LIVE NOW
Published : Dec 08, 2025, 07:12 AM ISTUpdated : Dec 08, 2025, 04:46 PM IST

Karnataka News Live: ಟಿಪ್ಸ್‌ ಹಣದಿಂದಲೇ 10 ಲಕ್ಷದ ಕಾರ್‌ ಖರೀದಿ ಮಾಡಿದ ವ್ಯಕ್ತಿ!

ಸಾರಾಂಶ

 

ಬೆಳಗಾವಿ: ಚಳಿಗಾಲದ ಅಧಿವೇಶನದಲ್ಲಿ ನಾಯಕತ್ವ ಬದಲಾವಣೆ ವಿಚಾರ ಮುಂದಿಟ್ಟುಕೊಂಡು ವಿರೋಧ ಪಕ್ಷಗಳು ಮುಗಿಬೀಳುವ ಸಾಧ್ಯತೆಯಿದೆ. ಅವಿಶ್ವಾಸ ನಿರ್ಣಯ ಮಂಡನೆಗೂ ಪ್ರತಿಪಕ್ಷಗಳು ಅಣಿಯಾಗಿದ್ದವು, ಇದರ ಸೂಚನೆ ಅರಿತ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ ಅವರು ಬ್ರೇಕ್‌ಫಾಸ್ಟ್‌ ಮೀಟಿಂಗ್‌ ಮೂಲಕ ಒಗ್ಗಟ್ಟು ಪ್ರದರ್ಶಿಸಿದ್ದಾರೆ.

ಜತೆಗೆ ಬಿಜೆಪಿ ಒಡಕು, ಬಿಜೆಪಿ-ಜೆಡಿಎಸ್‌ ನಡುವಿನ ಸಾಮರಸ್ಯ ಕೊರತೆ, ಜೆಡಿಎಸ್‌ನಲ್ಲಿ ಜಿ.ಟಿ.ದೇವೇಗೌಡ ಸೇರಿ ಹಲವು ನಾಯಕರು ಪಕ್ಷದ ವಿರುದ್ಧವೇ ಧ್ವನಿ ಎತ್ತಿರುವುದನ್ನೂ ಕಾಂಗ್ರೆಸ್‌ ದಾಳವಾಗಿ ಬಳಸುವ ಸಾಧ್ಯತೆಯಿದೆ. ಮತ್ತೊಂದೆಡೆ ಕಬ್ಬು ಬೆಂಬಲ ಬೆಲೆ ಹೆಚ್ಚಳ ಮಾಡದಿರುವ ಕೇಂದ್ರದ ನಿರ್ಲಕ್ಷ್ಯ, ಸಕ್ಕರೆ ಎಂಎಸ್‌ಪಿ ದರ ಹೆಚ್ಚಿಸದ, ರಾಜ್ಯದಿಂದ ಹೆಚ್ಚಿನ ಎಥೆನಾಲ್‌ ಖರೀದಿಸದ ಕೇಂದ್ರ ಸರ್ಕಾರದಿಂದಲೇ ಕಬ್ಬು ಬೆಲೆ ಕುಸಿದಿದೆ ಎಂದು ಬೊಟ್ಟು ಮಾಡಿ ಬಿಜೆಪಿ ಮೇಲೆ ಸವಾರಿ ಮಾಡಲು ಕಾಂಗ್ರೆಸ್ ಸಜ್ಜಾಗಿದೆ.

04:46 PM (IST) Dec 08

ಟಿಪ್ಸ್‌ ಹಣದಿಂದಲೇ 10 ಲಕ್ಷದ ಕಾರ್‌ ಖರೀದಿ ಮಾಡಿದ ವ್ಯಕ್ತಿ!

ಅಂದಾಜು 10 ಲಕ್ಷ ರೂಪಾಯಿ ಮೌಲ್ಯದ ಕಾರ್‌ಅನ್ನು ಬರೀ ಟಿಪ್ಸ್‌ಗಳಿಂದ ಬಂದ ಹಣದಲ್ಲೇ ಖರೀದಿ ಮಾಡಿದ್ದಾನೆ. ಆತ ಕ್ರೂಸ್‌ ಹಡಗಿನಲ್ಲಿ ಕೆಲಸ ಮಾಡುತ್ತಿದ್ದು, ತಮ್ಮ ರೀಲ್ಸ್, ಕಂಟೆಂಟ್‌ ಮೂಲಕ ಇತರರರಿಗೆ ಕ್ರೂಸ್‌ ಶಿಪ್‌ನಲ್ಲಿ ಕೆಲಸ ಮಾಡಲು ಪ್ರೇರೇಪಿಸುತ್ತಿದ್ದಾರೆ.

 

Read Full Story

04:41 PM (IST) Dec 08

ಬಿರಿಯಾನಿ ಹೋಟೆಲ್ ಕುಟುಂಬದ ಸಾಮೂಹಿಕ ಆತ್ಮ*ಹತ್ಯೆ ಕೇಸಿಗೆ ಟ್ವಿಸ್ಟ್; ವಿಷ ಸೇವಿಸದ ಅಜ್ಜಿ ಸತ್ತಿದ್ಹೇಗೆ!

ಬೆಂಗಳೂರಿನ ಸುದ್ದುಗುಂಟೆಪಾಳ್ಯದಲ್ಲಿ ವ್ಯಾಪಾರದ ನಷ್ಟ ಮತ್ತು ಸಾಲದ ಸುಳಿಗೆ ಸಿಲುಕಿ ತಾಯಿ ಮತ್ತು ಮಗ ವಿಷ ಸೇವಿಸಿ ಆತ್ಮ*ಹತ್ಯೆ ಮಾಡಿಕೊಂಡಿದ್ದಾರೆ. ಆದರೆ, ವಿಷ ಸೇವಿಸದ ಅಜ್ಜಿಯೂ ಹೇಗೆ ಸತ್ತರು ಎಂಬುದು ಮರಣೋತ್ತರ ಪರೀಕ್ಷೆಯಿಂದ ತಿಳಿದುಬಂದಿದೆ. ಇದು ಕೇಸಿಗೆ ಟ್ವಿಸ್ಟ್ ನೀಡಿದೆ.

Read Full Story

04:32 PM (IST) Dec 08

Mark Movie - ಡಿಸೆಂಬರ್‌ನಲ್ಲಿ ಏಕಕಾಲಕ್ಕೆ ಸ್ಟಾರ್‌ಗಳ ಸಿನಿಮಾ ರಿಲೀಸ್;‌ ಕಿಚ್ಚ ಸುದೀಪ್‌ ಏನಂದ್ರು?

Kiccha Sudeep Mark Movie: ನಟ ಕಿಚ್ಚ ಸುದೀಪ್ ಅವರು ನಟಿಸಿರುವ ಮಾರ್ಕ್ ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಈ ಸಿನಿಮಾದ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ನಡೆಯಿತು. ಆ ವೇಳೆ ಸಿನಿಮಾ ಕುರಿತಂತೆ ಪ್ರಶ್ನೆಗಳನ್ನು ಕೇಳಲಾಯ್ತು. ಆಗ ಸಿನಿಮಾ ತಂಡವು ಏನು ಹೇಳಿದೆ?

 

Read Full Story

04:04 PM (IST) Dec 08

ಚೈತ್ರಾ ಕುಂದಾಪುರ, ಸ್ಪಂದನಾ ಸೋಮಣ್ಣ ನಡುವೆ ತಂದಿಟ್ಟು ನಕ್ಕ ವಿಲನ್‌ Bigg Boss; ಯಾಕ್ರೀ ಹೀಗ್‌ ಮಾಡ್ತೀರಾ?

Bigg Boss Kannada Season 12 Episode Update: ಬಿಗ್‌ ಬಾಸ್‌ ಕನ್ನಡ ಸೀಸನ್‌ 12 ಶೋನಲ್ಲಿ ಸ್ಪಂದನಾ ಸೋಮಣ್ಣ ಅವರು ಕಾಲಿಗೆ ಗಾಯ ಮಾಡಿಕೊಂಡಿದ್ದರು. ಹೀಗಾಗಿ ಇವರ ವೈಯಕ್ತಿಕ ಕೆಲಸಗಳನ್ನು ಮಾಡೋದು ಕೂಡ ಕಷ್ಟ ಆಗಿತ್ತು. ಇವ ಬದಲು ಚೈತ್ರಾ ಆಟ ಆಡಿ ಕ್ಯಾಪ್ಟನ್‌ ಆದರು.

 

Read Full Story

03:59 PM (IST) Dec 08

'ಏಯ್, ಹಾಗೆಲ್ಲಾ ನಾಟಿ ಕೋಳಿ ಬಿಡಬಾರದು, ಏನೂ ಆಗೊಲ್ಲ ತಿನ್ನಬೇಕು' - ಆರ್. ಅಶೋಕ್‌ಗೆ ಸಿದ್ದರಾಮಯ್ಯ ಕಿವಿಮಾತು!

ಬೆಳಗಾವಿ ಚಳಿಗಾಲದ ಅಧಿವೇಶನದ ವೇಳೆ, ಸಿಎಂ ಸಿದ್ದರಾಮಯ್ಯ ಅವರು ಆರ್. ಅಶೋಕ್ ಅವರನ್ನು ನೋಡಿ, 'ಏನು ಅಶೋಕ್, ಸಣ್ಣಗಾಗಿದ್ಯಾ?' ಎಂದು ತಕ್ಷಣ ಕೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಅಶೋಕ್, 'ನಾಟಿ ಕೋಳಿ ತಿನ್ನುವುದು ಬಿಟ್ಟುಬಿಟ್ಟಿದ್ದೀನಿ ಸಾರ್' ಎಂದು ಹೇಳಿದ್ದಾರೆ.

Read Full Story

03:56 PM (IST) Dec 08

ದ್ವೇಷ ಭಾಷಣ ತಡೆಗೆ ಹೊಸ ಕಾನೂನು - ಈ ಕಾಯ್ದೆ ತರ್ತಿರೋ ಟಾರ್ಗೆಟ್ ನಾನೇ ಎಂದ ಯತ್ನಾಳ್!

Basangowda patil on hate speech bill: ದ್ವೇಷ ಭಾಷಣ ನಿಯಂತ್ರಣಕ್ಕೆ ಹೊಸ ಕಾನೂನು ತರುವ ಸರ್ಕಾರದ ಚಿಂತನೆಯು ತನ್ನನ್ನೇ ಗುರಿಯಾಗಿಸಿಕೊಂಡಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗಂಭೀರ ಆರೋಪ ಮಾಡಿದ್ದಾರೆ. ಹಿಂದೂಗಳ ಪರ ಮಾತನಾಡುವವರನ್ನು ಹತ್ತಿಕ್ಕಲು ಈ ಪ್ರಯತ್ನ ನಡೆದಿದೆ ಎಂದು ಕಿಡಿಕಾರಿದರು.

Read Full Story

03:27 PM (IST) Dec 08

BBK 12 - ಗಿಲ್ಲಿ ನಟನ ಜೊತೆ ಅಮಾನವೀಯವಾಗಿ ನಡ್ಕೊಂಡ ರಘು; ಪ್ರತ್ಯಕ್ಷಸಾಕ್ಷಿ ಅಭಿಷೇಕ್‌ ಶ್ರೀಕಾಂತ್‌ ಏನಂದ್ರು?

Bigg Boss Kannada Season 12 Episode Update: ಬಿಗ್‌ ಬಾಸ್‌ ಕನ್ನಡ ಸೀಸನ್‌ 12 ಶೋನಲ್ಲಿ 11ನೇ ವಾರ ಹೊರಗಡೆ ಬಂದಿರುವ ಅಭಿಷೇಕ್‌ ಶ್ರೀಕಾಂತ್‌ ಅವರು ಗಿಲ್ಲಿ ನಟ ಹಾಗೂ ರಘು ನಡುವಿನ ಬಾಂಧವ್ಯದ ಜೊತೆಗೆ ರಘು ಬಳಿ ಮನವಿ ಮಾಡಿದ್ರೂ ಚಪಾತಿ ಕೊಟ್ಟಿಲ್ಲ ಎನ್ನುವ ವಿಚಾರ ಚರ್ಚೆಯಾಗಿದೆ.

Read Full Story

03:15 PM (IST) Dec 08

'ನಮ್ಮ ವಯಸ್ಸು ಮೀರುತ್ತಿದೆ, ಬೇಗ ಉದ್ಯೋಗ ಕರೆಯಲು ಹೇಳಿ ಸರ್' ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಎದುರು ಗಳಗಳನೇ ಅತ್ತ ಕೊಪ್ಪಳದ ಯುವತಿ

ಧಾರವಾಡದಲ್ಲಿ ನಿಗದಿಯಾಗಿದ್ದ ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗೆ ಅನುಮತಿ ನಿರಾಕರಿಸಲಾಗಿತ್ತು. ಈ ವೇಳೆ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಅವರ ಮುಂದೆ ಕೊಪ್ಪಳ ಮೂಲದ ಯುವತಿಯೊಬ್ಬಳು, ವಯಸ್ಸು ಮೀರುತ್ತಿದೆ, ಬೇಗ ಉದ್ಯೋಗ ಕರೆಯಿರಿ ಎಂದು ಕಣ್ಣೀರು ಹಾಕಿದ ಘಟನೆ ನಡೆಯಿತು.

Read Full Story

02:50 PM (IST) Dec 08

BBK 12 - ರಕ್ಷಿತಾ ಶೆಟ್ಟಿ ಆ ರೀತಿ ಮಾಡ್ತಾಳೆ ಅಂತ ಅಂದ್ಕೊಂಡಿರಲಿಲ್ಲ, ಶಾಕ್‌ ಆಯ್ತು - ಅಭಿಷೇಕ್‌ ಶ್ರೀಕಾಂತ್

Bigg Boss Kannada Season 12: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬಂದಿರುವ ಅಭಿಷೇಕ್‌ ಶ್ರೀಕಾಂತ್‌ ಅವರು ರಕ್ಷಿತಾ ಶೆಟ್ಟಿ ನಡುವಿನ ಬಾಂಧವ್ಯದ ಬಗ್ಗೆ ಮಾತನಾಡಿದ್ದಾರೆ. ರಕ್ಷಿತಾ ಆ ರೀತಿ ಮಾಡಿದ್ದು ಶಾಕ್‌ ಆಯ್ತು ಎಂದು ಹೇಳಿದ್ದಾರೆ. ಹಾಗಾದರೆ ರಕ್ಷಿತಾ ಏನು ಮಾಡಿದರು?

Read Full Story

02:38 PM (IST) Dec 08

ಸಿಎಂ ಗೊಂದಲಕ್ಕೆ ಮತ್ತೆ ಬೆಂಕಿ - ಸಿದ್ದರಾಮಯ್ಯ 5 ವರ್ಷ ಸಿಎಂ, ಬದಲಾದರೆ ಡಿಕೆಶಿ ಒಬ್ರೇ ರೇಸ್‌ನಲ್ಲಿಲ್ಲ..; - ಕೆಎನ್ ರಾಜಣ್ಣ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಐದು ವರ್ಷಗಳ ಕಾಲ ಪೂರ್ಣಾವಧಿ ಸಿಎಂ ಆಗಿ ಮುಂದುವರೆಯಲಿದ್ದಾರೆ ಎಂದು ಮಾಜಿ ಸಚಿವ ಕೆ.ಎನ್. ರಾಜಣ್ಣ ಹೇಳಿದ್ದಾರೆ. ಒಂದು ವೇಳೆ ಹೈಕಮಾಂಡ್ ನಿರ್ಧಾರದಿಂದ ಬದಲಾವಣೆ ಅನಿವಾರ್ಯವಾದರೆ, ಡಿಸಿಎಂ ಡಿಕೆ ಶಿವಕುಮಾರ್ ಮಾತ್ರವಲ್ಲದೆ ಇತರರು ಸಿಎಂ ರೇಸ್‌ನಲ್ಲಿದ್ದಾರೆ ಎಂದರು.

Read Full Story

02:27 PM (IST) Dec 08

ಬೆಂಗಳೂರು ಜನರಿಗೆ ಹೊಟ್ಟೆತುಂಬಾ ಬಿರಿಯಾನಿ ಬಾಡೂಟ ಕೊಟ್ಟ ಕುಟುಂಬ ಸಾಲದ ಸುಳಿಗೆ ಸಿಲುಕಿ ಆತ್ಮ*ಹತ್ಯೆ!

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬಿರಿಯಾನಿ ಬಾಡೂಟ ವ್ಯಾಪಾರ ಮಾಡುತ್ತಿದ್ದ ಮಾದಮ್ಮ ಕುಟುಂಬ ಸಾಲದ ಸುಳಿಗೆ ಸಿಲುಕಿ, ಮನೆಯಲ್ಲಿ ವಿಷ ಸೇವನೆ ಮಾಡಿ ಆತ್ಮಹ*ತ್ಯೆಗೆ ಶರಣಾಗಿದ್ದಾರೆ. ಅಜ್ಜಿ, ತಾಯಿ ಹಾಗೂ ಮೊಮ್ಮಗ ಸಾಲದ ಶೂಲಕ್ಕೆ ಬಲಿಯಾಗಿದ್ದಾರೆ.

Read Full Story

01:58 PM (IST) Dec 08

ಗಡೀಪಾರು ಸಂಕಷ್ಟದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ - ಎಸಿ ಕೋರ್ಟ್‌ಗೆ ಹಾಜರಾಗುವ ಮುನ್ನ ಮಹಾಲಿಂಗೇಶ್ವರ್ ದೇಗುಲದ್ಲಿ ಪ್ರಾರ್ಥನೆ

ಸೌಜನ್ಯಾ ಪ್ರಕರಣದ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರು ಗಡೀಪಾರು ಸಂಕಷ್ಟ ಎದುರಿಸುತ್ತಿದ್ದಾರೆ. ಈ ಕುರಿತು ವಿಚಾರಣೆಗಾಗಿ ಪುತ್ತೂರು ಎಸಿ ನ್ಯಾಯಾಲಯಕ್ಕೆ ಹಾಜರಾಗುವ ಮುನ್ನ, ಅವರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿ, ತಮಗೆ ದೇವರ ನ್ಯಾಯಾಲಯದಲ್ಲಿ ನ್ಯಾಯ ಸಿಗಲಿದೆ ಎಂದರು.

Read Full Story

01:34 PM (IST) Dec 08

ಅಧಿವೇಶನದ ಮೊದಲ ದಿನವೇ ಕೇಬಲ್‌ ಆಪರೇಟರ್‌ಗಳಿಗೆ ಸಿಹಿಸುದ್ದಿ ನೀಡಿದ ಇಂಧನ ಸಚಿವ ಕೆಜೆ ಜಾರ್ಜ್‌!

ಬೆಳಗಾವಿ ಅಧಿವೇಶನದಲ್ಲಿ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ರಾಜ್ಯದ ಕೇಬಲ್ ಆಪರೇಟರ್‌ಗಳಿಗೆ ವಿದ್ಯುತ್ ಕಂಬಗಳಿಗೆ ವಿಧಿಸುವ ಶುಲ್ಕದಲ್ಲಿ ಶೇ. 50ರಷ್ಟು ರಿಯಾಯಿತಿ ಘೋಷಿಸಿದ್ದಾರೆ. ಈ ಮೊದಲು ಪ್ರತಿ ಕಂಬಕ್ಕೆ ₹150 ಇದ್ದ ಶುಲ್ಕವನ್ನು ಇದೀಗ ₹75ಕ್ಕೆ ಇಳಿಸಲಾಗಿದೆ.

Read Full Story

01:28 PM (IST) Dec 08

ಕೊಪ್ಪಳ - ಹಸೆಮಣೆ ಏರಬೇಕಿದ್ದ ಜೋಡಿ ಮಸಣಕ್ಕೆ - ಪ್ರಿ-ವೆಡ್ಡಿಂಗ್ ಶೂಟಿಂಗ್ ಮುಗಿಸಿ ವಾಪಸಾಗುವಾಗ ಭೀಕರ ದುರಂತ!

ಡಿಸೆಂಬರ್ 20 ರಂದು ವಿವಾಹವಾಗಬೇಕಿದ್ದ ಭಾವಿ ದಂಪತಿ, ಪ್ರಿ-ವೆಡ್ಡಿಂಗ್ ಶೂಟಿಂಗ್ ಮುಗಿಸಿ ಹಿಂದಿರುಗುತ್ತಿದ್ದಾಗ ಕೊಪ್ಪಳದ ಗಂಗಾವತಿ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ವೇಗವಾಗಿ ಬಂದ ಲಾರಿ ಅವರ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ, ಇಬ್ಬರೂ ಸ್ಥಳದಲ್ಲೇ ಸಾವು. ಮದುವೆ ಮನೆಯಲ್ಲಿ ಸೂತಕ.

Read Full Story

01:06 PM (IST) Dec 08

CM-DCM ಬ್ರೇಕ್‌ಫಾಸ್ಟ್ ಮೀಟಿಂಗ್ ಬಳಿಕ ಸಿದ್ದರಾಮಯ್ಯ ಪುತ್ರ ಶಾಕಿಂಗ್ ಹೇಳಿಕೆ

ಈ ಸಭೆಯ ನಂತರ ನಾಯಕತ್ವ ಬದಲಾವಣೆಗೆ ಕದನ ವಿರಾಮ ಬಿದ್ದಿದೆ ಎಂಬ ಚರ್ಚೆಗಳು ನಡೆದಿದ್ದವು. ಈ ಎಲ್ಲಾ ಬೆಳವಣಿಗೆಗಳ ನಡುವೆ ಸಿಎಂ ಪುತ್ರ, ಎಂಎಲ್‌ಎಸಿ ಯತೀಂದ್ರ ಸಿದ್ದರಾಮಯ್ಯ ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದಾರೆ.

Read Full Story

01:01 PM (IST) Dec 08

ಜೈಲಿನಲ್ಲಿಯೂ 'ಡಿ ಬಾಸ್' ದರ್ಬಾರ್ - ಮಲಗಿದ್ದ ಸಹ ಕೈದಿಗಳನ್ನು ಕಾಲಿನಿಂದ ನಟ ದರ್ಶನ್ ದರ್ಪ

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್, ತಮ್ಮ ಸಹ ಕೈದಿಗಳ ಮೇಲೆ ದೈಹಿಕ ಮತ್ತು ಮಾನಸಿಕ ದೌರ್ಜನ್ಯ ಎಸಗುತ್ತಿದ್ದಾರೆ ಎಂದು ವರದಿಯಾಗಿದೆ. ಅವರ ಹಿಂಸೆ ತಾಳಲಾರದೆ, ಇಬ್ಬರು ಸಹ ಕೈದಿಗಳು ತಮ್ಮನ್ನು ಬೇರೆ ಜೈಲಿಗೆ ವರ್ಗಾಯಿಸುವಂತೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

Read Full Story

12:43 PM (IST) Dec 08

ಸಿಎಂ ಸಿದ್ದರಾಯ್ಯಗೆ ಈಶ್ವರಪ್ಪ ವಾರ್ನಿಂಗ್ - ಭಗವದ್ಗೀತೆ ಓದಲಿ, ತಾಕತ್ತಿದ್ದರೆ ಕುರಾನ್ ಬಗ್ಗೆ ಮಾತನಾಲಿ

ಭಗವದ್ಗೀತೆ ಕುರಿತ ಹೇಳಿಕೆ ಮತ್ತು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಬಗ್ಗೆ ಬಳಸಿದ ಪದಗಳಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮುಸ್ಲಿಂ ಓಲೈಕೆಗಾಗಿ ಸಿಎಂ ಹುಚ್ಚುಚ್ಚಾಗಿ ಮಾತನಾಡುತ್ತಿದ್ದಾರೆ ಎಂದು ಕಿಡಿಕಾರಿದರು.

Read Full Story

12:31 PM (IST) Dec 08

ಸಿಎಂ ಸಿದ್ದರಾಮಯ್ಯಗೆ ಸುಪ್ರೀಂಕೋರ್ಟ್‌ ನೋಟೀಸ್ - ವರುಣಾ ಕ್ಷೇತ್ರದ ಆಯ್ಕೆ ಪ್ರಶ್ನಿಸಿದ್ದ ಅರ್ಜಿ ವಿಚಾರಣೆ

ವರುಣಾ ಕ್ಷೇತ್ರದಿಂದ ಸಿದ್ದರಾಮಯ್ಯ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮಾಡಿದ ಸುಪ್ರೀಂಕೋರ್ಟ್, ಸಿಎಂ ಹಾಗೂ ಚುನಾವಣಾ ಆಯೋಗಕ್ಕೆ ನೋಟೀಸ್ ಜಾರಿ ಮಾಡಿದೆ.  ಹೈಕೋರ್ಟ್ ಈ ಹಿಂದೆ ಅರ್ಜಿಯನ್ನು ವಜಾಗೊಳಿಸಿತ್ತು.

Read Full Story

12:18 PM (IST) Dec 08

ಅನೇಕರ ಆಸೆ, ಹಾರೈಕೆ ಈಡೇರಿತು; Anchor Anushree ರೋಶನ್‌ ಜೋಡಿಗೆ ಯಾರೂ ದೃಷ್ಟಿ ಹಾಕ್ಬೇಡಿ..ಪ್ಲೀಸ್

Anchor Anushree News: ಕಳೆದ ಆಗಸ್ಟ್‌ ತಿಂಗಳಿನಲ್ಲಿ ನಿರೂಪಕಿ ಅನುಶ್ರೀ, ರೋಶನ್‌ ಮದುವೆ ಆಗಿದ್ದಾರೆ. ಕನ್ನಡದಲ್ಲಿ ನಿರೂಪಣೆ ಮೂಲಕ ಗಮನಸೆಳೆದಿರುವ ಅನುಶ್ರೀ ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾಗಿದೆ. ಇತ್ತೀಚೆಗೆ ಪತಿಯ ಜೊತೆಗಿನ ಫೋಟೋ ಹಂಚಿಕೊಂಡಿದ್ದು, ಅನೇಕರು ಮೆಚ್ಚುಗೆ ಸೂಚಿಸಿದ್ದಾರೆ.

Read Full Story

11:56 AM (IST) Dec 08

ಪ್ರೆಗ್ನಂಟ್ ಮಾಡಿ ಗರ್ಭಪಾತ ಮಾಡಿಸಿದ, Sorry ಅಮ್ಮಾ ಸಾಯ್ತಿದ್ದೀನಿ - ಯುವತಿ ಆತ್ಮ*ಹತ್ಯೆ

ನಿನ್ನ ನಂಬಿಕೆಗೆ ನಾನು ಮಾಡಿದ್ದೇನೆ ಅಂತ ನನಗೆ ಗೊತ್ತು ಅಮ್ಮ. ಸಾಧ್ಯವಾದ್ರೆ ನನ್ನನ್ನು ಕ್ಷಮಿಸು ಅಮ್ಮ. ಸಾಯೋದಕ್ಕೆ ಭಯ ಆಗ್ತಿದೆ ಅಮ್ಮಾ. Sorry ಯವಿಟ್ಟು ಯಾರೂ ನನ್ನ ಹಾಗೆ ಮಾಡಿಕೊಳ್ಳಬೇಡಿ. ಈ ರೀತಿ ಇರೋ ನಾಯಿಗಳನ್ನು ನಂಬಿ ಮೋಸ ಹೋಗಬೇಡಿ.

Read Full Story

11:54 AM (IST) Dec 08

ಉಡುಪಿ - 2 ಗಂಟೆ ಕಾದರೂ ಬರಲಿಲ್ಲ 108 ಆಂಬುಲೆನ್ಸ್‌, ಗೂಡ್ಸ್ ಟೆಂಪೋದಲ್ಲಿ ಸಾಗಿಸಿ ವೃದ್ಧನ ರಕ್ಷಣೆ!

ಉಡುಪಿಯ ಉದ್ಯಾವರದಲ್ಲಿ 108 ಆಂಬುಲೆನ್ಸ್ ಸಕಾಲಕ್ಕೆ ಬಾರದೆ ವೃದ್ಧ ರೋಗಿಯೊಬ್ಬರು ಸಂಕಷ್ಟಕ್ಕೆ ಸಿಲುಕಿದ್ದರು. ಈ ಸಂದರ್ಭದಲ್ಲಿ ಸ್ಥಳೀಯ ಸಾಮಾಜಿಕ ಕಾರ್ಯಕರ್ತ ವಿಶು ಶೆಟ್ಟಿ ಅವರು ತಮ್ಮ ಗೂಡ್ಸ್ ಟೆಂಪೋದಲ್ಲಿ ರೋಗಿಯನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದು ಪ್ರಾಣ ಉಳಿಸಿದ್ದಾರೆ.
Read Full Story

11:29 AM (IST) Dec 08

ದೇಗುಲ ಪ್ರವೇಶಿಸುವುದಿಲ್ಲ ಎಂದ ಕ್ರಿಶ್ಚಿಯನ್ ಮಿಲಿಟರಿ ಅಧಿಕಾರಿಯ ಅಮಾನತು ಎತ್ತಿ ಹಿಡಿದ ಸುಪ್ರೀಂಕೋರ್ಟ್‌ ಹೇಳಿದ್ದೇನು?

ಧಾರ್ಮಿಕ ಕಾರಣ ನೀಡಿ ದೇಗುಲ ಮತ್ತು ಗುರುದ್ವಾರ ಪ್ರವೇಶಿಸಲು ನಿರಾಕರಿಸಿದ ಕ್ರಿಶ್ಚಿಯನ್ ಸೇನಾಧಿಕಾರಿಯ ಅಮಾನತು ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ. ಸೇನಾ ಆದೇಶಕ್ಕಿಂತ ಧರ್ಮವನ್ನು ಮೇಲೆ ಇಡುವುದು ಘೋರ ಅಶಿಸ್ತು ಎಂದು ನ್ಯಾಯಾಲಯ ಹೇಳಿದೆ.

Read Full Story

11:08 AM (IST) Dec 08

ಬೆಂಗಳೂರು - ಕ್ಯಾಬ್ ಚಾಲಕನ ಮೇಲೆ ಯುವತಿ ರೇಪ್ ಆರೋಪ, ತನಿಖೆ ವೇಳೆ ಬಿಗ್ ಟ್ವಿಸ್ಟ್!

ಬೆಂಗಳೂರಿನಲ್ಲಿ ಕ್ಯಾಬ್ ಚಾಲಕನ ವಿರುದ್ಧ ಯುವತಿಯೊಬ್ಬಳು ಸಾಮೂಹಿಕ ಅತ್ಯಾ೧ಚಾರದ ದೂರು ನೀಡಿದ್ದಳು. ಆದರೆ, ಬಾಣಸವಾಡಿ ಪೊಲೀಸರ ತನಿಖೆಯಲ್ಲಿ ಇಬ್ಬರಿಗೂ ಮೊದಲೇ ಪರಿಚಯವಿದ್ದು, ಇದು ಒಪ್ಪಿಗೆಯ ಸಂಬಂಧವಾಗಿತ್ತು ಎಂಬುದು ಬಯಲಾಗಿದೆ. ಸದ್ಯ ಪೊಲೀಸರು ಯುವತಿಯ ಗೊಂದಲದ ಹೇಳಿಕೆ ಬಗ್ಗೆ ತನಿಖೆ..

Read Full Story

11:07 AM (IST) Dec 08

Bigg Boss 19 Winner ಘೋಷಣೆ; ಮೊದಲೇ ಪ್ರೀ ಪ್ಲ್ಯಾನ್‌ ಮಾಡಿದ್ದಕ್ಕೆ ತಿರುಗಿಬಿದ್ದ ಸಹಸ್ಪರ್ಧಿಗಳು!

Bigg Boss: ಬಿಗ್‌ ಬಾಸ್‌ ಶೋನಲ್ಲಿ ಗೌರವ್‌ ಖನ್ನಾ ( Gaurav Khanna ) ವಿಜೇತರಾಗಿದ್ದಾರೆ. ಆದರೆ ಈ ಟ್ರೋಫಿ ಸಿಕ್ಕಿದ್ದು ಸರಿ ಅಲ್ಲ ಎಂಬ ವಿರೋಧ ಕೇಳಿ ಬರುತ್ತಿದೆ. ಕೆಂಪು ಬಣ್ಣದ ಡ್ರೆಸ್‌ ಹಾಕಿಕೊಂಡೋರಿಗೆ, ಸಲ್ಮಾನ್‌ ಖಾನ್‌ ಬಲಭಾಗದಲ್ಲಿ ನಿಂತೋರಿಗೆ ಯಶಸ್ಸು ಸಿಗಲ್ಲ ಎನ್ನೋ ಚರ್ಚೆ ಶುರುವಾಗಿದೆ.

 

Read Full Story

10:25 AM (IST) Dec 08

ಮಂತ್ರಾಲಯದ ರಾಯರ ಪವಾಡದಿಂದಲೇ ಮದುವೆಯಾಯ್ತು - Suhana Syed ಎಂದೂ ಹೇಳಿರದ ರಿಯಲ್ ಕಥೆ

Suhana Syed Marriage: ಸರಿಗಮಪ ಶೋ ಖ್ಯಾತಿಯ ಸುಹಾನಾ ಸೈಯದ್‌ ಅವರು ನಿತಿನ್‌ ಶಿವಾಂಶ್‌ ಎನ್ನುವವರನ್ನು ಮದುವೆಯಾಗಿದ್ದಾರೆ. ಇವರಿಬ್ಬರ ಧರ್ಮ ಬೇರೆ ಬೇರೆ. ಹೀಗಾಗಿ ಕುಟುಂಬಸ್ಥರನ್ನು ಒಪ್ಪಿಸಿ ಮದುವೆಯಾಗೋದು ಸುಲಭ ಆಗಿರಲಿಲ್ಲ. ಆದರೆ ಇದಕ್ಕೆ ಕಾರಣ ರಾಯರಂತೆ.

Read Full Story

10:23 AM (IST) Dec 08

ನಮ್ಮನ್ನು ಗುಲಾಮರನ್ನಾಗಿಸಿ ಹಿಂದೂ ಧರ್ಮ ಸೃಷ್ಟಿಸಿದ್ದು ಬ್ರಾಹ್ಮಣರು - ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿ

ಸಂವಿಧಾನದಿಂದಲೇ ಅಧಿಕಾರಕ್ಕೆ ಬಂದವರು, ಇಂದು ಅದೇ ಸಂವಿಧಾನವನ್ನು ತುಳಿಯುವ ಕೆಲಸವನ್ನು ಮಾಡುತ್ತಿದ್ದಾರೆ. ಸ್ವತಂತ್ರ ಹೋರಾಟದಲ್ಲಿ ಭಾಗಿಯಾಗದ ಇವರು ದೇಶಕ್ಕಾಗಿ ಯಾವ ಒಳ್ಳೆಯ ಕೆಲಸವನ್ನು ಮಾಡಿಲ್ಲ

Read Full Story

10:23 AM (IST) Dec 08

ಅಂದು ಕನ್ನಡಿಗರ ಕೆಣಕಿದ್ದ ಕರಾವಳಿ ಹುಡುಗಿ ಇಂದು ಮನೆಮಗಳು ಆಗಿದ್ದು ಹೇಗೆ? ಸೀಕ್ರೆಟ್ ಸ್ಟ್ರಾಟಜಿ ಏನು?

ರಕ್ಷಿತಾ ಶೆಟ್ಟಿ ಬಿಗ್​ಬಾಸ್ ಗೆಲ್ಲುವ ರೇಸ್​ನಲ್ಲಿದ್ರೂ ಒಂದಿಷ್ಟು ಎಡವಟ್ಟು ಮಾಡಿಕೊಂಡಿರೋದು ಸುಳ್ಳಲ್ಲ. ಅಂತೆಯೇ ಈವಾರ ರಕ್ಷಿತಾ ಮೇಲೆ ಮನೆಮಂದಿಯೆಲ್ಲಾ ಮುಗಿ ಬಿದ್ದಿದ್ದಾರೆ. ಈ ಎಡವಟ್ಟುಗಳನ್ನ ಮೀರಿ, ರಕ್ಷಿತಾ ಗೆಲ್ಲಬಹುದಾ.? ಹೆಚ್ಚಿನ ಮಾಹಿತಿಗೆ ಈ ವಿಡಿಯೋ ಸ್ಟೋರಿ ನೋಡಿ...

Read Full Story

09:58 AM (IST) Dec 08

ನಾನೀಗ ಮನೆಯನ್ನು ಕಂಟ್ರೋಲ್‌ ಮಾಡಲಾಗ್ತಿಲ್ಲ, ವಿಲನ್‌ ಬಂದ್ರು ಎಂದು ನಡುಗಿದ Bigg Boss

Bigg Boss Kannada Season 12 Episode Update: ಬಿಗ್‌ ಬಾಸ್‌ ಕನ್ನಡ ಸೀಸನ್‌ 12 ಶೋನಲ್ಲಿ ವಿಲನ್‌ ಎಂಟ್ರಿಯಾಗಿದೆ. ಹೌದು, ಈಗ ಬಿಗ್‌ ಬಾಸ್‌ ಕಂಟ್ರೋಲ್‌ ಮಾಡುತ್ತಿಲ್ಲ. ಹಾಗಾದರೆ ಬಂದೋರು ಯಾರು? ಒಟ್ಟಿನಲ್ಲಿ ಈ ಎಪಿಸೋಡ್‌ ಭಾರೀ ಕುತೂಹಲದಿಂದ ಕೂಡಿದೆ.

Read Full Story

08:51 AM (IST) Dec 08

ರಾಜ್ಯದಲ್ಲಿ ಕಾಂಗ್ರೆಸ್‌ನಿಂದ ಉದ್ಯೋಗದ ನವಯುಗ!

ಕೇಂದ್ರ ಸರ್ಕಾರದ ನೀತಿಗಳಿಂದ ದೇಶದಲ್ಲಿ ನಿರುದ್ಯೋಗವು ಐತಿಹಾಸಿಕ ಮಟ್ಟಕ್ಕೆ ಏರಿದೆ ಇದಕ್ಕೆ ವ್ಯತಿರಿಕ್ತವಾಗಿ, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವು ಬಂಡವಾಳ ಆಕರ್ಷಣೆ, ಸರ್ಕಾರಿ ಹುದ್ದೆಗಳ ಭರ್ತಿ ಯುವ ನಿಧಿ ಯೋಜನೆಯಂತಹ ಕ್ರಮಗಳ ಮೂಲಕ ನಿರುದ್ಯೋಗ ದರ ಗಣನೀಯವಾಗಿ ಕಡಿಮೆ ಮಾಡಿದೆ

Read Full Story

08:37 AM (IST) Dec 08

ಗ್ರಾಪಂ ಅಧ್ಯಕ್ಷರೂ ಮತ್ತು ಹಸಿರು ಪೆನ್ನೂ...!

ಗ್ರಾಪಂ ಅಧ್ಯಕ್ಷರೊಬ್ಬರಿಗೆ ಸ್ಪರ್ಧಿಗಳಿಗೆ ನೀಡುವ ಪ್ರಮಾಣಪತ್ರಕ್ಕೆ ಸಹಿ ಮಾಡುವಂತೆ ಸಂಘಟಕರು ಕೋರಿ, ತಮ್ಮ ಬಳಿ ಇದ್ದ ನೀಲಿ ಇಂಕಿನ ಪೆನ್‌ ನೀಡಿದರು. ಆದರೆ ಅದನ್ನು ಪಡೆಯಲು ನಿರಾಕರಿಸಿದ ಗ್ರಾಪಂ ಅಧ್ಯಕ್ಷರು ತಮ್ಮ ಜೇಬಿನಲ್ಲಿದ್ದ ಹಸಿರು ಇಂಕಿನ ಪೆನ್‌ ತೆಗೆದು ಸಹಿ ಮಾಡಿದರು

Read Full Story

08:18 AM (IST) Dec 08

ಜಾಸ್ತಿ ಬೇಡ ಎರಡೇ ಮಕ್ಕಳನ್ನಷ್ಟೇ ಮಾಡಿಕೊಳ್ಳಿ - ನವದಂಪತಿಗಳಿಗೆ ಸಿಎಂ ಸಲಹೆ

ನವಲಗುಂದದಲ್ಲಿ ಶಾಸಕ ಎನ್.ಎಚ್.ಕೋನರಡ್ಡಿ ಆಯೋಜಿಸಿದ್ದ 75 ಜೋಡಿಗಳ ಸರ್ವಧರ್ಮ ಸಾಮೂಹಿಕ ವಿವಾಹದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲ್ಗೊಂಡರು. ಈ ವೇಳೆ ನವದಂಪತಿಗೆ ಜನಸಂಖ್ಯಾ ನಿಯಂತ್ರಣದ ಬಗ್ಗೆ ಸಲಹೆ ನೀಡಿದ ಅವರು, ಸಮಾಜದಲ್ಲಿ ಸಮಾನತೆಗಾಗಿ ಅಂತರ್ಜಾತಿ ವಿವಾಹಗಳು ಹೆಚ್ಚಾಗಬೇಕು ಎಂದರು. 

Read Full Story

07:51 AM (IST) Dec 08

ಇಂದು ಲೋಕಸಭೆಯಲ್ಲಿ ‘ವಂದೇ ಮಾತರಂ’ ಚರ್ಚೆ - ಮೋದಿ ಚಾಲನೆ

ರಾಷ್ಟ್ರೀಯ ಗೀತೆ ‘ವಂದೇ ಮಾತರಂ’ಗೆ 150 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ, ಲೋಕಸಭೆಯಲ್ಲಿ ಈ ಕುರಿತ ಚರ್ಚೆಗೆ ಸೋಮವಾರ ಚಾಲನೆ ಸಿಗಲಿದೆ. ಪ್ರಧಾನಿ ನರೇಂದ್ರ ಮೋದಿ ಚರ್ಚೆಯನ್ನು ಪ್ರಾರಂಭಿಸಲಿದ್ದು, 10 ಗಂಟೆಗಳ ಕಾಲ ಚರ್ಚೆ ನಡೆಯಲಿದೆ.

Read Full Story

07:49 AM (IST) Dec 08

ಬೆಳಗಾವಿ ಅಧಿವೇಶನ - 89 ಸಂಘಟನೆಗಳಿಂದ ಪ್ರತಿಭಟನೆಗೆ ಕರೆ, 6000ಕ್ಕೂ ಹೆಚ್ಚು ಪೊಲೀಸರಿಂದ ಸರ್ಪಗಾವಲು

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನಕ್ಕೆ ಪ್ರತಿಭಟನೆಯ ಬಿಸಿ ತಟ್ಟಲಿದೆ. ಬಿಜೆಪಿ, ರೈತ ಸಂಘಟನೆಗಳು ಸೇರಿದಂತೆ 89 ಸಂಘಟನೆಗಳು ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಹೋರಾಟಕ್ಕೆ ಸಜ್ಜಾಗಿದ್ದು, ಈ ಹಿನ್ನೆಲೆಯಲ್ಲಿ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
Read Full Story

07:49 AM (IST) Dec 08

Karnataka Winter Session - ಬೆಳಗಾವಿ ಅಧಿವೇಶನದಲ್ಲಿ ಮಂಡನೆಯಾಗಲಿರುವ ವಿಧೇಯಕಗಳು

ಕಾಂಗ್ರೆಸ್‌ ಪಕ್ಷದಲ್ಲಿ ನಡೆದ ಅಧಿಕಾರ ಹಂಚಿಕೆ ತಿಕ್ಕಾಟ, ಬಿಜೆಪಿಯಲ್ಲಿನ ಒಳ ಬೇಗುದಿ ನಡುವೆಯೇ ಬೆಳಗಾವಿಯ ಚಳಿಗಾಲದ ಅಧಿವೇಶನ ಸೋಮವಾರದಿಂದ ಆರಂಭವಾಗಲಿದೆ.

Read Full Story

07:28 AM (IST) Dec 08

ಅಭಿವೃದ್ಧಿಗಾಗಿ ಬೆಳಗಾವಿ ಜಿಲ್ಲೆ ವಿಭಜನೆ ಅತ್ಯಗತ್ಯ - ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ಕಿತ್ತೂರು ಕರ್ನಾಟಕದ ಸಮಗ್ರ ಅಭಿವೃದ್ಧಿಗಾಗಿ ರಾಜಕೀಯ ಬದಿಗಿಟ್ಟು ಎಲ್ಲಾ ಪಕ್ಷದ ಶಾಸಕರು ಒಗ್ಗೂಡಿ ಸದನದಲ್ಲಿ ಚರ್ಚಿಸಬೇಕೆಂದು ಕರೆ ನೀಡಿದ್ದಾರೆ. ಇದೇ ವೇಳೆ, ಬೆಳಗಾವಿ ಜಿಲ್ಲಾ ವಿಭಜನೆಯ ಅಗತ್ಯವನ್ನು ಪ್ರತಿಪಾದಿಸಿದರು. ಬಿಜೆಪಿ ವಿರುದ್ಧವೂ ಟೀಕೆ.

Read Full Story

More Trending News