ನವದೆಹಲಿ: ರಾಜ್ಯದ ಜನರಿಗೆ ಇಂದಿರಾ ಕಿಟ್ ವಿತರಿಸುವ ಯೋಜನೆಯ ಟೆಂಡರ್ ಪ್ರಕ್ರಿಯೆ ಅಂತಿಮ ಹಂತಕ್ಕೆ ಬಂದಿದ್ದು, ಆದಷ್ಟು ಬೇಗ ಈ ಯೋಜನೆ ರಾಜ್ಯದಲ್ಲಿ ಜಾರಿಗೆ ಬರಲಿದೆ ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು. ದೆಹಲಿಯಲ್ಲಿ ಬುಧವಾರ ಸುದ್ದಿಗಾರೊಂದಿಗೆ ಮಾತನಾಡಿ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದು, ರಾಜ್ಯಕ್ಕೆ ಬರಬೇಕಾದ ₹1902 ಕೋಟಿ ಹಣವನ್ನು ಬಿಡುಗಡೆ ಮಾಡುವ ಭರವಸೆ ನೀಡಿದ್ದಾರೆ. ರಾಜ್ಯದಿಂದ ಅಡಿಟ್ ವರದಿ ನೀಡಲಾಗಿದೆ.
ಬಾಕಿ ಹಣವನ್ನು ಕೇಂದ್ರ ಸರ್ಕಾರ ಬೇಗ ನೀಡಿದರೆ ರೈತರಿಗೆ ತಲುಪಿಸಲು ಸಹಾಯ ಆಗುತ್ತದೆ. ಮೊದಲ ಹಂತದಲ್ಲಿ ₹190 ಕೋಟಿ ಕೇಂದ್ರ ಬಿಡುಗಡೆ ಮಾಡಿದ್ದು, ಉಳಿದಂತೆ ಎಂಎಸ್ಪಿ ಅಡಿ ನೀಡುವ ಅನುದಾನ ಬಿಡುಗಡೆಯಾಗಬೇಕಿದೆ ಎಂದು ತಿಳಿಸಿದರು.
09:24 AM (IST) Jul 09
09:23 AM (IST) Jul 09
08:53 AM (IST) Jul 09
08:37 AM (IST) Jul 09
2025-26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಕನ್ನಡ ಪ್ರಥಮ ಭಾಷೆಯಲ್ಲಿ 125ಕ್ಕೆ 125 ಅಂಕ ಪಡೆದ 35 ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಕನ್ನಡ ಸಾಹಿತ್ಯ ವೇದಿಕೆ ಮತ್ತು ಚುಟುಕು ಸಾಹಿತ್ಯ ಪರಿಷತ್ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ, ಸಾಧಕ ವಿದ್ಯಾರ್ಥಿಗಳಿಗೆ ಶಿವ ಜ್ಯೂವರೆಲ್ಸ್ ವತಿಯಿಂದ ಬೆಳ್ಳಿಯ ಪೆನ್ನುಗಳನ್ನು ವಿತರಿಸಲಾಯಿತು.
08:18 AM (IST) Jul 09
Mundagoda-Raichur bus service begins: ಮುಂಡಗೋಡ ಘಟಕದಿಂದ ರಾಯಚೂರಿಗೆ ನೂತನ ಬಸ್ ಸೇವೆ ಆರಂಭಗೊಂಡಿದೆ. ಈ ಬಸ್ ಪ್ರತಿದಿನ ಮುಂಡಗೋಡದಿಂದ ಹೊರಟು, ಹುಬ್ಬಳ್ಳಿ, ಗದಗ, ಕೊಪ್ಪಳ, ಸಿಂಧನೂರು ಮಾರ್ಗವಾಗಿ ರಾಯಚೂರು ತಲುಪಲಿದೆ.
08:01 AM (IST) Jul 09
07:48 AM (IST) Jul 09
07:33 AM (IST) Jul 09
ರಾಷ್ಟ್ರೀಯ ಹೆದ್ದಾರಿ 169ರಲ್ಲಿನ ಕಿರು ಸೇತುವೆಗಳು ಶಿಥಿಲಾವಸ್ಥೆಯಲ್ಲಿರುವುದರಿಂದ ಕುಸಿಯುವ ಅಪಾಯ ಎದುರಾಗಿದೆ. ಈ ಹಿನ್ನೆಲೆಯಲ್ಲಿ, 2026ರ ಸೆಪ್ಟೆಂಬರ್ 30ರವರೆಗೆ 12 ಟನ್ಗಿಂತ ಅಧಿಕ ಭಾರದ ವಾಹನಗಳ ಸಂಚಾರವನ್ನು ತನಿಕೋಡ್ನಿಂದ ಎಸ್.ಕೆ. ಬಾರ್ಡರ್ವರೆಗೆ ನಿಷೇಧಿಸಲಾಗಿದೆ. ಪ
07:15 AM (IST) Jul 09
ಕೊಪ್ಪಳ ಜಿಲ್ಲೆಯ ಗಂಗಾವತಿಯ ಮುಜಾವರ್ ಕ್ಯಾಂಪ್ನಲ್ಲಿ ಕಿಡಿಗೇಡಿಗಳು ಹಲವು ಮನೆಗಳ ಮುಂದೆ ಮಂಡಲ, ಅರಿಶಿನ-ಕುಂಕುಮ ಹಾಗೂ ನಿಂಬೆಹಣ್ಣು ಇಟ್ಟು ವಾಮಾಚಾರ ನಡೆಸಿದ್ದಾರೆ. ಈ ಘಟನೆಯಿಂದ ಸ್ಥಳೀಯರಲ್ಲಿ ತೀವ್ರ ಆತಂಕ ಸೃಷ್ಟಿಯಾಗಿದ್ದು, ಭಯದ ವಾತಾವರಣ ನಿರ್ಮಾಣವಾಗಿದೆ.