ಹುಬ್ಬಳ್ಳಿ: ಮೊಬೈಲ್ನಲ್ಲಿ ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ಮತಾಂಧನನ್ನು ಗಡಿಪಾರು ಮಾಡುವಂತೆ ಆಗ್ರಹಿಸಿ ಶುಕ್ರವಾರ ಹಿಂದೂಪರ ಸಂಘಟನೆಗಳು ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದವು. ಇಲ್ಲಿನ ನೇಕಾರ ನಗರದ ದಾದಾಪೀರ ಹೆಬ್ಬಳ್ಳಿ ಎಂಬಾತ ದೇವಸ್ಥಾನವೊಂದರ ಬಳಿ ನಿಂತು ಹಿಂದೂ ದೇವರಿಗೆ ಅವಮಾನ ಮಾಡಿದ್ದ ವಿಡಿಯೋವನ್ನು ತನ್ನ ಮೊಬೈಲ್ನಲ್ಲಿ ಸ್ಟೇಟಸ್ ಇಟ್ಟುಕೊಂಡಿದ್ದನು. ಇದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ಕುರಿತು ಗುರುವಾರ ಹಳೇ ಹುಬ್ಬಳ್ಳಿ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ದಾದಾಪೀರನನ್ನು ಬಂಧಿಸಿದ್ದರು. ಈ ಸುದ್ದಿ ಹರಡುತ್ತಿದ್ದಂತೆ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯ ಎದುರು ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಮತಾಂಧನನ್ನು ಕೂಡಲೇ ಗಡಿಪಾರು ಮಾಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು. ಈಗಾಗಲೇ ಆರೋಪಿಯ ಮೇಲೆ ದೂರು ದಾಖಲಿಸಿ ಬಂಧಿಸಲಾಗಿದೆ. ಅವನ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದಾಗಿ ಪೊಲೀಸರು ತಿಳಿಸಿದರು.

10:47 PM (IST) Feb 07
ಪ್ರಸಿದ್ಧ ಸೂರಜ್ಕುಂಡ್ ಕರಕುಶಲ ಮೇಳದಲ್ಲಿ ದೈತ್ಯ ಜಾಯಿಂಟ್ ವ್ಹೀಲ್ ಮುರಿದು ಬಿದ್ದಿದೆ. ಈ ದುರಂತದಲ್ಲಿ ಜನರನ್ನು ರಕ್ಷಿಸಲು ಹೋದ ಪೊಲೀಸ್ ಇನ್ಸ್ಪೆಕ್ಟರ್ ಒಬ್ಬರು ಮೃತಪಟ್ಟಿದ್ದು, 13ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಈ ಘಟನೆಯು ಮೇಳದ ಸುರಕ್ಷತಾ ಕ್ರಮಗಳ ಬಗ್ಗೆ ಗಂಭೀರ ಪ್ರಶ್ನೆ ಹುಟ್ಟುಹಾಕಿದೆ.
09:38 PM (IST) Feb 07
ಸಾರ್ವಜನಿಕರ ಆಸ್ತಿ ರಕ್ಷಿಸಬೇಕಾದ ಪೊಲೀಸ್ ಕಾನ್ಸ್ಟೇಬಲ್ ಓರ್ವನೇ ಕಳ್ಳರ ತಂಡಕ್ಕೆ ನಾಯಕನಾಗಿ ತೋಟದ ಮನೆಯಲ್ಲಿ ದರೋಡೆ ಮಾಡಿಸಿದ್ದಾನೆ. ಗ್ರಾಮದ ಅಳಿಯನಾಗಿದ್ದ ಈತ, ಕಳ್ಳತನಕ್ಕೆ ಪಕ್ಕಾ ಸ್ಕೆಚ್ ಹಾಕಿಕೊಟ್ಟಿದ್ದು, ಇದೀಗ ಐವರು ಆರೋಪಿಗಳ ಸಹಿತ ಪೊಲೀಸರ ಬಲೆಗೆ ಬಿದ್ದಿದ್ದಾನೆ.
09:25 PM (IST) Feb 07
ಬೀದರ್ನಲ್ಲಿ ಮಹಾಶಿವರಾತ್ರಿ ಹಬ್ಬದ ಚಂದಾ ವಸೂಲಿ ವೇಳೆ, ಕೇಳಿದಷ್ಟು ಹಣ ನೀಡದ ಕಾರಣಕ್ಕೆ ಯುವಕರ ಗುಂಪೊಂದು ಅಂಗಡಿಯಲ್ಲಿದ್ದ ಮಹೇಶ್ ಎಂಬ ಯುವಕನ ಮೇಲೆ ಹಲ್ಲೆ ನಡೆಸಿದೆ. ವಾಗ್ವಾದ ವಿಕೋಪಕ್ಕೆ ತಿರುಗಿದಾಗ, ಗುಂಪಿನಲ್ಲಿದ್ದ ಓರ್ವ ಮಹೇಶ್ನ ಕುತ್ತಿಗೆಗೆ ಚಾಕುವಿನಿಂದ ಇರಿದು ಗಾಯಗೊಳಿಸಿದ್ದಾರೆ.
09:04 PM (IST) Feb 07
08:17 PM (IST) Feb 07
07:35 PM (IST) Feb 07
ಕನಕಪುರ ಶ್ರೀನಿವಾಸ್ ಅವರ ವರ್ತನೆ ನೋಡಿದರೆ ಮಾನಸಿಕ ಸ್ಥಿಮಿತ ಕಳೆದುಕೊಂಡಂತೆ ಕಾಣುತ್ತಿದೆ. ಮನೆಯವರು ತಕ್ಷಣ ಅವರಿಗೆ ಚಿಕಿತ್ಸೆ ಕೊಡಿಸುವುದು ಒಳ್ಳೆಯದು. ನಾವೂ ಮಂಡ್ಯದವರು, ನಮಗೂ ಏಕವಚನದಲ್ಲಿ ಮಾತನಾಡಲು ಬರುತ್ತದೆ ಎಂದು ನಿರ್ದೇಶಕ ಎ.ಪಿ. ಅರ್ಜುನ್ ಎಚ್ಚರಿಕೆ ನೀಡಿದ್ದಾರೆ.
07:15 PM (IST) Feb 07
ಬಿಗ್ ಬಾಸ್ ಗೆದ್ದ ನಂತರ ಗಿಲ್ಲಿ ಎಲ್ಲೆಡೆ ಸದ್ದು ಮಾಡುತ್ತಿದ್ದಾರೆ. ಆದರೆ, ಅವರು ನಟಿಸಿದ್ದ 'ಸರ್ಕಾರಿ ಶಾಲೆ ಎಚ್8' ಚಿತ್ರದ ಪ್ರಚಾರಕ್ಕೆ ಗೈರಾಗಿದ್ದಾರೆ ಎಂದು ನಿರ್ಮಾಪಕ ತೇಜಸ್ವಿ ಎಸ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ನೀಡಿದ್ದಾರೆ.
07:06 PM (IST) Feb 07
ಜೀ ಕನ್ನಡದ ಜನಪ್ರಿಯ ಸೀರಿಯಲ್ ನಟಿ ಮತ್ತು ಬಿಗ್ಬಾಸ್ ಸ್ಪರ್ಧಿ ತಮ್ಮ ಬಾಲ್ಯದ ಫೋಟೋಗಳನ್ನು ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿದ್ದಾರೆ. 'ಕರ್ಣ' ಸೀರಿಯಲ್ ಖ್ಯಾತಿಯ ನಟಿಯ ಮುದ್ದಾದ ಫೋಟೋಗಳಿಗೆ ಅಭಿಮಾನಿಗಳು ಮನಸೋತಿದ್ದು, ಕಮೆಂಟ್ಗಳ ಸುರಿಮಳೆಗೈದಿದ್ದಾರೆ.
07:03 PM (IST) Feb 07
ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ರೋಡ್ ರೇಜ್ ಪ್ರಕರಣಗಳಿಗೆ ಇತ್ತೀಚಿನ ಎರಡು ಘಟನೆಗಳು ಸಾಕ್ಷಿಯಾಗಿವೆ. ಒಂದು ಕಡೆ ಬೈಕ್ ಸವಾರನೊಬ್ಬನ ಅಜಾಗರೂಕ ವರ್ತನೆ ಆತಂಕ ಸೃಷ್ಟಿಸಿದರೆ, ಮತ್ತೊಂದೆಡೆ ಕಾರು ಚಾಲಕನ ನಿಂದನೆಗೆ ಬೈಕ್ ಸವಾರನೊಬ್ಬ ತೋರಿದ ಸಂಯಮವು ಸಾಮಾಜಿಕ ಜಾಲತಾಣಗಳಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ.
06:40 PM (IST) Feb 07
ಬೆಂಗಳೂರಿನಲ್ಲಿ ಮೆಟ್ರೋ ಪ್ರಯಾಣಿಕರ ಅನುಕೂಲಕ್ಕಾಗಿ, BMRCL ಮತ್ತು BMTC ಜಂಟಿಯಾಗಿ 'ನೇರಳೆ' ಮತ್ತು 'ಹಸಿರು' ಮಾರ್ಗದ ಪ್ರಮುಖ ನಿಲ್ದಾಣಗಳ ದ್ವಾರದ ಬಳಿ ಹೊಸ ಬಸ್ ನಿಲ್ದಾಣಗಳನ್ನು ಸ್ಥಾಪಿಸಿವೆ. ಮೆಟ್ರೋ ಮತ್ತು ಬಸ್ ನಡುವಿನ ಸಂಪರ್ಕ ಸುಧಾರಿಸಿ, ಪ್ರಯಾಣಿಕರು ನಡೆಯುವ ಪ್ರಯಾಸ ಕಡಿಮೆಯಾಗಲಿದೆ.
06:38 PM (IST) Feb 07
06:21 PM (IST) Feb 07
ಗೃಹಲಕ್ಷ್ಮಿ ಯೋಜನೆಯಲ್ಲಿ ಹಣ ಸೋರಿಕೆ ತಡೆಯಲು ಸರ್ಕಾರ ಹೊಸ ನಿಯಮ ಜಾರಿಗೆ ತರಲು ಚಿಂತಿಸುತ್ತಿದೆ. ಯೋಜನೆಯ ಫಲಾನುಭವಿಗಳು ಇನ್ನು ಮುಂದೆ ಪ್ರತಿ ವರ್ಷ 'ಜೀವಿತ ಪ್ರಮಾಣ ಪತ್ರ' ಸಲ್ಲಿಸುವುದು ಕಡ್ಡಾಯವಾಗುವ ಸಾಧ್ಯತೆಯಿದ್ದು, ಈ ಪ್ರಸ್ತಾವನೆ ಪರಿಶೀಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.
06:05 PM (IST) Feb 07
ಸೋಮವಾರದಿಂದ ಜಾರಿಯಾಗಬೇಕಿದ್ದ ಬೆಂಗಳೂರು ಮೆಟ್ರೋ ಟಿಕೆಟ್ ದರ ಏರಿಕೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಸಂಸದ ತೇಜಸ್ವಿ ಸೂರ್ಯ ಅವರ ಮನವಿಯ ಮೇರೆಗೆ ಕೇಂದ್ರ ಸಚಿವ ಎಂ.ಎಲ್. ಖಟ್ಟರ್ ಈ ಸೂಚನೆ ನೀಡಿದ್ದು, ಪ್ರಯಾಣಿಕರಿಗೆ ಸದ್ಯಕ್ಕೆ ನಿರಾಳ ಸಿಕ್ಕಿದೆ.
05:59 PM (IST) Feb 07
05:36 PM (IST) Feb 07
05:34 PM (IST) Feb 07
ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ಇತ್ತೀಚೆಗೆ ಟಿಕೆಟ್ ದರಗಳನ್ನು ಏರಿಸಿದ್ದು, ನಮ್ಮ ಮೆಟ್ರೋ ದೇಶದಲ್ಲೇ ಅತಿ ದುಬಾರಿ ಸೇವೆಯಾಗಿದೆ ಎಂಬ ಚರ್ಚೆ ಹುಟ್ಟುಹಾಕಿದೆ. ದೆಹಲಿ, ಮುಂಬೈ, ಕೋಲ್ಕತ್ತಾದಂತಹ ನಗರಗಳಿಗೆ ಹೋಲಿಸಿದರೆ ಬೆಂಗಳೂರಿನಲ್ಲಿ ಗರಿಷ್ಠ ದರಕ್ಕೆ ತಲುಪಿದೆ.
04:48 PM (IST) Feb 07
ಶಿವಮೊಗ್ಗದಲ್ಲಿ, ಪತ್ನಿ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡು, ತನಗೂ ಮತ್ತು ಇಬ್ಬರು ಅಪ್ರಾಪ್ತ ಹೆಣ್ಣು ಮಕ್ಕಳಿಗೂ ಮತಾಂತರಗೊಳ್ಳುವಂತೆ ಕಿರುಕುಳ ನೀಡುತ್ತಿದ್ದಾಳೆ ಎಂದು ಆರೋಪಿಸಿ ಪತಿಯೊಬ್ಬರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮತಾಂತರಕ್ಕೆ ಒಪ್ಪದಿದ್ದಕ್ಕೆ ಪತ್ನಿ ಮನೆ ಬಿಟ್ಟು ಹೋಗಿದ್ದಾರೆ.
04:45 PM (IST) Feb 07
ಕೋಲಾರದ ಶ್ರೀನಿವಾಸಪುರದಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದ ಜೋಡಿಯೊಂದು ಹಣದಾಸೆಗೆ ತಮ್ಮ ನವಜಾತ ಗಂಡು ಮಗುವನ್ನು ಮಾರಾಟ ಮಾಡಿದೆ. ಈ ಮಗು ಮಾರಾಟ ಜಾಲವನ್ನು ಪತ್ತೆಹಚ್ಚಿದ ಪೊಲೀಸರು, ಮಗುವನ್ನು ಖರೀದಿಸಿದ ದಂಪತಿ ಹಾಗೂ ಮಧ್ಯವರ್ತಿ ಸೇರಿದಂತೆ ಐವರನ್ನು ಬಂಧಿಸಿದ್ದಾರೆ.
04:36 PM (IST) Feb 07
Rakkasapuradhol Kannada Movie Review: ರಾಜ್ ಬಿ ಶೆಟ್ಟಿ, ಸ್ವಾತಿಷ್ಠ ಕೃಷ್ಣ, ಅರ್ಚನಾ ಕೊಟ್ಟಿಗೆ, ಅನಿರುದ್ಧ ಭಟ್ ನಟನೆಯ ರಕ್ಕದಪುರದೋಳ್ ಸಿನಿಮಾ ರಿಲೀಸ್ ಆಗಿದೆ. ಹಾಗಾದರೆ ಈ ಸಿಮಾ ಹೇಗಿದೆ?
04:18 PM (IST) Feb 07
JC Kannada Movie Review: ಸೂರ್ಯ ಪ್ರಖ್ಯಾತ್, ರಂಗಾಯಣ ರಘು, ಭಾವನಾ ರೆಡ್ಡಿ, ವಿಜಯ್ ಸಿಂಹ ನಟನೆಯ ಜೆಸಿ ಸಿನಿಮಾ ರಿಲೀಸ್ ಆಗಿದೆ. ಈ ಚಿತ್ರಕ್ಕೆ ನಟ ಧನಂಜಯ ಅವರು ಹಣ ಹೂಡಿದ್ದಾರೆ.
04:00 PM (IST) Feb 07
Jogi Prem V/S Kanakapura Srinivas: ನಿರ್ಮಾಪಕ ಕನಕಪುರ ಶ್ರೀನಿವಾಸ್ ಅವರು ಇತ್ತೀಚೆಗೆ ಸುದ್ದಿಗೋಷ್ಠಿಯಲ್ಲಿ ಜೋಗಿ ಪ್ರೇಮ್, ಡಿಕೆ ಶಿವಕುಮಾರ್, ಪುನೀತ್ ರಾಜ್ಕುಮಾರ್, ದರ್ಶನ್ ವಿರುದ್ಧ ಬಾಯಿಗೆ ಬಂದಂತೆ ಮಾತನಾಡಿದ್ದರು. ಈಗ ಜೋಗಿ ಪ್ರೇಮ್ ಅವರು ಈ ಬಗ್ಗೆ ದೂರು ನೀಡಿದ್ದಾರೆ.
03:55 PM (IST) Feb 07
ಚಿತ್ರದುರ್ಗದಲ್ಲಿ ಆರು ವರ್ಷಗಳ ಕಾಲ ಲಿವ್-ಇನ್ ರಿಲೇಶನ್ಶಿಪ್ನಲ್ಲಿದ್ದ ಪ್ರೇಮಿಗಳಿಬ್ಬರ ನಡುವಿನ ವಿವಾದ ಬೀದಿಗೆ ಬಂದಿದೆ. ತನ್ನ ಪ್ರೇಯಸಿ ಬೇರೊಬ್ಬನೊಂದಿಗೆ ಮದುವೆಯಾಗುತ್ತಿದ್ದಾಳೆ ಎಂದು ಆರೋಪಿಸಿ ಪ್ರಿಯಕರ ರವಿಕುಮಾರ್ ಆಕೆಯ ಮನೆಯ ಮುಂದೆ ಧರಣಿ ನಡೆಸಿದ್ದಾನೆ.
03:49 PM (IST) Feb 07
ಬೆಂಗಳೂರು: 2026ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ಅಧಿಕೃತ ಚಾಲನೆ ಸಿಕ್ಕಿದೆ. ಹೀಗಿರುವಾಗಲೇ ಈ ಬಾರಿ ಯಾವ ತಂಡ ಟಿ20 ವಿಶ್ವಕಪ್ ಟ್ರೋಫಿ ಗೆಲ್ಲಲಿದೆ. ಯಾವ 4 ತಂಡಗಳು ಸೆಮಿಫೈನಲ್ ಪ್ರವೇಶಿಸಲಿವೆ ಎನ್ನುವ ಚರ್ಚೆ ಜೋರಾಗಿದೆ. ಹೀಗಿರುವಾಗ ಎಬಿ ಡಿವಿಲಿಯರ್ಸ್ ಈ ಬಗ್ಗೆ ಭವಿಷ್ಯ ನುಡಿದಿದ್ದಾರೆ.
03:30 PM (IST) Feb 07
ಮಲ್ಲೇಶ್ವರಂನಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡಲು, ಜಿಬಿಎ 'ಪೇ ಅಂಡ್ ಪಾರ್ಕಿಂಗ್' ವ್ಯವಸ್ಥೆಯನ್ನು ಜಾರಿಗೆ ತರಲು ಮುಂದಾಗಿದೆ. ಈ ಯೋಜನೆಯಡಿ, ಸಂಪಿಗೆ ರಸ್ತೆ ಸೇರಿದಂತೆ ಏಳು ಪ್ರಮುಖ ರಸ್ತೆಗಳಲ್ಲಿ ಕಾರು ಮತ್ತು ಬೈಕ್ಗಳಿಗೆ ಗಂಟೆಯ ಆಧಾರದ ಮೇಲೆ ಪಾರ್ಕಿಂಗ್ ಶುಲ್ಕವನ್ನು ನಿಗದಿಪಡಿಸಲಾಗುವುದು.
03:28 PM (IST) Feb 07
Comedy Khiladigalu Actress Deepika: ಅಣ್ಣಯ್ಯ ಧಾರಾವಾಹಿ ಹಾಗೂ ಕಾಮಿಡಿ ಕಿಲಾಡಿಗಳು ಸೇರಿದಂತೆ ಕೆಲ ಕಾಮಿಡಿ ಶೋಗಳಲ್ಲಿ ಗುರುತಿಸಿಕೊಂಡಿರುವ ನಟಿ ದೀಪಿಕಾ ಅವರ 75 ಲಕ್ಷ ರೂಪಾಯಿ ಮನೆ ಭಾರೀ ಚರ್ಚೆಯಲ್ಲಿದೆ.
02:53 PM (IST) Feb 07
Bigg Boss Raghu And Rakshita Shetty: ಬಿಗ್ ಬಾಸ್ ಕನ್ನಡ ಸೀಸನ್ 12 ಶೋನಲ್ಲಿ ರಘು ಮನೆಗೆ ತಂಗಿ ರಕ್ಷಿತಾ ಅವರು ಬಂದಿದ್ದರು. ಅಲ್ಲಿ ಇವರಿಬ್ಬರು ಸೇರಿಕೊಂಡು ವಿಡಿಯೋ ಮಾಡಿದ್ದಾರೆ. ಈ ವಿಡಿಯೋಗಳಿಗೆ ಭಾರೀ ವೀಕ್ಷಣೆ ಸಿಕ್ಕಿದೆ.
02:19 PM (IST) Feb 07
ಬೆಂಗಳೂರು ಮೆಟ್ರೋ ದರ ಏರಿಕೆ ವಿಚಾರವಾಗಿ ಸಂಸದ ತೇಜಸ್ವಿ ಸೂರ್ಯ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ತೀವ್ರ ವಾಗ್ದಾಳಿ ನಡೆದಿದೆ. ರಾಜ್ಯ ಸರ್ಕಾರವೇ ದರ ಏರಿಕೆಗೆ ಒತ್ತಡ ಹೇರಿ ಈಗ ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದೆ ಎಂದು ಸೂರ್ಯ ಆರೋಪಿಸಿದರು.
01:49 PM (IST) Feb 07
ಬಿಗ್ಬಾಸ್ 12ರ ಎಲ್ಲಾ ಸ್ಪರ್ಧಿಗಳು 'ದೊಡ್ಮನೆ ಹಬ್ಬ' ಎಂಬ ವಿಶೇಷ ಕಾರ್ಯಕ್ರಮಕ್ಕಾಗಿ ಮತ್ತೆ ಒಂದಾಗುತ್ತಿದ್ದಾರೆ. ಈ ಕಾರ್ಯಕ್ರಮದಲ್ಲಿ, ಸ್ಪರ್ಧಿಗಳ ಡಾನ್ಸ್, ಕಾಮಿಡಿ ಹಾಗೂ ಅಸಮಾಧಾನಿತರ ಮುಖಾಮುಖಿಯನ್ನು ನಿರೀಕ್ಷಿಸಬಹುದು. ವೀಕ್ಷಕರಿಗೆ ಮನರಂಜನೆಯ ರಸದೌತಣ ನೀಡಲಿದೆ.
01:38 PM (IST) Feb 07
Actress Karishma Kapoor News: ನಟಿ ಕರೀಷ್ಮಾ ಕಪೂರ್ ಹಾಗೂ ಅಭಿಷೇಕ್ ಬಚ್ಚನ್ ಅವರು 2000ರಲ್ಲಿ ಜೋಡಿಯಾಗಿದ್ದರು. 2002ರಲ್ಲಿ ಅದ್ದೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡು, ಇನ್ನೇನು ಮದುವೆ ಆಗಬೇಕಿದ್ದ ಈ ಜೋಡಿ ಆಮೇಲೆ ದೂರ ಆಗಿತ್ತು.
01:15 PM (IST) Feb 07
01:13 PM (IST) Feb 07
01:02 PM (IST) Feb 07
ವೈಯಕ್ತಿಕ ಜೀವನದಲ್ಲಿ ಏರಿಳಿತವಾಗಿದ್ದರೂ ಕೂಡ, women’s premier league ಅಲ್ಲಿ ಟ್ರೋಫಿ ಗೆದ್ದು ಬೀಗಿದ ಸ್ಮೃತಿ ಮಂಧಾನ ಅವರು ಈಗ ಯಶಸ್ಸಿನ ಅಲೆಯಲ್ಲಿ ತೇಲಾಡುತ್ತಿದ್ದಾರೆ. ಮನಸ್ಸೊಂದಿದ್ದರೆ ಯಾವುದು ಕೂಡ ದೊಡ್ಡದಲ್ಲ ಎನ್ನುವುದಕ್ಕೆ ಸ್ಮೃತಿ ದೊಡ್ಡ ಉದಾಹರಣೆ.
01:00 PM (IST) Feb 07
12:40 PM (IST) Feb 07
ವಿಧಾನಸಭೆಯಲ್ಲಿ ಶಾಸಕರಾದ ಶಿವಲಿಂಗೇಗೌಡ ಮತ್ತು ಶರಣು ಸಲಗಾರ ನಡುವಿನ ಮಾತಿನ ಜಟಾಪಟಿಗೆ ಸ್ಪೀಕರ್ ಯು.ಟಿ. ಖಾದರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸದನವು ಒಂದು ಕುಟುಂಬವಿದ್ದಂತೆ, ಶಾಸಕರು ಆತ್ಮಾವಲೋಕನ ಮಾಡಿಕೊಂಡು ಸದನದ ಗೌರವವನ್ನು ಕಾಪಾಡಬೇಕು ಎಂದು ಅವರು ಕಿವಿಮಾತು ಹೇಳಿದ್ದಾರೆ.
12:37 PM (IST) Feb 07
12:13 PM (IST) Feb 07
ನಟಿ ಮೇಘನಾ ರಾಜ್ ಅವರ ಎರಡನೇ ಮದುವೆಯ ಬಗ್ಗೆ ಅವರ ತಂದೆ ಸುಂದರ್ ರಾಜ್ ಮಾತನಾಡಿದ್ದಾರೆ. ಮಗಳ ಬದುಕಿನ ನಿರ್ಧಾರ ಅವಳದ್ದೇ ಎಂದಿರುವ ಅವರು, ಪ್ರತಿಯೊಬ್ಬರಿಗೂ ಸಹಬಾಳ್ವೆ ಅಗತ್ಯ ಎಂದು ಹೇಳಿದ್ದಾರೆ. ಮದುವೆಯ ಬಗ್ಗೆ ಅವರು ಹೇಳಿದ್ದೇನು?
12:13 PM (IST) Feb 07
ಹಿರಿಯ ಐಎಎಸ್ ಅಧಿಕಾರಿಯೊಬ್ಬರ ವಿವಾಹಿತ ಪುತ್ರಿಯೊಬ್ಬರು ರೇಬೀಸ್ಗೆ ಬಲಿಯಾದ ದುರಂತ ಘಟನೆ ಕೆಲ ದಿನಗಳ ಹಿಂದೆ ಗುಜರಾತ್ನಲ್ಲಿ ನಡೆದಿದ್ದು, ಈ ವಿಚಾರ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ಜೊತೆಗೆ ವ್ಯಾಪಕ ಚರ್ಚೆ ಹುಟ್ಟುಹಾಕಿದೆ.
12:04 PM (IST) Feb 07
ಚಿಕ್ಕಮಗಳೂರಿನ ಚಂದ್ರಕಟ್ಟೆ ನಿವಾಸಿ ಯುವ ರೈತ ಸಂತೋಷ್, ಜಾತ್ರೆಗೆ ಕಡಿಯಲು ತಂದಿದ್ದ ಆಡು ಒಂದು ಗರ್ಭಿಣಿ ಎಂಬ ಅನುಮಾನದಿಂದ ಅದನ್ನು ಉಳಿಸಿಕೊಂಡಿದ್ದರು. ಇದೀಗ ಆ ಕುರಿಯು ಏಕಕಾಲಕ್ಕೆ ಆರು ಆರೋಗ್ಯವಂತ ಮರಿಗಳಿಗೆ ಜನ್ಮ ನೀಡಿದ್ದು, ರೈತನಿಗೆ ಅಚ್ಚರಿಯ ಜೊತೆಗೆ ಅದೃಷ್ಟವನ್ನು ತಂದಿದೆ.
11:54 AM (IST) Feb 07
11:41 AM (IST) Feb 07
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL) ತುರ್ತು ನಿರ್ವಹಣಾ ಕಾಮಗಾರಿ ಕೈಗೊಂಡಿರುವುದರಿಂದ ಬೆಂಗಳೂರಿನ ರಾಜಾಜಿನಗರ, ಮಲ್ಲೇಶ್ವರಂ, ಆರ್.ಆರ್. ನಗರ ಹಾಗೂ ಬನಶಂಕರಿ ವಿಭಾಗಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.