ಹುಬ್ಬಳ್ಳಿ: ಯಾವುದೇ ಕೋಚಿಂಗ್ ಇಲ್ಲದೇ ಮನೆಯಲ್ಲೇ ತಯಾರಿ ನಡೆಸಿ, ಯುಪಿಎಸ್ಸಿ ಪರೀಕ್ಷೆಗೆ 5 ಪ್ರಯತ್ನಗಳ ಪೈಕಿ ನಾಲ್ಕರಲ್ಲಿ ಯಶಸ್ವಿಯಾದವರುಹುಬ್ಬಳ್ಳಿಯ ಕೃಪಾ ಜೈನ್. ಈಗಿನದು 5ನೇ ಬಾರಿಯಾಗಿದ್ದು, 190ನೇ ರ್ಯಾಂಕ್ ಪಡೆದಿದ್ದಾರೆ.
ಕೃಪಾ ಈವರೆಗೆ ಐದು ಬಾರಿ ಯುಪಿಎಸ್ಸಿ ಪರೀಕ್ಷೆ ಬರೆದಿದ್ದು, ಮೊದಲ ಸಲವಷ್ಟೇ ವಿಫಲವಾಗಿದ್ದರು. ಉಳಿದ ನಾಲ್ಕು ಸಲವೂ ಯಶಸ್ವಿಯಾಗಿದ್ದಾರೆ. ಆದರೆ, ಐಪಿಎಸ್ ಅಧಿಕಾರಿಯಾಗಬೇಕೆಂಬುದು ಇವರ ಕನಸು. 2 ಮತ್ತು 4ನೇ ಪ್ರಯತ್ನದಲ್ಲಿ ಐಆರ್ಎಂಎಸ್ ದೊರೆತರೆ, 3ನೇ ಪ್ರಯತ್ನದಲ್ಲಿ ಐಎಫ್ಎಸ್ ಕ್ಲಿಯರ್ ಆಗಿದೆ. ಐಆರ್ಎಂಎಸ್ ಇಷ್ಟ ಆಗದ ಕಾರಣ ಅದಕ್ಕೆ ಸೇರ್ಪಡೆಗೊಳ್ಳದೇ ಮತ್ತೆ ಪ್ರಯತ್ನಿಸಿದ್ದರು.
ಐಎಫ್ಎಸ್ನಲ್ಲಿ 18ನೇ ರ್ಯಾಂಕ್ ಬಂದಿದ್ದು, ಡೆಹ್ರಾಡೂನ್ನಲ್ಲಿ ಐಎಫ್ಎಸ್ ಅಧಿಕಾರಿ ತರಬೇತಿ ಪಡೆಯುತ್ತಿದ್ದಾರೆ. ಆದರೂ, ಐಪಿಎಸ್ ಅಧಿಕಾರಿಯಾಗಬೇಕೆಂದು ಮತ್ತೆ 5ನೇ ಪ್ರಯತ್ನ ನಡೆಸಿದ್ದು, ಈ ಬಾರಿ 190ನೇ ರ್ಯಾಂಕ್ ಪಡೆದಿದ್ದಾರೆ. ಇದೀಗ ತಾವು ಅಂದುಕೊಂಡಿದ್ದನ್ನು ಸಾಧಿಸಿದ ಖುಷಿ ಅವರ ಮೊಗದಲ್ಲಿ ಎದ್ದು ಕಾಣುತ್ತಿದೆ.
01:14 PM (IST) Mar 07
ಕಲಬುರಗಿಯ ಜೇವರ್ಗಿ ತಾಲೂಕಿನ ಮಠವೊಂದರಲ್ಲಿ ವಾಸವಿದ್ದ ಮಾನಸಿಕ ಅಸ್ವಸ್ಥ ಮಹಿಳೆಯ ಮೇಲೆ ಮಸ್ತಾಕ್ ಹುಸೇನ್ ಎಂಬಾತ ಲೈ೦ಗಿಕ ದೌರ್ಜನ್ಯ ಎಸಗಿದ್ದಾನೆ. ಈ ಕೃತ್ಯವನ್ನು ಸ್ಥಳೀಯ ಯುವಕರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದು, ಆರೋಪಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
12:54 PM (IST) Mar 07
'ಸ್ಟಾರ್' ಸಿನಿಮಾದ ಪ್ರಚಾರಕ್ಕಾಗಿ ನಾಯಕ ನಟ ಶರತ್ ಪ್ರಕಾಶ್ ಸಾರ್ವಜನಿಕವಾಗಿ ಮಚ್ಚು ಹಿಡಿದು ಪೋಸ್ ನೀಡಿದ್ದಾರೆ. ಈ ಕೃತ್ಯಕ್ಕಾಗಿ ನಟ ಹಾಗೂ ಚಿತ್ರಮಂದಿರದ ಮಾಲೀಕರ ವಿರುದ್ಧ ಆರ್ಮ್ಸ್ ಆಕ್ಟ್ ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ.
11:52 AM (IST) Mar 07
ಹವಿಗನ್ನಡದ ಸಂರಕ್ಷಣೆ ಮತ್ತು ಸಂವರ್ಧನೆಗಾಗಿ 'ಹವ್ಯಕ ಭಾಷಾ ಅಕಾಡೆಮಿ' ಸ್ಥಾಪಿಸಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ. ಸರ್ಕಾರದ ಈ ಐತಿಹಾಸಿಕ ತೀರ್ಮಾನವನ್ನು ರಾಮಚಂದ್ರಾಪುರ ಮಠ ಮತ್ತು ಹವ್ಯಕ ಮಹಾಸಭೆ ಸ್ವಾಗತಿಸಿದ್ದು, ಇದು ಭಾಷೆಯ ಉಳಿವು ಹಾಗೂ ಅಧ್ಯಯನಕ್ಕೆ ಉತ್ತೇಜನ ನೀಡಲಿದೆ ಎಂದು ಆಶಯ ವ್ಯಕ್ತಪಡಿಸಿವೆ
11:16 AM (IST) Mar 07
ಕರ್ನಾಟಕ ಬಜೆಟ್ 2026ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಹಲವು ಯೋಜನೆ ಘೋಷಿಸಿದ್ದಾರೆ. ಇದರಲ್ಲಿ ಶಾಲೆಗಳ ಉನ್ನತೀಕರಣ, ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್, ಹುಬ್ಬಳ್ಳಿ-ಕಲಬುರಗಿಯಲ್ಲಿ ಹಜ್ ಭವನ ನಿರ್ಮಾಣ, ಮತ್ತು ಮಹಿಳಾ ಕೋ-ಆಪರೇಟಿವ್ ಸೊಸೈಟಿ ಸ್ಥಾಪನೆ ಪ್ರಮುಖವಾಗಿವೆ.
10:42 AM (IST) Mar 07
ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಅವರ ಮೈಸೂರು ಜಿಲ್ಲೆಯ ಕಣಗಾಲ್ ಗ್ರಾಮದಲ್ಲಿರುವ ನಿವಾಸವನ್ನು ವಸ್ತು ಸಂಗ್ರಹಾಲಯವನ್ನಾಗಿ ಪರಿವರ್ತಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ಮನೆಯನ್ನು ಮ್ಯೂಸಿಯಂ ಆಗಿ ಪರಿವರ್ತಿಸುತ್ತಿರುವುದು ಇದೇ ಮೊದಲು.
10:13 AM (IST) Mar 07
ರಾಜ್ಯ ಬಜೆಟ್ ಅಭಿವೃದ್ಧಿ ಶೂನ್ಯ ಮತ್ತು ಸಾಲದ ಸುಳಿಗೆ ಸಿಲುಕಿಸಲಿದೆ ಎಂಬ ಬಿಜೆಪಿ ಆರೋಪಕ್ಕೆ ಸಚಿವ ಪ್ರಿಯಾಂಕ್ ಖರ್ಗೆ, ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ 80 ಸಾವಿರ ಕೋಟಿ ಪಾಲು ಬಾರದ ಕಾರಣ ಸಾಲ ಮಾಡಬೇಕಾಗಿದೆ ಎಂದ ಅವರು, ಪ್ರಧಾನಿ ಮೋದಿ ಮಾಡಿದ 200 ಲಕ್ಷ ಕೋಟಿ ಸಾಲದ ಬಗ್ಗೆಯೂ ಪ್ರಶ್ನಿಸಿದ್ದಾರೆ.
09:54 AM (IST) Mar 07
Reduce spiciness in food ಅಡುಗೆಯಲ್ಲಿ ಖಾರ ಅಥವಾ ಉಪ್ಪು ಹೆಚ್ಚಾಯಿತೇ? ಟೊಮೆಟೋ, ತುಪ್ಪ, ಆಲೂಗಡ್ಡೆಯಂತಹ ಪದಾರ್ಥಗಳಿಂದ ಸರಿಪಡಿಸುವ ಸುಲಭ ಟಿಪ್ಸ್ ತಿಳಿಯಿರಿ. ನಿಮ್ಮ ಅಡುಗೆಯನ್ನು ಎಸೆಯದೆ ರುಚಿಕರವಾಗಿಸಿ!
09:25 AM (IST) Mar 07
ಮಟನ್ ಕಲ್ಲಿನಂತೆ ಗಟ್ಟಿಯಾಗುತ್ತಿದೆಯೇ? ಚಿಂತೆ ಬಿಡಿ. ಮಟನ್ ಅನ್ನು ಬೆಣ್ಣೆಯಂತೆ ಮೃದುವಾಗಿ ಬೇಯಿಸುವ ರಹಸ್ಯ ವಿಧಾನಗಳನ್ನು ತಿಳಿಯಿರಿ. ಈ ಸುಲಭ ಸಲಹೆಗಳಿಂದ ನಿಮ್ಮ ಬಾಡೂಟದ ರುಚಿ ಹೆಚ್ಚಿಸಿ.
09:08 AM (IST) Mar 07
ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ರಾಜ್ಯ ಬಜೆಟ್ನಲ್ಲಿ, ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯನ್ನು ಗುರಿಯಾಗಿಸಿಕೊಂಡು ₹100 ಕೋಟಿ ಅನುದಾನ ಘೋಷಿಸಲಾಗಿದೆ. ಜಿಲ್ಲೆಯ ಬಹುಕಾಲದ ಬೇಡಿಕೆಗಳನ್ನು ಕಡೆಗಣಿಸಿರುವುದು ಜನರಲ್ಲಿ ತೀವ್ರ ನಿರಾಸೆ ಮೂಡಿಸಿದೆ.
09:04 AM (IST) Mar 07
Mansion House Mallesh Movie Review: ಶ್ರೀನಾಥ್ ಮಾಗಂಟಿ ಮತ್ತು ಗಾಯತ್ರಿ ರಮಣ ಜೋಡಿಯಾಗಿ ನಟಿಸಿರುವ 'ಮ್ಯಾನ್ಷನ್ ಹೌಸ್ ಮಲ್ಲೇಶ್' ಸಿನಿಮಾ ಈ ಶುಕ್ರವಾರ ಪ್ರೇಕ್ಷಕರ ಮುಂದೆ ಬಂದಿದೆ. ಶ್ರೀನಾಥ್ ಸೋಲೋ ಹೀರೋ ಆಗಿ ನಟಿಸಿರುವ ಈ ಚಿತ್ರ ಹೇಗಿದೆ?
08:43 AM (IST) Mar 07
ಈ ಬಾರಿಯ ಬಜೆಟ್ನಲ್ಲಿ ಸರ್ಕಾರವು ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ 30 ಸಾವಿರ ಕೋಟಿ ರೂ. ಕೃಷಿ ಸಾಲ ಮತ್ತು ಮೆಕ್ಕೆಜೋಳ ಬೆಳೆಗಾರರಿಗೆ 100 ಕೋಟಿ ರೂ. ನೆರವು ಘೋಷಿಸಿದೆ. ಇದರೊಂದಿಗೆ, ಸಹಕಾರ ಸಂಘಗಳ ಗಣಕೀಕರಣ ಮತ್ತು ಎಪಿಎಂಸಿಗಳ ಡಿಜಿಟಲೀಕರಣಕ್ಕೆ ಒತ್ತು ನೀಡಲಾಗಿದೆ.
07:49 AM (IST) Mar 07
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್ನಲ್ಲಿ 'ಡ್ರಗ್ಸ್ ಮುಕ್ತ ಕರ್ನಾಟಕ' ಗುರಿಯೊಂದಿಗೆ ಪೊಲೀಸ್ ಇಲಾಖೆಗೆ ವಿಶೇಷ ಅನುದಾನ ಘೋಷಿಸಿದ್ದಾರೆ. 12 ಹೊಸ ಪೊಲೀಸ್ ಠಾಣೆಗಳ ಸ್ಥಾಪನೆ, 8 ಸಾವಿರ ಸಿಬ್ಬಂದಿ ನೇಮಕಾತಿ ಹಾಗೂ ಇಲಾಖೆಯ ಆಧುನೀಕರಣಕ್ಕೆ ಸರ್ಕಾರ ಹಸಿರು ನಿಶಾನೆ ತೋರಿದೆ.
07:25 AM (IST) Mar 07
07:17 AM (IST) Mar 07
ಶ್ರೀಲಂಕಾ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎಎಚ್ಎಂ ದಿಲೀಪ್ ನವಾಜ್ ಅವರು ಕರ್ನಾಟಕ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ಸಂಬಂಧ ಹೈಕೋರ್ಟ್, ಗೂಗಲ್ ಇಂಡಿಯಾ ಮತ್ತು ಗೂಗಲ್ ಇಂಕ್ಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಮುಂದೂಡಿದೆ.
07:07 AM (IST) Mar 07
07:04 AM (IST) Mar 07
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶಿಕ್ಷಣ ಕ್ಷೇತ್ರಕ್ಕೆ ಹಲವು ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ. 15,000 ಶಿಕ್ಷಕರ ನೇಮಕಾತಿ, ಪಿಯು ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ, 'ರೋಹಿತ್ ವೇಮುಲ ಕಾಯ್ದೆ' ಜಾರಿ ಹಾಗೂ 800 ಕರ್ನಾಟಕ ಪಬ್ಲಿಕ್ ಶಾಲೆಗಳ ಉನ್ನತೀಕರಣದಂತಹ ಪ್ರಮುಖ ನಿರ್ಧಾರ