LIVE NOW
Published : Mar 08, 2026, 06:36 AM ISTUpdated : Mar 08, 2026, 10:15 AM IST

Karnataka News Live: 4 ಜಾಬ್‌ ಆಫರ್‌ ಬಿಟ್ಟು ಆದಿ ಲಕ್ಷ್ಮೀ ಪುರಾಣ ಸೀರಿಯಲ್‌ಗೆ ಬಂದಿದ್ದ ನಟಿ; 3 ತಿಂಗಳಿಗೇ ಧಾರಾವಾಹಿಯಿಂದ ಔಟ್

ಸಾರಾಂಶ

ಬೆಂಗಳೂರು: ಬಿಜೆಪಿಯವರಿಗೆ ದೇಶ ಮತ್ತು ರಾಜ್ಯವನ್ನು ಆರ್ಥಿಕವಾಗಿ ಹೇಗೆ ನಡೆಸಬೇಕೆಂದು ಗೊತ್ತಿಲ್ಲ. ಕೇಂದ್ರ ಸರ್ಕಾರದ ಅನ್ಯಾಯದಿಂದಾಗಿ ನಮಗೆ ಇಷ್ಟೊಂದು ಸಾಲದ ಹೊರೆಯಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಸಹ ಸಾಲ ಮಾಡಿಯೇ ದೇಶವನ್ನು ನಡೆಸುತ್ತಿದ್ದು, ಈವರೆಗೆ ₹200 ಲಕ್ಷ ಕೋಟಿ ಸಾಲ ಮಾಡಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಸಾಲರಾಮಯ್ಯ ಎಂಬ ಬಿಜೆಪಿ ವ್ಯಂಗ್ಯಕ್ಕೆ ಬೀದರ್‌ ನಗರದಲ್ಲಿ ಶನಿವಾರ ಪ್ರತಿಕ್ರಿಯಿಸಿ, ಕೇಂದ್ರ ಸರ್ಕಾರ ನಮ್ಮ ₹80 ಸಾವಿರ ಕೋಟಿ ಪಾಲನ್ನು ನೀಡಿಲ್ಲ. ಅದರಿಂದಾಗಿ ನಮ್ಮ ಸರ್ಕಾರ ಸಾಲ ಮಾಡುವಂತಾಗಿದೆ. ಜೆಜೆಎಂ ಯೋಜನೆಯ ಕೇಂದ್ರದ ಪಾಲಾದ ₹15 ಸಾವಿರ ಕೋಟಿಯನ್ನು ನಾವು ಕೊಟ್ಟಿದ್ದೀವಿ. ಆದರೆ, ಪಂಚಾಯಿತಿಗೆ ಕೊಡಬೇಕಾದ 15ನೇ ಹಣಕಾಸಿನ ಪಾಲನ್ನು ಕೇಂದ್ರ ನೀಡಿಲ್ಲ ಎಂದು ಆರೋಪಿಸಿದರು.

10:15 AM (IST) Mar 08

4 ಜಾಬ್‌ ಆಫರ್‌ ಬಿಟ್ಟು ಆದಿ ಲಕ್ಷ್ಮೀ ಪುರಾಣ ಸೀರಿಯಲ್‌ಗೆ ಬಂದಿದ್ದ ನಟಿ; 3 ತಿಂಗಳಿಗೇ ಧಾರಾವಾಹಿಯಿಂದ ಔಟ್

Adi Lakshmi Purana Kannada Serial Episode Update: ಆದಿಲಕ್ಷ್ಮೀ ಪುರಾಣ ಧಾರಾವಾಹಿಯಲ್ಲಿ ಅಮೃತಾ ಪಾತ್ರದಲ್ಲಿ ರಕ್ಷಿತಾ ಅವರು ನಟಿಸುತ್ತಿದ್ದರು. ಈ ಸೀರಿಯಲ್‌ ಶುರುವಾಗಿ ಮೂರು ತಿಂಗಳು ಆಗಿತ್ತು. ಈಗ ಈ ಸೀರಿಯಲ್‌ನಿಂದ ಹೊರಬಂದಿದ್ದಾರೆ. ಇದಕ್ಕೆ ಕಾರಣ ಏನು?

 

Read Full Story

09:54 AM (IST) Mar 08

ಗೂಗಲ್‌ ಸಿಇಒಪಿಚೈಗೆ 3 ವರ್ಷಕ್ಕೆ 6300 ಕೋಟಿ ರು. ವೇತನ, ಭತ್ಯೆ !

ಕಳೆದ 11 ವರ್ಷಗಳಿಂದ ಗೂಗಲ್‌ ಮತ್ತು 7 ವರ್ಷಗಳಿಂದ ಆಲ್ಫಾಬೆಟ್‌ನ ಸಿಇಒ ಆಗಿರುವ ಭಾರತೀಯ ಮೂಲದ ಸಿಇಒ ಸುಂದರ್‌ ಪಿಚೈಗೆ ಕಂಪನಿಯ ಆಡಳಿತ ಮಂಡಳಿ ಮುಂದಿನ 3 ವರ್ಷದ ಅವಧಿಗೆ ವೇತನ, ಭತ್ಯೆ ಮತ್ತು ಪ್ರೋತ್ಸಾಹಕಗಳ ರೂಪದಲ್ಲಿ 6300 ಕೋಟಿ ರು.ನ ಆಫರ್‌ ನೀಡಿದೆ ಎಂದು ವರದಿಯಾಗಿದೆ.

Read Full Story

09:48 AM (IST) Mar 08

Education quality - ಶಿಕ್ಷಕರಿಗೆ ಬೋಧನೆ ಬಿಟ್ಟು ಬೇರೆ ಕೆಲಸ ನೀಡಬಾರದು -ಬಸವರಾಜ ಹೊರಟ್ಟಿ

Teachers' role in education quality ಗದಗದಲ್ಲಿ ಶಿಕ್ಷಣದ ಗುಣಮಟ್ಟದ ಬಗ್ಗೆ ಮಾತನಾಡಿದ ಬಸವರಾಜ ಹೊರಟ್ಟಿ, ಶಿಕ್ಷಕರಿಗೆ ಬೋಧನೆ ಬಿಟ್ಟು ಬೇರೆ ಕೆಲಸ ನೀಡಬಾರದು ಎಂದರು. ಶೇ.100 ಎಸ್‌ಎಸ್‌ಎಲ್‌ಸಿ ಫಲಿತಾಂಶ ಪಡೆದ ಶಾಲೆಗಳ ಸನ್ಮಾನದ ಕುರಿತು ತಿಳಿಯಿರಿ.

Read Full Story

09:26 AM (IST) Mar 08

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ - ಟಿಕೆಟ್‌ಗಾಗಿ ತೆರೆಮರೆ ಕಸರತ್ತು

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ ಟಿಕೆಟ್‌ಗಾಗಿ ಹಿರಿಯ ಮುಖಂಡ ಕೃಷ್ಣಮೂರ್ತಿ ಪವಾರ್ ಮನವಿ ಮಾಡಿದ್ದಾರೆ. ಮತ್ತೊಂದೆಡೆ, ಮುಸ್ಲಿಂ ಸಮುದಾಯಕ್ಕೆ ಟಿಕೆಟ್ ನೀಡಬೇಕೆಂಬ ಒತ್ತಾಯದ ಮೇರೆಗೆ ಕಾಂಗ್ರೆಸ್‌ನಿಂದ ಎ.ಆರ್.ಎಂ.ಹುಸೇನ್ ಆಕಾಂಕ್ಷಿಯಾಗಿದ್ದಾರೆ.
Read Full Story

09:21 AM (IST) Mar 08

ಕಾಲೇಜು ಕ್ಯಾಂಪಸ್‌ನಲ್ಲಿ ಕನ್ನಡ ಬೇಡ, ವಿದ್ಯಾರ್ಥಿಗಳು ಇಂಗ್ಲಿಷಿನಲ್ಲೇ ಮಾತಾಡಬೇಕು - ಸಚಿವ ಎಂಸಿ ಸುಧಾಕರ್

ಧಾರವಾಡದಲ್ಲಿ ನೂತನ ಪ್ರಾಂಶುಪಾಲರನ್ನು ಉದ್ದೇಶಿಸಿ ಮಾತನಾಡಿದ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ, ಸ್ಪರ್ಧಾತ್ಮಕ ಯುಗದಲ್ಲಿ ಯಶಸ್ಸು ಸಾಧಿಸಲು ವಿದ್ಯಾರ್ಥಿಗಳು ಕಾಲೇಜು ಆವರಣದಲ್ಲಿ ಇಂಗ್ಲಿಷ್‌ನಲ್ಲಿಯೇ ಸಂವಹನ ನಡೆಸುವಂತೆ ಪ್ರೇರೇಪಿಸಲು ಕರೆ ನೀಡಿದರು. 

Read Full Story

08:16 AM (IST) Mar 08

ಉಡುಪಿ ಜಿಲ್ಲೆಯಲ್ಲಿ ಬೀದಿನಾಯಿ ಆಶ್ರಯಕ್ಕೆ 18.50 ಎಕರೆ ಜಾಗ - ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ.

ಉಡುಪಿ ಜಿಲ್ಲೆಯಲ್ಲಿ ಬೀದಿನಾಯಿ ಹಾವಳಿ ತಡೆಗಟ್ಟಲು ಸುಪ್ರೀಂ ಕೋರ್ಟ್ ಮಾರ್ಗಸೂಚಿಯಂತೆ 18.50 ಎಕರೆ ಜಾಗದಲ್ಲಿ ಆಶ್ರಯ ತಾಣಗಳನ್ನು ನಿರ್ಮಿಸಲು ಜಿಲ್ಲಾಡಳಿತ ಮುಂದಾಗಿದೆ. ಬೀದಿನಾಯಿಗಳ ಹಾವಳಿ ತಡೆಗಟ್ಟುವ ಕುರಿತು ಜಿಲ್ಲಾ ಮಟ್ಟದ ಸಮಿತಿ ಸಭೆ

Read Full Story

08:02 AM (IST) Mar 08

ಬೆಂಗಳೂರು- ಕನಕಪುರ ಹೆದ್ದಾರಿಯಲ್ಲಿ ಭೀಕರ ಅಪಘಾತ ; ಕಾರ್‌ನಲ್ಲಿದ್ದ ಮೂವರ ದುರ್ಮರಣ

ಬೆಂಗಳೂರು-ಕನಕಪುರ ಹೆದ್ದಾರಿಯ ಅಗ್ರ ಕ್ರಾಸ್ ಬಳಿ ಕಾರ್ ಮತ್ತು ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಮತ್ತೊಬ್ಬ ವ್ಯಕ್ತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Read Full Story

07:51 AM (IST) Mar 08

ಇರಾನ್‌ ಮೇಲೆ ಭಾರೀ ದಾಳಿ - ಟ್ರಂಪ್‌, ನೆತನ್ಯಾಹು

ಕೊಲ್ಲಿ ರಾಷ್ಟ್ರಗಳ ಮೇಲೆ ಯುದ್ಧ ಮಾಡಿದ್ದಕ್ಕೆ ಇರಾನ್ ಪ್ರಧಾನಿ ಪೆಜೆಶ್ಕಿಯಾನ್ ಕ್ಷಮೆಯಾಚಿಸಿದರೂ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಇರಾನ್‌ಗೆ ಮತ್ತೆ ಎಚ್ಚರಿಕೆ ನೀಡಿದ್ದು, ‘ಇರಾನ್‌ಗೆ ಇಂದು ಮತ್ತೆ ಭಾರೀ ಹೊಡೆತ ನೀಡಲಿದ್ದೇವೆ’ ಎಂದಿದ್ದಾರೆ.

Read Full Story

07:38 AM (IST) Mar 08

ಸಿಲಿಂಡ‌ರ್ ಬೆಲೆ ಹೆಚ್ಚಳ ಶರಣಾಗತಿಯ ಫಲ - ಮೋದಿ ಅವಧಿಯಲ್ಲಿ ದೇಶದ ಸಾಲ 218 ಲಕ್ಷ ಕೋಟಿ - ಸಿದ್ದರಾಮಯ್ಯ

ಎಲ್‌ಪಿಜಿ ಸಿಲಿಂಡರ್ ದರ ಏರಿಕೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರವಾಗಿ ಖಂಡಿಸಿದ್ದು, ಇದು ಮೋದಿ ಸರ್ಕಾರದ ವಿಫಲ ವಿದೇಶಾಂಗ ನೀತಿಯ ಪರಿಣಾಮ ಎಂದು ಟೀಕಿಸಿದ್ದಾರೆ. ದೇಶದ ಮಾನ ಕಳೆದ ಪ್ರಧಾನಿ ಮೋದಿ ರಾಜೀನಾಮೆ ನೀಡಬೇಕೆಂದು ಅವರು ಆಗ್ರಹಿಸಿದ್ದಾರೆ.

Read Full Story

07:15 AM (IST) Mar 08

ಶಿವಮೊಗ್ಗ - ಹೊಸನಗರದಲ್ಲಿ ಪತಿ ಜೊತೆ ಹೋಳಿ ಆಚರಿಸಿದ ಸಮಂತಾ

‘ಮಾ ಇಂಟಿ ಬಂಗಾರಂ’ ತೆಲುಗು ಚಿತ್ರದ ಶೂಟಿಂಗ್ ಶಿವಮೊಗ್ಗ ಜಿಲ್ಲೆಯ ಕೆಲವು ಭಾಗಗಳಲ್ಲಿ, ವಿಶೇಷವಾಗಿ ಹೊಸನಗರ ತಾಲೂಕು ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚಿತ್ರೀಕರಣಗೊಳ್ಳುತ್ತಿದೆ. ಶೂಟಿಂಗ್‌ನಲ್ಲಿ ಪಾಲ್ಗೊಂಡಿರುವ ನಟಿ ಸಮಂತಾ, ಹೋಳಿ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡಿದ್ದರು

Read Full Story

07:01 AM (IST) Mar 08

ಬಳ್ಳಾರಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಯ ಹುಚ್ಚಾಟ - ಓರ್ವ ವಿದ್ಯಾರ್ಥಿ ಸಾವು, ವಾರ್ಡನ್ ಸೇರಿ 7 ಜನರಿಗೆ ಗಾಯ

ಬಳ್ಳಾರಿಯ ಗುರುಕುಲ ವಸತಿ ಶಾಲೆಯಲ್ಲಿ, 9ನೇ ತರಗತಿ ವಿದ್ಯಾರ್ಥಿಯೊಬ್ಬ ಕ್ಷುಲ್ಲಕ ಕಾರಣಕ್ಕೆ ಇತರ ವಿದ್ಯಾರ್ಥಿಗಳು ಮತ್ತು ವಾರ್ಡನ್ ಮೇಲೆ ರಾಡ್‌ನಿಂದ ಹಲ್ಲೆ ನಡೆಸಿದ್ದಾನೆ. ಈ ಭೀಕರ ಘಟನೆಯಲ್ಲಿ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟಿದ್ದು, ಎಂಟು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. 

Read Full Story

07:00 AM (IST) Mar 08

ನೀರಿಗಾಗಿ ಮಕ್ಕಳಿಂದ ಪತ್ರ - ₹490 ಕೋಟಿ ಕೊಟ್ಟ ಸಿಎಂ!

ತಮ್ಮ ಗ್ರಾಮದಲ್ಲಿನ ನೀರಿನ ತೀವ್ರ ಸಮಸ್ಯೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಕೆಂಪಯ್ಯನಹಟ್ಟಿ ಗ್ರಾಮದ ಮಕ್ಕಳ ಮನವಿಗೆ ರಾಜ್ಯ ಸರ್ಕಾರ ಸ್ಪಂದಿಸಿದ್ದು, ರಾಜ್ಯ ಬಜೆಟ್‌ನಲ್ಲಿ ಅನುದಾನ ಘೋಷಿಸಿದ್ದಕ್ಕೆ ಮಕ್ಕಳು ಸಂತಸ ವ್ಯಕ್ತಪಡಿಸಿದ್ದಾರೆ.

Read Full Story

06:46 AM (IST) Mar 08

ಮದ್ಯ ಪ್ರಿಯರಿಗೆ ಗುಡ್ ನ್ಯೂಸ್ - ಬಿಯರ್‌, ವೈನ್‌ ಅಗ್ಗ?

ಮದ್ಯದ ಅಂಶದ ಆಧಾರದಲ್ಲಿ ಹೊಸ ಸುಂಕ ವ್ಯವಸ್ಥೆಯನ್ನು ಏ.1ರಿಂದಲೇ ಜಾರಿಗೆ ತರಲಾಗುವುದು ಎಂದು ಬಜೆಟ್‌ನಲ್ಲಿ ಘೋಷಿಸಿರುವುದರಿಂದ ಬಿಯರ್‌, ವೈನ್‌ ಅಗ್ಗವಾದರೆ, ವಿಸ್ಕಿ, ರಮ್‌ ದುಬಾರಿಯಾಗುವ ಸಾಧ್ಯತೆ ಇದೆ.

Read Full Story

More Trending News