LIVE NOW
Published : Jul 07, 2026, 07:00 AM ISTUpdated : Jul 07, 2026, 10:17 AM IST

Karnataka News Live: ಇದು ರಾಜ್ಯದಲ್ಲೇ ಮೊದಲು! ಬಂಟ್ವಾಳದ ಈ ಶಾಲೇಲಿ ಮಕ್ಕಳ ಸುರಕ್ಷತೆಗೆ RFID ಟ್ಯಾಗ್‌! ಇದು ಹೇಗೆ ಕೆಲಸ ಮಾಡುತ್ತೆ ಗೊತ್ತಾ?

ಸಾರಾಂಶ

ಬೆಂಗಳೂರು: ರಾಜ್ಯದ ಹಲವೆಡೆ ಮುಂಗಾರು ಮಳೆಯ ಕೊರತೆಯಿಂದಾಗಿ ಬರ ಪರಿಸ್ಥಿತಿಯ ಆತಂಕ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಮಂಗಳವಾರ ಕಲಬುರಗಿಯಲ್ಲಿ ವಿಭಾಗ ಮಟ್ಟದ ಸಭೆ ಕರೆದಿದ್ದು, ಬರ ಪರಿಸ್ಥಿತಿ ಕುರಿತು ಸಮಗ್ರ ಚರ್ಚೆ ನಡೆಸುತ್ತೇವೆ. ಅಲ್ಲದೆ, ಎಲ್ಲಾ ಜಿಲ್ಲೆಗಳಿಂದ ವರದಿ ತರಿಸಿಕೊಂಡು, ಪರಿಶೀಲನೆ ನಡೆಸಿದ ಬಳಿಕ ‘ಬರಗಾಲ ಘೋಷಣೆ’ ಮಾಡುವ ಸಂಬಂಧ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಬರ ಘೋಷಣೆ ಕುರಿತ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿ, ರಾಜ್ಯದಲ್ಲಿ ಮಳೆ ಕೊರತೆಯ ಆತಂಕ ಎದುರಾಗಿದ್ದರೂ ಬರ ಘೋಷಣೆ ಮಾಡುವ ಬಗ್ಗೆ ಸರ್ಕಾರ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಒಂದೇ ದಿನದಲ್ಲಿ ಬರ ಘೋಷಣೆ ಮಾಡಲು ಸಾಧ್ಯವಿಲ್ಲ. ಕೇಂದ್ರ ಸರ್ಕಾರ ಮತ್ತು ರಾಜ್ಯದ ಮಾರ್ಗಸೂಚಿಗಳ ಪ್ರಕಾರ ಸಮೀಕ್ಷೆ ನಡೆಸಿ, ಬೆಳೆ ಹಾನಿ ಹಾಗೂ ನೀರಿನ ಕೊರತೆಯ ವರದಿ ಆಧರಿಸಿ ಬರ ಘೋಷಣೆ ಮಾಡಬೇಕಾಗುತ್ತದೆ. ಅದಕ್ಕೆ ಕಾಲಾವಕಾಶ ಬೇಕು. ಉತ್ತರ ಕರ್ನಾಟಕ ಭಾಗದ ಬರ ಕುರಿತಂತೆ ಕಲಬುರಗಿಯಲ್ಲಿ ಮಂಗಳವಾರ ನಡೆಯುವ ಅಧಿಕಾರಿಗಳ ಸಭೆಯಲ್ಲಿ ಮಾಹಿತಿ ಪಡೆಯುತ್ತೇನೆ ಎಂದು ಅವರು ಸ್ಪಷ್ಟಪಡಿಸಿದರು.

10:17 AM (IST) Jul 07

ಇದು ರಾಜ್ಯದಲ್ಲೇ ಮೊದಲು! ಬಂಟ್ವಾಳದ ಈ ಶಾಲೇಲಿ ಮಕ್ಕಳ ಸುರಕ್ಷತೆಗೆ RFID ಟ್ಯಾಗ್‌! ಇದು ಹೇಗೆ ಕೆಲಸ ಮಾಡುತ್ತೆ ಗೊತ್ತಾ?

ಬಂಟ್ವಾಳದ ಮಾಣಿ ಪೆರಾಜೆಯ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯು ರಾಜ್ಯದಲ್ಲೇ ಮೊದಲ ಬಾರಿಗೆ ಆರ್‌ಎಫ್‌ಐಡಿ ಆಧಾರಿತ ಡಿಜಿಟಲ್ ವಿದ್ಯಾರ್ಥಿ ಸುರಕ್ಷತಾ ವ್ಯವಸ್ಥೆಯನ್ನು ಜಾರಿಗೆ ತಂದಿದೆ. ಈ ವ್ಯವಸ್ಥೆಯಡಿ, ವಿದ್ಯಾರ್ಥಿಗಳು ಶಾಲೆಗೆ ಪ್ರವೇಶಿಸುವಾಗ ಮತ್ತು ನಿರ್ಗಮಿಸುವಾಗ ಪೋಷಕರಿಗೆ ಎಸ್‌ಎಂಎಸ್ ರವಾನೆಯಾಗುತ್ತೆ

Read Full Story

10:10 AM (IST) Jul 07

ಮೆಸ್ಸಿ-ಎಂಬಾಪೆ ಜತೆ ಗೋಲ್ಡನ್ ಬೂಟ್ ರೇಸ್‌ಗಿಳಿದ ಹಾಲ್ಯಾಂಡ್! ಫಿಫಾ ವಿಶ್ವಕಪ್‌ನಲ್ಲಿ ಬ್ರೆಜಿಲ್ ಹೋರಾಟ ಅಂತ್ಯ

ಯುವ ತಾರೆ ಎರ್ಲಿಂಗ್‌ ಹಾಲ್ಯಾಂಡ್‌ ಅವರ ಎರಡು ಗೋಲುಗಳ ನೆರವಿನಿಂದ ನಾರ್ವೆ ತಂಡವು ಫಿಫಾ ವಿಶ್ವಕಪ್‌ನಲ್ಲಿ ಐತಿಹಾಸಿಕವಾಗಿ ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿದೆ. ಈ ಸೋಲಿನೊಂದಿಗೆ, 5 ಬಾರಿಯ ಚಾಂಪಿಯನ್‌ ಬ್ರೆಜಿಲ್‌ ಟೂರ್ನಿಯಿಂದ ಹೊರಬಿದ್ದಿದ್ದು, ತಂಡದ ತಾರೆ ನೇಯ್ಮರ್‌ ನಿವೃತ್ತಿಯ ಸುಳಿವು ನೀಡಿದ್ದಾರೆ.
Read Full Story

09:46 AM (IST) Jul 07

ಶಿಕ್ಷಕರು ಮಕ್ಕಳಿಗೆ ಹೊಡೆದು ಪಾಠ ಕಲಿಸುವುದು ಸಹಿಸಲ್ಲ - ಹೈಕೋರ್ಟ್‌ ಎಚ್ಚರಿಕೆ! ಏನಿದು ಪ್ರಕರಣ?

ಯುಕೆಜಿ ವಿದ್ಯಾರ್ಥಿನಿಗೆ ಕೋಲಿನಿಂದ ಹೊಡೆದ ಆರೋಪ ಎದುರಿಸುತ್ತಿರುವ ಶಿಕ್ಷಕಿ ವಿರುದ್ಧದ ವಿಚಾರಣೆಗೆ ತಡೆಯಾಜ್ಞೆ ನೀಡಲು ಹೈಕೋರ್ಟ್ ನಿರಾಕರಿಸಿದೆ. ಮಕ್ಕಳಿಗೆ ಹೊಡೆದು ಪಾಠ ಕಲಿಸುವುದನ್ನು ನ್ಯಾಯಾಲಯ ಸಹಿಸುವುದಿಲ್ಲ ಎಂದು ನ್ಯಾಯಪೀಠ ಕಟುವಾಗಿ ಹೇಳಿದ್ದು, ಶಿಕ್ಷಕಿ ವಿರುದ್ಧ ಮುಂದುವರಿದ ವಿಚಾರಣೆ.

Read Full Story

09:20 AM (IST) Jul 07

ಬೆಂಗಳೂರಲ್ಲಿ ರಕ್ತಪಾತ - ಬಾರ್‌ನಲ್ಲಿ ಗುರಾಯಿಸಿದ್ದೇ ತಪ್ಪಾಯ್ತು, ಯುವಕನ ಎದೆಗೆ ಬಾಟಲಿ ಚುಚ್ಚಿ ಹತ್ಯೆ

ಬೆಂಗಳೂರಿನಲ್ಲಿ ಕ್ಷುಲ್ಲಕ ಕಾರಣಕ್ಕೆ ರಕ್ತಪಾತ ನಡೆದಿದೆ. ಬಾರ್‍‌ನಲ್ಲಿ ಕೂತು ಗುರಾಯಿಸಿದ ಎಂಬ ಕಾರಣಕ್ಕೆ ವ್ಯಕ್ತಿಗೆ ಬೀರ್ ಬಾಟಲ್‌ನಿಂದ ಚುಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಈ ಕುರಿತ ಕಂಪ್ಲೀಟ್ ಮಾಹಿತಿ ಇಲ್ಲಿದೆ.

Read Full Story

09:19 AM (IST) Jul 07

ದೇಶದ್ರೋಹಿಗಳು ಎಂದರೆ ಯಾರು? ನಿವೃತ್ತ ನ್ಯಾಯಮೂರ್ತಿ ಅರಳಿ ನಾಗರಾಜ್ ಎಂಥಾ ಮಾತು ಹೇಳಿದ್ರು ನೋಡಿ!

ಮೈಸೂರಿನಲ್ಲಿ ಶರಣು ವಿಶ್ವವಚನ ಫೌಂಡೇಶನ್‌ ಹಮ್ಮಿಕೊಂಡಿದ್ದ 'ಶಾಲೆಗಳೆಡೆಗೆ ವಚನಗಳ ನಡಿಗೆ' ಕಾರ್ಯಕ್ರಮದಲ್ಲಿ ಮಾತನಾಡಿದ ನಿವೃತ್ತ ನ್ಯಾಯಮೂರ್ತಿ ಅರಳಿ ನಾಗರಾಜ, ಗಳಿಸಿದ ಜ್ಞಾನವನ್ನು ದೇಶಸೇವೆಗೆ ಬಳಸದಿದ್ದರೆ ಅವನೇ ದೇಶದ್ರೋಹಿ ಎಂದರು. 

Read Full Story

09:12 AM (IST) Jul 07

Bengaluru ಸ್ಯಾಂಕಿ ಕೆರೆಯಲ್ಲಿ ವಿದ್ಯಾರ್ಥಿನಿ ಶವ ಪತ್ತೆ, ಪ್ರಿಯಕರನಿಗೆ ಮೆಸೇಜ್ ಕಳುಹಿಸಿ ಆತ್ಮ*ತ್ಯೆಗೆ ಶರಣು!

ಬೆಂಗಳೂರಿನ ಮಲ್ಲೇಶ್ವರಂನ ಸ್ಯಾಂಕಿ ಕೆರೆಗೆ ಹಾರಿ 20 ವರ್ಷದ ವಿದ್ಯಾರ್ಥಿನಿ ತೇಜು ಆತ್ಮ*ತ್ಯೆ ಮಾಡಿಕೊಂಡಿದ್ದಾಳೆ. ಸಾವಿಗೂ ಮುನ್ನ ತನ್ನ ಪ್ರಿಯಕರನಿಗೆ 'ಸಾಯುತ್ತಿದ್ದೇನೆ' ಎಂದು ಸಂದೇಶ ಕಳುಹಿಸಿದ್ದು, ಪ್ರೇಮ ವೈಫಲ್ಯ ಹಾಗೂ ಕೌಟುಂಬಿಕ ಸಮಸ್ಯೆಗಳು ಸಾವಿಗೆ ಕಾರಣವೆಂದು ಶಂಕಿಸಲಾಗಿದೆ. ಸದಾಶಿವನಗರ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

Read Full Story

09:00 AM (IST) Jul 07

ಮಳೆಯಿಂದ ಸದ್ಯಕ್ಕಿಲ್ಲ ರಿಲೀಫ್.. ಈ 2 ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ!

ಹವಾಮಾನ ಇಲಾಖೆಯು ಕರ್ನಾಟಕದಾದ್ಯಂತ ಭಾರೀ ಮಳೆಯ ಮುನ್ಸೂಚನೆ ನೀಡಿದೆ. ಬೆಂಗಳೂರಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಕರಾವಳಿಯ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದೆ. ರಾಜ್ಯದ ಇತರೆ ಹಲವು ಜಿಲ್ಲೆಗಳಿಗೂ ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ಜಾರಿಯಲ್ಲಿದ್ದು, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
Read Full Story

08:54 AM (IST) Jul 07

ಗಂಟೆಗೆ 15 ಲಕ್ಷ ರೂ. ವೆಚ್ಚ; ಹಾವೇರಿ ಜಿಲ್ಲೆಯಲ್ಲಿ ಮೋಡ ಬಿತ್ತನೆಗೆ ಚಾಲನೆ, ರೈತರಿಗೆ ನೆರವು

ಉತ್ತರ ಕರ್ನಾಟಕದಲ್ಲಿ ಮುಂಗಾರು ಮಳೆ ಕೊರತೆಯಿಂದ ಸಂಕಷ್ಟದಲ್ಲಿರುವ ರೈತರಿಗೆ ನೆರವಾಗಲು, ಹಾವೇರಿ ಜಿಲ್ಲೆಯಲ್ಲಿ ಶಾಸಕರ ನೇತೃತ್ವದಲ್ಲಿ ಮೋಡ ಬಿತ್ತನೆಗೆ ಚಾಲನೆ ನೀಡಲಾಗಿದೆ. ಈ ಕಾರ್ಯಕ್ರಮವನ್ನು ಸರ್ಕಾರವೇ ವಹಿಸಿಕೊಂಡು ಧಾರವಾಡ, ಗದಗ ಜಿಲ್ಲೆಗಳಿಗೂ ವಿಸ್ತರಿಸಬೇಕೆಂಬ ಒತ್ತಾಯ ಕೇಳಿಬಂದಿದೆ.
Read Full Story

08:50 AM (IST) Jul 07

ಮನೇಲಿ ನಾಯಿ ಸಾಕಿದ್ದೀರಾ ಎಚ್ಚರ! ಈ ತಪ್ಪು ಮಾಡಿದ್ರೆ ಕಾನೂನು ಸಂಕಷ್ಟ ಗ್ಯಾರಂಟಿ, ಹೈಕೋರ್ಟ್ ಏನು ಹೇಳಿದ ಗೊತ್ತಾ?

ಮಹಿಳೆಯೊಬ್ಬರ ಮುಖಕ್ಕೆ ನಾಯಿ ಕಚ್ಚಿದ ಪ್ರಕರಣದಲ್ಲಿ ನಾಯಿ ಮಾಲೀಕರ ವಿರುದ್ಧ‌ ದಾಖಲಾಗಿರುವ ಕ್ರಿಮಿನಲ್‌ ಪ್ರಕರಣ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ. ನಾಯಿಯನ್ನು‌ ಕಟ್ಟಿಹಾಕದೆ ಬಿಟ್ಟು, ಅದರಿಂದ ಬೇರೆಯವರ ಮೇಲೆ ದಾಳಿಯಾದರೆ, ಘಟನೆಗೆ ನಾಯಿ ಸಾಕುವವರೇ ಹೊಣೆ’ ಎಂದು ಕಟುವಾಗಿ ನುಡಿದಿದೆ.

Read Full Story

08:26 AM (IST) Jul 07

ದೇಶದ ತೂಗು ಸೇತುವೆಗಳ ಸರದಾರ ಪದ್ಮಶ್ರೀ ಪುರಸ್ಕೃತ ಡಾ.ಗಿರೀಶ್ ಭಾರದ್ವಾಜ್ ನಿಧನ, ಕಳಚಿತು ಹಳ್ಳಿಗಳ ಸಂಪರ್ಕದ ಕೊಂಡಿ

'ಭಾರತದ ತೂಗು ಸೇತುವೆ ಮನುಷ್ಯ' ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ ಅವರು ನಿಧನರಾಗಿದ್ದಾರೆ. ಅವರು ದೇಶಾದ್ಯಂತ 160ಕ್ಕೂ ಹೆಚ್ಚು ಕಡಿಮೆ ವೆಚ್ಚದ ತೂಗು ಸೇತುವೆಗಳನ್ನು ನಿರ್ಮಿಸಿ, ಗ್ರಾಮೀಣ ಭಾರತದ ಸಂಪರ್ಕ ಕ್ರಾಂತಿಗೆ ಕಾರಣರಾಗಿದ್ದರು. ಅವರ ನಿಸ್ವಾರ್ಥ ಸೇವೆ ಮತ್ತು ತಾಂತ್ರಿಕ ಕೊಡುಗೆಯಿಂದಾಗಿ ನೂರಾರು ಹಳ್ಳಿಗಳು ಮುಖ್ಯವಾಹಿನಿಗೆ ಬಂದವು.

Read Full Story

08:10 AM (IST) Jul 07

33 ದಿನ ಯೋಗಸಮಾಧಿಗೆ ಹೋಗಿದ್ದ ರಾಚೋಟೇಶ್ವರ ಶ್ರೀಗಳ ಆರೋಗ್ಯ ಹೇಗಿದೆ? ವೈದ್ಯರಿಂದ ಮಾಹಿತಿ

ಗದಗ ಜಿಲ್ಲೆಯ ಡಾ.ರಾಚೋಟೇಶ್ವರ ಸ್ವಾಮೀಜಿ ಅವರು 33 ದಿನಗಳ ಶಿವಯೋಗ ಸಮಾಧಿ ಅನುಷ್ಠಾನವನ್ನು ಪೂರ್ಣಗೊಳಿಸಿದ್ದಾರೆ. ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶ್ರೀಗಳಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರ ತಂಡ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ.

Read Full Story

07:55 AM (IST) Jul 07

ಉಪ್ಪಿನಂಗಡಿಯ ನೇತ್ರಾವತಿ ಸೇತುವೆಯಲ್ಲಿ ಬಿರುಕು? ಅರವತ್ತರ ಹರೆಯದಲ್ಲಿ ಅಪಾಯದ ಮುನ್ಸೂಚನೆ?

ಪುತ್ತೂರು-ಬೆಳ್ತಂಗಡಿ ಸಂಪರ್ಕ ಕೊಂಡಿಯಾಗಿರುವ 60 ವರ್ಷ ಹಳೆಯ ಉಪ್ಪಿನಂಗಡಿಯ ನೇತ್ರಾವತಿ ಸೇತುವೆಯಲ್ಲಿ ಬಿರುಕು ಕಾಣಿಸಿಕೊಂಡು ಆತಂಕ ಸೃಷ್ಟಿಸಿದೆ. ಮಿತಿಮೀರಿದ ಘನ ವಾಹನ ಸಂಚಾರ ಮತ್ತು ನಿರ್ವಹಣೆ ಕೊರತೆಯಿಂದ ಸೇತುವೆ ದುರ್ಬಲಗೊಂಡಿದ್ದು, ತಕ್ಷಣವೇ ಅಧಿಕಾರಿಗಳು ಪರಿಶೀಲಿಸಿ ದುರಸ್ತಿಪಡಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.
Read Full Story

07:45 AM (IST) Jul 07

ವರುಣ ಆರ್ಭಟಕ್ಕೆ ಒಂದೇ ತಾಲೂಕಿನ 7 ಸೇತುವೆಗಳು ಜಲಾವೃತ; ಪ್ರವಾಹ ಭೀತಿಯಲ್ಲಿರೋ ಜನರು

ಬೆಳಗಾವಿ ಜಿಲ್ಲೆ ಮತ್ತು ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಕೃಷ್ಣಾ ಮತ್ತು ಅದರ ಉಪನದಿಗಳು ಉಕ್ಕಿ ಹರಿಯುತ್ತಿವೆ. ಇದರಿಂದಾಗಿ ಚಿಕ್ಕೋಡಿ ತಾಲೂಕಿನ ಏಳು ಕೆಳಹಂತದ ಸೇತುವೆಗಳು ಜಲಾವೃತವಾಗಿದ್ದು, ಮರಗಳು ಉರುಳಿಬಿದ್ದ ಘಟನೆಗಳು ಹಾಗೂ ಆಸ್ತಿಪಾಸ್ತಿಗೆ ಹಾನಿಯಾಗಿದೆ. ಮಲಪ್ರಭಾ ನದಿಗೆ ಮತ್ತೆ ಜೀವಕಳೆ ಬಂದಿರುವುದು ರೈತರಲ್ಲಿ ಸಂತಸ ಮೂಡಿಸಿದೆ.
Read Full Story

07:34 AM (IST) Jul 07

ಲೋಕಾಪುರದವರೆಗಿನ 6 ರೈಲು ನಿಲ್ದಾಣಗಳಿಗೆ 3 ಪ್ಯಾಸೆಂಜರ್‌ ರೈಲು ಆರಂಭಿಸಲು ಸ್ಪಂದನೆ

ಬಾಗಲಕೋಟೆಯ ರೈಲ್ವೆ ಹೋರಾಟ ಸಮಿತಿಯು ಲೋಕಾಪುರದವರೆಗೆ ಪ್ಯಾಸೆಂಜರ್ ರೈಲು ಸೇವೆ ಆರಂಭಿಸಲು ಸಂಸದ ಗದ್ದಿಗೌಡರ ಅವರನ್ನು ಒತ್ತಾಯಿಸಿದೆ. ಬಳಕೆಯಾಗದ ನಿಲ್ದಾಣಗಳು ಹಾಳಾಗುತ್ತಿದ್ದು, ಶೀಘ್ರ ರೈಲು ಆರಂಭಿಸದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದೆ.

Read Full Story

07:25 AM (IST) Jul 07

ಸ್ಲಂಗೆ ಬಿಎಲ್‌ಒಗಳು ಹೋಗದ ಕಾರಣ SIRಗೆ ಕಾಂಗ್ರೆಸ್ ನೆರವು - ಬಿಕೆ ಹರಿಪ್ರಸಾದ್ ಸಮರ್ಥನೆ

‘ಬಿಎಲ್‌ಒಗಳು ಕೊಳಗೇರಿ ಪ್ರದೇಶಗಳಿಗೆ ಭೇಟಿ ನೀಡಿ ಗಣತಿ ನಮೂನೆ ಭರ್ತಿ ಮಾಡಲು ನಿರಾಕರಿಸುತ್ತಿದ್ದಾರೆ. ಹೀಗಾಗಿ, ನಮ್ಮವರು ಕಾನೂನು ಬದ್ಧವಾಗಿ ಅಂಥವ ನಮೂನೆ ಸಮುದಾಯ ಭವನ, ದೇವಸ್ಥಾನ ಮತ್ತು ಮಸೀದಿಗಳಲ್ಲಿ ಕುಳಿತು ಭರ್ತಿ ಮಾಡಿಕೊಡುವ ಕೆಲಸ ಮಾಡುತ್ತಿದ್ದಾರೆ -ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ 

Read Full Story

07:19 AM (IST) Jul 07

46 ಸೆಕೆಂಡಲ್ಲಿ ಮಾನವನಲ್ಲಿನ 206 ಮೂಳೆ ಹೆಸರೇಳಿ ಮಾಚೇನಹಳ್ಳಿಯ 5 ವರ್ಷದ ಚಾರ್ವಿಕ್

ಚಾರ್ವಿಕ್‌, ಇತ್ತೀಚೆಗೆ ತನ್ನ ದೇಹವನ್ನೇ ತೋರಿಸಿಕೊಂಡು ದೇಹದಲ್ಲಿರುವ ಮೂಳೆಯ ಹೆಸರು ಮತ್ತು ಅಲ್ಲಿರುವ ಮೂಳೆಗಳ ಸಂಖ್ಯೆಯನ್ನು ಕೇವಲ 46 ಸೆಕೆಂಡ್‌ನಲ್ಲಿ ಹೇಳುವ ಮೂಲಕ ಈ ಸಾಧನೆ ಮಾಡಿದ್ದಾನೆ.

Read Full Story

More Trending News