LIVE NOW
Published : Jul 09, 2026, 06:49 AM ISTUpdated : Jul 09, 2026, 09:24 AM IST

Karnataka News Live: ಬಾಗಲಕೋಟೆ - ಘಟಪ್ರಭಾ ನದಿಗೆ ಅಡ್ಡಲಾಗಿ ರೈಲ್ವೆ ಸೇತುವೆ, ರೈತರ ಹಿತಾಸಕ್ತಿ ರಕ್ಷಣೆಗೆ ವೈಜ್ಞಾನಿಕವಾಗಿ ನಿರ್ಮಾಣ

ಸಾರಾಂಶ

ನವದೆಹಲಿ: ರಾಜ್ಯದ ಜನರಿಗೆ ಇಂದಿರಾ ಕಿಟ್ ವಿತರಿಸುವ ಯೋಜನೆಯ ಟೆಂಡರ್ ಪ್ರಕ್ರಿಯೆ ಅಂತಿಮ ಹಂತಕ್ಕೆ ಬಂದಿದ್ದು, ಆದಷ್ಟು ಬೇಗ ಈ ಯೋಜನೆ ರಾಜ್ಯದಲ್ಲಿ ಜಾರಿಗೆ ಬರಲಿದೆ ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು. ದೆಹಲಿಯಲ್ಲಿ ಬುಧವಾರ ಸುದ್ದಿಗಾರೊಂದಿಗೆ ಮಾತನಾಡಿ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದು, ರಾಜ್ಯಕ್ಕೆ ಬರಬೇಕಾದ ₹1902 ಕೋಟಿ ಹಣವನ್ನು ಬಿಡುಗಡೆ ಮಾಡುವ ಭರವಸೆ ನೀಡಿದ್ದಾರೆ. ರಾಜ್ಯದಿಂದ ಅಡಿಟ್ ವರದಿ ನೀಡಲಾಗಿದೆ. 

ಬಾಕಿ ಹಣವನ್ನು ಕೇಂದ್ರ ಸರ್ಕಾರ ಬೇಗ ನೀಡಿದರೆ ರೈತರಿಗೆ ತಲುಪಿಸಲು ಸಹಾಯ ಆಗುತ್ತದೆ. ಮೊದಲ ಹಂತದಲ್ಲಿ ₹190 ಕೋಟಿ ಕೇಂದ್ರ ಬಿಡುಗಡೆ ‌ಮಾಡಿದ್ದು, ಉಳಿದಂತೆ ಎಂಎಸ್‌ಪಿ ಅಡಿ ನೀಡುವ ಅನುದಾನ ಬಿಡುಗಡೆಯಾಗಬೇಕಿದೆ ಎಂದು ತಿಳಿಸಿದರು.

09:24 AM (IST) Jul 09

ಬಾಗಲಕೋಟೆ - ಘಟಪ್ರಭಾ ನದಿಗೆ ಅಡ್ಡಲಾಗಿ ರೈಲ್ವೆ ಸೇತುವೆ, ರೈತರ ಹಿತಾಸಕ್ತಿ ರಕ್ಷಣೆಗೆ ವೈಜ್ಞಾನಿಕವಾಗಿ ನಿರ್ಮಾಣ

ಬಾಗಲಕೋಟೆ-ಕುಡಚಿ ರೈಲು ಮಾರ್ಗದ ಭಾಗವಾಗಿ ಘಟಪ್ರಭಾ ನದಿಗೆ ರೈಲ್ವೆ ಸೇತುವೆ ನಿರ್ಮಾಣ ಕುರಿತು ಸಂಸದ ಪಿ.ಸಿ.ಗದ್ದಿಗೌಡರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಸೇತುವೆ ನಿರ್ಮಾಣವು ವೈಜ್ಞಾನಿಕವಾಗಿರಬೇಕು ಮತ್ತು ಪ್ರವಾಹದ ಸಮಯದಲ್ಲಿ ರೈತರ ಜಮೀನುಗಳಿಗೆ ಹಾನಿಯಾಗದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.
Read Full Story

09:23 AM (IST) Jul 09

ಕೊನೆಗೂ ವೀಕ್ಷಕರ ಮೆಚ್ಚುಗೆಗೆ ಕಾರಣನಾದ ನಂದ; ಗಂಡ ಅಂದ್ರೆ ಹಿಂಗಿರಬೇಕು ಎಂದ ಮಹಿಳೆಯರು

ನಂದಗೋಕುಲ ಸೀರಿಯಲ್‌ನಲ್ಲಿ, ತಾಯಿಯ ಆರೋಗ್ಯ ವಿಚಾರಿಸಲು ಗಂಡನಿಗೆ ಹೇಳದೆ ಆಸ್ಪತ್ರೆಗೆ ಹೋಗಿದ್ದ ಗಿರಿಜಾ, ಸೋದರರಿಂದ ಸಿಕ್ಕಿಬೀಳುತ್ತಾಳೆ. ಗಂಡ ನಂದ ಬೈಯುತ್ತಾನೆಂದು ಭಯಪಟ್ಟರೆ, ಆತ ಆಕೆಯ ನಿರ್ಧಾರವನ್ನು ಬೆಂಬಲಿಸಿ, ವೀಕ್ಷಕರ ಮೆಚ್ಚುಗೆಗೆ ಪಾತ್ರನಾಗಿದ್ದಾನೆ.
Read Full Story

08:53 AM (IST) Jul 09

ಧಾರವಾಡ ಡೆಲಿವರಿ ಬಾಯ್ ಸ್ನೇಹಿತರು ಯಲ್ಲಾಪುರ ಭೀಕರ ಅಪಘಾತದಲ್ಲಿ ಮೃತ್ಯು, ಭೀಕರತೆ ಬಿಚ್ಚಿಟ್ಟ ಫೋಟೋಗಳು!

ಧಾರವಾಡದಿಂದ ಧಾರ್ಮಿಕ ಪ್ರವಾಸಕ್ಕೆ ಹೊರಟಿದ್ದ ಏಳು ಸ್ನೇಹಿತರು ಯಲ್ಲಾಪುರದ ಅರಬೈಲ್ ಘಾಟ್‌ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಇವರು ಪ್ರಯಾಣಿಸುತ್ತಿದ್ದ ಕ್ರೂಸರ್ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
Read Full Story

08:37 AM (IST) Jul 09

SSLC ಕನ್ನಡದಲ್ಲಿ 125ಕ್ಕೆ 125 ಅಂಕ ಪಡೆದ 35 ವಿದ್ಯಾರ್ಥಿಗಳಿಗೆ ಬೆಳ್ಳಿ ಪೆನ್ ವಿತರಣೆ

2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಕನ್ನಡ ಪ್ರಥಮ ಭಾಷೆಯಲ್ಲಿ 125ಕ್ಕೆ 125 ಅಂಕ ಪಡೆದ 35 ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಕನ್ನಡ ಸಾಹಿತ್ಯ ವೇದಿಕೆ ಮತ್ತು ಚುಟುಕು ಸಾಹಿತ್ಯ ಪರಿಷತ್ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ, ಸಾಧಕ ವಿದ್ಯಾರ್ಥಿಗಳಿಗೆ ಶಿವ ಜ್ಯೂವರೆಲ್ಸ್ ವತಿಯಿಂದ ಬೆಳ್ಳಿಯ ಪೆನ್ನುಗಳನ್ನು ವಿತರಿಸಲಾಯಿತು.

Read Full Story

08:18 AM (IST) Jul 09

ಮುಂಡಗೋಡನಿಂದ ಹುಬ್ಬಳ್ಳಿ, ಗದಗ, ಕೊಪ್ಪಳ ಮಾರ್ಗವಾಗಿ ರಾಯಚೂರು ನಗರಕ್ಕೆ ನೇರ ಬಸ್ ಆರಂಭ

Mundagoda-Raichur bus service begins: ಮುಂಡಗೋಡ ಘಟಕದಿಂದ ರಾಯಚೂರಿಗೆ ನೂತನ ಬಸ್ ಸೇವೆ ಆರಂಭಗೊಂಡಿದೆ. ಈ ಬಸ್ ಪ್ರತಿದಿನ ಮುಂಡಗೋಡದಿಂದ ಹೊರಟು, ಹುಬ್ಬಳ್ಳಿ, ಗದಗ, ಕೊಪ್ಪಳ, ಸಿಂಧನೂರು ಮಾರ್ಗವಾಗಿ ರಾಯಚೂರು ತಲುಪಲಿದೆ.

Read Full Story

08:01 AM (IST) Jul 09

Mysuru - ಸರಗೂರು ಅಂಚೆ ಕಚೇರಿಯಲ್ಲಿ 1.3 ಕೋಟಿ ರೂಪಾಯಿ ಮಾಯ; CBIನಿಂದ ಇಬ್ಬರ ಬಂಧನ,

ಮೈಸೂರು ಜಿಲ್ಲೆಯ ಸರಗೂರು ಅಂಚೆ ಕಚೇರಿಯಲ್ಲಿ 44 ಉಳಿತಾಯ ಖಾತೆಗಳಿಂದ 1.3 ಕೋಟಿ ರು. ದುರ್ಬಳಕೆ ಮಾಡಿದ ಆರೋಪದ ಮೇಲೆ ಸಿಬಿಐ ಇಬ್ಬರು ನೌಕರರನ್ನು ಬಂಧಿಸಿದೆ. ಆರೋಪಿಗಳು ಗ್ರಾಹಕರ ಲಾಗಿನ್ ವಿವರಗಳನ್ನು ಬಳಸಿ ಹಣವನ್ನು ತಮ್ಮ ಮತ್ತು ಸಂಬಂಧಿಕರ ಖಾತೆಗಳಿಗೆ ವರ್ಗಾಯಿಸಿ ವಂಚನೆ ಎಸಗಿದ್ದಾರೆ. ಈ ಪ್ರಕರಣದ ಕುರಿತು ಸಿಬಿಐ ಹೆಚ್ಚಿನ ತನಿಖೆ ನಡೆಸುತ್ತಿದೆ.
Read Full Story

07:48 AM (IST) Jul 09

Bengaluru - 2ನೇ ವಿಮಾನ ನಿಲ್ದಾಣ ಎಲ್ಲಿ? ಕನಕಪುರ, ನೆಲಮಂಗಲ ರಸ್ತೆಯ ಈ ಗ್ರಾಮಗಳಿ ಶಾರ್ಟ್‌ಲಿಸ್ಟ್‌

ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ ನಿರ್ಮಾಣ ಸಂಬಂಧ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನೇತೃತ್ವದಲ್ಲಿ ಸಭೆ ನಡೆದಿದೆ. ಕನಕಪುರ ರಸ್ತೆ ಮತ್ತು ನೆಲಮಂಗಲ ಬಳಿ ಗುರುತಿಸಲಾದ ಸ್ಥಳಗಳ ಪೈಕಿ, ಕಡಿಮೆ ಭೂಸ್ವಾಧೀನ ಮತ್ತು ಗ್ರಾಮಗಳ ಸ್ಥಳಾಂತರವಿರುವ ಜಾಗವನ್ನು ಅಂತಿಮಗೊಳಿಸಲು ಸರ್ಕಾರ ಚಿಂತನೆ ನಡೆಸಿದೆ. ಈ ಕುರಿತು ತಾಂತ್ರಿಕ ಕಾರ್ಯಸಾಧ್ಯತಾ ವರದಿ ನೀಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.
Read Full Story

07:33 AM (IST) Jul 09

NH 169 - ತನಿಕೋಡ್‌ನಿಂದ SK ಬಾರ್ಡರ್‌ವರೆಗೆ ಭಾರೀ ವಾಹನಗಳಿಗೆ ನಿಷೇಧ; ಪರ್ಯಾಯ ಮಾರ್ಗ ಹೀಗಿದೆ

ರಾಷ್ಟ್ರೀಯ ಹೆದ್ದಾರಿ 169ರಲ್ಲಿನ ಕಿರು ಸೇತುವೆಗಳು ಶಿಥಿಲಾವಸ್ಥೆಯಲ್ಲಿರುವುದರಿಂದ ಕುಸಿಯುವ ಅಪಾಯ ಎದುರಾಗಿದೆ. ಈ ಹಿನ್ನೆಲೆಯಲ್ಲಿ, 2026ರ ಸೆಪ್ಟೆಂಬರ್ 30ರವರೆಗೆ 12 ಟನ್‌ಗಿಂತ ಅಧಿಕ ಭಾರದ ವಾಹನಗಳ ಸಂಚಾರವನ್ನು ತನಿಕೋಡ್‌ನಿಂದ ಎಸ್.ಕೆ. ಬಾರ್ಡರ್‌ವರೆಗೆ ನಿಷೇಧಿಸಲಾಗಿದೆ. ಪ

Read Full Story

07:15 AM (IST) Jul 09

ಗಂಗಾವತಿ - ಮನೆ ಮುಂದೆ ಮಂಡಲ, ಅರಿಶಿನ ಕುಂಕುಮ! ವಾಮಾಚಾರಕ್ಕೆ ಬೆಚ್ಚಿಬಿದ್ದ ಜನ!

ಕೊಪ್ಪಳ ಜಿಲ್ಲೆಯ ಗಂಗಾವತಿಯ ಮುಜಾವರ್ ಕ್ಯಾಂಪ್‌ನಲ್ಲಿ ಕಿಡಿಗೇಡಿಗಳು ಹಲವು ಮನೆಗಳ ಮುಂದೆ ಮಂಡಲ, ಅರಿಶಿನ-ಕುಂಕುಮ ಹಾಗೂ ನಿಂಬೆಹಣ್ಣು ಇಟ್ಟು ವಾಮಾಚಾರ ನಡೆಸಿದ್ದಾರೆ. ಈ ಘಟನೆಯಿಂದ ಸ್ಥಳೀಯರಲ್ಲಿ ತೀವ್ರ ಆತಂಕ ಸೃಷ್ಟಿಯಾಗಿದ್ದು, ಭಯದ ವಾತಾವರಣ ನಿರ್ಮಾಣವಾಗಿದೆ.

Read Full Story

More Trending News