ಬೆಂಗಳೂರು: ರಾಜ್ಯದ ಹಲವೆಡೆ ಮುಂಗಾರು ಮಳೆಯ ಕೊರತೆಯಿಂದಾಗಿ ಬರ ಪರಿಸ್ಥಿತಿಯ ಆತಂಕ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಮಂಗಳವಾರ ಕಲಬುರಗಿಯಲ್ಲಿ ವಿಭಾಗ ಮಟ್ಟದ ಸಭೆ ಕರೆದಿದ್ದು, ಬರ ಪರಿಸ್ಥಿತಿ ಕುರಿತು ಸಮಗ್ರ ಚರ್ಚೆ ನಡೆಸುತ್ತೇವೆ. ಅಲ್ಲದೆ, ಎಲ್ಲಾ ಜಿಲ್ಲೆಗಳಿಂದ ವರದಿ ತರಿಸಿಕೊಂಡು, ಪರಿಶೀಲನೆ ನಡೆಸಿದ ಬಳಿಕ ‘ಬರಗಾಲ ಘೋಷಣೆ’ ಮಾಡುವ ಸಂಬಂಧ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಬರ ಘೋಷಣೆ ಕುರಿತ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿ, ರಾಜ್ಯದಲ್ಲಿ ಮಳೆ ಕೊರತೆಯ ಆತಂಕ ಎದುರಾಗಿದ್ದರೂ ಬರ ಘೋಷಣೆ ಮಾಡುವ ಬಗ್ಗೆ ಸರ್ಕಾರ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಒಂದೇ ದಿನದಲ್ಲಿ ಬರ ಘೋಷಣೆ ಮಾಡಲು ಸಾಧ್ಯವಿಲ್ಲ. ಕೇಂದ್ರ ಸರ್ಕಾರ ಮತ್ತು ರಾಜ್ಯದ ಮಾರ್ಗಸೂಚಿಗಳ ಪ್ರಕಾರ ಸಮೀಕ್ಷೆ ನಡೆಸಿ, ಬೆಳೆ ಹಾನಿ ಹಾಗೂ ನೀರಿನ ಕೊರತೆಯ ವರದಿ ಆಧರಿಸಿ ಬರ ಘೋಷಣೆ ಮಾಡಬೇಕಾಗುತ್ತದೆ. ಅದಕ್ಕೆ ಕಾಲಾವಕಾಶ ಬೇಕು. ಉತ್ತರ ಕರ್ನಾಟಕ ಭಾಗದ ಬರ ಕುರಿತಂತೆ ಕಲಬುರಗಿಯಲ್ಲಿ ಮಂಗಳವಾರ ನಡೆಯುವ ಅಧಿಕಾರಿಗಳ ಸಭೆಯಲ್ಲಿ ಮಾಹಿತಿ ಪಡೆಯುತ್ತೇನೆ ಎಂದು ಅವರು ಸ್ಪಷ್ಟಪಡಿಸಿದರು.
10:00 PM (IST) Jul 07
Ranjani Raghavan: ಕಿರುತೆರೆಯ ಜನಪ್ರಿಯ ನಟಿ, ಲೇಖಕಿ ಹಾಗೂ ನಿರ್ದೇಶಕಿಯಾಗಿ ಹೊಸ ಅಧ್ಯಾಯ ಆರಂಭಿಸಿರುವ ರಂಜನಿ ರಾಘವನ್ ಇದೀಗ ಇಟಲಿಯ ಸುಂದರ ತಾಣಗಳಲ್ಲಿ ಸೋಲೋ ಟ್ರಿಪ್ ಎಂಜಾಯ್ ಮಾಡಿ ಬಂದಿದ್ದಾರೆ.
09:04 PM (IST) Jul 07
ಕನ್ನಡ ಚಿತ್ರರಂಗದ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಇಂದು (ಜುಲೈ 7) ತಮ್ಮ 43ನೇ ಜನ್ಮದಿನವನ್ನು ಆಚರಿಸಿಕೊಂಡಿದ್ದಾರೆ. ಅಭಿಮಾನಿಗಳು, ಸಿನಿತಾರೆಯರು ಹಾಗೂ ಆಪ್ತರಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ.
09:00 PM (IST) Jul 07
'ಮೊಟ್ಟೆ ಮೊದ್ಲಾ ಕೋಳಿ ಮೊದ್ಲಾ ಎನ್ನುವಂತಾಗಿದೆ. ಒಳ್ಳೆ ಸಿನಿಮಾ ಕೊಟ್ರೆ ಜನ ನೋಡ್ತಿಲ್ವಾ, ಜನ ನೋಡೋದಕ್ಕೆ ಒಳ್ಳೆ ಸಿನಿಮಾ ಕೊಡ್ತಿಲ್ವಾ ಎನ್ನುವಂತಾಗಿದೆ. ಒಳ್ಳೆ ಸಿನಿಮಾ ಬಂದಾಗ ಜನ ನೋಡ್ತಾರೆ. 'ಸು ಫ್ರಂ ಸೋ' ಸಿನಿಮಾ ಬಂದಾಗ ಎಲ್ಲಾ ನುಗ್ಗಿ ನೋಡಿದ್ರು. ಜೆಪಿ ತುಮ್ಮಿನಾಡು ಹೊಸ ನಿರ್ದೇಶಕರು.
08:56 PM (IST) Jul 07
ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಮಲ್ಲೇಶ್ವರಂನಲ್ಲಿ ₹5.5 ಕೋಟಿ ವೆಚ್ಚದ ಪಾದಚಾರಿ ಸುರಂಗ ಮಾರ್ಗ ನಿರ್ಮಾಣವನ್ನು ಘೋಷಿಸಿದ್ದಾರೆ. ಇದರೊಂದಿಗೆ, ರಾಮೋಹಳ್ಳಿ ಗೇಟ್ ಅಂಡರ್ಬ್ರಿಡ್ಜ್, ಕಂಟೋನ್ಮೆಂಟ್ ಮತ್ತು ಯಶವಂತಪುರ ನಿಲ್ದಾಣಗಳ ಅಭಿವೃದ್ಧಿ ಬಗ್ಗೆ ಮಾಹಿತಿ ನೀಡಿದ್ದಾರೆ.
08:33 PM (IST) Jul 07
08:31 PM (IST) Jul 07
ಐತಿಹಾಸಿಕ ಅಂಜನಾದ್ರಿ ಬೆಟ್ಟದಲ್ಲಿರುವ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಹುಂಡಿ ತೆರೆಯುವ ಕಾರ್ಯ ಶುಕ್ರವಾರ (ಜುಲೈ 3) ಪೊಲೀಸ್ ಭದ್ರತೆ ಹಾಗೂ ಸಿಸಿಟಿವಿ ಕಣ್ಗಾವಲಿನ ನಡುವೆ ನಡೆಯಿತು.
08:11 PM (IST) Jul 07
'ಕರಾವಳಿ' ಚಿತ್ರದ ಟ್ರೈಲರ್ನಲ್ಲಿ ನಾಯಕ ಪ್ರಜ್ವಲ್ ದೇವರಾಜ್ ಅವರ ಧ್ವನಿ ಇಲ್ಲದಿರುವುದು ಮತ್ತು ಕಳಪೆ ಸ್ಕ್ರೀನ್ ಪ್ರೆಸೆನ್ಸ್ಗೆ ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿತ್ರತಂಡದ ಬೇಜವಾಬ್ದಾರಿತನದಿಂದ ಅಭಿಮಾನಿಗಳು ನೊಂದಿದ್ದಾರೆ.
07:42 PM (IST) Jul 07
ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಎಸ್ಬಿಐ ಮ್ಯಾನೇಜರ್ ಅವರ ₹35.24 ಲಕ್ಷ ವಾರ್ಷಿಕ ಗ್ರಾಸ್ ಸಂಬಳವು, ಕೈಗೆ ಸಿಗುವ ನಿಜವಾದ ಆದಾಯವಲ್ಲ. ಇದರಲ್ಲಿ ಲೀವ್ ಎನ್ಕ್ಯಾಶ್ಮೆಂಟ್ನಂತಹ ಒಂದು ಬಾರಿ ಸಿಗುವ ಭತ್ಯೆಗಳು ಸೇರಿವೆ. ಆದಾಯ ತೆರಿಗೆ, ಇಪಿಎಫ್, ಎನ್ಪಿಎಸ್ ಮತ್ತು ಸಾಲದ ಕಡಿತಗಳ ನಂತರ ಅಂತಿಮ ಸಂಬಳ ಖಾತೆಗೆ ಜಮೆಯಾಗುವುದರಿಂದ, ಕೈಗೆ ಸಿಗುವ ಮೊತ್ತ ಗಣನೀಯವಾಗಿ ಕಡಿಮೆಯಿರುತ್ತದೆ.
07:29 PM (IST) Jul 07
'ಕರಾವಳಿ' ಚಿತ್ರದ ಟ್ರೈಲರ್ ವಿವಾದದ ಬಗ್ಗೆ ನಟ ಪ್ರಜ್ವಲ್ ದೇವರಾಜ್ ಮೌನ ಮುರಿದಿದ್ದಾರೆ. ಚಿತ್ರತಂಡ ಸಂಭಾವನೆ ಬಾಕಿ ಉಳಿಸಿಕೊಂಡಿದ್ದರಿಂದ ಡಬ್ಬಿಂಗ್ ಮಾಡಿರಲಿಲ್ಲ ಮತ್ತು ಕಾರ್ಯಕ್ರಮಕ್ಕೆ ಗೈರಾಗಿದ್ದೆ ಎಂದು ಸ್ಪಷ್ಟಪಡಿಸಿದ್ದಾರೆ.
07:22 PM (IST) Jul 07
ಆಸ್ಟ್ರೇಲಿಯನ್ ನ್ಯಾಷನಲ್ ಯೂನಿವರ್ಸಿಟಿಯ (ANU) ಸಂಶೋಧಕ ಆಡಮ್ ಬೋಡ್ ಮತ್ತು ಅವರ ತಂಡ ಈ ಅಧ್ಯಯನ ನಡೆಸಿದೆ. ಪ್ರಪಂಚದಾದ್ಯಂತ ಪ್ರೀತಿಯಲ್ಲಿರುವ 1,556 ಜನರಿಂದ ಡೇಟಾ ಸಂಗ್ರಹಿಸಿದೆ.
07:20 PM (IST) Jul 07
ಕೊಡಗು ಶಾಲೆಗಳಿಗೆ ನಾಳೆ (ಜು.08) ರಜೆ ಘೋಷಿಸಲಾಗಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಿಸಲಾಗಿದೆ. ಹವಾಮಾನ ಇಲಾಖೆ ಆರೇಂಜ್ ಅಲರ್ಟ್ ಎಚ್ಚರಿಕೆ ನೀಡಿದೆ.
07:08 PM (IST) Jul 07
'ಕರಾವಳಿ' ಸಿನಿಮಾ ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಪ್ರಜ್ವಲ್ ದೇವರಾಜ್ ಅಭಿಮಾನಿಗಳ ಪ್ರತಿಭಟನೆಯಿಂದ ವಿವಾದ ಭುಗಿಲೆದ್ದಿದೆ. ಈ ಕುರಿತು ಮಾತನಾಡಿದ ನಟ ರಾಜ್ ಬಿ. ಶೆಟ್ಟಿ, ಚಿತ್ರತಂಡದ ವಿರುದ್ಧದ ಪಿತೂರಿ ಹಾಗೂ ಪ್ರಜ್ವಲ್ ದೇವರಾಜ್ ನಡೆಗೆ ಬೇಸರ ವ್ಯಕ್ತಪಡಿಸಿದ್ದಾರೆ.
06:51 PM (IST) Jul 07
ಪತ್ನಿಯ ಶೀಲದ ಮೇಲೆ ಅನುಮಾನ ವ್ಯಕ್ತಪಡಿಸುತ್ತಿದ್ದ ಪತಿಯೊಬ್ಬ, ರಾಜೀ ಪಂಚಾಯಿತಿ ಮಾಡಲು ಬಂದಿದ್ದ ಮಾವನೊಂದಿಗೆ ತನ್ನ ಪತ್ನಿಯನ್ನೇ ಚಾಕುವಿನಿಂದ ಇರಿದು ಬರ್ಬರವಾಗಿ ಹ*ತ್ಯೆ ಮಾಡಿರುವ ಘಟನೆ ನಡೆದಿದೆ.
06:46 PM (IST) Jul 07
'ಕರಾವಳಿ' ಸಿನಿಮಾ ಬಿಡುಗಡೆಗೆ ಸಿದ್ಧವಾಗಿದ್ದು, ಸಂಭಾವನೆ ವಿಚಾರವಾಗಿ ನಾಯಕ ಪ್ರಜ್ವಲ್ ದೇವರಾಜ್ ಮತ್ತು ನಿರ್ಮಾಪಕರ ನಡುವೆ ಭಿನ್ನಾಭಿಪ್ರಾಯ ಸ್ಫೋಟಗೊಂಡಿದೆ. ಈ ಒಳಜಗಳವು ಚಿತ್ರದ ಡಬ್ಬಿಂಗ್ ಮತ್ತು ನಿಗದಿತ ಬಿಡುಗಡೆಯ ಮೇಲೆ ಪರಿಣಾಮ ಬೀರಿದ್ದು, ಚಿತ್ರದ ಭವಿಷ್ಯವನ್ನು ಅನಿಶ್ಚಿತತೆಗೆ ತಳ್ಳಿದೆ.
05:52 PM (IST) Jul 07
ಪಾಕಿಸ್ತಾನ ಮೂಲದ 'ಗೋರಿ ಬ್ಯೂಟಿ ಕ್ರೀಮ್' ಬಳಸಿ 18 ಮಹಿಳೆಯರು ತೀವ್ರ ಕಿಡ್ನಿ ಸಮಸ್ಯೆಗೆ ತುತ್ತಾಗಿದ್ದಾರೆ. ಈ ಕ್ರೀಮ್ನಲ್ಲಿ ಕಾನೂನು ಮಿತಿಗಿಂತ 752 ಪಟ್ಟು ಹೆಚ್ಚು ಪಾದರಸ ಪತ್ತೆಯಾಗಿದ್ದು, ಮಹಾರಾಷ್ಟ್ರ ಎಫ್ಡಿಎ ಇದನ್ನು ಅಸುರಕ್ಷಿತ ಎಂದು ಘೋಷಿಸಿ ನಿಷೇಧಿಸಿದೆ.
05:52 PM (IST) Jul 07
ಹುಟ್ಟುಹಬ್ಬದ ಸಂಭ್ರಮ ಇರಬೇಕಿದ್ದ ದಿನವೇ ತಾಯಿಯ ಮಡಿಲಿಗೆ ಮಗನ ಮೃತದೇಹ ಬಂದಿರುವ ದಾರುಣ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್.ಎಸ್ನಲ್ಲಿ ನಡೆದಿದೆ. ಬಂಡಿಹೊಳೆ ಗ್ರಾಮದ ಯುವಕ ರಾಕೇಶ್ ಬರ್ಬರವಾಗಿ ಹ*ತ್ಯೆಯಾಗಿದ್ದಾನೆ.
05:48 PM (IST) Jul 07
ಮಲ್ಲೇಶ್ವರದ ಸಂಪಿಗೆ ರಸ್ತೆಯಲ್ಲಿ ಪಾದಚಾರಿ ಮಾರ್ಗ ತೆರವು ಕಾರ್ಯಾಚರಣೆ ನಡೆದಿದ್ದು, ಸಂತ್ರಸ್ತ ಬೀದಿ ಬದಿ ವ್ಯಾಪಾರಿಗಳು ಕಾನೂನು ಹೋರಾಟಕ್ಕೆ ಸಿದ್ಧತೆ ನಡೆಸಿದ್ದಾರೆ. ಈ ಹೋರಾಟದ ವೆಚ್ಚಕ್ಕಾಗಿ ಹಣ ಸಂಗ್ರಹಿಸಲಾಗುತ್ತಿದ್ದು, ಇದಕ್ಕೆ ಕೆಲವರಿಂದ ವಿರೋಧ ವ್ಯಕ್ತವಾಗಿದೆ.
05:35 PM (IST) Jul 07
Kapil Dev on Virat Kohli's Test Retirement: ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್ಗೆ ಬೇಗ ನಿವೃತ್ತಿ ಘೋಷಿಸಿದ್ದಾರೆ ಎಂದು ಮಾಜಿ ನಾಯಕ ಕಪಿಲ್ ದೇವ್ ಅಭಿಪ್ರಾಯಪಟ್ಟಿದ್ದಾರೆ. ಕೋಪದಲ್ಲಿ ನಿರ್ಧಾರ ಕೈಗೊಳ್ಳಬಾರದು ಎಂದು ಸಲಹೆ ನೀಡಿದ ಅವರು, ಕೊಹ್ಲಿ ಇನ್ನೂ ಕೆಲವು ವರ್ಷ ಭಾರತಕ್ಕಾಗಿ ಟೆಸ್ಟ್ ಆಡಬಹುದಿತ್ತು ಎಂದಿದ್ದಾರೆ.
05:30 PM (IST) Jul 07
ಇತ್ತೀಚೆಗೆ ಕೃಷಿ ತಾಪಂಡ, "ಈಗ ನಾನು ದುಃಖವನ್ನು ಹೊತ್ತುಕೊಂಡು ಬದುಕುವುದಲ್ಲ, ಅದರ ಜೊತೆಗೆ ಬದುಕುವುದನ್ನು ಕಲಿತಿದ್ದೇನೆ" ಎಂದು ಹೃದಯ ಮುರಿದಿರುವ ಎಮೋಜಿಯೊಂದಿಗೆ ಪೋಸ್ಟ್ ಹಂಚಿಕೊಂಡಿದ್ದರು.
05:02 PM (IST) Jul 07
ಕನ್ನಡ ಚಿತ್ರರಂಗದ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಇಂದು (ಜುಲೈ 7) ತಮ್ಮ 43ನೇ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದು, ಅಭಿಮಾನಿಗಳು, ಸಿನಿ ತಾರೆಯರು ಹಾಗೂ ಆಪ್ತರಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ.
05:01 PM (IST) Jul 07
04:41 PM (IST) Jul 07
ಭಾರತದ ಪರ ಆಡಿದ ಕೆಲ ಕ್ರಿಕೆಟಿಗರು ನಿವೃತ್ತಿಯ ಬಳಿಕ ಅಥವಾ ಉತ್ತಮ ಅವಕಾಶಗಳಿಗಾಗಿ ವಿದೇಶದಲ್ಲಿ ನೆಲೆಸಿದ್ದಾರೆ. ಉದ್ಯೋಗ, ಮಕ್ಕಳ ಶಿಕ್ಷಣ, ಕುಟುಂಬದ ಭವಿಷ್ಯ ಹಾಗೂ ಕ್ರಿಕೆಟ್ ವೃತ್ತಿಯನ್ನು ಮುಂದುವರಿಸುವ ಉದ್ದೇಶದಿಂದ ಹೊಸ ದೇಶವನ್ನು ಆಯ್ಕೆ ಮಾಡಿಕೊಂಡ ಐವರು ಭಾರತೀಯ ಕ್ರಿಕೆಟಿಗರ ಪರಿಚಯ ಇಲ್ಲಿದೆ.
04:32 PM (IST) Jul 07
ನವರಸ ನಾಯಕ ಜಗ್ಗೇಶ್ ತಮ್ಮ ಅಧಿಕೃತ ಫೇಸ್ಬುಕ್ ಖಾತೆಯಲ್ಲಿ ಭಾವುಕ ಬರಹವೊಂದನ್ನು ಹಂಚಿಕೊಂಡಿದ್ದು, ಬಾಲ್ಯದಿಂದ ಯಶಸ್ಸಿನ ಶಿಖರ ತಲುಪುವವರೆಗಿನ ತಮ್ಮ ಜೀವನದ ಹೋರಾಟದ ಪಯಣವನ್ನು ನೆನಪಿಸಿಕೊಂಡಿದ್ದಾರೆ.
04:07 PM (IST) Jul 07
ಶಿವರಾಜ್ಕುಮಾರ್ ಅವರು ಇದೇ ಜುಲೈ 12ರಂದು ತಮ್ಮ 64ನೇ ಜನ್ಮದಿನವನ್ನು ಆಚರಿಸಿಕೊಳ್ಳಲಿದ್ದಾರೆ. ಪ್ರತಿವರ್ಷದಂತೆ ಈ ಬಾರಿಯೂ ಸಾವಿರಾರು ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸಲು ಸಜ್ಜಾಗಿದ್ದಾರೆ.
03:48 PM (IST) Jul 07
Agnisakshi Serial: 2013 ರಲ್ಲಿ ‘ಅಗ್ನಿಸಾಕ್ಷಿ’ ಧಾರಾವಾಹಿ ಪ್ರಸಾರ ಆಗಿತ್ತು. ಇದು ಕನ್ನಡದ ಸೂಪರ್ ಹಿಟ್ ಧಾರಾವಾಹಿಗಳಲ್ಲಿ ಒಂದಾಗಿತ್ತು. ಸಿದ್ದಾರ್ಥ್, ಸನ್ನಿಧಿ, ಮಾಯಾ, ಚಂದ್ರಿಕಾ ಪಾತ್ರಗಳು ವೀಕ್ಷಕರಿಗೆ ಇಷ್ಟ ಆಗಿತ್ತು. ಈಗ ಚಂದ್ರಿಕಾ ಪಾತ್ರಧಾರಿ ರಾಜೇಶ್ವರಿ, ಇಷಿತಾ ವರ್ಷ ಭೇಟಿ ಆಗಿದ್ದಾರೆ.
03:30 PM (IST) Jul 07
ಕೇಂದ್ರ ಸಚಿವ ವಿ. ಸೋಮಣ್ಣ ಅವರು ಬೆಂಗಳೂರಿನ ಕೆಎಸ್ಆರ್, ಕಂಟೋನ್ಮೆಂಟ್, ಮತ್ತು ಯಶವಂತಪುರ ರೈಲು ನಿಲ್ದಾಣಗಳನ್ನು ಸಾವಿರಾರು ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸುವ ಯೋಜನೆಗಳನ್ನು ಘೋಷಿಸಿದ್ದಾರೆ. ಇದರೊಂದಿಗೆ, ಮಲ್ಲೇಶ್ವರದಲ್ಲಿ ನೂತನ ಪಾದಚಾರಿ ಸುರಂಗ ಮಾರ್ಗಕ್ಕೂ ಶಂಕುಸ್ಥಾಪನೆ ನೆರವೇರಿಸಲಾಗಿದೆ.
03:05 PM (IST) Jul 07
01:48 PM (IST) Jul 07
Parents TIps: ಪೋಷಕರೇ, ಸೋಷಿಯಲ್ ಮೀಡಿಯಾಗಳಲ್ಲಿ ಫಾಲೋವರ್ಸ್ ಮೆಚ್ಚಿಸಲೋ, ಲೈಕ್ಸ್, ಕಾಮೆಂಟ್ಸ್ಗಾಗಿಯೋ ಮಕ್ಕಳ ಫೋಟೋ ವಿಡಿಯೋಗಳನ್ನ ಸೋಷಿಯಲ್ ಮೀಡಿಯಾಗಳಲ್ಲಿ ಶೇರ್ ಮಾಡಿಕೊಂಡ ಅಪಾಯ ಮೈಮೇಲೆ ಎಳೆದುಕೊಳ್ಳುತ್ತಿದ್ದೀರಿ, ಮಕ್ಕಳ ರಕ್ಷಣೆಗಾಗಿ NCE ಮತ್ತು ICW ಪೋಷಕರಿಗೆ ಎಚ್ಚರಿಕೆ ನೀಡಿದ್ದೇನು?
01:29 PM (IST) Jul 07
ರಾಜ್ಯದ ರೈತರಿಗೆ ಸರ್ಕಾರದಿಂದ ಗುಡ್ ನ್ಯೂಸ್ ಸಿಗುವ ನಿರೀಕ್ಷೆ ಹೆಚ್ಚಾಗಿದೆ. ಕಲಬುರಗಿಯಲ್ಲಿ ರೈತರ ಸಾಲ ಮನ್ನಾ ಮಾಡುವ ಕುರಿತು ಸಿಎಂ ಡಿಕೆ ಶಿವಕುಮಾರ್ ಅವರು ಮಾತನ್ನಾಡಿದ್ದಾರೆ. ಈ ಬಗ್ಗೆ ಪರಿಶೀಲನೆ ಮಾಡ್ತೀವಿ ಎಂದಷ್ಟೇ ಹೇಳಿದ್ದರೂ, ಅನ್ನದಾತರಿಗೆ ಸರ್ಕಾರದ ಮೇಲಿನ ನಿರೀಕ್ಷೆ ದುಪ್ಪಟ್ಟಾಗಿದೆ.
12:08 PM (IST) Jul 07
cristiano ronaldo remuneration: ಇಂದು ವಿಶ್ವದ ಅತ್ಯಂತ ಜನಪ್ರಿಯ ಆಟಗಳಲ್ಲಿ ಕ್ರಿಕೆಟ್, ಫುಟ್ಬಾಲ್ ಅಗ್ರಗಣ್ಯ ಸ್ಥಾನದಲ್ಲಿವೆ. ಭಾರತ ಸೇರಿದಂತೆ ಹಲವು ದೇಶಗಳಲ್ಲಿ ಕ್ರಿಕೆಟ್ ಆಟಗಾರರನ್ನು ದೇವರೆಂದು ಆರಾಧನೆ ಮಾಡುತ್ತಾರೆ. ಅಷ್ಟೇ ಅಲ್ಲದೆ ಹೆಚ್ಚು ಸಂಭಾವನೆ ಕೊಡುತ್ತಾರೆ.
11:51 AM (IST) Jul 07
ದೆವ್ವ, ಭೂತ, ಪ್ರೇತಗಳ ಕಾಟ ಅನ್ನೋದೆಲ್ಲ ಮೂಢನಂಬಿಕೆ ಅನ್ನೋದು ಹಲವರ ವಾದ. ಆದರೆ ಇಲ್ಲೊಂದು ದೇಗುಲ ಇದೆ. ಅದು ದೆವ್ವಗಳ ಬಿಡಿಸೋದಕ್ಕೇ ಫೇಮಸ್. ಭಾರತದಲ್ಲಿರುವ ಪ್ರಸಿದ್ಧ ದೇಗುಲದ ವಿಶೇಷತೆ ಈ ಸ್ಟೋರಿಯಲ್ಲಿದೆ..
11:32 AM (IST) Jul 07
11:12 AM (IST) Jul 07
ಶಾಲೆಯ ಕೊಠಡಿಯನ್ನೇ ಗೋಡಾನ್ ರೀತಿ ಬಳಸಿಕೊಂಡು ಅದರಲ್ಲಿ ಮದ್ಯದ ಬಾಟಲಿಗಳ ರಾಶಿ ರಾಶಿ ಚೀಲಗಳನ್ನ ತುಂಬಿದ ಘಟನೆ ಚಿಕ್ಕಮಗಳೂರು ತಾಲೂಕಿನ ಹುಯಿಗೇರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದಿದ್ದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
11:07 AM (IST) Jul 07
11:05 AM (IST) Jul 07
ನಟ-ನಿರ್ದೇಶಕ ರಿಷಬ್ ಶೆಟ್ಟಿಯವರ ತಮ್ಮ ಹುಟ್ಟುಹಬ್ಬವನ್ನು ನಿನ್ನೆ ರಾತ್ರಿ ಅದ್ದೂರಿಯಾಗಿ ಆಚರಿಸಿಕೊಂಡಿದ್ದಾರೆ. ನಿನ್ನೆ ಬೆಂಗಳೂರಿನ 'ಕಿಂಗ್ಸ್ ಕ್ಲಬ್'ನಲ್ಲಿ ತಮ್ಮ ಕುಟುಂಬ, ಮಾಧ್ಯಮ ಮಿತ್ರರು, ಆಪ್ತ ಸ್ನೇಹಿತಬಳಗದೊಂದಿಗೆ ಕೇಕ್ ಕಟ್ ಮಾಡಿ ತಮ್ಮ ಹುಟ್ಟುಹಬ್ಬದ ಸಂಭ್ರಮವನ್ನು ಹಂಚಿಕೊಂಡಿದ್ದಾರೆ.
10:37 AM (IST) Jul 07
ರಾಜ್ಯದಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಜಲಾಶಯಗಳಿಗೆ ಜಲಾಭಿಷೇಕ ಆಗಿದೆ. ಹೊಸ ಜೀವಕಳೆಯೊಂದಿಗೆ ಮೈದುಂಬಿ ನಿಂತಿವೆ. ಕೆಆರ್ಎಸ್, ತುಂಗಭದ್ರಾ ಜಲಾಶಯದ ನೀರಿನ ಮಟ್ಟದ ಇಂದಿನ ಸ್ಥಿತಿ ಹೇಗಿದೆ ಅನ್ನೋದ್ರ ವಿವರ ಇಲ್ಲಿದೆ.
10:17 AM (IST) Jul 07
ಬಂಟ್ವಾಳದ ಮಾಣಿ ಪೆರಾಜೆಯ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯು ರಾಜ್ಯದಲ್ಲೇ ಮೊದಲ ಬಾರಿಗೆ ಆರ್ಎಫ್ಐಡಿ ಆಧಾರಿತ ಡಿಜಿಟಲ್ ವಿದ್ಯಾರ್ಥಿ ಸುರಕ್ಷತಾ ವ್ಯವಸ್ಥೆಯನ್ನು ಜಾರಿಗೆ ತಂದಿದೆ. ಈ ವ್ಯವಸ್ಥೆಯಡಿ, ವಿದ್ಯಾರ್ಥಿಗಳು ಶಾಲೆಗೆ ಪ್ರವೇಶಿಸುವಾಗ ಮತ್ತು ನಿರ್ಗಮಿಸುವಾಗ ಪೋಷಕರಿಗೆ ಎಸ್ಎಂಎಸ್ ರವಾನೆಯಾಗುತ್ತೆ
10:10 AM (IST) Jul 07
09:46 AM (IST) Jul 07
ಯುಕೆಜಿ ವಿದ್ಯಾರ್ಥಿನಿಗೆ ಕೋಲಿನಿಂದ ಹೊಡೆದ ಆರೋಪ ಎದುರಿಸುತ್ತಿರುವ ಶಿಕ್ಷಕಿ ವಿರುದ್ಧದ ವಿಚಾರಣೆಗೆ ತಡೆಯಾಜ್ಞೆ ನೀಡಲು ಹೈಕೋರ್ಟ್ ನಿರಾಕರಿಸಿದೆ. ಮಕ್ಕಳಿಗೆ ಹೊಡೆದು ಪಾಠ ಕಲಿಸುವುದನ್ನು ನ್ಯಾಯಾಲಯ ಸಹಿಸುವುದಿಲ್ಲ ಎಂದು ನ್ಯಾಯಪೀಠ ಕಟುವಾಗಿ ಹೇಳಿದ್ದು, ಶಿಕ್ಷಕಿ ವಿರುದ್ಧ ಮುಂದುವರಿದ ವಿಚಾರಣೆ.
09:20 AM (IST) Jul 07
ಬೆಂಗಳೂರಿನಲ್ಲಿ ಕ್ಷುಲ್ಲಕ ಕಾರಣಕ್ಕೆ ರಕ್ತಪಾತ ನಡೆದಿದೆ. ಬಾರ್ನಲ್ಲಿ ಕೂತು ಗುರಾಯಿಸಿದ ಎಂಬ ಕಾರಣಕ್ಕೆ ವ್ಯಕ್ತಿಗೆ ಬೀರ್ ಬಾಟಲ್ನಿಂದ ಚುಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಈ ಕುರಿತ ಕಂಪ್ಲೀಟ್ ಮಾಹಿತಿ ಇಲ್ಲಿದೆ.