LIVE NOW
Published : Jan 09, 2026, 06:52 AM ISTUpdated : Jan 09, 2026, 10:13 PM IST

Karnataka News Live: ಬಾಗಲಕೋಟೆ - ಟ್ರ್ಯಾಕ್ಟರ್‌ನಲ್ಲಿ ತುಂಬಿ ಹೊತ್ತೊಯ್ಯುತ್ತಿದ್ದ ಕಬ್ಬಿಗೆ ಆಕಸ್ಮಿಕ ಬೆಂಕಿ; ಚಾಲಕನ ಸಾಹಸದಿಂದ ತಪ್ಪಿದ ದುರಂತ

ಸಾರಾಂಶ

ಬೆಂಗಳೂರು: ‘ಎಚ್.ಡಿ.ಕುಮಾರಸ್ವಾಮಿ ಧೋರಣೆ ನೋಡುತ್ತಿದ್ದರೆ, ಸದ್ಯದಲ್ಲೇ ಜೆಡಿಎಸ್ ಪಕ್ಷ ಬಿಜೆಪಿ ಜತೆ ವಿಲೀನವಾಗುವ ಸಾಧ್ಯತೆ ಇದೆ. ಆಗುವುದಾದರೆ ಬೇಗ ವಿಲೀನವಾಗಲಿ. ಆಗ ಆಟಕ್ಕೆ ಮೂರು ಪಕ್ಷ, ಲೆಕ್ಕಕ್ಕೆ ಮಾತ್ರ ಎರಡು ಪಕ್ಷ ಎಂಬ ಗೊಂದಲವಿರುವುದಿಲ್ಲ’ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ವ್ಯಂಗ್ಯವಾಡಿದ್ದಾರೆ. ಬಿಜೆಪಿ, ಜೆಡಿಎಸ್‌ವಿಲೀನವಾದರೆ ನಮಗೂ ಒಳ್ಳೆಯದೇ. ನಾವೂ ನೇರವಾಗಿ ಬಿಜೆಪಿ ಜೊತೆ ಹೋರಾಟ ಮಾಡಬಹುದು. ಆಗ ಆಟಕ್ಕೆ ಮೂರು ಪಕ್ಷ, ಲೆಕ್ಕಕ್ಕೆ ಮಾತ್ರ ಎರಡು ಪಕ್ಷ ಎಂಬ ಗೊಂದಲ ಇರುವುದಿಲ್ಲ. ಅವರು ಬೇಗ ತೀರ್ಮಾನ ಮಾಡಿದರೆ ನಾವು ನಮ್ಮ ತೀರ್ಮಾನ ಮಾಡಿಕೊಳ್ಳಬಹುದು. ಈಗ ಅಡ್ಡಗೋಡೆ ಮೇಲೆ ದೀಪ ಇಟ್ಟಂತೆ ಆಡುತ್ತಿದ್ದಾರೆ ಎಂದು ಲೇವಡಿ ಮಾಡಿದರು.

 Bagalkot Sugarcane Tractor Catches Fire Driver s Bravery Averts Major Tragedy

10:13 PM (IST) Jan 09

ಬಾಗಲಕೋಟೆ - ಟ್ರ್ಯಾಕ್ಟರ್‌ನಲ್ಲಿ ತುಂಬಿ ಹೊತ್ತೊಯ್ಯುತ್ತಿದ್ದ ಕಬ್ಬಿಗೆ ಆಕಸ್ಮಿಕ ಬೆಂಕಿ; ಚಾಲಕನ ಸಾಹಸದಿಂದ ತಪ್ಪಿದ ದುರಂತ

ಬಾಗಲಕೋಟೆ ಜಿಲ್ಲೆಯ ಸಾವಳಗಿ ಗ್ರಾಮದಲ್ಲಿ ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್‌ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದೆ. ಚಾಲಕನು ಸಮಯಪ್ರಜ್ಞೆ ಮೆರೆದು, ಟ್ರ್ಯಾಕ್ಟರ್ ಅನ್ನು ದೂರ ಚಲಾಯಿಸಿ ದೊಡ್ಡ ಅನಾಹುತವನ್ನು ತಪ್ಪಿಸಿದ್ದಾನೆ. ಅಗ್ನಿಶಾಮಕ ದಳದ ಕಾರ್ಯಾಚರಣೆಯಿಂದ ಬೆಂಕಿ ನಂದಿಸಲಾಯಿತು.

Read Full Story

09:53 PM (IST) Jan 09

ಗಿಲ್ಲಿ ನಟನಿಗೆ ಪ್ಲೀಸ್‌ ಬಾಚಣಿಕೆ ಕೊಡಿ, ಟ್ಯಾಟೂ ಕಲಾವಿದನಿಂದ Bigg Bossಗೆ ಕುತೂಹಲದ ಮನವಿ ಸಲ್ಲಿಕೆ!

ಬಿಗ್‌ಬಾಸ್‌ ಸ್ಪರ್ಧಿ ಗಿಲ್ಲಿ ನಟನ ಅಭಿಮಾನಿಯೊಬ್ಬರು ಅವರ ಟ್ಯಾಟೂ ಹಾಕಿಸಿಕೊಳ್ಳಲು ಬಂದಿದ್ದಾರೆ. ಆದರೆ,  ಟ್ಯಾಟೂ ಹಾಕುವುದು ಕಷ್ಟವಾಗುತ್ತಿದೆ ಎಂದು ಕಲಾವಿದರೊಬ್ಬರು ತಮಾಷೆಯಾಗಿ, ಬಿಗ್‌ಬಾಸ್‌ಗೆ ಮತ್ತು ಕಲರ್ಸ್ ವಾಹಿನಿಗೆ ಗಿಲ್ಲಿಗೆ ಬಾಚಣಿಗೆ ಕೊಡಿ ಎಂದು ಮನವಿ ಮಾಡಿದ್ದಾರೆ.

Read Full Story

09:47 PM (IST) Jan 09

ನಿಮ್ಮ ಮಗುವಿನ ಬ್ಯಾಗ್ ಒಮ್ಮೆ ತೂಕ ಮಾಡಿ ನೋಡಿ! ಕಾರವಾರದ ಸಮರ್ಥನಿಗೆ ಆದ ಸ್ಥಿತಿ ನಾಳೆ ನಿಮ್ಮ ಮಗುವಿಗೂ ಆಗಬಹುದು!

ಕಾರವಾರದಲ್ಲಿ, ಅತಿಯಾದ ಭಾರದ ಶಾಲಾ ಬ್ಯಾಗ್ ಹೊತ್ತ ಆರನೇ ತರಗತಿ ವಿದ್ಯಾರ್ಥಿಯೊಬ್ಬನ ಕೈ ಮೂಳೆ ಮುರಿದಿದೆ. ಶಿಕ್ಷಕರು ಹೆಚ್ಚು ಪುಸ್ತಕ ತರಲು ಹೇಳಿದ್ದೇ ಈ ದುರಂತಕ್ಕೆ ಕಾರಣವೆನ್ನಲಾಗಿದ್ದು, ಸರ್ಕಾರದ ನಿಯಮ ಉಲ್ಲಂಘನೆಯ ಬಗ್ಗೆ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Read Full Story

09:14 PM (IST) Jan 09

ಸಿಐಡಿ ಎಂದರೆ ಕಾಂಗ್ರೆಸ್ ಪಾಲಿನ 'ವಾಷಿಂಗ್ ಮಷೀನ್' ಅಂದಿದ್ದ ಜೋಶಿ; ಈಗ ಬಳ್ಳಾರಿ ಕೇಸ್ ಕೂಡ ಸಿಐಡಿಗೆ!

ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದ್ದ ಬಳ್ಳಾರಿ ಬ್ಯಾನರ್ ಗಲಭೆ ಪ್ರಕರಣವನ್ನು ರಾಜ್ಯ ಸರ್ಕಾರವು ಸಿಐಡಿಗೆ ಹಸ್ತಾಂತರಿಸಿದೆ. ಗಾಲಿ ಜನಾರ್ದನ ರೆಡ್ಡಿ ಮತ್ತು ಬಿ. ಶ್ರೀರಾಮುಲು ಸೇರಿದಂತೆ ಹಲವು ನಾಯಕರ ವಿರುದ್ಧ ದಾಖಲಾಗಿದ್ದ ನಾಲ್ಕು ಪ್ರಮುಖ ಪ್ರಕರಣಗಳ ನಿಷ್ಪಕ್ಷಪಾತ ತನಿಖೆಗಾಗಿ ಈ ನಿರ್ಧಾರ.

Read Full Story

09:09 PM (IST) Jan 09

ಗಿಲ್ಲಿಗೆ ಉಲ್ಟಾ ಹೊಡೀಲಿಲ್ಲಾ ಅಂದ್ರೆ ನನ್​ ಹೆಸ್ರೇ ಚೇಂಜ್​ ಮಾಡ್ಕೋತೀನಿ - ರಿಷಾ ಶಾಕಿಂಗ್​ ಸ್ಟೇಟ್​ಮೆಂಟ್​!

ಬಿಗ್​ಬಾಸ್​ ಫಿನಾಲೆ ಸಮೀಪಿಸುತ್ತಿದ್ದಂತೆ, 'ಗಿಲ್ಲಿ ನಟ' ವಿನ್ನರ್ ಆಗುವ ಮಾತುಗಳು ಬಲವಾಗಿವೆ. ಈ ನಡುವೆ, ಸಹ ಸ್ಪರ್ಧಿ ರಿಷಾ ಗೌಡ ಅವರು ಗಿಲ್ಲಿ ನಟನ ಬಗ್ಗೆ ಆಘಾತಕಾರಿ ಹೇಳಿಕೆ ನೀಡಿದ್ದಾರೆ. ಅವನನ್ನು ಎಲ್ಲರೂ ಮೆಟ್ಟಿಲಿನಂತೆ ಬಳಸಿಕೊಳ್ಳುತ್ತಾರೆ ಎಂದಿರೋ ರಿಷಾ  ಹೇಳಿದ್ದೇನು?  

Read Full Story

09:01 PM (IST) Jan 09

ಒಂದೇ ದಿನದಲ್ಲಿ ಜಿಗಿದ ಫಾಲೋವರ್ಸ್ ಕೌಂಟ್‌! 'ಟಾಕ್ಸಿಕ್' ಬೋಲ್ಡ್‌ ಬ್ಯೂಟಿ ನಟಾಲಿಗೆ ಫಿದಾ ಆದ ಫ್ಯಾನ್ಸ್!

ಯಶ್ ಅಭಿನಯದ 'ಟಾಕ್ಸಿಕ್' ಸಿನಿಮಾದ ಟೀಸರ್‌ನಲ್ಲಿ ಕಾಣಿಸಿಕೊಂಡ ಉಕ್ರೇನಿಯನ್-ಅಮೇರಿಕನ್ ನಟಿ ನಟಾಲಿ ಬರ್ನ್, ಬೋಲ್ಡ್ ದೃಶ್ಯಗಳಿಂದಾಗಿ ಭಾರೀ ಸದ್ದು ಮಾಡುತ್ತಿದ್ದಾರೆ. ಟೀಸರ್ ಬಿಡುಗಡೆಯಾದ ಒಂದೇ ದಿನದಲ್ಲಿ ಅವರ ಇನ್ಸ್‌ಟಾಗ್ರಾಮ್ ಫಾಲೋವರ್ಸ್‌ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದೆ.

Read Full Story

07:14 PM (IST) Jan 09

ಪೊಲೀಸ್ ಇಲಾಖೆ ಕಾಂಗ್ರೆಸ್ ಪಾಲಿನ ವಾಷಿಂಗ್ ಮಷೀನ್ - ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ!

ಸುಜಾತಾ ಬಂಧನ ಪ್ರಕರಣಕ್ಕೆ ಸಂಬಂಧ ಕೇಂದ್ರ ಸಚಿವ ಜೋಶಿ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ. ಪೊಲೀಸರು ಕಾಂಗ್ರೆಸ್ ಕೈಗೊಂಬೆಯಾಗಿದ್ದು, ಹಳೆಯ ವಿಡಿಯೋ ಬಳಸಿ ರಾಜಕೀಯ ಸಂಚು ರೂಪಿಸಲಾಗಿದೆ ಎಂದು ಆರೋಪಿಸಿದ್ದಾರೆ. ಪ್ರಕರಣದ ಸಿಐಡಿ ತನಿಖೆ ತಿರಸ್ಕರಿಸಿ, ನ್ಯಾಯಾಂಗ ತನಿಖೆಗೆ ಒತ್ತಾಯಿಸಿದ್ದಾರೆ.

Read Full Story

07:04 PM (IST) Jan 09

ನ್ಯಾಯಾಲಯದಲ್ಲಿ ಸೋಲೋದು ಖಚಿತವೆಂದು ದಾಂಡೇಲಿ ಹೋರಾಟಗಾರ ಹಿರಿಯ ವಕೀಲನ ಬರ್ಬರ ಹತ್ಯೆ, ಆರೋಪಿ ದೋಷಿಯೆಂದ ಕೋರ್ಟ್

ದಾಂಡೇಲಿಯ ಹಿರಿಯ ವಕೀಲ ಅಜಿತ್ ನಾಯ್ಕ ಹತ್ಯೆ ಪ್ರಕರಣದಲ್ಲಿ ಯಲ್ಲಾಪುರ ನ್ಯಾಯಾಲಯವು ತೀರ್ಪು ನೀಡಿದೆ. ಪ್ರಮುಖ ಆರೋಪಿ ಪಾಂಡುರಂಗ ಕಾಂಬಳೆಯನ್ನು ದೋಷಿ ಎಂದು ಘೋಷಿಸಿದೆ. ಸಾಕ್ಷ್ಯಾಧಾರಗಳ ಕೊರತೆಯಿಂದ ಉಳಿದ ನಾಲ್ವರನ್ನು ಖುಲಾಸೆಗೊಳಿಸಲಾಗಿದ್ದು, ದೋಷಿಗೆ ಶಿಕ್ಷೆಯ ಪ್ರಮಾಣ ಜ.13ರಂದು ಪ್ರಕಟವಾಗಲಿದೆ.

Read Full Story

06:42 PM (IST) Jan 09

'ಕಣ್ಣುಗಳೇ ಹೇಳುತ್ತಿವೆ' - ಕೊಹ್ಲಿ ಟೆಸ್ಟ್ ಕಮ್‌ಬ್ಯಾಕ್‌ ಇದು ಸರಿಯಾದ ಸಮಯವೆಂದ ರಾಬಿನ್ ಉತ್ತಪ್ಪ

ಮಾಜಿ ಆಟಗಾರ ರಾಬಿನ್ ಉತ್ತಪ್ಪ, ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿ ಹಿಂಪಡೆದು ಮರಳಲು ಇದು ಸೂಕ್ತ ಸಮಯ ಎಂದು ಅಭಿಪ್ರಾಯಪಟ್ಟಿದ್ದಾರೆ. ಕಳೆದ ವರ್ಷ ಅನಿರೀಕ್ಷಿತವಾಗಿ ನಿವೃತ್ತಿ ಘೋಷಿಸಿದ್ದ ಕೊಹ್ಲಿಯ ನಿರ್ಧಾರವನ್ನು ಸಂಜಯ್ ಮಂಜ್ರೇಕರ್ ಟೀಕಿಸಿದ್ದರು.

Read Full Story

06:39 PM (IST) Jan 09

ಫಾರ್ಮ್‌ ಹೌಸ್ ಹೆಸರಲ್ಲಿ ರೆಸಾರ್ಟ್ ನಿರ್ಮಾಣ; ಸಚಿವ ಜಮೀರ್ ಆಪ್ತ ಸರ್ಫರಾಜ್‌ ಖಾನ್‌ಗೆ ತಹಶೀಲ್ದಾರ್ ಶಾಕ್!

ವಸತಿ ಸಚಿವ ಜಮೀರ್ ಅಹಮ್ಮದ್ ಖಾನ್ ಅವರ ಆಪ್ತ ಕಾರ್ಯದರ್ಶಿ ಸರ್ಫರಾಜ್ ಖಾನ್ ಅವರು ಕೊಡಗಿನಲ್ಲಿ ಫಾರ್ಮ್ ಹೌಸ್ ನಿರ್ಮಾಣದ ನೆಪದಲ್ಲಿ ಅಕ್ರಮವಾಗಿ ಬೃಹತ್ ರೆಸಾರ್ಟ್.. ಭೂ ಪರಿವರ್ತನೆ ಮಾಡದೆ, ಪರಿಸರ ಸೂಕ್ಷ್ಮ ವಲಯದ ನಿಯಮಗಳನ್ನು ಉಲ್ಲಂಘಿಸಿ ನಿರ್ಮಿಸುತ್ತಿರುವ ಈ ಕಟ್ಟಡಕ್ಕೆ ತಹಶೀಲ್ದಾರರಿಂದ ನೋಟಿಸ್ ಜಾರಿ 

Read Full Story

06:00 PM (IST) Jan 09

ಇಸ್ಲಾಂ ಧರ್ಮ ಎಂದಿಗೂ ಜಾತಿ ಭೇದ ಮಾಡಿಲ್ಲ 'ಸಾರೆ ಜಹಾನ್ ಸೆ ಅಚ್ಚಾ' ಹಾಡೋದು ಕಲಿಸಿದೆ - ಬಿಜೆಪಿ ವಿರುದ್ಧ ಸಚಿವ ಜಮೀರ್ ಕಿಡಿ

ಸಚಿವ ಜಮೀರ್ ಅಹ್ಮದ್ ಖಾನ್, 2028ರ ವರೆಗೂ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರಿಯಲಿದ್ದಾರೆ ಎಂದು ಹೇಳುವ ಮೂಲಕ ಸಿಎಂ ಬದಲಾವಣೆ ಚರ್ಚೆಗೆ ತೆರೆ ಎಳೆದಿದ್ದಾರೆ. ಸಿದ್ದರಾಮಯ್ಯ ನಂತರ ಡಿಕೆಶಿ ಮುಖ್ಯಮಂತ್ರಿಯಾಗಲಿದ್ದು, ಪಂಚ ಗ್ಯಾರಂಟಿಗಳ ಆಧಾರದ ಮೇಲೆ ಮುಂಬರುವ ಚುನಾವಣೆ ಎದುರಿಸುವುದಾಗಿ ತಿಳಿಸಿದರು.

Read Full Story

05:58 PM (IST) Jan 09

ಆರ್ಟ್‌ ಆಫ್‌ ಲಿವಿಂಗ್‌ ರವಿಶಂಕರ್‌ ಗುರೂಜಿಯಿಂದ ಸರ್ಕಾರಿ ಭೂಮಿ ಒತ್ತುವರಿ ಆರೋಪ, ತನಿಖೆಗೆ ತಡೆ ನೀಡಲು ಹೈಕೋರ್ಟ್‌ ನಕಾರ

ಸರ್ಕಾರಿ ಭೂಮಿ ಒತ್ತುವರಿ ಆರೋಪದ ಮೇಲೆ ಶ್ರೀ ಶ್ರೀ ರವಿಶಂಕರ್ ವಿರುದ್ಧ ದಾಖಲಾದ ಎಫ್‌ಐಆರ್‌ ತನಿಖೆಗೆ ತಡೆ ನೀಡಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ. ಬೆಂಗಳೂರಿನ ಕಗ್ಗಲೀಪುರ ಗ್ರಾಮದಲ್ಲಿನ ಜಮೀನು ಪ್ರಕರಣಕ್ಕೆ ಸಂಬಂಧಿಸಿದಂತೆ, ದಾಖಲೆಗಳನ್ನು ಪರಿಶೀಲಿಸದೆ ತಡೆ ನೀಡುವುದು ಸೂಕ್ತವಲ್ಲ ಎಂದಿದೆ.

Read Full Story

05:52 PM (IST) Jan 09

575 ಮೆಟ್ಟಿಲೇರಿ ಅಂಜನಾದ್ರಿ ಹನುಮನ ದರ್ಶನ ಪಡೆದ ಕ್ರಿಕೆಟಿಗ ಇಶಾಂತ್ ಶರ್ಮಾ!

ಟೀಂ ಇಂಡಿಯಾ ಕ್ರಿಕೆಟಿಗ ಇಶಾಂತ್ ಶರ್ಮಾ ಅವರು ಮುಂಬರುವ ಐಪಿಎಲ್ ಟೂರ್ನಿಗೂ ಮುನ್ನ ಕೊಪ್ಪಳದ ಪ್ರಸಿದ್ಧ ಅಂಜನಾದ್ರಿ ಬೆಟ್ಟಕ್ಕೆ ಭೇಟಿ ನೀಡಿ, 575 ಮೆಟ್ಟಿಲುಗಳನ್ನು ಏರಿ ಆಂಜನೇಯನ ದರ್ಶನ ಪಡೆದಿದ್ದಾರೆ.  

Read Full Story

05:45 PM (IST) Jan 09

ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ 2025 ಪ್ರಕಟ - ಸುವರ್ಣ ನ್ಯೂಸ್ ಮಂಜುನಾಥ್, ಕನ್ನಡಪ್ರಭ ಅನಂತ್ ನಾಡಿಗ್‌ ಆಯ್ಕೆ!

ಕರ್ನಾಟಕ ಮಾಧ್ಯಮ ಅಕಾಡೆಮಿಯು 2025ನೇ ಸಾಲಿನ ವಾರ್ಷಿಕ ಹಾಗೂ ದತ್ತಿ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಸುವರ್ಣ ನ್ಯೂಸ್‌ನ ಮಂಜುನಾಥ್ ಟಿ. ಕನ್ನಡ ಪ್ರಭ ಅನಂತ ನಾಡಿಗ್ ಸೇರಿ 30 ಪತ್ರಕರ್ತರು ವಾರ್ಷಿಕ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಹಿರಿಯ ಪತ್ರಕರ್ತೆ ಸರಿತಾ ರೈ ಅವರಿಗೆ ವಿಶೇಷ ಪ್ರಶಸ್ತಿ ಘೋಷಿಸಲಾಗಿದೆ.

Read Full Story

05:18 PM (IST) Jan 09

ಸ್ಯಾನಿಟರಿ ಪ್ಯಾಡ್ ಜೊತೆಗೆ ಉಚಿತ ಕಪ್ ನೀಡುವುದಕ್ಕೆ ರಾಜ್ಯ ಸರ್ಕಾರ ನಿರ್ಧಾರ

ಕರ್ನಾಟಕ ಸರ್ಕಾರವು 'ಶುಚಿ' ಯೋಜನೆಯಡಿ, ಮುಂದಿನ ಶೈಕ್ಷಣಿಕ ವರ್ಷದಿಂದ 9 ರಿಂದ 12ನೇ ತರಗತಿಯ ಸರ್ಕಾರಿ ಶಾಲಾ ವಿದ್ಯಾರ್ಥಿನಿಯರಿಗೆ ಮುಟ್ಟಿನ ಕಪ್‌ಗಳನ್ನು ವಿತರಿಸಲು ನಿರ್ಧರಿಸಿದೆ. ಪರಿಸರ ಸ್ನೇಹಿ ಮತ್ತು ಕಡಿಮೆ ವೆಚ್ಚದ ಈ ಕ್ರಮವು, ಯಶಸ್ವಿ ಪ್ರಾಯೋಗಿಕ ಯೋಜನೆಯ ನಂತರ ಜಾರಿಯಾಗುತ್ತಿದೆ.

Read Full Story

05:14 PM (IST) Jan 09

'ಪೊಲೀಸರೇ‌ ದುಶ್ಯಾಸನ ರೀತಿ ವರ್ತಿಸಿದ್ದಾರೆ..' ಹುಬ್ಬಳ್ಳಿ ಮಹಿಳೆ ವಿವಸ್ತ್ರ ಪ್ರಕರಣ, ಆರ್ ಅಶೋಕ್ ಕಿಡಿ!

ಹುಬ್ಬಳ್ಳಿಯ ಮಹಿಳೆ ವಿವಸ್ತ್ರ ಪ್ರಕರಣಕ್ಕೆ ಸಂಬಂಧ ಪ್ರತಿಪಕ್ಷ ನಾಯಕ ಆರ್. ಅಶೋಕ್, ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪೊಲೀಸರ ವರ್ತನೆಯನ್ನು ಖಂಡಿಸಿ, ಪ್ರಕರಣದ ವಿಡಿಯೋ ವೈರಲ್ ಹಿಂದೆ ರಾಜಕೀಯ ಪಿತೂರಿ ಇದೆ ಎಂದು ಆರೋಪಿಸಿದರು. ಈ ಘಟನೆ ನ್ಯಾಯಾಂಗ ತನಿಖೆಗೆ ಒಪ್ಪಿಸಲು ಆಗ್ರಹಿಸಿದರು..

Read Full Story

05:10 PM (IST) Jan 09

ಮೈಸೂರು ಜಂಬೂಸವಾರಿಗೆ ಇರೋ ಮನ್ನಣೆ, ಕೊಪ್ಪಳ ಗವಿಸಿದ್ದೇಶ್ವರ ಜಾತ್ರೆಗೆ ಯಾಕಿಲ್ಲ? ಹಿರಿಯ ನಟ ದತ್ತಣ್ಣ ಪ್ರಶ್ನೆ

ಕೊಪ್ಪಳದ ಗವಿಸಿದ್ದೇಶ್ವರ ಜಾತ್ರೆಯು ದಾಖಲೆಯ ದಾಸೋಹದೊಂದಿಗೆ ಈ ವರ್ಷ ಗಮನ ಸೆಳೆದಿದೆ. ಈ ನಡುವೆ, ನಟ ದತ್ತಣ್ಣ ಅವರು ಜಾತ್ರೆಗೆ ಮೈಸೂರು ಜಂಬೂಸವಾರಿಯಂತಹ ಮನ್ನಣೆ ಯಾಕಿಲ್ಲ ಎಂದು ಪ್ರಶ್ನಿಸಿದ್ದು, ಇದು ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧ ಚರ್ಚೆಗೆ ಕಾರಣವಾಗಿದೆ.
Read Full Story

05:08 PM (IST) Jan 09

ಮೊಸಳೆಗೆ ಊಟ ಹಾಕಬೇಡಿ ಎಂದಿದ್ದ ಎಸಿಎಫ್ ಮದನ್ ನಾಯ್ಕ ಕೊಂದ ಪ್ರವಾಸಿಗರು, 14 ವರ್ಷಗಳ ಬಳಿಕ ಆರೋಪಿಗಳಿಗೆ ಶಿಕ್ಷೆ ಪ್ರಕಟ

ದಾಂಡೇಲಿ ಎಸಿಎಫ್ ಮದನ್ ನಾಯ್ಕ ಅವರ ಸಾವಿಗೆ ಸಂಬಂಧಿಸಿದ 14 ವರ್ಷಗಳ ಹಳೆಯ ಪ್ರಕರಣದಲ್ಲಿ ಯಲ್ಲಾಪುರ ಸಂಚಾರಿ ನ್ಯಾಯಾಲಯವು ಅಂತಿಮ ತೀರ್ಪು ನೀಡಿದೆ. 12 ಆರೋಪಿಗಳ ಪೈಕಿ 8 ಮಂದಿಯನ್ನು ದೋಷಿಗಳೆಂದು ಘೋಷಿಸಿದ್ದು, ಮುಖ್ಯ ಆರೋಪಿಗೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ.  

Read Full Story

04:39 PM (IST) Jan 09

ಬಿಗ್ ಬಾಸ್ ಮಾಜಿ ಸ್ಪರ್ಧಿ ಶಿಶಿರ್ ಶಾಸ್ತ್ರಿಯೊಂದಿನ ಒಡನಾಟ ಬಿಚ್ಚಿಟ್ಟ ಕಾವ್ಯಾ ಶೈವ! ಗಿಲ್ಲಿ ನಟ ಫುಲ್ ಸೈಲೆಂಟ್!

ಬಿಗ್ ಬಾಸ್ ಸೀಸನ್ 12ರ ಅಂತಿಮ ಹಂತದಲ್ಲಿ, ಸ್ಪರ್ಧಿ ಕಾವ್ಯಾ ಮಾಜಿ ಸ್ಪರ್ಧಿ ಶಿಶಿರ್ ಶಾಸ್ತ್ರಿಯೊಂದಿನ ಒಡನಾಟ ರಿವೀಲ್ ಮಾಡಿದ್ದಾರೆ. ಬಿಗ್ ಬಾಸ್ ಮನೆ ಜೀವನದ ಸಮಸ್ಯೆಗಳನ್ನು ಎದುರಿಸಲು ಧೈರ್ಯ ನೀಡುತ್ತದೆ ಎಂಬ ಶಿಶಿರ್ ಮಾತನ್ನು ಕಾವ್ಯಾ ನೆನಪಿಸಿಕೊಂಡಾಗ ಗಿಲ್ಲಿ ನಟ ಕೂಡ ಅಲ್ಲಿಯೇ ಇದ್ದರು.

Read Full Story

04:08 PM (IST) Jan 09

ಬೆಂಗಳೂರು ಶಾಕಿಂಗ್ - ಯುವತಿಗೆ ಲೈಂಗಿಕ ಕಿರುಕುಳ ನೀಡಿ ಮಾನಹಾನಿಗೆ ಯತ್ನಿಸಿದ ಡೆಲಿವರಿ ಬಾಯ್‌!

ಬೆಂಗಳೂರಿನ ಕೊತ್ತನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಡೆಲಿವರಿ ಬಾಯ್ ಓರ್ವ ಯುವತಿಗೆ ಲೈಂಗಿಕ ಕಿರುಕುಳ ನೀಡಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಯುವತಿಯ ಕಿರುಚಾಟದಿಂದ ಹೆದರಿ ಪರಾರಿಯಾದ ಆರೋಪಿ, ಮತ್ತೆ ಬಂದು ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ.  

Read Full Story

03:40 PM (IST) Jan 09

ಬೆಂಗಳೂರು ಡೆಂಟಲ್ ಕಾಲೇಜು ವಿದ್ಯಾರ್ಥಿನಿ ಆತ್ಮ*ಹತ್ಯೆ; ಪ್ರಿನ್ಸಿಪಾಲ್, ಉಪನ್ಯಾಸಕರ ಕಿರುಕುಳವೇ ಕಾರಣವೆಂದ ತಾಯಿ!

ಆನೇಕಲ್‌ನ ಚಂದಾಪುರದಲ್ಲಿ ಯಶಸ್ವಿನಿ ಎಂಬ 23 ವರ್ಷದ ದಂತ ವೈದ್ಯಕೀಯ ವಿದ್ಯಾರ್ಥಿನಿ ಆತ್ಮ*ಹತ್ಯೆ ಮಾಡಿಕೊಂಡಿದ್ದಾರೆ. ಕಾಲೇಜು ಉಪನ್ಯಾಸಕರು ಮತ್ತು ಆಡಳಿತ ಮಂಡಳಿಯ ನಿರಂತರ ಕಿರುಕುಳ ಹಾಗೂ ಅವಮಾನವೇ ತನ್ನ ಮಗಳ ಸಾವಿಗೆ ಕಾರಣ ಎಂದು ಪೋಷಕರು ಆರೋಪಿಸಿದ್ದಾರೆ.

Read Full Story

02:58 PM (IST) Jan 09

ಗ್ರೇಟರ್ ಬೆಂಗಳೂರು ಪ್ರಾಧಿಕಾರದ 5 ಪಾಲಿಕೆಗಳ 369 ವಾರ್ಡ್‌ಗಳಿಗೆ ಮೀಸಲಾತಿ ಪ್ರಕಟಿಸಿದ ರಾಜ್ಯ ಸರ್ಕಾರ

ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳ 369 ವಾರ್ಡ್‌ಗಳಿಗೆ ರಾಜ್ಯ ಸರ್ಕಾರ ಮೀಸಲಾತಿ ನಿಗದಿಪಡಿಸಿ ಕರಡು ಅಧಿಸೂಚನೆ ಹೊರಡಿಸಿದೆ. ಜನಸಂಖ್ಯೆ ಆಧಾರದ ಮೇಲೆ ಎಸ್‌ಸಿ, ಎಸ್‌ಟಿ, ಹಿಂದುಳಿದ ವರ್ಗಗಳು ಹಾಗೂ ಮಹಿಳೆಯರಿಗೆ ಶೇ.50 ರಷ್ಟು ಮೀಸಲಾತಿ ಕಲ್ಪಿಸಲಾಗಿದೆ. 

Read Full Story

02:25 PM (IST) Jan 09

BBK 12 - ಸಾಕ್ಷಿ ಸಮೇತ ರಕ್ಷಿತಾ ಶೆಟ್ಟಿಯ ಮೈಂಡ್‌ಗೇಮ್‌ ಬಿಚ್ಚಿಟ್ಟ ರಾಶಿಕಾ ಶೆಟ್ಟಿ; ಕೊನೆಗೂ ಸೇಡು ತೀರಿತು!

Bigg Boss Kannada Season 12 Episode Update: ಬಿಗ್‌ ಬಾಸ್‌ ಕನ್ನಡ ಸೀಸನ್‌ 12 ಶೋನಲ್ಲಿ ಯಾರು ಕಳಪೆ? ಯಾರು ಉತ್ತಮ? ಎಂಬ ಟಾಸ್ಕ್‌ ನಡೆದಿದೆ. ಇದು ಬಿಗ್‌ ಬಾಸ್‌ ಶೋನ ಕೊನೆಯ ವಾರದ ಕಳಪೆ, ಉತ್ತಮ ಆಗಿರಲಿದೆ. ಈಗ ರಾಶಿಕಾ ಶೆಟ್ಟಿ ಅವರು ರಕ್ಷಿತಾಗೆ ಕಳಪೆ ಕೊಟ್ಟಿದ್ದಾರೆ.

 

Read Full Story

02:15 PM (IST) Jan 09

ಬೆಂಗಳೂರಿಗೆ ಡೆಲಿವರಿ ಬಾಯ್ ಕೆಲಸಕ್ಕೆ ಬಂದ ಬಿಹಾರ ಕಾರ್ಮಿಕ; ತನ್ನದಲ್ಲದ ತಪ್ಪಿಗೆ ಪೆಟ್ಟುತಿಂದು ವಾಪಸ್ ಹೋದ!

ಬೆಂಗಳೂರಿನ ಮಹದೇವಪುರದಲ್ಲಿ ಕ್ಷುಲ್ಲಕ ಕಾರಣಕ್ಕೆ ಡೆಲಿವರಿ ಬಾಯ್ ದೀಪಕ್ ಮೇಲೆ ಇಬ್ಬರು ಯುವಕರು ಕ್ರೂರವಾಗಿ ಹಲ್ಲೆ ನಡೆಸಿದ್ದಾರೆ. ಸ್ಥಳೀಯರು ಮಧ್ಯಪ್ರವೇಶಿಸಿ ಹಲ್ಲೆಕೋರರಿಗೆ ಧರ್ಮದೇಟು ನೀಡಿ ಡೆಲಿವರಿ ಬಾಯ್‌ನನ್ನು ರಕ್ಷಿಸಿದ್ದಾರೆ. ಆದರೆ, ಗಾಯಾಳು ದೀಪಕ್, ಬೆಂಗಳೂರು ಕೆಲಸ ಬಿಟ್ಟು ಬಿಹಾರಕ್ಕೆ ಹೋದನು.

Read Full Story

02:03 PM (IST) Jan 09

BBK 12 - ರಕ್ಷಿತಾ ಶೆಟ್ಟಿ ಬಾಯ್‌ಫ್ರೆಂಡ್‌ ಕಥೆ ಮುಗೀತು; ಇರೋ ಸತ್ಯ ಬಿಚ್ಚಿಟ್ಟ ರಘು!

Bigg Boss Kannada Season 12 Episode: ಬಿಗ್‌ ಬಾಸ್‌ ಕನ್ನಡ ಸೀಸನ್‌ 12 ಶೋನಲ್ಲಿ ರಕ್ಷಿತಾ ಶೆಟ್ಟಿ ತಮ್ಮ ಸ್ವಭಾವದಿಂದಲೇ ಅನೇಕರ ಮನಸ್ಸು ಗೆದ್ದಿದ್ದಾರೆ. ಕೆಲವೊಮ್ಮೆ ಇವರ ನಿರ್ಧಾರಗಳು, ತೀರ್ಮಾನ, ವರ್ತನೆ ಅನೇಕರಿಗೆ ಟೀಕೆ ಆಗಿದ್ದುಂಟು. ಈಗ ಇವರ ಬಾಯ್‌ಫ್ರೆಂಡ್‌ ಬಗ್ಗೆ ಮಾಹಿತಿ ಹೊರಬಿದ್ದಿದೆ.

 

Read Full Story

01:03 PM (IST) Jan 09

ಹುಬ್ಬಳ್ಳಿ ಮಹಿಳೆ ಸುಜಾತಾ ಹಂಡಿ ವಿವಸ್ತ್ರ ಪ್ರಕರಣ ಸಿಐಡಿ ತನಿಖೆಗೆ ಹಸ್ತಾಂತರ - ಗೃಹಸಚಿವ ಪರಮೇಶ್ವರ

ಹುಬ್ಬಳ್ಳಿಯಲ್ಲಿ ನಡೆದ ಮಹಿಳೆ ವಿವಸ್ತ್ರ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ತಿಳಿಸಿದ್ದಾರೆ. ಇದೇ ವೇಳೆ, ಸಂತ್ರಸ್ತರನ್ನು ಭೇಟಿಯಾದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಸಮರ್ಥಿಸಿಕೊಂಡರು.

Read Full Story

12:51 PM (IST) Jan 09

ಮಲ್ಲಿಗೆಯಂತಹ ಮೃದು ಇಡ್ಲಿಗಾಗಿ ಈ ರೀತಿಯಾಗಿ (ಅಕ್ಕಿ+ಉದ್ದಿನಬೇಳೆ) ಹಿಟ್ಟನ್ನು ರುಬ್ಬಿಕೊಳ್ಳಿ

ಮೃದು ಇಡ್ಲಿಗಾಗಿ ಟಿಪ್ಸ್: ಮೃದುವಾದ ಇಡ್ಲಿ ಮಾಡೋದು ಹೇಗೆ ಅಂತ ಹೆಚ್ಚಿನ ಮಹಿಳೆಯರಿಗೆ ಪ್ರಶ್ನೆ ಇರುತ್ತೆ. ಕೆಲವು ಸುಲಭ ಟ್ರಿಕ್ಸ್ ಮತ್ತು ಟಿಪ್ಸ್ ಬಳಸಿ ನೀವು ಮೃದುವಾದ ಇಡ್ಲಿ ತಯಾರಿಸಬಹುದು. .

Read Full Story

12:43 PM (IST) Jan 09

ಸಚಿವ ಸ್ಥಾನದ ಕನಸಲ್ಲಿದ್ದ ನಾಗೇಂದ್ರಗೆ ಸಿಬಿಐ ಶಾಕ್ - ವಾಲ್ಮೀಕಿ ಹಗರಣದಲ್ಲಿ ವಿಚಾರಣೆಗೆ ನೋಟಿಸ್; ಮತ್ತೆ ಜೈಲು ಭೀತಿ!

ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಮಾಜಿ ಸಚಿವ ಬಿ. ನಾಗೇಂದ್ರ ಅವರಿಗೆ ವಿಚಾರಣೆಗೆ ನೋಟಿಸ್ ನೀಡಿದೆ. ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದ ನಾಗೇಂದ್ರ ಅವರಿಗೆ ಈ ಬೆಳವಣಿಗೆಯಿಂದಾಗಿ ಬಂಧನದ ಭೀತಿ ಎದುರಾಗಿದ್ದು, ಅವರ ರಾಜಕೀಯ ಭವಿಷ್ಯ ಅನಿಶ್ಚಿತವಾಗಿದೆ.
Read Full Story

12:42 PM (IST) Jan 09

ಮಾಜಿ ಮುಖ್ಯಮಂತ್ರಿ ಕೆ ಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ ಕರೆ, ದೂರು ದಾಖಲು! Y ಭದ್ರತೆ ಆಗ್ರಹ

ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರಿಗೆ ವಿದೇಶದಿಂದ ಮತ್ತೊಮ್ಮೆ ಬೆದರಿಕೆ ಕರೆ ಬಂದಿದ್ದು, ಈ ಸಂಬಂಧ ಅವರು ಶಿವಮೊಗ್ಗ ಎಸ್‌ಪಿಗೆ ದೂರು ನೀಡಿದ್ದಾರೆ. ಈ ಹಿಂದೆ ಹಿಂಪಡೆದಿದ್ದ Y ಶ್ರೇಣಿಯ ಭದ್ರತೆಯನ್ನು ಮರುಸ್ಥಾಪಿಸುವಂತೆ ಅವರು ಸರ್ಕಾರವನ್ನು ಆಗ್ರಹಿಸಿದ್ದಾರೆ.
Read Full Story

12:35 PM (IST) Jan 09

Bhagyalakshmi Serial - ಒಳ್ಳೆಯ ಹೆಂಡ್ತಿಗೆ ಚಿತ್ರಹಿಂಸೆ ಕೊಟ್ಟಿದ್ದಕ್ಕೆ ತಾಂಡವ್‌ ಗತಿ ಅಧೋಗತಿ!

Bhagyalakshmi Kannada Serial Episode: ಭಾಗ್ಯಲಕ್ಷ್ಮೀ ಧಾರಾವಾಹಿಯಲ್ಲಿ ಭಾಗ್ಯಳನ್ನು ಸಿಲುಕಿಸಬೇಕು ಎಂದು ಶ್ರೇಷ್ಠ ಮಹಾ ಪ್ಲ್ಯಾನ್‌ ಮಾಡಿದ್ದಳು. ಹೀಗಾಗಿ ಅವಳು ತಾಂಡವ್‌ಗೆ ವಿಷ ಕುಡಿಸಿದ್ದಳು. ಮೊದಲ ಹೆಂಡತಿ ಟಾರ್ಚರ್‌ ಕೊಟ್ಟಳು ಎಂದು ತಾಂಡವ್‌ ವಿಷ ಕುಡಿದಿದ್ದಾನೆ ಎಂದು ಬಿಂಬಿಸಿದ್ದಳು.

 

Read Full Story

12:10 PM (IST) Jan 09

ಹುಬ್ಬಳ್ಳಿ ಸುಜಾತಾ ಹಂಡಿ ಹೆಣ್ಣಲ್ಲ, ಹೆಮ್ಮಾರಿ - ಹನಿಟ್ರ್ಯಾಪ್ ವ್ಯಕ್ತಿ ಕಾಲಿಗೆ ಬಿದ್ದರೂ ಬಿಡದೇ ಥಳಿಸಿದ ರಾಕ್ಷಸಿ!

ಇತ್ತೀಚೆಗೆ ಪೊಲೀಸರು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ್ದಾರೆನ್ನಲಾದ ಸಂತ್ರಸ್ತೆ ಬಿಜೆಪಿ ಕಾರ್ಯಕರ್ತೆ ಸುಜಾತಾ ಹಂಡಿಯ ಹಳೆಯ ಹನಿಟ್ರ್ಯಾಪ್ ಪ್ರಕರಣದ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋದಲ್ಲಿ, ಆಕೆ ತುಕಾರಾಮ್ ಎಂಬ ವ್ಯಕ್ತಿಯನ್ನು ಅಪಹರಿಸಿ, ವಿವಸ್ತ್ರಗೊಳಿಸಿ, ಅಮಾನುಷವಾಗಿ ಹಲ್ಲೆ ನಡೆಸಿರುವುದು ಇಲ್ಲಿವೆ.

Read Full Story

12:04 PM (IST) Jan 09

BBK 12 - ಹೇಳಿದ್ದು ಸುಳ್ಳಾಯ್ತು, ಅಂದ್ಕೊಂಡಿದ್ದು ನಿಜ ಆಗಲಿ - ಈಡೇರುತ್ತಾ ಅಭಿಮಾನಿಗಳ ಆಸೆ? ಸುದೀಪ್ ಏನ್ ಮಾಡ್ತಾರೆ?

ಬಿಗ್‌ಬಾಸ್ ಸೀಸನ್ 12ರ 15ನೇ ವಾರದಲ್ಲಿ ಸ್ಪರ್ಧಿಗಳು ತಮ್ಮ ನೂರರಷ್ಟು ಶಕ್ತಿಯನ್ನು ಹಾಕಿ ಆಟದಲ್ಲಿ ಭಾಗವಹಿಸುತ್ತಿದ್ದಾರೆ. ಏನೇ ಆಗಲಿ ಫಿನಾಲೆ (Bigg Boss Finale) ವಾರಕ್ಕೆ ತಲಪುವ ಗುರಿಯೊಂದಿಗೆ ಎಲ್ಲಿಯೂ ತಪ್ಪುಗಳನ್ನ ಮಾಡಿಕೊಳ್ಳದೇ ಅತ್ಯಂತ ಎಚ್ಚರಿಕೆಯಿಂದ ಆಡುತ್ತಿದ್ದಾರೆ. 

Read Full Story

11:50 AM (IST) Jan 09

ಬೆಂಗಳೂರು - ಪ್ರತಿಷ್ಠಿತ ಶಾಲಾ ಸಂಸ್ಥೆಯಲ್ಲಿ 4 ಕೋಟಿ ರೂ ಬೃಹತ್ ಹಗರಣ, ಸಿಬ್ಬಂದಿಗಳ ಕೈವಾಡ ಬಯಲು!

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಖಾಸಗಿ ಶಾಲೆ ಮತ್ತು ಟ್ರಸ್ಟ್‌ನಲ್ಲಿ ₹4 ಕೋಟಿ ಮೊತ್ತದ ಹಣಕಾಸು ವಂಚನೆ ನಡೆದಿದೆ. ಶಾಲಾ ಶುಲ್ಕವನ್ನು ತಮ್ಮ ಸ್ವಂತ ಖಾತೆಗೆ ವರ್ಗಾಯಿಸಿಕೊಂಡ ಆರೋಪದ ಮೇಲೆ ಐವರು ಸಿಬ್ಬಂದಿಗಳ ವಿರುದ್ಧ ಸಿಸಿಬಿ ಪ್ರಕರಣ ದಾಖಲಿಸಿದ್ದು, ಇಬ್ಬರನ್ನು ಬಂಧಿಸಿದೆ.
Read Full Story

11:18 AM (IST) Jan 09

Oscar Awards 2026 - ಪ್ರತಿಷ್ಠಿತ ಆಸ್ಕರ್‌ ಅಂಗಳಕ್ಕಿಳಿದ ಭಾರತದ ಐದು ಸಿನಿಮಾಗಳು; ಕನ್ನಡದ್ದೆಷ್ಟು?

Oscar Awards: ಆಸ್ಕರ್ ಅಂಗಳದಲ್ಲಿ ಹೊಂಬಾಳೆ ಫಿಲ್ಮ್ಸ್‌ ಅಬ್ಬರ: 'ಅತ್ಯುತ್ತಮ ಚಿತ್ರ' ವಿಭಾಗದ ಪಟ್ಟಿಯಲ್ಲಿ 'ಕಾಂತಾರ-1' ಮತ್ತು 'ಮಹಾವತಾರ ನರಸಿಂಹ' ಸಿನಿಮಾಗಳಿವೆ. ಹೌದು, ಈ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ.

 

Read Full Story

11:02 AM (IST) Jan 09

ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಹೋಗಿ, ವಾಪಸ್ ಬರ್ತಿದ್ದ ಭಕ್ತರ ಕ್ರೂಸರ್ ಅಪಘಾತ 4 ಸಾವು! ಮಗಳು ಕೈಯಲ್ಲೇ ಹೆಣವಾದಳು!

ಶಬರಿಮಲೆ ಯಾತ್ರೆ ಮುಗಿಸಿ ಕೊಪ್ಪಳಕ್ಕೆ ಮರಳುತ್ತಿದ್ದ ಅಯ್ಯಪ್ಪ ಭಕ್ತರ ಕ್ರೂಸರ್ ವಾಹನ ತುಮಕೂರು ಬಳಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಈ ಭೀಕರ ಅಪಘಾತದಲ್ಲಿ ಏಳು ವರ್ಷದ ಬಾಲಕಿ ಸೇರಿದಂತೆ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.
Read Full Story

10:58 AM (IST) Jan 09

BBK 12 - ಮೈತುಂಬ ಜ್ವರ, ವಾಂತಿ.. ಬೇಕಾದಾಗ ಯೂಸ್‌ ಮಾಡ್ಕೊಳ್ತಾರೆ - ಕಾವ್ಯ ವಿರುದ್ಧ ಗಿಲ್ಲಿ ಫ್ಯಾನ್ಸ್‌ ಆಕ್ರೋಶ

Bigg Boss Kannada Kavya Shaiva: ಕಾವ್ಯ ಶೈವ ಹಾಗೂ ಗಿಲ್ಲಿ ನಟ ಅವರು ಸ್ನೇಹಿತರು. ಇವರಿಬ್ಬರ ಮಧ್ಯೆ ಜಗಳ ಆಗುತ್ತಲೇ ಇರುತ್ತದೆ. ಇತ್ತೀಚೆಗೆ ಗಿಲ್ಲಿಯನ್ನು ಅವಾಯ್ಡ್‌ ಮಾಡುತ್ತಿದ್ದ ಕಾವ್ಯ ಶೈವ ಅವರು ಬೇಕಾದಾಗ ಯೂಸ್‌ ಮಾಡಿಕೊಳ್ತಾರೆ ಎಂಬ ಆರೋಪ ಕೇಳಿ ಬಂದಿದೆ.

 

Read Full Story

10:50 AM (IST) Jan 09

ಒಂದಲ್ಲ, ಎರಡಲ್ಲ ಬರೋಬ್ಬರಿ 13 ಚಿನ್ನದ ಪದಕ ಪಡೆದ ಕನ್ನೇರಮಡು ಗ್ರಾಮದ ರೈತನ ಮಗ

ಕನಕಗಿರಿ ತಾಲೂಕಿನ ಕನ್ನೇರಮಡು ಗ್ರಾಮದ ರೈತ ಪುತ್ರ ಚಂದ್ರಶೇಖರ, ಮೈಸೂರು ವಿಶ್ವವಿದ್ಯಾಲಯದ ಕನ್ನಡ ಸ್ನಾತಕೋತ್ತರ ಪದವಿಯಲ್ಲಿ 13 ಚಿನ್ನದ ಪದಕ ಹಾಗೂ 4 ನಗದು ಬಹುಮಾನ ಗೆದ್ದು ಗಮನಾರ್ಹ ಸಾಧನೆ ಮಾಡಿದ್ದಾರೆ. 

Read Full Story

10:38 AM (IST) Jan 09

ನಾನು ನಿರಂತರ ವಿರೋಧ ಪಕ್ಷ ; ಸಿಎಂ ಸಿದ್ದರಾಮಯ್ಯಗೆ ಪ್ರಕಾಶ್ ರಾಜ್‌ ಅಚ್ಚರಿಯ ಸಲಹೆ!

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಪ್ತರ ಮೇಲಿನ ಭ್ರಷ್ಟಾಚಾರದ ಆರೋಪಗಳು ಅವರಿಗೆ ಶೋಭೆ ತರುವುದಿಲ್ಲ, ಆದ್ದರಿಂದ ಅವರು ಆಡಳಿತದ ಮೇಲೆ ಹಿಡಿತ ಸಾಧಿಸಬೇಕು ಎಂದು ನಟ ಪ್ರಕಾಶ್ ರಾಜ್ ಉಡುಪಿಯಲ್ಲಿ ಸಲಹೆ ನೀಡಿದ್ದಾರೆ. ತಾನು ಯಾವುದೇ ಪಕ್ಷಕ್ಕೆ ಸೇರಿದವನಲ್ಲ ಎಂದು ಹೇಳಿದ್ದಾರೆ.

Read Full Story

10:22 AM (IST) Jan 09

ಕೊಪ್ಪಳ ಗವಿಸಿದ್ದೇಶ್ವರ ಜಾತ್ರೆಯಲ್ಲಿ 'ಸ್ವಾಮೀಜಿ ಟೇಬಲ್ ಕ್ಲೀನಿಂಗ್'; ವೈರಲ್ ವಿಡಿಯೋ ಹಿಂದಿದೆ ಸರಳತೆ ಕಥೆ!

ಕೊಪ್ಪಳದ ಗವಿಸಿದ್ದೇಶ್ವರ ಜಾತ್ರೆಯಲ್ಲಿ, ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿಗಳು ಸ್ವತಃ ದಾಸೋಹದ ಟೇಬಲ್ ಸ್ವಚ್ಛಗೊಳಿಸುವ ಮೂಲಕ ತಮ್ಮ ಸರಳತೆಯನ್ನು ಮೆರೆದಿದ್ದಾರೆ. ಅವರ ಈ ಕಾಯಕ ಯೋಗದ ವಿಡಿಯೋ ವೈರಲ್ ಆಗಿದೆ.

Read Full Story

10:11 AM (IST) Jan 09

ಕಿವುಡರ ಏಷ್ಯಾಕಪ್ ಟಿ-20 ಕ್ರಿಕೆಟ್ - ಟೀಂ ಇಂಡಿಯಾ ತಂಡಕ್ಕೆ ಆಯ್ಕೆಯಾದ ಕುಂದಾಪುರದ ಸನಿತ್ ಶೆಟ್ಟಿ

ಕುಂದಾಪುರದ ಕೆರಾಡಿ ಗ್ರಾಮದ, ಶ್ರವಣ ದೋಷವುಳ್ಳ ಸನಿತ್ ಶೆಟ್ಟಿ ಅವರು ಕಿವುಡರ ಏಷ್ಯಾಕಪ್ ಟಿ-20 ಕ್ರಿಕೆಟ್ ಪಂದ್ಯಾವಳಿಗೆ ಭಾರತ ತಂಡಕ್ಕೆ ಆಯ್ಕೆಯಾಗಿದ್ದಾರೆ. ಆಟೋ ಚಾಲಕರ ಮಗನಾದ ಇವರು, ತಮ್ಮ ವೈಕಲ್ಯವನ್ನು ಮೆಟ್ಟಿನಿಂತು ಮಾಡಿದ ಈ ಅಸಾಧಾರಣ ಸಾಧನೆಯು ಎಲ್ಲರಿಗೂ ಸ್ಫೂರ್ತಿದಾಯಕವಾಗಿದೆ.
Read Full Story

More Trending News