ಬೆಂಗಳೂರು ರಾಜ್ಯ ಕಾಂಗ್ರೆಸ್ನಲ್ಲಿನ ಗೊಂದಲ ಬಗೆಹರಿಸಿ ಎಂಬ ಶಾಸಕರ ಕೂಗಿನ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯತಮ್ಮ 17ನೇ ಬಜೆಟ್ ಮಂಡನೆಗೆ ಸಿದ್ಧರಾಗುತ್ತಿದ್ದಾರೆ. ಅವರು ಗುರುವಾರ ಇಡೀ ದಿನ ಗೃಹ ಇಲಾಖೆ ಸೇರಿ ವಿವಿಧ 10 ಇಲಾಖೆಗಳ ಸಚಿವರು, ಉನ್ನತ ಅಧಿಕಾರಿಗಳ ಜತೆ ಬಜೆಟ್ ಪೂರ್ವಭಾವಿ ಚರ್ಚೆ ನಡೆಸಿದರು. ಇದರೊಂದಿಗೆ ತಮ್ಮ ದಾಖಲೆಯ 17ನೇ ಬಜೆಟ್ ಮಂಡನೆಗೆ ಅಧಿಕೃತ ತಯಾರಿ ಆರಂಭಿಸಿದರು. ಶುಕ್ರವಾರವೂ ಈ ಸಭೆಗಳು ಮುಂದುವರಿಯಲಿವೆ.

11:10 PM (IST) Feb 06
ನಮ್ಮ ರಾಜ್ಯದಲ್ಲಿ ಜ್ಯೋತಿಷಿ ಕಮಲಾಕರ್ ಭಟ್ ಅನೈತಿಕ ಸಂಬಂಧ ಬೆಳೆಸಿ ಜೈಲು ಸೇರಿದರೆ, ತೆಲಂಗಾಣದ ಸ್ವಾಮೀಜಿಯೊಬ್ಬರು ದೇವಸ್ಥಾನದ ಆವರಣದ ಹೂವಿನ ತೋಟದಲ್ಲಿ ಗಾಂಜಾ ಗಿಡ ಬೆಳೆಸಿ ಜೈಲು ಸೇರಿದ ಪ್ರಸಂಗ ನಡೆದಿದೆ. ಇಂತಹ ಸ್ವಾಮೀಜಿ, ಜ್ಯೋತಿಷಿಗಳ ಬಗ್ಗೆ ಭಕ್ತರು ಜಾಗೃತರಾಗಬೇಕು.
10:43 PM (IST) Feb 06
Bigg Boss Rakhi Sawant: ಈ ಹಿಂದೆ ಮೈಸೂರಿನ ಆದಿಲ್ ಖಾನ್ ಅವರನ್ನು ಮದುವೆ ಆಗಿದ್ದ ರಾಖಿ ಸಾವಂತ್ ಅವರು ರಿಲಾಯನ್ಸ್ ಸಾಮ್ರಾಜ್ಯದ ಮಾಲೀಕ ಮುಕೇಶ್ ಅಂಬಾನಿ ಜೊತೆ ಮದುವೆ ಆಗಲು ಹಾರ ಹಿಡಿದು ರೆಡಿ ಆಗಿದ್ದಾರೆ. ಈ ಬಗ್ಗೆ ಅವರು ಮಾತನಾಡಿದ್ದಾರೆ.
10:31 PM (IST) Feb 06
ಉತ್ತರ ಕನ್ನಡದ ಸಿದ್ದಾಪುರದಲ್ಲಿ ಜ್ಯೋತಿಷಿ ಕಮಲಾಕರ್ ಭಟ್ ಮತ್ತು ಸುಚಿತ್ರಾ ಗ್ಯಾಂಗ್ನಿಂದ ನಡೆದ ವಸಂತ ನಾಯ್ಕ್ ಹತ್ಯೆ ಪ್ರಕರಣದಲ್ಲಿ ಪೊಲೀಸರ ನಿರ್ಲಕ್ಷ್ಯದ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಇಬ್ಬರು ಸಿಬ್ಬಂದಿಯನ್ನು ವರ್ಗಾಯಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಆದೇಶ ಹೊರಡಿಸಿದ್ದಾರೆ.
08:42 PM (IST) Feb 06
07:53 PM (IST) Feb 06
ಕರ್ಣ ಧಾರಾವಾಹಿಯಲ್ಲಿ ಇತ್ತೀಚೆಗೆ ಕರ್ಣ ರೋಗಿಯೋರ್ವರಿಗೆ ಮೆಡಿಸಿನ್ ಚೀಟಿ ಬರೆದುಕೊಟ್ಟಿದ್ದು, ಆ ಬಳಿಕ ನಿಧಿ, ನಿತ್ಯಾ ನಡುವೆ ಚರ್ಚೆ ಆದ ವಿಷಯದ ಬಗ್ಗೆ ವೀಕ್ಷಕರು ಪ್ರಶ್ನೆ ಮಾಡಿದ್ದಾರೆ. ಅದೆಲ್ಲ ಹೇಗೆ ಸಾಧ್ಯ ಎಂಬ ಚರ್ಚೆ ಆಗುತ್ತಿದೆ. ವೀಕ್ಷಕರ ಪ್ರಕಾರ ನಿರ್ದೇಶಕರು ಮಾಡಿದ ತಪ್ಪೇನು?
07:51 PM (IST) Feb 06
ಬಿಗ್ ಬಾಸ್ ಮಹಿಳಾ ಸ್ಪರ್ಧಿಗಳನ್ನು ಮದುವೆಯಾಗುವುದಾಗಿ ವ್ಯಕ್ತಿಯೊಬ್ಬ ಪೀಡಿಸುತ್ತಿದ್ದ. ಸಾಮಾಜಿಕ ಜಾಲತಾಣದಿಂದ ಆರಂಭವಾದ ಈ ಕಿರುಕುಳವು, ಅವರು ತಂಗಿದ್ದ ರೆಸಾರ್ಟ್ಗೆ ನುಗ್ಗಿದ್ದಾನೆ. ತಮ್ಮ ಸುರಕ್ಷತೆಗೆ ಹೆದರಿ ಆತನ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ ಕಾನೂನು ಹೋರಾಟಕ್ಕೆ ಮುಂದಾಗಿದ್ದಾರೆ.
07:35 PM (IST) Feb 06
07:08 PM (IST) Feb 06
'ಸರ್ಕಾರಿ ಶಾಲೆ ಹೆಚ್-8' ಸಿನಿಮಾದ ಪ್ರಚಾರಕ್ಕೆ ಗೈರಾದ ಕಾರಣ ಬಿಗ್ ಬಾಸ್ ಸೀಸನ್ 12ರ ವಿನ್ನರ್ ಗಿಲ್ಲಿ ನಟನ ವಿರುದ್ಧ ನಿರ್ಮಾಪಕರು ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ನೀಡಿದ್ದಾರೆ. ಫಿಲ್ಮ್ ಚೇಂಬರ್ ನಿಯಮ ಉಲ್ಲಂಘನೆಗೆ ಚಿತ್ರರಂಗದಿಂದ ಬ್ಯಾನ್ ಮಾಡಿದಲ್ಲಿ ನಿರ್ದೇಶಕನಾಗುವ ಕನಸಿಗೆ ಕುತತು ಬರಲಿದೆ.
06:56 PM (IST) Feb 06
06:55 PM (IST) Feb 06
ಖ್ಯಾತ ಜ್ಯೋತಿಷಿ ಕಮಲಾಕರ ಭಟ್ ಅವರ ಅನೈತಿಕ ಸಂಬಂಧ ಮತ್ತು ಕೊಲೆ ಪ್ರಕರಣದ ತನಿಖೆಯನ್ನು ಇದೀಗ ಶಿರಸಿ ಉಪವಿಭಾಗದ ಡಿವೈಎಸ್ಪಿಗೆ ವಹಿಸಲಾಗಿದೆ. ಈ ಪ್ರಕರಣದಲ್ಲಿ ಪೊಲೀಸರ ನಿರ್ಲಕ್ಷ್ಯದ ಬಗ್ಗೆಯೂ ತನಿಖೆ ನಡೆಯಲಿದೆ.
06:09 PM (IST) Feb 06
ಮೈಸೂರಿನಲ್ಲಿ ಹೆಚ್ಚುತ್ತಿರುವ ಡ್ರಗ್ ಹಾವಳಿ ನಿಯಂತ್ರಣದಲ್ಲಿ ವಿಫಲವಾದ ಆರೋಪದ ಮೇಲೆ, ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಅವರು ಸಿಸಿಬಿ ವಿಭಾಗಕ್ಕೆ 'ಮೇಜರ್ ಸರ್ಜರಿ' ನಡೆಸಿದ್ದಾರೆ. ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ 10ಕ್ಕೂ ಹೆಚ್ಚು ಸಿಬ್ಬಂದಿಗಳನ್ನು ಏಕಕಾಲದಲ್ಲಿ ವರ್ಗಾವಣೆ ಮಾಡಿದ್ದಾರೆ.
06:08 PM (IST) Feb 06
'ಸಪ್ತಸಾಗರದಾಚೆ ಎಲ್ಲೋ' ಸಹನಟ ರಕ್ಷಿತ್ ಶೆಟ್ಟಿ ಅವರ ವಿಭಿನ್ನ ವ್ಯಕ್ತಿತ್ವದ ಬಗ್ಗೆ ನಟಿ ರುಕ್ಮಿಣಿ ವಸಂತ್ ಮಾತನಾಡಿದ್ದಾರೆ. ಸಿನಿಮಾ ಶೂಟಿಂಗ್ನಲ್ಲಿ ಮಧ್ಯರಾತ್ರಿ 2 ಗಂಟೆಗೆ ನಡೆದ ಘಟನೆಯ ಬಗ್ಗೆಯೂ ಅವರು ವಿವರಿಸಿದ್ದಾರೆ.
06:04 PM (IST) Feb 06
05:28 PM (IST) Feb 06
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ತವರು ಕ್ಷೇತ್ರ ಶಿಕಾರಿಪುರದಲ್ಲಿ ಅಕ್ರಮ ನಾಡ ಬಂದೂಕು ತಯಾರಿಕಾ ಜಾಲವೊಂದು ಪತ್ತೆಯಾಗಿದೆ. ಭದ್ರಾಪುರ ಗ್ರಾಮದ ಕಾರ್ಪೆಂಟರ್ ಲಕ್ಷ್ಮಣಪ್ಪ ಎಂಬಾತನನ್ನು ಬಂಧಿಸಿದ್ದು, ಈತ ಗುಜರಿ ಸಾಮಾನು ಬಳಸಿ ಬಂದೂಕು ತಯಾರಿಸಿ ರೈತರಿಗೆ ಮಾರಾಟ ಮಾಡುತ್ತಿದ್ದ.
05:25 PM (IST) Feb 06
05:10 PM (IST) Feb 06
ಬೆಂಗಳೂರು ಮೆಟ್ರೋ ದರ ಏರಿಕೆಗೆ ರಾಜ್ಯ ಸರ್ಕಾರ ಕಾರಣವಲ್ಲ, ಇದು ಕೇಂದ್ರ ಸರ್ಕಾರ ನೇಮಿಸಿದ ಸಮಿತಿಯ ಆದೇಶ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಈ ವಿಚಾರದಲ್ಲಿ ಜನರನ್ನು ದಾರಿ ತಪ್ಪಿಸುತ್ತಿರುವ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
04:59 PM (IST) Feb 06
ಸ್ಟ್ರಾಬೆರಿಗಳು ಪೋಷಕಾಂಶಗಳಿಂದ ಸಮೃದ್ಧವಾಗಿರುವ ಒಂದು ಸೂಪರ್ಫುಡ್. ಇದರಲ್ಲಿ ವಿಟಮಿನ್ ಸಿ, ಆ್ಯಂಟಿಆಕ್ಸಿಡೆಂಟ್ಗಳು ಮತ್ತು ಫೈಬರ್ ಹೇರಳವಾಗಿದ್ದು, ಹೃದಯದ ಆರೋಗ್ಯ, ಜೀರ್ಣಕ್ರಿಯೆ, ರೋಗನಿರೋಧಕ ಶಕ್ತಿ ಮತ್ತು ಚರ್ಮದ ಆರೋಗ್ಯಕ್ಕೆ ಅಗತ್ಯವಾಗಿದೆ.
04:44 PM (IST) Feb 06
ಮೇಘಾಲಯದ ದುರ್ಗಮ ಸೀಜ್ ಗ್ರಾಮದಲ್ಲಿ ಮರದ ಬೇರುಗಳಿಂದ ನೈಸರ್ಗಿಕ ಸೇತುವೆ ನಿರ್ಮಿಸಿ ಪದ್ಮಶ್ರೀ ಪುರಸ್ಕೃತ ಹ್ಯಾಲಿ ವಾರ್ ಅವರ ಸಾಧನೆಯನ್ನು ಕರ್ನಾಟಕದ ಮಾಧ್ಯಮ ಪ್ರತಿನಿಧಿಗಳ ತಂಡ ವೀಕ್ಷಿಸಿತು. ಪ್ರಕೃತಿಯ ಒಡನಾಟದಿಂದ 70 ಅಡಿ ಉದ್ದದ ಬೇರಿನ ಸೇತುವೆ ನಿರ್ಮಿಸಿರುವ ಅವರ ಜೀವನಗಾಥೆ ಇಲ್ಲಿದೆ.
04:20 PM (IST) Feb 06
ಗಂಗಾವತಿ ತಾಲೂಕಿನ ಸಾಣಾಪೂರ ಬಳಿ ಇಸ್ರೇಲ್ ಮಹಿಳೆ ಮೇಲೆ ಅತ್ಯಾ೧ಚಾರ ಮತ್ತು ಯುವಕನ ಕೊಲೆ ಪ್ರಕರಣದಲ್ಲಿ, ಗಂಗಾವತಿ ನ್ಯಾಯಾಲಯವು ಮೂವರು ಆರೋಪಿಗಳನ್ನು ದೋಷಿಗಳೆಂದು ತೀರ್ಪು ನೀಡಿದೆ. ಘಟನೆ ನಡೆದ 9 ತಿಂಗಳೊಳಗೆ ತನಿಖೆ ಪೂರ್ಣಗೊಂಡಿದ್ದು, ಫೆಬ್ರವರಿ 16 ರಂದು ಶಿಕ್ಷೆಯ ಪ್ರಮಾಣ ಪ್ರಕಟವಾಗಲಿದೆ.
04:19 PM (IST) Feb 06
ಐತಿಹಾಸಿಕ ಲಕ್ಕುಂಡಿಯಲ್ಲಿ ₹10 ಕೋಟಿ ವೆಚ್ಚದಲ್ಲಿ 'ಪಂಚ ದೇವಾಲಯ' ಮತ್ತು 'ಪಂಚ ಬಾವಿ' ಅಭಿವೃದ್ಧಿ ಯೋಜನೆಗೆ ಸಚಿವ ಎಚ್.ಕೆ. ಪಾಟೀಲ ಚಾಲನೆ ನೀಡಿದರು. ಲಕ್ಕುಂಡಿಯ 101 ದೇವಾಲಯಗಳು ಮತ್ತು 101 ಬಾವಿಗಳ ಉತ್ಖನನಕ್ಕಾಗಿ ಗ್ರಾಮವನ್ನು ಸ್ಥಳಾಂತರಿಸಿ 'ನವ ಲಕ್ಕುಂಡಿ' ನಿರ್ಮಿಸುವ ಪ್ರಸ್ತಾಪವೂ ಚರ್ಚೆಯಲ್ಲಿದೆ.
03:53 PM (IST) Feb 06
03:43 PM (IST) Feb 06
ನಿರ್ಮಾಪಕ ಅರವಿಂದ ರೆಡ್ಡಿಗೆ ಕೋಟಿ ಹಣಕ್ಕೆ ಬೇಡಿಕೆಯಿಟ್ಟ ಬೆದರಿಕೆ ಪತ್ರ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ಪೊಲೀಸರು ಈ ಸಂಬಂಧ ಸ್ಯಾಂಡಲ್ವುಡ್ ನಟಿಯ ಗೆಳೆಯ ವೈಶಾಕ್ನನ್ನು ಆಕೆಯ ಮನೆಯಿಂದಲೇ ಬಂಧಿಸಿದ್ದಾರೆ. ಈ ಬಂಧನವು ಪ್ರಕರಣದಲ್ಲಿ ನಟಿಯ ಪಾತ್ರದ ಬಗ್ಗೆ ಹಲವು ಅನುಮಾನಗಳನ್ನು ಹುಟ್ಟುಹಾಕಿದೆ.
03:18 PM (IST) Feb 06
ಇತ್ತೀಚೆಗೆ ನಂದಗೋಕುಲ ಧಾರಾವಾಹಿಯಲ್ಲಿ ಮೂರನೇ ಮಗ ಮಾಧವನ ಮದುವೆ ಆಗಿದೆ. ನಟಿ ಕೃಷ್ಣಪ್ರಿಯಾ ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ನಟಿ ಅಮೃತಾ ರೂಪೇಶ್ ಕೂಡ ಶುಭಾಶಯ ತಿಳಿಸಿದ್ದಾರೆ.
03:12 PM (IST) Feb 06
ಘಾಜಿಯಾಬಾದ್ನಲ್ಲಿ ಮೂವರು ಅಪ್ರಾಪ್ತ ಸಹೋದರಿಯರು ಆತ್ಮ*ಹತ್ಯೆ ಮಾಡಿಕೊಂಡಿದ್ದಾರೆ. ಕೊರಿಯನ್ ಸೀರೀಸ್ ಮತ್ತು ಗೇಮ್ಗಳಿಗೆ ದಾಸರಾಗಿದ್ದೇ ಸಾವಿಗೆ ಕಾರಣ ಎಂದು ಹೇಳಲಾಗುತ್ತಿದೆ. ಆದರೆ, ಅಸಲಿ ಕಾರಣವನ್ನು ಇದೀಗ ಅವರ ತಂದೆಯೇ ಪೊಲಿಸರ ಮುಂದೆ ರಿವೀಲ್ ಮಾಡಿದ್ದಾರೆ.
02:42 PM (IST) Feb 06
Bigg Boss Akanksha Chamola: ಸುದ್ದಿಗೋಷ್ಠಿಯಲ್ಲಿ ನಟಿ ಆಕಾಂಕ್ಷಾ ಅವರು ಇಬ್ಬರು ನಟರ ಜೊತೆ ಡ್ಯಾನ್ಸ್ ಮಾಡಿರುವ ವಿಡಿಯೋ ವೈರಲ್ ಆಗ್ತಿದೆ. ಮಗು ಮಾಡಿಕೊಂಡಿಲ್ಲ, ಆದರೆ ಹೀಗೆಲ್ಲ ಡ್ಯಾನ್ಸ್ ಮಾಡುತ್ತಿರುವುದು ಸರಿಯೇ ಎಂದು ಅನೇಕರು ಕಾಮೆಂಟ್ ಹಾಕುತ್ತಿದ್ದಾರೆ.
02:14 PM (IST) Feb 06
ಲಕ್ಕುಂಡಿ ಗತವೈಭವ: ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ ಪಂಚ ದೇವಾಲಯ ಮತ್ತು ಪಂಚ ಬಾವಿಗಳ ಅಭಿವೃದ್ಧಿಗೆ ಸಚಿವ ಎಚ್ಕೆ ಪಾಟೀಲ್ ಮತ್ತು ಶಾಸಕ ಸಿಸಿ ಪಾಟೀಲ್ ಚಾಲನೆ ನೀಡಿದರು. ಉತ್ಖನನದಲ್ಲಿ ಸುಮಾರು 45 ಪ್ರಾಚ್ಯಾವಶೇಷಗಳು ಪತ್ತೆಯಾಗಿದ್ದು, ಗ್ರಾಮಸ್ಥರಿಂದ 'ನವ ಲಕ್ಕುಂಡಿ' ನಿರ್ಮಾಣಕ್ಕೆ ಮನವಿ
01:38 PM (IST) Feb 06
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪೂರ್ಣ 5 ವರ್ಷಗಳ ಕಾಲ ಅಧಿಕಾರದಲ್ಲಿ ಮುಂದುವರಿಯಲಿದ್ದಾರೆ ಎಂದು ಅವರ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಹೈಕಮಾಂಡ್ ಈ ಬಗ್ಗೆ ಈಗಾಗಲೇ ತೀರ್ಮಾನಿಸಿದ್ದು, ಎರಡೂವರೆ ವರ್ಷಗಳ ಅಧಿಕಾರ ಹಂಚಿಕೆಯ ಊಹಾಪೋಹಗಳಿಗೆ ಅವರು ತೆರೆ ಎಳೆದಿದ್ದಾರೆ.
01:15 PM (IST) Feb 06
Lecture Video Viral: ಬೇಲಿಯೇ ಎದ್ದು ಹೊಲ ಮೇಯ್ದರೇ ಎಂಬ ಗಾದೆಯನ್ನು ಕೇಳುತ್ತೀರಿ. ಅಂತೆಯೇ ವಿದ್ಯೆ ಕಲಿಸುವ ಶಿಕ್ಷಕ, ಯುವತಿ ಜೊತೆ ಅಸಭ್ಯವಾಗಿ ನಡೆದುಕೊಂಡ ಘಟನೆ ಸಾಗರದಲ್ಲಿ ನಡೆದಿದೆ. ಆಮೇಲೆ ಯುವಕರ ಗುಂಪೊಂದು ಗೂಸಾ ನೀಡಿದೆ.
12:47 PM (IST) Feb 06
12:34 PM (IST) Feb 06
ಬಿಗ್ ಬಾಸ್ ಕನ್ನಡ ಸೀಸನ್ 12 ಶೋ ಮುಗಿದು, ಸ್ಪರ್ಧಿಗಳೆಲ್ಲರೂ ಅವರವರ ಕೆಲಸದಲ್ಲಿ ಬ್ಯುಸಿಯಿದ್ದಾರೆ. ಹೀಗಿರುವಾಗ ಇವರೆಲ್ಲರೂ ಒಟ್ಟಿಗೆ ಸೇರಿರುವ ಫೋಟೋಗಳು ವೈರಲ್ ಆಗ್ತಿದೆ. ಹಾಗಾದರೆ ಇದರ ಹಿಂದಿನ ಕಥೆ ಏನು?
12:29 PM (IST) Feb 06
ಬೆಂಗಳೂರು ವಿಮಾನ ನಿಲ್ದಾಣದಲ್ಲಿ, ದುಬೈ ಮೂಲಕ ಅಮೆರಿಕಾಗೆ ತೆರಳುತ್ತಿದ್ದ ಹುಬ್ಬಳ್ಳಿ ಮೂಲದ ಮಹಿಳೆಯ ಲಗೇಜ್ ಬ್ಯಾಗ್ನಿಂದ ಕೋಟಿ ಮೌಲ್ಯದ ಚಿನ್ನ ಮತ್ತು ವಜ್ರಾಭರಣ ಕಳ್ಳತನವಾಗಿದೆ. ಚೆಕ್-ಇನ್ ನಂತರ ಈ ಘಟನೆ ನಡೆದಿದ್ದು, ವಿಮಾನ ನಿಲ್ದಾಣದ ಸಿಬ್ಬಂದಿಯ ಮೇಲೆ ಶಂಕೆ ವ್ಯಕ್ತವಾಗಿದೆ.
12:15 PM (IST) Feb 06
ಕಾರವಾರದ ತ್ಯಾಜ್ಯ ಘಟಕದಲ್ಲಿ ಅಗ್ನಿ ಅವಘಡ: ಶಿರವಾಡದ ಡಂಪಿಂಗ್ ಯಾರ್ಡ್ನಲ್ಲಿ ಸಂಭವಿಸಿದ ಭಾರೀ ಅಗ್ನಿ ಅವಘಡವನ್ನು ಕಾರವಾರ, ಅಂಕೋಲಾ ಮತ್ತು ಬಿಣಗಾದ ಅಗ್ನಿಶಾಮಕ ದಳದ ಸಿಬ್ಬಂದಿ ಜಂಟಿ ಕಾರ್ಯಾಚರಣೆ ನಡೆಸಿ ಹತೋಟಿಗೆ ತಂದಿದ್ದಾರೆ.ಘಟನೆ ರಣಭೀಕರ ದೃಶ್ಯಗಳು ಇಲ್ಲಿವೆ ನೋಡಿ!
12:07 PM (IST) Feb 06
ಬೆಸ್ಕಾಂನ 66/11 ಕೆ.ವಿ ರಾಜರಾಜೇಶ್ವರಿ ನಗರ, 66/11 ಕೆ.ವಿ ಬನಶಂಕರಿ, 66/11 ಕೆ.ವಿ ಸರ್.ಎಂ.ವಿ. ಲೇಔಟ್ ಮತ್ತು 220/66/11 ಕೆ.ವಿ ವೃಷಭಾವತಿ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಹಿನ್ನೆಲೆ ಫೆ.7ರಂದು ಬೆಳಗ್ಗೆ 10ರಿಂದ ಸಂಜೆ 5ರ ವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
12:03 PM (IST) Feb 06
Vijayalakshmi Darshan Case: ನಟ ದರ್ಶನ್ ತೂಗುದೀಪ ಅವರು ಜೈಲಿನಲ್ಲಿದ್ದರೆ, ಪತ್ನಿ ವಿಜಯಲಕ್ಷ್ಮೀ ಅವರು ನನಗೆ ನೆಗೆಟಿವ್ ಕಾಮೆಂಟ್ಸ್ ಬರುತ್ತಿದೆ ಎಂದು ದೂರು ನೀಡಿದ್ದರು. ಈಗ ಪೊಲೀಸರು ವಿಜಯಲಕ್ಷ್ಮೀ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಅಂಥದ್ದು ಏನಾಯ್ತು?
11:40 AM (IST) Feb 06
ದಾವಣಗೆರೆ: ದಾವಣಗೆರೆಯ ಪ್ರತಿಭಾನ್ವಿತ ಇಂಜಿನಿಯರಿಂಗ್ ವಿದ್ಯಾರ್ಥಿನಿ ಆಂಚಲ್ ಕುಮಾರಿ ಇಂದು ತಮ್ಮ 26ನೇ ವಯಸ್ಸಿಗೆ ಜೈನ ಸನ್ಯಾಸಿ ದೀಕ್ಷೆ ಸ್ವೀಕರಿಸುತ್ತಿದ್ದಾರೆ. ಈ ಕುರಿತಾದ ಡೀಟೈಲ್ಸ್ ಇಲ್ಲಿದೆ ನೋಡಿ.
11:40 AM (IST) Feb 06
ಮಲೆ ಮಹದೇಶ್ವರ ಬೆಟ್ಟದ ಶಿವರಾತ್ರಿ ಜಾತ್ರೆಗೆ ಲಕ್ಷಾಂತರ ಭಕ್ತರು ಕಾಲ್ನಡಿಗೆಯಲ್ಲಿ ಸಾಗುತ್ತಿದ್ದಾರೆ. ಇತ್ತೀಚಿನ ಚಿರತೆ ದಾಳಿಯ ಹಿನ್ನೆಲೆ ಅರಣ್ಯ ಇಲಾಖೆ ಭಕ್ತರ ಸುರಕ್ಷತೆಗೆ ತಾಳುಬೆಟ್ಟದಿಂದ ಬೆಟ್ಟದವರೆಗೆ 8 ವಿಶೇಷ ಸಶಸ್ತ್ರ ತಂಡ ನಿಯೋಜಿಸಿ, ಡ್ರೋನ್ ಕ್ಯಾಮೆರಾಗಳ ಮೂಲಕ ಹೈಟೆಕ್ ಕಣ್ಗಾವಲು ಇರಿಸಿದೆ.
11:36 AM (IST) Feb 06
Actress Radhika Pandit Photos: ನಟಿ ರಾಧಿಕಾ ಪಂಡಿತ್ ಮನೆಯಲ್ಲಿ ಡಬಲ್ ಸಂಭ್ರಮ ಎನ್ನಬಹುದು. ಸೋಶಿಯಲ್ ಮೀಡಿಯಾದಲ್ಲಿ ಆಕ್ಟಿವ್ ಆಗಿರುವ ಅವರು ಈ ಬಗ್ಗೆ ಖುಷಿಯನ್ನು ಹಂಚಿಕೊಂಡಿದ್ದಾರೆ.
10:50 AM (IST) Feb 06
Astrologer Kamalakar Bhat Suchitra: ಸಿದ್ದಾಪುರ ಮೂಲದ ಕಮಲಾಕರ್ ಭಟ್ ಹಾಗೂ ಸುಚಿತ್ರಾ ಅಕ್ರಮ ಸಂಬಂಧದಿಂದ ಒಂದು ಕೊಲೆ ಆಗಿದೆ. ಸುಚಿತ್ರಾರ ಅಕ್ರಮ ಸಂಬಂಧದಿಂದ ಬೇಸತ್ತ ಮಗಳು ಸುಮಶ್ರೀ ಕೂಡ ತಾಯಿ ಬಗ್ಗೆ ಮಾಧ್ಯಮದ ಮುಂದೆ ಮಾತನಾಡಿದ್ದಾರೆ. ಕಮಲಾಕರ್, ಸುಚಿತ್ರಾರ ಆಡಿಯೋ ಕೂಡ ವೈರಲ್ ಆಗ್ತಿದೆ.
10:44 AM (IST) Feb 06
ಬಿಜೆಪಿಯು ತನ್ನ ಹೊಸ ಜಾಹೀರಾತಿನಲ್ಲಿ ಮಹಾತ್ಮ ಗಾಂಧೀಜಿಯವರು ಕಾಂಗ್ರೆಸ್ ನಾಯಕರಿಗೆ ದೊಣ್ಣೆಯಿಂದ ಹೊಡೆಯುತ್ತಿರುವಂತೆ ಚಿತ್ರಿಸಿ ವಿವಾದ ಸೃಷ್ಟಿಸಿದೆ. ಈ ಜಾಹೀರಾತಿಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಸಚಿವ ಪ್ರಿಯಾಂಕ್ ಖರ್ಗೆ, ಇದು ಗಾಂಧಿವಾದದ ಹತ್ಯೆ ಎಂದು ಕಿಡಿಕಾರಿದ್ದಾರೆ.
10:27 AM (IST) Feb 06
ವಿಶ್ವದ 3ನೇ ಅತಿದೊಡ್ಡ ಆರ್ಥಿಕತೆಯತ್ತ ದೇಶವನ್ನು ಕೊಂಡೊಯ್ಯಲು ಅರ್ಥವ್ಯವಸ್ಥೆಗೆ ಮತ್ತಷ್ಟು ಬಲ ತುಂಬಲು ಮುಂದಾಗಿರುವ ಭಾರತ, ಶೀಘ್ರವೇ ಇನ್ನೂ 11 ದೇಶಗಳೊಂದಿಗೆ ಶೀಘ್ರವೇ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕುವತ್ತ ಹೆಜ್ಜೆ ಇಟ್ಟಿದೆ.