LIVE NOW
Published : Jul 08, 2026, 06:57 AM ISTUpdated : Jul 08, 2026, 10:19 AM IST

Karnataka News Live: ಚಾರ್ಮಾಡಿ ಘಾಟಿಯಲ್ಲಿ ಲಘು ಭೂಕುಸಿತ, ದಟ್ಟ ಮಂಜಿನಲ್ಲಿ ರಸ್ತೆ ಸರಿಯಾಗಿ ಕಾಣಿಸದೆ ಪಲ್ಟಿಯಾದ ಕಾರು!

ಸಾರಾಂಶ

ಮೈಸೂರು: ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯರನ್ನು ಕಡೆಗಣಿಸುವ ಪ್ರಶ್ನೆಯೇ ಇಲ್ಲ. ಬ್ಯಾನರ್ ಹಾಕಿಲ್ಲ, ಪೋಸ್ಟರ್ ಹಾಕಿಲ್ಲ ಅನ್ನೋ ವಿಚಾರಕ್ಕೆ ನಮ್ಮ ತಂದೆ ತಲೆ ಕೆಡಿಸಿಕೊಳ್ಳೋವುದಿಲ್ಲ ಎಂದು ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಮಂಗಳವಾರ ಸುದ್ದಿಗಾರರೊಂದಿಗೆ ನಗರಾಭಿವೃದ್ಧಿ ಸಚಿವ ಸ್ಥಾನದಿಂದ ತಮ್ಮನ್ನು ಕೈಬಿಡಬೇಕೆಂಬ ವಿಚಾರ ಕುರಿತು ಪ್ರತಿಕ್ರಿಯಿಸಿ, ಈಗಾಗಲೇ ಈ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದೇನೆ. ಮುಡಾ ಕೇಸ್ ಸಂಬಂಧ ಲೋಕಾಯುಕ್ತದಿಂದ ಸಂಪೂರ್ಣ ತನಿಖೆ ಆಗಿದೆ. ತನಿಖೆ ರಿಪೋರ್ಟ್ ಕೂಡ ಸಲ್ಲಿಸಲಾಗಿದೆ. ಜನಪ್ರತಿನಿಧಿಗಳ ನ್ಯಾಯಾಲಯವೂ ಇದನ್ನು ಒಪ್ಪಿದೆ. ಆದರೂ ಹೈಯರ್ ಅಪೀಲ್ ಹೋಗಿದ್ದಾರೆ. ತನಿಖೆ ಪೂರ್ಣಗೊಂಡಿರುವುದರಿಂದ ನಾವು ಪ್ರಭಾವ ಬೀರಲು ಸಾಧ್ಯವಿಲ್ಲ. ಇವರು ಮಾಡುತ್ತಿರುವ ಆರೋಪ ಸತ್ಯಕ್ಕೆ ದೂರವಾದದ್ದು ಎಂದು ಹೇಳಿದರು.

 

10:19 AM (IST) Jul 08

ಚಾರ್ಮಾಡಿ ಘಾಟಿಯಲ್ಲಿ ಲಘು ಭೂಕುಸಿತ, ದಟ್ಟ ಮಂಜಿನಲ್ಲಿ ರಸ್ತೆ ಸರಿಯಾಗಿ ಕಾಣಿಸದೆ ಪಲ್ಟಿಯಾದ ಕಾರು!

ಮುಂಗಾರು ಮಳೆಗೆ ಚಾರ್ಮಾಡಿ ಘಾಟಿಯು ಹಸಿರಿನಿಂದ ಕಂಗೊಳಿಸುತ್ತಿದ್ದು, ಮೈದುಂಬಿ ಹರಿಯುವ ಜಲಪಾತಗಳು ಮತ್ತು ದಟ್ಟ ಮಂಜು ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಆದರೆ, ಅಲ್ಲಲ್ಲಿ ಸಂಭವಿಸುತ್ತಿರುವ ಲಘು ಗುಡ್ಡ ಕುಸಿತ ಈ ಮಾರ್ಗದಲ್ಲಿ ಸಂಚರಿಸುವಾಗ ಸುರಕ್ಷತಾ ಕ್ರಮಗಳನ್ನು ಪಾಲಿಸುವುದು ಅತ್ಯಗತ್ಯವಾಗಿದೆ.

Read Full Story

09:16 AM (IST) Jul 08

ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ - ಗಂಟೆಗೆ 60 ಕಿ.ಮೀ ವೇಗದ ಬಿರುಗಾಳಿ, ಮುಂದಿನ 3 ದಿನಗಳು ನಿರ್ಣಾಯಕ!

ರಾಜ್ಯ ಹವಾಮಾನ ಇಲಾಖೆಯು ಮುಂದಿನ ಮೂರು ದಿನಗಳ ಕಾಲ ಕರ್ನಾಟಕದಲ್ಲಿ, ವಿಶೇಷವಾಗಿ ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಅತ್ಯಂತ ಭಾರೀ ಮಳೆಯಾಗುವ ಬಗ್ಗೆ ತೀವ್ರ ಎಚ್ಚರಿಕೆ ನೀಡಿದೆ. ಗಂಟೆಗೆ 60 ಕಿ.ಮೀ ವೇಗದ ಬಿರುಗಾಳಿ, ಭೂಕುಸಿತದ ಆತಂಕವಿದ್ದು, ಸಾರ್ವಜನಿಕರಿಗೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ.
Read Full Story

08:43 AM (IST) Jul 08

TB Dam - ರೈತರಿಗೆ ಶುಭ ಸುದ್ದಿ, ತುಂಗಭದ್ರೆಗೆ ಒಳಹರಿವು ಹೆಚ್ಚಳ! ಜಲಾಶಯದ ಇಂದಿನ ನೀರಿನ ಮಟ್ಟ ಎಷ್ಟು?

ಕಳೆದ ಎರಡು ದಿನಗಳಿಂದ ಮಲೆನಾಡು ಭಾಗದಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ, ಸೊರಗಿದ್ದ ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಇದರಿಂದಾಗಿ ಮುಂಗಾರು ಬೆಳೆ ಕೈತಪ್ಪುವ ಭೀತಿಯಲ್ಲಿದ್ದ ಬಳ್ಳಾರಿ, ಕೊಪ್ಪಳ, ರಾಯಚೂರು ಭಾಗದ ರೈತರಲ್ಲಿ ಹೊಸ ಭರವಸೆ ಮೂಡಿದ್ದು, ಕೃಷಿ ಚಟುವಟಿಕೆಗಳು ಚುರುಕುಗೊಂಡಿವೆ.
Read Full Story

08:35 AM (IST) Jul 08

ಬೆಂಗಳೂರು - ಫುಟ್‌ಪಾತ್ ತೆರವು ವಿರುದ್ಧ ರೊಚ್ಚಿಗೆದ್ದ ಬೀದಿಬದಿ ವ್ಯಾಪಾರಿಗಳು, ಬೃಹತ್ ಪ್ರತಿಭಟನೆ, ಬೇಡಿಕೆಗಳೇನು?

ಬೆಂಗಳೂರಿನಲ್ಲಿ ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆಯನ್ನು ವಿರೋಧಿಸಿ ಬೀದಿಬದಿ ವ್ಯಾಪಾರಿಗಳು ಜುಲೈ 8 ರಂದು ನಗರಾದ್ಯಂತ ಬಂದ್ ಆಚರಿಸಿ, ಸ್ವಾತಂತ್ರ್ಯ ಉದ್ಯಾನದಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ. ಸರ್ಕಾರದ ಈ ಕ್ರಮವು ಕಾನೂನುಬಾಹಿರವಾಗಿದ್ದು, ಪರ್ಯಾಯ ವ್ಯವಸ್ಥೆ ಕಲ್ಪಿಸುವವರೆಗೂ ವ್ಯಾಪಾರಕ್ಕೆ ಅವಕಾಶ ನೀಡಬೇಕೆಂದು ಒತ್ತಾಯಿಸಿ, 13 ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ.
Read Full Story

08:35 AM (IST) Jul 08

ಸತ್ಯಶೋಧಕ್ಕೆ ಮುಂದಾದ ಡಾಕ್ಟರ್ ಕರ್ಣ ಈಗ ಡಿಟೆಕ್ಟಿವ್; ಅಪಘಾತ ಜನ್ಮರಹಸ್ಯ ಬಯಲಾಗುತ್ತಾ?

ಕರ್ಣ ಸೀರಿಯಲ್‌ನಲ್ಲಿ ಡಾಕ್ಟರ್ ಕರ್ಣ ಈಗ ಡಿಟೆಕ್ಟಿವ್ ಆಗಿ ಬದಲಾಗಿದ್ದಾರೆ. ಪತ್ನಿ ನಿಧಿಯ ತಂದೆ-ತಾಯಿಯ ಸಾವು ಅಪಘಾತವಲ್ಲ, ಕೊಲೆ ಎಂದು ತಿಳಿದು, ಹಳೆಯ ಕ್ಯಾಮೆರಾದ ಸಹಾಯದಿಂದ ಸತ್ಯಶೋಧಕ್ಕೆ ಮುಂದಾಗಿದ್ದಾರೆ. ಈ ತನಿಖೆಯು ಕರ್ಣನ ಜನ್ಮರಹಸ್ಯವನ್ನೂ ಬಯಲು ಮಾಡುವ ಹಾದಿಯಲ್ಲಿದೆ.
Read Full Story

08:13 AM (IST) Jul 08

'ಮೇಕೆದಾಟು ಯೋಜನೆ ರಹಸ್ಯವಾಗಿ ನಡೆಯುತ್ತಿದೆ..' ಸ್ಥಳ ಪರಿಶೀಲನೆ ಬಳಿಕ ತಮಿಳುನಾಡು ರೈತರ ನಿಯೋಗ ಗಂಭೀರ ಆರೋಪ!

ತಮಿಳುನಾಡು ರೈತಸಂಘದ ಅಧ್ಯಕ್ಷ ಪಿ.ಆರ್.ಪಾಂಡಿಯನ್ ನೇತೃತ್ವದ ನಿಯೋಗವು ಉದ್ದೇಶಿತ ಮೇಕೆದಾಟು ಯೋಜನೆ ಸ್ಥಳಕ್ಕೆ ಭೇಟಿ ನೀಡಿ, ಕರ್ನಾಟಕ ಸರ್ಕಾರ ರಹಸ್ಯವಾಗಿ ಸರ್ವೆ ಕಾರ್ಯ ಆರಂಭಿಸಿದೆ ಎಂದು ಆರೋಪಿಸಿದೆ. 

Read Full Story

07:42 AM (IST) Jul 08

ರಾ.ಹೆ. 275ರ ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ 49.22 ಕೋಟಿ ರು. ಕೇಂದ್ರ ವಿಶೇಷ ಅನುದಾನ

ರಾ.ಹೆ. 275ರ ಮಾಣಿ-ಸಂಪಾಜೆ ಹೆದ್ದಾರಿಯ ದುರಸ್ತಿ ಕಾಮಗಾರಿಗೆ ಕೇಂದ್ರ ಸರ್ಕಾರವು 49.22 ಕೋಟಿ ರು.ಗಳ ವಿಶೇಷ ಅನುದಾನವನ್ನು ಮಂಜೂರು ಮಾಡಿದೆ. ಇದರೊಂದಿಗೆ, ಈ ಹೆದ್ದಾರಿಯನ್ನು ಚತುಷ್ಪಥವಾಗಿ ಮೇಲ್ದರ್ಜೆಗೇರಿಸುವ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ಪ್ರಕ್ರಿಯೆಯನ್ನು ತ್ವರಿತಗೊಳಿಸುವಂತೆ ಸಂಸದ ಬ್ರಿಜೇಶ್ ಚೌಟ ಅವರು ಹೆದ್ದಾರಿ ಸಚಿವಾಲಯವನ್ನು ಒತ್ತಾಯಿಸಿದ್ದಾರೆ.
Read Full Story

07:17 AM (IST) Jul 08

ರೈಲು ಇಂಜಿನ್ ಡಿಕ್ಕಿ - ಪತ್ನಿಯನ್ನ ಸುರಕ್ಷಿತ ಸ್ಥಳಕ್ಕೆ ತಳ್ಳಿ ಸೇತುವೆಯಿಂದ ಬಿದ್ದು ವ್ಯಕ್ತಿ ಸಾವು

ಕೊಪ್ಪಳ ತಾಲೂಕಿನ ಹುಲಿಗಿಯಲ್ಲಿ, ರೈಲು ಇಂಜಿನ್ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ತುಂಗಭದ್ರಾ ರೈಲು ಸೇತುವೆಯಿಂದ ಕೆಳಗೆ ಬಿದ್ದು ಸಾವನ್ನಪ್ಪಿದ್ದಾರೆ. ಪತ್ನಿಯೊಂದಿಗೆ ಧಾರ್ಮಿಕ ಕಾರ್ಯಕ್ರಮಕ್ಕೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಪತ್ನಿಯನ್ನು ಸುರಕ್ಷಿತ ಸ್ಥಳಕ್ಕೆ ತಳ್ಳಿ, ತಾನು ಪಾರಾಗುವ ಯತ್ನದಲ್ಲಿ ಇಂಜಿನ್ ಬಡಿದು ಮೃತಪಟ್ಟಿದ್ದಾರೆ.
Read Full Story

More Trending News