ಉಡುಪಿ: ಆಯತಪ್ಪಿ ಬಾವಿಗೆ ಬಿದ್ದಿದ್ದ ವೃದ್ಧರೊಬ್ಬರು 3 ದಿನ ಪಂಪ್ ಮೇಲೆ ಕೂತು ಜೀವ ಉಳಿಸಿಕೊಂಡ ಘಟನೆ ಉಡುಪಿಯಲ್ಲಿ ನಡೆದಿದೆ. ಶ್ರೀನಿವಾಸ ಆಚಾರ್ಯ (63) ಸಾವನ್ನು ಗೆದ್ದು ಬಂದವರು. ನಿರ್ಜನ ಪ್ರದೇಶದ ಮನೆಯಲ್ಲಿ ಒಂಟಿಯಾಗಿ ವಾಸವಿದ್ದ ಅವರು, ತೋಟಕ್ಕೆ ನೀರುಣಿಸಲು ಹೋದಾಗ ಆಯತಪ್ಪಿ ಬಾವಿಗೆ ಬಿದ್ದಿದ್ದರು.
30 ಅಡಿಯ ಬಾವಿಯಲ್ಲಿ ಸಾಕಷ್ಟು ನೀರಿತ್ತು. ಆಗ ಅದರಲ್ಲಿದ್ದ ಸಬ್ ಮರ್ಸಿಬಲ್ ಪಂಪಿನ ಮೇಲೆ ಕುಳಿತು ಮೇಲೆತ್ತುವಂತೆ ಕೂಗಿದರೂ, ಯಾರಿಗೂ ಕೇಳಲಿಲ್ಲ. ಗ್ಯಾಸ್ ಏಜೆನ್ಸಿಯವರು ಸಿಲಿಂಡರ್ ನೀಡಲು ಬಂದಾಗ ಮನೆಯಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿ ತೋಟದಲ್ಲಿ ಹುಡುಕಿದಾಗ ಆಚಾರ್ಯರು ಪಂಪಿನ ಮೇಲೆ ಕೂತಿರೋದು ಕಂಡುಬಂತು. ಅಗ್ನಿಶಾಮಕ ದಳ ಸಿಬ್ಬಂದಿ ಕರೆಸಿ ಅವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಯಿತು.
05:16 PM (IST) Apr 07
Actor Akshay Kumar: ಬಾಲಿವುಡ್ ನಟ ಅಕ್ಷಯ್ ಕುಮಾರ್, ನಿರ್ದೇಶಕ ಪ್ರಿಯದರ್ಶನ್ ಅವರ 'ಭೂತ್ ಬಂಗ್ಲಾ' ಸಿನಿಮಾದ ಟ್ರೈಲರ್ ಲಾಂಚ್ಗೆ ಬಂದಿದ್ದರು. ಈ ವೇಳೆ ಅವರು ಹಾಕಿದ್ದ ಶರ್ಟ್ ನೋಡಿ ಜನ ಸಿಕ್ಕಾಪಟ್ಟೆ ಟ್ರೋಲ್ ಮಾಡುತ್ತಿದ್ದಾರೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ.
04:36 PM (IST) Apr 07
04:13 PM (IST) Apr 07
ಥಾವರ್ ಚಂದ್ ಗೆಹ್ಲೋಟ್ರವರಿಂದ ಶ್ರೀ ಮಲೆ ಮಹದೇಶ್ವರ ಬೆಟ್ಟದ ಶ್ರೀ ಸಾಲೂರು ಬೃಹನ್ಮಠ ಪೀಠಾಧಿಪತಿಗಳಾದ ಡಾ.ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮಿಗಳು ವಿದ್ಯಾವಾರಾಧಿ ( ಪಿಎಚ್ಡಿ) ಪದವಿ ಪ್ರಮಾಣಪತ್ರ ಪಡೆದರು.
04:10 PM (IST) Apr 07
04:02 PM (IST) Apr 07
03:36 PM (IST) Apr 07
ಚಿಕ್ಕಮಗಳೂರಿನ ಶೃಂಗೇರಿ ಶಾರದಾಂಬೆ ದೇಗುಲದ ಬಳಿಯ ಅಂಗಡಿಯೊಂದರಲ್ಲಿ ಕಳ್ಳನೊಬ್ಬ 10 ಕೆಜಿಗೂ ಅಧಿಕ ಬಾದಾಮಿ, ಪಿಸ್ತಾ, ಗೋಡಂಬಿ ಹಾಗೂ 80 ಸಾವಿರ ನಗದನ್ನು ಕದ್ದೊಯ್ದಿದ್ದಾನೆ. ಕಳ್ಳತನದ ಈ ಕೃತ್ಯವು ಅಂಗಡಿಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ..
03:29 PM (IST) Apr 07
ಹೆಣ್ಣು ಮಕ್ಕಳೇ ಸೋಷಿಯಲ್ ಮೀಡಿಯಾದಲ್ಲಿ ಯಾರನ್ನಾದರೂ ಪರಿಚಯ ಮಾಡಿಕೊಳ್ಳುವ ಮುನ್ನ ಎಚ್ಚರ. ಅದರಲ್ಲೂ ಅಪರಿಚಿತ ಹುಡುಗ ಹ್ಯಾಂಡ್ಸಮ್ ಆಗಿದ್ದಾನೆ ಅಂತಾ ಮರುಳಾದ್ರೆ ನಿಮ್ಮ ಕಥೆ ಗೋವಿಂದ.
03:01 PM (IST) Apr 07
ಜನ ನಮ್ಮ ಗ್ಯಾರಂಟಿಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಈ ಉಪ ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳು ಗೆಲ್ಲುವುದು ಖಚಿತ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.
02:42 PM (IST) Apr 07
ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸೋಲುತ್ತಿದ್ದು, ರಾಜ್ಯದ ಜನತೆ ಕಾಂಗ್ರೆಸ್ ಸರ್ಕಾರದ ಬಗ್ಗೆ ಬೇಸತ್ತಿದ್ದಾರೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದರು.
02:35 PM (IST) Apr 07
ಹುಬ್ಬಳ್ಳಿ-ಧಾರವಾಡದಲ್ಲಿ ಇತ್ತೀಚೆಗೆ ಜಿಮ್ ಟ್ರೇನರ್ಗಳಿಂದ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣಗಳಿಂದಾಗಿ ಪೊಲೀಸರು ಜಿಮ್ಗಳ ಮೇಲೆ ಗುಮಾನಿ ವ್ಯಕ್ತಪಡಿಸಿದ್ದಾರೆ. ಈ ಘಟನೆಗಳು ಜಿಮ್ಗಳ ಸುರಕ್ಷತೆ, ತರಬೇತುದಾರರ ಅರ್ಹತೆ ಮತ್ತು ಅವುಗಳ ಪರವಾನಗಿ ಕುರಿತು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿವೆ.
02:07 PM (IST) Apr 07
ಲಕ್ಷ್ಮೀ ನಿವಾಸ ಧಾರಾವಾಹಿಯಲ್ಲಿ ಜಯಂತ್ ಏನು ಎನ್ನೋದು ಎಲ್ಲರಿಗೂ ಗೊತ್ತಾಗಿದೆ. ಅತ್ತ ಜಾಹ್ನವಿ ಬದುಕಿರುವ ವಿಷಯ ಕೂಡ ಗೊತ್ತಾಗಿದೆ. ಜಯಂತ್ ಹಾಗೂ ಜಾಹ್ನವಿ ಒಟ್ಟಾಗಿ ಬಾಳ್ತಾರಾ ಎಂಬ ಪ್ರಶ್ನೆ ಇದೆ. ಸಂತೋಷ್, ಹರೀಶ್ ತಪ್ಪುಗಳು ಆಗಿದೆ, ಶ್ರೀನಿವಾಸ್ ಷಷ್ಠಿಪೂರ್ತಿಯಲ್ಲೂ ಒಂದು ವಿಷಯ ಮಿಸ್ ಆಗಿದೆ.
01:58 PM (IST) Apr 07
ನಟಿ ಹಾಗೂ ವೈದ್ಯೆ ಶ್ರೀಲೀಲಾ, ಮುಟ್ಟನ್ನು ಒಂದು ನೆಪವಾಗಿ ಬಳಸಬಾರದು ಮತ್ತು ಮಹಿಳೆಯರು ಆ ಸಮಯದಲ್ಲಿ ತಮ್ಮನ್ನು ತಾವು ಹುರಿದುಂಬಿಸಿಕೊಳ್ಳಬೇಕು ಎಂದು ಹೇಳಿದ್ದಾರೆ. ಅವರ ಈ ಹೇಳಿಕೆಗೆ ಪರ-ವಿರೋಧ ಚರ್ಚೆಗಳು ಶುರುವಾಗಿದ್ದು, ಹಲವರು ನಟಿಯ ಮಾತನ್ನು ವಿರೋಧಿಸಿದ್ದು ಏಕೆ?
01:39 PM (IST) Apr 07
01:24 PM (IST) Apr 07
'ಬಾಸ್' ಚಿತ್ರದ ಬಿಡುಗಡೆಗೆ ನಗರದ ಸಿಟಿ ಸಿವಿಲ್ ನ್ಯಾಯಾಲಯ ಮಧ್ಯಂತರ ತಡೆಯಾಜ್ಞೆ ನೀಡಿದೆ. ತಮ್ಮ ಘನತೆಗೆ ಧಕ್ಕೆಯಾಗುತ್ತದೆ ಎಂದು ದರ್ಶನ್ ಮತ್ತು ವಿಜಯಲಕ್ಷ್ಮಿ ಸಲ್ಲಿಸಿದ್ದ ದಾವೆಯ ಮೇರೆಗೆ, ಚಿತ್ರಮಂದಿರ, ಒಟಿಟಿಯಲ್ಲಿ ಚಿತ್ರ ಬಿಡುಗಡೆ ಮಾಡದಂತೆ ನ್ಯಾಯಾಲಯ ನಿರ್ದೇಶಿಸಿದೆ.
01:12 PM (IST) Apr 07
ಸೂರತ್ನ ಐತಿಹಾಸಿಕ ಗೋಪಿಪುರ ಪ್ರದೇಶದ ಜೈನ ಪವಿತ್ರ ಸ್ಥಳಗಳನ್ನು ರಕ್ಷಿಸಲು ನಡೆದ 'ಊರ್ಜಾ ತೀರ್ಥ ಉದ್ಧಾರ್ ಉತ್ಸವ'ದಲ್ಲಿ ಭಕ್ತರು ಅಭೂತಪೂರ್ವವಾಗಿ ಸ್ಪಂದಿಸಿದ್ದಾರೆ. ಜೈನ ಮಹಿಳೆಯರು ಸೇರಿದಂತೆ ನೂರಾರು ಜನರು ತಮ್ಮ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ದಾನ ಮಾಡಿದ್ದಾರೆ.
01:10 PM (IST) Apr 07
ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆ ಹರ್ಮುಜ್ ಜಲಸಂಧಿ ಬಂದ್ ಆಗಿದೆ. ಹೀಗಾಗಿ ಆಟೋ ಚಾಲಕರು ಗ್ಯಾಸ್ ಬಿಟ್ಟು ಪೆಟ್ರೋಲ್ ಬಳಸಬೇಕು ಎಂಬ ಸಚಿವ ಪ್ರಲ್ಹಾದ್ ಜೋಶಿಯವರ ಹೇಳಿಕೆಗೆ ಡಿಸಿಎಂ ಡಿಕೆಶಿ ಅಸಮಾಧಾನ ವ್ಯಕ್ತಪಡಿಸಿದರು
01:06 PM (IST) Apr 07
ಬೆಂಗಳೂರಿನಲ್ಲಿ ಪತ್ನಿ ಕಾವ್ಯಾಳನ್ನು ಕೊಲೆ ಮಾಡಿದ ಆರೋಪದ ಮೇಲೆ ಪತಿ ದನಿಯಪ್ಪನನ್ನು ಬಂಧಿಸಲಾಗಿದೆ. ರಾಜಕೀಯ ಪ್ರವೇಶಿಸಲು ಬೆಂಗಳೂರಿನ ಆಸ್ತಿ ಮಾರಾಟ ಮಾಡಲು ದನಿಯಪ್ಪ ಮುಂದಾಗಿದ್ದು, ಇದಕ್ಕೆ ಪತ್ನಿ ಒಪ್ಪದ ಕಾರಣ ಈ ಕೃತ್ಯ ಎಸಗಿದ್ದಾನೆ ಎಂದು ಶಂಕಿಸಲಾಗಿದೆ.
01:04 PM (IST) Apr 07
ವಿಜಯೇಂದ್ರ ಅವರು ಇಲ್ಲಿ ಅಲ್ಪಸಂಖ್ಯಾತರ ಬಗ್ಗೆ ಮೊಸಳೆ ಕಣ್ಣೀರು ಸುರಿಸುತ್ತಿರುವುದು ಸೋಜಿಗ. ಇವರ ಅಧಿಕಾರಾವಧಿಯಲ್ಲಿ ಅಲ್ಪಸಂಖ್ಯಾತರನ್ನು ಹೇಗೆ ನಡೆಸಿಕೊಟ್ಟಿದ್ದಾರೆ ಎನ್ನುವುದು ಯಾರಾದರೂ ಮರೆಯಲು ಸಾಧ್ಯವೇ? ಎಂದು ಬಿ.ಕೆ.ಹರಿಪ್ರಸಾದ್ ಹೇಳಿದರು.
12:49 PM (IST) Apr 07
ಸ್ವಿಸ್ ಬ್ಯಾಂಕ್ ನಿಂದ ₹15 ಲಕ್ಷ ಹಾಕ್ತಿವಿ ಎಂದು ಮೋದಿ ಹೇಳಿದ್ದರು. ಹದಿನೈದು ಪೈಸೆಯೂ ಬರಲಿಲ್ಲ. ಪ್ರತಿವರ್ಷ ಎರಡು ಕೋಟಿ ಉದ್ಯೋಗ ಅಂದರು, ಪ್ರಧಾನಿ ಆಗಿ 12 ವರ್ಷ ಆಯಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
12:45 PM (IST) Apr 07
ನಾರಾಯಣ ಹೃದಯಾಲಯದಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ಚಿಕ್ಕಮಗಳೂರಿನ ಎನ್.ಆರ್.ಪುರ ತಾಲೂಕಿನಲ್ಲಿ ಹೊಳೆಗೆ ಹಾರಿ ಸಾವಿಗೆ ಶರಣಾಗಿದ್ದಾರೆ. ಪತಿ ಹಾಗೂ ಇಬ್ಬರು ಮಕ್ಕಳನ್ನು ಹೊಂದಿರುವ ಅವರ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.
12:36 PM (IST) Apr 07
12:31 PM (IST) Apr 07
ಆಟೋ ರಿಕ್ಷಾ ಚಾಲಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂಧನ ಪೂರೈಕೆಯಲ್ಲಿ ಕೇಂದ್ರ ಕೆಲ ರಾಜ್ಯಗಳಿಗೆ ಹೆಚ್ಚು ಆದ್ಯತೆ ನೀಡುತ್ತಿದ್ದು, ಕರ್ನಾಟಕದ ಬಗ್ಗೆ ತಾರತಮ್ಯ ಅನುಸರಿಸುತ್ತಿದೆ ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಬೇಸರ ವ್ಯಕ್ತಪಡಿಸಿದ್ದಾರೆ.
12:19 PM (IST) Apr 07
ಸೋಶಿಯಲ್ ಮೀಡಿಯಾದಲ್ಲಿ ಪರಿಚಯವಾದ ಮಹಿಳೆಯರ ಖಾಸಗಿ ಫೋಟೋ ಮತ್ತು ವಿಡಿಯೋಗಳನ್ನು ಬಳಸಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬೆಂಗಳೂರಿನ ಕೆಆರ್ ಪುರಂ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 571 ಗ್ರಾಂ ಚಿನ್ನ ಮತ್ತು 25 ಲಕ್ಷ ನಗದು ವಶಪಡಿಸಿಕೊಳ್ಳಲಾಗಿದೆ.
12:14 PM (IST) Apr 07
2025-26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವು ಏಪ್ರಿಲ್ 9 ರಂದು ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ, ಮೌಲ್ಯನಿರ್ಣಯ ಮಂಡಳಿ ಖಚಿತಪಡಿಸಿದೆ. ವಿದ್ಯಾರ್ಥಿಗಳು ಅಧಿಕೃತ ವೆಬ್ಸೈಟ್ karresults.nic.in ನಲ್ಲಿ ತಮ್ಮ ರಿಜಿಸ್ಟ್ರೇಶನ್ ನಂಬರ್ ಬಳಸಿ ಫಲಿತಾಂಶವನ್ನು ವೀಕ್ಷಿಸಬಹುದು.
11:55 AM (IST) Apr 07
ನಾವು ಗ್ಯಾರಂಟಿಗಳನ್ನು ಏನು ಆಶ್ವಾಸನೆ ಕೊಟ್ಟಿದ್ದೆವೋ ಅದನ್ನು ನಾವು ಬಹಳ ಎಫೆಕ್ಟಿವ್ ಆಗಿ ಇಂಪ್ಲಿಮೆಂಟ್ ಕೂಡ ಮಾಡಿದ್ದೇವೆ. ಎರಡೂ ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ.
11:44 AM (IST) Apr 07
ಬೆಳಗಾವಿ ಜಿಲ್ಲೆಯ ಅರವಳ್ಳಿ ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದೆ. ಹೊಟ್ಟೆನೋವಿನಿಂದ ಬಳಲುತ್ತಿದ್ದ ಪತ್ನಿ ಆತ್ಮ*ಹತ್ಯೆ ಮಾಡಿಕೊಂಡರೆ, ಆಕೆಯ ಮೃತದೇಹ ನೋಡಲು ಹೊರಟ ಪತಿ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಒಂದೇ ದಿನ ತಂದೆ-ತಾಯಿಯನ್ನು ಕಳೆದುಕೊಂಡ ಮೂವರು ಮಕ್ಕಳು ಅನಾಥರಾಗಿದ್ದಾರೆ.
11:39 AM (IST) Apr 07
ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜೀನಾಮೆ ಶತಃಸಿದ್ಧ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ.
11:24 AM (IST) Apr 07
ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದಾಗಿ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಉಪಚುನಾವಣೆ ನಡೆಯುತ್ತಿದೆ. ಕಾಂಗ್ರೆಸ್ ತನ್ನ ಭದ್ರಕೋಟೆ ಉಳಿಸಿಕೊಳ್ಳಲು ಹೋರಾಡುತ್ತಿದ್ದರೆ, ಬಿಜೆಪಿ ಒಗ್ಗಟ್ಟಿನ ಮಂತ್ರದೊಂದಿಗೆ ಗೆಲುವಿನ ವಿಶ್ವಾಸದಲ್ಲಿದೆ.
11:18 AM (IST) Apr 07
ರಾಜ್ಯದಲ್ಲಿ ಎಸ್ಸಿ, ಎಸ್ಟಿ, ಒಬಿಸಿ ವಿರೋಧಿ ಸರ್ಕಾರ ಇದೆ. ಯಾರ ಮತ ಪಡೆದಿದ್ದಾರೋ ಅವರಿಗೆ ಅನ್ಯಾಯ ಮಾಡುವ ಸರ್ಕಾರ ಇದೆ. ಗಂಗಾಮತಸ್ಥರೇ, ಸುಶಿಕ್ಷಿತರಾದ ನೀವು ಎಲ್ಲಿರುತ್ತೇವೆ, ಅಲ್ಲಿ ಗೆಲುವಿದೆ ಎಂದು ತೋರಿಸಿ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
11:07 AM (IST) Apr 07
11:03 AM (IST) Apr 07
10:30 AM (IST) Apr 07
09:47 AM (IST) Apr 07
2025ರ ಏ.1ರಿಂದ ಜಾರಿಗೆ ಬರುವಂತೆ ಬಿಎಂಟಿಸಿ ನೌಕರರಿಗೆ ಶೇ.3 ಮತ್ತು ಇತರೆ ಸಾರಿಗೆ ನಿಗಮಗಳ ನೌಕರರಿಗೆ ಶೇ.5ರಷ್ಟು ವೇತನ ಹೆಚ್ಚಳಕ್ಕೆ ಸರ್ಕಾರ ಪ್ರಸ್ತಾವನೆ ಸಲ್ಲಿಸಿದೆ. 26 ತಿಂಗಳ ವೇತನ ಹಿಂಬಾಕಿ ಪಾವತಿಗೆ 1,271 ಕೋಟಿ ರೂ. ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ.
08:54 AM (IST) Apr 07
ಬೆಂಗಳೂರಲ್ಲಿ ಸ್ಕೂಟರ್ಗೆ ಕಾರು ಡಿಕ್ಕಿ ಹೊಡೆದ ಟೆಕ್ಕಿಯ ರೋಡ್ ರೇಜ್ ಪ್ರಕರಣ. ಕೊಲೆ ಯತ್ನ FIR ರದ್ದು ಕೋರಿದ್ದ ಅರ್ಜಿಗೆ ಹೈಕೋರ್ಟ್ ಹೇಳಿದ್ದೇನು? ಪೂರ್ಣ ವಿವರ ತಿಳಿಯಲು ಕ್ಲಿಕ್ ಮಾಡಿ.
08:43 AM (IST) Apr 07
08:31 AM (IST) Apr 07
ಚಿಂತಾಮಣಿ ತಾಲೂಕಿನ ಚಿನ್ನಸಂದ್ರದಲ್ಲಿ ರಾತ್ರಿ ಗಸ್ತಿನಲ್ಲಿದ್ದ ಮಹಿಳಾ ಪಿಎಸ್ಐ ನಾಗಮ್ಮ ಮತ್ತು ಚಾಲಕ ವೇಣುಗೋಪಾಲ್ ಮೇಲೆ ಪುಂಡರ ಗುಂಪೊಂದು ಧಮ್ಕಿ ಹಾಕಿದೆ. ಹೋಟೆಲ್ ಮುಚ್ಚುವಂತೆ ಸೂಚಿಸಿದ್ದಕ್ಕೆ ಕೋಪಗೊಂಡ ದುಷ್ಕರ್ಮಿಗಳು, ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆಗೆ ಯತ್ನಿಸಿದ್ದಾರೆ.
08:13 AM (IST) Apr 07
07:48 AM (IST) Apr 07
07:38 AM (IST) Apr 07
07:19 AM (IST) Apr 07