ಬೆಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹಗಳನ್ನು ಹೂಡು ಹಾಕಿದ ನಡೆಯುತ್ತಿರುವ ಶೋಧ ಕಾರ್ಯಾಚರಣೆ ವೇಳೆ ಪಾಯಿಂಟ್ 6ರಲ್ಲಿ ಮಾನವನ ಕಳೆಗುರ ಪತ್ತೆಯಾಗಿತ್ತು. ಈ ಸಂಬಂಧ ಧರ್ಮಸ್ಥಳ ಠಾಣೆಯಲ್ಲಿ ಯುಡಿಆರ್ (ಅಸಹಜ ಸಾವು ಪ್ರಕರಣ) ದಾಖಲಾಗಿತ್ತು. ಈ ಪ್ರಕರಣವನ್ನು ಸಹ ಎಸ್ಐಟಿಗೆ ಹಸ್ತಾಂತರಿಸಲಾಗಿದೆ. ಧರ್ಮಸ್ಥಳ ಗ್ರಾಮದಲ್ಲಿ ಪೊಲೀಸರು ಈ ಹಿಂದೆ ಪ್ರಕರಣ ದಾಖಲಿಸದೇ ಮೃತದೇಹವೊಂದನ್ನು ಹೂತು ಹಾಕಿದ್ದಾರೆ ಎಂದು ಜಯಂತ್ ಎಂಬವರು ದೂರು ದಾಖಲಿಸಿದ್ದರು. ಜು.31ರಂದು ಆರನೇ ಸ್ಥಳದಲ್ಲಿ ಉತ್ಪನನ ಕಾರ್ಯಾಚರಣೆ ವೇಳೆ ಪತ್ತೆಯಾದ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಯುಡಿಆರ್ ದಾಖಲಾಗಿದೆ. ಈ ಎರಡೂ ಪ್ರಕರಣಗಳನ್ನು ಎಸ್ಐಟಿಗೆ ಹಸ್ತಾಂತರಿಸಲಾಗಿದೆ.

11:33 PM (IST) Aug 06
ನಿಸಾರ್ನ ಈ ಆಧ್ಯಾತ್ಮಿಕ ಒಲವಿಗೆ ಅವರ ಧರ್ಮದ ಕೆಲವರು ವಿರೋಧ ವ್ಯಕ್ತಪಡಿಸಿದ್ದರಂತೆ. ಆದಾಗ್ಯೂ, 2020ರಲ್ಲಿ ಎಸ್ಎಸ್ಎಲ್ಸಿಯಲ್ಲಿ ಫಸ್ಟ್ ಕ್ಲಾಸ್ನಲ್ಲಿ ಉತ್ತೀರ್ಣರಾದ ನಿಸಾರ್, ಲಿಂಗ ದೀಕ್ಷೆ ಪಡೆದ ಬಳಿಕ ಕಾವಿ ಬಟ್ಟೆ ಧರಿಸಿ ಶಾಲೆಗೆ ಅಂಕಪಟ್ಟಿ ಪಡೆಯಲು ಬಂದಿದ್ದರು.
11:13 PM (IST) Aug 06
10:57 PM (IST) Aug 06
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಆರ್ಥಿಕ ಸಂಕಷ್ಟದಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಬೆಂಕಿ ಹಚ್ಚಿಕೊಂಡು ಸಾಯಲು ಮಾಡಿಕೊಂಡಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಮೃತಪಟ್ಟಿದ್ದಾರೆ.
10:32 PM (IST) Aug 06
09:22 PM (IST) Aug 06
08:51 PM (IST) Aug 06
08:34 PM (IST) Aug 06
08:10 PM (IST) Aug 06
ಸೌಜನ್ಯ ಪ್ರಕರಣ ವರದಿ ಮಾಡುತ್ತಿದ್ದ ಯೂಟ್ಯೂಬರ್ಗಳ ಮೇಲೆ ಹಲ್ಲೆ ನಡೆದ ಬಳಿಕ, ಉಜಿರೆಯಲ್ಲಿ ಗಾಯಾಳುಗಳನ್ನು ಭೇಟಿ ಮಾಡಲು ತೆರಳಿದ ಸುವರ್ಣ ನ್ಯೂಸ್ ವರದಿಗಾರ ಹರೀಶ್ ಮೇಲೆಯೂ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮೆಟ್ಟಣ್ಣನವರ್ ಗ್ಯಾಂಗ್ ಹಲ್ಲೆ ನಡೆಸಿದೆ. ತಡೆಯಲು ಯತ್ನಿಸಿದ ಪೊಲೀಸರ ಮೇಲೂ ಹಲ್ಲೆ ನಡೆದಿದೆ.
07:50 PM (IST) Aug 06
ಒಳಮೀಸಲಾತಿ ವರದಿಯನ್ನು ತರಾತುರಿಯಲ್ಲಿ ಅಂಗೀಕರಿಸದಂತೆ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಎಲ್ಲಾ ಸಮುದಾಯಗಳೊಂದಿಗೆ ಸಮಾಲೋಚನೆ ನಡೆಸಿ ಎಚ್ಚರಿಕೆಯಿಂದ ನಿರ್ಧಾರ ಕೈಗೊಳ್ಳಬೇಕೆಂದು ಮನವಿ ಮಾಡಿದ್ದಾರೆ.
07:39 PM (IST) Aug 06
06:24 PM (IST) Aug 06
ಬೆಳಗಾವಿಯ ಮಸೀದಿಯೊಂದರಲ್ಲಿ ಎರಡು ವರ್ಷಗಳ ಹಿಂದೆ ನಡೆದಿದ್ದ ಅಪ್ರಾಪ್ತ ಬಾಲಕಿ ಮೇಲಿನ ಅತ್ಯಾ*ಚಾರ ಪ್ರಕರಣ ಬೆಳಕಿಗೆ ಬಂದಿದೆ. ಹಿಂದೂ ಮುಖಂಡ ಪುನೀತ್ ಕೆರೆಹಳ್ಳಿ ಸಾಮಾಜಿಕ ಜಾಲತಾಣದ ಮಧ್ಯಪ್ರವೇಶದ ನಂತರ ಪೊಲೀಸರು ಆರೋಪಿ ಮೌಲ್ವಿಯನ್ನು ಬಂಧಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳು ಈ ಘಟನೆ ದೃಢಪಡಿಸಿವೆ.
05:55 PM (IST) Aug 06
ಪುತ್ತೂರಿನ ಯುವ ಪಶುವೈದ್ಯೆ ಡಾ. ಕೀರ್ತನಾ ಜೋಶಿ ಮಂಗಳೂರಿನ ತಮ್ಮ ನಿವಾಸದಲ್ಲಿ ಆತ್ಮಹ*ತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ಅವರ ಕುಟುಂಬ ಮತ್ತು ಸ್ನೇಹಿತರಲ್ಲಿ ಆಘಾತವನ್ನುಂಟುಮಾಡಿದೆ. ಪ್ರತಿಭಾವಂತ ವೈದ್ಯೆಯ ಈ ಅಕಾಲಿಕ ಮರಣಕ್ಕೆ ಕಾರಣ ತಿಳಿದುಬಂದಿಲ್ಲ.
05:55 PM (IST) Aug 06
ಕೇವಲ ನಾಲ್ಕು ತಿಂಗಳಿನಲ್ಲಿ ಪಶ್ಚಿಮ ರೈಲ್ವೆ ಒಂದರಲ್ಲಿಯೇ 71 ಕೋಟಿ ರೂಪಾಯಿಗಳ ದಂಡ ವಸೂಲಿ ಆಗಿದೆ. ಇದರ ಕುತೂಹಲದ ಮಾಹಿತಿ ಇಲ್ಲಿದೆ...
05:44 PM (IST) Aug 06
05:32 PM (IST) Aug 06
ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್ ಸೇರಿದಂತೆ ಆರೋಪಿಗಳ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ಗೆ ಹೆಚ್ಚುವರಿ ಅಫಿಡವಿಟ್ ಸಲ್ಲಿಸಿದೆ. ಪ್ರತ್ಯಕ್ಷದರ್ಶಿಗಳು, ವಿಧಿವಿಜ್ಞಾನ ವರದಿಗಳು, ದರ್ಶನ್ ಮತ್ತು ಪವಿತ್ರಾಳ ಸಕ್ರಿಯ ಪಾತ್ರ ಬಿಚ್ಚಿಟ್ಟಿದ್ದಾರೆ.
05:20 PM (IST) Aug 06
ರಾತ್ರಿ ಶಿಫ್ಟ್ನಿಂದ ಸ್ತ್ರೀಯರ ಸಂತಾನೋತ್ಪತ್ತಿ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆಯೇ? ಗರ್ಭಧಾರಣೆಯಲ್ಲಿ ಸಮಸ್ಯೆ ಉಂಟಾಗುತ್ತದೆಯೇ? ಇಲ್ಲಿ ಸಂಪೂರ್ಣ ವಿವರಗಳನ್ನು ತಿಳಿಯಿರಿ.
05:11 PM (IST) Aug 06
ಕೆ.ಆರ್.ಪುರಂ ಮೆಟ್ರೋ ನಿಲ್ದಾಣದಲ್ಲಿ ಮರೆತುಹೋದ ಟೂಲ್ ಕಿಟ್ ಬಾಕ್ಸ್ ಬಾಂಬ್ ಭೀತಿ ಸೃಷ್ಟಿಸಿತ್ತು. ಎಚ್.ಎ.ಎಲ್ ಉದ್ಯೋಗಿ ಮಂಜುನಾಥ್ ಜಾದವ್ ಅವರದ್ದಾಗಿದ್ದ ಬಾಕ್ಸ್ ಅನ್ನು ಬಾಂಬ್ ನಿಷ್ಕ್ರಿಯ ದಳ ಪರಿಶೀಲಿಸಿ ಸುರಕ್ಷಿತ ಎಂದು ಖಚಿತಪಡಿಸಿತು. ಪೊಲೀಸರು ಮಂಜುನಾಥ್ರಿಗೆ ಎಚ್ಚರಿಕೆ ನೀಡಿದರು.
04:58 PM (IST) Aug 06
04:14 PM (IST) Aug 06
01:36 PM (IST) Aug 06
12:59 PM (IST) Aug 06
ಸಚಿವ ಮಹದೇವಪ್ಪ ಹೇಳಿಕೆ ಸಮರ್ಥಿಸಿಕೊಂಡ ಲಕ್ಷ್ಮಣ್, ಟಿಪ್ಪು 'ಮೋವಿ ಡ್ಯಾಂ' ನಿರ್ಮಿಸಿದ್ದರು ಎಂದು ಹೇಳಿದ್ದಾರೆ. ನಾಲ್ವಡಿಗಿಂತ ಸಿದ್ದರಾಮಯ್ಯ ಹೆಚ್ಚು ಕೆಲಸ ಮಾಡಿದ್ದಾರೆ ಎಂಬ ಯತೀಂದ್ರ ಹೇಳಿಕೆಯನ್ನೂ ಸಮರ್ಥಿಸಿದ್ದಾರೆ. ಪ್ರತಾಪ್ ಸಿಂಹ ಮೊಬೈಲ್ ತನಿಖೆಯಾದರೆ, ಪ್ರಜ್ವಲ್ನಂತೆ ಜೈಲು ಸೇರುತ್ತಾರೆ ಎಂದರು.
12:17 PM (IST) Aug 06
ವಿಧಾನಮಂಡಲ ಅಧಿವೇಶನ ಶುರುವಾಗುತ್ತಿರುವ ಪ್ರತಿಪಕ್ಷಗಳನ್ನು ಹೇಗೆ ಎದುರಿಸಬೇಕು ಎಂಬ ಕುರಿತು ಚರ್ಚಿಸಲು ಆ.12ರಂದು ನಗರದ ಖಾಸಗಿ ಹೋಟೆಲ್ನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ.
12:11 PM (IST) Aug 06
ಅಂಜನಾದ್ರಿ ಬೆಟ್ಟದ ಪೂಜಾ ವಿವಾದಕ್ಕೆ ಸಂಬಂಧಿಸಿದಂತೆ ಕೊಪ್ಪಳ ಜಿಲ್ಲಾಧಿಕಾರಿಗಳಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ. ನ್ಯಾಯಾಲಯದ ಹಿಂದಿನ ಆದೇಶವನ್ನು ಪಾಲಿಸದ ಹಿನ್ನೆಲೆಯಲ್ಲಿ ಆಗಸ್ಟ್ 11 ರಂದು ಆನ್ಲೈನ್ ಮೂಲಕ ಹಾಜರಾಗುವಂತೆ ಸೂಚಿಸಲಾಗಿದೆ.
11:16 AM (IST) Aug 06
ಡ್ರೈಫ್ರೂಟ್ಸ್ ಸಂಖ್ಯೆ ಹೆಚ್ಚಾದಂತೆ ಕರದಂಟು ತಯಾರಿಕೆಯಲ್ಲೂ ಬದಲಾವಣೆಗಳಾಗಿವೆ. ಇದಕ್ಕಿರುವ ಬೇಡಿಕೆ ನೋಡಿ ಇಡೀ ಅಮೀನಗಡದಲ್ಲಿ ಕರದಂಟು ಮಾಡುವವರ ಸಂಖ್ಯೆಯೂ ಹೆಚ್ಚಾಗಿದೆ.
10:28 AM (IST) Aug 06
ಜಾಗತಿಕ ಭದ್ರತೆಗೆ ಬಹುದೊಡ್ಡ ಸವಾಲು. ಇಂಥ ಸನ್ನಿವೇಶದಲ್ಲಿ ಅಂದು ನಡೆದಿರುವ ಹಿರೋಶಿಮಾ ದುರ್ಘಟನೆ ವಿಶ್ವದ ಎಲ್ಲ ರಾಷ್ಟಗಳಿಗೂ ಎಚ್ಚರಿಕೆಯ ಗಂಟೆ.
10:19 AM (IST) Aug 06
ವರಮಹಾಲಕ್ಷ್ಮಿ ಹಬ್ಬಕ್ಕೆ ನಗರದ ಮಾರುಕಟ್ಟೆ ಕಳೆಗಟ್ಟಿದ್ದು, ಹೂ-ಹಣ್ಣುಗಳ ದರ ವಿಪರೀತ ಏರಿಕೆ ನಡುವೆ ಖರೀದಿ ಭರಾಟೆ ಜೋರಾಗಿದೆ.
10:02 AM (IST) Aug 06
ಸಂಬಳ ಹೆಚ್ಚಳ, ಬಾಕಿ ವೇತನ ಸೇರಿದಂತೆ ಹಲವು ಬೇಡಿಕೆಗಳಿಗೆ ಆಗ್ರಹಿಸಿ ಸಾರಿಗೆ ನಿಗಮದ ನೌಕರರು ಮಂಗಳವಾರ ಬಂದ್ಗೆ ಕರೆ ನೀಡಿದ್ದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸಾರಿಗೆ ಸಂಚಾರ ಅಸ್ತವ್ಯಸ್ತಗೊಂಡಿತ್ತು.
09:43 AM (IST) Aug 06
09:03 AM (IST) Aug 06
ಸಾರಿಗೆ ನೌಕರರ ಮುಷ್ಕರದಿಂದಾಗಿ ಮಹಿಳಾ ಪ್ರಯಾಣಿಕರ ಸಂಖ್ಯೆ ಇಳಿಕೆಯಾಗಿ 'ಶಕ್ತಿ' ಯೋಜನೆಯಡಿ ಸರ್ಕಾರಕ್ಕೆ. ಉಳಿತಾಯವಾಗಿದೆ. ಮುಷ್ಕರದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಶೇ.60ಕ್ಕೂ ಹೆಚ್ಚು ಬಸ್ಗಳ ಓಡಾಟ ಸ್ಥಗಿತಗೊಂಡಿತ್ತು.
08:50 AM (IST) Aug 06
ನನ್ನ ಜತೆಗೆ ಶಾಸಕರಾದವರು ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಮತ್ತು ಮಂತ್ರಿಗಳಾಗಿದ್ದಾರೆ. ಆದರೆ, ನನಗೆ ಅವಕಾಶ ಮತ್ತು ಅದೃಷ್ಟವಿಲ್ಲ ಎನ್ನುವ ಮೂಲಕ ಶಾಸಕ ಬಸವರಾಜ ರಾಯರೆಡ್ಡಿ ಮುಖ್ಯಮಂತ್ರಿ ಆಗುವ ಆಸೆ ವ್ಯಕ್ತಪಡಿಸಿದ್ದಾರೆ.
07:18 AM (IST) Aug 06
ಹಲವು ತಿಂಗಳುಗಳಿಂದ ಸರ್ಕಾರದಲ್ಲಿ ಆರ್ಥಿಕ ಮುಗ್ಗಟ್ಟಿದೆ. ಹೀಗಾಗಿ ಸಾರಿಗೆ ನೌಕರರ ಬೇಡಿಕೆ ಈಡೇರಿಸಲು ಮುಖ್ಯಮಂತ್ರಿಗಳಿಗೆ ಸಾಧ್ಯವಾಗುತ್ತಿಲ್ಲ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.