ಮಂಡ್ಯ: ಕಾವೇರಿ ನದಿಗೆ ಅಡ್ಡಲಾಗಿ ಕಟ್ಟಿರುವ ಕೃಷ್ಣರಾಜಸಾಗರ ಜಲಾಶಯದ ನೀರಿನ ಮಟ್ಟ 81 ಅಡಿಗೆ ಕುಸಿದಿದೆ. 3 ವರ್ಷಗಳ ಹಿಂದೆ ಜೂನ್ನಲ್ಲಿ ಅಣೆಕಟ್ಟೆಯೊಳಗೆ ಈ ಪ್ರಮಾಣದ ನೀರಿನ ಮಟ್ಟ ದಾಖಲಾಗಿತ್ತು. ಕಳೆದ ವರ್ಷ ಇದೇ ದಿನ ಜಲಾಶಯದಲ್ಲಿ 107.68 ಅಡಿ ನೀರು ಸಂಗ್ರಹವಾಗಿತ್ತು. ಆ ವೇಳೆ ಮುಂಗಾರು ಪೂರ್ವ ಮಳೆ ವಾಡಿಕೆಗಿಂತ ಹೆಚ್ಚಾಗಿ ಸುರಿದಿತ್ತು. ಜೊತೆಗೆ ಮುಂಗಾರು ಮಳೆಯೂ ನಿರೀಕ್ಷೆಯಂತೆ ಆಗಮನವಾಗಿದ್ದರಿಂದ ಅಂದು ಜಲಾಶಯಕ್ಕೆ ೬೫೧೩ ಕ್ಯುಸೆಕ್ ನೀರು ಹರಿದುಬರುತ್ತಿತ್ತು. ಅಂದು ಜಲಾಶಯದಲ್ಲಿ 29.543 ಟಿಎಂಸಿ ಅಡಿ ನೀರು ಸಂಗ್ರಹವಾಗಿತ್ತು.
ಪ್ರಸ್ತುತ ಜಲಾಶಯದಲ್ಲಿ 81.36 ಅಡಿ ನೀರಿದ್ದು, ಅಣೆಕಟ್ಟೆಗೆ 528 ಕ್ಯುಸೆಕ್ ನೀರು ಹರಿದುಬರುತ್ತಿದೆ. ಜಲಾಶಯದಿಂದ ನದಿ ಮತ್ತು ನಾಲೆ ಸೇರಿ 852 ಕ್ಯುಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ಅಣೆಕಟ್ಟೆಯಲ್ಲಿ 11.399 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ. ಈ ಬಾರಿ ಮುಂಗಾರು ಪೂರ್ವ ಮಳೆ ಕೈಕೊಟ್ಟ ಪರಿಣಾಮ ಜಲಾಶಯದಿಂದ ಬೇಸಿಗೆ ಬೆಳೆಗಳಿಗೆ ನೀರು ಹರಿಸಲಾಯಿತು.
ಹಲವು ಕೆರೆ-ಕಟ್ಟೆಗಳಿಗೆ ನೀರು ತುಂಬಿಸಲಾಯಿತು. ಇದರಿಂದ ಅಣೆಕಟ್ಟೆಯಲ್ಲಿ ನೀರನ್ನು ಕಾಯ್ದಿರಿಸಲು ಸಾಧ್ಯವಾಗಲಿಲ್ಲ. ಮಳೆ ಬಾರದಿದ್ದರೆ ಕುಡಿಯುವ ನೀರಿಗೂ ತತ್ವಾರ ಎದುರಾಗುವ ಆತಂಕ ಸೃಷ್ಟಿಯಾಗಿದೆ. ಜಲಾಶಯದಲ್ಲಿ ನೀರು ಕಡಿಮೆ ಆಗುತ್ತಿರುವುದರಿಂದ ನೀರೊಳಗೆ ಮುಳುಗಿದ್ದ ದೇಗುಲಗಳು ಗೋಚರಿಸಲಾರಂಭಿಸಿವೆ.
08:43 AM (IST) Jun 07
08:16 AM (IST) Jun 07
ಕಲಬುರಗಿ ಜಿಲ್ಲೆಯ ಚಿಂಚೊಳ್ಳಿಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಚಿಮ್ಮನಚೋಡ - ನರನಾಳ್ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಸೇತುವೆ ಕುಸಿತವಾಗಿದೆ. ಸೇತುವೆ ಕುಸಿತಕ್ಕೆ ಕಳಪೆ ಕಾಮಗಾರಿ ಎಂದು ಸ್ಥಳೀಯರು ಆರೋಪಿಸಿದ್ದಾರೆ.
08:07 AM (IST) Jun 07
07:47 AM (IST) Jun 07
07:29 AM (IST) Jun 07
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಯುಜಿಸಿಇಟಿ-26 ಫಲಿತಾಂಶವನ್ನು ಪ್ರಕಟಿಸಿದೆ. ಎಂಜಿನಿಯರಿಂಗ್, ಕೃಷಿ ವಿಜ್ಞಾನ ಸೇರಿದಂತೆ ಎಲ್ಲಾ ಏಳು ವಿಭಾಗಗಳಲ್ಲೂ ಬೆಂಗಳೂರಿನ ಮೂವರು ವಿದ್ಯಾರ್ಥಿಗಳು ಪ್ರಥಮ ರ್ಯಾಂಕ್ ಪಡೆದಿದ್ದು, 2.92 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಕೌನ್ಸೆಲಿಂಗ್ಗೆ ಅರ್ಹತೆ ಪಡೆದಿದ್ದಾರೆ.
07:20 AM (IST) Jun 07
07:10 AM (IST) Jun 07
ಸಿಇಟಿ ಫಲಿತಾಂಶದಲ್ಲಿ ಸರ್ಕಾರಿ ಪಿಯು ಕಾಲೇಜು ಮತ್ತು ಕನ್ನಡ ಮಾಧ್ಯಮದ ವಿದ್ಯಾರ್ಥಿಗಳ ಸಾಧನೆ ಅತ್ಯಂತ ಕಳಪೆಯಾಗಿದೆ. ಎಂಜಿನಿಯರಿಂಗ್ ವಿಭಾಗದ ಟಾಪ್ 1000 ರ್ಯಾಂಕ್ಗಳಲ್ಲಿ ಸರ್ಕಾರಿ ಕಾಲೇಜುಗಳಿಂದ ಕೇವಲ 12 ಮತ್ತು ಕನ್ನಡ ಮಾಧ್ಯಮದಿಂದ ಕೇವಲ 9 ವಿದ್ಯಾರ್ಥಿಗಳು ಸ್ಥಾನ ಪಡೆದಿದ್ದಾರೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಸಾಧನೆಯೂ ತೃಪ್ತಿಕರವಾಗಿಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಂಕಿ-ಅಂಶಗಳು ತಿಳಿಸಿವೆ.
07:01 AM (IST) Jun 07
06:51 AM (IST) Jun 07
06:15 AM (IST) Jun 07
ಹೊಸಪೇಟೆ ತಾಲೂಕಿನ ಗುಂಡ್ಲವದ್ದಿಗೇರಿ ಗ್ರಾಮದಲ್ಲಿ ಹೊಯ್ಸಳರ ಕಾಲದ ಅಪ್ರಕಟಿತ ದಾನ ಶಾಸನವೊಂದು ಪತ್ತೆಯಾಗಿದೆ. ಈ ಶಾಸನವು ಹೊಯ್ಸಳ ನರಸಿಂಹ ಚಕ್ರವರ್ತಿಯ ಕಾಲದಲ್ಲಿ ಸ್ಥಳೀಯ ಆಡಳಿತಗಾರ ಕಾಸಿಗೌಡನು ಕೆರೆ ನಿರ್ಮಿಸಿ, ಬಡಗಿಯೊಬ್ಬನಿಗೆ ಭೂಮಿಯನ್ನು ದಾನ ನೀಡಿದ ವಿವರಗಳನ್ನು ಒಳಗೊಂಡಿದೆ. ಇದು ಜಿಲ್ಲೆಯಲ್ಲಿ ಹೊಯ್ಸಳರ ಆಳ್ವಿಕೆಯ ಕುರುಹುಗಳನ್ನು ದೃಢಪಡಿಸುತ್ತದೆ.
05:59 AM (IST) Jun 07
05:49 AM (IST) Jun 07
ಹೊರ ರಾಜ್ಯದ ಉದ್ಯಮಿಗಳು ಹಣದ ಆಮಿಷವೊಡ್ಡಿ ರೈತರಿಂದ ಭೂಮಿಯನ್ನು ಗುತ್ತಿಗೆ ಪಡೆದು ಶುಂಠಿ ಬೆಳೆಯುತ್ತಿದ್ದಾರೆ. ಈ ವಾಣಿಜ್ಯ ಬೆಳೆಯು ಮಣ್ಣಿನ ಫಲವತ್ತತೆಯನ್ನು ತೀವ್ರವಾಗಿ ಕಡಿಮೆ ಮಾಡುವುದಲ್ಲದೆ, ಅತಿಯಾದ ಕೀಟನಾಶಕ ಬಳಕೆಯಿಂದ ದೀರ್ಘಕಾಲಿಕ ಹಾನಿಯನ್ನುಂಟುಮಾಡುತ್ತಿದೆ.
05:40 AM (IST) Jun 07
ರಸ್ತೆ ಅಗಲೀಕರಣದಿಂದ ಬಸ್ ಸಂಚಾರ ಮಾರ್ಗ ಬದಲಾಗಿದ್ದು ಮತ್ತು ಲೋಕಲ್ ಬಸ್ ಸೇವೆ ಆರಂಭವಾಗಿರುವುದರಿಂದ ತಮ್ಮ ಜೀವನೋಪಾಯಕ್ಕೆ ತೊಂದರೆಯಾಗಿದೆ ಎಂದು ಆಟೋ ಚಾಲಕರು ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ, ಲೋಕಲ್ ಬಸ್ ಸಂಚಾರವನ್ನು ರದ್ದುಗೊಳಿಸಿ, ಎಲ್ಲಾ ಬಸ್ಗಳನ್ನು ಬಸ್ ನಿಲ್ದಾಣದ ಮೂಲಕವೇ ಓಡಾಟ ನಡೆಸುವಂತೆ ವ್ಯವಸ್ಥೆ ಕಲ್ಪಿಸಬೇಕೆಂದು ಶಾಸಕರಿಗೆ ಮನವಿ ಸಲ್ಲಿಸಿದ್ದಾರೆ.
05:32 AM (IST) Jun 07
ಫೋಟೋಗ್ರಾಫರ್ಸ್ ಅಸೋಸಿಯೇಷನ್ ಇನ್ನು ಮುಂದೆ ಮದುವೆ ದಿಬ್ಬಣದ (ಬಾರಾತ್) ಚಿತ್ರೀಕರಣ ಮಾಡದಿರಲು ನಿರ್ಧರಿಸಿದೆ. ತಡರಾತ್ರಿ, ಭದ್ರತಾ ಸಮಸ್ಯೆಗಳು ಮತ್ತು ಅನುಚಿತ ವರ್ತನೆಯ ಕಾರಣಗಳಿಂದ ಈ ತೀರ್ಮಾನ ಕೈಗೊಂಡಿದ್ದು, ಕೇವಲ ಮದುವೆ ಹಾಲ್ನಲ್ಲಿ ಮಾತ್ರ ಚಿತ್ರೀಕರಣ ನಡೆಸುವುದಾಗಿ ಸ್ಪಷ್ಟಪಡಿಸಿದೆ.
05:22 AM (IST) Jun 07
05:12 AM (IST) Jun 07
05:03 AM (IST) Jun 07
ಪ್ರಧಾನಿ ಮೋದಿ ಅವರ ಬೆಂಗಳೂರು ಭೇಟಿ ವೇಳೆ ಬಾಂಬ್ ಬೆದರಿಕೆ ಕರೆ ಮಾಡಿದ್ದ ಆರೋಪಿ ಲೋಹಿತ್ನನ್ನು ಬಂಧಿಸಲಾಗಿತ್ತು. ಮೋದಿ ಸಾಗುವ ಮಾರ್ಗದಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿದ್ದು, ಈ ಪ್ರಕರಣಕ್ಕೂ ತನಗೂ ಸಂಬಂಧವಿಲ್ಲ ಎಂದು ಆರೋಪಿ ಹೇಳಿದ್ದಾನೆ.