LIVE NOW
Published : Jun 08, 2026, 04:59 AM ISTUpdated : Jun 08, 2026, 08:04 AM IST

Karnataka News Live: ಎಸ್‌ಐಆರ್ ವೇಳೆ ಮತ ಹೋದರೆ ಯಾವ ಗ್ಯಾರಂಟಿಯೂ ಸಿಗಲ್ಲ - ಸಿಎಂ ಡಿಕೆ ಶಿವಕುಮಾರ್ ಎಚ್ಚರಿಕೆ

ಸಾರಾಂಶ

ಬೆಳಗಾವಿ: ರಾಜ್ಯ ಸಚಿವ ಸಂಪುಟದ ಎರಡನೇ ಹಂತದ ವಿಸ್ತರಣೆ ಶೀಘ್ರದಲ್ಲೇ ನಡೆಯಲಿದ್ದು, ಈ ತಿಂಗಳೊಳಗೆ ಸಚಿವ ಸಂಪುಟ ವಿಸ್ತರಣೆ ನಡೆದರೆ ಉತ್ತಮ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಅಭಿಪ್ರಾಯಪಟ್ಟರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟದಲ್ಲಿ ಇನ್ನೂ ಹಲವು ಸ್ಥಾನಗಳು ಖಾಲಿ ಇದ್ದು, ಅವುಗಳನ್ನು ಹೆಚ್ಚು ದಿನ ಖಾಲಿ ಇಡಲು ಸಾಧ್ಯವಿಲ್ಲ. ಪಕ್ಷದಲ್ಲಿ ಒಬ್ಬರಿಗೆ ಒಂದು ಹುದ್ದೆ ಎಂಬ ನೀತಿಯನ್ನು ಅನುಸರಿಸುವ ಪ್ರಯತ್ನ ನಡೆಯುತ್ತಿದ್ದು, ಕೆಪಿಸಿಸಿ ಅಧ್ಯಕ್ಷ ಸ್ಥಾನ ಮತ್ತು ಸಚಿವ ಸ್ಥಾನ ಎರಡನ್ನೂ ಒಬ್ಬರಿಗೆ ನೀಡುವ ಸಾಧ್ಯತೆ ಕಡಿಮೆ. ಪಕ್ಷದ ವರಿಷ್ಠರು ತೆಗೆದುಕೊಳ್ಳುವ ನಿರ್ಧಾರವನ್ನು ಎಲ್ಲರೂ ಒಪ್ಪಿಕೊಳ್ಳಬೇಕಾಗಿದೆ ಎಂದರು. ಇದೇ ವೇಳೆ ಬೆಳಗಾವಿ ಜಿಲ್ಲೆಗೆ ಮತ್ತಷ್ಟು ಸಚಿವ ಸ್ಥಾನಗಳು ದೊರೆಯುವ ವಿಶ್ವಾಸವಿದೆ ಎಂದರು.

ಮುಸ್ಲಿಂ ಸಮುದಾಯಕ್ಕೆ ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯ ನೀಡುವ ಕುರಿತು ಉತ್ತರಿಸಿದ ಅವರು, ಈ ಕುರಿತು ಪಕ್ಷದ ವರಿಷ್ಠರು ಸೂಕ್ತ ನಿರ್ಧಾರ ಕೈಗೊಳ್ಳಲಿದ್ದು, ಯಾವುದೇ ಸಮುದಾಯಕ್ಕೆ ಅನ್ಯಾಯವಾಗದಂತೆ ನೋಡಿಕೊಳ್ಳಲಾಗುವುದು ಎಂದರು. ಸಚಿವ ಸಂಪುಟ ವಿಸ್ತರಣೆ, ಖಾತೆ ಹಂಚಿಕೆ ಹಾಗೂ ಪಕ್ಷದ ಸಂಘಟನೆಗೆ ಸಂಬಂಧಿಸಿದ ಕೆಲವು ವಿಚಾರಗಳಲ್ಲಿ ಅಸಮಾಧಾನಗಳು ಸಹಜ. ಆದರೆ, ಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಅವುಗಳನ್ನು ಬಗೆಹರಿಸುವ ಶಕ್ತಿ ಸರ್ಕಾರಕ್ಕಿದೆ ಎಂದರು.

08:04 AM (IST) Jun 08

ಎಸ್‌ಐಆರ್ ವೇಳೆ ಮತ ಹೋದರೆ ಯಾವ ಗ್ಯಾರಂಟಿಯೂ ಸಿಗಲ್ಲ - ಸಿಎಂ ಡಿಕೆ ಶಿವಕುಮಾರ್ ಎಚ್ಚರಿಕೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮ್ಮ ಕ್ಷೇತ್ರ ಕನಕಪುರಕ್ಕೆ ಭೇಟಿ ನೀಡಿ, ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಬಗ್ಗೆ ಜನರಿಗೆ ಎಚ್ಚರಿಕೆ ನೀಡಿದ್ದಾರೆ. ಮತದಾರರ ಪಟ್ಟಿಯಲ್ಲಿ ಹೆಸರು ಕಳೆದುಕೊಂಡರೆ ಗೃಹಲಕ್ಷ್ಮೀ, ಗೃಹಜ್ಯೋತಿಯಂತಹ ಸರ್ಕಾರಿ ಗ್ಯಾರಂಟಿ ಯೋಜನೆಗಳ ಪ್ರಯೋಜನವೂ ಸಿಗುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
Read Full Story

07:41 AM (IST) Jun 08

ಕಾಂಗ್ರೆಸ್ ನಾಯಕ, ದೇವರಾಜ ಅರಸು ಮೊಮ್ಮಗ ಸೂರಜ್ ಹೆಗ್ಡೆ ನಿಧನ - ಸಿಎಂ ಡಿಕೆಶಿ ಸಂತಾಪ

ಎಐಸಿಸಿ ಕಾರ್ಯದರ್ಶಿ ಹಾಗೂ ದೇವರಾಜ ಅರಸು ಅವರ ಮೊಮ್ಮಗ ಸೂರಜ್ ಹೆಗ್ಡೆ (55) ಅವರು ಹಠಾತ್ ಹೃದಯಸ್ತಂಭನದಿಂದ ನಿಧನರಾಗಿದ್ದಾರೆ. ಅವರ ಅಕಾಲಿಕ ನಿಧನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಇದು ಪಕ್ಷಕ್ಕೆ ತುಂಬಲಾರದ ನಷ್ಟ ಎಂದು ಬಣ್ಣಿಸಿದ್ದಾರೆ.
Read Full Story

06:37 AM (IST) Jun 08

Raichur - ಕಾಯಿಪಲ್ಲೆ ಖರೀದಿ ನೆಪದಲ್ಲಿ ಬಂಡಾರ ಎರಚಿ ಹಣವನ್ನು ದೋಚಿದ ಸಾಧುವೇಷದ ಕದೀಮರು

ಮಸ್ಕಿ ಪಟ್ಟಣದಲ್ಲಿ ತರಕಾರಿ ಖರೀದಿಸುವ ನೆಪದಲ್ಲಿ ಬಂದ ಐವರ ಗ್ಯಾಂಗ್, ಅಂಗಡಿ ಮಾಲೀಕನ ಮೇಲೆ ಕುಂಕುಮ ಮತ್ತು ಬಂಡಾರ ಎರಚಿ ಮತ್ತು ಬರುವಂತೆ ಮಾಡಿದೆ. ನಂತರ ಗಲ್ಲಾಪೆಟ್ಟಿಗೆಯಲ್ಲಿದ್ದ 1 ಲಕ್ಷ ರೂಪಾಯಿ ನಗದನ್ನು ದೋಚಿ ಪರಾರಿಯಾಗಿದೆ. 

Read Full Story

06:09 AM (IST) Jun 08

ಮುಂಗಾರು ಚುರುಕು - 16ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಆರಂಭ, ಕೊಚ್ಚಿ ಹೋಯ್ತು ಹೆದ್ದಾರಿ

ರಾಜ್ಯದಲ್ಲಿ ಮುಂಗಾರು ಚುರುಕಾಗಿದ್ದು, 16ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಬಳ್ಳಾರಿಯಲ್ಲಿ ನೆರೆಗೆ ಮಹಿಳೆಯೊಬ್ಬರು ಬಲಿಯಾಗಿದ್ದು, ಹಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ ಮತ್ತು 8 ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.
Read Full Story

05:50 AM (IST) Jun 08

ಇಂದಿನಿಂದ ಮೂರು ದಿನ ರಾಜ್ಯದ ಈ 8 ಜಿಲ್ಲೆಗಳಲ್ಲಿ ಭಾರೀ ಮಳೆ; ರೆಡ್ ಅಲರ್ಟ್ ಘೋಷಣೆ

ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಜೂ.8 ರಿಂದ 10ರವರೆಗೆ ಕರಾವಳಿ, ದಕ್ಷಿಣ ಮತ್ತು ಉತ್ತರ ಒಳನಾಡಿನ ಎಂಟು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ರೆಡ್ ಅಲರ್ಟ್ ಘೋಷಿಸಿದ್ದು, ಪ್ರವಾಹ ಪರಿಸ್ಥಿತಿ ಎದುರಿಸಲು ಸಿದ್ಧವಾಗಿರಲು ಎಚ್ಚರಿಸಿದೆ. 

Read Full Story

05:41 AM (IST) Jun 08

ಬೆಂಗಳೂರು ಜೈಲಿನಲ್ಲಿ ಶಂಕಿತ ಉಗ್ರರ ಪುಂಡಾಟ; ಧರ್ಮದ ಪರ ಘೋಷಣೆ ಕೂಗಿ ಗದ್ದಲ, ಹಲ್ಲೆ ಯತ್ನ

ಪರಪ್ಪನ ಅಗ್ರಹಾರ ಜೈಲಿನಲ್ಲಿ, ಶಂಕಿತ ಉಗ್ರರು ಬೇರೆ ಕೈದಿಗಳ ಹೆಸರಿನಲ್ಲಿ ಚಿಕಿತ್ಸೆ ಪಡೆಯಲು ಯತ್ನಿಸಿದ್ದಾರೆ. ಇದನ್ನು ಪ್ರಶ್ನಿಸಿದ ವಾರ್ಡನ್‌ ಮೇಲೆ ಹಲ್ಲೆಗೆ ಯತ್ನಿಸಿ, ಧರ್ಮದ ಪರ ಘೋಷಣೆ ಕೂಗಿ ಗದ್ದಲ ಸೃಷ್ಟಿಸಿದ್ದಾರೆ. ಹಿರಿಯ ಅಧಿಕಾರಿಗಳು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ.
Read Full Story

05:36 AM (IST) Jun 08

ಕಾಂಗ್ರೆಸ್‌ನ ಸುರ್ಜೇವಾಲಾರಂಥ ಉಸ್ತುವಾರಿ ನಮಗೂ ಬೇಕು; ರಾಜ್ಯ ಬಿಜೆಪಿ ನಾಯಕರಲ್ಲಿ ತುಡಿತ

ಕಾಂಗ್ರೆಸ್‌ನಲ್ಲಿ ಅಧಿಕಾರ ಹಸ್ತಾಂತರ ಪ್ರಕ್ರಿಯೆಯನ್ನು ಯಶಸ್ವಿಯಾಗಿ ನಿಭಾಯಿಸಿದ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಅವರ ಕಾರ್ಯವೈಖರಿಗೆ ಬಿಜೆಪಿ ಪಾಳಯದಲ್ಲೂ ಮೆಚ್ಚುಗೆ ವ್ಯಕ್ತವಾಗಿದೆ. ಇದಕ್ಕೆ ಪ್ರತಿಯಾಗಿ, ತಮ್ಮ ಪಕ್ಷದಲ್ಲಿನ ರಾಜ್ಯಾಧ್ಯಕ್ಷರ ಗೊಂದಲ ಮತ್ತು ಆಂತರಿಕ ಬಿಕ್ಕಟ್ಟುಗಳನ್ನು ಬಗೆಹರಿಸಲು ವಿಫಲವಾಗಿರುವ ಬಿಜೆಪಿ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್‌ವಾಲ್  ಅಸಮಾಧಾನ ಹೆಚ್ಚುತ್ತಿದೆ.

Read Full Story

05:23 AM (IST) Jun 08

ಶಿವಾನಂದ ನೀಲಣ್ಣವರ ಪ್ರಕರಣ - ನಟಿ ಸನ್ನಿ ಲಿಯೋನ್‌ಗೆ ನೋಟಿಸ್, ಹಲವರಿಗೆ ಹಣ ವರ್ಗಾವಣೆ

ಅಧಿಕ ಲಾಭಾಂಶದ ಆಮಿಷವೊಡ್ಡಿ ಸಾವಿರಾರು ಜನರಿಗೆ ಕೋಟ್ಯಂತರ ರುಪಾಯಿ ವಂಚಿಸಿದ ಬೆಳಗಾವಿಯ ಶಿವಂ ಅಸೋಸಿಯೇಟ್ಸ್‌ ಮಾಲೀಕ, ಜನರಿಂದ ಪಡೆದ ಹಣವನ್ನು ಸನ್ನಿ ಲಿಯೋನ್‌ ಸೇರಿದಂತೆ ಹಲವು ನಟರಿಗೆ ನೀಡಿರುವುದು ಸಿಐಡಿ ತನಿಖೆಯಿಂದ ಬಹಿರಂಗವಾಗಿದೆ.

Read Full Story

More Trending News