ಬೆಂಗಳೂರು: ರಾಜ್ಯ ಬಿಜೆಪಿ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಮಾಜಿ ಸಚಿವರಾದ ಎಂ.ಪಿ.ರೇಣುಕಾಚಾರ್ಯ ನಡುವಿನ ವಾಕ್ಸಮರ ಮುಂದುವರಿದಿದೆ. ಬಸನಗೌಡ ಪಾಟೀಲ್ ಯತ್ನಾಳ್ ಅರೆ ಹುಚ್ಚನಾಗಿದ್ದು, ಅವರನ್ನು ಹುಚ್ಚಾಸ್ಪತ್ರೆಗೆ ಸೇರಿಸಬೇಕು ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ. ಇತ್ತ ಯತ್ನಾಳ್, ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ತಂಡ ನಡೆಸಿದ ಸಭೆಯಲ್ಲಿದ್ದವರು ರೆಡಿಮೇಡ್ ಸ್ವಾಮೀಜಿಗಳು. ಸಭೆಯಲ್ಲಿ ಯಾವುದೇ ಪ್ರತಿಷ್ಠಿತ ಸ್ವಾಮೀಜಿಗಳು ಇರಲಿಲ್ಲ ಎಂದು ಲೇವಡಿ ಮಾಡಿದ್ದಾರೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ ಸೇರಿದಂತ ಹಲವು ಶಿಫಾರಸುಗಳನ್ನು ಒಳಗೊಂಡ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕವನ್ನು ಪರಿಶೀಲನಾ ಸಮಿತಿ ಅಧ್ಯಕ್ಷ, ಶಾಸಕ ರಿಜ್ವಾನ್ ಅರ್ಷದ್ ಪರಿಶೀಲನಾ ವರದಿ ಮಂಡಿಸಿದ್ದಾರೆ. ಈ ದಿನದ ಪ್ರಮುಖ ಘಟನೆಗಳ ಕುರಿತ ಮಾಹಿತಿ ಇಲ್ಲಿದೆ .

10:34 PM (IST) Mar 06
ನಟಿ ನೀತು ಚಂದ್ರ ಹನಿ ಸಿಂಗ್ ಅವರ 'ಮ್ಯಾನಿಯಕ್' ಹಾಡಿನಲ್ಲಿ ಅಶ್ಲೀಲತೆಯಿದೆ ಎಂದು ಆರೋಪಿಸಿ ಪಾಟ್ನಾ ಹೈಕೋರ್ಟ್ನಲ್ಲಿ PIL ಸಲ್ಲಿಸಿದ್ದಾರೆ. ಹಾಡು ಮಹಿಳೆಯರನ್ನು ಲೈಂಗಿಕ ವಸ್ತುಗಳಾಗಿ ತೋರಿಸುತ್ತದೆ ಎಂದು ಅವರು ವಾದಿಸಿದ್ದಾರೆ.
ಪೂರ್ತಿ ಓದಿ08:22 PM (IST) Mar 06
ಪಿಎಫ್ಐ ಬ್ಯಾನ್ ಬಳಿಕ ಎಸ್ಡಿಪಿಐ ಮೇಲೆ ಭಯೋತ್ಪಾದನೆಯ ಆರೋಪ ಕೇಳಿಬಂದಿದೆ. ಎಸ್ಡಿಪಿಐ ಮುಖವಾಡದಲ್ಲಿ ಪಿಎಫ್ಐ ಕಾರ್ಯಚಟುವಟಿಕೆ ಮುಂದುವರೆದಿದೆ ಎಂಬ ಅನುಮಾನ ವ್ಯಕ್ತವಾಗಿದೆ. ಎಸ್ಡಿಪಿಐ ರಾಷ್ಟ್ರೀಯ ಅಧ್ಯಕ್ಷರ ಬಂಧನ ಮತ್ತು ಕಚೇರಿಗಳ ಮೇಲೆ ಇ.ಡಿ ದಾಳಿ ನಡೆದಿದೆ.
ಪೂರ್ತಿ ಓದಿ07:13 PM (IST) Mar 06
ಬಳ್ಳಾರಿ ಮೂಲದ ಯೂಟ್ಯೂಬರ್ ಸೌಜನ್ಯ ಕೇಸ್ ವಿಚಾರದೊಂದಿಗೆ ಧರ್ಮಸ್ಥಳದ ಬಗ್ಗೆ ಮಾತನಾಡಿದ್ದು ವೈರಲ್ ಆಗಿದೆ. ಹೈಕೋರ್ಟ್ ಈ ಪ್ರಕರಣದ ಮರು ತನಿಖೆ ಸಾಧ್ಯವಿಲ್ಲ ಎಂದು ತೀರ್ಪು ನೀಡಿದೆ. ತನಿಖಾ ತಂಡದ ವೈಫಲ್ಯವೇ ಪ್ರಕರಣ ಹಳ್ಳ ಹಿಡಿಯಲು ಕಾರಣವೆಂದು ಹೇಳಲಾಗಿದೆ.
ಪೂರ್ತಿ ಓದಿ05:24 PM (IST) Mar 06
ಸೌಂದರ್ಯಕ್ಕೆ ಹಲವು ರೀತಿಯ ವ್ಯಾಖ್ಯಾನಗಳು ಇದ್ದರೂ, ಸಾಮಾನ್ಯವಾಗಿ ಸುಂದರಿಯರು ಎಂದು ಕರೆಸಿಕೊಳ್ಳುವ ಪೈಕಿ ಭಾರತದ ಯಾವ ರಾಜ್ಯಗಳು ಟಾಪ್ 1ನಲ್ಲಿ ಇವೆ? ಇಲ್ಲಿದೆ ಡಿಟೇಲ್ಸ್...
04:00 PM (IST) Mar 06
ಚಿಕ್ಕಬಳ್ಳಾಪುರದಲ್ಲಿ ವೃದ್ಧೆಯ ಶವವನ್ನು ಹೂಳಲು ಆಕೆಯ ಮಕ್ಕಳು ಹಣಕ್ಕಾಗಿ ಪಟ್ಟು ಹಿಡಿದ ಘಟನೆ ನಡೆದಿದೆ. ಆಸ್ತಿ ವಿಚಾರದಲ್ಲಿ ಭಿನ್ನಾಭಿಪ್ರಾಯವಿದ್ದ ಕಾರಣ ಶವ ಹೂಳಲು ಅಡ್ಡಿಪಡಿಸಿದ ಗಂಡು ಮಕ್ಕಳು, ನಂತರ ತಹಶೀಲ್ದಾರ್ ಮಧ್ಯಪ್ರವೇಶದಿಂದ ಅಂತ್ಯಕ್ರಿಯೆ ನಡೆಯಿತು.
ಪೂರ್ತಿ ಓದಿ02:06 PM (IST) Mar 06
Bengaluru Theft Case: ಬೆಂಗಳೂರಿನ ಹೊರವಲಯದಲ್ಲಿರುವ ಗೋದಾಮಿನಿಂದ 830 ಕೆಜಿ ತೂಕದ, 1 ಕೋಟಿ ರೂ. ಮೌಲ್ಯದ ಕೂದಲನ್ನು ಕಳ್ಳತನ ಮಾಡಲಾಗಿದೆ. ಎಸ್ಯುವಿ ಕಾರಿನಲ್ಲಿ ಬಂದ ಆರು ಜನರು ಈ ಕೃತ್ಯ ಎಸಗಿದ್ದು, ಸಿಸಿಟಿವಿಯಲ್ಲಿ ದೃಶ್ಯಗಳು ಸೆರೆಯಾಗಿವೆ.
ಪೂರ್ತಿ ಓದಿ01:36 PM (IST) Mar 06
ಸಿಟಿ ರವಿ ಅವರು ಮತೀಯ ಆಧಾರದ ಮೀಸಲಾತಿಯನ್ನು ವಿರೋಧಿಸಿದ್ದು, ಇದು ಸಂವಿಧಾನ ಮತ್ತು ಅಂಬೇಡ್ಕರ್ ಚಿಂತನೆಗೆ ವಿರುದ್ಧವಾಗಿದೆ ಎಂದು ಹೇಳಿದ್ದಾರೆ. ಹುಬ್ಬಳ್ಳಿ ಪೊಲೀಸ್ ಠಾಣೆ ದಾಳಿಯ ಆರೋಪಿಗಳ ಕೇಸ್ ಹಿಂಪಡೆದಿರುವ ಕಾಂಗ್ರೆಸ್ ಸರ್ಕಾರದ ನಡೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.
ಪೂರ್ತಿ ಓದಿ12:39 PM (IST) Mar 06
Tejasvi Surya Marriage: ಬಿಜೆಪಿ ಯುವ ಘಟಕದ ಅಧ್ಯಕ್ಷ ತೇಜಸ್ವಿ ಸೂರ್ಯ ಮತ್ತು ಗಾಯಕಿ ಶಿವಶ್ರೀ ಸ್ಕಂದ ಪ್ರಸಾದ್ ಅವರ ವಿವಾಹವು ಬೆಂಗಳೂರಿನಲ್ಲಿ ನೆರವೇರಿತು. ಈ ಸಮಾರಂಭದಲ್ಲಿ ರಾಜಕೀಯ ಗಣ್ಯರು ಮತ್ತು ಕುಟುಂಬ ಸದಸ್ಯರು ಭಾಗವಹಿಸಿದ್ದರು.
ಪೂರ್ತಿ ಓದಿ11:42 AM (IST) Mar 06
ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರು ಗಾಯಕಿ ಶಿವಶ್ರೀ ಸ್ಕಂದ ಪ್ರಸಾದ್ ಅವರೊಂದಿಗೆ ವಿವಾಹವಾಗಿದ್ದಾರೆ. ಕನಕಪುರ ರಸ್ತೆಯ ರೆಸಾರ್ಟ್ನಲ್ಲಿ ನಡೆದ ಸರಳ ವಿವಾಹದಲ್ಲಿ ಕುಟುಂಬ ಸದಸ್ಯರು ಮತ್ತು ಆಪ್ತರು ಭಾಗವಹಿಸಿದ್ದರು.
ಪೂರ್ತಿ ಓದಿ09:57 AM (IST) Mar 06
ದಕ್ಷಿಣ ಕನ್ನಡ ಸೌಜನ್ಯ ಪ್ರಕರಣದ ಬಗ್ಗೆ ವಿಡಿಯೋ ಮಾಡಿದ ಸಮೀರ್ ಎಂಡಿ ಅವರಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ. ಜೀವ ಬೆದರಿಕೆ ಕರೆಗಳು ಬಂದಿವೆ ಎಂದುಸಮೀರ್ ಎಂ.ಡಿ. ಹೇಳಿಕೆ ನೀಡಿದ್ದಾರೆ.
ಪೂರ್ತಿ ಓದಿ07:41 AM (IST) Mar 06
ಚಿಕ್ಕನಾಯಕನಹಳ್ಳಿಯ ಉಪನೋಂದಣಾಧಿಕಾರಿ ಕಚೇರಿಯಲ್ಲಿ ಭ್ರಷ್ಟ ಅಧಿಕಾರಿಯ ಹಣದ ದಾಹಕ್ಕೆ ಬೇಸತ್ತ ರೈತರು, ಸಾರ್ವಜನಿಕರು ಕೆಆರ್ಎಸ್ ಪಕ್ಷದ ನೇತೃತ್ವದಲ್ಲಿ ಚಿಲ್ಲರೆ ಹಣ ಸುರಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಧಿಕಾರಿ ರಾಘವೇಂದ್ರ ಒಡೆಯರ್ ವಿರುದ್ಧ ಭ್ರಷ್ಟಾಚಾರದ ಆರೋಪ ಕೇಳಿಬಂದಿದೆ.
ಪೂರ್ತಿ ಓದಿ