LIVE NOW
Published : Jun 07, 2026, 04:44 AM ISTUpdated : Jun 07, 2026, 08:43 AM IST

Karnataka News Live: ಶಿವಮೊಗ್ಗ ನಿಧಿ ರಹಸ್ಯ - ಅರ್ಧ ಕೆಜಿ ಚಿನ್ನದ ನಾಣ್ಯ ಆಸೆ ತೋರಿಸಿ ₹9.60 ಲಕ್ಷ ದೋಚಿದ ಖದೀಮರು..! ಸಿನಿಮೀಯ ರೀತಿಯಲ್ಲಿ ಕೃತ್ಯ

ಸಾರಾಂಶ

ಮಂಡ್ಯ: ಕಾವೇರಿ ನದಿಗೆ ಅಡ್ಡಲಾಗಿ ಕಟ್ಟಿರುವ ಕೃಷ್ಣರಾಜಸಾಗರ ಜಲಾಶಯದ ನೀರಿನ ಮಟ್ಟ 81 ಅಡಿಗೆ ಕುಸಿದಿದೆ. 3 ವರ್ಷಗಳ ಹಿಂದೆ ಜೂನ್‌ನಲ್ಲಿ ಅಣೆಕಟ್ಟೆಯೊಳಗೆ ಈ ಪ್ರಮಾಣದ ನೀರಿನ ಮಟ್ಟ ದಾಖಲಾಗಿತ್ತು. ಕಳೆದ ವರ್ಷ ಇದೇ ದಿನ ಜಲಾಶಯದಲ್ಲಿ 107.68 ಅಡಿ ನೀರು ಸಂಗ್ರಹವಾಗಿತ್ತು. ಆ ವೇಳೆ ಮುಂಗಾರು ಪೂರ್ವ ಮಳೆ ವಾಡಿಕೆಗಿಂತ ಹೆಚ್ಚಾಗಿ ಸುರಿದಿತ್ತು. ಜೊತೆಗೆ ಮುಂಗಾರು ಮಳೆಯೂ ನಿರೀಕ್ಷೆಯಂತೆ ಆಗಮನವಾಗಿದ್ದರಿಂದ ಅಂದು ಜಲಾಶಯಕ್ಕೆ ೬೫೧೩ ಕ್ಯುಸೆಕ್ ನೀರು ಹರಿದುಬರುತ್ತಿತ್ತು. ಅಂದು ಜಲಾಶಯದಲ್ಲಿ 29.543 ಟಿಎಂಸಿ ಅಡಿ ನೀರು ಸಂಗ್ರಹವಾಗಿತ್ತು.

ಪ್ರಸ್ತುತ ಜಲಾಶಯದಲ್ಲಿ 81.36 ಅಡಿ ನೀರಿದ್ದು, ಅಣೆಕಟ್ಟೆಗೆ 528 ಕ್ಯುಸೆಕ್ ನೀರು ಹರಿದುಬರುತ್ತಿದೆ. ಜಲಾಶಯದಿಂದ ನದಿ ಮತ್ತು ನಾಲೆ ಸೇರಿ 852 ಕ್ಯುಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ಅಣೆಕಟ್ಟೆಯಲ್ಲಿ 11.399 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ. ಈ ಬಾರಿ ಮುಂಗಾರು ಪೂರ್ವ ಮಳೆ ಕೈಕೊಟ್ಟ ಪರಿಣಾಮ ಜಲಾಶಯದಿಂದ ಬೇಸಿಗೆ ಬೆಳೆಗಳಿಗೆ ನೀರು ಹರಿಸಲಾಯಿತು.

ಹಲವು ಕೆರೆ-ಕಟ್ಟೆಗಳಿಗೆ ನೀರು ತುಂಬಿಸಲಾಯಿತು. ಇದರಿಂದ ಅಣೆಕಟ್ಟೆಯಲ್ಲಿ ನೀರನ್ನು ಕಾಯ್ದಿರಿಸಲು ಸಾಧ್ಯವಾಗಲಿಲ್ಲ. ಮಳೆ ಬಾರದಿದ್ದರೆ ಕುಡಿಯುವ ನೀರಿಗೂ ತತ್ವಾರ ಎದುರಾಗುವ ಆತಂಕ ಸೃಷ್ಟಿಯಾಗಿದೆ. ಜಲಾಶಯದಲ್ಲಿ ನೀರು ಕಡಿಮೆ ಆಗುತ್ತಿರುವುದರಿಂದ ನೀರೊಳಗೆ ಮುಳುಗಿದ್ದ ದೇಗುಲಗಳು ಗೋಚರಿಸಲಾರಂಭಿಸಿವೆ.

08:43 AM (IST) Jun 07

ಶಿವಮೊಗ್ಗ ನಿಧಿ ರಹಸ್ಯ - ಅರ್ಧ ಕೆಜಿ ಚಿನ್ನದ ನಾಣ್ಯ ಆಸೆ ತೋರಿಸಿ ₹9.60 ಲಕ್ಷ ದೋಚಿದ ಖದೀಮರು..! ಸಿನಿಮೀಯ ರೀತಿಯಲ್ಲಿ ಕೃತ್ಯ

ನಿಧಿ ರೂಪದಲ್ಲಿ ಸಿಕ್ಕ ಬಂಗಾರದ ನಾಣ್ಯಗಳನ್ನು ಕಡಿಮೆ ಬೆಲೆಗೆ ನೀಡುವುದಾಗಿ ನಂಬಿಸಿದ ವಂಚಕರು, ಮೈಸೂರಿನ ವ್ಯಕ್ತಿಯೊಬ್ಬರಿಂದ 9.60 ಲಕ್ಷ ರೂಪಾಯಿ ದೋಚಿದ್ದಾರೆ. ಪೊಲೀಸರ ಸೋಗಿನಲ್ಲಿ ಬಂದ ಸಹಚರರ ಸಹಾಯದಿಂದ ಈ ಕೃತ್ಯ ಎಸಗಲಾಗಿದ್ದು, ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read Full Story

08:16 AM (IST) Jun 07

kalaburagi - ಚಿಮ್ಮನಚೋಡ - ನರನಾಳ್ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಸೇತುವೆ ಕುಸಿತ

ಕಲಬುರಗಿ ಜಿಲ್ಲೆಯ ಚಿಂಚೊಳ್ಳಿಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಚಿಮ್ಮನಚೋಡ - ನರನಾಳ್ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಸೇತುವೆ ಕುಸಿತವಾಗಿದೆ. ಸೇತುವೆ ಕುಸಿತಕ್ಕೆ ಕಳಪೆ ಕಾಮಗಾರಿ ಎಂದು ಸ್ಥಳೀಯರು ಆರೋಪಿಸಿದ್ದಾರೆ.

Read Full Story

08:07 AM (IST) Jun 07

ಇಂಡಿಗೋ ಬಳಿಕ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಮತ್ತೊಂದು ವಿಮಾನ ಸೇವೆ ರದ್ದು..! ಟಿಕೆಟ್ ಬುಕಿಂಗ್ ಕೂಡ ಸ್ಥಗಿತ

ಇಂಡಿಗೋ ಬೆನ್ನಲ್ಲೇ ಸ್ಪೈಸ್ ಜೆಟ್ ಸಂಸ್ಥೆಯು ಚೆನ್ನೈ ಮತ್ತು ಹೈದರಾಬಾದ್‌ನಿಂದ ಶಿವಮೊಗ್ಗಕ್ಕೆ ನೀಡುತ್ತಿದ್ದ ವಿಮಾನಯಾನ ಸೇವೆಯನ್ನು ರದ್ದುಗೊಳಿಸಿದೆ. ಎರಡು ಪ್ರಮುಖ ಸಂಸ್ಥೆಗಳು ಸೇವೆ ಸ್ಥಗಿತಗೊಳಿಸಿರುವುದರಿಂದ ಪ್ರಯಾಣಿಕರು ಪರದಾಡುವಂತಾಗಿದ್ದು, ಸದ್ಯ ಸ್ಟಾರ್ ಏರ್‌ಲೈನ್ಸ್ ಮಾತ್ರ ಸೇವೆ ಒದಗಿಸುತ್ತಿದೆ.
Read Full Story

07:47 AM (IST) Jun 07

ತೆಕ್ಕಲಕೋಟೆಯಲ್ಲಿ ಅಪರೂಪದ ಹುಲಿ ಬೇಟೆಯ ವೀರಗಲ್ಲು ಪತ್ತೆ; ಪರಾಕ್ರಮದ ವಿಶೇಷ ಕೆತ್ತನೆ

ಬಳ್ಳಾರಿಯ ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆಯಲ್ಲಿ, ಭಾರತ ಶ್ರೀ ಯೋಜನೆಯಡಿ ನಡೆದ ಡಿಜಿಟಲೀಕರಣ ಪ್ರಕ್ರಿಯೆ ವೇಳೆ, ಮೈಸೂರು ಪುರಾತತ್ವ ಇಲಾಖೆಯು ಹುಲಿಬೇಟೆಯ ವೀರಗಲ್ಲೊಂದನ್ನು ಪತ್ತೆಹಚ್ಚಿದೆ. ಈ ಶಾಸನವು ಅನುಮಯರ ಮಗನೊಬ್ಬ ಹುಲಿಬೇಟೆಯಲ್ಲಿ ಮಡಿದ ಸ್ಮರಣಾರ್ಥ ಕೆತ್ತಲಾಗಿದ್ದು, ವೀರನ ಪರಾಕ್ರಮವನ್ನು ಕಲಾತ್ಮಕವಾಗಿ ಚಿತ್ರಿಸಲಾಗಿದೆ.
Read Full Story

07:29 AM (IST) Jun 07

ಐದು ವಿಭಾಗಗಳಲ್ಲಿ ಬೆಂಗಳೂರಿನ ನಯನಾ ಗೋಪಿ ನಂ.1; 7 ವಿಭಾಗಗಳಲ್ಲೂ ಟಾಪ್ 1 ರ್‍ಯಾಂಕ್‌ ಬೆಂಗ್ಳೂರು ಪಾಲು

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಯುಜಿಸಿಇಟಿ-26 ಫಲಿತಾಂಶವನ್ನು ಪ್ರಕಟಿಸಿದೆ. ಎಂಜಿನಿಯರಿಂಗ್, ಕೃಷಿ ವಿಜ್ಞಾನ ಸೇರಿದಂತೆ ಎಲ್ಲಾ ಏಳು ವಿಭಾಗಗಳಲ್ಲೂ ಬೆಂಗಳೂರಿನ ಮೂವರು ವಿದ್ಯಾರ್ಥಿಗಳು ಪ್ರಥಮ ರ್‍ಯಾಂಕ್‌ ಪಡೆದಿದ್ದು, 2.92 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಕೌನ್ಸೆಲಿಂಗ್‌ಗೆ ಅರ್ಹತೆ ಪಡೆದಿದ್ದಾರೆ.

Read Full Story

07:20 AM (IST) Jun 07

Bengaluru - 10 ವರ್ಷಗಳ ಹೋರಾಟದ ಬಳಿಕ ₹40 ಕೋಟಿ ಮೌಲ್ಯದ ಜಮೀನು ವಶಕ್ಕೆ ಪಡೆದ ಪಾಲಿಕೆ

ವೈಟ್‌ಫೀಲ್ಡ್‌ನ ಹೋಪ್‌ಫಾರ್ಮ್ ಅಂಡರ್‌ಪಾಸ್ ನಿರ್ಮಾಣಕ್ಕೆ ಅಡ್ಡಿಯಾಗಿದ್ದ ₹40 ಕೋಟಿ ಮೌಲ್ಯದ ಸರ್ಕಾರಿ ಜಮೀನನ್ನು 10 ವರ್ಷಗಳ ಹೋರಾಟದ ನಂತರ ನಗರ ಪಾಲಿಕೆ ವಶಕ್ಕೆ ಪಡೆದಿದೆ. ಈ ಒತ್ತುವರಿ ತೆರವಿನಿಂದ ವೈಟ್‌ಫೀಲ್ಡ್ ರಸ್ತೆಯ ಸಂಚಾರ ದಟ್ಟಣೆ ಸಮಸ್ಯೆಗೆ ಪರಿಹಾರ ಸಿಗಲಿದ್ದು, ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಲು ಸೂಚಿಸಲಾಗಿದೆ.
Read Full Story

07:10 AM (IST) Jun 07

ಸಿಇಟಿ ಫಲಿತಾಂಶ - ಟಾಪ್‌ 1000 ರ್‍ಯಾಂಕ್‌ನಲ್ಲಿ ಕನ್ನಡ ಮಾಧ್ಯಮದವರು ಬರೀ 9 ವಿದ್ಯಾರ್ಥಿಗಳು

ಸಿಇಟಿ ಫಲಿತಾಂಶದಲ್ಲಿ ಸರ್ಕಾರಿ ಪಿಯು ಕಾಲೇಜು ಮತ್ತು ಕನ್ನಡ ಮಾಧ್ಯಮದ ವಿದ್ಯಾರ್ಥಿಗಳ ಸಾಧನೆ ಅತ್ಯಂತ ಕಳಪೆಯಾಗಿದೆ. ಎಂಜಿನಿಯರಿಂಗ್ ವಿಭಾಗದ ಟಾಪ್ 1000 ರ‍್ಯಾಂಕ್‌ಗಳಲ್ಲಿ ಸರ್ಕಾರಿ ಕಾಲೇಜುಗಳಿಂದ ಕೇವಲ 12 ಮತ್ತು ಕನ್ನಡ ಮಾಧ್ಯಮದಿಂದ ಕೇವಲ 9 ವಿದ್ಯಾರ್ಥಿಗಳು ಸ್ಥಾನ ಪಡೆದಿದ್ದಾರೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಸಾಧನೆಯೂ ತೃಪ್ತಿಕರವಾಗಿಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಂಕಿ-ಅಂಶಗಳು ತಿಳಿಸಿವೆ.

Read Full Story

07:01 AM (IST) Jun 07

ಸ್ವಕ್ಷೇತ್ರದ 20 ಗ್ರಾಪಂಗೆ ಇಂದು ಡಿಕೆ - ಸಿಎಂ ಕನಸು ನನಸು ಮಾಡಿದ ತವರಿಗೆ ಜನರಿಗೆ ಕೃತಜ್ಞತೆ ಸಲ್ಲಿಕೆ

ಮುಖ್ಯಮಂತ್ರಿಯಾದ ಬಳಿಕ ಡಿ.ಕೆ.ಶಿವಕುಮಾರ್ ಅವರು ಮೊದಲ ಬಾರಿಗೆ ತಮ್ಮ ಸ್ವಕ್ಷೇತ್ರ ಕನಕಪುರಕ್ಕೆ ಭೇಟಿ ನೀಡಿ, 20 ಗ್ರಾಮ ಪಂಚಾಯತ್‌ಗಳ ಜನರಿಗೆ ಕೃತಜ್ಞತೆ ಸಲ್ಲಿಸಲಿದ್ದಾರೆ. ಸಾರ್ವಜನಿಕರಿಗೆ ಆಗುವ ಅನಾನುಕೂಲ ತಪ್ಪಿಸಲು, ಅವರು ತಮ್ಮ ಪ್ರವಾಸದ ಭಾಗವಾಗಿ ಮೆಟ್ರೋ ರೈಲಿನಲ್ಲಿ ಪ್ರಯಾಣಿಸಲು ನಿರ್ಧರಿಸಿದ್ದಾರೆ.
Read Full Story

06:51 AM (IST) Jun 07

Monsoon - ರಾಜ್ಯದ 11 ಜಿಲ್ಲೆಯಲ್ಲಿ ಮುಂಗಾರು ಅಬ್ಬರದ ಮಳೆ; ಜನಜೀವನ ಸಂಪೂರ್ಣ ಅಸ್ತವ್ಯಸ್ತ

ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರಿಸುತ್ತಿದ್ದು, ದಕ್ಷಿಣ ಕನ್ನಡ, ಕೊಡಗು, ಕಲಬುರಗಿ ಸೇರಿದಂತೆ 11 ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಿದೆ. ಈ ಮಳೆಯಿಂದಾಗಿ ಹಲವೆಡೆ ಸೇತುವೆ ಕುಸಿತ, ಕಟ್ಟಡ ಪತನ, ಮನೆಗಳಿಗೆ ನೀರು ನುಗ್ಗುವಂತಹ ಅವಾಂತರಗಳು ಸಂಭವಿಸಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಪ್ರಮುಖ ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು, ಹವಾಮಾನ ಇಲಾಖೆ ಹಲವು ಜಿಲ್ಲೆಗಳಿಗೆ ಎಚ್ಚರಿಕೆ ನೀಡಿದೆ.
Read Full Story

06:15 AM (IST) Jun 07

ಹೊಸಪೇಟೆಯ ಹೊಲದಲ್ಲಿ ಅಡಗಿದ್ದ ಹೊಯ್ಸಳರ ಕಾಲದ ರಹಸ್ಯ; 15 ಅಡಿ ಎತ್ತರದ ಶಾಸನ ಪತ್ತೆ

ಹೊಸಪೇಟೆ ತಾಲೂಕಿನ ಗುಂಡ್ಲವದ್ದಿಗೇರಿ ಗ್ರಾಮದಲ್ಲಿ ಹೊಯ್ಸಳರ ಕಾಲದ ಅಪ್ರಕಟಿತ ದಾನ ಶಾಸನವೊಂದು ಪತ್ತೆಯಾಗಿದೆ. ಈ ಶಾಸನವು ಹೊಯ್ಸಳ ನರಸಿಂಹ ಚಕ್ರವರ್ತಿಯ ಕಾಲದಲ್ಲಿ ಸ್ಥಳೀಯ ಆಡಳಿತಗಾರ ಕಾಸಿಗೌಡನು ಕೆರೆ ನಿರ್ಮಿಸಿ, ಬಡಗಿಯೊಬ್ಬನಿಗೆ ಭೂಮಿಯನ್ನು ದಾನ ನೀಡಿದ ವಿವರಗಳನ್ನು ಒಳಗೊಂಡಿದೆ. ಇದು ಜಿಲ್ಲೆಯಲ್ಲಿ ಹೊಯ್ಸಳರ ಆಳ್ವಿಕೆಯ ಕುರುಹುಗಳನ್ನು ದೃಢಪಡಿಸುತ್ತದೆ.

Read Full Story

05:59 AM (IST) Jun 07

ಜೂ.10ರಿಂದ ಜು. 9ರವರೆಗೆ ಕೊಡಗಿನಲ್ಲಿ ಭಾರಿ ವಾಹನ ಸಂಚಾರ ನಿಷೇಧ; ಮಳೆ ಮುಂಜಾಗ್ರತೆ

ಕೊಡಗು ಜಿಲ್ಲೆಯಲ್ಲಿ ಮಳೆಗಾಲದ ಮುಂಜಾಗ್ರತಾ ಕ್ರಮವಾಗಿ, ಜೂನ್ 10 ರಿಂದ ಜುಲೈ 9 ರವರೆಗೆ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಸಾರ್ವಜನಿಕರ ಸುರಕ್ಷತೆ ಮತ್ತು ರಸ್ತೆ ಹಾನಿ ತಡೆಯುವ ಉದ್ದೇಶದಿಂದ ಜಿಲ್ಲಾಧಿಕಾರಿಗಳು ಈ ಆದೇಶ ಹೊರಡಿಸಿದ್ದು, ಅಗತ್ಯ ಸೇವೆಗಳ ವಾಹನಗಳಿಗೆ ವಿನಾಯಿತಿ ನೀಡಲಾಗಿದೆ.
Read Full Story

05:49 AM (IST) Jun 07

ಮಂಡ್ಯದಲ್ಲಿ ಶುಂಠಿ ಬೆಳೆಯಲು ಹೊರರಾಜ್ಯದವರಿಗೆ ಭೂಮಿ ಗುತ್ತಿಗೆ; ಉದ್ಯಮಿಗಳಿಂದ ಹಣದ ಆಮಿಷ

ಹೊರ ರಾಜ್ಯದ ಉದ್ಯಮಿಗಳು ಹಣದ ಆಮಿಷವೊಡ್ಡಿ ರೈತರಿಂದ ಭೂಮಿಯನ್ನು ಗುತ್ತಿಗೆ ಪಡೆದು ಶುಂಠಿ ಬೆಳೆಯುತ್ತಿದ್ದಾರೆ. ಈ ವಾಣಿಜ್ಯ ಬೆಳೆಯು ಮಣ್ಣಿನ ಫಲವತ್ತತೆಯನ್ನು ತೀವ್ರವಾಗಿ ಕಡಿಮೆ ಮಾಡುವುದಲ್ಲದೆ, ಅತಿಯಾದ ಕೀಟನಾಶಕ ಬಳಕೆಯಿಂದ ದೀರ್ಘಕಾಲಿಕ ಹಾನಿಯನ್ನುಂಟುಮಾಡುತ್ತಿದೆ.

Read Full Story

05:40 AM (IST) Jun 07

ಪಟ್ಟಣದಲ್ಲಿನ ಲೋಕಲ್ ಬಸ್ ಸಂಚಾರ ರದ್ದುಗೊಳಿಸುವಂತೆ ಶಾಸಕರಿಗೆ ಆಟೋ ಚಾಲಕರ ಮನವಿ

ರಸ್ತೆ ಅಗಲೀಕರಣದಿಂದ ಬಸ್ ಸಂಚಾರ ಮಾರ್ಗ ಬದಲಾಗಿದ್ದು ಮತ್ತು ಲೋಕಲ್ ಬಸ್ ಸೇವೆ ಆರಂಭವಾಗಿರುವುದರಿಂದ ತಮ್ಮ ಜೀವನೋಪಾಯಕ್ಕೆ ತೊಂದರೆಯಾಗಿದೆ ಎಂದು ಆಟೋ ಚಾಲಕರು ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ, ಲೋಕಲ್ ಬಸ್ ಸಂಚಾರವನ್ನು ರದ್ದುಗೊಳಿಸಿ, ಎಲ್ಲಾ ಬಸ್‌ಗಳನ್ನು ಬಸ್ ನಿಲ್ದಾಣದ ಮೂಲಕವೇ ಓಡಾಟ ನಡೆಸುವಂತೆ ವ್ಯವಸ್ಥೆ ಕಲ್ಪಿಸಬೇಕೆಂದು ಶಾಸಕರಿಗೆ ಮನವಿ ಸಲ್ಲಿಸಿದ್ದಾರೆ.

Read Full Story

05:32 AM (IST) Jun 07

ಇನ್ಮುಂದೆ ಮದುವೆ ದಿಬ್ಬಣಗಳ ಫೋಟೋ, ವಿಡಿಯೋ ಚಿತ್ರೀಕರಣ ಮಾಡಲ್ಲ - ಫೋಟೋಗ್ರಾಫರ್ಸ್ ನಿರ್ಧಾರ

ಫೋಟೋಗ್ರಾಫರ್ಸ್ ಅಸೋಸಿಯೇಷನ್ ಇನ್ನು ಮುಂದೆ ಮದುವೆ ದಿಬ್ಬಣದ (ಬಾರಾತ್) ಚಿತ್ರೀಕರಣ ಮಾಡದಿರಲು ನಿರ್ಧರಿಸಿದೆ. ತಡರಾತ್ರಿ, ಭದ್ರತಾ ಸಮಸ್ಯೆಗಳು ಮತ್ತು ಅನುಚಿತ ವರ್ತನೆಯ ಕಾರಣಗಳಿಂದ ಈ ತೀರ್ಮಾನ ಕೈಗೊಂಡಿದ್ದು, ಕೇವಲ ಮದುವೆ ಹಾಲ್‌ನಲ್ಲಿ ಮಾತ್ರ ಚಿತ್ರೀಕರಣ ನಡೆಸುವುದಾಗಿ ಸ್ಪಷ್ಟಪಡಿಸಿದೆ.

Read Full Story

05:22 AM (IST) Jun 07

Belagavi - ಅನಾಥ ಶಿಶುವಿಗೆ ‘ಯತೀನ್’ ನಾಮಕರಣ ಮಾಡಿದ ಜಿಲ್ಲಾಧಿಕಾರಿ ಮೊಹಮ್ಮದ್‌ ರೋಷನ್‌

ಬೆಳಗಾವಿಯ ಸರ್ಕಾರಿ ದತ್ತು ಕೇಂದ್ರದಲ್ಲಿದ್ದ ಎರಡು ತಿಂಗಳ ಅನಾಥ ಗಂಡು ಶಿಶುವಿಗೆ ಜಿಲ್ಲಾಧಿಕಾರಿಗಳು 'ಯತೀನ್' ಎಂದು ನಾಮಕರಣ ಮಾಡಿದ್ದಾರೆ. ಈ ಹೆಸರು 'ಅನಾಥರಿಗೆ ಆಶ್ರಯ ನೀಡುವವನು' ಎಂಬ ಅರ್ಥವನ್ನು ಹೊಂದಿದ್ದು, ಮಗು ಸಮಾಜಕ್ಕೆ ಒಳ್ಳೆಯ ಹೆಸರು ತರಲಿ ಎಂದು ಜಿಲ್ಲಾಧಿಕಾರಿಗಳು ಹಾರೈಸಿದರು.
Read Full Story

05:12 AM (IST) Jun 07

ಬರ ಜಿಲ್ಲೆ ಹಣೆಪಟ್ಟಿ ಹೊಂದಿದ್ದ ಜಿಲ್ಲೆಯಲ್ಲಿ ನೀರಾವರಿ ಕ್ರಾಂತಿ; ಕೋಟಿ ಸಸಿಗಳನ್ನು ನೆಟ್ಟ ಕನಸುಗಾರ

ಸಚಿವರಾಗಿ ಜಿಲ್ಲೆಗೆ ಮೊದಲ ಬಾರಿಗೆ ಆಗಮಿಸಿದ ಎಂ.ಬಿ. ಪಾಟೀಲರು, ತಾವು ಈ ಹಿಂದೆ ನೀರಾವರಿ ಸಚಿವರಾಗಿದ್ದಾಗ ಮಾಡಿದ ಕೆಲಸಗಳಿಂದ ಜಿಲ್ಲೆ ಹಸಿರಾಗಿದೆ ಎಂದು ಸ್ಮರಿಸಿದರು. ಮುಂದಿನ ದಿನಗಳಲ್ಲಿ ಕೈಗಾರಿಕೆಗಳನ್ನು ತರುವ ಮೂಲಕ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುವುದಾಗಿ ಅವರು ಭರವಸೆ ನೀಡಿದರು.
Read Full Story

05:03 AM (IST) Jun 07

ಪ್ರಧಾನಿ ಮೋದಿ ಭೇಟಿ ವೇಳೆ ಜಿಲೆಟಿನ್ ಕಡ್ಡಿಪತ್ತೆ - ಆರೋಪಿ ಲೋಹಿತ್‌ಗೆ ಮಂಪರು ಪರೀಕ್ಷೆ

ಪ್ರಧಾನಿ ಮೋದಿ ಅವರ ಬೆಂಗಳೂರು ಭೇಟಿ ವೇಳೆ ಬಾಂಬ್ ಬೆದರಿಕೆ ಕರೆ ಮಾಡಿದ್ದ ಆರೋಪಿ ಲೋಹಿತ್‌ನನ್ನು ಬಂಧಿಸಲಾಗಿತ್ತು. ಮೋದಿ ಸಾಗುವ ಮಾರ್ಗದಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿದ್ದು, ಈ ಪ್ರಕರಣಕ್ಕೂ ತನಗೂ ಸಂಬಂಧವಿಲ್ಲ ಎಂದು ಆರೋಪಿ ಹೇಳಿದ್ದಾನೆ. 

Read Full Story

More Trending News