Published : May 07, 2026, 07:01 AM ISTUpdated : May 07, 2026, 08:55 PM IST

Karnataka News Live: ಗ್ರೇಟರ್ ರಾಜಾಸೀಟು ಕಾಮಗಾರಿಯಲ್ಲಿ ಹಣ ದುರುಪಯೋಗ - ಲೋಕಾಯುಕ್ತದಿಂದ ಸರ್ಕಾರಕ್ಕೆ ವರದಿ ಸಲ್ಲಿಕೆ

ಸಾರಾಂಶ

ತೆಕ್ಕಲಕೋಟೆ (ಬಳ್ಳಾರಿ): 6ರಿಂದ 7ನೇ ಶತಮಾನಕ್ಕೆ ಸೇರಿದ ಅಪ್ರಕಟಿತ ಬಂಡೆಗಲ್ಲು ಶಾಸನವೊಂದು ಬಳ್ಳಾರಿ ಜಿಲ್ಲೆ ಸಿರಗುಪ್ಪ ತಾಲೂಕಿನ ತೆಕ್ಕಲಕೋಟೆಯ ನಿಟ್ಟೂರಿನ ಹೊಲದಲ್ಲಿ ಪತ್ತೆಯಾಗಿದೆ.

ನಿಟ್ಟೂರಿನಲ್ಲಿರುವ ಅಶೋಕನ ಶಿಲಾಶಾಸನ ಪತ್ತೆ ಆದ ಸ್ಥಳದಿಂದ 1 ಕಿ.ಮೀ. ದೂರದಲ್ಲಿರುವ ಬಂಡೆಗಲ್ಲು ಶಾಸನವನ್ನು ಸಂಶೋಧನಾರ್ಥಿಗಳಾದ ಅಶೋಕ್ ಅಬಕಾರಿ, ಮನೋಹರ ಗುರುತಿಸಿ, ಕ್ಷೇತ್ರ ಅಧ್ಯಯನಕ್ಕೆ ಧಾರವಾಡದ ಲಿಪಿತಜ್ಞ ಮಾರುತಿ ಭಜಂತ್ರಿ, ಹಿರೇಬೆಣಕಲ್ ಮಂಜುನಾಥ ದೊಡ್ಡಮನಿ ಗಮನಕ್ಕೆ ತಂದರು. ಶಾಸನವು ಬೃಹತ್ ಆಕಾರದ ಬಂಡೆಯೊಂದರ ಮೇಲೆ ಪ್ರಾಚೀನ ಲಿಪಿಯಲ್ಲಿ ಬರೆಯಲ್ಪಟ್ಟಿದ್ದು, ಶಾಸನವು ಸುಮಾರು ಏಳುಸಾಲುಗಳನ್ನು ಒಳಗೊಂಡಿದೆ. ಮೌರ್ಯರ ಆಳ್ವಿಕೆಯನ್ನು ಒಳಗೊಂಡಿರುವ ಪ್ರದೇಶವೆಂದು ಗುರುತಿಸಲಾಗಿತ್ತು. ಸದ್ಯ ಪತ್ತೆಯಾಗಿರುವ ಶಾಸನದ ಲಿಪಿಯ ಆಧಾರದಲ್ಲಿ ಸುಮಾರು 6ರಿಂದ 7ನೇ ಶತಮಾನದ ಬಾದಾಮಿ ಚಾಲುಕ್ಯರ ಕಾಲದಿಂದ ರಾಷ್ಟ್ರಕೂಟರ ಕಾಲಘಟ್ಟಕ್ಕೆ ಸೇರಿದ್ದೆಂದು ಅಂದಾಜಿಸಲಾಗಿದೆ.

 

08:55 PM (IST) May 07

ಗ್ರೇಟರ್ ರಾಜಾಸೀಟು ಕಾಮಗಾರಿಯಲ್ಲಿ ಹಣ ದುರುಪಯೋಗ - ಲೋಕಾಯುಕ್ತದಿಂದ ಸರ್ಕಾರಕ್ಕೆ ವರದಿ ಸಲ್ಲಿಕೆ

ಪ್ರವಾಸಿಗರ ಹಾಟ್ ಸ್ಪಾಟ್ ಆಗಿರುವ ಮಡಿಕೇರಿಯ ರಾಜಾಸೀಟಿಗೆ ಹೊಂದಿಕೊಂಡಂತೆ ಇರುವ ಗ್ರೇಟರ್ ರಾಜಾಸೀಟಿನಲ್ಲಿ ನಡೆದಿರುವ ಅವ್ಯವಹಾರ ಲೋಕಾಯುಕ್ತ ತನಿಖೆಯಲ್ಲಿ ಸಾಬೀತಾಗಿದೆ. ಹೌದು ಮಡಿಕೇರಿಯ..

Read Full Story

08:39 PM (IST) May 07

Mothers Day 2026 - ಅಮ್ಮನ ಜೊತೆ ಟ್ರಿಪ್ ಪ್ಲಾನ್ ಇದ್ಯಾ? ಬೆಟ್ಟ, ಬೀಚ್, ದೇವಸ್ಥಾನ... ಇಲ್ಲಿದೆ ಬೆಸ್ಟ್ ಲಿಸ್ಟ್!

2026ರ ಅಮ್ಮಂದಿರ ದಿನಕ್ಕೆ ನಿಮ್ಮ ಅಮ್ಮನ ಜೊತೆ ಎಲ್ಲಿಗೆ ಟ್ರಿಪ್ ಹೋಗೋದು ಅಂತ ಯೋಚನೆ ಮಾಡ್ತಿದ್ದೀರಾ? ಬೆಟ್ಟಗಳ ತಂಪು, ಬೀಚ್‌ನ ನಿರಾಳತೆ ಅಥವಾ ದೇವಸ್ಥಾನಗಳ ದೈವಿಕ ಅನುಭವ... ಅಮ್ಮನ ಇಷ್ಟಕ್ಕೆ ತಕ್ಕಂತೆ ಬೆಸ್ಟ್ ಜಾಗಗಳ ಲಿಸ್ಟ್ ಇಲ್ಲಿದೆ. ಈ ದಿನವನ್ನು ಅವಿಸ್ಮರಣೀಯವಾಗಿಸಿ.

Read Full Story

07:09 PM (IST) May 07

ಗಂಗಾವತಿ ಕ್ಷೇತ್ರದಲ್ಲಿ ಕಾಂಗ್ರೆಸ್ ಮನೆಯೊಂದು ಮೂರು ಬಾಗಿಲು - ಪಟ್ಟಣಶೆಟ್ಟಿ ಟೀಕೆ

ಗಂಗಾವತಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಮನೆಯೊಂದು ಮೂರು ಬಾಗಿಲು ಆಗಿದೆ ಎಂದು ಕಾಂಗ್ರೆಸ್ ಪಕ್ಷದವರೇಯಾಗಿರುವ ಮುಖಂಡ ಹಾಗು ನ್ಯಾಯವಾದಿ ಸೋಮನಾಥ ಪಟ್ಟಣಶೆಟ್ಟಿ ಟೀಕಿಸಿದ್ದಾರೆ.

Read Full Story

06:05 PM (IST) May 07

ದುಬಾರೆಯಲ್ಲಿ 7.30 ಕೋಟಿ ರೂ. ವೆಚ್ಚದ ತೂಗು ಸೇತುವೆ, ಮಾನವ ವನ್ಯಜೀವಿ ಸಂಘರ್ಷಕ್ಕೆ ಸಿಗುವುದೇ ಮುಕ್ತಿ?

ಕೊಡಗಿನ ದುಬಾರೆಯಲ್ಲಿ 7.30 ಕೋಟಿ ರೂ. ವೆಚ್ಚದ ತೂಗು ಸೇತುವೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಶಂಕುಸ್ಥಾಪನೆ ನೆರವೇರಿಸಿದರು. ಈ ಸೇತುವೆಯು 150ಕ್ಕೂ ಹೆಚ್ಚು ಕುಟುಂಬಗಳಿಗೆ ಅನುಕೂಲ ಕಲ್ಪಿಸಲಿದ್ದು, ಇದೇ ವೇಳೆ ಮಾನವ-ಆನೆ ಸಂಘರ್ಷ ನಿಯಂತ್ರಣಕ್ಕೆ ವನ್ಯಜೀವಿಗಳ ಸಂತಾನ ನಿಯಂತ್ರಣದಂತಹ ಕ್ರಮಗಳ ಬಗ್ಗೆಯೂ ಚರ್ಚಿಸಲಾಯಿತು.
Read Full Story

05:15 PM (IST) May 07

ವಿಟಿಯು ಪರೀಕ್ಷಾ ದಿನಾಂಕ ಪ್ರಕಟ - ಯುಜಿ ಹಾಗೂ ಪಿಜಿ ಕೋರ್ಸ್‌ಗಳ ಪರೀಕ್ಷಾ ವೇಳಾಪಟ್ಟಿ ಬಿಡುಗಡೆ

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು (ವಿಟಿಯು) ತನ್ನ ಪದವಿ (ಯುಜಿ) ಮತ್ತು ಸ್ನಾತಕೋತ್ತರ (ಪಿಜಿ) ಕೋರ್ಸ್‌ಗಳ ಪರೀಕ್ಷಾ ವೇಳಾಪಟ್ಟಿಯನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ. ಜೂನ್ ಎರಡನೇ ವಾರದಿಂದ ಆಗಸ್ಟ್ ಮೂರನೇ ವಾರದವರೆಗೆ ಪರೀಕ್ಷೆಗಳು ನಡೆಯಲಿದ್ದು, ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್‌ನಲ್ಲಿ ವಿವರಗಳನ್ನು ಪರಿಶೀಲಿಸಬಹುದು.
Read Full Story

03:52 PM (IST) May 07

ಖಾತೆ ಬದಲಾವಣೆಗೆ ಲಂಚದ ಆರೋಪ, ದಾವಣಗೆರೆ ಪಾಲಿಕೆ ಕಚೇರಿಯಲ್ಲಿ ಲೋಕಾಯುಕ್ತರ ತೀವ್ರ ಶೋಧ!

ದಾವಣಗೆರೆ ಮಹಾನಗರ ಪಾಲಿಕೆಯ ವಲಯ ಕಚೇರಿ-1 ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಇಸ್ವತ್ತು ಮತ್ತು ಖಾತೆ ಬದಲಾವಣೆಗೆ ಲಂಚ ಪಡೆಯಲಾಗುತ್ತಿದೆ ಎಂಬ ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದ್ದು, ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.
Read Full Story

03:31 PM (IST) May 07

ಚಿಕ್ಕಮಗಳೂರು ಸೈಬರ್ ವಂಚನೆ - ಗೋಲ್ಡ್ ಲೋನ್ ಪಡೆದು ಬ್ಯಾಂಕ್ ನಿಂದ ಹೊರಬಂದ ತಕ್ಷಣ ಹಣ ಮಾಯ!

ಚಿಕ್ಕಮಗಳೂರಿನಲ್ಲಿ ವಕೀಲರೊಬ್ಬರು ಚಿನ್ನದ ಸಾಲ ಪಡೆದ ಕೆಲವೇ ಕ್ಷಣಗಳಲ್ಲಿ, ಅವರ ಬ್ಯಾಂಕ್ ಖಾತೆಯಿಂದ ಸುಮಾರು ಒಂದು ಲಕ್ಷ ರೂಪಾಯಿ ಸೈಬರ್ ವಂಚಕರಿಂದ ಕಳುವಾಗಿದೆ. ಯಾವುದೇ ಓಟಿಪಿ ಅಥವಾ ಲಿಂಕ್ ಇಲ್ಲದೆ ಹಣ ವರ್ಗಾವಣೆಯಾಗಿರುವುದು ಆತಂಕಕ್ಕೆ ಕಾರಣವಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.
Read Full Story

02:29 PM (IST) May 07

ಎಲ್ಲಾ ಓಕೆ, ಆದ್ರೂ ವೀಕ್ಷಕರು ಮಾತ್ರ ನಂಬ್ತಿಲ್ಲ; ಅಮೃತಧಾರೆ ಬಗ್ಗೆ ಹೀಗೊಂದು ಅನುಮಾನ

ಅಮೃತಧಾರೆ ಧಾರಾವಾಹಿ ಮುಕ್ತಾಯದ ವದಂತಿಗಳ ನಡುವೆ ವೀಕ್ಷಕರು ಕೆಲವೊಂದು ಪಾತ್ರವನ್ನು ಅನುಮಾನಿಸುತ್ತಿದ್ದಾರೆ. ದಿಯಾಳ ದೂರಿನಿಂದ ಜೈದೇವ್ ಜೈಲು ಸೇರಿದ್ದು, ಧಾರಾವಾಹಿಯ ಕಥೆಯು ರೋಚಕ ತಿರುವು ಪಡೆದುಕೊಂಡಿದೆ.

Read Full Story

02:06 PM (IST) May 07

ಜೈಲಲ್ಲಿ ದರ್ಶನ್​ಗೆ ದುಃಸ್ಥಿತಿ, ನಂಗೆ ರಾಯಲ್​​ ಟ್ರೀಟ್​ಮೆಂಟ್​ - ಕ್ಯಾಮೆರಾ ಆಫ್​ ಆದ್ಮೇಲೆ Dog Satish​ ಗುಟ್ಟು ರಟ್ಟು

ಬಿಗ್ ಬಾಸ್ ಖ್ಯಾತಿಯ ಡಾಗ್ ಸತೀಶ್, ಜೈಲಿನಲ್ಲಿ ನಟ ದರ್ಶನ್‌ಗೆ ಸಿಗುತ್ತಿರುವ ಟ್ರೀಟ್ಮೆಂಟ್ ಬಗ್ಗೆ ಮಾತನಾಡಿದ್ದಾರೆ. ತಮಗೆ  'ರಾಯಲ್ ಟ್ರೀಟ್ಮೆಂಟ್' ಸಿಕ್ಕಿತ್ತು, ಆದರೆ ದರ್ಶನ್‌ಗೆ ಹಾಗಾಗುತ್ತಿಲ್ಲ ಎಂದಿದ್ದಾರೆ. ರಾಜಮರ್ಯಾದೆಯ ಹಿಂದಿನ ಗುಟ್ಟಿನ ಬಗ್ಗೆ ಹೇಳಿದ್ದೇನು?

Read Full Story

01:53 PM (IST) May 07

ಕೊಪ್ಪಳ ಹೋಟೆಲ್ ನಲ್ಲಿ ಅಪ್ರಾಪ್ತೆಯೊಂದಿಗೆ ಸಿಕ್ಕಿಬಿದ್ದ ಅನ್ಯಕೋಮಿನ ಯುವಕ, ಭುಗಿಲೆದ್ದ ವಿವಾದ

ಕೊಪ್ಪಳದ ಹೋಟೆಲ್ ಒಂದರಲ್ಲಿ ಮುಸ್ಲಿಂ ಯುವಕನೊಂದಿಗೆ ಅಪ್ರಾಪ್ತ ಹಿಂದೂ ಯುವತಿ ಪತ್ತೆಯಾದ ಘಟನೆ ತೀವ್ರ ಉದ್ವಿಗ್ನತೆಗೆ ಕಾರಣವಾಗಿದೆ. ಈ ಸಂಬಂಧ ಭಜರಂಗ ದಳದ ಕಾರ್ಯಕರ್ತರನ್ನು ಬಂಧಿಸಿದ್ದಕ್ಕೆ ಹಿಂದೂಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದು, ಯುವಕನ ವಿರುದ್ಧ ಪೋಕ್ಸೊ ಕಾಯ್ದೆಯಡಿ ಕ್ರಮಕ್ಕೆ ಆಗ್ರಹಿಸಿವೆ. ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.
Read Full Story

01:08 PM (IST) May 07

ರಾಜ್ಯದ ಬಂಡವಾಳ ಗುಜರಾತ್‌ಗೆ, ಐಪಿಎಲ್ ಮ್ಯಾಚ್‌ ಕೂಡ ಶಿಫ್ಟ್, ಇಲ್ಲೇನು ಭದ್ರತೆ ಇಲ್ವಾ? ಬಿಜೆಪಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ತಮಿಳುನಾಡಿನಲ್ಲಿ ತಮ್ಮ ಸಿದ್ಧಾಂತ ರಕ್ಷಣೆಗಾಗಿ ಕಾಂಗ್ರೆಸ್, ಡಿಎಂಕೆ ಬದಲು ಟಿವಿಕೆ ಪಕ್ಷವನ್ನು ಬೆಂಬಲಿಸಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಸಮರ್ಥಿಸಿಕೊಂಡರು. ರಾಜ್ಯಪಾಲರ ಕಚೇರಿಗಳು ಬಿಜೆಪಿ ಕಚೇರಿಗಳಾಗಿವೆ ಹಾಗೂ ಕೇಂದ್ರ ಸರ್ಕಾರ ಬೆಲೆ ಏರಿಕೆ, ನಿರುದ್ಯೋಗದಂತಹ ಸಮಸ್ಯೆಗಳನ್ನು ನಿರ್ಲಕ್ಷ್ಯಕ್ಕೆ ಕಿಡಿ.

Read Full Story

12:55 PM (IST) May 07

ವಿಜಯನಗರದ ಅಪರೂಪದ ಶಾಸನ ಹಂಪಾದೇವನಹಳ್ಳಿ ಮತ್ತೆ, ಶ್ರೀಕೃಷ್ಣದೇವರಾಯನ ಮರೆತ ಅಧ್ಯಾಯ ಮತ್ತೆ ಮರುಕಳಿಸಿತು

ಕಂಪ್ಲಿ ತಾಲೂಕಿನ ಹಂಪಾದೇವನಹಳ್ಳಿಯಲ್ಲಿ 16ನೇ ಶತಮಾನಕ್ಕೆ ಸೇರಿದ ವಿಜಯನಗರ ಸಾಮ್ರಾಜ್ಯದ ಅಪರೂಪದ, ಅಪ್ರಕಟಿತ ಶಾಸನವೊಂದು ಪತ್ತೆಯಾಗಿದೆ. ಈ ಶಾಸನವು ಗ್ರಾಮವನ್ನು 'ಕೃಷ್ಣರಾಯಪುರ' ಎಂದು ಮರುನಾಮಕರಣ ಮಾಡಿ ದಾನ ನೀಡಿದ ಬಗ್ಗೆ ಉಲ್ಲೇಖಿಸಿದ್ದು, ಇದು ಶ್ರೀಕೃಷ್ಣದೇವರಾಯರ ಕಾಲದ ಇತಿಹಾಸದ ಮೇಲೆ ಹೊಸ ಬೆಳಕು ಚೆಲ್ಲುತ್ತದೆ.
Read Full Story

12:53 PM (IST) May 07

ಆಹಾರ ಪ್ರಿಯರನ್ನು ಹುಚ್ಚರನ್ನಾಗಿ ಮಾಡ್ತಿರೋ ಕೊಂಕಣಿ ಶೈಲಿಯ 'ಅಂಬಾಟ ಬಟಾಟ' ರೆಸಿಪಿ

ಕೊಂಕಣಿ ಭಾಗದ ಸಾಂಪ್ರದಾಯಿಕ ಅಡುಗೆಯಾದ ಅಂಬಾಟ ಬಟಾಟ ಸಾಂಬರ್ ತಯಾರಿಸುವ ಸರಳ ವಿಧಾನವನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. ತೆಂಗಿನಕಾಯಿ ಮಸಾಲೆ ಮತ್ತು ಆಲೂಗಡ್ಡೆಯನ್ನು ಬಳಸಿ, ರುಚಿಕರವಾದ ಈ ಕರ್ರಿಯನ್ನು ಹೇಗೆ ಮಾಡುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.
Read Full Story

12:05 PM (IST) May 07

Virat Kohli - ವಿರಾಟ್‌ ಕೊಹ್ಲಿಗೆ ಬೌಲಿಂಗ್‌ ಮಾಡಿದ ಉತ್ತರ ಕನ್ನಡದ ಸಿದ್ದಾಪುರ ಹುಡುಗ; ವಿಶೇಷ ವಿಷಯ ಬಿಚ್ಚಿಟ್ರು!

Siddapura Nagaraj Hegde bowling Virat Kohli: ಭಾರತದ ಖ್ಯಾತ ಕ್ರಿಕೆಟ್ ಆಟಗಾರ ವಿರಾಟ್ ಕೊಹ್ಲಿ ಜೊತೆ ಸಿದ್ದಾಪುರ ತಾಲೂಕಿನ ನಾಗರಾಜ ಹೆಗಡೆ ಕಾಣಿಸಿಕೊಂಡಿದ್ದಾರೆ. ಪ್ರತಿಷ್ಠಿತ ಓಕ್ತಿ ಸನ್ ಗ್ಲಾಸ್ ಜಾಹೀರಾತಿನಲ್ಲಿ ನಾಗರಾಜ್‌ ಹೆಗಡೆ ನಟಿಸುವ ಮೂಲಕ ಮೂಲಕ ಗಮನ ಸೆಳೆಸಿದ್ದಾರೆ.

 

Read Full Story

12:01 PM (IST) May 07

ಗಂಡ ಮನೆಯಲ್ಲಿರುವಾಗಲೇ ನೇಣಿಗೆ ಶರಣಾದ ಪತ್ನಿ; ವಿಡಿಯೋ ಕಾಲ್ ಮಾಡಿದ್ರೂ ಕ್ಯಾರೇ ಎನ್ನದ ಪತಿ

ಶಾರದಾ ಮತ್ತು ಮಹೇಶ್ ದಂಪತಿಗಳ ಮದುವೆಯಾಗಿ ಕೇವಲ ಎಂಟು ತಿಂಗಳು ಕಳೆದಿತ್ತು. ಮದುವೆಯಾದ ಕೆಲವೇ ದಿನಗಳಲ್ಲಿ ಹಣಕ್ಕಾಗಿ ಪತಿ ಮಹೇಶ್ ಪೀಡಿಸುತ್ತಿದ್ದ ಎಂಬುದು ಕುಟುಂಬದ ಗಂಭೀರ ಆರೋಪವಾಗಿದೆ. ಘಟನಾ ಸ್ಥಳದ ಮಹಜರು ಪ್ರಕ್ರಿಯೆಯಲ್ಲಿ ಪೊಲೀಸರು ಲೋಪ ಎಸಗಿದ್ದಾರೆ ಎಂದು ಶಾರದಾ ಪೋಷಕರು ಆರೋಪಿಸಿದ್ದಾರೆ. 

Read Full Story

11:53 AM (IST) May 07

'ಡಿಕೆಶಿಗೆ ಸಿಎಂ ಕುರ್ಚಿ ಮೇಲೆ ಸ್ವಲ್ಪ ಜಾಸ್ತಿಯೇ ಆಸೆ ಇದೆ; ಸಿಎಂ ಬದಲಾವಣೆ ಕುರಿತು ರಾಜಣ್ಣ ಹೇಳಿಕೆ ರಾಜಕೀಯ ಸಂಚಲನ

ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರು ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ, ಸಿಎಂ ಬದಲಾವಣೆ ಕುರಿತು ಹೈಕಮಾಂಡ್ ಶೀಘ್ರದಲ್ಲೇ ಸ್ಪಷ್ಟ ನಿರ್ಧಾರ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಈ ಗೊಂದಲ ಮುಂದುವರೆದರೆ ಪಕ್ಷಕ್ಕೆ ಹಾನಿಯಾಗಲಿದೆ ಎಂದು ಎಚ್ಚರಿಸಿದರು.

Read Full Story

11:11 AM (IST) May 07

2028ಕ್ಕೆ ರಾಜ್ಯ ಬಿಜೆಪಿಯಿಂದಲೂ ಗ್ಯಾರಂಟಿ? 'ಮುಳ್ಳನ್ನ ಮುಳ್ಳಿನಿಂದ್ಲೇ ತೆಗಿತೀವಿ' ಅಂದಿದ್ಯಾಕೆ ಆರ್ ಅಶೋಕ್?

2028ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗ್ಯಾರಂಟಿಗಳಿಗೆ ಪ್ರತಿಯಾಗಿ ಬಿಜೆಪಿ ಕೂಡ ಗ್ಯಾರಂಟಿ ಘೋಷಿಸುವ ಸುಳಿವನ್ನು ವಿಪಕ್ಷ ನಾಯಕ ಆರ್. ಅಶೋಕ್ ನೀಡಿದ್ದಾರೆ. 'ಮುಳ್ಳನ್ನು ಮುಳ್ಳಿಂದಲೇ ತೆಗೆಯುತ್ತೇವೆ' ಎನ್ನುವ ಮೂಲಕ ಕಾಂಗ್ರೆಸ್ ದಾರಿಯಲ್ಲೇ ಸಾಗಿ ಅವರಿಗೆ ತಿರುಗೇಟು ನೀಡುವ ರಣತಂತ್ರ ಬಹಿರಂಗ.

Read Full Story

10:49 AM (IST) May 07

ಸ್ವಿಗ್ಗಿ ರೆಸ್ಟೋರೆಂಟ್ ಅವಾರ್ಡ್ಸ್ 2026 - ಬೆಂಗಳೂರಿಗರ ಹಾಟ್‌ 'ಫೇವರಿಟ್' ಹೋಟೆಲ್‌ಗಳ ಪಟ್ಟಿ ಬಿಡುಗಡೆ!

ಸ್ವಿಗ್ಗಿ ತನ್ನ 'ರೆಸ್ಟೋರೆಂಟ್ ಅವಾರ್ಡ್ಸ್ 2026' ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಬೆಂಗಳೂರಿನ ನೆಚ್ಚಿನ ಹೋಟೆಲ್‌ಗಳನ್ನು ಬಹಿರಂಗಪಡಿಸಿದೆ. ಫುಡ್ ಡೆಲಿವರಿ ವಿಭಾಗದಲ್ಲಿ ಟ್ರಫಲ್ಸ್, ಮೇಘನಾ ಫುಡ್ಸ್ ಮತ್ತು ಡೈನ್-ಔಟ್ ವಿಭಾಗದಲ್ಲಿ ಶರೀಫ್ ಭಾಯ್ ಬಿರಿಯಾನಿ, ಐರನ್ ಹಿಲ್‌ನಂತಹ ಹೋಟೆಲ್‌ಗಳು ವಿಜೇತರಾಗಿವೆ. ಈ ಪ್ರಶಸ್ತಿಗಳನ್ನು 1.3 ಕೋಟಿ ಗ್ರಾಹಕರ ಮತಗಳ ಆಧಾರದ ಮೇಲೆ ನಿರ್ಧರಿಸಲಾಗಿದೆ.
Read Full Story

10:14 AM (IST) May 07

'ಕರ್ನಾಟಕ ಪೊಲೀಸ್ ಮಾದರ್ ಚೋರ್‌' - ರಸ್ತೆ ಮಧ್ಯೆ ಎಣ್ಣೆ ಪಾರ್ಟಿ, ಪ್ರಶ್ನಿಸಿದ್ದಕ್ಕೆ ಪೊಲೀಸರ ಸಮವಸ್ತ್ರ ಹರಿದು ಗೂಂಡಾಗಿರಿ!

ಬೆಂಗಳೂರಿನಲ್ಲಿ ನಸುಕಿನಲ್ಲಿ ರಸ್ತೆ ಮಧ್ಯೆ ಮದ್ಯಪಾನ ಮಾಡುತ್ತಿದ್ದ ಯುವಕರನ್ನು ಪ್ರಶ್ನಿಸಿದ್ದಕ್ಕೆ ಪೊಲೀಸ್ ಕಾನ್‌ಸ್ಟೇಬಲ್‌ಗಳ ಮೇಲೆ ಹಲ್ಲೆ ನಡೆದಿದೆ. ಈ ಸಂಬಂಧ ಇಬ್ಬರು ವಿದ್ಯಾರ್ಥಿಗಳನ್ನು ಬಂಧಿಸಲಾಗಿದ್ದು, ಪರಾರಿಯಾಗಿರುವ ಇಬ್ಬರಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.
Read Full Story

10:11 AM (IST) May 07

ಬೆಂಗಳೂರು-ಮುಂಬೈ‌ ಸೂಪರ್ ಫಾಸ್ಟ್ ರೈಲು ಸಂಚಾರಕ್ಕೆ ಮುಹೂರ್ತ ಫಿಕ್ಸ್! ರೂಟ್ ಹೀಗಿದೆ

ಬೆಂಗಳೂರಿನಿಂದ ಮುಂಬೈಗೆ ಹೊಸ ಸೂಪರ್‌ಫಾಸ್ಟ್ ರೈಲು ಆರಂಭಿಸುವುದಾಗಿ ಭರವಸೆ ನೀಡಿದ್ದಾರೆ. ಈ ರೈಲು ತುಮಕೂರು, ದಾವಣಗೆರೆ, ಹುಬ್ಬಳ್ಳಿ ಮೂಲಕ ಸಂಚರಿಸಲಿದ್ದು, ಭವಿಷ್ಯದಲ್ಲಿ ಇದನ್ನು ವಂದೇ ಭಾರತ್ ಸ್ಲೀಪರ್ ರೈಲಾಗಿ ಮೇಲ್ದರ್ಜೆಗೇರಿಸುವ ಯೋಜನೆಯೂ ಇದೆ.

Read Full Story

10:03 AM (IST) May 07

ಬಿಸಿಲಿಗೆ ಬ್ರೇಕ್, ರಾಜ್ಯದಲ್ಲಿ 7 ದಿನಗಳ ಕಾಲ ಮಳೆ ಅಬ್ಬರ! ಕರಾವಳಿ ಜಿಲ್ಲೆಯಲ್ಲಿ ಮೋಡ ವಾತಾವರಣ

ರಾಜ್ಯದಲ್ಲಿ ಹೆಚ್ಚುತ್ತಿರುವ ಬಿಸಿಲಿನ ತಾಪಮಾನದ ನಡುವೆ, ಹವಾಮಾನ ಇಲಾಖೆಯು ಮುಂದಿನ ಏಳು ದಿನಗಳ ಕಾಲ ಕರ್ನಾಟಕದ ವಿವಿಧ ಭಾಗಗಳಲ್ಲಿ ಗುಡುಗು, ಸಿಡಿಲು ಸಹಿತ ಮಳೆಯಾಗುವ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡು, ಉತ್ತರ ಒಳನಾಡು ಮತ್ತು ಕರಾವಳಿ ಪ್ರದೇಶಗಳಲ್ಲಿ ಬಲವಾದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಕೆಲವೆಡೆ ಭಾರೀ ಮಳೆಯ ಎಚ್ಚರಿಕೆಯನ್ನೂ ನೀಡಲಾಗಿದೆ.
Read Full Story

09:58 AM (IST) May 07

GBA towing scheme failure - ಶುರುವಾದ ಒಂದೇ ತಿಂಗಳಲ್ಲಿ ಹಳ್ಳ ಹಿಡಿದ 'ಜಿಬಿಎ' ಟೋಯಿಂಗ್ ಯೋಜನೆ! ಟ್ರಾಫಿಕ್ ಕಿರಿಕಿರಿ ಇನ್ನಷ್ಟು ಹೆಚ್ಚುವ ಭೀತಿ!

ಬೆಂಗಳೂರಿನಲ್ಲಿ ಅಕ್ರಮ ಪಾರ್ಕಿಂಗ್ ತಡೆಯಲು ಜಿಬಿಎ ಮತ್ತು ಸಂಚಾರಿ ಪೊಲೀಸರು ಜಾರಿಗೆ ತಂದಿದ್ದ ಟೋಯಿಂಗ್ ವ್ಯವಸ್ಥೆಯು ಸಮನ್ವಯದ ಕೊರತೆ ಮತ್ತು ಪೂರ್ವಸಿದ್ಧತೆ ಇಲ್ಲದ ಕಾರಣ ಆರಂಭವಾದ ಒಂದು ತಿಂಗಳಲ್ಲೇ ಸ್ಥಗಿತಗೊಂಡಿದೆ. ಏಕಾಏಕಿ ಸ್ಥಗಿತಗೊಳ್ಳಲು ಕಾರಣವೇನು ತಿಳಿಯಿರಿ

Read Full Story

09:57 AM (IST) May 07

ಗೋಡೆಗೆ ಡ್ರಿಲ್ ಮಾಡದೆ 30 ಸೆಕೆಂಡ್‌ನಲ್ಲಿ ಶೆಲ್ಫ್ ಹಾಕಿ, ಮನೆಗೆ ಮಾಡರ್ನ್ ಲುಕ್ ನೀಡಿ

ಮನೆಯ ಗೋಡೆಗಳಿಗೆ ಯಾವುದೇ ಹಾನಿ ಮಾಡದೆ, ಸುಂದರವಾದ ಶೆಲ್ಫ್‌ಗಳನ್ನು ಅಳವಡಿಸಲು ನೀವು ಬಯಸುವಿರಾ? ಹಾಗಿದ್ದರೆ, ನಾವು ನಿಮಗಾಗಿ ಕೆಲವು ಆಯ್ಕೆಗಳನ್ನು ಇಲ್ಲಿ ನೀಡುತ್ತಿದ್ದೇವೆ. ಇವುಗಳನ್ನು ನೀವು ಲಿವಿಂಗ್ ರೂಮ್‌ನಿಂದ ಹಿಡಿದು ಬಾತ್‌ರೂಮ್‌ವರೆಗೆ ಎಲ್ಲಿ ಬೇಕಾದರೂ ಗೋಡೆಗೆ ತೂತು ಮಾಡದೆಯೇ ಅಳವಡಿಸಬಹುದು.

Read Full Story

09:32 AM (IST) May 07

ಏಡ್ಸ್‌ ಪೀಡಿತನ ವಿಚ್ಛೇದನ ಆದೇಶ ಹೈಕೋರ್ಟಲ್ಲಿ ರದ್ದು ! ಏನಿದು ಪ್ರಕರಣ?

ತಾನು ಎಚ್‌ಐವಿ/ಏಡ್ಸ್‌ನಿಂದ ಬಳಲುತ್ತಿದ್ದೇನೆ ಎಂದು ಪತ್ನಿ ಮತ್ತು ಆಕೆಯ ಕುಟುಂಬದವರು ನಿಂದಿಸಿದ್ದಾರೆ ಎಂಬ ಪತಿಯ ಆರೋಪದ ಮೇಲೆ ಕೌಟುಂಬಿಕ ನ್ಯಾಯಾಲಯ ನೀಡಿದ್ದ ವಿಚ್ಛೇದನ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಏನಿದು ಪ್ರಕರಣ?

Read Full Story

09:24 AM (IST) May 07

ಬೆಂಗಳೂರು ವಿಮಾನ ನಿಲ್ದಾಣ ಈಗ ಮತ್ತಷ್ಟು ಸ್ಮಾರ್ಟ್‌, ಅಪಘಾತ ತಡೆಗೆ ಅತ್ಯಾಧುನಿಕ ಸುರಕ್ಷತಾ ವ್ಯವಸ್ಥೆ ಜಾರಿ

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು (ಕೆಐಎ) ಏರ್‌ಸೈಡ್ ಪ್ರದೇಶದ ಸುರಕ್ಷತೆಯನ್ನು ಹೆಚ್ಚಿಸಲು ಕೃತಕ ಬುದ್ಧಿಮತ್ತೆ ಆಧಾರಿತ 'ಸ್ಮಾರ್ಟ್ ಏರ್‌ಸೈಡ್ ಸೇಫ್ಟಿ ಸಿಸ್ಟಂ' ಅನ್ನು ಜಾರಿಗೆ ತಂದಿದೆ. ಈ ಹೊಸ ವ್ಯವಸ್ಥೆಯು ಕಂಪ್ಯೂಟರ್ ವಿಷನ್ ತಂತ್ರಜ್ಞಾನ ಬಳಸಿ ವಾಹನಗಳ ಚಲನವಲನವನ್ನು ಮೇಲ್ವಿಚಾರಣೆ ಮಾಡುತ್ತದೆ, ಮಾನವ ಸಹಜ ತಪ್ಪುಗಳನ್ನು ಕಡಿಮೆ ಮಾಡಿ ಕಾರ್ಯಾಚರಣೆಯ ದಕ್ಷತೆಯನ್ನು ಹೆಚ್ಚಿಸುತ್ತದೆ.
Read Full Story

08:44 AM (IST) May 07

Nirmala Sitharaman deepfake video scam - ವಿತ್ತ ಸಚಿವೆ ನಿರ್ಮಲಾ ಹೆಸರಲ್ಲಿ ವೃದ್ಧನಿಗೆ 7.9 ಲಕ್ಷ ರು. ವಂಚನೆ

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಡೀಪ್‌ಫೇಕ್ ವಿಡಿಯೋ ಬಳಸಿ ಷೇರು ಮಾರುಕಟ್ಟೆ ಹೂಡಿಕೆಯ ಆಮಿಷವೊಡ್ಡಿ, ಬೆಳಗಾವಿಯ ಹಿರಿಯ ನಾಗರಿಕರೊಬ್ಬರಿಗೆ ವಂಚಕರು 7.9 ಲಕ್ಷ ರೂಪಾಯಿ ವಂಚಿಸಿದ್ದಾರೆ. ಈ ಸಂಬಂಧ ಇಬ್ಬರು ಆರೋಪಿಗಳ ವಿರುದ್ಧ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read Full Story

08:25 AM (IST) May 07

BS Yadiyurappa - ಜನಪರ ಕಾಯಕ, ದಣಿವರಿಯದ ನಾಯಕ ಬಿಎಸ್‌ವೈ

ನಾಲ್ಕು ಬಾರಿ ಮುಖ್ಯಮಂತ್ರಿಯಾದ ಬಿ.ಎಸ್. ಯಡಿಯೂರಪ್ಪನವರ ರಾಜಕೀಯ ಜೀವನ, ಅವರ 'ಸರ್ವರಿಗೂ ಸಮಪಾಲು-ಸರ್ವರಿಗೂ ಸಮಬಾಳು' ತತ್ವ ಮತ್ತು ವಿಶಿಷ್ಟ ಆಡಳಿತ ಶೈಲಿಯನ್ನು ಈ ಲೇಖನ ವಿವರಿಸುತ್ತದೆ. ಅವರ ಹೋರಾಟದ ಹಾದಿ, ಭಾಗ್ಯಲಕ್ಷ್ಮಿ ಬಾಂಡ್‌ನಂತಹ ಜನಪರ ಯೋಜನೆಗಳು ಮತ್ತು ಆಡಳಿತ ಅವರ ನಾಯಕತ್ವಕ್ಕೆ ಹಿಡಿದ ಕನ್ನಡಿ

Read Full Story

08:03 AM (IST) May 07

Interview | ತಾಪಮಾನ ಹೆಚ್ಚಳಕ್ಕೆ ಎಲ್‌ನಿನೋ ಅಷ್ಟೇ ಹೊಣೆ ಅಲ್ಲ; ಪರಿಸರ ವಿಜ್ಞಾನಿ ಟಿ.ವಿ. ರಾಮಚಂದ್ರ ಹೇಳಿದ್ದೇನು?

ಪರಿಸರ ವಿಜ್ಞಾನಿ ಟಿ.ವಿ. ರಾಮಚಂದ್ರ ಅವರು, ರಾಜ್ಯದಲ್ಲಿನ ತೀವ್ರ ತಾಪಮಾನ ಏರಿಕೆಗೆ ಹವಾಮಾನ ವೈಪರೀತ್ಯ, ಜಲಮೂಲಗಳ ನಾಶ ಹಾಗೂ ಎಲ್‌ನಿನೋ ದುಷ್ಪರಿಣಾಮವೇ ಕಾರಣ ಎಂದು ವಿಶ್ಲೇಷಿಸಿದ್ದಾರೆ. ಕೆರೆಗಳ ಪುನಶ್ಚೇತನ, ಹಸಿರು ಹೊದಿಕೆ ಹೆಚ್ಚಳದಂತಹ ಕ್ರಮಗಳನ್ನು ಕೈಗೊಳ್ಳುಂತೆ ತಿಳಿಸಿದ್ದಾರೆ.

Read Full Story

08:02 AM (IST) May 07

ಬೆಂಗಳೂರಿನಿಂದ ವಿಜಯಪುರಕ್ಕೆ ವಂದೇ ಭಾರತ್ ಎಕ್ಸ್‌ಪ್ರೆಸ್ ಯಾವಾಗ? ಸಂಸದರ ಉತ್ತರ ಏನು?

ಬೆಂಗಳೂರಿನಿಂದ ವಿಜಯಪುರಕ್ಕೆ ವಂದೇ ಭಾರತ್ ಎಕ್ಸ್‌ಪ್ರೆಸ್ ಸಂಚಾರ ವಿಳಂಬವಾಗಲು ಕಾರಣವನ್ನು ಸಂಸದ ರಮೇಶ್ ಜಿಗಜಿಣಗಿ ವಿವರಿಸಿದ್ದಾರೆ. . ಯಾವುದೇ ರೀತಿಯ ತಪ್ಪು ಗ್ರಹಿಕೆಗೆ ಅಂಟಿಕೊಳ್ಳದೇ ರೈಲಿನ ಕುರಿತ ಅಪಪ್ರಚಾರ ಮಾಡಬಾರದು ಎಂದು ಸಂಸದ ರಮೇಶ ಜಿಗಜಿಣಗಿ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

Read Full Story

07:49 AM (IST) May 07

ಹೊಸಪೇಟೆ ಮಾರ್ಗವಾಗಿ ಚಲಿಸುವ ಯಶವಂತಪುರ-ವಿಜಯಪುರ ರೈಲು ಪ್ರಯಾಣಿಕರಿಗೆ ಸಂತಸದ ಸುದ್ದಿ

ಯಶವಂತಪುರ-ವಿಜಯಪುರ ಮತ್ತು ಯಶವಂತಪುರ-ಸಿಂಧನೂರು ಎಕ್ಸ್‌ಪ್ರೆಸ್ ರೈಲುಗಳಿಗೆ ಹೆಚ್ಚುತ್ತಿರುವ ಪ್ರಯಾಣಿಕರ ದಟ್ಟಣೆ ನಿಭಾಯಿಸಲು ಹೆಚ್ಚುವರಿ ಕೋಚ್‌ಗಳನ್ನು ಅಳವಡಿಸಲಾಗುತ್ತಿದೆ. ಮೇ 8 ರಿಂದ ಜಾರಿಗೆ ಬರುವ ಈ ಸೌಲಭ್ಯದಲ್ಲಿ ಮೂರನೇ ದರ್ಜೆ ಎ.ಸಿ, ಸ್ಲೀಪರ್ ಹಾಗೂ ಸಾಮಾನ್ಯ ದರ್ಜೆಯ ಬೋಗಿಗಳು ಸೇರಲಿವೆ.
Read Full Story

07:39 AM (IST) May 07

IPL Final match - ಶಾಸಕರ ಟಿಕೆಟ್‌ಗೂ ಐಪಿಎಲ್‌ ಸ್ಥಳಾಂತರಕ್ಕೂ ನಂಟಿಲ್ಲ; ದೊಡ್ಡ ಸ್ಟೇಡಿಯಂ ಇದೆ ಅಂತ ಗುಜರಾತಿಗೆ ಶಿಫ್ಟ್‌ - ಡಿಕೆಶಿ

ಶಾಸಕರಿಗೆ ಐಪಿಎಲ್‌ ಉಚಿತ ಟಿಕೆಟ್‌ ವಿತರಣೆಗೂ, ಐಪಿಎಲ್‌ ಅಂತಿಮ ಪಂದ್ಯ ಬೆಂಗಳೂರಿನಿಂದ ಸ್ಥಳಾಂತರಕ್ಕೂ ಸಂಬಂಧವಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಅಹಮದಾಬಾದ್‌ನಲ್ಲಿ ದೊಡ್ಡ ಕ್ರೀಡಾಂಗಣವಿದ್ದು, ಹೆಚ್ಚು ಜನ ಸೇರುತ್ತಾರೆಂಬ ಕಾರಣಕ್ಕೆ ಸ್ಥಳಾಂತರಿಸಲಾಗಿದೆ ಎಂದು ಸ್ಪಷ್ಟನೆ.

Read Full Story

07:24 AM (IST) May 07

ಗ್ರಾಮದೇವಿ ಜಾತ್ರಾ ಉತ್ಸವಕ್ಕೆ 2 ದಿನದಲ್ಲಿ 50 ಟನ್ ಭಂಡಾರ ಪೂರೈಕೆ; ಇಡೀ ಊರು ಭಂಡಾರಮಯ

ಸವದತ್ತಿ ಪಟ್ಟಣದಲ್ಲಿ ಗ್ರಾಮದೇವಿ ಜಾತ್ರೆಯ ಸಂಭ್ರಮ ಹೆಚ್ಚಾಗಿದ್ದು, ದೇವಿಯರನ್ನು ಕಟ್ಟೆಯ ಮೇಲೆ ಪ್ರತಿಷ್ಠಾಪಿಸಿದ ನಂತರ ಸಾಂಪ್ರದಾಯಿಕ ಪೂಜೆಗಳು ಆರಂಭವಾಗಿವೆ. ಮಂಗಳವಾರ, ದೇವಿಯರು ಗೌಡರು, ಕುಲಕರ್ಣಿಗಳು ಸೇರಿದಂತೆ 16 ಮನೆತನಗಳಿಂದ ಉಡಿ ತುಂಬಿಸಿಕೊಂಡಿದ್ದು, ಊರೆಲ್ಲಾ 50 ಟನ್‌ಗೂ ಅಧಿಕ ಭಂಡಾರದಿಂದ ಹಳದಿಮಯವಾಗಿದೆ.

Read Full Story

07:23 AM (IST) May 07

ಪಿಯು ಪರೀಕ್ಷಾ ವೆಚ್ಚ ಪಾವತಿಗೆ ಸರ್ಕಾರ 81.20 ಕೋಟಿ ರು. ಬಿಡುಗಡೆ | ಪ್ರೌಢಶಾಲಾ ಶಿಕ್ಷಕರ ಬಡ್ತಿಗಾಗಿ ಅರ್ಹತಾ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

Karnataka 2nd PUC exam funds ದ್ವಿತೀಯ ಪಿಯುಸಿ ಪರೀಕ್ಷಾ ವೆಚ್ಚಗಳಿಗಾಗಿ ರಾಜ್ಯ ಸರ್ಕಾರ 81.20 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ. ಅಲ್ಲದೆ, ಪ್ರೌಢಶಾಲಾ ಶಿಕ್ಷಕರನ್ನು ಪಿಯು ಕಾಲೇಜು ಉಪನ್ಯಾಸಕರನ್ನಾಗಿ ಬಡ್ತಿ ನೀಡುವ ಅರ್ಹತಾ ಪರೀಕ್ಷೆಯನ್ನು ಮೇ 26 ರಿಂದ ನಡೆಸಲು ತೀರ್ಮಾನಿಸಲಾಗಿದೆ.

Read Full Story

More Trending News