ತುಮಕೂರಿನ ಕುಣಿಗಲ್ ಬಳಿ ಭೀಕರ ರಸ್ತೆ ಅಪಘಾತದಲ್ಲಿ ಭಜರಂಗದಳದ ಕಾರ್ಯಕರ್ತರಾದ ಆಕಾಶ್ (29), ಮಂಜುನಾಥ್ (34) ಮೃತಪಟ್ಟ ಘಟನೆ ನಡೆದಿದೆ. ತುಮಕೂರಿನಿಂದ ಕುಣಿಗಲ್ ಕಡೆಗೆ ವೇಗವಾಗಿ ಬಂದ ಬೊಲೆರೋ ವಾಹನ ಬೈಕ್ಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಇತ್ತ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಚುನಾವಣೆ ಸಂಬಂಧ ಜಟಾಪಟಿ ನಡೆಯುತ್ತಿದೆ. ಜನಗಣತಿ ಹಿನ್ನೆಲೆಯಲ್ಲಿ ಚುನಾವಣೆ ನಡೆಸಲು ಸೆಪ್ಟಂಬರ್ ವರೆಗೂ ರಾಜ್ಯ ಸರ್ಕಾರ ಕಾಲಾವಕಾಶ ಕೇಳಿತ್ತು. ಇಂದು ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆ ಚುನಾವಣೆ ಬಗ್ಗೆ ಆಯೋಗ ಮಹತ್ವದ ಸಭೆ ಕರೆದಿದೆ. ಇಂದಿನ ಪ್ರತಿ ಕ್ಷಣದ ಸುದ್ದಿ ಅಪ್ಡೇಟ್ ಇಲ್ಲಿದೆ.

09:39 AM (IST) May 08
09:33 AM (IST) May 08
ಕಾರ್ಮಿಕ ಇಲಾಖೆಯಡಿಯಲ್ಲಿದ್ದ ಕರ್ನಾಟಕ ಮೋಟಾರು ಸಾರಿಗೆ ಕಾರ್ಮಿಕರ ಕಲ್ಯಾಣ ಮಂಡಳಿಯನ್ನು ಸಾರಿಗೆ ಇಲಾಖೆ ವ್ಯಾಪ್ತಿಗೆ ತರಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ಈ ತಿದ್ದುಪಡಿಯಿಂದಾಗಿ, ಸಾರಿಗೆಯೇತರ ವಾಹನಗಳಿಂದ ಸಂಗ್ರಹಿಸಿದ ಸೆಸ್ ನಿಧಿಯನ್ನು ಕಾರ್ಮಿಕರ ಕಲ್ಯಾಣ ಕಾರ್ಯಕ್ರಮಗಳಿಗೆ ಬಳಸಲಿದೆ.
09:20 AM (IST) May 08
ದುರಂತದ ಬಳಿಕ ಎಚ್ಚೆತ್ತ ಬೆಂಗಳೂರು, 350 ಕಟ್ಟಡ ಧ್ವಂಸಕ್ಕೆ ಜಿಬಿಎ ಆಯುಕ್ತರ ನೋಟಿಸ್, ಶಿಥಿಲಾವಸ್ಥೆಯಲ್ಲಿರುವ ಕಾಂಪೌಂಡ್ ಹಗೂ ಕಟ್ಟಡಗಳು ಮಳೆಗೆ ಧರೆಗುರುಳಿ ಅನಾಹುತ ಸಂಭವಿಸುವ ಮೊದಲೇ ಧ್ವಂಸಗೊಳಿಸಲು ಸೂಚಿಸಲಾಗಿದೆ.
08:54 AM (IST) May 08
08:45 AM (IST) May 08
ಕರ್ನಾಟಕದ 18 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, ಬೆಂಗಳೂರಲ್ಲಿ ಮೇ.11ರ ವರೆಗೆ ಭಾರಿ ಮಳೆ, ಇಂದು ಮುಂಜಾನೆಯಿಂದಲೇ ಹಲೆವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಇದರ ಬೆನ್ನಲ್ಲೇ ಅಲರ್ಟ್ ಮೆಸೇಜ್ ಬಂದಿದೆ.
08:22 AM (IST) May 08
ಮಡಿಕೇರಿ ಬಳಿ ಬಸ್ ಚಲಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ, ಡ್ರೈವರ್ ಸ್ಥಿತಿ ಗಂಭೀರವಾಗಿದೆ. ಇಂದು ಮುಂಜಾನೆ ಘಟನೆ ನಡೆದಿದೆ. ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ ಅಪಘಾತಕ್ಕೀಡಾಗಿದೆ.
08:17 AM (IST) May 08
08:03 AM (IST) May 08
07:55 AM (IST) May 08
ರಾಯಚೂರು ಲೇಡಿ ಕಾನ್ಸ್ಸ್ಟೇಬಲ್ ಜೊತೆ ಯಾದಿಗಿರಿ ಪಿಎಸ್ಐ ಲವ್ ಸೆಕ್ಸ್ ದೋಖಾ, ಈ ಪ್ರಕರಣ ಸಂಬಂಧ ಕೇಸ್ ದಾಖಲಾಗಿದೆ. ಮಹಿಳಾ ಪೇದಿ ದೂರು ನೀಡಿದ್ದು, ಇದೀಗ ಇಡೀ ಕೇಸ್ ಹೊಸ ತಿರುವು ಪಡೆದುಕೊಂಡಿದೆ. ಪಿಎಸ್ಐ ವಿರುದ್ಧ ಹಲವು ಕೇಸ್ ದಾಖಲಾಗಿದೆ.
07:52 AM (IST) May 08
07:18 AM (IST) May 08
ಬೈಕ್ನಲ್ಲಿ ತೆರಳುತ್ತಿದ್ದ ಆಕಾಶ್ ಹಾಗೂ ಮಂಜುನಾಥ್ ಇಬ್ಬರು ಘಟನೆಯಲ್ಲಿ ಮೃತಪಟ್ಟಿದ್ದಾರೆ. ವೇಗವಾಗಿ ಬಂದ ಬೊಲೆರೋ ವಾಹನ ಬೈಕ್ಗೆ ಡಿಕ್ಕಿಯಾಗಿದೆ. ಡಿಕ್ಕಿಯಾದ ರಭಸಕ್ಕೆ ಸ್ಥಳದಲ್ಲೇ ಆಕಾಶ್ ಮೃತಪಟ್ಟರೆ, ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮಂಜುನಾಥ್ ಸಾವು ಕಂಡಿದ್ದಾರೆ. ಕುಣಿಗಲ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ, ನೀಡಿ ಪರಿಶೀಲನೆ ನಡೆಸಿದ್ದಾರೆ.