ಬೆಂಗಳೂರು: ರಾಜ್ಯದ ಹಲವೆಡೆ ಮುಂಗಾರು ಮಳೆಯ ಕೊರತೆಯಿಂದಾಗಿ ಬರ ಪರಿಸ್ಥಿತಿಯ ಆತಂಕ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಮಂಗಳವಾರ ಕಲಬುರಗಿಯಲ್ಲಿ ವಿಭಾಗ ಮಟ್ಟದ ಸಭೆ ಕರೆದಿದ್ದು, ಬರ ಪರಿಸ್ಥಿತಿ ಕುರಿತು ಸಮಗ್ರ ಚರ್ಚೆ ನಡೆಸುತ್ತೇವೆ. ಅಲ್ಲದೆ, ಎಲ್ಲಾ ಜಿಲ್ಲೆಗಳಿಂದ ವರದಿ ತರಿಸಿಕೊಂಡು, ಪರಿಶೀಲನೆ ನಡೆಸಿದ ಬಳಿಕ ‘ಬರಗಾಲ ಘೋಷಣೆ’ ಮಾಡುವ ಸಂಬಂಧ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಬರ ಘೋಷಣೆ ಕುರಿತ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿ, ರಾಜ್ಯದಲ್ಲಿ ಮಳೆ ಕೊರತೆಯ ಆತಂಕ ಎದುರಾಗಿದ್ದರೂ ಬರ ಘೋಷಣೆ ಮಾಡುವ ಬಗ್ಗೆ ಸರ್ಕಾರ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಒಂದೇ ದಿನದಲ್ಲಿ ಬರ ಘೋಷಣೆ ಮಾಡಲು ಸಾಧ್ಯವಿಲ್ಲ. ಕೇಂದ್ರ ಸರ್ಕಾರ ಮತ್ತು ರಾಜ್ಯದ ಮಾರ್ಗಸೂಚಿಗಳ ಪ್ರಕಾರ ಸಮೀಕ್ಷೆ ನಡೆಸಿ, ಬೆಳೆ ಹಾನಿ ಹಾಗೂ ನೀರಿನ ಕೊರತೆಯ ವರದಿ ಆಧರಿಸಿ ಬರ ಘೋಷಣೆ ಮಾಡಬೇಕಾಗುತ್ತದೆ. ಅದಕ್ಕೆ ಕಾಲಾವಕಾಶ ಬೇಕು. ಉತ್ತರ ಕರ್ನಾಟಕ ಭಾಗದ ಬರ ಕುರಿತಂತೆ ಕಲಬುರಗಿಯಲ್ಲಿ ಮಂಗಳವಾರ ನಡೆಯುವ ಅಧಿಕಾರಿಗಳ ಸಭೆಯಲ್ಲಿ ಮಾಹಿತಿ ಪಡೆಯುತ್ತೇನೆ ಎಂದು ಅವರು ಸ್ಪಷ್ಟಪಡಿಸಿದರು.
10:17 AM (IST) Jul 07
ಬಂಟ್ವಾಳದ ಮಾಣಿ ಪೆರಾಜೆಯ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯು ರಾಜ್ಯದಲ್ಲೇ ಮೊದಲ ಬಾರಿಗೆ ಆರ್ಎಫ್ಐಡಿ ಆಧಾರಿತ ಡಿಜಿಟಲ್ ವಿದ್ಯಾರ್ಥಿ ಸುರಕ್ಷತಾ ವ್ಯವಸ್ಥೆಯನ್ನು ಜಾರಿಗೆ ತಂದಿದೆ. ಈ ವ್ಯವಸ್ಥೆಯಡಿ, ವಿದ್ಯಾರ್ಥಿಗಳು ಶಾಲೆಗೆ ಪ್ರವೇಶಿಸುವಾಗ ಮತ್ತು ನಿರ್ಗಮಿಸುವಾಗ ಪೋಷಕರಿಗೆ ಎಸ್ಎಂಎಸ್ ರವಾನೆಯಾಗುತ್ತೆ
10:10 AM (IST) Jul 07
09:46 AM (IST) Jul 07
ಯುಕೆಜಿ ವಿದ್ಯಾರ್ಥಿನಿಗೆ ಕೋಲಿನಿಂದ ಹೊಡೆದ ಆರೋಪ ಎದುರಿಸುತ್ತಿರುವ ಶಿಕ್ಷಕಿ ವಿರುದ್ಧದ ವಿಚಾರಣೆಗೆ ತಡೆಯಾಜ್ಞೆ ನೀಡಲು ಹೈಕೋರ್ಟ್ ನಿರಾಕರಿಸಿದೆ. ಮಕ್ಕಳಿಗೆ ಹೊಡೆದು ಪಾಠ ಕಲಿಸುವುದನ್ನು ನ್ಯಾಯಾಲಯ ಸಹಿಸುವುದಿಲ್ಲ ಎಂದು ನ್ಯಾಯಪೀಠ ಕಟುವಾಗಿ ಹೇಳಿದ್ದು, ಶಿಕ್ಷಕಿ ವಿರುದ್ಧ ಮುಂದುವರಿದ ವಿಚಾರಣೆ.
09:20 AM (IST) Jul 07
ಬೆಂಗಳೂರಿನಲ್ಲಿ ಕ್ಷುಲ್ಲಕ ಕಾರಣಕ್ಕೆ ರಕ್ತಪಾತ ನಡೆದಿದೆ. ಬಾರ್ನಲ್ಲಿ ಕೂತು ಗುರಾಯಿಸಿದ ಎಂಬ ಕಾರಣಕ್ಕೆ ವ್ಯಕ್ತಿಗೆ ಬೀರ್ ಬಾಟಲ್ನಿಂದ ಚುಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಈ ಕುರಿತ ಕಂಪ್ಲೀಟ್ ಮಾಹಿತಿ ಇಲ್ಲಿದೆ.
09:19 AM (IST) Jul 07
ಮೈಸೂರಿನಲ್ಲಿ ಶರಣು ವಿಶ್ವವಚನ ಫೌಂಡೇಶನ್ ಹಮ್ಮಿಕೊಂಡಿದ್ದ 'ಶಾಲೆಗಳೆಡೆಗೆ ವಚನಗಳ ನಡಿಗೆ' ಕಾರ್ಯಕ್ರಮದಲ್ಲಿ ಮಾತನಾಡಿದ ನಿವೃತ್ತ ನ್ಯಾಯಮೂರ್ತಿ ಅರಳಿ ನಾಗರಾಜ, ಗಳಿಸಿದ ಜ್ಞಾನವನ್ನು ದೇಶಸೇವೆಗೆ ಬಳಸದಿದ್ದರೆ ಅವನೇ ದೇಶದ್ರೋಹಿ ಎಂದರು.
09:12 AM (IST) Jul 07
ಬೆಂಗಳೂರಿನ ಮಲ್ಲೇಶ್ವರಂನ ಸ್ಯಾಂಕಿ ಕೆರೆಗೆ ಹಾರಿ 20 ವರ್ಷದ ವಿದ್ಯಾರ್ಥಿನಿ ತೇಜು ಆತ್ಮ*ತ್ಯೆ ಮಾಡಿಕೊಂಡಿದ್ದಾಳೆ. ಸಾವಿಗೂ ಮುನ್ನ ತನ್ನ ಪ್ರಿಯಕರನಿಗೆ 'ಸಾಯುತ್ತಿದ್ದೇನೆ' ಎಂದು ಸಂದೇಶ ಕಳುಹಿಸಿದ್ದು, ಪ್ರೇಮ ವೈಫಲ್ಯ ಹಾಗೂ ಕೌಟುಂಬಿಕ ಸಮಸ್ಯೆಗಳು ಸಾವಿಗೆ ಕಾರಣವೆಂದು ಶಂಕಿಸಲಾಗಿದೆ. ಸದಾಶಿವನಗರ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.
09:00 AM (IST) Jul 07
08:54 AM (IST) Jul 07
08:50 AM (IST) Jul 07
ಮಹಿಳೆಯೊಬ್ಬರ ಮುಖಕ್ಕೆ ನಾಯಿ ಕಚ್ಚಿದ ಪ್ರಕರಣದಲ್ಲಿ ನಾಯಿ ಮಾಲೀಕರ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ. ನಾಯಿಯನ್ನು ಕಟ್ಟಿಹಾಕದೆ ಬಿಟ್ಟು, ಅದರಿಂದ ಬೇರೆಯವರ ಮೇಲೆ ದಾಳಿಯಾದರೆ, ಘಟನೆಗೆ ನಾಯಿ ಸಾಕುವವರೇ ಹೊಣೆ’ ಎಂದು ಕಟುವಾಗಿ ನುಡಿದಿದೆ.
08:26 AM (IST) Jul 07
'ಭಾರತದ ತೂಗು ಸೇತುವೆ ಮನುಷ್ಯ' ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ ಅವರು ನಿಧನರಾಗಿದ್ದಾರೆ. ಅವರು ದೇಶಾದ್ಯಂತ 160ಕ್ಕೂ ಹೆಚ್ಚು ಕಡಿಮೆ ವೆಚ್ಚದ ತೂಗು ಸೇತುವೆಗಳನ್ನು ನಿರ್ಮಿಸಿ, ಗ್ರಾಮೀಣ ಭಾರತದ ಸಂಪರ್ಕ ಕ್ರಾಂತಿಗೆ ಕಾರಣರಾಗಿದ್ದರು. ಅವರ ನಿಸ್ವಾರ್ಥ ಸೇವೆ ಮತ್ತು ತಾಂತ್ರಿಕ ಕೊಡುಗೆಯಿಂದಾಗಿ ನೂರಾರು ಹಳ್ಳಿಗಳು ಮುಖ್ಯವಾಹಿನಿಗೆ ಬಂದವು.
08:10 AM (IST) Jul 07
ಗದಗ ಜಿಲ್ಲೆಯ ಡಾ.ರಾಚೋಟೇಶ್ವರ ಸ್ವಾಮೀಜಿ ಅವರು 33 ದಿನಗಳ ಶಿವಯೋಗ ಸಮಾಧಿ ಅನುಷ್ಠಾನವನ್ನು ಪೂರ್ಣಗೊಳಿಸಿದ್ದಾರೆ. ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶ್ರೀಗಳಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರ ತಂಡ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ.
07:55 AM (IST) Jul 07
07:45 AM (IST) Jul 07
07:34 AM (IST) Jul 07
ಬಾಗಲಕೋಟೆಯ ರೈಲ್ವೆ ಹೋರಾಟ ಸಮಿತಿಯು ಲೋಕಾಪುರದವರೆಗೆ ಪ್ಯಾಸೆಂಜರ್ ರೈಲು ಸೇವೆ ಆರಂಭಿಸಲು ಸಂಸದ ಗದ್ದಿಗೌಡರ ಅವರನ್ನು ಒತ್ತಾಯಿಸಿದೆ. ಬಳಕೆಯಾಗದ ನಿಲ್ದಾಣಗಳು ಹಾಳಾಗುತ್ತಿದ್ದು, ಶೀಘ್ರ ರೈಲು ಆರಂಭಿಸದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದೆ.
07:25 AM (IST) Jul 07
‘ಬಿಎಲ್ಒಗಳು ಕೊಳಗೇರಿ ಪ್ರದೇಶಗಳಿಗೆ ಭೇಟಿ ನೀಡಿ ಗಣತಿ ನಮೂನೆ ಭರ್ತಿ ಮಾಡಲು ನಿರಾಕರಿಸುತ್ತಿದ್ದಾರೆ. ಹೀಗಾಗಿ, ನಮ್ಮವರು ಕಾನೂನು ಬದ್ಧವಾಗಿ ಅಂಥವ ನಮೂನೆ ಸಮುದಾಯ ಭವನ, ದೇವಸ್ಥಾನ ಮತ್ತು ಮಸೀದಿಗಳಲ್ಲಿ ಕುಳಿತು ಭರ್ತಿ ಮಾಡಿಕೊಡುವ ಕೆಲಸ ಮಾಡುತ್ತಿದ್ದಾರೆ -ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್
07:19 AM (IST) Jul 07
ಚಾರ್ವಿಕ್, ಇತ್ತೀಚೆಗೆ ತನ್ನ ದೇಹವನ್ನೇ ತೋರಿಸಿಕೊಂಡು ದೇಹದಲ್ಲಿರುವ ಮೂಳೆಯ ಹೆಸರು ಮತ್ತು ಅಲ್ಲಿರುವ ಮೂಳೆಗಳ ಸಂಖ್ಯೆಯನ್ನು ಕೇವಲ 46 ಸೆಕೆಂಡ್ನಲ್ಲಿ ಹೇಳುವ ಮೂಲಕ ಈ ಸಾಧನೆ ಮಾಡಿದ್ದಾನೆ.