Published : Dec 07, 2025, 06:56 AM ISTUpdated : Dec 07, 2025, 11:25 PM IST

Karnataka News Live: ರಗಡ್‌ ಕಾಪ್‌, ಮ್ಯಾಕ್ಸಿಮಮ್‌ ಮಾಸ್‌.. 'ಮಾರ್ಕ್' ಕಥೆ ಬಗ್ಗೆ ಸ್ಫೋಟಕ ಸತ್ಯ ಬಿಚ್ಚಿಟ್ಟ ಕಿಚ್ಚ ಸುದೀಪ್!

ಸಾರಾಂಶ

ಬೆಂಗಳೂರು: ಆಪ್ತರ ಮದುವೆಯಲ್ಲಿ ಭಾಗಿಯಾಗಿದ್ದ ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ಡಿ.ಕೆ.ಶಿವಕುಮಾರ್‌ ಮಾತನಾಡಿ, ಸಚಿವ ಸತೀಶ್‌ ಜಾರಕಿಹೊಳಿ ಮತ್ತು ನಾವು ಸಹೋದ್ಯೋಗಿಗಳು. ನಾವು ಭೇಟಿ ಮಾಡಿದಾಗ ರಾಜ್ಯ ಮತ್ತು ಪಕ್ಷದ ವಿಚಾರ ಮಾತನಾಡಿದ್ದೇವೆ. ನಮ್ಮನ್ನು ವೈರಿಗಳಂತೆ ಏಕೆ ನೋಡುತ್ತೀರಿ? ನಾವು ಮಧ್ಯಾಹ್ನ ಸಚಿವ ಸಂಪುಟ ಸಭೆಯಲ್ಲಿ ಜತೆಗೆ ಇರುತ್ತೇವೆ. ಬೆಳಗ್ಗೆ ತಿಂಡಿಗೆ, ರಾತ್ರಿ ಊಟಕ್ಕೆ ಸೇರುತ್ತೇವೆ. ರಾಜಕೀಯದಲ್ಲಿ ಸ್ನೇಹ, ಬಾಂಧವ್ಯ, ನೆಂಟಸ್ತನ ಇದ್ದೇ ಇರುತ್ತದೆ ಎಂದು ಹೇಳಿದರು.

Kichcha Sudeep

11:25 PM (IST) Dec 07

ರಗಡ್‌ ಕಾಪ್‌, ಮ್ಯಾಕ್ಸಿಮಮ್‌ ಮಾಸ್‌.. 'ಮಾರ್ಕ್' ಕಥೆ ಬಗ್ಗೆ ಸ್ಫೋಟಕ ಸತ್ಯ ಬಿಚ್ಚಿಟ್ಟ ಕಿಚ್ಚ ಸುದೀಪ್!

ಕಿಚ್ಚ ಸುದೀಪ್‌ ನಟನೆಯ ಬಹು ನಿರೀಕ್ಷೆಯ ‘ಮಾರ್ಕ್‌’ ಚಿತ್ರದ ಟ್ರೇಲರ್‌ ಬಿಡುಗಡೆ ಆಗಿದೆ. ಪಕ್ಕಾ ಆ್ಯಕ್ಷನ್‌ನಿಂದ ಕೂಡಿದ ಈ ಚಿತ್ರದ ಟ್ರೇಲರ್‌ ಇದಾಗಿದೆ. ಟ್ರೇಲರ್‌ನಲ್ಲಿ ಮಕ್ಕಳ ಅಪಹರಣದ ದೃಶ್ಯಗಳು ಬಂದಿದ್ದು, ಕತೆಯ ಗುಟ್ಟು ಕೂಡ ಬಿಟ್ಟು ಕೊಡಲಾಗಿದೆ.

Read Full Story

11:03 PM (IST) Dec 07

ಪ್ರಿ ವೆಡ್ಡಿಂಗ್ ಫೋಟೋ ಶೂಟ್ ಮುಗಿಸಿ ಬೈಕ್‌ನಲ್ಲಿ ತೆರಳುತ್ತಿದ್ದ ಜೋಡಿಗೆ ಲಾರಿ ಡಿಕ್ಕಿ, ಸ್ಥಳದಲ್ಲೇ ಸಾವು

ಪ್ರಿ ವೆಡ್ಡಿಂಗ್ ಫೋಟೋ ಶೂಟ್ ಮುಗಿಸಿ ಬೈಕ್‌ನಲ್ಲಿ ತೆರಳುತ್ತಿದ್ದ ಜೋಡಿಗೆ ಲಾರಿ ಡಿಕ್ಕಿ, ಸ್ಥಳದಲ್ಲೇ ಸಾವು, ಹಸೆಮಣೆ ಏರಬೇಕಿದ್ದ ನವ ಜೋಡಿಗಳು ದುರಂತ ಅಂತ್ಯಕಂಡ ಘಟನೆ ಗಂಗಾವತಿಯಲ್ಲಿ ನಡೆದಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Read Full Story

10:56 PM (IST) Dec 07

ನನ್ನ ತಂದೆ ಕೂಡ ಗುಮ್ಮಡಿ ನರಸಯ್ಯ ಅವರಂತೆಯೇ ಜನರ ಸೇವೆ ಮಾಡಿದವರು - ನಟ ಶಿವಣ್ಣ ಹೇಳಿದ್ದೇನು?

ನನ್ನ ತಂದೆ ಕೂಡ ಗುಮ್ಮಡಿ ನರಸಯ್ಯ ಅವರಂತೆಯೇ ಜನರ ಸೇವೆ ಸಲ್ಲಿಸಿದ್ದಾರೆ. ಅವರು ಯಾವಾಗಲೂ ‘ನಿಮಗಾಗಿ ಬದುಕಬೇಡಿ, ಇತರರಿಗಾಗಿ ಬದುಕಿ’ ಎಂದು ಹೇಳುತ್ತಿದ್ದರು ಎಂದು ನಟ ಶಿವರಾಜ್‌ಕುಮಾರ್‌ ತಿಳಿಸಿದರು.

Read Full Story

10:35 PM (IST) Dec 07

ಮನೀಶ್ ಮಲ್ಹೋತ್ರಾ ಟಿಶ್ಯೂ ಸೀರೆಯಲ್ಲೆ ಆಲಿಯಾ ಭಟ್ ಗ್ಲಾಮರ್ - ಮದುವೆ ಸೀಸನ್‌ನ ಹೊಸ ಟ್ರೆಂಡ್!

ಸೀರೆಯ ವಿನ್ಯಾಸ, ಆಲಿಯಾ ಭಟ್ ಎಂಬ ಸುಂದರಿಯ ಮೈಬಣ್ಣ ಎಲ್ಲ ಸೇರಿ, ‘ಚೆಂದಕಿಂತ ಚೆಂದ ನೀನೆ ಸುಂದರ’ ಎಂದು ಹಾಡು ಹೇಳೋ ರೇಂಜ್‌ಗೆ ಮನಮೋಹಕವಾಗಿತ್ತು. ಈ ಟಿಶ್ಯೂ ಸಾರಿ ಲೇಟೆಸ್ಟಾಗಿ ಎಂಟ್ರಿ ಕೊಟ್ಟಿರೋದೇನಲ್ಲ.

Read Full Story

10:03 PM (IST) Dec 07

ಕಾಂಗ್ರೆಸ್ ಸರ್ಕಾರ ಶೇ.60ರಷ್ಟು ಭ್ರಷ್ಟಾಚಾರದಲ್ಲಿ ಮುಳುಗಿದೆ - ಮಾಜಿ ಸಚಿವ ಬಿ.ಸಿ.ಪಾಟೀಲ್ ಆರೋಪ

ಸರ್ಕಾರಕ್ಕೆ ಕಿಂಚಿತ್ತು ನಾಚಿಕೆ ಇಲ್ಲದಂತಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರೈತರ ಹಾಗೂ ಸಾರ್ವಜನಿಕರ ಪಾಲಿಗೆ ಸತ್ತೇಹೋಗಿದೆ. ಶೇ. 60ರಷ್ಟು ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಮಾಜಿ ಸಚಿವ ಬಿ.ಸಿ.ಪಾಟೀಲ್ ಆರೋಪಿಸಿದರು.

Read Full Story

09:33 PM (IST) Dec 07

ಮಹಿಳೆಯರೇ ಎಚ್ಚರ.. ದೇಹ ತೋರಿಸುವ ಈ ಲಕ್ಷಣಗಳು ಕ್ಯಾನ್ಸರ್‌ನ ಆರಂಭಿಕ ಸೂಚನೆಗಳು!

ಮಹಿಳೆಯರನ್ನು ಬಾಧಿಸುವ ಪ್ರಮುಖ ಕಾಯಿಲೆಗಳಲ್ಲಿ ಕ್ಯಾನ್ಸರ್‌ ಕೂಡ ಒಂದು. ಪ್ರತಿ ವರ್ಷ ಪ್ರಪಂಚದಾದ್ಯಂತ ಲಕ್ಷಾಂತರ ಮಹಿಳೆಯರು ಕ್ಯಾನ್ಸರ್‌ಗೆ ತುತ್ತಾಗುತ್ತಿದ್ದಾರೆ. ಸರಿಯಾದ ರೋಗನಿರ್ಣಯದಿಂದ ಮೂರರಲ್ಲಿ ಎರಡು ಪ್ರಕರಣಗಳನ್ನು ಗುಣಪಡಿಸಬಹುದು.

Read Full Story

09:06 PM (IST) Dec 07

ಇನ್ಮುಂದೆ ನೂರು ಗ್ಯಾರಂಟಿ ಘೋಷಣೆ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ - ಛಲವಾದಿ ನಾರಾಯಣಸ್ವಾಮಿ

ಬ್ರೇಕ್‌ಫಾಸ್ಟ್ ಪಾರ್ಟಿ ಮಾಡುವ ಮೂಲಕ ಟೈಮ್ ಪಾಸ್ ಮಾಡುತ್ತಿದ್ದಾರೆಯೇ ಹೊರತು ಜನರ ಸಮಸ್ಯೆಗಳ ಬಗ್ಗೆ ಚರ್ಚಿಸುವುದಕ್ಕಾಗಲಿ, ರಾಜ್ಯದ ಅಭಿವೃದ್ಧಿಗಾಗಿ ಒಂದು ದಿನ ಕೂಡ ಕುಳಿತು ಮಾತನಾಡಿದ್ದಿಲ್ಲ ಎಂದು ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು.

Read Full Story

08:50 PM (IST) Dec 07

ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಗೆ ವೆಂಕಟೇಶ್ ಪ್ರಸಾದ್ ಅಧ್ಯಕ್ಷ, ಚುನಾವಣಾ ಫಲಿತಾಂಶ ಪ್ರಕಟ

ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಗೆ ವೆಂಕಟೇಶ್ ಪ್ರಸಾದ್ ಅಧ್ಯಕ್ಷ, ಚುನಾವಣಾ ಫಲಿತಾಂಶ ಪ್ರಕಟ, ಭಾರಿ ಜಿದ್ದಾಜಿದ್ದಿನಿಂದ ಕೂಡಿದ ಚುನಾವಣೆ ಹೈಕೋರ್ಟ್ ವರೆಗೂ ತಲುಪಿತ್ತು. ಇಂದು ನಡೆದ ಮತದಾನದಲ್ಲಿ ವೆಂಕಟೇಶ್ ಪ್ರಸಾದ್ ಅಧ್ಯಕ್ಷರಾಗಿ ಗೆಲುವು ಕಂಡಿದ್ದಾರೆ.

Read Full Story

08:43 PM (IST) Dec 07

ಜನರ ವಿಶ್ವಾಸ ಕಳೆದುಕೊಂಡ ಕಾಂಗ್ರೆಸ್, ಚುನಾವಣೆಗೇ ಬನ್ನಿ - ಸರ್ಕಾರಕ್ಕೆ ಸಿ.ಟಿ.ರವಿ ಸವಾಲು

ರಾಜ್ಯದ ಜನರ ವಿಶ್ವಾಸವನ್ನು ಸರ್ಕಾರ ಕಳೆದುಕೊಂಡಿದ್ದು, ಚುನಾವಣೆಗೆ ಹೋಗುತ್ತೇವೆ ಎಂಬ ಚಾಲೆಂಜ್‌ ಸ್ವೀಕಾರ ಮಾಡಲಿ ಎಂದು ವಿಧಾನಪರಿಷತ್‌ ಸದಸ್ಯ ಸಿ.ಟಿ.ರವಿ ಸವಾಲು ಹಾಕಿದ್ದಾರೆ. ಮಾಧ್ಯಮದವರ ಜತೆ ಮಾತನಾಡಿದರು.

Read Full Story

08:22 PM (IST) Dec 07

ಸಿದ್ದರಾಮಯ್ಯ ಆಡಳಿತ ಕೇವಲ ಟೀಕೆಯಲ್ಲಿ ಮುಳುಗಿದೆ - ಕೇಂದ್ರ ಸಚಿವ ವಿ.ಸೋಮಣ್ಣ ಆರೋಪ

ಸಂಸ್ಕಾರ ಹಾಗೂ ಸಂಸ್ಕೃತಿ ಇಲ್ಲದ, ಮಾತೆತ್ತಿದರೆ ಭಾಗ್ಯ, ಭಾಗ್ಯ ಎಂದು ಹೇಳುತ್ತಿರುವ ಸಿದ್ದರಾಮಯ್ಯ ಆಡಳಿತ ಕೇವಲ ಟೀಕೆಯಲ್ಲಿ ಮುಳುಗಿದೆ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ವಾಗ್ದಾಳಿ ನಡೆಸಿದರು.

Read Full Story

08:09 PM (IST) Dec 07

ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮಧ್ಯೆ ಖುರ್ಚಿ ಕಾದಾಟ ಇಲ್ಲ - ಬಸವರಾಜ ರಾಯರೆಡ್ಡಿ

ಅಭಿವೃದ್ಧಿಗೆ ಆದ್ಯತೆ ನೀಡಿ, ರಾಜ್ಯದಲ್ಲಿ ಒಳ್ಳೆಯ ಆಡಳಿತ ನೀಡಬೇಕಿದೆ. ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಖುರ್ಚಿ ಕಾದಾಟ ಇಲ್ಲ. ಸದ್ಯದ ಪರಿಸ್ಥಿತಿಯಲ್ಲಿ ಸಿದ್ದರಾಮಯ್ಯ ಬದಲಾವಣೆಯೂ ಇಲ್ಲ ಎಂದು ಬಸವರಾಜ ರಾಯರೆಡ್ಡಿ ಸ್ಪಷ್ಟಪಡಿಸಿದರು.

Read Full Story

08:04 PM (IST) Dec 07

ಮದುವೆ ನಂತರ ಕಾರಿನ ಸ್ಟೇರಿಂಗ್ ಹಿಡಿದ ವಧು; ದೇವ್ರೇ ಕಾಪಾಡಪ್ಪಾ ಎಂದು ಕೈಮುಗಿದು ಕುಳಿತುಕೊಂಡ ವರ!

ಮದುವೆ ಸಮಾರಂಭದ ನಂತರ, ಭವಾನಿ ತಲ್ವಾರ್ ವರ್ಮಾ ಎಂಬ ನವವಧು ತಾನೇ ಕಾರ್ ಓಡಿಸಿಕೊಂಡು ಗಂಡನ ಮನೆಗೆ ಹೋಗುವ ವಿಡಿಯೋ ವೈರಲ್ ಆಗಿದೆ. ಭಾರವಾದ ಉಡುಗೆಯಲ್ಲಿದ್ದರೂ ಉತ್ಸಾಹದಿಂದ ಡ್ರೈವಿಂಗ್ ಮಾಡುವ ಆಕೆಗೆ ಪತಿ ಸಾಥ್ ನೀಡಿದ್ದು, ಈ ಸುಂದರ ಕ್ಷಣ ನೆಟ್ಟಿಗರ ಮನಗೆದ್ದಿದೆ.

Read Full Story

07:59 PM (IST) Dec 07

Breaking ಮಂಡ್ಯ ಬಸ್ ಅಪಘಾತದಲ್ಲಿ 23 ಪ್ರಯಾಣಿಕರಿಗೆ ಗಾಯ, ಇಬ್ಬರು ಗಂಭೀರ

ಮಂಡ್ಯ ಬಸ್ ಅಪಘಾತದಲ್ಲಿ 23 ಪ್ರಯಾಣಿಕರಿಗೆ ಗಾಯ, ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. 40 ಮಂದಿ ಪ್ರಯಾಣಿಸುತ್ತಿದ್ದ ಬಸ್ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲಿ ಪಲ್ಟಿಯಾಗಿದೆ. ದೇವಸ್ಥಾನದಿಂದ ಮರಳುವಾಗ ಈ ಘಟನೆ ನಡೆದಿದೆ.

Read Full Story

07:52 PM (IST) Dec 07

ದೇಶಮುದುರು ಹೊಡೆತಕ್ಕೆ ಅಡ್ರೆಸ್ ಇಲ್ಲದಂತಾದ ಪ್ರಭಾಸ್ ಸಿನಿಮಾ.. ಒಂದೇ ವರ್ಷ ಬ್ಯಾಕ್ ಟು ಬ್ಯಾಕ್ ಫ್ಲಾಪ್

ಪ್ರಭಾಸ್‌ಗೆ ಒಂದೇ ವರ್ಷದಲ್ಲಿ 2 ಬ್ಯಾಕ್ ಟು ಬ್ಯಾಕ್ ಫ್ಲಾಪ್‌ಗಳು ಎದುರಾದವು. ಅಲ್ಲು ಅರ್ಜುನ್ ಮತ್ತು ವೆಂಕಟೇಶ್ ಚಿತ್ರಗಳ ಜೊತೆ ಸ್ಪರ್ಧೆಗೆ ಇಳಿದಿದ್ದರಿಂದ ನೆಗೆಟಿವ್ ರಿಸಲ್ಟ್ ತಪ್ಪಲಿಲ್ಲ. ಆ ಸಿನಿಮಾಗಳು ಯಾವುವು ಅಂತ ಈ ಸ್ಟೋರಿಲಿ ನೋಡೋಣ.

Read Full Story

07:30 PM (IST) Dec 07

700 ಕೋಟಿಗೂ ಹೆಚ್ಚು ಆಸ್ತಿ, 10 ವರ್ಷ ಚಿಕ್ಕವನನ್ನು ಮದುವೆಯಾದ ನಟಿ, ಬೆಡ್‌ರೂಮ್ ಸೀಕ್ರೆಟ್ ಹೇಳಿದ್ಯಾರು?

700 ಕೋಟಿ ಆಸ್ತಿಯ ಒಡತಿ, ಸೌತ್ ಜೊತೆಗೆ ಬಾಲಿವುಡ್, ಹಾಲಿವುಡ್‌ನಲ್ಲೂ ಫೇಮಸ್ ಆದ ನಟಿ, 40 ದಾಟಿದ್ರೂ ಇಮೇಜ್ ಕಮ್ಮಿಯಾಗದ ಸುಂದರಿ.. ತನಗಿಂತ 10 ವರ್ಷ ಚಿಕ್ಕವನನ್ನು ಮದುವೆಯಾದ ಈ ನಟಿ ಯಾರು ಗೊತ್ತಾ?

Read Full Story

07:25 PM (IST) Dec 07

Bigg Boss - ನಂಗೆ ಮದ್ವೆಯಾದ್ಮೇಲೆ ಮಕ್ಕಳಾಗತ್ತಲ್ವಾ ಎಂದ ರಕ್ಷಿತಾ ಶೆಟ್ಟಿ, ಸೂರಜ್​ ಬಳಿ ಇಂಥ ಪ್ರಶ್ನೆ ಕೇಳೋದಾ?

ಬಿಗ್ ಬಾಸ್ ಮನೆಯಲ್ಲಿ ಜನಪ್ರಿಯತೆ ಗಳಿಸಿರುವ ರಕ್ಷಿತಾ ಶೆಟ್ಟಿ, ಶೋ ಮುಗಿದ ನಂತರದ ತಮ್ಮ ಭವಿಷ್ಯದ ಯೋಜನೆಗಳ ಬಗ್ಗೆ ಮಾತನಾಡಿದ್ದಾರೆ.  ತನ್ನ ಮದುವೆ ಹಾಗೂ ಮಕ್ಕಳನ್ನು ಅಭಿಮಾನಿಗಳು ಹೇಗೆ ಸ್ವೀಕರಿಸುತ್ತಾರೆ ಎಂಬ ಚಿಂತೆಯನ್ನೂ ಹಂಚಿಕೊಂಡಿದ್ದಾರೆ. ಅವರು ಹೇಳಿದ್ದೇನು?

Read Full Story

07:21 PM (IST) Dec 07

ಇಂಟರ್ನೆಟ್ ಇಲ್ಲದೆಯೂ UPI ಪಾವತಿ ಮಾಡಬಹುದು, *99# ಮೂಲಕ ಹಣ ಕಳುಹಿಸುವುದು ಹೇಗೆ?

ನೆಟ್‌ವರ್ಕ್ ಇಲ್ಲದ ಪ್ರದೇಶದಲ್ಲಿ ಅಥವಾ ಸ್ಮಾರ್ಟ್‌ಫೋನ್ ಇಲ್ಲದೆಯೂ USSD ಆಧಾರಿತ (*99#) UPI ಪಾವತಿಗಳನ್ನು ಮಾಡಬಹುದು. ಈ ವೈಶಿಷ್ಟ್ಯವನ್ನು ಹೇಗೆ ಸಕ್ರಿಯಗೊಳಿಸುವುದು, ವಹಿವಾಟಿನ ಮಿತಿಗಳು ಮತ್ತು ಇಂಟರ್ನೆಟ್ ಇಲ್ಲದೆ ಹಣ ಕಳುಹಿಸುವ ಹಂತಗಳನ್ನು ಇಲ್ಲಿ ವಿವರಿಸಲಾಗಿದೆ.

Read Full Story

07:06 PM (IST) Dec 07

ಸಿಎಂ, ಡಿಸಿಎಂ ನಡುವೆ ಬೂದಿ ಮುಚ್ಚಿದ ಕೆಂಡದ ಪರಿಸ್ಥಿತಿ - ಸಂಸದ ಜಗದೀಶ್ ಶೆಟ್ಟರ್

ಸಿಎಂ, ಡಿಸಿಎಂ ನಡುವೆ ಬೂದಿ ಮುಚ್ಚಿದ ಕೆಂಡದ ಪರಿಸ್ಥಿತಿಯಿದೆ. ಮೇಲ್ನೋಟಕ್ಕೆ ಬ್ರೇಕ್‌ಫಾಸ್ಟ್ ನಾಟಕ ಮಾಡುತ್ತಿದ್ದಾರೆ. ಅಧಿವೇಶನ ಬಂದಿದ್ದರಿಂದ ಹೋದಾಣಿಕೆ ತೋರಿಸುತ್ತಿದ್ದಾರೆ. ಆದರೆ, ಅವರ ಹಿಂಬಾಲಕರ ನಡುವೆ ಕುಸ್ತಿ ನಡೆದಿದೆ ಎಂದು ಸಂಸದ ಜಗದೀಶ್ ಶೆಟ್ಟರ್ ಆರೋಪಿಸಿದರು.

Read Full Story

06:56 PM (IST) Dec 07

ಗೆಳೆಯರ ಜೊತೆ ಟ್ರಿಪ್ ಹೋಗಿದ್ದ ಬೆಂಗಳೂರು ನಿವಾಸಿ ಗೋವಾ ನೈಟ್ ಕ್ಲಬ್ ದುರಂತದಲ್ಲಿ ಮೃತ

ಗೆಳೆಯರ ಜೊತೆ ಟ್ರಿಪ್ ಹೋಗಿದ್ದ ಬೆಂಗಳೂರು ನಿವಾಸಿ ಗೋವಾ ನೈಟ್ ಕ್ಲಬ್ ದುರಂತದಲ್ಲಿ ಮೃತ, ಅರ್ಪೋರಾದಲ್ಲಿ ನಡೆದ ಅಗ್ನಿ ದುರಂತದಲ್ಲಿ ಮೃತರ ಸಂಖ್ಯೆ 25ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ ಕನ್ನಡಿಗನೂ ಬಲಿಯಾಗಿದ್ದಾರೆ.

Read Full Story

06:52 PM (IST) Dec 07

ಸುದೀಪ್​ಗೆ ಸ್ತ್ರೀದೋಷ ಇದೆಯಾ? ಬಹು ದೊಡ್ಡ ರಹಸ್ಯ ರಿವೀಲ್​ ಮಾಡಿದ ಕಿಚ್ಚ ಹೇಳಿದ್ದೇನು?

ಕಿಚ್ಚ ಸುದೀಪ್ ಅಭಿನಯದ 'ಮಾರ್ಕ್' ಸಿನಿಮಾದ ಟ್ರೈಲರ್ ಬಿಡುಗಡೆಯಾಗಿದ್ದು, ಡಿಸೆಂಬರ್ 25 ರಂದು ಚಿತ್ರ ತೆರೆಗೆ ಬರಲಿದೆ. ಪತ್ರಿಕಾಗೋಷ್ಠಿಯಲ್ಲಿ,   'ಸ್ತ್ರೀದೋಷ' ಇದೆಯೇ ಎಂಬ ಪ್ರಶ್ನೆಗೆ ಸುದೀಪ್ ತಮ್ಮ ಪತ್ನಿ ಪ್ರಿಯಾ ಸಮ್ಮುಖದಲ್ಲಿಯೇ ಉತ್ತರಿಸಿದ್ದಾರೆ. ಅವರು ಹೇಳಿದ್ದೇನು?  

Read Full Story

06:33 PM (IST) Dec 07

ಪವನ್ ಕಲ್ಯಾಣ್, ಅಲ್ಲು ಅರ್ಜುನ್ ಜೊತೆ ರಾಜಮೌಳಿ ಯಾಕೆ ಸಿನಿಮಾ ಮಾಡಿಲ್ಲ? ಕಾರಣ ಕೇಳಿದ್ರೆ ಆಶ್ಚರ್ಯಪಡ್ತೀರಾ!

ತೆಲುಗಿನಲ್ಲಿ ಸಣ್ಣ, ದೊಡ್ಡ ಹೀರೋಗಳ ಜೊತೆ ಸಿನಿಮಾ ಮಾಡಿರುವ ರಾಜಮೌಳಿ.. ಪವನ್ ಕಲ್ಯಾಣ್, ಅಲ್ಲು ಅರ್ಜುನ್ ಜೊತೆ ಮಾತ್ರ ಯಾಕೆ ಸಿನಿಮಾ ಮಾಡಿಲ್ಲ ಗೊತ್ತಾ? ಇನ್ಮುಂದೆ ಇವರ ಕಾಂಬೋದಲ್ಲಿ ಸಿನಿಮಾ ಬರೋದು ಕಷ್ಟನಾ?

Read Full Story

06:29 PM (IST) Dec 07

Karna Serial - ಸಂಜಯ್‌ ಮಾಡಿದ ಕುತಂತ್ರಕ್ಕೆ ಬಲಿಯಾದ ನಿತ್ಯಾ - ಈಗ ಕರ್ಣನ ಜೊತೆ ಅಸಲಿ ಮದುವೆ ಆಗ್ಲೇಬೇಕು!

Karna Kannada Serial Episode Update: ಕರ್ಣ ಧಾರಾವಾಹಿಯಲ್ಲಿ ನಿತ್ಯಾ ಹಾಗೂ ಕರ್ಣನ ಸುಳ್ಳಿನ ಮದುವೆ ಯಾರಿಗೂ ಗೊತ್ತಿಲ್ಲ. ಅದರಂತೆ ನಿತ್ಯಾ ಹೊಟ್ಟೆಯಲ್ಲಿರುವ ಮಗುವಿನ ಬಗ್ಗೆ ಕೂಡ ಕರ್ಣ ಗಮನ ಕೊಡಬೇಕಿದೆ. ಹೀಗಿರುವಾಗ ಇವರಿಬ್ಬರಿಗೂ ದೊಡ್ಡ ಸಮಸ್ಯೆ ಎದುರಾಗಿದೆ. ಹಾಗಾದರೆ ಮುಂದೆ ಏನಾಗುವುದು?

Read Full Story

06:29 PM (IST) Dec 07

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಮತ್ತು ಬೆಳಗಾವಿ ವಿಭಜನೆ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಹತ್ವದ ಮಾಹಿತಿ

ಆಡಳಿತಾತ್ಮಕ ದೃಷ್ಟಿಯಿಂದ ಬೆಳಗಾವಿ ಜಿಲ್ಲೆಯನ್ನು ವಿಭಜಿಸುವುದು ಉತ್ತಮ ನಿರ್ಧಾರ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಆದರೆ, ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಬೇಡಿಕೆಯನ್ನು ವಿರೋಧಿಸಿ, ಅಖಂಡ ಕರ್ನಾಟಕದ ಚಿಂತನೆಯೊಂದಿಗೆ ಅಭಿವೃದ್ಧಿಗೆ ಒತ್ತು ನೀಡಬೇಕೆಂದು ಅವರು ಕರೆ ನೀಡಿದರು.

Read Full Story

06:21 PM (IST) Dec 07

ದೇವರ ದರ್ಶನ ಮುಗಿಸಿ ಬೆಂಗಳೂರಿಗೆ ಮರಳುತ್ತಿದ್ದ ಬಸ್ ಮಂಡ್ಯ ಬಳಿ ಪಲ್ಟಿ, 8 ಮಂದಿಗೆ ಗಾಯ

ದೇವರ ದರ್ಶನ ಮುಗಿಸಿ ಬೆಂಗಳೂರಿಗೆ ಮರಳುತ್ತಿದ್ದ ಬಸ್ ಮಂಡ್ಯ ಬಳಿ ಪಲ್ಟಿ, 8 ಮಂದಿಗೆ ಗಾಯ, ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಗಾಯಾಳುಗಳನ್ನು ತಕ್ಷಣವೇ ಆಸ್ಪತ್ರೆ ದಾಖಲಿಸಲಾಗಿದೆ.

Read Full Story

06:07 PM (IST) Dec 07

ಚಾಣಕ್ಯ ನೀತಿಯ ಪ್ರಕಾರ ಇಂಥ ಸಂಗಾತಿ ಸಿಕ್ಕರೆ ಜೀವನಪೂರ್ತಿ ಕಷ್ಟ ತಪ್ಪಿದ್ದಲ್ಲ!

ಜೀವನದಲ್ಲಿ ಉತ್ತಮ ಸಂಗಾತಿ ಬಂದರೆ ಅವರ ಜೀವನ ಸ್ವರ್ಗದಂತಿರುತ್ತದೆ. ಮೌಲ್ಯಗಳಿಲ್ಲದ ಸಂಗಾತಿ ಬಂದರೆ ಕಷ್ಟಗಳಿಂದ ತುಂಬಿರುತ್ತದೆ. ಚಾಣಕ್ಯನ ಪ್ರಕಾರ, ಜೀವನ ಸಂಗಾತಿ ಹೇಗಿದ್ದರೆ ಕಷ್ಟಗಳು ತಪ್ಪುವುದಿಲ್ಲ ಎಂದು ನೋಡೋಣ.

Read Full Story

05:51 PM (IST) Dec 07

ಕಥೆ ಇರಲ್ಲ, ಆದ್ರೆ ಮೂರೂವರೆ ಗಂಟೆ ಸಿನಿಮಾ.. ಸುಕುಮಾರ್, ಸಂದೀಪ್ ವಂಗಾ, ರಾಜಮೌಳಿಗೆ ಬಾಲಯ್ಯ ಟಾಂಗ್!

ನಂದಮೂರಿ ಬಾಲಕೃಷ್ಣ ಅವರು ಸ್ಟಾರ್ ನಿರ್ದೇಶಕರಾದ ರಾಜಮೌಳಿ, ಸುಕುಮಾರ್, ಸಂದೀಪ್ ರೆಡ್ಡಿ ವಂಗಾ ಅವರಿಗೆ ಟಾಂಗ್ ಕೊಟ್ಟಿದ್ದಾರೆ. ಸಿನಿಮಾದ ಅವಧಿಯ ಬಗ್ಗೆ ಅವರು ಸಂಚಲನಾತ್ಮಕ ಹೇಳಿಕೆ ನೀಡಿದ್ದಾರೆ.

Read Full Story

05:41 PM (IST) Dec 07

ಗ್ಯಾರಂಟಿ ಹೆಸರಿನಲ್ಲಿ ಕಾಲಹರಣ ಮಾಡುವ ಕೆಲಸ ಆಗುತ್ತಿದೆ - ಛಲವಾದಿ ನಾರಾಯಣಸ್ವಾಮಿ

ಗ್ಯಾರಂಟಿ ಹೆಸರಿನಲ್ಲಿ ಕಾಲಹರಣ ಮಾಡುವ ಕೆಲಸ ಆಗುತ್ತಿದೆ. ರಸ್ತೆಗಳ ಪರಿಸ್ಥಿತಿ ಚಿಂತಾಜನಕವಾಗಿದ್ದು, ಜನರ ಸಮಸ್ಯೆಗೆ ಪರಿಹಾರ ನೀಡಲು ಕಾಂಗ್ರೆಸ್‌ ಸರ್ಕಾರ ವಿಫಲವಾಗಿದೆ ಎಂದು ವಿಧಾನಪರಿಷತ್ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದರು.

Read Full Story

05:15 PM (IST) Dec 07

Amruthadhaare - ಅಜ್ಜಿ-ಮೊಮ್ಮಕ್ಕಳ ಮಿಲನದ ಅಪೂರ್ವ ಮಿಲನ; ವೀಕ್ಷಕರು ನಿರೀಕ್ಷಿಸುತ್ತಿದ್ದ ಘಳಿಗೆ ಬಂತು, ಆದ್ರೆ...

'ಅಮೃತಧಾರೆ' ಧಾರಾವಾಹಿಯಲ್ಲಿ ಗೌತಮ್ ಅಜ್ಜಿ ಭಾಗ್ಯಮ್ಮ ಮೊಮ್ಮಕ್ಕಳನ್ನು ಹುಡುಕಿ ಬಂದಿದ್ದಾರೆ. ಭೂಮಿಕಾಳ ಹಠದಿಂದ ದೂರವಾಗಿರುವ ಗೌತಮ್-ಭೂಮಿಕಾಳನ್ನು ಒಂದು ಮಾಡಲು ಅಜ್ಜಿ ಪಣತೊಟ್ಟಿದ್ದು, ವಠಾರದಲ್ಲಿ ಮೊಮ್ಮಕ್ಕಳನ್ನು ಭೇಟಿಯಾಗಿ ಮುದ್ದಾಡಿದ್ದಾರೆ. ಆದರೆ, ಜೈದೇವ್ ಕಥೆ ಇನ್ನೂ ನಿಗೂಢವಾಗಿಯೇ ಉಳಿದಿದೆ.
Read Full Story

05:13 PM (IST) Dec 07

ಯಾವುದೇ ಹಿನ್ನೆಲೆ ಇಲ್ಲದೆ ಸ್ಟಾರ್ ಆದ ನಟ.. ಮಗ ಹುಟ್ಟಿದಾಗ ಜಾತಕ ಹೇಳಿದ್ರು ಚಿರಂಜೀವಿ - ಅಷ್ಟಕ್ಕೂ ಯಾರು ಆ ಹೀರೋ?

ಯಾವುದೇ ಹಿನ್ನೆಲೆ ಇಲ್ಲದೆ ಬೆಳೆದ ಸ್ಟಾರ್ ನಟರೊಬ್ಬರು ಚಿರಂಜೀವಿ ಬಗ್ಗೆ ಆಸಕ್ತಿಕರ ಮಾತುಗಳನ್ನಾಡಿದ್ದಾರೆ. ತನಗೆ ಮಗ ಹುಟ್ಟಿದಾಗ ಚಿರಂಜೀವಿ ಜಾತಕ ಹೇಳಿದ್ದರಂತೆ. ಅಷ್ಟಕ್ಕೂ ಆ ನಟ ಯಾರು ಅನ್ನೋದನ್ನು ಈ ಸ್ಟೋರಿನಲ್ಲಿ ತಿಳಿಯಿರಿ.

Read Full Story

05:05 PM (IST) Dec 07

ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಸುಟ್ಟು ಕರಕಲಾದ ರೆನಾಲ್ಟ್ ಡಸ್ಟರ್ ಕಾರು!

ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ, ಹಾಲಿನ ಟ್ಯಾಂಕರ್‌ಗೆ ರೆನಾಲ್ಟ್ ಡಸ್ಟರ್ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿಗೆ ಬೆಂಕಿ ಹೊತ್ತಿಕೊಂಡು ಸಂಪೂರ್ಣ ಸುಟ್ಟು ಕರಕಲಾಗಿದೆ. ಈ ದುರ್ಘಟನೆ ರಾಮನಗರದ ಸಂಗಬಸವನದೊಡ್ಡಿ ಬಳಿ ನಡೆದಿದೆ.

Read Full Story

04:54 PM (IST) Dec 07

ಕೇಂದ್ರ ಯೋಜನೆಗಳ ಅನುಷ್ಠಾನಕ್ಕೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ - ಸಂಸದ ಯದುವೀರ್

ಕೇಂದ್ರ ಸರ್ಕಾರದಿಂದ ಹಲವು ಯೋಜನೆಗಳಿದ್ದು, ಅವುಗಳನ್ನು ಪರಿಣಾಮಕಾರಿಯಾಗಿ ತಲುಪಿಸುವುದು ಅಧಿಕಾರಿಗಳ ಜವಾಬ್ದಾರಿಯಾಗಿದೆ. ಆ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗುವಂತೆ ಅಧಿಕಾರಿಗಳಿಗೆ ಯದುವೀರ್ ಒಡೆಯರ್ ಸ್ಪಷ್ಟ ನಿರ್ದೇಶನ ನೀಡಿದ್ದಾರೆ.

Read Full Story

04:49 PM (IST) Dec 07

ರಾಜ್ಯದಲ್ಲಿ ಅಂತರ್ಜಾತಿ ವಿವಾಹ ಹೆಚ್ಚಾಗಬೇಕು, ಆದ್ರೆ ಒಂದರಿಂದ 2 ಮಕ್ಕಳನ್ನ ಮಾಡಿಕೊಳ್ಳಿ; ಸಿಎಂ ಸಿದ್ದರಾಮಯ್ಯ

ಧಾರವಾಡದಲ್ಲಿ ಶಾಸಕ ಕೋನರೆಡ್ಡಿ ಆಯೋಜಿಸಿದ್ದ ಸಾಮೂಹಿಕ ವಿವಾಹದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯ, ಸಮಾಜದಲ್ಲಿ ಅಂತರ ಜಾತಿಯ ವಿವಾಹಗಳು ಹೆಚ್ಚಾಗಬೇಕು ಎಂದು ಕರೆ ನೀಡಿದರು. ಇದೇ ವೇಳೆ, ದೇಶದ ಜನಸಂಖ್ಯೆ ಹೆಚ್ಚಾಗಿರುವುದರಿಂದ ನವದಂಪತಿಗಳು ಎರಡು ಮಕ್ಕಳನ್ನು ಮಾಡಿಕಳ್ಳಲು ಸಲಹೆ ನೀಡಿದರು.

Read Full Story

04:38 PM (IST) Dec 07

ಮಂಡ್ಯ ಜಿಲ್ಲೆಯಲ್ಲಿ ಕೈಗಾರಿಕೆ ಸ್ಥಾಪಿಸುವುದು ಕಾಂಗ್ರೆಸ್‌ನವರಿಗೆ ಇಷ್ಟವಿಲ್ಲ - ಎಚ್.ಡಿ.ಕುಮಾರಸ್ವಾಮಿ

ಸರ್ಕಾರ ಜಾಗ ದೊರಕಿಸಿಕೊಡುವಲ್ಲಿ ವಿಫಲವಾಗಿದೆ. ಜಿಲ್ಲೆಯೊಳಗೆ ಕೈಗಾರಿಕೆ ಸ್ಥಾಪಿಸುವ ಇಚ್ಛಾಶಕ್ತಿ ಕಾಂಗ್ರೆಸ್‌ನವರಿಗೆ ಇಲ್ಲ ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದರು.

Read Full Story

04:23 PM (IST) Dec 07

BBK 12 - ಗಿಲ್ಲಿ ನಟನ ವಿರುದ್ಧ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸೇಡು ತೀರಿಸಿಕೊಳ್ಳಲು ರೆಡಿಯಾದ ರಘು; ಪ್ಲ್ಯಾನ್‌ ಏನು?

Bigg Boss Kannada Season 12: ಬಿಗ್‌ ಬಾಸ್‌ ಕನ್ನಡ ಸೀಸನ್‌ 12 ಶೋನಲ್ಲಿ ಗಿಲ್ಲಿ ನಟ ಲವ್ಸ್‌ ರಘು ಎನ್ನೋ ಥರ ಇವರ ಬಂಧ ಇತ್ತು. ಆದರೆ ಈಗ ಇವರಿಬ್ಬರ ಮಧ್ಯೆ ಮನಸ್ತಾಪ ಬಂದಿದೆ. ಈ ಜೋಡಿ ದೂರ ಆಗಿದೆ. ಈಗ ಗಿಲ್ಲಿ ನಟನಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸೇಡು ತೀರಿಸಿಕೊಳ್ಳಲು ರಘು ರೆಡಿಯಾಗಿದ್ದಾರೆ.

Read Full Story

04:22 PM (IST) Dec 07

ರೈತರಿಗೆ ಅನುಕೂಲ ಮಾಡುವುದೇ ಗುರಿ - ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್

ರೈತರಿಗೆ ಅನುಕೂಲ ಮಾಡುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡುತ್ತೇನೆ ಎಂದು ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ಹೇಳಿದರು. ತಾಲೂಕಿನ ಕೆಂಪಸಾಗರ ಗ್ರಾಮದಲ್ಲಿ ಡೈರಿ ಕಟ್ಟಡ ಉದ್ಘಾಟಿಸಿ ಮಾತನಾಡಿದರು.

Read Full Story

04:19 PM (IST) Dec 07

Bigg Boss - 'ಜುಂ ಜುಂ ಮಾಯಾ, ಪ್ರಾಯ ಬಂದ್ರೆ..' ಗಿಲ್ಲಿ- ಅಶ್ವಿನಿ ರೊಮಾನ್ಸ್​, ಕಾವ್ಯಾನ ಕಣ್ಣು ಮುಚ್ರಪ್ಪೋ ಪ್ಲೀಸ್​

ಬಿಗ್‌ಬಾಸ್ ಮನೆಯಲ್ಲಿ ಹಾವು-ಮುಂಗುಸಿಗಳಂತಿದ್ದ ಗಿಲ್ಲಿ ನಟ ಮತ್ತು ಅಶ್ವಿನಿ ಗೌಡ ಇದೀಗ 'ಜುಂ ಜುಂ ಮಾಯಾ' ಹಾಡಿಗೆ ರೊಮ್ಯಾಂಟಿಕ್ ಆಗಿ ಡಾನ್ಸ್ ಮಾಡಿ ಅಚ್ಚರಿ ಮೂಡಿಸಿದ್ದಾರೆ. ಈ ಸಮಯದಲ್ಲಿ ಕಾವ್ಯಾ ಶೈವ ಅವರ ಮುಖಭಾವ ಬದಲಾಗಿರುವುದನ್ನು ನೋಡಬಹುದು.

Read Full Story

03:44 PM (IST) Dec 07

ದಾವಣಗೆರೆ ಮಹಿಳೆಯನ್ನ ಕಚ್ಚಿಕೊಂದ 2 ರಾಟ್‌ವೀಲರ್ ನಾಯಿಗಳು ಜನರ ಹಲ್ಲೆಯಿಂದ ಸಾವು; ಶ್ವಾನಗಳ ಮಾಲೀಕ ಬಂಧನ

ದಾವಣಗೆರೆಯಲ್ಲಿ ರಾಟ್‌ವೀಲರ್ ನಾಯಿಗಳ ದಾಳಿಗೆ ಮಹಿಳೆಯೊಬ್ಬರು ಮೃತಪಟ್ಟ ಪ್ರಕರಣದಲ್ಲಿ, ನಾಯಿಗಳನ್ನು ಬಿಟ್ಟುಹೋಗಿದ್ದ ಮಾಲೀಕ ಶೈಲೇಶಕುಮಾರ್‌ನನ್ನು ಪೊಲೀಸರು ಬಂಧಿಸಿದ್ದಾರೆ. ದಾಳಿ ನಡೆಸಿದ್ದ ಎರಡೂ ನಾಯಿಗಳು ಸೆರೆ ಕಾರ್ಯಾಚರಣೆ ವೇಳೆ ಆಂತರಿಕ ರಕ್ತಸ್ರಾವದಿಂದ ಸಾವನ್ನಪ್ಪಿವೆ.
Read Full Story

03:44 PM (IST) Dec 07

BBK 12 - ಗಿಲ್ಲಿ ನಟ ನನ್ನ ಪಾಲಿಗೆ ಹಾವು- ಕಿಚ್ಚ ಸುದೀಪ್‌ ಮುಂದೆಯೇ ತಿರುಗಿ ಬಿದ್ದ ಕಾವ್ಯ ಶೈವ

Bigg Boss Kannada Season 12: ಸೂಪರ್‌ ಸಂಡೇ ವಿಥ್‌ ಸುದೀಪ ಎಪಿಸೋಡ್‌ನಲ್ಲಿ ನನ್ನ ಜರ್ನಿಯಲ್ಲಿ ಒಬ್ಬರು ಹಾವಾಗಿದ್ದಾರೆ, ಏಣಿಯಾಗಿದ್ದಾರೆ ಎನ್ನೋದನ್ನು ಹೇಳಬೇಕು ಎಂದು ಕಿಚ್ಚ ಸುದೀಪ್‌ ಹೇಳಿದ್ದರು. ಆಗ ಬಹುತೇಕರು ಗಿಲ್ಲಿಗೆ ಹಾವಿನ ಸ್ಥಾನವನ್ನು ಕೊಟ್ಟಿದ್ದಾರೆ. ಅದರಲ್ಲಿ ಕಾವ್ಯ ನೀಡಿರೋದು ವಿಶೇಷ.

 

Read Full Story

03:43 PM (IST) Dec 07

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ, ಇಂಗ್ಲೀಷ್ ಶಾಲೆಗಳ ಪೋಷಕರಿಂದ ಸಡಿಲಿಕೆಗೆ ಮನವಿ

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ, ಇಂಗ್ಲೀಷ್ ಶಾಲೆಗಳ ಪೋಷಕರಿಂದ ಸಡಿಲಿಕೆಗೆ ಮನವಿ ಮಾಡಿದ್ದಾರೆ. ಮಕ್ಕಳು ವಯಸ್ಸ 6 ವರ್ಷ ಕಡ್ಡಾಯ ಮಾಡಿರುವುದು ಇಂಗ್ಲೀಷ್ ಶಾಲೆಗಳ ಪೋಷಕರಲ್ಲಿ ಆತಂಕ ತರಿಸಿದೆ.

Read Full Story

01:37 PM (IST) Dec 07

ಚಿನ್ನಸ್ವಾಮಿಗೆ ಅಂತಾರಾಷ್ಟ್ರೀಯ ಮತ್ತು IPL ಪಂದ್ಯಗಳು ವಾಪಸ್; ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಕೆಎಸ್‌ಸಿಎ ಆಡಳಿತ ಮಂಡಳಿ ಚುನಾವಣೆಯಲ್ಲಿ ಮತ ಚಲಾಯಿಸಿದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳನ್ನು ಮರಳಿ ತರುವ ಭರವಸೆ ನೀಡಿದ್ದಾರೆ. 2026ರ ಐಪಿಎಲ್ ಪಂದ್ಯಗಳನ್ನೂ ಇಲ್ಲಿಯೇ ನಡೆಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

Read Full Story

More Trending News