ಬೆಂಗಳೂರು: ಬಿಜೆಪಿಯವರಿಗೆ ದೇಶ ಮತ್ತು ರಾಜ್ಯವನ್ನು ಆರ್ಥಿಕವಾಗಿ ಹೇಗೆ ನಡೆಸಬೇಕೆಂದು ಗೊತ್ತಿಲ್ಲ. ಕೇಂದ್ರ ಸರ್ಕಾರದ ಅನ್ಯಾಯದಿಂದಾಗಿ ನಮಗೆ ಇಷ್ಟೊಂದು ಸಾಲದ ಹೊರೆಯಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಸಹ ಸಾಲ ಮಾಡಿಯೇ ದೇಶವನ್ನು ನಡೆಸುತ್ತಿದ್ದು, ಈವರೆಗೆ ₹200 ಲಕ್ಷ ಕೋಟಿ ಸಾಲ ಮಾಡಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಸಾಲರಾಮಯ್ಯ ಎಂಬ ಬಿಜೆಪಿ ವ್ಯಂಗ್ಯಕ್ಕೆ ಬೀದರ್ ನಗರದಲ್ಲಿ ಶನಿವಾರ ಪ್ರತಿಕ್ರಿಯಿಸಿ, ಕೇಂದ್ರ ಸರ್ಕಾರ ನಮ್ಮ ₹80 ಸಾವಿರ ಕೋಟಿ ಪಾಲನ್ನು ನೀಡಿಲ್ಲ. ಅದರಿಂದಾಗಿ ನಮ್ಮ ಸರ್ಕಾರ ಸಾಲ ಮಾಡುವಂತಾಗಿದೆ. ಜೆಜೆಎಂ ಯೋಜನೆಯ ಕೇಂದ್ರದ ಪಾಲಾದ ₹15 ಸಾವಿರ ಕೋಟಿಯನ್ನು ನಾವು ಕೊಟ್ಟಿದ್ದೀವಿ. ಆದರೆ, ಪಂಚಾಯಿತಿಗೆ ಕೊಡಬೇಕಾದ 15ನೇ ಹಣಕಾಸಿನ ಪಾಲನ್ನು ಕೇಂದ್ರ ನೀಡಿಲ್ಲ ಎಂದು ಆರೋಪಿಸಿದರು.
10:15 AM (IST) Mar 08
Adi Lakshmi Purana Kannada Serial Episode Update: ಆದಿಲಕ್ಷ್ಮೀ ಪುರಾಣ ಧಾರಾವಾಹಿಯಲ್ಲಿ ಅಮೃತಾ ಪಾತ್ರದಲ್ಲಿ ರಕ್ಷಿತಾ ಅವರು ನಟಿಸುತ್ತಿದ್ದರು. ಈ ಸೀರಿಯಲ್ ಶುರುವಾಗಿ ಮೂರು ತಿಂಗಳು ಆಗಿತ್ತು. ಈಗ ಈ ಸೀರಿಯಲ್ನಿಂದ ಹೊರಬಂದಿದ್ದಾರೆ. ಇದಕ್ಕೆ ಕಾರಣ ಏನು?
09:54 AM (IST) Mar 08
ಕಳೆದ 11 ವರ್ಷಗಳಿಂದ ಗೂಗಲ್ ಮತ್ತು 7 ವರ್ಷಗಳಿಂದ ಆಲ್ಫಾಬೆಟ್ನ ಸಿಇಒ ಆಗಿರುವ ಭಾರತೀಯ ಮೂಲದ ಸಿಇಒ ಸುಂದರ್ ಪಿಚೈಗೆ ಕಂಪನಿಯ ಆಡಳಿತ ಮಂಡಳಿ ಮುಂದಿನ 3 ವರ್ಷದ ಅವಧಿಗೆ ವೇತನ, ಭತ್ಯೆ ಮತ್ತು ಪ್ರೋತ್ಸಾಹಕಗಳ ರೂಪದಲ್ಲಿ 6300 ಕೋಟಿ ರು.ನ ಆಫರ್ ನೀಡಿದೆ ಎಂದು ವರದಿಯಾಗಿದೆ.
09:48 AM (IST) Mar 08
Teachers' role in education quality ಗದಗದಲ್ಲಿ ಶಿಕ್ಷಣದ ಗುಣಮಟ್ಟದ ಬಗ್ಗೆ ಮಾತನಾಡಿದ ಬಸವರಾಜ ಹೊರಟ್ಟಿ, ಶಿಕ್ಷಕರಿಗೆ ಬೋಧನೆ ಬಿಟ್ಟು ಬೇರೆ ಕೆಲಸ ನೀಡಬಾರದು ಎಂದರು. ಶೇ.100 ಎಸ್ಎಸ್ಎಲ್ಸಿ ಫಲಿತಾಂಶ ಪಡೆದ ಶಾಲೆಗಳ ಸನ್ಮಾನದ ಕುರಿತು ತಿಳಿಯಿರಿ.
09:26 AM (IST) Mar 08
09:21 AM (IST) Mar 08
ಧಾರವಾಡದಲ್ಲಿ ನೂತನ ಪ್ರಾಂಶುಪಾಲರನ್ನು ಉದ್ದೇಶಿಸಿ ಮಾತನಾಡಿದ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ, ಸ್ಪರ್ಧಾತ್ಮಕ ಯುಗದಲ್ಲಿ ಯಶಸ್ಸು ಸಾಧಿಸಲು ವಿದ್ಯಾರ್ಥಿಗಳು ಕಾಲೇಜು ಆವರಣದಲ್ಲಿ ಇಂಗ್ಲಿಷ್ನಲ್ಲಿಯೇ ಸಂವಹನ ನಡೆಸುವಂತೆ ಪ್ರೇರೇಪಿಸಲು ಕರೆ ನೀಡಿದರು.
08:16 AM (IST) Mar 08
ಉಡುಪಿ ಜಿಲ್ಲೆಯಲ್ಲಿ ಬೀದಿನಾಯಿ ಹಾವಳಿ ತಡೆಗಟ್ಟಲು ಸುಪ್ರೀಂ ಕೋರ್ಟ್ ಮಾರ್ಗಸೂಚಿಯಂತೆ 18.50 ಎಕರೆ ಜಾಗದಲ್ಲಿ ಆಶ್ರಯ ತಾಣಗಳನ್ನು ನಿರ್ಮಿಸಲು ಜಿಲ್ಲಾಡಳಿತ ಮುಂದಾಗಿದೆ. ಬೀದಿನಾಯಿಗಳ ಹಾವಳಿ ತಡೆಗಟ್ಟುವ ಕುರಿತು ಜಿಲ್ಲಾ ಮಟ್ಟದ ಸಮಿತಿ ಸಭೆ
08:02 AM (IST) Mar 08
ಬೆಂಗಳೂರು-ಕನಕಪುರ ಹೆದ್ದಾರಿಯ ಅಗ್ರ ಕ್ರಾಸ್ ಬಳಿ ಕಾರ್ ಮತ್ತು ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಮತ್ತೊಬ್ಬ ವ್ಯಕ್ತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
07:51 AM (IST) Mar 08
ಕೊಲ್ಲಿ ರಾಷ್ಟ್ರಗಳ ಮೇಲೆ ಯುದ್ಧ ಮಾಡಿದ್ದಕ್ಕೆ ಇರಾನ್ ಪ್ರಧಾನಿ ಪೆಜೆಶ್ಕಿಯಾನ್ ಕ್ಷಮೆಯಾಚಿಸಿದರೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ಗೆ ಮತ್ತೆ ಎಚ್ಚರಿಕೆ ನೀಡಿದ್ದು, ‘ಇರಾನ್ಗೆ ಇಂದು ಮತ್ತೆ ಭಾರೀ ಹೊಡೆತ ನೀಡಲಿದ್ದೇವೆ’ ಎಂದಿದ್ದಾರೆ.
07:38 AM (IST) Mar 08
ಎಲ್ಪಿಜಿ ಸಿಲಿಂಡರ್ ದರ ಏರಿಕೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರವಾಗಿ ಖಂಡಿಸಿದ್ದು, ಇದು ಮೋದಿ ಸರ್ಕಾರದ ವಿಫಲ ವಿದೇಶಾಂಗ ನೀತಿಯ ಪರಿಣಾಮ ಎಂದು ಟೀಕಿಸಿದ್ದಾರೆ. ದೇಶದ ಮಾನ ಕಳೆದ ಪ್ರಧಾನಿ ಮೋದಿ ರಾಜೀನಾಮೆ ನೀಡಬೇಕೆಂದು ಅವರು ಆಗ್ರಹಿಸಿದ್ದಾರೆ.
07:15 AM (IST) Mar 08
‘ಮಾ ಇಂಟಿ ಬಂಗಾರಂ’ ತೆಲುಗು ಚಿತ್ರದ ಶೂಟಿಂಗ್ ಶಿವಮೊಗ್ಗ ಜಿಲ್ಲೆಯ ಕೆಲವು ಭಾಗಗಳಲ್ಲಿ, ವಿಶೇಷವಾಗಿ ಹೊಸನಗರ ತಾಲೂಕು ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚಿತ್ರೀಕರಣಗೊಳ್ಳುತ್ತಿದೆ. ಶೂಟಿಂಗ್ನಲ್ಲಿ ಪಾಲ್ಗೊಂಡಿರುವ ನಟಿ ಸಮಂತಾ, ಹೋಳಿ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡಿದ್ದರು
07:01 AM (IST) Mar 08
ಬಳ್ಳಾರಿಯ ಗುರುಕುಲ ವಸತಿ ಶಾಲೆಯಲ್ಲಿ, 9ನೇ ತರಗತಿ ವಿದ್ಯಾರ್ಥಿಯೊಬ್ಬ ಕ್ಷುಲ್ಲಕ ಕಾರಣಕ್ಕೆ ಇತರ ವಿದ್ಯಾರ್ಥಿಗಳು ಮತ್ತು ವಾರ್ಡನ್ ಮೇಲೆ ರಾಡ್ನಿಂದ ಹಲ್ಲೆ ನಡೆಸಿದ್ದಾನೆ. ಈ ಭೀಕರ ಘಟನೆಯಲ್ಲಿ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟಿದ್ದು, ಎಂಟು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
07:00 AM (IST) Mar 08
ತಮ್ಮ ಗ್ರಾಮದಲ್ಲಿನ ನೀರಿನ ತೀವ್ರ ಸಮಸ್ಯೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಕೆಂಪಯ್ಯನಹಟ್ಟಿ ಗ್ರಾಮದ ಮಕ್ಕಳ ಮನವಿಗೆ ರಾಜ್ಯ ಸರ್ಕಾರ ಸ್ಪಂದಿಸಿದ್ದು, ರಾಜ್ಯ ಬಜೆಟ್ನಲ್ಲಿ ಅನುದಾನ ಘೋಷಿಸಿದ್ದಕ್ಕೆ ಮಕ್ಕಳು ಸಂತಸ ವ್ಯಕ್ತಪಡಿಸಿದ್ದಾರೆ.
06:46 AM (IST) Mar 08
ಮದ್ಯದ ಅಂಶದ ಆಧಾರದಲ್ಲಿ ಹೊಸ ಸುಂಕ ವ್ಯವಸ್ಥೆಯನ್ನು ಏ.1ರಿಂದಲೇ ಜಾರಿಗೆ ತರಲಾಗುವುದು ಎಂದು ಬಜೆಟ್ನಲ್ಲಿ ಘೋಷಿಸಿರುವುದರಿಂದ ಬಿಯರ್, ವೈನ್ ಅಗ್ಗವಾದರೆ, ವಿಸ್ಕಿ, ರಮ್ ದುಬಾರಿಯಾಗುವ ಸಾಧ್ಯತೆ ಇದೆ.