Published : Jun 08, 2026, 04:59 AM ISTUpdated : Jun 08, 2026, 09:50 PM IST

Karnataka News Live: ಪ್ರಯಾಣಿಕರಿಗೆ ಶಾಕ್, ನಾಳೆಯಿಂದ ಖಾಸಗಿ ಬಸ್ ಟಿಕೆಟ್ ದರ ಏರಿಕೆ, ಶೇ.8ರ ವರೆಗೆ ಬೆಲೆ ಪರಿಷ್ಕರಣೆ

ಸಾರಾಂಶ

ಬೆಳಗಾವಿ: ರಾಜ್ಯ ಸಚಿವ ಸಂಪುಟದ ಎರಡನೇ ಹಂತದ ವಿಸ್ತರಣೆ ಶೀಘ್ರದಲ್ಲೇ ನಡೆಯಲಿದ್ದು, ಈ ತಿಂಗಳೊಳಗೆ ಸಚಿವ ಸಂಪುಟ ವಿಸ್ತರಣೆ ನಡೆದರೆ ಉತ್ತಮ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಅಭಿಪ್ರಾಯಪಟ್ಟರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟದಲ್ಲಿ ಇನ್ನೂ ಹಲವು ಸ್ಥಾನಗಳು ಖಾಲಿ ಇದ್ದು, ಅವುಗಳನ್ನು ಹೆಚ್ಚು ದಿನ ಖಾಲಿ ಇಡಲು ಸಾಧ್ಯವಿಲ್ಲ. ಪಕ್ಷದಲ್ಲಿ ಒಬ್ಬರಿಗೆ ಒಂದು ಹುದ್ದೆ ಎಂಬ ನೀತಿಯನ್ನು ಅನುಸರಿಸುವ ಪ್ರಯತ್ನ ನಡೆಯುತ್ತಿದ್ದು, ಕೆಪಿಸಿಸಿ ಅಧ್ಯಕ್ಷ ಸ್ಥಾನ ಮತ್ತು ಸಚಿವ ಸ್ಥಾನ ಎರಡನ್ನೂ ಒಬ್ಬರಿಗೆ ನೀಡುವ ಸಾಧ್ಯತೆ ಕಡಿಮೆ. ಪಕ್ಷದ ವರಿಷ್ಠರು ತೆಗೆದುಕೊಳ್ಳುವ ನಿರ್ಧಾರವನ್ನು ಎಲ್ಲರೂ ಒಪ್ಪಿಕೊಳ್ಳಬೇಕಾಗಿದೆ ಎಂದರು. ಇದೇ ವೇಳೆ ಬೆಳಗಾವಿ ಜಿಲ್ಲೆಗೆ ಮತ್ತಷ್ಟು ಸಚಿವ ಸ್ಥಾನಗಳು ದೊರೆಯುವ ವಿಶ್ವಾಸವಿದೆ ಎಂದರು.

ಮುಸ್ಲಿಂ ಸಮುದಾಯಕ್ಕೆ ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯ ನೀಡುವ ಕುರಿತು ಉತ್ತರಿಸಿದ ಅವರು, ಈ ಕುರಿತು ಪಕ್ಷದ ವರಿಷ್ಠರು ಸೂಕ್ತ ನಿರ್ಧಾರ ಕೈಗೊಳ್ಳಲಿದ್ದು, ಯಾವುದೇ ಸಮುದಾಯಕ್ಕೆ ಅನ್ಯಾಯವಾಗದಂತೆ ನೋಡಿಕೊಳ್ಳಲಾಗುವುದು ಎಂದರು. ಸಚಿವ ಸಂಪುಟ ವಿಸ್ತರಣೆ, ಖಾತೆ ಹಂಚಿಕೆ ಹಾಗೂ ಪಕ್ಷದ ಸಂಘಟನೆಗೆ ಸಂಬಂಧಿಸಿದ ಕೆಲವು ವಿಚಾರಗಳಲ್ಲಿ ಅಸಮಾಧಾನಗಳು ಸಹಜ. ಆದರೆ, ಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಅವುಗಳನ್ನು ಬಗೆಹರಿಸುವ ಶಕ್ತಿ ಸರ್ಕಾರಕ್ಕಿದೆ ಎಂದರು.

09:50 PM (IST) Jun 08

ಪ್ರಯಾಣಿಕರಿಗೆ ಶಾಕ್, ನಾಳೆಯಿಂದ ಖಾಸಗಿ ಬಸ್ ಟಿಕೆಟ್ ದರ ಏರಿಕೆ, ಶೇ.8ರ ವರೆಗೆ ಬೆಲೆ ಪರಿಷ್ಕರಣೆ

ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ ತಟ್ಟಲಿದೆ. ನಾಳೆಯಿಂದ ಖಾಸಗಿ ಬಸ್ ದರ ಏರಿಕೆಯಾಗುತ್ತಿದೆ. ಡೀಸೆಲ್ ಬೆಲೆ ಏರಿಕೆಯಾಗಿರುವ ಹಿನ್ನಲೆಯಲ್ಲಿ ಇದೀಗ ಖಾಸಗಿ ಬಸ್ ಆಪರೇಟರ್ಸ್ ಪ್ರಯಾಣ ದರ ಏರಿಕೆ ಮಾಡುತ್ತಿದ್ದಾರೆ.

Read Full Story

09:10 PM (IST) Jun 08

ಬಳ್ಳಾರಿಯಲ್ಲಿ ಯುವಕನ ಭೀಕರ ಹ*ತ್ಯೆ - ಶವಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದುಷ್ಕರ್ಮಿಗಳು!

ಯುವಕನನ್ನು ಹ*ತ್ಯೆಗೈದು ದುಷ್ಕರ್ಮಿಗಳು ಸಾಕ್ಷ್ಯನಾಶ ಮಾಡುವ ಉದ್ದೇಶದಿಂದ ಮೃತ ದೇಹವನ್ನು ಬರೋಬ್ಬರಿ 13 ಕಿಲೋಮೀಟರ್ ದೂರದವರೆಗೆ ಕೊಂಡೊಯ್ದು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ.

Read Full Story

07:36 PM (IST) Jun 08

ಬೆಂಗಳೂರಿನ ದೇವನಹಳ್ಳಿಯಲ್ಲಿ ಎಮ್ವಿ ಗ್ರೂಪ್ ಮೆಗಾ ಪ್ಲಾನ್ - ಸೋಲಾರ್ ಗಿಗಾಫ್ಯಾಕ್ಟರಿಗಾಗಿ ₹5,500 ಕೋಟಿ ಭಾರಿ ಹೂಡಿಕೆ!

ಬೆಂಗಳೂರು ಮೂಲದ ಎಮ್ವಿ ಗ್ರೂಪ್, ದೇವನಹಳ್ಳಿಯಲ್ಲಿ 5,500 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಬೃಹತ್ 'ಗಿಗಾಫ್ಯಾಕ್ಟರಿ' ಸ್ಥಾಪಿಸುತ್ತಿದೆ. ಈ ಯೋಜನೆಯು ಕಂಪನಿಯ ಸೋಲಾರ್ ಮಾಡ್ಯೂಲ್ ಮತ್ತು ಸೆಲ್ ಉತ್ಪಾದನಾ ಸಾಮರ್ಥ್ಯವನ್ನು ಹಲವು ಪಟ್ಟು ಹೆಚ್ಚಿಸಲಿದೆ.

Read Full Story

07:14 PM (IST) Jun 08

ಸಂಪ್‌ಗೆ ಬಿದ್ದು 18 ತಿಂಗಳ ಮಗು ಸಾವು - ಮೃತದೇಹವನ್ನು ಉಪ್ಪಿನಲ್ಲಿಟ್ಟು, ಕುರಾನ್‌ ಪಠಿಸಿ ಬದುಕಿಸಲು ಯತ್ನಿಸಿದ ಪೋಷಕರು!

ಬಾಗಲಕೋಟೆಯ ನವನಗರದಲ್ಲಿ 18 ತಿಂಗಳ ಹೆಣ್ಣು ಮಗುವೊಂದು ನೀರಿನ ಟ್ಯಾಂಕ್‌ಗೆ ಬಿದ್ದು ಮೃತಪಟ್ಟಿದೆ. ಆದರೆ, ಮಗುವನ್ನು ಬದುಕಿಸಬಹುದು ಎಂಬ ಮೂಢನಂಬಿಕೆಯಿಂದ, ಪೋಷಕರು ಆಕೆಯ ದೇಹವನ್ನು ಗಂಟೆಗಟ್ಟಲೆ ಉಪ್ಪಿನಲ್ಲಿ ಮುಳುಗಿಸಿಟ್ಟು ವಿಫಲ ಪ್ರಯತ್ನ ನಡೆಸಿದ ದಾರುಣ ಘಟನೆ ನಡೆದಿದೆ.
Read Full Story

06:41 PM (IST) Jun 08

ಕೆಎಂಸಿ ಆಸ್ಪತ್ರೆಯಲ್ಲಿ ವೈದ್ಯಕೀಯ ವಿದ್ಯಾರ್ಥಿಗಳಿಗೆ ಕನ್ನಡ ಕಡ್ಡಾಯ, ಮಹತ್ವದ ಹೆಜ್ಜೆಗೆ ಸಕಾರಾತ್ಮಕ ಫಲಿತಾಂಶ!

ಮಂಗಳೂರಿನ ಕಸ್ತೂರ್ಬಾ ವೈದ್ಯಕೀಯ ಕಾಲೇಜು (KMC), ರೋಗಿಗಳೊಂದಿಗೆ ಉತ್ತಮ ಸಂವಹನ ಮತ್ತು ಚಿಕಿತ್ಸೆಯ ಗುಣಮಟ್ಟವನ್ನು ಹೆಚ್ಚಿಸಲು ವೈದ್ಯಕೀಯ ವಿದ್ಯಾರ್ಥಿಗಳಿಗೆ ಕನ್ನಡ ಭಾಷಾ ಪ್ರಾವೀಣ್ಯತೆಯನ್ನು ಕಡ್ಡಾಯಗೊಳಿಸಿದೆ. ಕಳೆದ 10-15 ವರ್ಷಗಳಿಂದಲೇ ಜಾರಿಯಲ್ಲಿರುವ ಈ ನಿಯಮದ ಅಡಿಯಲ್ಲಿ, ಹೊರರಾಜ್ಯದ ವಿದ್ಯಾರ್ಥಿಗಳಿಗೆ ಮೊದಲ ವರ್ಷದಿಂದಲೇ ವ್ಯವಸ್ಥಿತ ಭಾಷಾ ತರಬೇತಿ ನೀಡಲಾಗುತ್ತಿದ್ದು, ಇದು ಅತ್ಯಂತ ಸಕಾರಾತ್ಮಕ ಫಲಿತಾಂಶ ನೀಡಿದೆ.
Read Full Story

06:24 PM (IST) Jun 08

ಈ ಜಿಲ್ಲೆಯಲ್ಲಿ ಮುಂದಿನ ಮೂರು ದಿನಗಳವರೆಗೆ ಭಾರೀ ಮಳೆ - ಜಿಲ್ಲಾಧಿಕಾರಿ ಸ್ಪಷ್ಟನೆ

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯಂತೆ ಧಾರವಾಡ ಜಿಲ್ಲೆಯಲ್ಲಿ ಮುಂಗಾರು ಹಂಗಾಮು ಚುರುಕಾಗಿದ್ದು, ಮುಂದಿನ ಮೂರು ದಿನಗಳವರೆಗೆ ಆರೆಂಜ್ ಹಾಗೂ ರೆಡ್ ಅಲರ್ಟ್ ಘೋಷಣೆ..

Read Full Story

06:15 PM (IST) Jun 08

ನಂಗೆ ಬೆಂಗಳೂರು ಉಸ್ತುವಾರಿಯೂ ಬೇಡ ಏನೂ ಬೇಡ, ಜಲಸಂಪನ್ಮೂಲ ಖಾತೆಯಲ್ಲೇ ಮುಂದುವರೆಯುವೆ - ರಾಮಲಿಂಗಾರೆಡ್ಡಿ ಯೂ ಟರ್ನ್

ಈ ಹಿಂದೆ ಖಾತೆ ಹಂಚಿಕೆಯಿಂದ ಮುನಿಸಿಕೊಂಡಿದ್ದ ಹಿರಿಯ ಸಚಿವ ರಾಮಲಿಂಗಾರೆಡ್ಡಿ, ಇದೀಗ ತಮ್ಮ ನಿಲುವನ್ನು ಬದಲಿಸಿದ್ದಾರೆ. ತಮಗೆ ನೀಡಲಾದ ಜಲಸಂಪನ್ಮೂಲ ಇಲಾಖೆಯಲ್ಲೇ ಮುಂದುವರಿಯುವುದಾಗಿ ಸ್ಪಷ್ಟಪಡಿಸಿದ್ದು, ಬೆಂಗಳೂರು ಉಸ್ತುವಾರಿ ಸೇರಿದಂತೆ ಬೇರೆ ಯಾವುದೇ ಖಾತೆಯೂ ಬೇಡವೆಂದು ಖಡಾಖಂಡಿತವಾಗಿ ಹೇಳಿದ್ದಾರೆ.  

Read Full Story

05:58 PM (IST) Jun 08

ಒಂದೇ ಶಾಲೆಯ 17 ವಿದ್ಯಾರ್ಥಿಗಳು ಅಗ್ನಿವೀರರಾಗಿ ಆಯ್ಕೆ - ಧಾರವಾಡದ ಯುವಕರ ಐತಿಹಾಸಿಕ ಸಾಧನೆ

ಅಚಲ ನಿರ್ಧಾರ, ಸೈನ್ಯಕ್ಕೆ ಸೇರ್ಪಡೆ ಆಗಲೇಬೇಕು ಎಂಬ ತವಕ, ನಿರಂತರ ಪರಿಶ್ರಮ ದೇಹ ದಂಡನೆ ಈ ಎಲ್ಲ ಪ್ರಯತ್ನಕ್ಕೂ ಆ ವಿದ್ಯಾರ್ಥಿಗಳಿಗೆ ಇದೀಗ ಪ್ರತಿಫಲ ಸಿಕ್ಕಿದೆ. ಒಂದೇ ಶಾಲೆಯಲ್ಲಿ ಕಲಿತ ಒಟ್ಟು 17 ಜನ ಯುವಕರು ಇದೀಗ ಅಗ್ನಿವೀರರಾಗಿ ಆಯ್ಕೆಯಾಗಿದ್ದಾರೆ.

Read Full Story

05:27 PM (IST) Jun 08

ಡಿಕೆಶಿ ಎರಡು ವರ್ಷ ಪೂರ್ಣಾವಧಿ ಅಧಿಕಾರ ನಡೆಸಲಿ - ಸಿಎಂ ಪರ ಆ ದರ್ಗಾದಲ್ಲಿ ವಿಶೇಷ ಪ್ರಾರ್ಥನೆ!

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸುಭಿಕ್ಷ ಆಡಳಿತ ಹಾಗೂ ರಾಜ್ಯದ ಜನರ ಒಳಿತಿಗಾಗಿ ಚಿಕ್ಕಮಗಳೂರು ನಗರದ ಹನುಮಂತಪ್ಪ ವೃತ್ತದ ಸಮೀಪ ಇರುವ ಬಡಮಖಾನ್ ದರ್ಗಾದಲ್ಲಿಮುಸ್ಲಿಂ ಮುಖಂಡರು ವಿಶೇಷ ಪ್ರಾರ್ಥನೆ ಸಲ್ಲಿಸಿದರು.

Read Full Story

05:14 PM (IST) Jun 08

ಮುಡಾ ಹಗರಣ - ಸಿದ್ದರಾಮಯ್ಯ ಮೇಲ್ಮನವಿ, ಹೈಕೋರ್ಟ್ ಖಡಕ್ ನುಡಿ, ವಿಚಾರಣೆ ಜುಲೈಗೆ ಮುಂದೂಡಿಕೆ

ಮುಡಾ ಭೂ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ರಾಜ್ಯಪಾಲರು ನೀಡಿದ್ದ ಅನುಮತಿಯನ್ನು ಪ್ರಶ್ನಿಸಿ ಮಾಜಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಜುಲೈ ಮೂರನೇ ವಾರಕ್ಕೆ ಮುಂದೂಡಿದೆ. ವಿಚಾರಣೆಯನ್ನು ಮತ್ತಷ್ಟು ಮುಂದೂಡುವಂತೆ ಸಿದ್ದರಾಮಯ್ಯ ಪರ ವಕೀಲರು ಕೋರಿದಾಗ, ನ್ಯಾಯಪೀಠವು ತೀಕ್ಷ್ಣವಾಗಿ ಪ್ರತಿಕ್ರಿಯಿಸಿತು.
Read Full Story

04:44 PM (IST) Jun 08

'ಸಂತೂರ್‌ ಸೋಪ್‌..' ಅಂದಿದ್ದಕ್ಕೆ ವರ್ತೂರ್‌ ಸಂತೋಷ್‌ ಕ್ಷಮೆ ಕೇಳಿದ ರಕ್ಷಿತಾ, ಆಕೆಯ ಮನಸ್ಸು ಬಂಗಾರ ಎಂದ ನೆಟ್ಟಿಗರು!

ಬಿಗ್‌ಬಾಸ್ ಸ್ಪರ್ಧಿ ರಕ್ಷಿತಾ ಶೆಟ್ಟಿ, ವರ್ತೂರು ಸಂತೋಷ್ ಅವರ ಹಸುವಿನ ಸೀಮಂತ ಕಾರ್ಯಕ್ರಮದಲ್ಲಿ, ಈ ಹಿಂದೆ ಅವರನ್ನು 'ಸಂತೂರ್' ಎಂದು ಕರೆದಿದ್ದಕ್ಕೆ ವೇದಿಕೆಯಲ್ಲೇ ಕ್ಷಮೆಯಾಚಿಸಿದರು. ರಕ್ಷಿತಾ ಅವರ ಈ ಮುಗ್ದ ನಡೆ ಮತ್ತು ವಿನಯವಂತಿಕೆಗೆ ನೆಟ್ಟಿಗರಿಂದ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

Read Full Story

04:40 PM (IST) Jun 08

ನಾಲ್ಕು ಗೋಡೆಗಳೊಳಗೆ ದಂಪತಿಯ ಜಾತಿ ನಿಂದನೆ, ಎಸ್‌ಸಿ/ಎಸ್‌ಟಿ ಕಾಯ್ದೆ ಅನ್ವಯಿಸದು - ಹೈಕೋರ್ಟ್

ಮನೆಯ ನಾಲ್ಕು ಗೋಡೆಗಳ ಒಳಗೆ ಪತಿ-ಪತ್ನಿ ನಡುವೆ ನಡೆಯುವ ಜಾತಿ ನಿಂದನೆಯು ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಅಪರಾಧವಾಗುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಇಂತಹ ಕೃತ್ಯವು ಸಾರ್ವಜನಿಕರ ದೃಷ್ಟಿಗೆ ಬೀಳುವ ಸ್ಥಳದಲ್ಲಿ ನಡೆದರೆ ಮಾತ್ರ ಈ ಕಾಯ್ದೆ ಅನ್ವಯವಾಗುತ್ತದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.
Read Full Story

04:26 PM (IST) Jun 08

ಕರ್ನಾಟಕದಲ್ಲಿ ಮುಂಗಾರು ಅಬ್ಬರ - ಕರಾವಳಿಗೆ ರೆಡ್ ಅಲರ್ಟ್, ಬೆಂಗಳೂರು ಸೇರಿ ಹಲವೆಡೆ 7 ದಿನ ಭಾರೀ ಮಳೆ ಎಚ್ಚರಿಕೆ!

ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಂಡಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸಂಪೂರ್ಣ ಮಾಹಿತಿ ಇಲ್ಲಿದೆ.

Read Full Story

04:19 PM (IST) Jun 08

ಉತ್ತರ ಕನ್ನಡಕ್ಕೆ ರೆಡ್ ಅಲರ್ಟ್ - ಗೋಕರ್ಣ ಮಹಾಬಲೇಶ್ವರ ದೇವಾಲಯಕ್ಕೂ ಜಲಕಂಟಕ, ಆತ್ಮಲಿಂಗ ಸ್ಪರ್ಶ ದರ್ಶನ ಸ್ಥಗಿತ

ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಮಳೆಯ ಅಬ್ಬರದಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಇದರ ಪರಿಣಾಮವಾಗಿ, ಗೋಕರ್ಣದ ಮಹಾಬಲೇಶ್ವರ ದೇವಾಲಯದ ಗರ್ಭಗುಡಿಗೆ ನೀರು ನುಗ್ಗುವ ಸಾಧ್ಯತೆಯಿಂದ ಭಕ್ತರಿಗೆ ಆತ್ಮಲಿಂಗ ಸ್ಪರ್ಶ ದರ್ಶನವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
Read Full Story

04:07 PM (IST) Jun 08

ವರದಕ್ಷಿಣೆ, ಟಾರ್ಚರ್, ಅನುಮಾನ - ಪವಿತ್ರಾ ಲೋಕೇಶ್ ಮೊದಲ ಮದುವೆಯ ರಹಸ್ಯ ಬಿಚ್ಚಿಟ್ಟ ತಾಯಿ!

ನಟಿ ಪವಿತ್ರಾ ಲೋಕೇಶ್ ಅವರ ತಾಯಿ ಪಾರ್ವತಿ ಲೋಕೇಶ್, ತಮ್ಮ ಮಗಳ ಮೊದಲ ಮದುವೆಯ ಬಗ್ಗೆ ಕೆಲವು ಆಘಾತಕಾರಿ ವಿಷಯಗಳನ್ನು ಹಂಚಿಕೊಂಡಿದ್ದಾರೆ. ಪವಿತ್ರಾಳ ಮೊದಲ ಮದುವೆ ಒಬ್ಬ ಸಾಫ್ಟ್‌ವೇರ್ ಇಂಜಿನಿಯರ್ ಜೊತೆ ನಡೆದಿತ್ತು ಮತ್ತು ಅದು ಕೇವಲ ಎರಡು ತಿಂಗಳಲ್ಲೇ ಮುರಿದುಬಿದ್ದಿತ್ತು ಎಂದು ಅವರು ತಿಳಿಸಿದ್ದಾರೆ.

Read Full Story

03:58 PM (IST) Jun 08

ಜೈಲಿನಿಂದ Darshan Thoogudeepa ರಿಲೀಸ್‌ ಆಗೋ ವಿಷಯ; ಮಹತ್ವದ ಹೇಳಿಕೆ ಕೊಟ್ಟ ಹೊಸ CM ಡಿಕೆ ಶಿವಕುಮಾರ್!

Actor Darshan Thoogudeepa: ನಟ ದರ್ಶನ್‌ ತೂಗುದೀಪ ಅವರು ಜೈಲಿನಲ್ಲಿದ್ದಾರೆ. ಈಗ ಕನಕಪುರದ ಕುರುಬರಹಳ್ಳಿಗೆ ಸಿಎಂ ಡಿಕೆ ಶಿವಕುಮಾರ್‌ ಭೇಟಿ ನೀಡಿದ್ದರು. ಆ ವೇಣೆ ದರ್ಶನ್‌ ಅಭಿಮಾನಿಗಳು ‘ಡಿ ಬಾಸ್’‌, ‘ಡಿ ಬಾಸ್’‌ ಎಂದು ಕೂಗಿ, ಮನವಿ ಮಾಡಿದ್ದಾರೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ. 

 

Read Full Story

01:36 PM (IST) Jun 08

ದೇವೇಗೌಡರನ್ನು ರಾಜ್ಯಸಭೆಗೆ ಕಳುಹಿಸುವ ಬಗ್ಗೆ ಚರ್ಚೆಯೇ ಆಗಿಲ್ಲ, ಸುಮಲತಾಗೆ ಮುಂದೆ ಒಳ್ಳೆಯ ಸ್ಥಾನಮಾನ - ವಿಜಯೇಂದ್ರ

ರಾಜ್ಯಸಭೆ ಮತ್ತು ವಿಧಾನ ಪರಿಷತ್ ಚುನಾವಣೆಗಳ ಅಭ್ಯರ್ಥಿ ಆಯ್ಕೆಯು ಸಂಪೂರ್ಣವಾಗಿ ಹೈಕಮಾಂಡ್ ನಿರ್ಧಾರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸ್ಪಷ್ಟಪಡಿಸಿದ್ದಾರೆ. ದೇವೇಗೌಡರ ಸ್ಪರ್ಧೆ ಹಾಗೂ ಸುಮಲತಾ ಅವರಿಗೆ ಟಿಕೆಟ್ ತಪ್ಪಿದ ಬಗ್ಗೆ ಮಾತನಾಡಿ ವರಿಷ್ಠರ ತೀರ್ಮಾನವನ್ನು ಸಮರ್ಥಿಸಿಕೊಂಡಿದ್ದಾರೆ.

Read Full Story

01:18 PM (IST) Jun 08

ನಾನು ಮೂರು ವಿಷಯಗಳಲ್ಲಿ ಸಿಕ್ಕಾಪಟ್ಟೆ ವೀಕ್; ಬಿಗ್‌ಬಾಸ್‌ಗೆ ಹೋಗಲ್ಲ ಎಂದ ಜಿಮ್ ಸೀನ

ಕನ್ನಡ ಬಿಗ್‌ಬಾಸ್ ಸೀಸನ್ 13ರ ಸ್ಪರ್ಧಿಗಳ ಲಿಸ್ಟ್‌ನಲ್ಲಿ 'ಅಣ್ಣಯ್ಯ' ಸೀರಿಯಲ್ ಖ್ಯಾತಿಯ ನಟ ಸುಷ್ಮಿತ್ ಜೈನ್ ಹೆಸರು ಕೇಳಿಬಂದಿದೆ. ಈ ವದಂತಿಗಳ ಬಗ್ಗೆ ಸ್ಪಷ್ಟನೆ ನೀಡಿರುವ ಅವರು, ಮೂರು ಕಾರಣಗಳಿಂದ ಶೋಗೆ ಹೋಗುವುದಿಲ್ಲ ಎಂದಿದ್ದಾರೆ. 

Read Full Story

01:13 PM (IST) Jun 08

ಬೆಂಗಳೂರು ಯುವಕನಿಂದ ₹35 ಲಕ್ಷ ದೋಚಿದ ಮ್ಯಾಟ್ರಿಮೋನಿಯಲ್ ಮಾಯಾಂಗನೆ! ಸೈಬರ್ ಠಾಣೆಯಲ್ಲಿ ಲಕ್ಷ್ಮಿ ವಿರುದ್ದ ದೂರು

ವೈವಾಹಿಕ ವೆಬ್‌ಸೈಟ್‌ನಲ್ಲಿ ಪರಿಚಯವಾದ ಯುವತಿಯೊಬ್ಬಳು, ಮದುವೆಯಾಗುವುದಾಗಿ ನಂಬಿಸಿ ಯುವಕನೊಬ್ಬನಿಗೆ ಹೂಡಿಕೆಯ ಆಮಿಷವೊಡ್ಡಿದ್ದಾಳೆ. ಆಕೆಯ ಮಾತನ್ನು ನಂಬಿ ಹಂತ ಹಂತವಾಗಿ ₹35 ಲಕ್ಷ ಹೂಡಿಕೆ ಮಾಡಿದ ಯುವಕ, ಇದೀಗ ಹಣ ಕಳೆದುಕೊಂಡು ಸೈಬರ್ ಠಾಣೆಗೆ ದೂರು ನೀಡಿದ್ದಾನೆ.
Read Full Story

12:16 PM (IST) Jun 08

ಅನೈತಿಕತೆಗೆ ಅಡ್ಡಿಯಾಗಿದ್ದ 5 ವರ್ಷದ ಮಗು ಕೊಂದ ತಾಯಿ -ಪ್ರಿಯಕರ, ಕೊಲೆಯಾದ ಬಳಿಕ ಬೆಂಗಳೂರು ದೇವಸ್ಥಾನಕ್ಕೆ ಭೇಟಿ!

ಸ್ವಚ್ಛಂದ ಜೀವನಕ್ಕೆ ಅಡ್ಡಿ ಎಂದು ಪ್ರಿಯಕರನೊಂದಿಗೆ ಸೇರಿ ಐದು ವರ್ಷದ ಮಗಳನ್ನು ತಾಯಿಯೇ ಹತ್ಯೆ ಮಾಡಿದ್ದಾಳೆ. ಮಗು ಮೃತಪಟ್ಟು 15 ದಿನಗಳಲ್ಲೇ, ಈ ಜೋಡಿ ಮಲ್ಲೇಶ್ವರಂ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ತಂದೆಯ ದೂರಿನ ಮೇರೆಗೆ ಪ್ರಿಯಕರನನ್ನು ಬಂಧಿಸಲಾಗಿದೆ, ತಾಯಿ ಪರಾರಿಯಾಗಿದ್ದಾಳೆ.
Read Full Story

11:00 AM (IST) Jun 08

ಆಗಸ್ಟ್ 15ರಿಂದ ಹೊಸ 6 ನಿಲ್ದಾಣಗಳ ನಡುವೆ ಮೆಟ್ರೋ ರೈಲು ಸಂಚಾರ ನಿರೀಕ್ಷೆ; 7.5 ಕಿ.ಮೀ ಉದ್ದದ ಮಾರ್ಗ

ಬಿಎಂಆರ್‌ಸಿಎಲ್ ಆಗಸ್ಟ್ 15ರಿಂದ 6 ನಿಲ್ದಾಣ ತೆರೆಯುವ ನಿರೀಕ್ಷೆಯಿದೆ. ಈ 7.5 ಕಿ.ಮೀ ಉದ್ದದ ಮಾರ್ಗವು ಯಶಸ್ವಿ ಪರೀಕ್ಷೆಗಳನ್ನು ಪೂರ್ಣಗೊಳಿಸಿದ್ದು, ಇದರ ಕಾರ್ಯಾಚರಣೆಯಿಂದ ಬೆಂಗಳೂರು ಮೆಟ್ರೋ ಜಾಲವು ದೇಶದ ಎರಡನೇ ಅತಿದೊಡ್ಡ ಜಾಲವಾಗಿ ಹೊರಹೊಮ್ಮಲಿದೆ.

Read Full Story

10:13 AM (IST) Jun 08

ಕೋಲಾರ-ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ; ಬಸ್-ಕಂಟೇನರ್ ಲಾರಿ ನಡುವೆ ಡಿಕ್ಕಿ

ಕೋಲಾರ -ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಹೊಸಕೋಟೆ ಸಮೀಪದ ಅತ್ತಿವಾಟ ಗೇಟ್ ಬಳಿ ಅಪಘಾತ ನಡೆದಿದೆ. ಸ್ಥಳಕ್ಕೆ ಹೊಸಕೋಟೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read Full Story

08:49 AM (IST) Jun 08

ಹಳಿ ಇಲ್ಲದ ನೀಲಿ ಮಾರ್ಗಕ್ಕೆ ಬೋಗಿ ಬಂತು! ಸಿಲ್ಕ್ ಬೋರ್ಡ್-ಏರ್ಪೋರ್ಟ್ ಮೆಟ್ರೋ ಸಂಚಾರ ಆರಂಭ ಯಾವಾಗ?

ಸಿಲ್ಕ್‌ಬೋರ್ಡ್‌ನಿಂದ ವಿಮಾನ ನಿಲ್ದಾಣಕ್ಕೆ ಸಂಪರ್ಕಿಸುವ ನಮ್ಮ ಮೆಟ್ರೋ ನೀಲಿ ಮಾರ್ಗದ ಮೊದಲ ರೈಲು ಸಿದ್ಧವಾಗಿ ಡಿಪೋ ತಲುಪಿದೆ. ಆದರೆ, ಹಳಿ ಅಳವಡಿಕೆ ಕಾಮಗಾರಿ ಇನ್ನೂ ಪೂರ್ಣಗೊಳ್ಳದ ಕಾರಣ, ಈ ಮಾರ್ಗದಲ್ಲಿ ರೈಲು ಸಂಚಾರ ಆರಂಭವಾಗಲು ಮತ್ತಷ್ಟು ವಿಳಂಬವಾಗಲಿದೆ. ಈ ರೈಲನ್ನು ತಾಂತ್ರಿಕ ಭಿನ್ನತೆಯಿಂದಾಗಿ ಹಳದಿ ಮಾರ್ಗದಲ್ಲಿ ಬಳಸಲು ಸಾಧ್ಯವಿಲ್ಲ.
Read Full Story

08:48 AM (IST) Jun 08

Kiccha Sudeep Bodyguard - ‌ ಇಟಲಿಯಿಂದ ಬಂದ ಕಿಚ್ಚ ಸುದೀಪ್ ಬಾಡಿಗಾರ್ಡ್‌ ಸಾಧನೆ ಅಷ್ಟಿಷ್ಟಲ್ಲ; ಆ ಆಸೆ ಇದ್ಯಂತೆ

actor kiccha sudeep bodyguard: ನಟ ರಾಮ್‌ ಚರಣ್‌ ತೇಜ ಬಾಡಿಗಾರ್ಡ್‌ ಕೆವಿನ್‌ ಅವರದ್ದೇ ಹವಾ ಆಗಿದೆ. ಕೆವಿನ್‌ ಬಾಡಿ, ಅವರ ಶಕ್ತಿ ಸಾಮರ್ಥ್ಯ ಏನು ಎನ್ನೋದನ್ನು ನೋಡಿದ ಜನತೆ, ಅವರ ಜೊತೆ ಫೋಟೋ ತಗೊಳ್ಳಲು ಮುಗಿ ಬಿದ್ದಿದ್ದಾರೆ. ಈಗ ಕಿಚ್ಚ ಸುದೀಪ್‌ ಬಾಡಿಗಾರ್ಡ್‌ ಕೂಡ ಟ್ರೆಂಡ್‌ ಆಗುತ್ತಿದ್ದಾರೆ. 

 

Read Full Story

08:41 AM (IST) Jun 08

ಕಮಲ ಪಾಳಯದಿಂದ ಅಚ್ಚರಿಯ ನಡೆ - ರಾಜ್ಯಸಭೆ, ವಿಧಾನ ಪರಿಷತ್ತಿನ ಚುನಾವಣೆಗೆ ಹೊಸ ಮುಖಗಳು

ರಾಜ್ಯಸಭೆ ಮತ್ತು ವಿಧಾನ ಪರಿಷತ್ತಿನ ಚುನಾವಣೆಗೆ ಬಿಜೆಪಿ ಕೊನೆಯ ಕ್ಷಣದಲ್ಲಿ ಅಚ್ಚರಿಯ ಅಭ್ಯರ್ಥಿಗಳನ್ನು ಪ್ರಕಟಿಸಿದೆ. ರಾಜ್ಯಸಭೆಗೆ ಪ್ರೊ.ಎಂ.ನಾಗರಾಜ್ ಹಾಗೂ ಪರಿಷತ್ತಿಗೆ ಲಿಂಗರಾಜು ಪಾಟೀಲ್ ಮತ್ತು ರಘು ಕೌಟಿಲ್ಯ ಅವರನ್ನು ಆಯ್ಕೆ ಮಾಡಲಾಗಿದ್ದು, ಇದರಿಂದ ಮಾಜಿ ಪ್ರಧಾನಿ ದೇವೇಗೌಡರ ಮರು ಆಯ್ಕೆಯ ಸಾಧ್ಯತೆಗೆ ತೆರೆ ಬಿದ್ದಿದೆ.
Read Full Story

08:18 AM (IST) Jun 08

Bhagyalakshmi Serial ಮುಗೀತು, ಆದರೆ ಅದೊಂದು ದೊಡ್ಡ ಪ್ರಶ್ನೆ ಮಾತ್ರ ಹಾಗೆಯೇ ಉಳಿತು; ಏನದು?

Bhagyalakshmi Kannada Serial Episode Update: ಭಾಗ್ಯಲಕ್ಷ್ಮೀ ಧಾರಾವಾಹಿ ಮುಕ್ತಾಯವಾಗಿದೆ. 1159 ಎಪಿಸೋಡ್‌ಗೆ ಈ ಸೀರಿಯಲ್‌ ಅಂತ್ಯವಾಗಿದೆ. ನಾಲ್ಕು ವರ್ಷಗಳ ಹಿಂದೆ ಈ ಸೀರಿಯಲ್‌ ಆರಂಭ ಆಗಿತ್ತು. ಒಂದೇ ಒಂದು ಪ್ರಶ್ನೆಯೊಂದು ಹಾಗೆ ಉಳಿದಿದೆ. ಹಾಗಾದರೆ ಏನದು?

 

Read Full Story

08:17 AM (IST) Jun 08

ಬೆಳಗಾವಿಯ ಆದಿತ್ಯರಾಜ್ ಕ್ಯಾಪಿಟಲ್ ವಂಚನೆ ಪ್ರಕರಣ ಸಿಐಡಿಗೆ ಹಸ್ತಾಂತರ; ಆರೋಪಿಯಿಂದ ವಿಡಿಯೋ

ಬೆಳಗಾವಿಯ ಆದಿತ್ಯರಾಜ್ ಕ್ಯಾಪಿಟಲ್ ಬಹುಕೋಟಿ ವಂಚನೆ ಪ್ರಕರಣವನ್ನು ಸಿಐಡಿಗೆ ಹಸ್ತಾಂತರಿಸಲಾಗಿದೆ. ತಲೆಮರೆಸಿಕೊಂಡಿರುವ ಮಾಲೀಕ ಬಾಲರಾಜ್ ಮಾನೆ, ವಿಡಿಯೋ ಮೂಲಕ ಠೇವಣಿದಾರರ ಹಣ ಸುರಕ್ಷಿತವಾಗಿದೆ ಮತ್ತು ತಾನು ಕಾನೂನು ಹೋರಾಟದಲ್ಲಿ ಗೆಲ್ಲುವುದಾಗಿ ಹೇಳಿಕೊಂಡಿದ್ದಾರೆ.
Read Full Story

08:04 AM (IST) Jun 08

ಎಸ್‌ಐಆರ್ ವೇಳೆ ಮತ ಹೋದರೆ ಯಾವ ಗ್ಯಾರಂಟಿಯೂ ಸಿಗಲ್ಲ - ಸಿಎಂ ಡಿಕೆ ಶಿವಕುಮಾರ್ ಎಚ್ಚರಿಕೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮ್ಮ ಕ್ಷೇತ್ರ ಕನಕಪುರಕ್ಕೆ ಭೇಟಿ ನೀಡಿ, ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಬಗ್ಗೆ ಜನರಿಗೆ ಎಚ್ಚರಿಕೆ ನೀಡಿದ್ದಾರೆ. ಮತದಾರರ ಪಟ್ಟಿಯಲ್ಲಿ ಹೆಸರು ಕಳೆದುಕೊಂಡರೆ ಗೃಹಲಕ್ಷ್ಮೀ, ಗೃಹಜ್ಯೋತಿಯಂತಹ ಸರ್ಕಾರಿ ಗ್ಯಾರಂಟಿ ಯೋಜನೆಗಳ ಪ್ರಯೋಜನವೂ ಸಿಗುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
Read Full Story

07:41 AM (IST) Jun 08

ಕಾಂಗ್ರೆಸ್ ನಾಯಕ, ದೇವರಾಜ ಅರಸು ಮೊಮ್ಮಗ ಸೂರಜ್ ಹೆಗ್ಡೆ ನಿಧನ - ಸಿಎಂ ಡಿಕೆಶಿ ಸಂತಾಪ

ಎಐಸಿಸಿ ಕಾರ್ಯದರ್ಶಿ ಹಾಗೂ ದೇವರಾಜ ಅರಸು ಅವರ ಮೊಮ್ಮಗ ಸೂರಜ್ ಹೆಗ್ಡೆ (55) ಅವರು ಹಠಾತ್ ಹೃದಯಸ್ತಂಭನದಿಂದ ನಿಧನರಾಗಿದ್ದಾರೆ. ಅವರ ಅಕಾಲಿಕ ನಿಧನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಇದು ಪಕ್ಷಕ್ಕೆ ತುಂಬಲಾರದ ನಷ್ಟ ಎಂದು ಬಣ್ಣಿಸಿದ್ದಾರೆ.
Read Full Story

06:37 AM (IST) Jun 08

Raichur - ಕಾಯಿಪಲ್ಲೆ ಖರೀದಿ ನೆಪದಲ್ಲಿ ಬಂಡಾರ ಎರಚಿ ಹಣವನ್ನು ದೋಚಿದ ಸಾಧುವೇಷದ ಕದೀಮರು

ಮಸ್ಕಿ ಪಟ್ಟಣದಲ್ಲಿ ತರಕಾರಿ ಖರೀದಿಸುವ ನೆಪದಲ್ಲಿ ಬಂದ ಐವರ ಗ್ಯಾಂಗ್, ಅಂಗಡಿ ಮಾಲೀಕನ ಮೇಲೆ ಕುಂಕುಮ ಮತ್ತು ಬಂಡಾರ ಎರಚಿ ಮತ್ತು ಬರುವಂತೆ ಮಾಡಿದೆ. ನಂತರ ಗಲ್ಲಾಪೆಟ್ಟಿಗೆಯಲ್ಲಿದ್ದ 1 ಲಕ್ಷ ರೂಪಾಯಿ ನಗದನ್ನು ದೋಚಿ ಪರಾರಿಯಾಗಿದೆ. 

Read Full Story

06:09 AM (IST) Jun 08

ಮುಂಗಾರು ಚುರುಕು - 16ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಆರಂಭ, ಕೊಚ್ಚಿ ಹೋಯ್ತು ಹೆದ್ದಾರಿ

ರಾಜ್ಯದಲ್ಲಿ ಮುಂಗಾರು ಚುರುಕಾಗಿದ್ದು, 16ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಬಳ್ಳಾರಿಯಲ್ಲಿ ನೆರೆಗೆ ಮಹಿಳೆಯೊಬ್ಬರು ಬಲಿಯಾಗಿದ್ದು, ಹಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ ಮತ್ತು 8 ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.
Read Full Story

05:50 AM (IST) Jun 08

ಇಂದಿನಿಂದ ಮೂರು ದಿನ ರಾಜ್ಯದ ಈ 8 ಜಿಲ್ಲೆಗಳಲ್ಲಿ ಭಾರೀ ಮಳೆ; ರೆಡ್ ಅಲರ್ಟ್ ಘೋಷಣೆ

ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಜೂ.8 ರಿಂದ 10ರವರೆಗೆ ಕರಾವಳಿ, ದಕ್ಷಿಣ ಮತ್ತು ಉತ್ತರ ಒಳನಾಡಿನ ಎಂಟು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ರೆಡ್ ಅಲರ್ಟ್ ಘೋಷಿಸಿದ್ದು, ಪ್ರವಾಹ ಪರಿಸ್ಥಿತಿ ಎದುರಿಸಲು ಸಿದ್ಧವಾಗಿರಲು ಎಚ್ಚರಿಸಿದೆ. 

Read Full Story

05:41 AM (IST) Jun 08

ಬೆಂಗಳೂರು ಜೈಲಿನಲ್ಲಿ ಶಂಕಿತ ಉಗ್ರರ ಪುಂಡಾಟ; ಧರ್ಮದ ಪರ ಘೋಷಣೆ ಕೂಗಿ ಗದ್ದಲ, ಹಲ್ಲೆ ಯತ್ನ

ಪರಪ್ಪನ ಅಗ್ರಹಾರ ಜೈಲಿನಲ್ಲಿ, ಶಂಕಿತ ಉಗ್ರರು ಬೇರೆ ಕೈದಿಗಳ ಹೆಸರಿನಲ್ಲಿ ಚಿಕಿತ್ಸೆ ಪಡೆಯಲು ಯತ್ನಿಸಿದ್ದಾರೆ. ಇದನ್ನು ಪ್ರಶ್ನಿಸಿದ ವಾರ್ಡನ್‌ ಮೇಲೆ ಹಲ್ಲೆಗೆ ಯತ್ನಿಸಿ, ಧರ್ಮದ ಪರ ಘೋಷಣೆ ಕೂಗಿ ಗದ್ದಲ ಸೃಷ್ಟಿಸಿದ್ದಾರೆ. ಹಿರಿಯ ಅಧಿಕಾರಿಗಳು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ.
Read Full Story

05:36 AM (IST) Jun 08

ಕಾಂಗ್ರೆಸ್‌ನ ಸುರ್ಜೇವಾಲಾರಂಥ ಉಸ್ತುವಾರಿ ನಮಗೂ ಬೇಕು; ರಾಜ್ಯ ಬಿಜೆಪಿ ನಾಯಕರಲ್ಲಿ ತುಡಿತ

ಕಾಂಗ್ರೆಸ್‌ನಲ್ಲಿ ಅಧಿಕಾರ ಹಸ್ತಾಂತರ ಪ್ರಕ್ರಿಯೆಯನ್ನು ಯಶಸ್ವಿಯಾಗಿ ನಿಭಾಯಿಸಿದ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಅವರ ಕಾರ್ಯವೈಖರಿಗೆ ಬಿಜೆಪಿ ಪಾಳಯದಲ್ಲೂ ಮೆಚ್ಚುಗೆ ವ್ಯಕ್ತವಾಗಿದೆ. ಇದಕ್ಕೆ ಪ್ರತಿಯಾಗಿ, ತಮ್ಮ ಪಕ್ಷದಲ್ಲಿನ ರಾಜ್ಯಾಧ್ಯಕ್ಷರ ಗೊಂದಲ ಮತ್ತು ಆಂತರಿಕ ಬಿಕ್ಕಟ್ಟುಗಳನ್ನು ಬಗೆಹರಿಸಲು ವಿಫಲವಾಗಿರುವ ಬಿಜೆಪಿ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್‌ವಾಲ್  ಅಸಮಾಧಾನ ಹೆಚ್ಚುತ್ತಿದೆ.

Read Full Story

05:23 AM (IST) Jun 08

ಶಿವಾನಂದ ನೀಲಣ್ಣವರ ಪ್ರಕರಣ - ನಟಿ ಸನ್ನಿ ಲಿಯೋನ್‌ಗೆ ನೋಟಿಸ್, ಹಲವರಿಗೆ ಹಣ ವರ್ಗಾವಣೆ

ಅಧಿಕ ಲಾಭಾಂಶದ ಆಮಿಷವೊಡ್ಡಿ ಸಾವಿರಾರು ಜನರಿಗೆ ಕೋಟ್ಯಂತರ ರುಪಾಯಿ ವಂಚಿಸಿದ ಬೆಳಗಾವಿಯ ಶಿವಂ ಅಸೋಸಿಯೇಟ್ಸ್‌ ಮಾಲೀಕ, ಜನರಿಂದ ಪಡೆದ ಹಣವನ್ನು ಸನ್ನಿ ಲಿಯೋನ್‌ ಸೇರಿದಂತೆ ಹಲವು ನಟರಿಗೆ ನೀಡಿರುವುದು ಸಿಐಡಿ ತನಿಖೆಯಿಂದ ಬಹಿರಂಗವಾಗಿದೆ.

Read Full Story

More Trending News