LIVE NOW
Published : Jun 09, 2026, 06:43 AM ISTUpdated : Jun 09, 2026, 09:26 AM IST

Karnataka News Live: ಗಾಂಧೀಜಿ ಹತ್ಯೆ ಪ್ರಕರಣ - ವಿಚಾರಣಾ ಆಯೋಗ ರಚನೆ ವಿಳಂಬ ಪ್ರಶ್ನಿಸಿದ್ದ ಅರ್ಜಿ ವಜಾ, ಅರ್ಜಿದಾರನಿಗೆ 10,000 ದಂಡ ವಿಧಿಸಿದ ಹೈಕೋರ್ಟ್‌!

ಸಾರಾಂಶ

ಬೆಂಗಳೂರು: ‘ರಾಜಕಾರಣದಲ್ಲಿ ಚದುರಂಗದ ಆಟ ಆಡುವಾಗ ಯಾವ ಕಾಯಿ ಮುನ್ನಡೆಸುತ್ತೇವೆ ಎಂದು ಯಾರಾದರೂ ಹೇಳುತ್ತಾರೆಯೇ? ಯಾರೂ ಕೂಡ ಹೇಳುವುದಿಲ್ಲ’ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಪರಿಷತ್ ಚುನಾವಣೆಯಲ್ಲಿ ವಿನಯ್ ಕಾರ್ತಿಕ್‌ ಅವರನ್ನು ಕಾಂಗ್ರೆಸ್‌ನ 5ನೇ ಅಭ್ಯರ್ಥಿಯಾಗಿ ಕಣಕ್ಕಿಳಿಸಿದ ಬಗ್ಗೆ ಈ ರೀತಿ ಪ್ರತಿಕ್ರಿಯಿಸಿದರು. ಪರಿಷತ್ ಚುನಾವಣೆಯಲ್ಲಿ ವಿನಯ್ ಕಾರ್ತಿಕ್ ಸ್ಪರ್ಧೆ ಬಗ್ಗೆ ನಾನು ಈಗ ಮಾತನಾಡುವುದಿಲ್ಲ. ರಾಜಕಾರಣದಲ್ಲಿ ಚದುರಂಗದ ಆಟ ಆಡುವಾಗ ಯಾವ ಕಾಯಿ ಮುನ್ನಡೆಸುತ್ತೇವೆ ಎಂದು ಯಾರೂ ಹೇಳಲ್ಲ ಎಂದಷ್ಟೇ ಹೇಳಿದರು.

ಜೆಡಿಎಸ್‌ ಬಗ್ಗೆ ಮಾತನಾಡಲ್ಲ:

ಎಚ್.ಡಿ.ದೇವೇಗೌಡರಿಗೆ ರಾಜ್ಯಸಭೆ ಟಿಕೆಟ್ ತಪ್ಪಿಸಿ ಬಿಜೆಪಿ ಅನ್ಯಾಯ ಮಾಡಿದೆ ಎಂಬ ಸುರ್ಜೇವಾಲ ಟೀಕೆ ಬಗ್ಗೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್‌ ಅವರು, ‘ನಾನು ಸದ್ಯಕ್ಕೆ ಆ ವಿಚಾರವಾಗಿ ಏನೂ ಮಾತನಾಡುವುದಿಲ್ಲ. ಸುರ್ಜೇವಾಲ ಅವರು ಮಾತಾಡಿದ್ದಾರೆ. ನಮ್ಮ ಪಕ್ಷದ ಚಿಂತನೆಯನ್ನು ನಾನು ಪಾಲನೆ ಮಾಡುತ್ತೇನೆ ಅಷ್ಟೇ’ ಎಂದರು.

09:26 AM (IST) Jun 09

ಗಾಂಧೀಜಿ ಹತ್ಯೆ ಪ್ರಕರಣ - ವಿಚಾರಣಾ ಆಯೋಗ ರಚನೆ ವಿಳಂಬ ಪ್ರಶ್ನಿಸಿದ್ದ ಅರ್ಜಿ ವಜಾ, ಅರ್ಜಿದಾರನಿಗೆ 10,000 ದಂಡ ವಿಧಿಸಿದ ಹೈಕೋರ್ಟ್‌!

ಮಹಾತ್ಮಾ ಗಾಂಧಿ ಹತ್ಯೆ ಪ್ರಕರಣದ ತನಿಖೆಗೆ ಜಂಟಿ ಸಂಸದೀಯ ಸಮಿತಿ ರಚಿಸಲು ಕೋರಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ. ನ್ಯಾಯಾಲಯದ ಸಮಯ ವ್ಯರ್ಥ ಮಾಡಿದ್ದಕ್ಕಾಗಿ ಅರ್ಜಿದಾರರಿಗೆ 10 ಸಾವಿರ ರೂಪಾಯಿ ದಂಡ ವಿಧಿಸಿ ಆದೇಶಿಸಿದೆ.
Read Full Story

09:19 AM (IST) Jun 09

ಬೆಲೆ ಏರಿಕೆ ನಡುವೆ ಬೆಂಗಳೂರಿಗರಿಗೆ ಬಿಗ್ ರಿಲೀಫ್, ಕೆಲ ವಲಯದಲ್ಲಿ ದರ ಹೆಚ್ಚಳ ಇಲ್ಲ

ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ, ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ, ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗಾಲಾಗಿರುವ ರಾಜ್ಯದ ಜನರಿಗೆ ಕೆಲ ರಿಲೀಫ್ ಸಿಕ್ಕಿದೆ. ಯಾವೆಲ್ಲಾ ವಲಯದಲ್ಲಿ ಬೆಲೆ ಹೆಚ್ಚಳಕ್ಕೆ ಬ್ರೇಕ್ ಹಾಕಲಾಗಿದೆ?

Read Full Story

09:02 AM (IST) Jun 09

ಸಿಎಂ ಘೋಷಿಸಿದ್ರೂ ವಿದ್ಯಾರ್ಥಿಗಳಿಗಿಲ್ಲ ಉಚಿತ ಪ್ರಯಾಣದ ಸೌಲಭ್ಯ! ಬಾರದ ಅಧಿಕೃತ ಸುತ್ತೋಲೆ

ರಾಜ್ಯ ಸರ್ಕಾರದ ಉಚಿತ ಬಸ್ ಪಾಸ್ ಘೋಷಣೆ ಇನ್ನೂ ಜಾರಿಗೆ ಬಂದಿಲ್ಲ. ಅಧಿಕೃತ ಸುತ್ತೋಲೆ ಬಾರದಿರುವುದರಿಂದ, ವಿದ್ಯಾರ್ಥಿಗಳು ಶುಲ್ಕ ಪಾವತಿಸಿ ಪಾಸ್ ಪಡೆಯುವಂತಾಗಿದ್ದು, ಇದು ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಅಸಮಾಧಾನ ಮೂಡಿಸಿದೆ.
Read Full Story

08:54 AM (IST) Jun 09

ತಾಯಿಯ ಮಮತೆಗೆ ಗಡಿಗಳಿಲ್ಲ - ದಾವಣಗೆರೆಯ 4 ಅನಾಥ ಮಕ್ಕಳನ್ನು ದತ್ತು ಪಡೆದ ವಿದೇಶಿ ದಂಪತಿಗಳು!

ದಾವಣಗೆರೆಯ ಸರ್ಕಾರಿ ದತ್ತು ಸಂಸ್ಥೆಯಿಂದ ಇತ್ತೀಚೆಗೆ ನಾಲ್ಕು ಮಕ್ಕಳನ್ನು ಸ್ವದೇಶ ಮತ್ತು ವಿದೇಶಗಳಿಗೆ ದತ್ತು ನೀಡಲಾಗಿದೆ. ಈ ಪೈಕಿ ಇಟಲಿಯ ದಂಪತಿಗಳು ಅನಾಥ ಮಗುವೊಂದನ್ನು ಕಾನೂನುಬದ್ಧವಾಗಿ ದತ್ತು ಪಡೆದಿದ್ದು, ಈ ಪ್ರಕ್ರಿಯೆಯು ಅನಾಥ ಮಕ್ಕಳಿಗೆ ಹೊಸ ಬದುಕನ್ನು ನೀಡುತ್ತಿದೆ.
Read Full Story

08:45 AM (IST) Jun 09

ಬಳ್ಳಾರಿ–ರಾಯದುರ್ಗ–ತುಮಕೂರು ನಡುವಿನ ರೈಲ್ವೆ ಮಾರ್ಗ ಆರಂಭ ಯಾವಾಗ? ಜಿ.ಪರಮೇಶ್ವರ ಮಾಹಿತಿ

ಬಳ್ಳಾರಿ-ರಾಯದುರ್ಗ-ತುಮಕೂರು ರೈಲ್ವೆ ಮಾರ್ಗವನ್ನು 2027ರೊಳಗೆ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿಎಂ ಜಿ.ಪರಮೇಶ್ವರ ತಿಳಿಸಿದ್ದಾರೆ. ಭೂಸ್ವಾಧೀನ ವಿಳಂಬದಿಂದ ಕುಂಠಿತಗೊಂಡಿದ್ದ ಈ ಯೋಜನೆಯ ಜೊತೆಗೆ, ಎಸ್ಕಾಂಗಳ ಖಾಸಗೀಕರಣ ವಿರೋಧಿಸಿ ನೌಕರರು ಸಲ್ಲಿಸಿದ ಮನವಿಯ ಬಗ್ಗೆಯೂ ವರದಿಯಲ್ಲಿ ಉಲ್ಲೇಖಿಸಲಾಗಿದೆ.
Read Full Story

08:31 AM (IST) Jun 09

ನನ್ನ ಬಳಿ ಕೆಜಿಗಟ್ಟಲೇ ಕದ್ದ ಚಿನ್ನ ಐತಿ, ಬನ್ನಿ ಎಂದು ಪಂಗನಾಮ ಹಾಕಿದ ಶಿಗ್ಲಿ ಬಸ್ಯಾ

ಕಡಿಮೆ ಬೆಲೆಗೆ ಚಿನ್ನ ನೀಡುವುದಾಗಿ ನಂಬಿಸಿ, ದಾವಣಗೆರೆ ಜಿಲ್ಲೆಯ ಸುರಹೊನ್ನೆ ಗ್ರಾಮದ ಶಿವರಾಜ ಎಂಬುವವರಿಗೆ ಶಿಗ್ಲಿ ಬಸ್ಯಾ ಎಂಬಾತ ₹70 ಸಾವಿರ ವಂಚಿಸಿದ್ದಾನೆ. ಜಗಳೂರಿನಲ್ಲಿ ಹಣ ಪಡೆದು ನಾಪತ್ತೆಯಾದ ಆರೋಪಿ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ.
Read Full Story

08:18 AM (IST) Jun 09

ಬಿಲ್ ಪಾವತಿ, ಹೊಸ ಸಂಪರ್ಕ, ವರ್ಗಾವಣೆ ಸೇರಿ ಬೆಸ್ಕಾಂ ಆನ್‌ಲೈನ್ ಸೇವೆಗಳು ಇನ್ನು 21 ದಿನ ಸಿಗಲ್ಲ

ಬೆಸ್ಕಾಂ ಆನ್‌ಲೈನ್ ಸೇವೆಗಳು 21 ದಿನಗಳ ಕಾಲ ಅಲಭ್ಯವಾಗಿದೆ. ಹೊಸ ಸಂಪರ್ಕ, ಬಿಲ್ ಪಾವತಿ, ಲೋಡ್ ಹೆಚ್ಚಳ ಸೇರಿದಂತೆ ಹಲವು ಆನ್‌ಲೈನ್ ಸೇವೆಗಳಲ್ಲಿ ವ್ಯತ್ಯಯವಾಗುತ್ತಿದೆ. ಈ ಕುರಿತು ಬೆಸ್ಕಾಂ ಮಹತ್ವದ ಪ್ರಕಟಣೆ ಹೊರಡಿಸಿದೆ.

 

Read Full Story

08:04 AM (IST) Jun 09

ಸಾರಿಗೆ ಬಸ್‌ನಲ್ಲಿ ಮಹಿಳೆಯರ ಜೊತೆ ಪುರುಷ ಪ್ರಯಾಣಿಕರಿಗೂ ಸ್ಮಾರ್ಟ್‌ ಕಾರ್ಡ್ ಭಾಗ್ಯ!

ಸಾರಿಗೆ ಸಚಿವ ಬೈರತಿ ಸುರೇಶ್ ಅವರು ರಾಜ್ಯದ ಮೂರು ಕೋಟಿಗೂ ಅಧಿಕ ಪ್ರಯಾಣಿಕರಿಗೆ ಸ್ಮಾರ್ಟ್‌ ಕಾರ್ಡ್ ವಿತರಿಸುವ ಯೋಜನೆಯನ್ನು ಪ್ರಕಟಿಸಿದ್ದಾರೆ. ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಪ್ರಯಾಣದ ಸ್ಮಾರ್ಟ್‌ ಕಾರ್ಡ್ ಮತ್ತು ಪುರುಷರಿಗೆ  ಕಾರ್ಡ್‌ಗಳನ್ನು ನೀಡಲಾಗುವುದು. 

Read Full Story

07:59 AM (IST) Jun 09

ರಾಜ್ಯಾದ್ಯಂತ ಜೂನ್ 11ರ ವರೆಗೆ ಭಾರಿ ಮಳೆ ಮುನ್ಸೂಚನೆ, ಐದು ಜೆಲ್ಲೆಗೆ ರೆಡ್ ಅಲರ್ಟ್ ಘೋಷಣೆ

ಕರ್ನಾಟಕದಲ್ಲಿ ಮಳೆ ಆರಂಭಗೊಂಡಿದೆ. ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ಇದರ ಬೆನ್ನಲ್ಲೇ ಹವಾಮಾನ ಇಲಾಖೆ ಮಹತ್ವದ ಎಚ್ಚರಿಕೆ ನೀಡಿದೆ. ಜೂನ್ 11ರ ವರೆಗೆ ಭಾರಿ ಮಳೆಯಾಗಲಿದೆ ಎಂದಿದೆ.

 

Read Full Story

07:46 AM (IST) Jun 09

ಕಾರವಾರ-ಹಳಗಾ ಸಾರಿಗೆ ಬಸ್ ಉಳಗಾ ವರೆಗೆ ವಿಸ್ತರಿಸಲು ಆಗ್ರಹ - ಡಿಪೋ ಮ್ಯಾನೇಜರ್‌ಗೆ ಮನವಿ

ಕಾರವಾರದಿಂದ ಹಳಗಾಕ್ಕೆ ಸಂಚರಿಸುವ ಸಾರಿಗೆ ಬಸ್ಸನ್ನು ನೆರೆಯ ಉಳಗಾ ಗ್ರಾಮದವರೆಗೂ ವಿಸ್ತರಿಸಬೇಕೆಂದು ಹಳಗಾ ಮತ್ತು ಸುತ್ತಮುತ್ತಲಿನ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಈ ಕುರಿತು ಸಾರಿಗೆ ಇಲಾಖೆಯ ಡಿಪೋ ಮ್ಯಾನೇಜರ್‌ಗೆ ಮನವಿ ಸಲ್ಲಿಸಿದ್ದು, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರ ಅನುಕೂಲಕ್ಕಾಗಿ ಮಾರ್ಗ ವಿಸ್ತರಿಸಲು ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದಾರೆ.
Read Full Story

07:35 AM (IST) Jun 09

ಕೊಡಗು, ದಕ್ಷಿಣ ಕನ್ನಡ ಗೌಡ ಸಮುದಾಯದ ವಧು-ವರರ ಸಮಾವೇಶ; ಯಾರೆಲ್ಲಾ ಬರಬಹುದು? ಇಲ್ಲಿದೆ ಮಾಹಿತಿ

ಕೊಡಗು ಗೌಡ ನಿವೃತ್ತ ನೌಕರರ ಸಂಘವು ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮುದಾಯಕ್ಕಾಗಿ ವಧು-ವರರ ಸಮಾವೇಶವನ್ನು ಆಯೋಜಿಸಿದೆ. ರೈತಾಪಿ ಯುವಕರು ಸೇರಿದಂತೆ ಮರುವಿವಾಹ ಬಯಸುವವರು, ವಿಚ್ಛೇದಿತರು ಕೂಡ ಈ ಸಮಾವೇಶದಲ್ಲಿ ಭಾಗವಹಿಸಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳಬಹುದು.

Read Full Story

07:04 AM (IST) Jun 09

No ID no Entry - ಬಾರ್‌, ಪಬ್‌ಗಳಿಗೆ ಗುರುತಿನ ಚೀಟಿ ಇಲ್ಲದಿದ್ರೆ ಪ್ರವೇಶವಿಲ್ಲ

ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯವ್ಯಸನವನ್ನು ತಡೆಯಲು, ರಾಜ್ಯ ಸರ್ಕಾರವು ಬಾರ್, ಕ್ಲಬ್‌ಗಳು ಮತ್ತು ಮದ್ಯದ ಮಳಿಗೆಗಳಲ್ಲಿ 'ನೋ ಐಡಿ, ನೋ ಎಂಟ್ರಿ' ನಿಯಮವನ್ನು ಕಡ್ಡಾಯಗೊಳಿಸಿದೆ.

Read Full Story

07:00 AM (IST) Jun 09

ಘಟಪ್ರಭಾ ಕುಷ್ಟಗಿ ರೈಲ್ವೆ ಮಾರ್ಗ ಆರಂಭಿಸಲು ಆಗ್ರಹ - ಸಚಿವ ಜೋಶಿ ನೀಡಿದ ಭರವಸೆ ಏನು?

ಹೋರಾಟದ ನಾಡು ನರಗುಂದಕ್ಕೆ ಘಟಪ್ರಭಾದಿಂದ ಕುಷ್ಟಗಿಯವರೆಗೆ ಹೊಸ ರೈಲ್ವೆ ಮಾರ್ಗವನ್ನು ಪ್ರಾರಂಭಿಸಬೇಕೆಂದು ರೈಲ್ವೆ ಹೋರಾಟ ಸಮಿತಿಯು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರಿಗೆ ಮನವಿ ಸಲ್ಲಿಸಿತು. 

Read Full Story

More Trending News