ಬೆಂಗಳೂರು: ಆಪ್ತರ ಮದುವೆಯಲ್ಲಿ ಭಾಗಿಯಾಗಿದ್ದ ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ಡಿ.ಕೆ.ಶಿವಕುಮಾರ್ ಮಾತನಾಡಿ, ಸಚಿವ ಸತೀಶ್ ಜಾರಕಿಹೊಳಿ ಮತ್ತು ನಾವು ಸಹೋದ್ಯೋಗಿಗಳು. ನಾವು ಭೇಟಿ ಮಾಡಿದಾಗ ರಾಜ್ಯ ಮತ್ತು ಪಕ್ಷದ ವಿಚಾರ ಮಾತನಾಡಿದ್ದೇವೆ. ನಮ್ಮನ್ನು ವೈರಿಗಳಂತೆ ಏಕೆ ನೋಡುತ್ತೀರಿ? ನಾವು ಮಧ್ಯಾಹ್ನ ಸಚಿವ ಸಂಪುಟ ಸಭೆಯಲ್ಲಿ ಜತೆಗೆ ಇರುತ್ತೇವೆ. ಬೆಳಗ್ಗೆ ತಿಂಡಿಗೆ, ರಾತ್ರಿ ಊಟಕ್ಕೆ ಸೇರುತ್ತೇವೆ. ರಾಜಕೀಯದಲ್ಲಿ ಸ್ನೇಹ, ಬಾಂಧವ್ಯ, ನೆಂಟಸ್ತನ ಇದ್ದೇ ಇರುತ್ತದೆ ಎಂದು ಹೇಳಿದರು.

11:25 PM (IST) Dec 07
ಕಿಚ್ಚ ಸುದೀಪ್ ನಟನೆಯ ಬಹು ನಿರೀಕ್ಷೆಯ ‘ಮಾರ್ಕ್’ ಚಿತ್ರದ ಟ್ರೇಲರ್ ಬಿಡುಗಡೆ ಆಗಿದೆ. ಪಕ್ಕಾ ಆ್ಯಕ್ಷನ್ನಿಂದ ಕೂಡಿದ ಈ ಚಿತ್ರದ ಟ್ರೇಲರ್ ಇದಾಗಿದೆ. ಟ್ರೇಲರ್ನಲ್ಲಿ ಮಕ್ಕಳ ಅಪಹರಣದ ದೃಶ್ಯಗಳು ಬಂದಿದ್ದು, ಕತೆಯ ಗುಟ್ಟು ಕೂಡ ಬಿಟ್ಟು ಕೊಡಲಾಗಿದೆ.
11:03 PM (IST) Dec 07
ಪ್ರಿ ವೆಡ್ಡಿಂಗ್ ಫೋಟೋ ಶೂಟ್ ಮುಗಿಸಿ ಬೈಕ್ನಲ್ಲಿ ತೆರಳುತ್ತಿದ್ದ ಜೋಡಿಗೆ ಲಾರಿ ಡಿಕ್ಕಿ, ಸ್ಥಳದಲ್ಲೇ ಸಾವು, ಹಸೆಮಣೆ ಏರಬೇಕಿದ್ದ ನವ ಜೋಡಿಗಳು ದುರಂತ ಅಂತ್ಯಕಂಡ ಘಟನೆ ಗಂಗಾವತಿಯಲ್ಲಿ ನಡೆದಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
10:56 PM (IST) Dec 07
ನನ್ನ ತಂದೆ ಕೂಡ ಗುಮ್ಮಡಿ ನರಸಯ್ಯ ಅವರಂತೆಯೇ ಜನರ ಸೇವೆ ಸಲ್ಲಿಸಿದ್ದಾರೆ. ಅವರು ಯಾವಾಗಲೂ ‘ನಿಮಗಾಗಿ ಬದುಕಬೇಡಿ, ಇತರರಿಗಾಗಿ ಬದುಕಿ’ ಎಂದು ಹೇಳುತ್ತಿದ್ದರು ಎಂದು ನಟ ಶಿವರಾಜ್ಕುಮಾರ್ ತಿಳಿಸಿದರು.
10:35 PM (IST) Dec 07
ಸೀರೆಯ ವಿನ್ಯಾಸ, ಆಲಿಯಾ ಭಟ್ ಎಂಬ ಸುಂದರಿಯ ಮೈಬಣ್ಣ ಎಲ್ಲ ಸೇರಿ, ‘ಚೆಂದಕಿಂತ ಚೆಂದ ನೀನೆ ಸುಂದರ’ ಎಂದು ಹಾಡು ಹೇಳೋ ರೇಂಜ್ಗೆ ಮನಮೋಹಕವಾಗಿತ್ತು. ಈ ಟಿಶ್ಯೂ ಸಾರಿ ಲೇಟೆಸ್ಟಾಗಿ ಎಂಟ್ರಿ ಕೊಟ್ಟಿರೋದೇನಲ್ಲ.
10:03 PM (IST) Dec 07
ಸರ್ಕಾರಕ್ಕೆ ಕಿಂಚಿತ್ತು ನಾಚಿಕೆ ಇಲ್ಲದಂತಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರೈತರ ಹಾಗೂ ಸಾರ್ವಜನಿಕರ ಪಾಲಿಗೆ ಸತ್ತೇಹೋಗಿದೆ. ಶೇ. 60ರಷ್ಟು ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಮಾಜಿ ಸಚಿವ ಬಿ.ಸಿ.ಪಾಟೀಲ್ ಆರೋಪಿಸಿದರು.
09:33 PM (IST) Dec 07
ಮಹಿಳೆಯರನ್ನು ಬಾಧಿಸುವ ಪ್ರಮುಖ ಕಾಯಿಲೆಗಳಲ್ಲಿ ಕ್ಯಾನ್ಸರ್ ಕೂಡ ಒಂದು. ಪ್ರತಿ ವರ್ಷ ಪ್ರಪಂಚದಾದ್ಯಂತ ಲಕ್ಷಾಂತರ ಮಹಿಳೆಯರು ಕ್ಯಾನ್ಸರ್ಗೆ ತುತ್ತಾಗುತ್ತಿದ್ದಾರೆ. ಸರಿಯಾದ ರೋಗನಿರ್ಣಯದಿಂದ ಮೂರರಲ್ಲಿ ಎರಡು ಪ್ರಕರಣಗಳನ್ನು ಗುಣಪಡಿಸಬಹುದು.
09:06 PM (IST) Dec 07
ಬ್ರೇಕ್ಫಾಸ್ಟ್ ಪಾರ್ಟಿ ಮಾಡುವ ಮೂಲಕ ಟೈಮ್ ಪಾಸ್ ಮಾಡುತ್ತಿದ್ದಾರೆಯೇ ಹೊರತು ಜನರ ಸಮಸ್ಯೆಗಳ ಬಗ್ಗೆ ಚರ್ಚಿಸುವುದಕ್ಕಾಗಲಿ, ರಾಜ್ಯದ ಅಭಿವೃದ್ಧಿಗಾಗಿ ಒಂದು ದಿನ ಕೂಡ ಕುಳಿತು ಮಾತನಾಡಿದ್ದಿಲ್ಲ ಎಂದು ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು.
08:50 PM (IST) Dec 07
ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ ವೆಂಕಟೇಶ್ ಪ್ರಸಾದ್ ಅಧ್ಯಕ್ಷ, ಚುನಾವಣಾ ಫಲಿತಾಂಶ ಪ್ರಕಟ, ಭಾರಿ ಜಿದ್ದಾಜಿದ್ದಿನಿಂದ ಕೂಡಿದ ಚುನಾವಣೆ ಹೈಕೋರ್ಟ್ ವರೆಗೂ ತಲುಪಿತ್ತು. ಇಂದು ನಡೆದ ಮತದಾನದಲ್ಲಿ ವೆಂಕಟೇಶ್ ಪ್ರಸಾದ್ ಅಧ್ಯಕ್ಷರಾಗಿ ಗೆಲುವು ಕಂಡಿದ್ದಾರೆ.
08:43 PM (IST) Dec 07
ರಾಜ್ಯದ ಜನರ ವಿಶ್ವಾಸವನ್ನು ಸರ್ಕಾರ ಕಳೆದುಕೊಂಡಿದ್ದು, ಚುನಾವಣೆಗೆ ಹೋಗುತ್ತೇವೆ ಎಂಬ ಚಾಲೆಂಜ್ ಸ್ವೀಕಾರ ಮಾಡಲಿ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಸವಾಲು ಹಾಕಿದ್ದಾರೆ. ಮಾಧ್ಯಮದವರ ಜತೆ ಮಾತನಾಡಿದರು.
08:22 PM (IST) Dec 07
ಸಂಸ್ಕಾರ ಹಾಗೂ ಸಂಸ್ಕೃತಿ ಇಲ್ಲದ, ಮಾತೆತ್ತಿದರೆ ಭಾಗ್ಯ, ಭಾಗ್ಯ ಎಂದು ಹೇಳುತ್ತಿರುವ ಸಿದ್ದರಾಮಯ್ಯ ಆಡಳಿತ ಕೇವಲ ಟೀಕೆಯಲ್ಲಿ ಮುಳುಗಿದೆ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ವಾಗ್ದಾಳಿ ನಡೆಸಿದರು.
08:09 PM (IST) Dec 07
ಅಭಿವೃದ್ಧಿಗೆ ಆದ್ಯತೆ ನೀಡಿ, ರಾಜ್ಯದಲ್ಲಿ ಒಳ್ಳೆಯ ಆಡಳಿತ ನೀಡಬೇಕಿದೆ. ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಖುರ್ಚಿ ಕಾದಾಟ ಇಲ್ಲ. ಸದ್ಯದ ಪರಿಸ್ಥಿತಿಯಲ್ಲಿ ಸಿದ್ದರಾಮಯ್ಯ ಬದಲಾವಣೆಯೂ ಇಲ್ಲ ಎಂದು ಬಸವರಾಜ ರಾಯರೆಡ್ಡಿ ಸ್ಪಷ್ಟಪಡಿಸಿದರು.
08:04 PM (IST) Dec 07
ಮದುವೆ ಸಮಾರಂಭದ ನಂತರ, ಭವಾನಿ ತಲ್ವಾರ್ ವರ್ಮಾ ಎಂಬ ನವವಧು ತಾನೇ ಕಾರ್ ಓಡಿಸಿಕೊಂಡು ಗಂಡನ ಮನೆಗೆ ಹೋಗುವ ವಿಡಿಯೋ ವೈರಲ್ ಆಗಿದೆ. ಭಾರವಾದ ಉಡುಗೆಯಲ್ಲಿದ್ದರೂ ಉತ್ಸಾಹದಿಂದ ಡ್ರೈವಿಂಗ್ ಮಾಡುವ ಆಕೆಗೆ ಪತಿ ಸಾಥ್ ನೀಡಿದ್ದು, ಈ ಸುಂದರ ಕ್ಷಣ ನೆಟ್ಟಿಗರ ಮನಗೆದ್ದಿದೆ.
07:59 PM (IST) Dec 07
ಮಂಡ್ಯ ಬಸ್ ಅಪಘಾತದಲ್ಲಿ 23 ಪ್ರಯಾಣಿಕರಿಗೆ ಗಾಯ, ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. 40 ಮಂದಿ ಪ್ರಯಾಣಿಸುತ್ತಿದ್ದ ಬಸ್ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲಿ ಪಲ್ಟಿಯಾಗಿದೆ. ದೇವಸ್ಥಾನದಿಂದ ಮರಳುವಾಗ ಈ ಘಟನೆ ನಡೆದಿದೆ.
07:52 PM (IST) Dec 07
ಪ್ರಭಾಸ್ಗೆ ಒಂದೇ ವರ್ಷದಲ್ಲಿ 2 ಬ್ಯಾಕ್ ಟು ಬ್ಯಾಕ್ ಫ್ಲಾಪ್ಗಳು ಎದುರಾದವು. ಅಲ್ಲು ಅರ್ಜುನ್ ಮತ್ತು ವೆಂಕಟೇಶ್ ಚಿತ್ರಗಳ ಜೊತೆ ಸ್ಪರ್ಧೆಗೆ ಇಳಿದಿದ್ದರಿಂದ ನೆಗೆಟಿವ್ ರಿಸಲ್ಟ್ ತಪ್ಪಲಿಲ್ಲ. ಆ ಸಿನಿಮಾಗಳು ಯಾವುವು ಅಂತ ಈ ಸ್ಟೋರಿಲಿ ನೋಡೋಣ.
07:30 PM (IST) Dec 07
700 ಕೋಟಿ ಆಸ್ತಿಯ ಒಡತಿ, ಸೌತ್ ಜೊತೆಗೆ ಬಾಲಿವುಡ್, ಹಾಲಿವುಡ್ನಲ್ಲೂ ಫೇಮಸ್ ಆದ ನಟಿ, 40 ದಾಟಿದ್ರೂ ಇಮೇಜ್ ಕಮ್ಮಿಯಾಗದ ಸುಂದರಿ.. ತನಗಿಂತ 10 ವರ್ಷ ಚಿಕ್ಕವನನ್ನು ಮದುವೆಯಾದ ಈ ನಟಿ ಯಾರು ಗೊತ್ತಾ?
07:25 PM (IST) Dec 07
ಬಿಗ್ ಬಾಸ್ ಮನೆಯಲ್ಲಿ ಜನಪ್ರಿಯತೆ ಗಳಿಸಿರುವ ರಕ್ಷಿತಾ ಶೆಟ್ಟಿ, ಶೋ ಮುಗಿದ ನಂತರದ ತಮ್ಮ ಭವಿಷ್ಯದ ಯೋಜನೆಗಳ ಬಗ್ಗೆ ಮಾತನಾಡಿದ್ದಾರೆ. ತನ್ನ ಮದುವೆ ಹಾಗೂ ಮಕ್ಕಳನ್ನು ಅಭಿಮಾನಿಗಳು ಹೇಗೆ ಸ್ವೀಕರಿಸುತ್ತಾರೆ ಎಂಬ ಚಿಂತೆಯನ್ನೂ ಹಂಚಿಕೊಂಡಿದ್ದಾರೆ. ಅವರು ಹೇಳಿದ್ದೇನು?
07:21 PM (IST) Dec 07
ನೆಟ್ವರ್ಕ್ ಇಲ್ಲದ ಪ್ರದೇಶದಲ್ಲಿ ಅಥವಾ ಸ್ಮಾರ್ಟ್ಫೋನ್ ಇಲ್ಲದೆಯೂ USSD ಆಧಾರಿತ (*99#) UPI ಪಾವತಿಗಳನ್ನು ಮಾಡಬಹುದು. ಈ ವೈಶಿಷ್ಟ್ಯವನ್ನು ಹೇಗೆ ಸಕ್ರಿಯಗೊಳಿಸುವುದು, ವಹಿವಾಟಿನ ಮಿತಿಗಳು ಮತ್ತು ಇಂಟರ್ನೆಟ್ ಇಲ್ಲದೆ ಹಣ ಕಳುಹಿಸುವ ಹಂತಗಳನ್ನು ಇಲ್ಲಿ ವಿವರಿಸಲಾಗಿದೆ.
07:06 PM (IST) Dec 07
ಸಿಎಂ, ಡಿಸಿಎಂ ನಡುವೆ ಬೂದಿ ಮುಚ್ಚಿದ ಕೆಂಡದ ಪರಿಸ್ಥಿತಿಯಿದೆ. ಮೇಲ್ನೋಟಕ್ಕೆ ಬ್ರೇಕ್ಫಾಸ್ಟ್ ನಾಟಕ ಮಾಡುತ್ತಿದ್ದಾರೆ. ಅಧಿವೇಶನ ಬಂದಿದ್ದರಿಂದ ಹೋದಾಣಿಕೆ ತೋರಿಸುತ್ತಿದ್ದಾರೆ. ಆದರೆ, ಅವರ ಹಿಂಬಾಲಕರ ನಡುವೆ ಕುಸ್ತಿ ನಡೆದಿದೆ ಎಂದು ಸಂಸದ ಜಗದೀಶ್ ಶೆಟ್ಟರ್ ಆರೋಪಿಸಿದರು.
06:56 PM (IST) Dec 07
ಗೆಳೆಯರ ಜೊತೆ ಟ್ರಿಪ್ ಹೋಗಿದ್ದ ಬೆಂಗಳೂರು ನಿವಾಸಿ ಗೋವಾ ನೈಟ್ ಕ್ಲಬ್ ದುರಂತದಲ್ಲಿ ಮೃತ, ಅರ್ಪೋರಾದಲ್ಲಿ ನಡೆದ ಅಗ್ನಿ ದುರಂತದಲ್ಲಿ ಮೃತರ ಸಂಖ್ಯೆ 25ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ ಕನ್ನಡಿಗನೂ ಬಲಿಯಾಗಿದ್ದಾರೆ.
06:52 PM (IST) Dec 07
ಕಿಚ್ಚ ಸುದೀಪ್ ಅಭಿನಯದ 'ಮಾರ್ಕ್' ಸಿನಿಮಾದ ಟ್ರೈಲರ್ ಬಿಡುಗಡೆಯಾಗಿದ್ದು, ಡಿಸೆಂಬರ್ 25 ರಂದು ಚಿತ್ರ ತೆರೆಗೆ ಬರಲಿದೆ. ಪತ್ರಿಕಾಗೋಷ್ಠಿಯಲ್ಲಿ, 'ಸ್ತ್ರೀದೋಷ' ಇದೆಯೇ ಎಂಬ ಪ್ರಶ್ನೆಗೆ ಸುದೀಪ್ ತಮ್ಮ ಪತ್ನಿ ಪ್ರಿಯಾ ಸಮ್ಮುಖದಲ್ಲಿಯೇ ಉತ್ತರಿಸಿದ್ದಾರೆ. ಅವರು ಹೇಳಿದ್ದೇನು?
06:33 PM (IST) Dec 07
ತೆಲುಗಿನಲ್ಲಿ ಸಣ್ಣ, ದೊಡ್ಡ ಹೀರೋಗಳ ಜೊತೆ ಸಿನಿಮಾ ಮಾಡಿರುವ ರಾಜಮೌಳಿ.. ಪವನ್ ಕಲ್ಯಾಣ್, ಅಲ್ಲು ಅರ್ಜುನ್ ಜೊತೆ ಮಾತ್ರ ಯಾಕೆ ಸಿನಿಮಾ ಮಾಡಿಲ್ಲ ಗೊತ್ತಾ? ಇನ್ಮುಂದೆ ಇವರ ಕಾಂಬೋದಲ್ಲಿ ಸಿನಿಮಾ ಬರೋದು ಕಷ್ಟನಾ?
06:29 PM (IST) Dec 07
Karna Kannada Serial Episode Update: ಕರ್ಣ ಧಾರಾವಾಹಿಯಲ್ಲಿ ನಿತ್ಯಾ ಹಾಗೂ ಕರ್ಣನ ಸುಳ್ಳಿನ ಮದುವೆ ಯಾರಿಗೂ ಗೊತ್ತಿಲ್ಲ. ಅದರಂತೆ ನಿತ್ಯಾ ಹೊಟ್ಟೆಯಲ್ಲಿರುವ ಮಗುವಿನ ಬಗ್ಗೆ ಕೂಡ ಕರ್ಣ ಗಮನ ಕೊಡಬೇಕಿದೆ. ಹೀಗಿರುವಾಗ ಇವರಿಬ್ಬರಿಗೂ ದೊಡ್ಡ ಸಮಸ್ಯೆ ಎದುರಾಗಿದೆ. ಹಾಗಾದರೆ ಮುಂದೆ ಏನಾಗುವುದು?
06:29 PM (IST) Dec 07
ಆಡಳಿತಾತ್ಮಕ ದೃಷ್ಟಿಯಿಂದ ಬೆಳಗಾವಿ ಜಿಲ್ಲೆಯನ್ನು ವಿಭಜಿಸುವುದು ಉತ್ತಮ ನಿರ್ಧಾರ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಆದರೆ, ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಬೇಡಿಕೆಯನ್ನು ವಿರೋಧಿಸಿ, ಅಖಂಡ ಕರ್ನಾಟಕದ ಚಿಂತನೆಯೊಂದಿಗೆ ಅಭಿವೃದ್ಧಿಗೆ ಒತ್ತು ನೀಡಬೇಕೆಂದು ಅವರು ಕರೆ ನೀಡಿದರು.
06:21 PM (IST) Dec 07
ದೇವರ ದರ್ಶನ ಮುಗಿಸಿ ಬೆಂಗಳೂರಿಗೆ ಮರಳುತ್ತಿದ್ದ ಬಸ್ ಮಂಡ್ಯ ಬಳಿ ಪಲ್ಟಿ, 8 ಮಂದಿಗೆ ಗಾಯ, ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಗಾಯಾಳುಗಳನ್ನು ತಕ್ಷಣವೇ ಆಸ್ಪತ್ರೆ ದಾಖಲಿಸಲಾಗಿದೆ.
06:07 PM (IST) Dec 07
ಜೀವನದಲ್ಲಿ ಉತ್ತಮ ಸಂಗಾತಿ ಬಂದರೆ ಅವರ ಜೀವನ ಸ್ವರ್ಗದಂತಿರುತ್ತದೆ. ಮೌಲ್ಯಗಳಿಲ್ಲದ ಸಂಗಾತಿ ಬಂದರೆ ಕಷ್ಟಗಳಿಂದ ತುಂಬಿರುತ್ತದೆ. ಚಾಣಕ್ಯನ ಪ್ರಕಾರ, ಜೀವನ ಸಂಗಾತಿ ಹೇಗಿದ್ದರೆ ಕಷ್ಟಗಳು ತಪ್ಪುವುದಿಲ್ಲ ಎಂದು ನೋಡೋಣ.
05:51 PM (IST) Dec 07
ನಂದಮೂರಿ ಬಾಲಕೃಷ್ಣ ಅವರು ಸ್ಟಾರ್ ನಿರ್ದೇಶಕರಾದ ರಾಜಮೌಳಿ, ಸುಕುಮಾರ್, ಸಂದೀಪ್ ರೆಡ್ಡಿ ವಂಗಾ ಅವರಿಗೆ ಟಾಂಗ್ ಕೊಟ್ಟಿದ್ದಾರೆ. ಸಿನಿಮಾದ ಅವಧಿಯ ಬಗ್ಗೆ ಅವರು ಸಂಚಲನಾತ್ಮಕ ಹೇಳಿಕೆ ನೀಡಿದ್ದಾರೆ.
05:41 PM (IST) Dec 07
ಗ್ಯಾರಂಟಿ ಹೆಸರಿನಲ್ಲಿ ಕಾಲಹರಣ ಮಾಡುವ ಕೆಲಸ ಆಗುತ್ತಿದೆ. ರಸ್ತೆಗಳ ಪರಿಸ್ಥಿತಿ ಚಿಂತಾಜನಕವಾಗಿದ್ದು, ಜನರ ಸಮಸ್ಯೆಗೆ ಪರಿಹಾರ ನೀಡಲು ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ ಎಂದು ವಿಧಾನಪರಿಷತ್ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದರು.
05:15 PM (IST) Dec 07
05:13 PM (IST) Dec 07
ಯಾವುದೇ ಹಿನ್ನೆಲೆ ಇಲ್ಲದೆ ಬೆಳೆದ ಸ್ಟಾರ್ ನಟರೊಬ್ಬರು ಚಿರಂಜೀವಿ ಬಗ್ಗೆ ಆಸಕ್ತಿಕರ ಮಾತುಗಳನ್ನಾಡಿದ್ದಾರೆ. ತನಗೆ ಮಗ ಹುಟ್ಟಿದಾಗ ಚಿರಂಜೀವಿ ಜಾತಕ ಹೇಳಿದ್ದರಂತೆ. ಅಷ್ಟಕ್ಕೂ ಆ ನಟ ಯಾರು ಅನ್ನೋದನ್ನು ಈ ಸ್ಟೋರಿನಲ್ಲಿ ತಿಳಿಯಿರಿ.
05:05 PM (IST) Dec 07
ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ, ಹಾಲಿನ ಟ್ಯಾಂಕರ್ಗೆ ರೆನಾಲ್ಟ್ ಡಸ್ಟರ್ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿಗೆ ಬೆಂಕಿ ಹೊತ್ತಿಕೊಂಡು ಸಂಪೂರ್ಣ ಸುಟ್ಟು ಕರಕಲಾಗಿದೆ. ಈ ದುರ್ಘಟನೆ ರಾಮನಗರದ ಸಂಗಬಸವನದೊಡ್ಡಿ ಬಳಿ ನಡೆದಿದೆ.
04:54 PM (IST) Dec 07
ಕೇಂದ್ರ ಸರ್ಕಾರದಿಂದ ಹಲವು ಯೋಜನೆಗಳಿದ್ದು, ಅವುಗಳನ್ನು ಪರಿಣಾಮಕಾರಿಯಾಗಿ ತಲುಪಿಸುವುದು ಅಧಿಕಾರಿಗಳ ಜವಾಬ್ದಾರಿಯಾಗಿದೆ. ಆ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗುವಂತೆ ಅಧಿಕಾರಿಗಳಿಗೆ ಯದುವೀರ್ ಒಡೆಯರ್ ಸ್ಪಷ್ಟ ನಿರ್ದೇಶನ ನೀಡಿದ್ದಾರೆ.
04:49 PM (IST) Dec 07
ಧಾರವಾಡದಲ್ಲಿ ಶಾಸಕ ಕೋನರೆಡ್ಡಿ ಆಯೋಜಿಸಿದ್ದ ಸಾಮೂಹಿಕ ವಿವಾಹದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯ, ಸಮಾಜದಲ್ಲಿ ಅಂತರ ಜಾತಿಯ ವಿವಾಹಗಳು ಹೆಚ್ಚಾಗಬೇಕು ಎಂದು ಕರೆ ನೀಡಿದರು. ಇದೇ ವೇಳೆ, ದೇಶದ ಜನಸಂಖ್ಯೆ ಹೆಚ್ಚಾಗಿರುವುದರಿಂದ ನವದಂಪತಿಗಳು ಎರಡು ಮಕ್ಕಳನ್ನು ಮಾಡಿಕಳ್ಳಲು ಸಲಹೆ ನೀಡಿದರು.
04:38 PM (IST) Dec 07
ಸರ್ಕಾರ ಜಾಗ ದೊರಕಿಸಿಕೊಡುವಲ್ಲಿ ವಿಫಲವಾಗಿದೆ. ಜಿಲ್ಲೆಯೊಳಗೆ ಕೈಗಾರಿಕೆ ಸ್ಥಾಪಿಸುವ ಇಚ್ಛಾಶಕ್ತಿ ಕಾಂಗ್ರೆಸ್ನವರಿಗೆ ಇಲ್ಲ ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದರು.
04:23 PM (IST) Dec 07
Bigg Boss Kannada Season 12: ಬಿಗ್ ಬಾಸ್ ಕನ್ನಡ ಸೀಸನ್ 12 ಶೋನಲ್ಲಿ ಗಿಲ್ಲಿ ನಟ ಲವ್ಸ್ ರಘು ಎನ್ನೋ ಥರ ಇವರ ಬಂಧ ಇತ್ತು. ಆದರೆ ಈಗ ಇವರಿಬ್ಬರ ಮಧ್ಯೆ ಮನಸ್ತಾಪ ಬಂದಿದೆ. ಈ ಜೋಡಿ ದೂರ ಆಗಿದೆ. ಈಗ ಗಿಲ್ಲಿ ನಟನಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸೇಡು ತೀರಿಸಿಕೊಳ್ಳಲು ರಘು ರೆಡಿಯಾಗಿದ್ದಾರೆ.
04:22 PM (IST) Dec 07
ರೈತರಿಗೆ ಅನುಕೂಲ ಮಾಡುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡುತ್ತೇನೆ ಎಂದು ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ಹೇಳಿದರು. ತಾಲೂಕಿನ ಕೆಂಪಸಾಗರ ಗ್ರಾಮದಲ್ಲಿ ಡೈರಿ ಕಟ್ಟಡ ಉದ್ಘಾಟಿಸಿ ಮಾತನಾಡಿದರು.
04:19 PM (IST) Dec 07
ಬಿಗ್ಬಾಸ್ ಮನೆಯಲ್ಲಿ ಹಾವು-ಮುಂಗುಸಿಗಳಂತಿದ್ದ ಗಿಲ್ಲಿ ನಟ ಮತ್ತು ಅಶ್ವಿನಿ ಗೌಡ ಇದೀಗ 'ಜುಂ ಜುಂ ಮಾಯಾ' ಹಾಡಿಗೆ ರೊಮ್ಯಾಂಟಿಕ್ ಆಗಿ ಡಾನ್ಸ್ ಮಾಡಿ ಅಚ್ಚರಿ ಮೂಡಿಸಿದ್ದಾರೆ. ಈ ಸಮಯದಲ್ಲಿ ಕಾವ್ಯಾ ಶೈವ ಅವರ ಮುಖಭಾವ ಬದಲಾಗಿರುವುದನ್ನು ನೋಡಬಹುದು.
03:44 PM (IST) Dec 07
03:44 PM (IST) Dec 07
Bigg Boss Kannada Season 12: ಸೂಪರ್ ಸಂಡೇ ವಿಥ್ ಸುದೀಪ ಎಪಿಸೋಡ್ನಲ್ಲಿ ನನ್ನ ಜರ್ನಿಯಲ್ಲಿ ಒಬ್ಬರು ಹಾವಾಗಿದ್ದಾರೆ, ಏಣಿಯಾಗಿದ್ದಾರೆ ಎನ್ನೋದನ್ನು ಹೇಳಬೇಕು ಎಂದು ಕಿಚ್ಚ ಸುದೀಪ್ ಹೇಳಿದ್ದರು. ಆಗ ಬಹುತೇಕರು ಗಿಲ್ಲಿಗೆ ಹಾವಿನ ಸ್ಥಾನವನ್ನು ಕೊಟ್ಟಿದ್ದಾರೆ. ಅದರಲ್ಲಿ ಕಾವ್ಯ ನೀಡಿರೋದು ವಿಶೇಷ.
03:43 PM (IST) Dec 07
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ, ಇಂಗ್ಲೀಷ್ ಶಾಲೆಗಳ ಪೋಷಕರಿಂದ ಸಡಿಲಿಕೆಗೆ ಮನವಿ ಮಾಡಿದ್ದಾರೆ. ಮಕ್ಕಳು ವಯಸ್ಸ 6 ವರ್ಷ ಕಡ್ಡಾಯ ಮಾಡಿರುವುದು ಇಂಗ್ಲೀಷ್ ಶಾಲೆಗಳ ಪೋಷಕರಲ್ಲಿ ಆತಂಕ ತರಿಸಿದೆ.
01:37 PM (IST) Dec 07
ಕೆಎಸ್ಸಿಎ ಆಡಳಿತ ಮಂಡಳಿ ಚುನಾವಣೆಯಲ್ಲಿ ಮತ ಚಲಾಯಿಸಿದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳನ್ನು ಮರಳಿ ತರುವ ಭರವಸೆ ನೀಡಿದ್ದಾರೆ. 2026ರ ಐಪಿಎಲ್ ಪಂದ್ಯಗಳನ್ನೂ ಇಲ್ಲಿಯೇ ನಡೆಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.