪುನಾರಚನೆ ಬಗ್ಗೆ ಹೈಕಮಾಂಡ್ ನಿರ್ಧರಿಸಲಿದೆ ಎಂದರು.
11:53 AM (IST) Jan 06
ಧರ್ಮಸ್ಥಳದ ಸೌಜನ್ಯ ಅತ್ಯಾ*ಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆಗೆ ಕೋರಿ ತಾಯಿ ಕುಸುಮಾವತಿ ಗೌಡ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿದೆ. ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಈ ಮೇಲ್ಮನವಿಯ ಮುಂದಿನ ವಿಚಾರಣೆಯನ್ನು ನ್ಯಾಯಾಲಯವು ಮಾರ್ಚ್ 23ಕ್ಕೆ ಮುಂದೂಡಿದೆ.
11:37 AM (IST) Jan 06
Actress Marriage: ಮದುವೆ ಆಗುವ ಹುಡುಗಿ-ಹುಡುಗಿ ಅಂದು ಯಾವಾಗಲೂ ಸುಮಧುರ ಕ್ಷಣಗಳನ್ನು ಕಳೆಯಲು ಬಯಸುತ್ತಾರೆ. ಸಂಗೀತದಲ್ಲೋ, ಊಟ ಮಾಡುವಾಗಲೂ ಕೂಡ ಪರಸ್ಪರ ಒಬ್ಬರಿಗೆ ಒಬ್ಬರು ಟೈಮ್ ಕೊಡುತ್ತಾರೆ. ನಟಿ ಪಾರ್ವತಿ ಅವರು ಮದುವೆ ವೇಳೆ ವಿಶೇಷಚೇತನ ತಂಗಿಗೆ ಊಟ ಮಾಡಿಸಿರುವ ವಿಡಿಯೋ ವೈರಲ್ ಆಗ್ತಿದೆ.
11:17 AM (IST) Jan 06