ಬೆಳಗಾವಿ: ಚಳಿಗಾಲದ ಅಧಿವೇಶನದಲ್ಲಿ ನಾಯಕತ್ವ ಬದಲಾವಣೆ ವಿಚಾರ ಮುಂದಿಟ್ಟುಕೊಂಡು ವಿರೋಧ ಪಕ್ಷಗಳು ಮುಗಿಬೀಳುವ ಸಾಧ್ಯತೆಯಿದೆ. ಅವಿಶ್ವಾಸ ನಿರ್ಣಯ ಮಂಡನೆಗೂ ಪ್ರತಿಪಕ್ಷಗಳು ಅಣಿಯಾಗಿದ್ದವು, ಇದರ ಸೂಚನೆ ಅರಿತ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರು ಬ್ರೇಕ್ಫಾಸ್ಟ್ ಮೀಟಿಂಗ್ ಮೂಲಕ ಒಗ್ಗಟ್ಟು ಪ್ರದರ್ಶಿಸಿದ್ದಾರೆ.
ಜತೆಗೆ ಬಿಜೆಪಿ ಒಡಕು, ಬಿಜೆಪಿ-ಜೆಡಿಎಸ್ ನಡುವಿನ ಸಾಮರಸ್ಯ ಕೊರತೆ, ಜೆಡಿಎಸ್ನಲ್ಲಿ ಜಿ.ಟಿ.ದೇವೇಗೌಡ ಸೇರಿ ಹಲವು ನಾಯಕರು ಪಕ್ಷದ ವಿರುದ್ಧವೇ ಧ್ವನಿ ಎತ್ತಿರುವುದನ್ನೂ ಕಾಂಗ್ರೆಸ್ ದಾಳವಾಗಿ ಬಳಸುವ ಸಾಧ್ಯತೆಯಿದೆ. ಮತ್ತೊಂದೆಡೆ ಕಬ್ಬು ಬೆಂಬಲ ಬೆಲೆ ಹೆಚ್ಚಳ ಮಾಡದಿರುವ ಕೇಂದ್ರದ ನಿರ್ಲಕ್ಷ್ಯ, ಸಕ್ಕರೆ ಎಂಎಸ್ಪಿ ದರ ಹೆಚ್ಚಿಸದ, ರಾಜ್ಯದಿಂದ ಹೆಚ್ಚಿನ ಎಥೆನಾಲ್ ಖರೀದಿಸದ ಕೇಂದ್ರ ಸರ್ಕಾರದಿಂದಲೇ ಕಬ್ಬು ಬೆಲೆ ಕುಸಿದಿದೆ ಎಂದು ಬೊಟ್ಟು ಮಾಡಿ ಬಿಜೆಪಿ ಮೇಲೆ ಸವಾರಿ ಮಾಡಲು ಕಾಂಗ್ರೆಸ್ ಸಜ್ಜಾಗಿದೆ.
04:46 PM (IST) Dec 08
ಅಂದಾಜು 10 ಲಕ್ಷ ರೂಪಾಯಿ ಮೌಲ್ಯದ ಕಾರ್ಅನ್ನು ಬರೀ ಟಿಪ್ಸ್ಗಳಿಂದ ಬಂದ ಹಣದಲ್ಲೇ ಖರೀದಿ ಮಾಡಿದ್ದಾನೆ. ಆತ ಕ್ರೂಸ್ ಹಡಗಿನಲ್ಲಿ ಕೆಲಸ ಮಾಡುತ್ತಿದ್ದು, ತಮ್ಮ ರೀಲ್ಸ್, ಕಂಟೆಂಟ್ ಮೂಲಕ ಇತರರರಿಗೆ ಕ್ರೂಸ್ ಶಿಪ್ನಲ್ಲಿ ಕೆಲಸ ಮಾಡಲು ಪ್ರೇರೇಪಿಸುತ್ತಿದ್ದಾರೆ.
04:41 PM (IST) Dec 08
ಬೆಂಗಳೂರಿನ ಸುದ್ದುಗುಂಟೆಪಾಳ್ಯದಲ್ಲಿ ವ್ಯಾಪಾರದ ನಷ್ಟ ಮತ್ತು ಸಾಲದ ಸುಳಿಗೆ ಸಿಲುಕಿ ತಾಯಿ ಮತ್ತು ಮಗ ವಿಷ ಸೇವಿಸಿ ಆತ್ಮ*ಹತ್ಯೆ ಮಾಡಿಕೊಂಡಿದ್ದಾರೆ. ಆದರೆ, ವಿಷ ಸೇವಿಸದ ಅಜ್ಜಿಯೂ ಹೇಗೆ ಸತ್ತರು ಎಂಬುದು ಮರಣೋತ್ತರ ಪರೀಕ್ಷೆಯಿಂದ ತಿಳಿದುಬಂದಿದೆ. ಇದು ಕೇಸಿಗೆ ಟ್ವಿಸ್ಟ್ ನೀಡಿದೆ.
04:32 PM (IST) Dec 08
Kiccha Sudeep Mark Movie: ನಟ ಕಿಚ್ಚ ಸುದೀಪ್ ಅವರು ನಟಿಸಿರುವ ಮಾರ್ಕ್ ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಈ ಸಿನಿಮಾದ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ನಡೆಯಿತು. ಆ ವೇಳೆ ಸಿನಿಮಾ ಕುರಿತಂತೆ ಪ್ರಶ್ನೆಗಳನ್ನು ಕೇಳಲಾಯ್ತು. ಆಗ ಸಿನಿಮಾ ತಂಡವು ಏನು ಹೇಳಿದೆ?
04:04 PM (IST) Dec 08
Bigg Boss Kannada Season 12 Episode Update: ಬಿಗ್ ಬಾಸ್ ಕನ್ನಡ ಸೀಸನ್ 12 ಶೋನಲ್ಲಿ ಸ್ಪಂದನಾ ಸೋಮಣ್ಣ ಅವರು ಕಾಲಿಗೆ ಗಾಯ ಮಾಡಿಕೊಂಡಿದ್ದರು. ಹೀಗಾಗಿ ಇವರ ವೈಯಕ್ತಿಕ ಕೆಲಸಗಳನ್ನು ಮಾಡೋದು ಕೂಡ ಕಷ್ಟ ಆಗಿತ್ತು. ಇವ ಬದಲು ಚೈತ್ರಾ ಆಟ ಆಡಿ ಕ್ಯಾಪ್ಟನ್ ಆದರು.
03:59 PM (IST) Dec 08
ಬೆಳಗಾವಿ ಚಳಿಗಾಲದ ಅಧಿವೇಶನದ ವೇಳೆ, ಸಿಎಂ ಸಿದ್ದರಾಮಯ್ಯ ಅವರು ಆರ್. ಅಶೋಕ್ ಅವರನ್ನು ನೋಡಿ, 'ಏನು ಅಶೋಕ್, ಸಣ್ಣಗಾಗಿದ್ಯಾ?' ಎಂದು ತಕ್ಷಣ ಕೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಅಶೋಕ್, 'ನಾಟಿ ಕೋಳಿ ತಿನ್ನುವುದು ಬಿಟ್ಟುಬಿಟ್ಟಿದ್ದೀನಿ ಸಾರ್' ಎಂದು ಹೇಳಿದ್ದಾರೆ.
03:56 PM (IST) Dec 08
Basangowda patil on hate speech bill: ದ್ವೇಷ ಭಾಷಣ ನಿಯಂತ್ರಣಕ್ಕೆ ಹೊಸ ಕಾನೂನು ತರುವ ಸರ್ಕಾರದ ಚಿಂತನೆಯು ತನ್ನನ್ನೇ ಗುರಿಯಾಗಿಸಿಕೊಂಡಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗಂಭೀರ ಆರೋಪ ಮಾಡಿದ್ದಾರೆ. ಹಿಂದೂಗಳ ಪರ ಮಾತನಾಡುವವರನ್ನು ಹತ್ತಿಕ್ಕಲು ಈ ಪ್ರಯತ್ನ ನಡೆದಿದೆ ಎಂದು ಕಿಡಿಕಾರಿದರು.
03:27 PM (IST) Dec 08
Bigg Boss Kannada Season 12 Episode Update: ಬಿಗ್ ಬಾಸ್ ಕನ್ನಡ ಸೀಸನ್ 12 ಶೋನಲ್ಲಿ 11ನೇ ವಾರ ಹೊರಗಡೆ ಬಂದಿರುವ ಅಭಿಷೇಕ್ ಶ್ರೀಕಾಂತ್ ಅವರು ಗಿಲ್ಲಿ ನಟ ಹಾಗೂ ರಘು ನಡುವಿನ ಬಾಂಧವ್ಯದ ಜೊತೆಗೆ ರಘು ಬಳಿ ಮನವಿ ಮಾಡಿದ್ರೂ ಚಪಾತಿ ಕೊಟ್ಟಿಲ್ಲ ಎನ್ನುವ ವಿಚಾರ ಚರ್ಚೆಯಾಗಿದೆ.
03:15 PM (IST) Dec 08
ಧಾರವಾಡದಲ್ಲಿ ನಿಗದಿಯಾಗಿದ್ದ ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗೆ ಅನುಮತಿ ನಿರಾಕರಿಸಲಾಗಿತ್ತು. ಈ ವೇಳೆ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಅವರ ಮುಂದೆ ಕೊಪ್ಪಳ ಮೂಲದ ಯುವತಿಯೊಬ್ಬಳು, ವಯಸ್ಸು ಮೀರುತ್ತಿದೆ, ಬೇಗ ಉದ್ಯೋಗ ಕರೆಯಿರಿ ಎಂದು ಕಣ್ಣೀರು ಹಾಕಿದ ಘಟನೆ ನಡೆಯಿತು.
02:50 PM (IST) Dec 08
Bigg Boss Kannada Season 12: ಬಿಗ್ ಬಾಸ್ ಮನೆಯಿಂದ ಹೊರಗಡೆ ಬಂದಿರುವ ಅಭಿಷೇಕ್ ಶ್ರೀಕಾಂತ್ ಅವರು ರಕ್ಷಿತಾ ಶೆಟ್ಟಿ ನಡುವಿನ ಬಾಂಧವ್ಯದ ಬಗ್ಗೆ ಮಾತನಾಡಿದ್ದಾರೆ. ರಕ್ಷಿತಾ ಆ ರೀತಿ ಮಾಡಿದ್ದು ಶಾಕ್ ಆಯ್ತು ಎಂದು ಹೇಳಿದ್ದಾರೆ. ಹಾಗಾದರೆ ರಕ್ಷಿತಾ ಏನು ಮಾಡಿದರು?
02:38 PM (IST) Dec 08
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಐದು ವರ್ಷಗಳ ಕಾಲ ಪೂರ್ಣಾವಧಿ ಸಿಎಂ ಆಗಿ ಮುಂದುವರೆಯಲಿದ್ದಾರೆ ಎಂದು ಮಾಜಿ ಸಚಿವ ಕೆ.ಎನ್. ರಾಜಣ್ಣ ಹೇಳಿದ್ದಾರೆ. ಒಂದು ವೇಳೆ ಹೈಕಮಾಂಡ್ ನಿರ್ಧಾರದಿಂದ ಬದಲಾವಣೆ ಅನಿವಾರ್ಯವಾದರೆ, ಡಿಸಿಎಂ ಡಿಕೆ ಶಿವಕುಮಾರ್ ಮಾತ್ರವಲ್ಲದೆ ಇತರರು ಸಿಎಂ ರೇಸ್ನಲ್ಲಿದ್ದಾರೆ ಎಂದರು.
02:27 PM (IST) Dec 08
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬಿರಿಯಾನಿ ಬಾಡೂಟ ವ್ಯಾಪಾರ ಮಾಡುತ್ತಿದ್ದ ಮಾದಮ್ಮ ಕುಟುಂಬ ಸಾಲದ ಸುಳಿಗೆ ಸಿಲುಕಿ, ಮನೆಯಲ್ಲಿ ವಿಷ ಸೇವನೆ ಮಾಡಿ ಆತ್ಮಹ*ತ್ಯೆಗೆ ಶರಣಾಗಿದ್ದಾರೆ. ಅಜ್ಜಿ, ತಾಯಿ ಹಾಗೂ ಮೊಮ್ಮಗ ಸಾಲದ ಶೂಲಕ್ಕೆ ಬಲಿಯಾಗಿದ್ದಾರೆ.
01:58 PM (IST) Dec 08
ಸೌಜನ್ಯಾ ಪ್ರಕರಣದ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರು ಗಡೀಪಾರು ಸಂಕಷ್ಟ ಎದುರಿಸುತ್ತಿದ್ದಾರೆ. ಈ ಕುರಿತು ವಿಚಾರಣೆಗಾಗಿ ಪುತ್ತೂರು ಎಸಿ ನ್ಯಾಯಾಲಯಕ್ಕೆ ಹಾಜರಾಗುವ ಮುನ್ನ, ಅವರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿ, ತಮಗೆ ದೇವರ ನ್ಯಾಯಾಲಯದಲ್ಲಿ ನ್ಯಾಯ ಸಿಗಲಿದೆ ಎಂದರು.
01:34 PM (IST) Dec 08
ಬೆಳಗಾವಿ ಅಧಿವೇಶನದಲ್ಲಿ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ರಾಜ್ಯದ ಕೇಬಲ್ ಆಪರೇಟರ್ಗಳಿಗೆ ವಿದ್ಯುತ್ ಕಂಬಗಳಿಗೆ ವಿಧಿಸುವ ಶುಲ್ಕದಲ್ಲಿ ಶೇ. 50ರಷ್ಟು ರಿಯಾಯಿತಿ ಘೋಷಿಸಿದ್ದಾರೆ. ಈ ಮೊದಲು ಪ್ರತಿ ಕಂಬಕ್ಕೆ ₹150 ಇದ್ದ ಶುಲ್ಕವನ್ನು ಇದೀಗ ₹75ಕ್ಕೆ ಇಳಿಸಲಾಗಿದೆ.
01:28 PM (IST) Dec 08
ಡಿಸೆಂಬರ್ 20 ರಂದು ವಿವಾಹವಾಗಬೇಕಿದ್ದ ಭಾವಿ ದಂಪತಿ, ಪ್ರಿ-ವೆಡ್ಡಿಂಗ್ ಶೂಟಿಂಗ್ ಮುಗಿಸಿ ಹಿಂದಿರುಗುತ್ತಿದ್ದಾಗ ಕೊಪ್ಪಳದ ಗಂಗಾವತಿ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ವೇಗವಾಗಿ ಬಂದ ಲಾರಿ ಅವರ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ, ಇಬ್ಬರೂ ಸ್ಥಳದಲ್ಲೇ ಸಾವು. ಮದುವೆ ಮನೆಯಲ್ಲಿ ಸೂತಕ.
01:06 PM (IST) Dec 08
ಈ ಸಭೆಯ ನಂತರ ನಾಯಕತ್ವ ಬದಲಾವಣೆಗೆ ಕದನ ವಿರಾಮ ಬಿದ್ದಿದೆ ಎಂಬ ಚರ್ಚೆಗಳು ನಡೆದಿದ್ದವು. ಈ ಎಲ್ಲಾ ಬೆಳವಣಿಗೆಗಳ ನಡುವೆ ಸಿಎಂ ಪುತ್ರ, ಎಂಎಲ್ಎಸಿ ಯತೀಂದ್ರ ಸಿದ್ದರಾಮಯ್ಯ ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದಾರೆ.
01:01 PM (IST) Dec 08
ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್, ತಮ್ಮ ಸಹ ಕೈದಿಗಳ ಮೇಲೆ ದೈಹಿಕ ಮತ್ತು ಮಾನಸಿಕ ದೌರ್ಜನ್ಯ ಎಸಗುತ್ತಿದ್ದಾರೆ ಎಂದು ವರದಿಯಾಗಿದೆ. ಅವರ ಹಿಂಸೆ ತಾಳಲಾರದೆ, ಇಬ್ಬರು ಸಹ ಕೈದಿಗಳು ತಮ್ಮನ್ನು ಬೇರೆ ಜೈಲಿಗೆ ವರ್ಗಾಯಿಸುವಂತೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
12:43 PM (IST) Dec 08
ಭಗವದ್ಗೀತೆ ಕುರಿತ ಹೇಳಿಕೆ ಮತ್ತು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಬಗ್ಗೆ ಬಳಸಿದ ಪದಗಳಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮುಸ್ಲಿಂ ಓಲೈಕೆಗಾಗಿ ಸಿಎಂ ಹುಚ್ಚುಚ್ಚಾಗಿ ಮಾತನಾಡುತ್ತಿದ್ದಾರೆ ಎಂದು ಕಿಡಿಕಾರಿದರು.
12:31 PM (IST) Dec 08
ವರುಣಾ ಕ್ಷೇತ್ರದಿಂದ ಸಿದ್ದರಾಮಯ್ಯ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮಾಡಿದ ಸುಪ್ರೀಂಕೋರ್ಟ್, ಸಿಎಂ ಹಾಗೂ ಚುನಾವಣಾ ಆಯೋಗಕ್ಕೆ ನೋಟೀಸ್ ಜಾರಿ ಮಾಡಿದೆ. ಹೈಕೋರ್ಟ್ ಈ ಹಿಂದೆ ಅರ್ಜಿಯನ್ನು ವಜಾಗೊಳಿಸಿತ್ತು.
12:18 PM (IST) Dec 08
Anchor Anushree News: ಕಳೆದ ಆಗಸ್ಟ್ ತಿಂಗಳಿನಲ್ಲಿ ನಿರೂಪಕಿ ಅನುಶ್ರೀ, ರೋಶನ್ ಮದುವೆ ಆಗಿದ್ದಾರೆ. ಕನ್ನಡದಲ್ಲಿ ನಿರೂಪಣೆ ಮೂಲಕ ಗಮನಸೆಳೆದಿರುವ ಅನುಶ್ರೀ ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾಗಿದೆ. ಇತ್ತೀಚೆಗೆ ಪತಿಯ ಜೊತೆಗಿನ ಫೋಟೋ ಹಂಚಿಕೊಂಡಿದ್ದು, ಅನೇಕರು ಮೆಚ್ಚುಗೆ ಸೂಚಿಸಿದ್ದಾರೆ.
11:56 AM (IST) Dec 08
ನಿನ್ನ ನಂಬಿಕೆಗೆ ನಾನು ಮಾಡಿದ್ದೇನೆ ಅಂತ ನನಗೆ ಗೊತ್ತು ಅಮ್ಮ. ಸಾಧ್ಯವಾದ್ರೆ ನನ್ನನ್ನು ಕ್ಷಮಿಸು ಅಮ್ಮ. ಸಾಯೋದಕ್ಕೆ ಭಯ ಆಗ್ತಿದೆ ಅಮ್ಮಾ. Sorry ಯವಿಟ್ಟು ಯಾರೂ ನನ್ನ ಹಾಗೆ ಮಾಡಿಕೊಳ್ಳಬೇಡಿ. ಈ ರೀತಿ ಇರೋ ನಾಯಿಗಳನ್ನು ನಂಬಿ ಮೋಸ ಹೋಗಬೇಡಿ.
11:54 AM (IST) Dec 08
11:29 AM (IST) Dec 08
ಧಾರ್ಮಿಕ ಕಾರಣ ನೀಡಿ ದೇಗುಲ ಮತ್ತು ಗುರುದ್ವಾರ ಪ್ರವೇಶಿಸಲು ನಿರಾಕರಿಸಿದ ಕ್ರಿಶ್ಚಿಯನ್ ಸೇನಾಧಿಕಾರಿಯ ಅಮಾನತು ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ. ಸೇನಾ ಆದೇಶಕ್ಕಿಂತ ಧರ್ಮವನ್ನು ಮೇಲೆ ಇಡುವುದು ಘೋರ ಅಶಿಸ್ತು ಎಂದು ನ್ಯಾಯಾಲಯ ಹೇಳಿದೆ.
11:08 AM (IST) Dec 08
ಬೆಂಗಳೂರಿನಲ್ಲಿ ಕ್ಯಾಬ್ ಚಾಲಕನ ವಿರುದ್ಧ ಯುವತಿಯೊಬ್ಬಳು ಸಾಮೂಹಿಕ ಅತ್ಯಾ೧ಚಾರದ ದೂರು ನೀಡಿದ್ದಳು. ಆದರೆ, ಬಾಣಸವಾಡಿ ಪೊಲೀಸರ ತನಿಖೆಯಲ್ಲಿ ಇಬ್ಬರಿಗೂ ಮೊದಲೇ ಪರಿಚಯವಿದ್ದು, ಇದು ಒಪ್ಪಿಗೆಯ ಸಂಬಂಧವಾಗಿತ್ತು ಎಂಬುದು ಬಯಲಾಗಿದೆ. ಸದ್ಯ ಪೊಲೀಸರು ಯುವತಿಯ ಗೊಂದಲದ ಹೇಳಿಕೆ ಬಗ್ಗೆ ತನಿಖೆ..
11:07 AM (IST) Dec 08
Bigg Boss: ಬಿಗ್ ಬಾಸ್ ಶೋನಲ್ಲಿ ಗೌರವ್ ಖನ್ನಾ ( Gaurav Khanna ) ವಿಜೇತರಾಗಿದ್ದಾರೆ. ಆದರೆ ಈ ಟ್ರೋಫಿ ಸಿಕ್ಕಿದ್ದು ಸರಿ ಅಲ್ಲ ಎಂಬ ವಿರೋಧ ಕೇಳಿ ಬರುತ್ತಿದೆ. ಕೆಂಪು ಬಣ್ಣದ ಡ್ರೆಸ್ ಹಾಕಿಕೊಂಡೋರಿಗೆ, ಸಲ್ಮಾನ್ ಖಾನ್ ಬಲಭಾಗದಲ್ಲಿ ನಿಂತೋರಿಗೆ ಯಶಸ್ಸು ಸಿಗಲ್ಲ ಎನ್ನೋ ಚರ್ಚೆ ಶುರುವಾಗಿದೆ.
10:25 AM (IST) Dec 08
Suhana Syed Marriage: ಸರಿಗಮಪ ಶೋ ಖ್ಯಾತಿಯ ಸುಹಾನಾ ಸೈಯದ್ ಅವರು ನಿತಿನ್ ಶಿವಾಂಶ್ ಎನ್ನುವವರನ್ನು ಮದುವೆಯಾಗಿದ್ದಾರೆ. ಇವರಿಬ್ಬರ ಧರ್ಮ ಬೇರೆ ಬೇರೆ. ಹೀಗಾಗಿ ಕುಟುಂಬಸ್ಥರನ್ನು ಒಪ್ಪಿಸಿ ಮದುವೆಯಾಗೋದು ಸುಲಭ ಆಗಿರಲಿಲ್ಲ. ಆದರೆ ಇದಕ್ಕೆ ಕಾರಣ ರಾಯರಂತೆ.
10:23 AM (IST) Dec 08
ಸಂವಿಧಾನದಿಂದಲೇ ಅಧಿಕಾರಕ್ಕೆ ಬಂದವರು, ಇಂದು ಅದೇ ಸಂವಿಧಾನವನ್ನು ತುಳಿಯುವ ಕೆಲಸವನ್ನು ಮಾಡುತ್ತಿದ್ದಾರೆ. ಸ್ವತಂತ್ರ ಹೋರಾಟದಲ್ಲಿ ಭಾಗಿಯಾಗದ ಇವರು ದೇಶಕ್ಕಾಗಿ ಯಾವ ಒಳ್ಳೆಯ ಕೆಲಸವನ್ನು ಮಾಡಿಲ್ಲ
10:23 AM (IST) Dec 08
ರಕ್ಷಿತಾ ಶೆಟ್ಟಿ ಬಿಗ್ಬಾಸ್ ಗೆಲ್ಲುವ ರೇಸ್ನಲ್ಲಿದ್ರೂ ಒಂದಿಷ್ಟು ಎಡವಟ್ಟು ಮಾಡಿಕೊಂಡಿರೋದು ಸುಳ್ಳಲ್ಲ. ಅಂತೆಯೇ ಈವಾರ ರಕ್ಷಿತಾ ಮೇಲೆ ಮನೆಮಂದಿಯೆಲ್ಲಾ ಮುಗಿ ಬಿದ್ದಿದ್ದಾರೆ. ಈ ಎಡವಟ್ಟುಗಳನ್ನ ಮೀರಿ, ರಕ್ಷಿತಾ ಗೆಲ್ಲಬಹುದಾ.? ಹೆಚ್ಚಿನ ಮಾಹಿತಿಗೆ ಈ ವಿಡಿಯೋ ಸ್ಟೋರಿ ನೋಡಿ...
09:58 AM (IST) Dec 08
Bigg Boss Kannada Season 12 Episode Update: ಬಿಗ್ ಬಾಸ್ ಕನ್ನಡ ಸೀಸನ್ 12 ಶೋನಲ್ಲಿ ವಿಲನ್ ಎಂಟ್ರಿಯಾಗಿದೆ. ಹೌದು, ಈಗ ಬಿಗ್ ಬಾಸ್ ಕಂಟ್ರೋಲ್ ಮಾಡುತ್ತಿಲ್ಲ. ಹಾಗಾದರೆ ಬಂದೋರು ಯಾರು? ಒಟ್ಟಿನಲ್ಲಿ ಈ ಎಪಿಸೋಡ್ ಭಾರೀ ಕುತೂಹಲದಿಂದ ಕೂಡಿದೆ.
08:51 AM (IST) Dec 08
ಕೇಂದ್ರ ಸರ್ಕಾರದ ನೀತಿಗಳಿಂದ ದೇಶದಲ್ಲಿ ನಿರುದ್ಯೋಗವು ಐತಿಹಾಸಿಕ ಮಟ್ಟಕ್ಕೆ ಏರಿದೆ ಇದಕ್ಕೆ ವ್ಯತಿರಿಕ್ತವಾಗಿ, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವು ಬಂಡವಾಳ ಆಕರ್ಷಣೆ, ಸರ್ಕಾರಿ ಹುದ್ದೆಗಳ ಭರ್ತಿ ಯುವ ನಿಧಿ ಯೋಜನೆಯಂತಹ ಕ್ರಮಗಳ ಮೂಲಕ ನಿರುದ್ಯೋಗ ದರ ಗಣನೀಯವಾಗಿ ಕಡಿಮೆ ಮಾಡಿದೆ
08:37 AM (IST) Dec 08
ಗ್ರಾಪಂ ಅಧ್ಯಕ್ಷರೊಬ್ಬರಿಗೆ ಸ್ಪರ್ಧಿಗಳಿಗೆ ನೀಡುವ ಪ್ರಮಾಣಪತ್ರಕ್ಕೆ ಸಹಿ ಮಾಡುವಂತೆ ಸಂಘಟಕರು ಕೋರಿ, ತಮ್ಮ ಬಳಿ ಇದ್ದ ನೀಲಿ ಇಂಕಿನ ಪೆನ್ ನೀಡಿದರು. ಆದರೆ ಅದನ್ನು ಪಡೆಯಲು ನಿರಾಕರಿಸಿದ ಗ್ರಾಪಂ ಅಧ್ಯಕ್ಷರು ತಮ್ಮ ಜೇಬಿನಲ್ಲಿದ್ದ ಹಸಿರು ಇಂಕಿನ ಪೆನ್ ತೆಗೆದು ಸಹಿ ಮಾಡಿದರು
08:18 AM (IST) Dec 08
ನವಲಗುಂದದಲ್ಲಿ ಶಾಸಕ ಎನ್.ಎಚ್.ಕೋನರಡ್ಡಿ ಆಯೋಜಿಸಿದ್ದ 75 ಜೋಡಿಗಳ ಸರ್ವಧರ್ಮ ಸಾಮೂಹಿಕ ವಿವಾಹದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲ್ಗೊಂಡರು. ಈ ವೇಳೆ ನವದಂಪತಿಗೆ ಜನಸಂಖ್ಯಾ ನಿಯಂತ್ರಣದ ಬಗ್ಗೆ ಸಲಹೆ ನೀಡಿದ ಅವರು, ಸಮಾಜದಲ್ಲಿ ಸಮಾನತೆಗಾಗಿ ಅಂತರ್ಜಾತಿ ವಿವಾಹಗಳು ಹೆಚ್ಚಾಗಬೇಕು ಎಂದರು.
07:51 AM (IST) Dec 08
ರಾಷ್ಟ್ರೀಯ ಗೀತೆ ‘ವಂದೇ ಮಾತರಂ’ಗೆ 150 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ, ಲೋಕಸಭೆಯಲ್ಲಿ ಈ ಕುರಿತ ಚರ್ಚೆಗೆ ಸೋಮವಾರ ಚಾಲನೆ ಸಿಗಲಿದೆ. ಪ್ರಧಾನಿ ನರೇಂದ್ರ ಮೋದಿ ಚರ್ಚೆಯನ್ನು ಪ್ರಾರಂಭಿಸಲಿದ್ದು, 10 ಗಂಟೆಗಳ ಕಾಲ ಚರ್ಚೆ ನಡೆಯಲಿದೆ.
07:49 AM (IST) Dec 08
07:49 AM (IST) Dec 08
ಕಾಂಗ್ರೆಸ್ ಪಕ್ಷದಲ್ಲಿ ನಡೆದ ಅಧಿಕಾರ ಹಂಚಿಕೆ ತಿಕ್ಕಾಟ, ಬಿಜೆಪಿಯಲ್ಲಿನ ಒಳ ಬೇಗುದಿ ನಡುವೆಯೇ ಬೆಳಗಾವಿಯ ಚಳಿಗಾಲದ ಅಧಿವೇಶನ ಸೋಮವಾರದಿಂದ ಆರಂಭವಾಗಲಿದೆ.
07:28 AM (IST) Dec 08
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ಕಿತ್ತೂರು ಕರ್ನಾಟಕದ ಸಮಗ್ರ ಅಭಿವೃದ್ಧಿಗಾಗಿ ರಾಜಕೀಯ ಬದಿಗಿಟ್ಟು ಎಲ್ಲಾ ಪಕ್ಷದ ಶಾಸಕರು ಒಗ್ಗೂಡಿ ಸದನದಲ್ಲಿ ಚರ್ಚಿಸಬೇಕೆಂದು ಕರೆ ನೀಡಿದ್ದಾರೆ. ಇದೇ ವೇಳೆ, ಬೆಳಗಾವಿ ಜಿಲ್ಲಾ ವಿಭಜನೆಯ ಅಗತ್ಯವನ್ನು ಪ್ರತಿಪಾದಿಸಿದರು. ಬಿಜೆಪಿ ವಿರುದ್ಧವೂ ಟೀಕೆ.