LIVE NOW
Published : May 07, 2026, 07:01 AM ISTUpdated : May 07, 2026, 08:44 AM IST

Karnataka News Live: Nirmala Sitharaman deepfake video scam - ವಿತ್ತ ಸಚಿವೆ ನಿರ್ಮಲಾ ಹೆಸರಲ್ಲಿ ವೃದ್ಧನಿಗೆ 7.9 ಲಕ್ಷ ರು. ವಂಚನೆ

ಸಾರಾಂಶ

ತೆಕ್ಕಲಕೋಟೆ (ಬಳ್ಳಾರಿ): 6ರಿಂದ 7ನೇ ಶತಮಾನಕ್ಕೆ ಸೇರಿದ ಅಪ್ರಕಟಿತ ಬಂಡೆಗಲ್ಲು ಶಾಸನವೊಂದು ಬಳ್ಳಾರಿ ಜಿಲ್ಲೆ ಸಿರಗುಪ್ಪ ತಾಲೂಕಿನ ತೆಕ್ಕಲಕೋಟೆಯ ನಿಟ್ಟೂರಿನ ಹೊಲದಲ್ಲಿ ಪತ್ತೆಯಾಗಿದೆ.

ನಿಟ್ಟೂರಿನಲ್ಲಿರುವ ಅಶೋಕನ ಶಿಲಾಶಾಸನ ಪತ್ತೆ ಆದ ಸ್ಥಳದಿಂದ 1 ಕಿ.ಮೀ. ದೂರದಲ್ಲಿರುವ ಬಂಡೆಗಲ್ಲು ಶಾಸನವನ್ನು ಸಂಶೋಧನಾರ್ಥಿಗಳಾದ ಅಶೋಕ್ ಅಬಕಾರಿ, ಮನೋಹರ ಗುರುತಿಸಿ, ಕ್ಷೇತ್ರ ಅಧ್ಯಯನಕ್ಕೆ ಧಾರವಾಡದ ಲಿಪಿತಜ್ಞ ಮಾರುತಿ ಭಜಂತ್ರಿ, ಹಿರೇಬೆಣಕಲ್ ಮಂಜುನಾಥ ದೊಡ್ಡಮನಿ ಗಮನಕ್ಕೆ ತಂದರು. ಶಾಸನವು ಬೃಹತ್ ಆಕಾರದ ಬಂಡೆಯೊಂದರ ಮೇಲೆ ಪ್ರಾಚೀನ ಲಿಪಿಯಲ್ಲಿ ಬರೆಯಲ್ಪಟ್ಟಿದ್ದು, ಶಾಸನವು ಸುಮಾರು ಏಳುಸಾಲುಗಳನ್ನು ಒಳಗೊಂಡಿದೆ. ಮೌರ್ಯರ ಆಳ್ವಿಕೆಯನ್ನು ಒಳಗೊಂಡಿರುವ ಪ್ರದೇಶವೆಂದು ಗುರುತಿಸಲಾಗಿತ್ತು. ಸದ್ಯ ಪತ್ತೆಯಾಗಿರುವ ಶಾಸನದ ಲಿಪಿಯ ಆಧಾರದಲ್ಲಿ ಸುಮಾರು 6ರಿಂದ 7ನೇ ಶತಮಾನದ ಬಾದಾಮಿ ಚಾಲುಕ್ಯರ ಕಾಲದಿಂದ ರಾಷ್ಟ್ರಕೂಟರ ಕಾಲಘಟ್ಟಕ್ಕೆ ಸೇರಿದ್ದೆಂದು ಅಂದಾಜಿಸಲಾಗಿದೆ.

 

08:44 AM (IST) May 07

Nirmala Sitharaman deepfake video scam - ವಿತ್ತ ಸಚಿವೆ ನಿರ್ಮಲಾ ಹೆಸರಲ್ಲಿ ವೃದ್ಧನಿಗೆ 7.9 ಲಕ್ಷ ರು. ವಂಚನೆ

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಡೀಪ್‌ಫೇಕ್ ವಿಡಿಯೋ ಬಳಸಿ ಷೇರು ಮಾರುಕಟ್ಟೆ ಹೂಡಿಕೆಯ ಆಮಿಷವೊಡ್ಡಿ, ಬೆಳಗಾವಿಯ ಹಿರಿಯ ನಾಗರಿಕರೊಬ್ಬರಿಗೆ ವಂಚಕರು 7.9 ಲಕ್ಷ ರೂಪಾಯಿ ವಂಚಿಸಿದ್ದಾರೆ. ಈ ಸಂಬಂಧ ಇಬ್ಬರು ಆರೋಪಿಗಳ ವಿರುದ್ಧ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read Full Story

08:25 AM (IST) May 07

BS Yadiyurappa - ಜನಪರ ಕಾಯಕ, ದಣಿವರಿಯದ ನಾಯಕ ಬಿಎಸ್‌ವೈ

ನಾಲ್ಕು ಬಾರಿ ಮುಖ್ಯಮಂತ್ರಿಯಾದ ಬಿ.ಎಸ್. ಯಡಿಯೂರಪ್ಪನವರ ರಾಜಕೀಯ ಜೀವನ, ಅವರ 'ಸರ್ವರಿಗೂ ಸಮಪಾಲು-ಸರ್ವರಿಗೂ ಸಮಬಾಳು' ತತ್ವ ಮತ್ತು ವಿಶಿಷ್ಟ ಆಡಳಿತ ಶೈಲಿಯನ್ನು ಈ ಲೇಖನ ವಿವರಿಸುತ್ತದೆ. ಅವರ ಹೋರಾಟದ ಹಾದಿ, ಭಾಗ್ಯಲಕ್ಷ್ಮಿ ಬಾಂಡ್‌ನಂತಹ ಜನಪರ ಯೋಜನೆಗಳು ಮತ್ತು ಆಡಳಿತ ಅವರ ನಾಯಕತ್ವಕ್ಕೆ ಹಿಡಿದ ಕನ್ನಡಿ

Read Full Story

08:03 AM (IST) May 07

Interview | ತಾಪಮಾನ ಹೆಚ್ಚಳಕ್ಕೆ ಎಲ್‌ನಿನೋ ಅಷ್ಟೇ ಹೊಣೆ ಅಲ್ಲ; ಪರಿಸರ ವಿಜ್ಞಾನಿ ಟಿ.ವಿ. ರಾಮಚಂದ್ರ ಹೇಳಿದ್ದೇನು?

ಪರಿಸರ ವಿಜ್ಞಾನಿ ಟಿ.ವಿ. ರಾಮಚಂದ್ರ ಅವರು, ರಾಜ್ಯದಲ್ಲಿನ ತೀವ್ರ ತಾಪಮಾನ ಏರಿಕೆಗೆ ಹವಾಮಾನ ವೈಪರೀತ್ಯ, ಜಲಮೂಲಗಳ ನಾಶ ಹಾಗೂ ಎಲ್‌ನಿನೋ ದುಷ್ಪರಿಣಾಮವೇ ಕಾರಣ ಎಂದು ವಿಶ್ಲೇಷಿಸಿದ್ದಾರೆ. ಕೆರೆಗಳ ಪುನಶ್ಚೇತನ, ಹಸಿರು ಹೊದಿಕೆ ಹೆಚ್ಚಳದಂತಹ ಕ್ರಮಗಳನ್ನು ಕೈಗೊಳ್ಳುಂತೆ ತಿಳಿಸಿದ್ದಾರೆ.

Read Full Story

08:02 AM (IST) May 07

ಬೆಂಗಳೂರಿನಿಂದ ವಿಜಯಪುರಕ್ಕೆ ವಂದೇ ಭಾರತ್ ಎಕ್ಸ್‌ಪ್ರೆಸ್ ಯಾವಾಗ? ಸಂಸದರ ಉತ್ತರ ಏನು?

ಬೆಂಗಳೂರಿನಿಂದ ವಿಜಯಪುರಕ್ಕೆ ವಂದೇ ಭಾರತ್ ಎಕ್ಸ್‌ಪ್ರೆಸ್ ಸಂಚಾರ ವಿಳಂಬವಾಗಲು ಕಾರಣವನ್ನು ಸಂಸದ ರಮೇಶ್ ಜಿಗಜಿಣಗಿ ವಿವರಿಸಿದ್ದಾರೆ. . ಯಾವುದೇ ರೀತಿಯ ತಪ್ಪು ಗ್ರಹಿಕೆಗೆ ಅಂಟಿಕೊಳ್ಳದೇ ರೈಲಿನ ಕುರಿತ ಅಪಪ್ರಚಾರ ಮಾಡಬಾರದು ಎಂದು ಸಂಸದ ರಮೇಶ ಜಿಗಜಿಣಗಿ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

Read Full Story

07:49 AM (IST) May 07

ಹೊಸಪೇಟೆ ಮಾರ್ಗವಾಗಿ ಚಲಿಸುವ ಯಶವಂತಪುರ-ವಿಜಯಪುರ ರೈಲು ಪ್ರಯಾಣಿಕರಿಗೆ ಸಂತಸದ ಸುದ್ದಿ

ಯಶವಂತಪುರ-ವಿಜಯಪುರ ಮತ್ತು ಯಶವಂತಪುರ-ಸಿಂಧನೂರು ಎಕ್ಸ್‌ಪ್ರೆಸ್ ರೈಲುಗಳಿಗೆ ಹೆಚ್ಚುತ್ತಿರುವ ಪ್ರಯಾಣಿಕರ ದಟ್ಟಣೆ ನಿಭಾಯಿಸಲು ಹೆಚ್ಚುವರಿ ಕೋಚ್‌ಗಳನ್ನು ಅಳವಡಿಸಲಾಗುತ್ತಿದೆ. ಮೇ 8 ರಿಂದ ಜಾರಿಗೆ ಬರುವ ಈ ಸೌಲಭ್ಯದಲ್ಲಿ ಮೂರನೇ ದರ್ಜೆ ಎ.ಸಿ, ಸ್ಲೀಪರ್ ಹಾಗೂ ಸಾಮಾನ್ಯ ದರ್ಜೆಯ ಬೋಗಿಗಳು ಸೇರಲಿವೆ.
Read Full Story

07:39 AM (IST) May 07

IPL Final match - ಶಾಸಕರ ಟಿಕೆಟ್‌ಗೂ ಐಪಿಎಲ್‌ ಸ್ಥಳಾಂತರಕ್ಕೂ ನಂಟಿಲ್ಲ; ದೊಡ್ಡ ಸ್ಟೇಡಿಯಂ ಇದೆ ಅಂತ ಗುಜರಾತಿಗೆ ಶಿಫ್ಟ್‌ - ಡಿಕೆಶಿ

ಶಾಸಕರಿಗೆ ಐಪಿಎಲ್‌ ಉಚಿತ ಟಿಕೆಟ್‌ ವಿತರಣೆಗೂ, ಐಪಿಎಲ್‌ ಅಂತಿಮ ಪಂದ್ಯ ಬೆಂಗಳೂರಿನಿಂದ ಸ್ಥಳಾಂತರಕ್ಕೂ ಸಂಬಂಧವಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಅಹಮದಾಬಾದ್‌ನಲ್ಲಿ ದೊಡ್ಡ ಕ್ರೀಡಾಂಗಣವಿದ್ದು, ಹೆಚ್ಚು ಜನ ಸೇರುತ್ತಾರೆಂಬ ಕಾರಣಕ್ಕೆ ಸ್ಥಳಾಂತರಿಸಲಾಗಿದೆ ಎಂದು ಸ್ಪಷ್ಟನೆ.

Read Full Story

07:24 AM (IST) May 07

ಗ್ರಾಮದೇವಿ ಜಾತ್ರಾ ಉತ್ಸವಕ್ಕೆ 2 ದಿನದಲ್ಲಿ 50 ಟನ್ ಭಂಡಾರ ಪೂರೈಕೆ; ಇಡೀ ಊರು ಭಂಡಾರಮಯ

ಸವದತ್ತಿ ಪಟ್ಟಣದಲ್ಲಿ ಗ್ರಾಮದೇವಿ ಜಾತ್ರೆಯ ಸಂಭ್ರಮ ಹೆಚ್ಚಾಗಿದ್ದು, ದೇವಿಯರನ್ನು ಕಟ್ಟೆಯ ಮೇಲೆ ಪ್ರತಿಷ್ಠಾಪಿಸಿದ ನಂತರ ಸಾಂಪ್ರದಾಯಿಕ ಪೂಜೆಗಳು ಆರಂಭವಾಗಿವೆ. ಮಂಗಳವಾರ, ದೇವಿಯರು ಗೌಡರು, ಕುಲಕರ್ಣಿಗಳು ಸೇರಿದಂತೆ 16 ಮನೆತನಗಳಿಂದ ಉಡಿ ತುಂಬಿಸಿಕೊಂಡಿದ್ದು, ಊರೆಲ್ಲಾ 50 ಟನ್‌ಗೂ ಅಧಿಕ ಭಂಡಾರದಿಂದ ಹಳದಿಮಯವಾಗಿದೆ.

Read Full Story

07:23 AM (IST) May 07

ಪಿಯು ಪರೀಕ್ಷಾ ವೆಚ್ಚ ಪಾವತಿಗೆ ಸರ್ಕಾರ 81.20 ಕೋಟಿ ರು. ಬಿಡುಗಡೆ | ಪ್ರೌಢಶಾಲಾ ಶಿಕ್ಷಕರ ಬಡ್ತಿಗಾಗಿ ಅರ್ಹತಾ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

Karnataka 2nd PUC exam funds ದ್ವಿತೀಯ ಪಿಯುಸಿ ಪರೀಕ್ಷಾ ವೆಚ್ಚಗಳಿಗಾಗಿ ರಾಜ್ಯ ಸರ್ಕಾರ 81.20 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ. ಅಲ್ಲದೆ, ಪ್ರೌಢಶಾಲಾ ಶಿಕ್ಷಕರನ್ನು ಪಿಯು ಕಾಲೇಜು ಉಪನ್ಯಾಸಕರನ್ನಾಗಿ ಬಡ್ತಿ ನೀಡುವ ಅರ್ಹತಾ ಪರೀಕ್ಷೆಯನ್ನು ಮೇ 26 ರಿಂದ ನಡೆಸಲು ತೀರ್ಮಾನಿಸಲಾಗಿದೆ.

Read Full Story

More Trending News