LIVE NOW
Published : Dec 09, 2025, 06:53 AM ISTUpdated : Dec 09, 2025, 10:54 PM IST

Karnataka News Live: ದುಬಾರೆ ಶಿಬಿರದಲ್ಲಿ ಕಳೆದ 10 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ತಕ್ಷ ಹೆಸರಿನ ಆನೆ ಸಾವು

ಸಾರಾಂಶ

 

ಬೆಳಗಾವಿ: ಮುಖ್ಯಮಂತ್ರಿ ಬದಲಾವಣೆ ಕುರಿತಂತೆ ಹೇಳಿಕೆ ನೀಡಿರುವ ಶಾಸಕ ಯತಿಂದ್ರ ಸಿದ್ದರಾಮಯ್ಯ ಅವರಿಗೆ ಕೆಪಿಸಿಸಿ ಯಾವುದೇ ನೋಟಿಸ್‌ ನೀಡದೇ ಇರುವುದು ಒಂದು ಕಣ್ಣಿಗೆ ಬೆಣ್ಣೆ, ಮತ್ತೊಂದು ಕಣ್ಣಿಗೆ ಸುಣ್ಣ ಎಂದು ಮಾಧ್ಯಮಗಳ ಅಭಿಪ್ರಾಯವನ್ನು ಶಾಸಕಾಂಗ ಪಕ್ಷದ ಸಭೆಯಲ್ಲಿ ಪ್ರಸ್ತಾಪಿಸುವುದಾಗಿ ಮಂಡ್ಯ ಶಾಸಕ ರವಿ ಗಣಿಗ ಪ್ರತಿಕ್ರಿಯಿಸಿದ್ದಾರೆ. ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಯತೀಂದ್ರ ಸಿದ್ದರಾಮಯ್ಯ ಏನು ಹೇಳಿದ್ದಾರೋ ಗೊತ್ತಿಲ್ಲ. ಆಲ್‌ ದಿ ಬೆಸ್ಟ್‌ ಟು ಯತೀಂದ್ರ ಸಿದ್ದರಾಮಯ್ಯ ಎಂದರು.

ಹೈಕಮಾಂಡ್ ಏನು ಹೇಳುತ್ತದೆಯೋ ಅದೇ ಅಂತಿಮ ಎಂದು ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್‌ ಅವರ ಇಬ್ಬರೂ ಹೇಳಿದ್ದಾರೆ. ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿಯಾದರೆ ಅವರ ಸಂಪುಟದಲ್ಲಿ ಸಚಿವನಾಗುವುದಿಲ್ಲ ಎಂದು ಕೆ.ಎನ್‌. ರಾಜಣ್ಣ ಹೇಳಿದ್ದಾರೆ. ಹಾಗಾದರೆ ಮುಖ್ಯಮಂತ್ರಿ ಆಗುತ್ತಾರೆ ಎಂದಲ್ಲವೇ? ಎಂದು ಪ್ರಶ್ನಿಸಿದರು.

 

10:54 PM (IST) Dec 09

ದುಬಾರೆ ಶಿಬಿರದಲ್ಲಿ ಕಳೆದ 10 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ತಕ್ಷ ಹೆಸರಿನ ಆನೆ ಸಾವು

ದುಬಾರೆ ಶಿಬಿರದಲ್ಲಿ ಕಳೆದ 10 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ತಕ್ಷ ಹೆಸರಿನ ಆನೆ ಸಾವು , ಕಳೆದ ವರ್ಷ ರಾಮನಗರದಲ್ಲಿ ಸೆರೆ ಹಿಡಿದ್ದ ಆನೆಯನ್ನು ದುಬಾರಿ ಶಿಬಿರದಲ್ಲಿ ಪಳಗಿಸಲಾಗಿತ್ತು. ಇದೀಗ ಆನೆ ಮೃತಪಟ್ಟಿದೆ.

Read Full Story

10:07 PM (IST) Dec 09

Bigg Boss ಗಿಲ್ಲಿ ಬಗ್ಗೆ ನಿಮ್ಗೆ ಗೊತ್ತಿಲ್ಲ, ರಘು ಚಪಾತಿ ಕೊಡದ ಕಾರಣ ನಾನ್​ ಹೇಳ್ತೀನಿ ಕೇಳಿ' ಎಂದ ಅಭಿಷೇಕ್

ಬಿಗ್ ಬಾಸ್ ಮನೆಯಿಂದ ಹೊರಬಂದಿರುವ ಅಭಿಷೇಕ್ ಶ್ರೀಕಾಂತ್, ಸೋಷಿಯಲ್ ಮೀಡಿಯಾದಲ್ಲಿ ಚರ್ಚೆಯಾಗುತ್ತಿರುವ ರಘು ಮತ್ತು ಗಿಲ್ಲಿ ನಟರ ಚಪಾತಿ ವಿವಾದದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಗಿಲ್ಲಿ ನಟನ ಈ ವರ್ತನೆ ಇದಕ್ಕೆ ಕಾರಣ ಎಂದಿದ್ದಾರೆ. ಅವರು ಹೇಳಿದ್ದೇನು? 

Read Full Story

09:42 PM (IST) Dec 09

ಹೆಂಡ್ತಿಯನ್ನು ಹೇಗೆ ನೋಡಿಕೊಳ್ಳಬೇಕು? ಬೆಸ್ಟ್​ ಪತಿಯಾಗಲು ಮಾಳುಗೆ Bigg Boss ರಕ್ಷಿತಾ ಶೆಟ್ಟಿ ಏನೆಲ್ಲಾ ಟಿಪ್ಸ್​ ಕೊಟ್ರು ನೋಡಿ!

ಬಿಗ್​ಬಾಸ್​ ಮನೆಯಲ್ಲಿ ಸ್ಪರ್ಧಿ ಮಾಳು ನಿಪನಾಳ ಅವರಿಗೆ ರಕ್ಷಿತಾ ಶೆಟ್ಟಿ ತಲೆ ಮಸಾಜ್ ಮಾಡಿಸಿಕೊಂಡಿದ್ದಾರೆ. ಈ ವೇಳೆ,  ಹೆಂಡತಿಯನ್ನು ಹೇಗೆ ಖುಷಿಯಾಗಿಡಬೇಕು ಎಂಬುದರ ಬಗ್ಗೆ ಮಾಳುಗೆ ಕೆಲವು ಅಮೂಲ್ಯ ಸಲಹೆಗಳನ್ನು ನೀಡಿದ್ದಾರೆ. 

Read Full Story

09:14 PM (IST) Dec 09

Amruthadhaare - ಗೌತಮ್​-ಭೂಮಿನಾ ಅಜ್ಜಿ ಒಂದು​ ಮಾಡ್ತಾಳೆ ಅಂದ್ಕೊಂಡ್ರೆ ಆಗಿದ್ದೇ ಬೇರೆ! ಜೈದೇವ್ ಕೈಗೆ ಬಂತು ಆಸ್ತಿ

'ಅಮೃತಧಾರೆ' ಧಾರಾವಾಹಿಯಲ್ಲಿ ಜೈದೇವ್ ಆಸ್ತಿ ಕಬಳಿಸಲು ಹೊಸ ಪ್ಲ್ಯಾನ್ ಮಾಡಿದ್ದಾನೆ. ಗೌತಮ್-ಭೂಮಿಕಾರನ್ನು ಒಂದು ಮಾಡಲು ಬಂದ ಲವ್ ಅಜ್ಜಿಗೆ ನಿದ್ದೆ ಮಾತ್ರೆ ನೀಡಿ, ಆಕೆಯ ಸಂಪೂರ್ಣ ಆಸ್ತಿಯನ್ನು ತನ್ನ ಹೆಸರಿಗೆ ಬರೆಸಿಕೊಂಡಿದ್ದಾನೆ. ಇದು ಅಜ್ಜಿಯ ನಾಟಕವೇ ಅಥವಾ ಜೈದೇವನ ಕುತಂತ್ರವೆ? 

 

Read Full Story

08:22 PM (IST) Dec 09

ಕಾರಲ್ಲ, ಸರ್ಕಾರ ಕೆಲಸಕ್ಕೆ ಓಡಾಡಲು ಹೆಲಿಕಾಪ್ಟರ್, ವಿಮಾನ ಖರೀದಿಗೆ ಡಿಕೆಶಿ ನೇತೃತ್ವದಲ್ಲಿ ಸಭೆ

ಹೊಸ ಕಾರಲ್ಲ, ಸರ್ಕಾರ ಕೆಲಸಕ್ಕೆ ಹೆಲಿಕಾಪ್ಟರ್, ವಿಮಾನ ಖರೀದಿಗೆ ಡಿಕೆಶಿ ನೇತೃತ್ವದಲ್ಲಿ ಸಭೆ ನಡೆದಿದೆ. ಟೆಂಡರ್ ಕುರಿತು ಚರ್ಚೆ ನಡೆದಿದೆ. ಸುವರ್ಣಸೌಧದಲ್ಲಿ ಮಹತ್ವದ ಸಭೆ ನಡೆಸಲಾಗಿದೆ. ಈ ನಿರ್ಧಾರ ಪರ ವಿರೋಧಕ್ಕೆ ಕಾರಣವಾಗಿದೆ.

Read Full Story

07:18 PM (IST) Dec 09

ರಾಜ್ಯದಲ್ಲಿ 2.84 ಲಕ್ಷ ಸರ್ಕಾರಿ ಹುದ್ದೆ ಖಾಲಿ - 24,300 ಹುದ್ದೆ ಭರ್ತಿಗೆ ಅಂಕಿತ! ಇಲಾಖಾವಾರು ಮಾಹಿತಿ ಇಲ್ಲಿದೆ!

ಕರ್ನಾಟಕದ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಸುಮಾರು 2.84 ಲಕ್ಷ ಹುದ್ದೆಗಳು ಖಾಲಿಯಿದ್ದು, ಆರ್ಥಿಕ ಇಲಾಖೆಯು ಕೇವಲ 24,300 ಹುದ್ದೆಗಳ ಭರ್ತಿಗೆ ಅನುಮತಿ ನೀಡಿದೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತೀವ್ರವಾಗಿ ಟೀಕಿಸಿದ್ದು, ಅರ್ಹ ಅಭ್ಯರ್ಥಿಗಳಿಗೆ ನ್ಯಾಯ ಒದಗಿಸಲು ಆಗ್ರಹಿಸಿದ್ದಾರೆ.

Read Full Story

06:30 PM (IST) Dec 09

ಸ್ಕೂಲ್ ಬಸ್ ಹರಿದು 8 ವರ್ಷದ ಬಾಲಕಿ ಸಾವು; ಚಾಲಕನ ನಿರ್ಲಕ್ಷ್ಯಕ್ಕೆ ಅಮಾಯಕ ಜೀವ ಬಲಿ

ಬೀದರ್ ತಾಲೂಕಿನ ಜನವಾಡಾ ಬಳಿ, ಶಾಲಾ ಬಸ್‌ನಿಂದ ಇಳಿದ 8 ವರ್ಷದ ಬಾಲಕಿ ರುತ್ವಿ, ಅದೇ ವಾಹನದ ಚಕ್ರದಡಿ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಚಾಲಕನ ನಿರ್ಲಕ್ಷ್ಯದಿಂದ ಬಾಲಕಿಯನ್ನು ಗಮನಿಸದೆ ವಾಹನ ಚಲಾಯಿಸಿದ್ದೇ ಈ ದುರಂತಕ್ಕೆ ಕಾರಣವಾಗಿದೆ. ಈ ಸಂಬಂಧ ಜನವಾಡಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read Full Story

05:40 PM (IST) Dec 09

ಗೋವಾ ಮಾಲ್ ಸಮೇತ ಅರಣ್ಯದಲ್ಲಿ ಸಿಕ್ಕಿಬಿದ್ದ ವ್ಯಕ್ತಿ; ಗಾಡಿ ಹಿಡಿದ ಖಾಕಿ, ಆರೋಪಿ ಪರಾರಿ!

ಕಾರವಾರ ತಾಲೂಕಿನ ಮುಡಗೇರಿ ಅರಣ್ಯ ಪ್ರದೇಶದ ಮೂಲಕ ಗೋವಾದಿಂದ ರಾಜ್ಯಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ ಒಂದು ಲಕ್ಷಕ್ಕೂ ಹೆಚ್ಚು ಮೌಲ್ಯದ ಮದ್ಯ ಮತ್ತು ವಾಹನವನ್ನು ಅಬಕಾರಿ ಇಲಾಖೆ ವಶಪಡಿಸಿಕೊಂಡಿದೆ.

Read Full Story

05:21 PM (IST) Dec 09

ಎಲ್ಲಾ ಸೀರಿಯಲ್​ ಜ್ಯೋತಿಷಿಗಳೇಕೇ ಮಹಾ ವಂಚಕರು? ಕರ್ಣ- ನಿಧಿ ಮದ್ವೆ ಮುಹೂರ್ತಕ್ಕೆ ಜಾಲತಾಣದಲ್ಲಿ ಭಾರಿ ಆಕ್ರೋಶ!

ಕನ್ನಡ ಸೀರಿಯಲ್‌ಗಳಲ್ಲಿ ಜ್ಯೋತಿಷಿಗಳನ್ನು ವಂಚಕರಂತೆ ಚಿತ್ರಿಸಲಾಗುತ್ತಿದೆ. ಕರ್ಣ ಸೀರಿಯಲ್‌ನಲ್ಲಿ, ವಿಲನ್ ರಮೇಶ್ ಜ್ಯೋತಿಷಿಗೆ ಲಂಚ ನೀಡಿ, ಕರ್ಣ ಮತ್ತು ನಿತ್ಯಾಳ ಮದುವೆಯನ್ನು ಬಲವಂತವಾಗಿ ಮಾಡಲು ಸುಳ್ಳು ಶಾಸ್ತ್ರ ಹೇಳಿಸುತ್ತಾನೆ. ಈ ಕುರಿತು ವೀಕ್ಷಕರು ಭಾರಿ ಅಸಮಾಧಾನ ಹೊರಹಾಕಿದ್ದಾರೆ. 

Read Full Story

04:19 PM (IST) Dec 09

ನಾಳೆ ಬೆಂಗಳೂರಿನಲ್ಲಿ ವಿದ್ಯುತ್ ಕಡಿತ - ನಿಮ್ಮ ಏರಿಯಾ ಇದೆಯಾ ಚೆಕ್ ಮಾಡಿ?

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ (ಕೆಪಿಟಿಸಿಎಲ್) ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಸೋಮನಹಳ್ಳಿ ಉಪಕೇಂದ್ರ ವ್ಯಾಪ್ತಿಯ ಐಬೆಕ್ಸ್ ಫ್ಯಾಕ್ಟರಿ, ರಾವುಗೋಡ್ಲು, ಕಗ್ಗಲೀಪುರ ಸೇರಿ ಹಲವೆಡೆ ಬುಧವಾರ ವಿದ್ಯುತ್ ಕಡಿತವಾಗಲಿದೆ.

Read Full Story

04:15 PM (IST) Dec 09

Brahmagantu Serial ದೀಪಾ ಅರೆಸ್ಟ್​- ಅಷ್ಟಕ್ಕೂ ಆಗಿದ್ದೇನು? ದೂರು ಕೊಟ್ಟೋರು ಯಾರು?

ಬ್ರಹ್ಮಗಂಟು ಧಾರಾವಾಹಿಯಲ್ಲಿ, ದೀಪಾಳೇ ದಿಶಾ ಎಂದು ರೂಪಾಗೆ ಅನುಮಾನ ಮೂಡಿದೆ. ತನ್ನ ಅನುಮಾನವನ್ನು ಸಾಬೀತುಪಡಿಸಲು ರೂಪಾ ಮಾಡಿದ ಕುತಂತ್ರದಿಂದ ದೀಪಾ ಕಳ್ಳತನದ ಆರೋಪದ ಮೇಲೆ ಅರೆಸ್ಟ್ ಆಗಿದ್ದಾಳೆ. ಇದೀಗ ದೀಪಾಳನ್ನು ಬಿಡಿಸಲು 'ಶ್ರಾವಣಿ ಸುಬ್ರಹ್ಮಣ್ಯ' ಖ್ಯಾತಿಯ ಶ್ರಾವಣಿ ಎಂಟ್ರಿ ಕೊಟ್ಟಿದ್ದಾಳೆ.
Read Full Story

03:55 PM (IST) Dec 09

ಮಕ್ಕಳಿಗಾಗಿ ಕೊನೆಗೂ ಒಂದಾದ್ರು ಲೀಲಾ-ಮಂಜು; ಚಿನ್ನೀ, ಬಂಗಾರಿ ಫ್ಲೇವರ್ ಬಿಟ್ಟುಕೊಟ್ಟ ಸಂತೋಷ್!

ಡ್ರೈವರ್ ಮಂಜು ಮತ್ತು ಲೀಲಾ ಅವರ ವಿವಾದಾತ್ಮಕ ಕೌಟುಂಬಿಕ ಗೊಂದಲ ಸುಖಾಂತ್ಯ ಕಂಡಿದೆ. ಕೋರ್ಟ್ ಮೆಟ್ಟಿಲೇರಿದ ಬಳಿಕ ದಂಪತಿ ಮಕ್ಕಳಿಗಾಗಿ ಮತ್ತೆ ಒಂದಾಗಲು ನಿರ್ಧರಿಸಿದ್ದು, ಪ್ರೇಮಿ ಸಂತು ಕೂಡ ಇದಕ್ಕೆ ಸಮ್ಮತಿ ನೀಡಿದ್ದಾನೆ ಎನ್ನಲಾಗುತ್ತಿದೆ. ಇಲ್ಲಿದೆ ಕೊನೆಯ ವಿಡಿಯೋ..

Read Full Story

03:52 PM (IST) Dec 09

ಗಿಲ್ಲಿ ನಟನ ಕಾಮಿಡಿ ಅತಿರೇಕ ಆಯ್ತು, ತೇಜೋವಧೆ ಅಂತೀರಾ?; Bigg Boss ಟೀಂಗೆ ಸವಾಲು ಹಾಕಿದ ವೀಕ್ಷಕರು

Bigg Boss Kannada Season 12 Episode: ಬಿಗ್‌ ಬಾಸ್‌ ಕನ್ನಡ ಸೀಸನ್‌ 12 ಶೋನಲ್ಲಿ ಗಿಲ್ಲಿ ನಟ ಅವರು ಕಾಮಿಡಿ ಮಾಡೋದು ಒಳಗಡೆ ಇದ್ದವರಿಗೆ ಬೇಸರ ತಂದರೆ, ಹೊರಗಡೆ ವೀಕ್ಷಕರಿಗೆ ಭರ್ಜರಿ ಖುಷಿ ಕೊಟ್ಟಿದೆ. ಈ ಕಾರಣಕ್ಕೆ ಇರಬಹುದು, ಈ ಬಾರಿ TRP ಹೆಚ್ಚಾಗಿ, ಚಾನೆಲ್‌ ಕೂಡ ನಂ 1 ಆಗಿದೆ.

Read Full Story

03:37 PM (IST) Dec 09

ರಿಷಬ್‌ ಶೆಟ್ಟಿ, ವಿಜಯ್ ಕಿರಗಂದೂರು ವ್ಯಾಪಾರಿಗಳು, ದೈವಾರಾಧನೆಯನ್ನ ವ್ಯಾಪಾರಕ್ಕೆ ಹಾಕಿದ್ದಾರೆ - ದೈವಾರಾಧಕ ಬೇಸರ

ತುಳುನಾಡ ದೈವಾರಾಧಕ ತಮ್ಮಣ್ಣ ಶೆಟ್ಟಿ ಅವರು, ರಿಷಬ್ ಶೆಟ್ಟಿ ಮತ್ತು ವಿಜಯ್ ಕಿರಗಂದೂರು 'ಕಾಂತಾರ' ಚಿತ್ರದ ಮೂಲಕ ದೈವಾರಾಧನೆಯನ್ನು ವ್ಯಾಪಾರೀಕರಣ ಮಾಡಿದ್ದಾರೆಂದು ಗಂಭೀರ ಆರೋಪ ಮಾಡಿದ್ದಾರೆ. 

Read Full Story

03:18 PM (IST) Dec 09

BBK 12 - ಗಿಲ್ಲಿ ನಟನಿಗೆ ಏನ್‌ ಮಾಡೋದು ಅಂತ ನಿರ್ಧಾರ ಮಾಡಿ - ರಘು ಬಳಿ ಕಾವ್ಯ ಶೈವ ಬೇಸರ ತೋಡಿಕೊಂಡ್ರು

Bigg Boss Kannada Season 12: ಬಿಗ್‌ ಬಾಸ್‌ ಮನೆಯಲ್ಲಿ ರಘು ಬಗ್ಗೆ ಗಿಲ್ಲಿ ನಟ ಮಾತನಾಡಿರೋದು ಬೇಸರ ತಂದಿದೆಯಂತೆ. ಕಾವ್ಯ ಶೈವ ಬಗ್ಗೆ ಮಾತಾಡೋದು, ಕಾವು ಕಾವು ಎನ್ನೋದು ಕೂಡ ಇಷ್ಟ ಆಗ್ತಿಲ್ಲವಂತೆ. ಈ ವಿಚಾರವಾಗಿ ಚರ್ಚೆ ನಡೆದಿದೆ.

 

Read Full Story

02:45 PM (IST) Dec 09

BBK 12 - ಕಚಡಾ,T ಗಾಂಚಾಲಿ, ನೀನು ಗಂಡಸಾಗಿದ್ರೆ! ಏನ್ರೀ ಇದು ಥರ್ಡ್‌ರೇಟೆಡ್‌ ಭಾಷೆ? ಅಶ್ವಿನಿ ಗೌಡ-ರಜತ್‌ ಜಗಳ

Bigg Boss Kannada Season 12 Show Episode: ಜಗಳ ಇಲ್ಲದೆ ಬಿಗ್‌ ಬಾಸ್‌ ಶೋ ಇಲ್ಲ ಎಂದು ಕಾಣುತ್ತದೆ. ಈ ಬಾರಿ ಕೂಡ ಕನ್ನಡ ಬಿಗ್‌ ಬಾಸ್‌ ಶೋನಲ್ಲಿ ಕೂಡ ಜಗಳ ತಾಂಡವವಾಡುತ್ತಿದೆ. ಕಳೆದ ಒಂದು ವಾರದಿಂದ ಶಾಂತಿ ನಿವಾಸದ ಥರ, ಸೈಲೆಂಟ್‌ ಆಗಿದ್ದ ಅಶ್ವಿನಿ ಈಗ ಕೆರಳಿದ್ದಾರೆ.

 

Read Full Story

02:22 PM (IST) Dec 09

15 ವರ್ಷಗಳಿಂದ ನಾಪತ್ತೆ - ವಿಡಿಯೋ ವೈರಲ್ ಬಳಿಕ ಮರಳಿ ಕುಟುಂಬ ಸೇರಿದ ಮಾಜಿ ಯೋಧ

15 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಹಿಮಾಚಲ ಪ್ರದೇಶದ ನಿವೃತ್ತ ಯೋಧರೊಬ್ಬರು, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ವೀಡಿಯೋದಿಂದಾಗಿ ರಾಜಸ್ಥಾನದಲ್ಲಿ ಪತ್ತೆಯಾಗಿದ್ದಾರೆ. ಅವರನ್ನು ಕುಟುಂಬಸ್ಥರು ಮರಳಿ ಮನೆಗೆ ಕರೆತಂದಿದ್ದು, ಸಾಮಾಜಿಕ ಜಾಲತಾಣವು 15 ವರ್ಷಗಳ ವಿರಹವನ್ನು ಕೊನೆಗೊಳಿಸಿದೆ.
Read Full Story

01:57 PM (IST) Dec 09

ದರ್ಶನ್‌ ಡೆವಿಲ್‌ ಸಿನಿಮಾದ ಫಸ್ಟ್ ಡೇ ಫಸ್ಟ್‌ ಶೋ ಹೌಸ್‌ಫುಲ್‌ - ಎಷ್ಟು ಕೋಟಿ ಕಲೆಕ್ಷನ್ ಆಗಿದೆ ಗೊತ್ತಾ?

ದರ್ಶನ್‌ ನಟನೆಯ ‘ದಿ ಡೆವಿಲ್‌’ ಸಿನಿಮಾ ರಿಲೀಸ್‌ಗೂ ಮುನ್ನವೇ ಅಂದಾಜು 3.5 ಕೋಟಿ ರು.ಗೂ ಅಧಿಕ ಸಂಗ್ರಹ ಮಾಡಿದೆ. ಈ ಸಿನಿಮಾ ನಿರ್ಮಾಣ ಸಂಸ್ಥೆ ಜೈ ಮಾತಾ ಮಾತಾ ಕಂಬೈನ್ಸ್‌ ಈ ಕುರಿತು ಪೋಸ್ಟರ್‌ ಬಿಡುಗಡೆ ಮಾಡಿದೆ.

Read Full Story

01:32 PM (IST) Dec 09

Landlord Movie - ದುನಿಯಾ ವಿಜಯ್‌, ರಚಿತಾ ರಾಮ್‌ ಸಿನಿಮಾದಲ್ಲಿ ವಿಗ್‌ ಹಾಕಿ ನಟಿಸಿದ್ದೇಕೆ ರಾಜ್‌ ಬಿ ಶೆಟ್ಟು?

Landlord Movie Release: ನಟ ದುನಿಯಾ ವಿಜಯ್, ರಚಿತಾ ರಾಮ್ ಅಭಿನಯದ 'ಲ್ಯಾಂಡ್ ಲಾರ್ಡ್' ಸಿನಿಮಾದ ಸರ್ವೈವರ್ ಇತ್ತೀಚೆಗಷ್ಟೇ ಬಿಡುಗಡೆಯಾಗಿದೆ. ಜಡೇಶ್ ಕೆ ಹಂಪಿ ನಿರ್ದೇಶನದ ‘ದಿ ರೂಲರ್’ ಟೀಸರ್ ಬಿಡುಗಡೆಯಾಗಿದೆ‌. ‘ದಿ ರೂಲರ್’ ಪಾತ್ರದಲ್ಲಿ ರಾಜ್ ಬಿ ಶೆಟ್ಟಿ ಅಭಿನಯಿಸಿದ್ದಾರೆ.

 

Read Full Story

01:28 PM (IST) Dec 09

ಚಿರಂಜೀವಿ ನಂತರ ಜೂ.ಎನ್‌ಟಿಆರ್ ಟಾರ್ಗೆಟ್? ಸಂಚಲನ ಮೂಡಿಸಿದ ನಿರ್ಧಾರ, ಇನ್ಮುಂದೆ ಹೀಗೆ ಮಾಡಿದ್ರೆ ಕಷ್ಟ!

ಯಂಗ್ ಟೈಗರ್ ಜೂ.ಎನ್‌ಟಿಆರ್ ಇತ್ತೀಚೆಗೆ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಸೋಷಿಯಲ್ ಮೀಡಿಯಾ ಸೆಲೆಬ್ರಿಟಿಗಳ ಪಾಲಿಗೆ ಶಾಪವಾಗುತ್ತಿರುವುದು ಗೊತ್ತೇ ಇದೆ. ಅಸಲಿಗೆ ಏನಾಯಿತು ಅಂತ ಈ ಸ್ಟೋರಿನಲ್ಲಿ ತಿಳಿಯಿರಿ.

Read Full Story

01:23 PM (IST) Dec 09

ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ

ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿ ಬೆಳಗಾವಿಯಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ ನಡೆಸಿತು. ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ಹಲವು ನಾಯಕರನ್ನು ಪೊಲೀಸರು ವಶಕ್ಕೆ ಪಡೆದರು.
Read Full Story

01:22 PM (IST) Dec 09

Bigg Bossನಲ್ಲಿ ಲೈಟ್​ ಆಫ್​ ಆದ್ಮೇಲೆ ಇವರದ್ದು ನಡಿಯತ್ತೆ - ಇನ್ನೊಂದು ವಾರ ಇದ್ರೆ ಸತ್ತೇ ಹೋಗ್ತಿದ್ದೆ- ಡಾಗ್​ ಸತೀಶ್ ಹೇಳಿದ್ದೇನು?

ಬಿಗ್ ಬಾಸ್ 12ರ ಸ್ಪರ್ಧಿ ಡಾಗ್ ಸತೀಶ್, ಮನೆಯಲ್ಲಿದ್ದಾಗ ತಮ್ಮ ಅನುಭವಗಳನ್ನು ಹಂಚಿಕೊಂಡಿದ್ದಾರೆ. ರಾತ್ರಿ ಲೈಟ್ ಆಫ್ ಆದ ಮೇಲೆ ನಡೆಯುತ್ತಿದ್ದ ಘಟನೆಗಳಿಂದ ನಿದ್ದೆಗೆಟ್ಟು, ಇನ್ನೊಂದು ವಾರ ಇದ್ದಿದ್ದರೆ ಸತ್ತೇ ಹೋಗುತ್ತಿದ್ದೆ ಎಂದು ಅವರು ಹೇಳಿದ್ದಾರೆ. 

Read Full Story

01:08 PM (IST) Dec 09

Bengaluru Weather - ರಾಜ್ಯಕ್ಕೆ ಈಶಾನ್ಯ ಮಾರುತ- ದಶಕದ ದಾಖಲೆಯ ಚಳಿಗೆ ಸಿದ್ಧರಾಗಿ; ಬೆಂಗಳೂರು ಸ್ಥಿತಿ ಏನು ನೋಡಿ!

ರಾಜ್ಯದಲ್ಲಿ ಈಶಾನ್ಯ ಮಾರುತದ ಪ್ರಭಾವದಿಂದಾಗಿ ಚಳಿಯ ತೀವ್ರತೆ ಹೆಚ್ಚಾಗಿದೆ. ಹವಾಮಾನ ಇಲಾಖೆಯು ಬೆಂಗಳೂರಿನಲ್ಲಿ ಕಳೆದ 9 ವರ್ಷಗಳಲ್ಲಿಯೇ ದಾಖಲೆಯ ಚಳಿ ಉಂಟಾಗುವ ಮುನ್ಸೂಚನೆ ನೀಡಿದ್ದು, ಕನಿಷ್ಠ ತಾಪಮಾನ 12 ಡಿಗ್ರಿ ಸೆಲ್ಸಿಯಸ್‌ಗೆ ಇಳಿಯುವ ನಿರೀಕ್ಷೆಯಿದೆ.
Read Full Story

01:03 PM (IST) Dec 09

ಕೆಕೆಆರ್‌ಟಿಸಿ ಬಸ್ ಪಲ್ಟಿ; ಶಾಲಾ ವಿದ್ಯಾರ್ಥಿಗಳು ಸೇರಿದಂತೆ 15 ಜನರಿಗೆ ಗಾಯ; ಕಂಡಕ್ಟರ್ ಸ್ಥಿತಿ ಗಂಭೀರ!

ರಾಯಚೂರು ಜಿಲ್ಲೆಯ ದೇವದುರ್ಗ ಬಳಿ ಕೆಕೆಆರ್‌ಟಿಸಿ ಬಸ್ ಅತಿವೇಗದಿಂದಾಗಿ ಪಲ್ಟಿಯಾಗಿದ್ದು, 15 ವಿದ್ಯಾರ್ಥಿಗಳು ಸೇರಿದಂತೆ ಹಲವರು ಗಾಯಗೊಂಡಿದ್ದಾರೆ. ಈ ದುರ್ಘಟನೆಯಲ್ಲಿ ಬಸ್ ನಿರ್ವಾಹಕನ ಸ್ಥಿತಿ ಚಿಂತಾಜನಕವಾಗಿದ್ದು, ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ.
Read Full Story

12:39 PM (IST) Dec 09

ಸಡನ್ನಾಗಿ ಸೋಶಿಯಲ್‌ ಮೀಡಿಯಾದಲ್ಲಿ ಸನ್ನಿ ಲಿಯೋನ್‌ ಫೋಟೋ ಹಂಚಿಕೊಂಡ ಅಶ್ವಿನ್‌, ಇದಕ್ಕಿದೆ ಐಪಿಎಲ್ ಲಿಂಕ್‌!

R Ashwin Sunny Leone Post Decoded The IPL Link to Uncapped All-rounder Sunny Sandhu ಸೋಶಿಯಲ್‌ ಮೀಡಿಯಾದಲ್ಲಿ ಸಖತ್‌ ಆಕ್ಟೀವ್‌ ಆಗಿರುವ ಆರ್‌.ಅಶ್ವಿನ್‌, ಬಾಲಿವುಡ್‌ ನಟಿ ಸನ್ನಿ ಲಿಯೋನ್‌ ಫೋಟೋ ಹಂಚಿಕೊಳ್ಳುವ ಮೂಲಕ ಅಭಿಮಾನಿಗಳ ತಲೆಗೆ ಕೆಲಸ ಕೊಟ್ಟಿದ್ದರು.

 

Read Full Story

12:38 PM (IST) Dec 09

'ಅಹಿಂದ ಕಿಂಗ್ ಸಿದ್ದರಾಮಯ್ಯ' ಜೀವಂತ ಇರುವಾಗಲೇ ಪರ್ಯಾಯ ನಾಯಕತ್ವದ ಕೂಗು ಏಕೆ? - ಬೈರತಿ ಸುರೇಶ್

ಸಿದ್ದರಾಮಯ್ಯನವರೇ ಅಹಿಂದ'ದ ಕಿಂಗ್ ಆಗಿರುವಾಗ, ಸತೀಶ್ ಜಾರಕಿಹೊಳಿ ಪರ ಬಿ.ಕೆ. ಹರಿಪ್ರಸಾದ್ ಹೇಳಿಕೆ ನೀಡಿದ್ದೇಕೆ? ಇದಕ್ಕೆ ಸಚಿವ ಬೈರತಿ ಸುರೇಶ್ ಅವರ ಸ್ಪಷ್ಟ ಮತ್ತು ಖಡಕ್ ಪ್ರತಿಕ್ರಿಯೆ ಇಲ್ಲಿದೆ.

Read Full Story

12:27 PM (IST) Dec 09

BBK 12 - ಗಿಲ್ಲಿ ನಟ ಎಂಟರ್‌ಟೇನರ್‌ ಅಲ್ಲ, ವಿಷಕಾರಿ ಹಾವು? ಖಾಸಗಿ ಕಂಪೆನಿ HR ಹೇಳುತ್ತಿರೋದೇನು?

Bigg Boss Kannada Season 12: ಬಿಗ್‌ ಬಾಸ್‌ ಕನ್ನಡ ಸೀಸನ್‌ 12 ಶೋನಲ್ಲಿ ಎಲ್ಲರನ್ನು ನಗಿಸುತ್ತಿರುವ ಗಿಲ್ಲಿ ನಟನಿಗೆ ಹಾವು, ವಿಷಕಾರಿ ಎಂಬೆಲ್ಲ ಪಟ್ಟಗಳು ಸಿಕ್ಕಿವೆ. ಈ ಬಗ್ಗೆ ಖಾಸಗಿ ಕಂಪೆನಿ HR ಮಾಡಿದ ವಿಮರ್ಶೆ ಹೀಗಿದೆ. 

Read Full Story

12:17 PM (IST) Dec 09

ಮಹಿಳಾ ನೌಕರರಿಗೆ ಬ್ಯಾಡ್ ನ್ಯೂಸ್ - ಮುಟ್ಟಿನ ರಜೆಗೆ ಹೈಕೋರ್ಟ್ ತಡೆ - ಸರ್ಕಾರದ ಆದೇಶಕ್ಕೆ ಹಿನ್ನಡೆ?

ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ವೇತನ ಸಹಿತ ರಜೆ ನೀಡುವ ರಾಜ್ಯ ಸರ್ಕಾರದ ನವೆಂಬರ್ 20ರ ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದೆ. ಆದೇಶಕ್ಕೆ ಮುನ್ನ ಸಂಘಟನೆಗಳ ಅಭಿಪ್ರಾಯ ಪಡೆಯದಿರುವ ಬಗ್ಗೆ ಕೋರ್ಟ್‌ ಪ್ರಶ್ನಿಸಿದೆ.

Read Full Story

12:14 PM (IST) Dec 09

Bigg Boss - ಸೂರಜ್​ ಎದುರೇ ರಾಶಿಕಾ, ರಜತ್​ ಜೊತೆ ರೊಮಾನ್ಸ್​ ಮಾಡೋದಾ? ಛೇ ಧ್ರುವಂತ್​ಗೆ ಇದೇನಾಯ್ತು?

ಬಿಗ್​ಬಾಸ್​ ಮನೆಯಲ್ಲಿ ಸೂರಜ್ ಸಿಂಗ್ ಮತ್ತು ರಾಶಿಕಾ ಶೆಟ್ಟಿ ಲವ್​ಸ್ಟೋರಿ ಸದ್ದು ಮಾಡುತ್ತಿರುವಾಗಲೇ, ರಾಶಿಕಾ ಇದೀಗ ರಜತ್​ ಜೊತೆ ರೊಮ್ಯಾಂಟಿಕ್ ಡಾನ್ಸ್​ ಮಾಡಿರುವುದು ಚರ್ಚೆಗೆ ಕಾರಣವಾಗಿದೆ. ಇದೇ ವೇಳೆ ಧ್ರುವಂತ್​ ಅವರ ರಿಯಾಕ್ಷನ್​ ಕೂಡ ಗಮನ ಸೆಳೆದಿದೆ.

Read Full Story

11:50 AM (IST) Dec 09

BBK 12 - ರಕ್ಷಿತಾ ಶೆಟ್ಟಿ ಇನ್‌ಫ್ಲುಯೆನ್ಸರ್ ಅಲ್ಲ, ಯಾರೂ ಅಂದುಕೊಂಡಂತೆ ಇಲ್ಲ; ಖಾಸಗಿ ಕಂಪೆನಿ HR ತಿಳಿಸಿದ ಸತ್ಯ

Bigg Boss Kannada Rakshita Shetty: ಬಿಗ್‌ ಬಾಸ್‌ ಕನ್ನಡ ಸೀಸನ್‌ 12 ಶೋ ಸ್ಪರ್ಧಿ ರಕ್ಷಿತಾ ಶೆಟ್ಟಿ ಬಗ್ಗೆ HR ಆಗಿ ಕೆಲಸ ಮಾಡುತ್ತಿರುವ ಸಂಕೇತ್‌ ಮೇಘರವಳ್ಳಿ ಅವರು ಬರೆದ ಬರೆಹ ಹೀಗಿದೆ. ರಕ್ಷಿತಾ ಶೆಟ್ಟಿಯ ಗುಣವನ್ನು ಅವರು ಇಲ್ಲಿ ಎಚ್‌ಆರ್‌ ದೃಷ್ಟಿಯಿಂದ ಅಳೆದು ತೂಗಿದ್ದಾರೆ.

Read Full Story

11:36 AM (IST) Dec 09

ಒಂದೇ ದಿನದಲ್ಲಿ ದಾಖಲೆ ಬರೆದ ಸುದೀಪ್​ Mark ಟ್ರೈಲರ್​ - ಇಷ್ಟೊಂದು ವ್ಯೂವ್ಸ್​ ಆಗಿದ್ದು ನಿಜನಾ? ಏನಿದು ಚರ್ಚೆ?

ಕಿಚ್ಚ ಸುದೀಪ್ ಅಭಿನಯದ 'ಮಾರ್ಕ್' ಚಿತ್ರದ ಟ್ರೈಲರ್ ಬಿಡುಗಡೆಯಾದ 24 ಗಂಟೆಗಳಲ್ಲಿ 1.4 ಕೋಟಿ ವೀಕ್ಷಣೆ ಪಡೆದು ದಾಖಲೆ ಬರೆದಿದೆ. ಆದರೆ,  ವೀಕ್ಷಣೆಗಳ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ಶುರುವಾಗಿದ್ದು, ಇದು ನಿಜವಾದ ವೀಕ್ಷಣೆಗಳೇ  ಎಂಬ ಚರ್ಚೆ ನಡೆಯುತ್ತಿದೆ. ಯಾಕಿಷ್ಟು ಚರ್ಚೆ?

Read Full Story

11:33 AM (IST) Dec 09

ದಯಮಾಡಿ ಅರ್ಥ ಮಾಡಿಕೊಳ್ಳಿ ತಪ್ಪು ತಿಳಿಯಬೇಡಿ - ಸೋದರನ ಪೋಸ್ಟ್‌ಗೆ ಹೆಬ್ಬಾಳ್ಕರ್ ಪ್ರತಿಕ್ರಿಯೆ

ನಮ್ಮ ಸಾಮಾಜಿಕ ಮಾಧ್ಯಮದ ಖಾತೆಗಳಲ್ಲಿ ನಾವು ಯಾವುದೇ ಪೋಸ್ಟ್ ಮಾಡಲ್ಲ. ಅದಕ್ಕಾಗಿ ಕೆಲವು ಜನರನ್ನು ನೇಮಿಸಲಾಗಿರುತ್ತದೆ. ಸಿಬ್ಬಂದಿ ಪೋಸ್ಟ್ ಮಾಡುವ ಸಂದರ್ಭದಲ್ಲಿ ಅಚಾತುರ್ಯವಾಗಿದೆ. ಅದು ಕೂಡ ತಪ್ಪು. ಆ ತಪ್ಪನ್ನು ನಾನು ತಪ್ಪು ಅಂತಾನೆ ಹೇಳ್ತೀನಿ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯಿಸಿದರು.

Read Full Story

11:31 AM (IST) Dec 09

ಸಲಗ Vs ರೂಲರ್ - ಅಳಿದು ಉಳಿದವರ ಲ್ಯಾಂಡ್ ಲಾರ್ಡ್ ದುನಿಯಾದಲ್ಲಿ ಶೆಟ್ಟರ ವಾರ್!

ಸಲಗ ಮುಂದಿನ ವರ್ಷಾರಂಭಕ್ಕೆ ಲ್ಯಾಂಡ್​ಲಾರ್ಡ್ ಸಿನಿಮಾ ಮೂಲಕ ಸಿನಿಪ್ರಿಯರ ಮುಂದೆ ಬರ್ತಾ ಇದ್ದಾರೆ. ಲ್ಯಾಂಡ್​ಲಾರ್ಡ್ ನಲ್ಲಿ ವಿಜಯ್ ಮಾಸ್ ಅವತಾರ ಇದ್ದು, ಇವರಿಗೆ ಟಕ್ಕರ್ ಕೊಡೋ ರೂಲರ್ ಯಾರು ಅನ್ನೋ ಕುತೂಹಲಕ್ಕೆ ಈಗ ತೆರೆಬಿದ್ದಿದೆ.

Read Full Story

10:44 AM (IST) Dec 09

ಅಣ್ಣಾ, ಇನ್ನು ಎಷ್ಟೊತ್ತು ಎಂದ ಗ್ರಾಹಕನಿಗೆ ಇದು ಪ್ಲೇನ್ ಅಲ್ಲ ಅಂದ ಬೆಂಗ್ಳೂರು ಕ್ಯಾಬ್ ಡ್ರೈವರ್!

Bengaluru Uber Driver: ಚಾಲಕ ಮತ್ತು ಪ್ರಯಾಣಿಕರ ನಡುವಿನ ಸಂಭಾಷಣೆ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ನೆಟ್ಟಿಗರೊಬ್ಬರು ರೆಡ್ಡಿಟ್‌ನಲ್ಲಿ ಕ್ಯಾಬ್ ಬುಕ್ ಮಾಡಿದಾಗ ತಮಗಾದ ಅನುಭವವನ್ನು ಹಂಚಿಕೊಂಡಿದ್ದಾರೆ.

Read Full Story

10:38 AM (IST) Dec 09

ಸೊಗಸಾದ ಬಜೆಟ್‌ ಫ್ರೆಂಡ್ಲಿ ಸ್ಮಾರ್ಟ್‌ಫೋನು ಬೇಕಾ? ಇಲ್ಲಿದೆ ಸ್ಯಾಮ್‌ಸಂಗ್ ಗ್ಯಾಲಕ್ಸಿ ಎ17 5ಜಿ!

ಎಐ ಅನ್ನು ಸಮರ್ಥವಾಗಿ ಬಳಸಿಕೊಳ್ಳುತ್ತಿರುವ ಸಂಸ್ಥೆಗಳಲ್ಲಿ ಸ್ಯಾಮ್‌ಸಂಗ್ ಕೂಡ ಒಂದು. ಗ್ಯಾಲಕ್ಸಿ ಎಐ ಮೂಲಕ ಬಜೆಟ್‌ ಫ್ರೆಂಡ್ಲಿ ಸ್ಮಾರ್ಟ್‌ಫೋನ್‌ಗಳನ್ನೂ ಅತ್ಯಂತ ಆಕರ್ಷಕವಾಗಿ ರೂಪಿಸುತ್ತಿದ್ದಾರೆ. ಅದಕ್ಕೆ ಉತ್ತಮ ನಿದರ್ಶನ ಗ್ಯಾಲಕ್ಸಿ ಎ17 5ಜಿ.

Read Full Story

10:27 AM (IST) Dec 09

ಜೈಲಲ್ಲಿ ಮುಂದುವರೆದ ದಾಸನ ದಾದಾಗಿರಿ.. ಟಿವಿ ಬದಲು ಸಿಸಿಟಿವಿ ಬಂತು ದರ್ಶನ್ ಸೆಲ್‌ಗೆ!

ದರ್ಶನ್ ಜೈಲು ಸೇರಿದರೂ ಬದಲಾಗಿಲ್ವಾ..? ಮತ್ತದೇ ದೌಲತ್ತು, ದುರಂಹಕಾರದಿಂದ ಜೈಲಿನಲ್ಲೂ ಮೆರೀತಾ ಇದ್ದಾರಾ.?. ಸಹಕೈದಿಗಳಿಗೆ ದಾಸನಿಂದ ಕಿರುಕುಳ ಆಗ್ತಾ ಇದೆಯಾ..? ಖುದ್ದು ಡಿ ಗ್ಯಾಂಗ್ ಸದಸ್ಯರು ದಾಸನ ದಾದಾಗಿರಿಗೆ ತತ್ತರಿಸಿ ಹೋಗಿದ್ದಾರಂತೆ.

Read Full Story

09:53 AM (IST) Dec 09

ರಾಜ್ ಜೊತೆ ರೊಮ್ಯಾಂಟಿಕ್ ಹನಿಮೂನ್ ಟ್ರಿಪ್ ಪ್ಲಾನ್ ಮಾಡಿದ ಸಮಂತಾ.. ಎಲ್ಲಿಗೆ ಹೋಗ್ತಿದ್ದಾರೆ?

ಸ್ಟಾರ್ ನಟಿ ಸಮಂತಾ ಮತ್ತು ಬಾಲಿವುಡ್ ನಿರ್ದೇಶಕ ರಾಜ್ ನಿಡಿಮೋರು ಮದುವೆಯಾಗಿದ್ದಾರೆ. ಇಬ್ಬರಿಗೂ ಇದು ಎರಡನೇ ಮದುವೆಯಾಗಿದ್ದು, ಹನಿಮೂನ್‌ಗಾಗಿ ರೊಮ್ಯಾಂಟಿಕ್ ಸ್ಥಳಗಳನ್ನು ಹುಡುಕುತ್ತಿದ್ದಾರೆ ಎನ್ನಲಾಗಿದೆ. ಅಂದಹಾಗೆ ಸಮಂತಾ ಹನಿಮೂನ್ ಟ್ರಿಪ್ ಯಾವಾಗ?

Read Full Story

09:17 AM (IST) Dec 09

ಡಿಕೆಸು ಧ್ವನಿಯಲ್ಲಿ ಮಾತಾಡಿದ್ದರು ಎನ್ನುವ ಆರೋಪ.. 'ಬಂಗಾರಿ' ಕೇಸ್‌ನಲ್ಲಿ ನಟ ಧರ್ಮಗೆ ಧ್ವನಿ ಪರೀಕ್ಷೆ?

ಬಮೂಲ್ ಅಧ್ಯಕ್ಷ ಹಾಗೂ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಡಿ.ಕೆ.ಸುರೇಶ್ ಹೆಸರಿನಲ್ಲಿ ಕೋಟ್ಯಂತರ ರು. ವಂಚನೆ ಪ್ರಕರಣ ಸಂಬಂಧ ಚಲನಚಿತ್ರ ನಟ ಧರ್ಮ ಅವರಿಗೆ ಧ್ವನಿ ಪರೀಕ್ಷೆಯ ಸಂಕಷ್ಟ ಎದುರಾಗಿದೆ.

Read Full Story

09:13 AM (IST) Dec 09

BBK 12 - ಚಾಮುಂಡಿ ದೇವಿ ಮುಂದೆ ಮಾತು ಕೊಟ್ಟು ತಪ್ಪಿದ ಗಿಲ್ಲಿ ನಟ; ಇಂಥ ಮಹಾಪ್ರಮಾದ ಯಾಕೆ?

Bigg Boss Kannada Season 12 Episode Update: ಬಿಗ್‌ ಬಾಸ್‌ ಕನ್ನಡ ಸೀಸನ್‌ 12 ಶೋನಲ್ಲಿ ಗಿಲ್ಲಿ ನಟನ ಕಾಮಿಡಿ ಅನೇಕರಿಗೆ ಇರಿಸುಮುರಿಸು ತಂದಿದೆ, ಬೇಸರ ಉಂಟು ಮಾಡಿದೆ. ಗಿಲ್ಲಿ ನಟ ಹಾಗೂ ಧ್ರುವಂತ್‌ ಪರಸ್ಪರ ಮಾತಿನಲ್ಲಿ ಯುದ್ಧ ಮಾಡುತ್ತಿರುತ್ತಾರೆ. ಈಗ ಧ್ರುವಂತ್‌ ಹೊಸ ಹೆಜ್ಜೆ ಹಾಕಿದ್ದಾರೆ.

Read Full Story

08:43 AM (IST) Dec 09

BBK 12 - ಕಾವ್ಯ ಶೈವ ಹತ್ತಿಸಿದ ಕಿಡಿ; ಧ್ರುವಂತ್‌, ರಜತ್‌ ಮಧ್ಯೆ ಮಾರಾಮಾರಿ ಜಗಳ, ಹೊರಬೀಳೋರು ಯಾರು?

Colors Kannada Bigg Boss Kannada Season Episode Update: ಬಿಗ್‌ ಬಾಸ್‌ ಕನ್ನಡ ಸೀಸನ್‌ 12 ಶೋನಲ್ಲಿ ನಾಮಿನೇಶನ್‌ ಎಂದು ಬಂದಾಗ, ಸ್ಪರ್ಧಿಗಳು ಕೊಡುವ ಕಾರಣಕ್ಕೆ ಜಗಳ ಆಗುವುದು. ಈಗ ಇದೇ ವಿಚಾರಕ್ಕೆ ರಜತ್‌ ಹಾಗೂ ಧ್ರುವಂತ್‌ ಮಧ್ಯೆ ಗಲಾಟೆ ಆಗಿದೆ. ಇದರ ಕಿಡಿ ಹೊತ್ತಿರೋದು ಕಾವ್ಯ ಮಾತಿನಿಂದ.

Read Full Story

More Trending News