LIVE NOW
Published : Apr 07, 2026, 06:49 AM ISTUpdated : Apr 07, 2026, 05:16 PM IST

Karnataka News Live: 2500 ಕೋಟಿ ರೂ ಆಸ್ತಿ ಇದ್ರೂ, ಒಂದು ಸಿನಿಮಾಕ್ಕೆ 100 ಕೋಟಿ ತಗೊಂಡ್ರೂ ಅಕ್ಷಯ್‌ ಕುಮಾರ್‌ಗೆ ಬಟ್ಟೆ ಗತಿ ಇಲ್ವಾ?

ಸಾರಾಂಶ

ಉಡುಪಿ: ಆಯತಪ್ಪಿ ಬಾವಿಗೆ ಬಿದ್ದಿದ್ದ ವೃದ್ಧರೊಬ್ಬರು 3 ದಿನ ಪಂಪ್‌ ಮೇಲೆ ಕೂತು ಜೀವ ಉಳಿಸಿಕೊಂಡ ಘಟನೆ ಉಡುಪಿಯಲ್ಲಿ ನಡೆದಿದೆ. ಶ್ರೀನಿವಾಸ ಆಚಾರ್ಯ (63) ಸಾವನ್ನು ಗೆದ್ದು ಬಂದವರು. ನಿರ್ಜನ ಪ್ರದೇಶದ ಮನೆಯಲ್ಲಿ ಒಂಟಿಯಾಗಿ ವಾಸವಿದ್ದ ಅವರು, ತೋಟಕ್ಕೆ ನೀರುಣಿಸಲು ಹೋದಾಗ ಆಯತಪ್ಪಿ ಬಾವಿಗೆ ಬಿದ್ದಿದ್ದರು. 

30 ಅಡಿಯ ಬಾವಿಯಲ್ಲಿ ಸಾಕಷ್ಟು ನೀರಿತ್ತು. ಆಗ ಅದರಲ್ಲಿದ್ದ ಸಬ್‌ ಮರ್ಸಿಬಲ್ ಪಂಪಿನ ಮೇಲೆ ಕುಳಿತು ಮೇಲೆತ್ತುವಂತೆ ಕೂಗಿದರೂ, ಯಾರಿಗೂ ಕೇಳಲಿಲ್ಲ. ಗ್ಯಾಸ್ ಏಜೆನ್ಸಿಯವರು ಸಿಲಿಂಡರ್ ನೀಡಲು ಬಂದಾಗ ಮನೆಯಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿ ತೋಟದಲ್ಲಿ ಹುಡುಕಿದಾಗ ಆಚಾರ್ಯರು ಪಂಪಿನ ಮೇಲೆ ಕೂತಿರೋದು ಕಂಡುಬಂತು. ಅಗ್ನಿಶಾಮಕ ದಳ ಸಿಬ್ಬಂದಿ ಕರೆಸಿ ಅವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಯಿತು.

05:16 PM (IST) Apr 07

2500 ಕೋಟಿ ರೂ ಆಸ್ತಿ ಇದ್ರೂ, ಒಂದು ಸಿನಿಮಾಕ್ಕೆ 100 ಕೋಟಿ ತಗೊಂಡ್ರೂ ಅಕ್ಷಯ್‌ ಕುಮಾರ್‌ಗೆ ಬಟ್ಟೆ ಗತಿ ಇಲ್ವಾ?

Actor Akshay Kumar: ಬಾಲಿವುಡ್ ನಟ ಅಕ್ಷಯ್ ಕುಮಾರ್, ನಿರ್ದೇಶಕ ಪ್ರಿಯದರ್ಶನ್ ಅವರ 'ಭೂತ್ ಬಂಗ್ಲಾ' ಸಿನಿಮಾದ ಟ್ರೈಲರ್ ಲಾಂಚ್‌ಗೆ ಬಂದಿದ್ದರು. ಈ ವೇಳೆ ಅವರು ಹಾಕಿದ್ದ ಶರ್ಟ್ ನೋಡಿ ಜನ ಸಿಕ್ಕಾಪಟ್ಟೆ ಟ್ರೋಲ್ ಮಾಡುತ್ತಿದ್ದಾರೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ. 

 

Read Full Story

04:36 PM (IST) Apr 07

3 ದಿನ ಬಾವಿಯಲ್ಲಿ ಬಿದ್ದ ಉಡುಪಿಯ ವೃದ್ಧನ ಜೀವ ಉಳಿಸಿದ ಸಿಲಿಂಡರ್​ OTP- ವಿಡಿಯೋ ಇಲ್ಲಿದೆ

ಉಡುಪಿಯ ಕಂಬಳಕಟ್ಟೆಯಲ್ಲಿ 62 ವರ್ಷದ ಶ್ರೀನಿವಾಸ ಆಚಾರ್ಯ ಎಂಬ ವೃದ್ಧರು ಆಕಸ್ಮಿಕವಾಗಿ ಬಾವಿಗೆ ಬಿದ್ದು ಮೂರು ದಿನಗಳ ಕಾಲ ಸಿಲುಕಿಕೊಂಡಿದ್ದರು. ಗ್ಯಾಸ್ ಸಿಲಿಂಡರ್ ಡೆಲಿವರಿಗಾಗಿ ಬಂದ ಓಟಿಪಿ ವಿಚಾರಣೆಯಿಂದಾಗಿ ಅವರು ಬಾವಿಯಲ್ಲಿರುವುದು ಬೆಳಕಿಗೆ ಬಂದು, ಅಗ್ನಿಶಾಮಕ ದಳದವರು ಅವರನ್ನು ರಕ್ಷಿಸಿದ್ದಾರೆ.
Read Full Story

04:13 PM (IST) Apr 07

ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯ ಘಟಿಕೋತ್ಸವ - ರಾಜ್ಯಪಾಲರಿಂದ ಸ್ವಾಮೀಜಿಗೆ ಡಾಕ್ಟರೇಟ್ ಪದವಿ ಪ್ರದಾನ

ಥಾವರ್ ಚಂದ್ ಗೆಹ್ಲೋಟ್‌ರವರಿಂದ ಶ್ರೀ ಮಲೆ ಮಹದೇಶ್ವರ ಬೆಟ್ಟದ ಶ್ರೀ ಸಾಲೂರು ಬೃಹನ್ಮಠ ಪೀಠಾಧಿಪತಿಗಳಾದ ಡಾ.ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮಿಗಳು ವಿದ್ಯಾವಾರಾಧಿ ( ಪಿಎಚ್‌ಡಿ) ಪದವಿ ಪ್ರಮಾಣಪತ್ರ ಪಡೆದರು.

Read Full Story

04:10 PM (IST) Apr 07

ಪರ್ಫೆಕ್ಟ್ ಯಾರ್ಕರ್ ಮೂಲಕ ರಿಷಭ್ ಪಂತ್ ಕಂಗೆಡಿಸಿದ ಅರ್ಜುನ್ ತೆಂಡೂಲ್ಕರ್! ಸಚಿನ್ ಪುತ್ರನ ಬೌಲಿಂಗ್‌ಗೆ ನೆಟ್ಟಿಗರು ಫಿದಾ

ಲಖನೌ ಸೂಪರ್ ಜೈಂಟ್ಸ್ ತಂಡದ ನೆಟ್ಸ್‌ನಲ್ಲಿ ನಾಯಕ ರಿಷಭ್ ಪಂತ್‌ಗೆ ಅರ್ಜುನ್ ತೆಂಡೂಲ್ಕರ್ ನಿಖರ ಯಾರ್ಕರ್‌ಗಳನ್ನು ಎಸೆದು ಗಮನ ಸೆಳೆದಿದ್ದಾರೆ. ಈ ವಿಡಿಯೋ ವೈರಲ್ ಆಗಿದ್ದು, ಮುಂಬರುವ ಪಂದ್ಯಗಳಲ್ಲಿ ಅರ್ಜುನ್‌ಗೆ ಆಡುವ ಬಳಗದಲ್ಲಿ ಅವಕಾಶ ಸಿಗಬಹುದೆಂಬ ನಿರೀಕ್ಷೆ ಅಭಿಮಾನಿಗಳಲ್ಲಿ ಹೆಚ್ಚಾಗಿದೆ.
Read Full Story

04:02 PM (IST) Apr 07

ಕೊಡವ ಆಭರಣದಲ್ಲಿ ರಶ್ಮಿಕಾ ಮಿಂಚಿಂಗ್, ಹುಟ್ಟೂರು ವಿರಾಜಪೇಟೆಯಲ್ಲಿ ತೆಲುಗು ಸೊಸೆಯ ಅದ್ಧೂರಿ ಆರತಕ್ಷತೆ!

ಉದಯಪುರದಲ್ಲಿ ವಿವಾಹವಾದ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ, ಇದೀಗ ರಶ್ಮಿಕಾ ಹುಟ್ಟೂರಾದ ಕೊಡಗಿನಲ್ಲಿ ಆರತಕ್ಷತೆ ಮಾಡಿಕೊಂಡಿದ್ದಾರೆ. ಈ ಸಮಾರಂಭದಲ್ಲಿ ರಶ್ಮಿಕಾ ಸಂಪೂರ್ಣ ಕೊಡವ ಸಂಪ್ರದಾಯದಂತೆ ಕೆಂಪು ಸೀರೆ ಮತ್ತು ಪತ್ತಕ್, ಜೋಮಾಲೆಯಂತಹ ಸಾಂಪ್ರದಾಯಿಕ ಆಭರಣಗಳನ್ನು ಧರಿಸಿ ಮಿಂಚಿದ್ದಾರೆ.
Read Full Story

03:36 PM (IST) Apr 07

ಚಿಕ್ಕಮಗಳೂರು - ಮಧ್ಯಪ್ರಾಚ್ಯ ಯುದ್ಧದಿಂದಾಗಿ ದರ ಏರಿಕೆ - ಡ್ರೈಫ್ರೂಟ್ಸ್‌ ಮಾತ್ರ ಕದ್ದ ಕಳ್ಳ

ಚಿಕ್ಕಮಗಳೂರಿನ ಶೃಂಗೇರಿ ಶಾರದಾಂಬೆ ದೇಗುಲದ ಬಳಿಯ ಅಂಗಡಿಯೊಂದರಲ್ಲಿ ಕಳ್ಳನೊಬ್ಬ 10 ಕೆಜಿಗೂ ಅಧಿಕ ಬಾದಾಮಿ, ಪಿಸ್ತಾ, ಗೋಡಂಬಿ ಹಾಗೂ 80 ಸಾವಿರ ನಗದನ್ನು ಕದ್ದೊಯ್ದಿದ್ದಾನೆ. ಕಳ್ಳತನದ ಈ ಕೃತ್ಯವು ಅಂಗಡಿಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ..

Read Full Story

03:29 PM (IST) Apr 07

ಸ್ನ್ಯಾಪ್‌ಚಾಟ್ ಮೂಲಕ ಮಹಿಳೆ ಬಲೆಗೆ ಬಿಳಿಸಿದ್ದ ಹ್ಯಾಂಡ್ಸಮ್ ಹುಡುಗ - 40 ಲಕ್ಷ ಹಣ, 1 ಕೆಜಿ ಚಿನ್ನ ಲೂಟಿ!

ಹೆಣ್ಣು ಮಕ್ಕಳೇ ಸೋಷಿಯಲ್ ಮೀಡಿಯಾದಲ್ಲಿ ಯಾರನ್ನಾದರೂ ಪರಿಚಯ ಮಾಡಿಕೊಳ್ಳುವ ಮುನ್ನ ಎಚ್ಚರ. ಅದರಲ್ಲೂ ಅಪರಿಚಿತ ಹುಡುಗ ಹ್ಯಾಂಡ್ಸಮ್ ಆಗಿದ್ದಾನೆ ಅಂತಾ ಮರುಳಾದ್ರೆ ನಿಮ್ಮ ಕಥೆ ಗೋವಿಂದ.

Read Full Story

03:01 PM (IST) Apr 07

ಸಿಎಂ ಬದಲಾವಣೆ ವಿಚಾರದಲ್ಲಿ ಸಿದ್ದು ಬಿಟ್ಟು ಉಳಿದವರ ಮಾತು ನಗಣ್ಯ - ಡಿ.ಕೆ.ಶಿವಕುಮಾರ್

ಜನ ನಮ್ಮ ಗ್ಯಾರಂಟಿಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಈ ಉಪ ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳು ಗೆಲ್ಲುವುದು ಖಚಿತ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.

Read Full Story

02:42 PM (IST) Apr 07

ಕಾಂಗ್ರೆಸ್ಸಿಗೆ ಚುನಾವಣೆ ಖಚಿತ, ಸೋಲು ನಿಶ್ಚಿತ - ಛಲವಾದಿ ನಾರಾಯಣಸ್ವಾಮಿ ಭವಿಷ್ಯ

ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸೋಲುತ್ತಿದ್ದು, ರಾಜ್ಯದ ಜನತೆ ಕಾಂಗ್ರೆಸ್ ಸರ್ಕಾರದ ಬಗ್ಗೆ ಬೇಸತ್ತಿದ್ದಾರೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದರು.

Read Full Story

02:35 PM (IST) Apr 07

ಹುಬ್ಬಳ್ಳಿ ಕೇಸ್ ಬಳಿಕ ಎಚ್ಚೆತ್ತ ಪೊಲೀಸ್; ಲವ್ ಜಿಹಾದ್‌ಗಳ ಅಡ್ಡೆ ಆಗ್ತಿರೋ ಜಿಮ್‌ಗಳ ಮೇಲೆ ಖಾಕಿ ಕಣ್ಣು

ಹುಬ್ಬಳ್ಳಿ-ಧಾರವಾಡದಲ್ಲಿ ಇತ್ತೀಚೆಗೆ ಜಿಮ್ ಟ್ರೇನರ್‌ಗಳಿಂದ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣಗಳಿಂದಾಗಿ ಪೊಲೀಸರು ಜಿಮ್‌ಗಳ ಮೇಲೆ ಗುಮಾನಿ ವ್ಯಕ್ತಪಡಿಸಿದ್ದಾರೆ. ಈ ಘಟನೆಗಳು ಜಿಮ್‌ಗಳ ಸುರಕ್ಷತೆ, ತರಬೇತುದಾರರ ಅರ್ಹತೆ ಮತ್ತು ಅವುಗಳ ಪರವಾನಗಿ ಕುರಿತು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿವೆ. 

Read Full Story

02:07 PM (IST) Apr 07

Lakshmi Nivasa Serial - ಜಾನು ಸಾವಿನಲ್ಲೂ, ಲಕ್ಷ್ಮೀ-ಶ್ರೀನಿವಾಸ್‌ ಷಷ್ಠಿಪೂರ್ತಿಯಲ್ಲೂ ಅದೊಂದು ಮಿಸ್‌ ಆಯ್ತು!

ಲಕ್ಷ್ಮೀ ನಿವಾಸ ಧಾರಾವಾಹಿಯಲ್ಲಿ ಜಯಂತ್‌ ಏನು ಎನ್ನೋದು ಎಲ್ಲರಿಗೂ ಗೊತ್ತಾಗಿದೆ. ಅತ್ತ ಜಾಹ್ನವಿ ಬದುಕಿರುವ ವಿಷಯ ಕೂಡ ಗೊತ್ತಾಗಿದೆ. ಜಯಂತ್‌ ಹಾಗೂ ಜಾಹ್ನವಿ ಒಟ್ಟಾಗಿ ಬಾಳ್ತಾರಾ ಎಂಬ ಪ್ರಶ್ನೆ ಇದೆ. ಸಂತೋಷ್‌, ಹರೀಶ್‌ ತಪ್ಪುಗಳು ಆಗಿದೆ, ಶ್ರೀನಿವಾಸ್‌ ಷಷ್ಠಿಪೂರ್ತಿಯಲ್ಲೂ ಒಂದು ವಿಷಯ ಮಿಸ್‌ ಆಗಿದೆ. 

 

Read Full Story

01:58 PM (IST) Apr 07

ಮುಟ್ಟಿನ ಬಗ್ಗೆ ನಟಿ ಶ್ರೀಲೀಲಾ ಮುಕ್ತ ಮಾತು - ಡಾಕ್ಟರ್​ ಆಗಿ ಹೀಗೆ ಹೇಳೋದಾ? ಶುರುವಾಗಿದೆ ಭಾರಿ ಚರ್ಚೆ

ನಟಿ ಹಾಗೂ ವೈದ್ಯೆ ಶ್ರೀಲೀಲಾ, ಮುಟ್ಟನ್ನು ಒಂದು ನೆಪವಾಗಿ ಬಳಸಬಾರದು ಮತ್ತು ಮಹಿಳೆಯರು ಆ ಸಮಯದಲ್ಲಿ ತಮ್ಮನ್ನು ತಾವು ಹುರಿದುಂಬಿಸಿಕೊಳ್ಳಬೇಕು ಎಂದು ಹೇಳಿದ್ದಾರೆ. ಅವರ ಈ ಹೇಳಿಕೆಗೆ ಪರ-ವಿರೋಧ ಚರ್ಚೆಗಳು ಶುರುವಾಗಿದ್ದು, ಹಲವರು ನಟಿಯ ಮಾತನ್ನು ವಿರೋಧಿಸಿದ್ದು ಏಕೆ?

Read Full Story

01:39 PM (IST) Apr 07

ಕರ್ನಾಟಕದಲ್ಲಿ ಲೋಕಾಯುಕ್ತರ ಮಿಂಚಿನ ದಾಳಿ - 5 ಅಧಿಕಾರಿಗಳ ಮನೆಗೆ ಏಕಾಏಕಿ ದಾಳಿ, ದಾಖಲೆಗಳ ಪರಿಶೀಲನೆ

ಕರ್ನಾಟಕದ 5 ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಚಿತ್ರದುರ್ಗ, ಮೈಸೂರು, ಬಳ್ಳಾರಿ, ಶಿವಮೊಗ್ಗ ಹಾಗೂ ಬೆಳಗಾವಿಯಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ, ಆದಾಯ ಮೀರಿ ಆಸ್ತಿ ಗಳಿಕೆ ಆರೋಪದ ಮೇಲೆ ಹಲವು ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳಲ್ಲಿ ಶೋಧ ನಡೆಸಲಾಗಿದೆ.
Read Full Story

01:24 PM (IST) Apr 07

ರೇಣುಕಾಸ್ವಾಮಿ ಕೊಲೆ ಆಧರಿತ ಸಿನಿಮಾಗೆ ರೆಡ್‌ ಸಿಗ್ನಲ್‌? ತಡೆಯಾಜ್ಞೆ ತಂದ ನಟ ದರ್ಶನ್‌

 'ಬಾಸ್' ಚಿತ್ರದ ಬಿಡುಗಡೆಗೆ ನಗರದ ಸಿಟಿ ಸಿವಿಲ್ ನ್ಯಾಯಾಲಯ ಮಧ್ಯಂತರ ತಡೆಯಾಜ್ಞೆ ನೀಡಿದೆ. ತಮ್ಮ ಘನತೆಗೆ ಧಕ್ಕೆಯಾಗುತ್ತದೆ ಎಂದು ದರ್ಶನ್ ಮತ್ತು ವಿಜಯಲಕ್ಷ್ಮಿ ಸಲ್ಲಿಸಿದ್ದ ದಾವೆಯ ಮೇರೆಗೆ, ಚಿತ್ರಮಂದಿರ, ಒಟಿಟಿಯಲ್ಲಿ ಚಿತ್ರ ಬಿಡುಗಡೆ ಮಾಡದಂತೆ ನ್ಯಾಯಾಲಯ ನಿರ್ದೇಶಿಸಿದೆ.

Read Full Story

01:12 PM (IST) Apr 07

ದೇವಾಲಯಗಳ ಉಳಿವಿಗಾಗಿ ಬಂಗಾರ, ವಜ್ರದ ಆಭರಣಗಳ ದಾನ ಕೇಳಿದ ತಕ್ಷಣವೇ ಕಳಚಿಕೊಟ್ಟ ಮಹಿಳೆಯರು, Watch Video

ಸೂರತ್‌ನ ಐತಿಹಾಸಿಕ ಗೋಪಿಪುರ ಪ್ರದೇಶದ ಜೈನ ಪವಿತ್ರ ಸ್ಥಳಗಳನ್ನು ರಕ್ಷಿಸಲು ನಡೆದ 'ಊರ್ಜಾ ತೀರ್ಥ ಉದ್ಧಾರ್ ಉತ್ಸವ'ದಲ್ಲಿ ಭಕ್ತರು ಅಭೂತಪೂರ್ವವಾಗಿ ಸ್ಪಂದಿಸಿದ್ದಾರೆ. ಜೈನ ಮಹಿಳೆಯರು ಸೇರಿದಂತೆ ನೂರಾರು ಜನರು ತಮ್ಮ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ದಾನ ಮಾಡಿದ್ದಾರೆ.

Read Full Story

01:10 PM (IST) Apr 07

ಬಂದ ಎರಡೂ ಹಡಗುಗಳನ್ನು ಗುಜರಾತ್‌ಗೆ ಏಕೆ ಕಳುಹಿಸಿದರು - ಜೋಶಿ ರಾಜ್ಯದ ಹಿತಕ್ಕೆ ಕೆಲಸ ಮಾಡಬೇಕು - ಡಿಕೆಶಿ

ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆ ಹರ್ಮುಜ್ ಜಲಸಂಧಿ ಬಂದ್ ಆಗಿದೆ. ಹೀಗಾಗಿ ಆಟೋ ಚಾಲಕರು ಗ್ಯಾಸ್ ಬಿಟ್ಟು ಪೆಟ್ರೋಲ್ ಬಳಸಬೇಕು ಎಂಬ ಸಚಿವ ಪ್ರಲ್ಹಾದ್ ಜೋಶಿಯವರ ಹೇಳಿಕೆಗೆ ಡಿಸಿಎಂ ಡಿಕೆಶಿ ಅಸಮಾಧಾನ ವ್ಯಕ್ತಪಡಿಸಿದರು

Read Full Story

01:06 PM (IST) Apr 07

Bengaluru - ಪತ್ನಿಯನ್ನು ಕೊಲ್ಲುವ ಮೊದಲು ಊರಿಗೆ ಬಂದು ಬಾಡೂಟ ಹಾಕಿಸಿದ ಗಂಡ!

ಬೆಂಗಳೂರಿನಲ್ಲಿ ಪತ್ನಿ ಕಾವ್ಯಾಳನ್ನು ಕೊಲೆ ಮಾಡಿದ ಆರೋಪದ ಮೇಲೆ ಪತಿ ದನಿಯಪ್ಪನನ್ನು ಬಂಧಿಸಲಾಗಿದೆ. ರಾಜಕೀಯ ಪ್ರವೇಶಿಸಲು ಬೆಂಗಳೂರಿನ ಆಸ್ತಿ ಮಾರಾಟ ಮಾಡಲು ದನಿಯಪ್ಪ ಮುಂದಾಗಿದ್ದು, ಇದಕ್ಕೆ ಪತ್ನಿ ಒಪ್ಪದ ಕಾರಣ ಈ ಕೃತ್ಯ ಎಸಗಿದ್ದಾನೆ ಎಂದು ಶಂಕಿಸಲಾಗಿದೆ. 

Read Full Story

01:04 PM (IST) Apr 07

ಅಲ್ಪಸಂಖ್ಯಾತರ ಬಗ್ಗೆ ವಿಜಯೇಂದ್ರ ಮೊಸಳೆ ಕಣ್ಣೀರು ಸುರಿಸುತ್ತಿರುವುದು ಸೋಜಿಗ - ಬಿ.ಕೆ.ಹರಿಪ್ರಸಾದ್

ವಿಜಯೇಂದ್ರ ಅವರು ಇಲ್ಲಿ ಅಲ್ಪಸಂಖ್ಯಾತರ ಬಗ್ಗೆ ಮೊಸಳೆ ಕಣ್ಣೀರು ಸುರಿಸುತ್ತಿರುವುದು ಸೋಜಿಗ. ಇವರ ಅಧಿಕಾರಾವಧಿಯಲ್ಲಿ ಅಲ್ಪಸಂಖ್ಯಾತರನ್ನು ಹೇಗೆ ನಡೆಸಿಕೊಟ್ಟಿದ್ದಾರೆ ಎನ್ನುವುದು ಯಾರಾದರೂ ಮರೆಯಲು ಸಾಧ್ಯವೇ? ಎಂದು ಬಿ.ಕೆ.ಹರಿಪ್ರಸಾದ್ ಹೇಳಿದರು.

Read Full Story

12:49 PM (IST) Apr 07

ಬಿಜೆಪಿಯವರು ಎಂದು ಕೂಡ ಬಹುಮತ ಪಡೆದು ಅಧಿಕಾರಕ್ಕೆ ಬಂದಿಲ್ಲ - ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಸ್ವಿಸ್ ಬ್ಯಾಂಕ್ ನಿಂದ ₹15 ಲಕ್ಷ ಹಾಕ್ತಿವಿ ಎಂದು ಮೋದಿ ಹೇಳಿದ್ದರು. ಹದಿನೈದು ಪೈಸೆಯೂ ಬರಲಿಲ್ಲ. ಪ್ರತಿವರ್ಷ ಎರಡು ಕೋಟಿ ಉದ್ಯೋಗ ಅಂದರು, ಪ್ರಧಾನಿ ಆಗಿ 12 ವರ್ಷ ಆಯಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

Read Full Story

12:45 PM (IST) Apr 07

ಚಿಕ್ಕಮಗಳೂರು - ನಾರಾಯಣ ಹೃದಯಾಲಯದ ನರ್ಸ್‌ ಹೊಳೆಗೆ ಹಾರಿ ಸಾವಿಗೆ ಶರಣು

ನಾರಾಯಣ ಹೃದಯಾಲಯದಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ಚಿಕ್ಕಮಗಳೂರಿನ ಎನ್.ಆರ್.ಪುರ ತಾಲೂಕಿನಲ್ಲಿ ಹೊಳೆಗೆ ಹಾರಿ ಸಾವಿಗೆ ಶರಣಾಗಿದ್ದಾರೆ. ಪತಿ ಹಾಗೂ ಇಬ್ಬರು ಮಕ್ಕಳನ್ನು ಹೊಂದಿರುವ ಅವರ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.

Read Full Story

12:36 PM (IST) Apr 07

ಪಂಚಮಸಾಲಿ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಬೆಂಗಳೂರು ಮಹಿಳೆಯಿಂದ ಲೈಂಗಿಕ ಕಿರುಕುಳ ಆರೋಪ, ಮಹಿಳಾ ಆಯೋಗಕ್ಕೆ ದೂರು

ಕೂಡಲಸಂಗಮ ಪಂಚಮಸಾಲಿ ಪೀಠದ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯದ ಆರೋಪ ಮಾಡಿ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ. ಇದಕ್ಕೆ ಪ್ರತಿಯಾಗಿ, ಸ್ವಾಮೀಜಿ ತಮ್ಮ ತೇಜೋವಧೆ ಮಾಡಲು 3 ಕೋಟಿ ರೂಪಾಯಿಗಾಗಿ ಮಹಿಳೆ ಬ್ಲಾಕ್‌ಮೇಲ್ ಮಾಡುತ್ತಿದ್ದಾರೆ ಎಂದು ಪ್ರತಿದೂರು ದಾಖಲಿಸಿದ್ದಾರೆ.
Read Full Story

12:31 PM (IST) Apr 07

ಇಂಧನ ಪೂರೈಕೆಯಲ್ಲಿ ಕೇಂದ್ರದಿಂದ ಕರ್ನಾಟಕಕ್ಕೆ ತಾರತಮ್ಯ - ಸಚಿವ ಕೆ.ಎಚ್‌.ಮುನಿಯಪ್ಪ ಬೇಸರ

ಆಟೋ ರಿಕ್ಷಾ ಚಾಲಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂಧನ ಪೂರೈಕೆಯಲ್ಲಿ ಕೇಂದ್ರ ಕೆಲ ರಾಜ್ಯಗಳಿಗೆ ಹೆಚ್ಚು ಆದ್ಯತೆ ನೀಡುತ್ತಿದ್ದು, ಕರ್ನಾಟಕದ ಬಗ್ಗೆ ತಾರತಮ್ಯ ಅನುಸರಿಸುತ್ತಿದೆ ಎಂದು ಆಹಾರ ಸಚಿವ ಕೆ.ಎಚ್‌.ಮುನಿಯಪ್ಪ ಬೇಸರ ವ್ಯಕ್ತಪಡಿಸಿದ್ದಾರೆ.

Read Full Story

12:19 PM (IST) Apr 07

Bengaluru - ಹ್ಯಾಂಡ್‌ಸಮ್ ಹುಡುಗ ಅಂತ ಪರಿಚಯ ಮಾಡಿಕೊಳ್ಳುವ ಮುನ್ನ ಈ ಸುದ್ದಿ ಓದಿ!

ಸೋಶಿಯಲ್ ಮೀಡಿಯಾದಲ್ಲಿ ಪರಿಚಯವಾದ ಮಹಿಳೆಯರ ಖಾಸಗಿ ಫೋಟೋ ಮತ್ತು ವಿಡಿಯೋಗಳನ್ನು ಬಳಸಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬೆಂಗಳೂರಿನ ಕೆಆರ್ ಪುರಂ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 571 ಗ್ರಾಂ ಚಿನ್ನ ಮತ್ತು 25 ಲಕ್ಷ ನಗದು ವಶಪಡಿಸಿಕೊಳ್ಳಲಾಗಿದೆ.

Read Full Story

12:14 PM (IST) Apr 07

Karnataka 2nd PUC result 2026 - ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಕ್ಕೆ ದಿನಾಂಕ ಫಿಕ್ಸ್, ರಿಸಲ್ಟ್ ನೋಡೋದು ಸುಲಭ, ಇಲ್ಲಿದೆ ಲಿಂಕ್

2025-26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವು ಏಪ್ರಿಲ್ 9 ರಂದು ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ, ಮೌಲ್ಯನಿರ್ಣಯ ಮಂಡಳಿ ಖಚಿತಪಡಿಸಿದೆ. ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್ karresults.nic.in ನಲ್ಲಿ ತಮ್ಮ ರಿಜಿಸ್ಟ್ರೇಶನ್ ನಂಬರ್ ಬಳಸಿ ಫಲಿತಾಂಶವನ್ನು ವೀಕ್ಷಿಸಬಹುದು.

Read Full Story

11:55 AM (IST) Apr 07

ಕಾಂಗ್ರೆಸ್‌ಗೆ ಅದೃಶ್ಯ ಮತದಾರರಿದ್ದು ಎರಡೂ ಕ್ಷೇತ್ರಗಳಲ್ಲಿ ಗೆಲ್ತೇವೆ - ಮಾಜಿ‌ ಸಚಿವ ಕೆ.ಎನ್.ರಾಜಣ್ಣ

ನಾವು ಗ್ಯಾರಂಟಿಗಳನ್ನು ಏನು ಆಶ್ವಾಸನೆ ಕೊಟ್ಟಿದ್ದೆವೋ ಅದನ್ನು ನಾವು ಬಹಳ ಎಫೆಕ್ಟಿವ್ ಆಗಿ ಇಂಪ್ಲಿಮೆಂಟ್ ಕೂಡ ಮಾಡಿದ್ದೇವೆ. ಎರಡೂ ಕ್ಷೇತ್ರಗಳಲ್ಲಿ‌ ಗೆಲ್ಲುತ್ತೇವೆಂದು ಮಾಜಿ‌ ಸಚಿವ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ.

Read Full Story

11:44 AM (IST) Apr 07

ಪತ್ನಿಯನ್ನು ಕೊನೆಯ ಬಾರಿಯೂ ನೋಡಲು ಬಿಡದ ಕ್ರೂರ ವಿಧಿ - ಪತಿ ದುರ್ಮರಣ, ಮಕ್ಕಳು ಅನಾಥ

ಬೆಳಗಾವಿ ಜಿಲ್ಲೆಯ ಅರವಳ್ಳಿ ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದೆ. ಹೊಟ್ಟೆನೋವಿನಿಂದ ಬಳಲುತ್ತಿದ್ದ ಪತ್ನಿ ಆತ್ಮ*ಹತ್ಯೆ ಮಾಡಿಕೊಂಡರೆ, ಆಕೆಯ ಮೃತದೇಹ ನೋಡಲು ಹೊರಟ ಪತಿ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಒಂದೇ ದಿನ ತಂದೆ-ತಾಯಿಯನ್ನು ಕಳೆದುಕೊಂಡ ಮೂವರು ಮಕ್ಕಳು ಅನಾಥರಾಗಿದ್ದಾರೆ.

Read Full Story

11:39 AM (IST) Apr 07

ಉಪಚುನಾವಣೆ ಬಳಿಕ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಖಚಿತ - ಬಿ.ವೈ. ವಿಜಯೇಂದ್ರ ಭವಿಷ್ಯ

ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜೀನಾಮೆ ಶತಃಸಿದ್ಧ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ.

Read Full Story

11:24 AM (IST) Apr 07

Karnataka Bypolls - ಭದ್ರಕೋಟೆ ಉಳಿಸಿಕೊಳ್ಳುತ್ತಾ ಕಾಂಗ್ರೆಸ್? ಮೊದಲ ಬಾರಿ ಅರಳುತ್ತಾ ಕಮಲ? ಇಲ್ಲಿದೆ ಪಕ್ಕಾ ಲೆಕ್ಕಾಚಾರ!

ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದಾಗಿ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಉಪಚುನಾವಣೆ ನಡೆಯುತ್ತಿದೆ. ಕಾಂಗ್ರೆಸ್ ತನ್ನ ಭದ್ರಕೋಟೆ ಉಳಿಸಿಕೊಳ್ಳಲು ಹೋರಾಡುತ್ತಿದ್ದರೆ, ಬಿಜೆಪಿ ಒಗ್ಗಟ್ಟಿನ ಮಂತ್ರದೊಂದಿಗೆ ಗೆಲುವಿನ ವಿಶ್ವಾಸದಲ್ಲಿದೆ.

Read Full Story

11:18 AM (IST) Apr 07

ರಾಜ್ಯದಲ್ಲಿ ಎಸ್ಸಿ- ಎಸ್ಟಿ, ಒಬಿಸಿ ವಿರೋಧಿ ಸರ್ಕಾರ - ಸಂಸದ ಬಸವರಾಜ ಬೊಮ್ಮಾಯಿ ವಾಗ್ದಾಳಿ

ರಾಜ್ಯದಲ್ಲಿ ಎಸ್ಸಿ, ಎಸ್ಟಿ, ಒಬಿಸಿ ವಿರೋಧಿ ಸರ್ಕಾರ ಇದೆ. ಯಾರ ಮತ ಪಡೆದಿದ್ದಾರೋ ಅವರಿಗೆ ಅನ್ಯಾಯ ಮಾಡುವ ಸರ್ಕಾರ ಇದೆ. ಗಂಗಾಮತಸ್ಥರೇ, ಸುಶಿಕ್ಷಿತರಾದ ನೀವು ಎಲ್ಲಿರುತ್ತೇವೆ, ಅಲ್ಲಿ ಗೆಲುವಿದೆ ಎಂದು ತೋರಿಸಿ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

Read Full Story

11:07 AM (IST) Apr 07

Iran-India Love story - ಮಧ್ಯಪ್ರಾಚ್ಯ ಯುದ್ಧದಿಂದ ವಿಮಾನ ರದ್ದು, ಕೊಡಗಿನಲ್ಲಿ ಸಿಲುಕಿದ ಇರಾನ್ ದಂಪತಿ!

ಇರಾನ್‌ನಿಂದ ಕೊಡಗಿಗೆ ರಜೆಯ ಮೇಲೆ ಬಂದಿದ್ದ ದಂಪತಿ, ಯುದ್ಧದ ಪರಿಣಾಮವಾಗಿ ವಿಮಾನ ಸೇವೆ ರದ್ದಾದ ಕಾರಣ ತವರಲ್ಲೇ ಸಿಲುಕಿಕೊಂಡಿದ್ದಾರೆ. ಪಾಸ್‌ಪೋರ್ಟ್‌ ಅವಧಿ ಮುಕ್ತಾಯದ ಹಂತದಲ್ಲಿದ್ದು, ಇರಾನ್‌ನಲ್ಲಿರುವ ತಮ್ಮ ಮಕ್ಕಳನ್ನು ಸಂಪರ್ಕಿಸಲಾಗದೆ ಆತಂಕದಲ್ಲಿದ್ದಾರೆ.
Read Full Story

11:03 AM (IST) Apr 07

ಬೇಸಿಗೆ ರಜೆಗಾಗಿ ಮಕ್ಕಳ ಜೊತೆ ಊಟಿಗೆ ಹೋಗ್ತಿದ್ರೆ ಈ 5 ಪ್ಲೇಸ್‌ ಮಿಸ್ ಮಾಡದೇ ನೋಡಿ

ಬೆಟ್ಟಗಳ ರಾಜಕುಮಾರಿ ಅಂತಾನೇ ಫೇಮಸ್ ಆಗಿರೋ ಕೊಡೈಕೆನಾಲ್‌ಗೆ ಟ್ರಿಪ್ ಪ್ಲಾನ್ ಮಾಡ್ತಿದ್ದೀರಾ? ಹಾಗಿದ್ರೆ ನೀವು ಖಂಡಿತವಾಗಿಯೂ ನೋಡಲೇಬೇಕಾದ ಟಾಪ್ 5 ಸ್ಥಳಗಳು ಮತ್ತು ಅವುಗಳ ವಿಶೇಷತೆಗಳ ಬಗ್ಗೆ ಇಲ್ಲಿದೆ ಕಂಪ್ಲೀಟ್ ಗೈಡ್.
Read Full Story

10:30 AM (IST) Apr 07

ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ದರದಲ್ಲಿ ಅಚ್ಚರಿ ಬದಲಾವಣೆ ; ಮುಂದುವರಿದ ಬೇಡಿಕೆ

ಹಾವೇರಿಯ ಕೃಷಿ ಉತ್ಪನ್ನ ಮಾರುಕಟ್ಟೆಗೆ ಸೋಮವಾರ 89 ಸಾವಿರ ಮೆಣಸಿನಕಾಯಿ ಚೀಲಗಳ ಆವಕವಾಗಿದ್ದು, ಗಣನೀಯ ಇಳಿಕೆ ಕಂಡಿದೆ. ಆವಕ ಕಡಿಮೆಯಾದರೂ, ಕಡ್ಡಿ, ಡಬ್ಬಿ ಮತ್ತು ಗುಂಟೂರು ತಳಿಗಳ ಮೆಣಸಿನಕಾಯಿ ದರದಲ್ಲಿ ಸ್ಥಿರತೆ ಕಂಡುಬಂದಿದ್ದು, ಗುಣಮಟ್ಟದ ಮೆಣಸಿಗೆ ಬೇಡಿಕೆ ಮುಂದುವರೆದಿದೆ.
Read Full Story

09:47 AM (IST) Apr 07

ಸಾರಿಗೆ ನೌಕರರಿಗೆ ಗುಡ್‌ನ್ಯೂಸ್ ನೀಡಿದ ರಾಮಲಿಂಗಾ ರೆಡ್ಡಿ; ಇತ್ತ ರಾಜ್ಯದ ಜನತೆಯೂ ನಿರಾಳ

2025ರ ಏ.1ರಿಂದ ಜಾರಿಗೆ ಬರುವಂತೆ ಬಿಎಂಟಿಸಿ ನೌಕರರಿಗೆ ಶೇ.3 ಮತ್ತು ಇತರೆ ಸಾರಿಗೆ ನಿಗಮಗಳ ನೌಕರರಿಗೆ ಶೇ.5ರಷ್ಟು ವೇತನ ಹೆಚ್ಚಳಕ್ಕೆ ಸರ್ಕಾರ ಪ್ರಸ್ತಾವನೆ ಸಲ್ಲಿಸಿದೆ. 26 ತಿಂಗಳ ವೇತನ ಹಿಂಬಾಕಿ ಪಾವತಿಗೆ 1,271 ಕೋಟಿ ರೂ. ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ.

Read Full Story

08:54 AM (IST) Apr 07

ಅಜಾಗರೂಕ ಚಾಲನೆಗೆ ಕೊಲೆ ಯತ್ನ ಪ್ರಕರಣ ದಾಖಲು ಸರಿ ಎಂದ ಹೈಕೋರ್ಟ್! ಏನಿದು ಪ್ರಕರಣ?

ಬೆಂಗಳೂರಲ್ಲಿ ಸ್ಕೂಟರ್‌ಗೆ ಕಾರು ಡಿಕ್ಕಿ ಹೊಡೆದ ಟೆಕ್ಕಿಯ ರೋಡ್ ರೇಜ್ ಪ್ರಕರಣ. ಕೊಲೆ ಯತ್ನ FIR ರದ್ದು ಕೋರಿದ್ದ ಅರ್ಜಿಗೆ ಹೈಕೋರ್ಟ್ ಹೇಳಿದ್ದೇನು? ಪೂರ್ಣ ವಿವರ ತಿಳಿಯಲು ಕ್ಲಿಕ್ ಮಾಡಿ.

Read Full Story

08:43 AM (IST) Apr 07

ಬಾರ್‌ನಲ್ಲಿ ಗುರಾಯಿಸಿದ್ದಕ್ಕೆ 'ಟಗರು ಪಲ್ಯ' ಚಿತ್ರದ ಸಹ ನಟ ನಿರಂಜನ್ ಮೇಲೆ ಬಿಯರ್ ಬಾಟಲ್‌ನಿಂದ ಹಲ್ಲೆ! ಘಟನೆ ಹೇಗಾಯ್ತು?

ಬೆಂಗಳೂರಿನ ಸುಬ್ರಹ್ಮಣ್ಯಪುರ ಬಳಿಯ ಬಾರ್ ಒಂದರಲ್ಲಿ 'ಟಗರು ಪಲ್ಯ' ಖ್ಯಾತಿಯ ಸಹ ನಟ ನಿರಂಜನ್ ಮೇಲೆ ಬಿಯರ್ ಬಾಟಲ್‌ನಿಂದ ಹಲ್ಲೆ ನಡೆದಿದೆ. ಬಾರ್‌ನಲ್ಲಿ ಗುರಾಯಿಸಿದ್ದೇ ಈ ಗಲಾಟೆಗೆ ಕಾರಣವೆನ್ನಲಾಗಿದ್ದು, ಈ ಸಂಬಂಧ ಮೂವರು ಆರೋಪಿಗಳಿಗೆ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದಾರೆ.
Read Full Story

08:31 AM (IST) Apr 07

ರಾತ್ರಿ ಗಸ್ತಿನಲ್ಲಿದ್ದ PSI ನಾಗಮ್ಮ, ಚಾಲಕನ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಯತ್ನ, ಧಮ್ಕಿ

ಚಿಂತಾಮಣಿ ತಾಲೂಕಿನ ಚಿನ್ನಸಂದ್ರದಲ್ಲಿ ರಾತ್ರಿ ಗಸ್ತಿನಲ್ಲಿದ್ದ ಮಹಿಳಾ ಪಿಎಸ್‌ಐ ನಾಗಮ್ಮ ಮತ್ತು ಚಾಲಕ ವೇಣುಗೋಪಾಲ್ ಮೇಲೆ ಪುಂಡರ ಗುಂಪೊಂದು ಧಮ್ಕಿ ಹಾಕಿದೆ. ಹೋಟೆಲ್ ಮುಚ್ಚುವಂತೆ ಸೂಚಿಸಿದ್ದಕ್ಕೆ ಕೋಪಗೊಂಡ ದುಷ್ಕರ್ಮಿಗಳು, ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆಗೆ ಯತ್ನಿಸಿದ್ದಾರೆ.

Read Full Story

08:13 AM (IST) Apr 07

ಒಣ ಕೊಬ್ಬರಿ ಬೆಲೆಯು ಕ್ವಿಂಟಾಲ್‌ಗೆ ₹32,218 ತಲುಪಿ ಐತಿಹಾಸಿಕ ದಾಖಲೆ; ಮತ್ತಷ್ಟು ಏರಿಕೆ ನಿರೀಕ್ಷೆ

ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಒಣ ಕೊಬ್ಬರಿ ಬೆಲೆಯು ಕ್ವಿಂಟಾಲ್‌ಗೆ ₹32,218 ತಲುಪಿ ಐತಿಹಾಸಿಕ ದಾಖಲೆ ಬರೆದಿದೆ. ತೆಂಗಿನ ಇಳುವರಿ ಕುಸಿತ, ಹೆಚ್ಚಿದ ಬೇಡಿಕೆ ಮತ್ತು ಕೊಬ್ಬರಿ ದಾಸ್ತಾನು ಕೊರತೆಯಿಂದಾಗಿ ಬೆಲೆಯಲ್ಲಿ ಈ ಏರಿಕೆ ಕಂಡುಬಂದಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆಯಿದೆ.
Read Full Story

07:48 AM (IST) Apr 07

ನಾನು ಯಾರಿಗಾದ್ರೂ ದ್ರೋಹ ಮಾಡಿದ್ರೆ ಹೇಳಲಿ; ವಿಶ್ವಾಸ ದ್ರೋಹಿ ಎಂದ ಬಿಎಸ್‌ವೈಗೆ ಸಿಎಂ ಸಿದ್ದರಾಮಯ್ಯ ತಿರುಗೇಟು

'ನಂಬಿಕೆ ದ್ರೋಹಿ' ಎಂಬ ಯಡಿಯೂರಪ್ಪನವರ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಆಧಾರವಿದ್ದರೆ ಮಾತನಾಡಲಿ ಎಂದು ಸವಾಲು ಹಾಕಿರುವ ಅವರು, ಯಡಿಯೂರಪ್ಪನವರ ಮೇಲೆಯೇ ಅವರ ಪಕ್ಷದವರಿಂದ ಬಂದಿದ್ದ ಭ್ರಷ್ಟಾಚಾರ ಆರೋಪಗಳನ್ನು ನೆನಪಿಸಿದ್ದಾರೆ.
Read Full Story

07:38 AM (IST) Apr 07

'ನಮ್ಮ ಊರಿಗೆ ಬಂದು ವೇಶ್ಯಾವಾಟಿಕೆ ನಡೆಸುತ್ತೀರಾ?..' ಯುವತಿಯ ಮನೆಗೆ ನುಗ್ಗಿ ಹಲ್ಲೆ ನಡೆಸಿದ ಕಿಡಿಗೇಡಿಗಳು ಅರೆಸ್ಟ್

ಬೆಂಗಳೂರಿನ ವರ್ತೂರಿನಲ್ಲಿ ಯುವತಿಯೊಬ್ಬಳ ಮೇಲೆ ಅನುಮಾನಗೊಂಡು ಗುಂಪೊಂದು ಅಮಾನವೀಯವಾಗಿ ಹಲ್ಲೆ ನಡೆಸಿದೆ. ಯುವತಿ ನೀಡಿದ ದೂರಿನ ಮೇರೆಗೆ ಐವರನ್ನು ಬಂಧಿಸಿರುವ ಪೊಲೀಸರು, ತಲೆಮರೆಸಿಕೊಂಡಿರುವ ಪ್ರಮುಖ ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ.
Read Full Story

07:19 AM (IST) Apr 07

ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ದಕ್ಷಿಣ ಕೊರಿಯಾ ಮಹಿಳೆಗೆ ಕಿರುಕುಳ; ತಪಾಸಣೆ ನೆಪದಲ್ಲಿ ಅಂಗಾಂಗ ಮುಟ್ಟಿದ ಅಧಿಕಾರಿಗೆ ಹೈಕೋರ್ಟ್ ತರಾಟೆ,

ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ತಪಾಸಣೆ ನೆಪದಲ್ಲಿ ದಕ್ಷಿಣ ಕೊರಿಯಾದ ಮಹಿಳೆಗೆ ಲೈಂಗಿಕ ದೌರ್ಜನ್ಯ ಎಸಗಿದ ವಲಸೆ ಅಧಿಕಾರಿಗೆ ಹೈಕೋರ್ಟ್ ಛೀಮಾರಿ ಹಾಕಿದೆ. ಪುರುಷರ ಶೌಚಾಲಯಕ್ಕೆ ಕರೆದೊಯ್ದು ಅಸಭ್ಯವಾಗಿ ವರ್ತಿಸಿದ ಅಧಿಕಾರಿಯ ವಿರುದ್ಧದ ಎಫ್‌ಐಆರ್‌ ರದ್ದುಗೊಳಿಸಲು ನ್ಯಾಯಾಲಯ ನಿರಾಕರಿಸಿದೆ.
Read Full Story

More Trending News