ಬೆಂಗಳೂರು: ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮಾಹಿತಿ ಪರಿಶೀಲನೆ ವೇಳೆ ಆಧಾರ್ ಮಾಹಿತಿ ಅಪ್ಡೇಟ್ ಕುರಿತು ‘ಬಾಡಿಗೆದಾರರು’ ಗೊಂದಲ, ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ಬೆಸ್ಕಾಂ ಸ್ಪಷ್ಟಪಡಿಸಿದೆ. ಹಿಂದೆ ವಾಸವಿದ್ದ ಬಾಡಿಗೆದಾರರ ಆಧಾರ್ ಮಾಹಿತಿ ತೆರವಿನಿಂದ ತಮಗೆ ಈಗ ಸಿಗುತ್ತಿರುವ ಯೋಜನೆಯ ಅನುಕೂಲ ನಿಲ್ಲಲಿದೆಯೇ ಎಂಬ ಆತಂಕ ಅನೇಕರಲ್ಲಿ ಇರುವುದರಿಂದ ಬೆಸ್ಕಾಂ ಈ ಸ್ಪಷ್ಟನೆ ನೀಡಿದೆ.
ಬೆಸ್ಕಾಂ ಮೀಟರ್ ರೀಡರ್ ಹಾಗೂ ಸಿಬ್ಬಂದಿ ಫಲಾನುಭವಿಗಳ ಮನೆಗಳಿಗೆ ಭೇಟಿ ನೀಡಿದಾಗ ಹಳೇ ಬಾಡಿಗೆದಾರರ ಆಧಾರ್ ವಿವರ ತೆಗೆದು, ಪ್ರಸ್ತುತ ವಾಸವಿರುವ ಬಾಡಿಗೆದಾರರ ಆಧಾರ್ ವಿವರಗಳನ್ನು ಅಪ್ಡೇಟ್ ಮಾಡಿಕೊಳ್ಳುತ್ತಾರೆ. ಹಾಗಾಗಿ, ಯೋಜನೆ ಸ್ಥಗಿತಗೊಳ್ಳಲಿದೆ ಎಂಬ ಆತಂಕ ಬೇಡ ಎಂದು ಬೆಸ್ಕಾಂ ತಿಳಿಸಿದೆ.
06:48 AM (IST) Jul 06
ಬೆಂಗಳೂರಿನ ದೊಡ್ಡಕಮ್ಮನಹಳ್ಳಿಯಲ್ಲಿ, ನಿವೃತ್ತ ಐಎಎಸ್ ಅಧಿಕಾರಿಯಿಂದ ಅನ್ಯಾಯವಾಗಿದೆ ಎಂದು ಆರೋಪಿಸಿ ಮಹಿಳೆಯೊಬ್ಬರು ತನ್ನ 4 ವರ್ಷದ ಮಗುವಿನೊಂದಿಗೆ ಕಟ್ಟಡದಿಂದ ಜಿಗಿದು ಆತ್ಮ*ಹತ್ಯೆಗೆ ಯತ್ನಿಸಿದ್ದಾರೆ. ಮುಖ್ಯಮಂತ್ರಿಗಳನ್ನು ಭೇಟಿ ಮಾಡಿಸಬೇಕೆಂದು ಪಟ್ಟು ಹಿಡಿದಿದ್ದ ತಾಯಿ-ಮಗುವನ್ನು ಪೊಲೀಸರು ಸತತ 2 ಗಂಟೆಗಳ ಕಾಲ ಮನವೊಲಿಸಿ ಸುರಕ್ಷಿತವಾಗಿ ರಕ್ಷಿಸಿದ್ದಾರೆ.
06:37 AM (IST) Jul 06
06:23 AM (IST) Jul 06
ಹಿರೇಕೆರೂರು ತಾಲೂಕಿನ ಹಂಸಭಾವಿ ಉರ್ದು ಶಾಲೆಯ ಮುಖ್ಯ ಶಿಕ್ಷಕಿ ಉಮೈ ಸಲ್ಮಾ, ತಮ್ಮ ಮಗನ ಜನ್ಮದಿನದ ನೆನಪಿಗಾಗಿ ಸ್ವಂತ ಹಣದಲ್ಲಿ ಶಾಲೆಗೆ ಸುಣ್ಣಬಣ್ಣ ಬಳಿಸಿ, ಆಟದ ಮೈದಾನ ನಿರ್ಮಿಸಿದ್ದಾರೆ. ಅವರ ಈ ಆದರ್ಶ ಕಾರ್ಯವು ಶಿಕ್ಷಕ ವಲಯದಲ್ಲಿ ಮತ್ತು ಸಾರ್ವಜನಿಕವಾಗಿ ವ್ಯಾಪಕ ಪ್ರಶಂಸೆಗೆ ಪಾತ್ರವಾಗಿದೆ.
06:13 AM (IST) Jul 06
05:59 AM (IST) Jul 06
05:50 AM (IST) Jul 06
05:43 AM (IST) Jul 06
05:35 AM (IST) Jul 06
05:22 AM (IST) Jul 06
05:15 AM (IST) Jul 06
05:07 AM (IST) Jul 06