ಚಾಮರಾಜನಗರ: ಉಡುತೊರೆ ಹಳ್ಳಕ್ಕೆ ಬಜೆಟ್ನಲ್ಲಿ ₹490 ಕೋಟಿ ಘೋಷಿಸಿದ್ದಕ್ಕೆ ಜೆಡಿಎಸ್ ಶಾಸಕ ಎಂ.ಆರ್.ಮಂಜುನಾಥ್ ಅವರು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಸಚಿವರು, ಶಾಸಕರ ಹೆಸರಿನಲ್ಲಿ ಶ್ರೀಕ್ಷೇತ್ರ ಮಲೆಮಹದೇಶ್ವರಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು. ಬಹು ದಶಕಗಳ ಬೇಡಿಕೆ ಈಡೇರಿದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಉಸ್ತುವಾರಿ ಸಚಿವ ಕೆ.ವೆಂಕಟೇಶ್, ಸಚಿವ ಡಾ.ಎಚ್.ಸಿ. ಮಹಾದೇವಪ್ಪ ಹೆಸರಿನಲ್ಲಿ ಶಾಸಕ ಮಂಜುನಾಥ್ ಅರ್ಚನೆ ಮಾಡಿಸಿದರು
ಕುಡಿಯುವ ನೀರು ಮತ್ತು 12,000 ಎಕರೆಗೆ ನೀರಾವರಿ ಕಲ್ಪಿಸುವ ಉಡುತೊರೆ ಹಳ್ಳ ಜಲಾಶಯ ನೀರಾವರಿ ಯೋಜನೆಯನ್ನು ₹490 ಕೋಟಿ ವೆಚ್ಚದಲ್ಲಿ ಯೋಜನೆ ಕೈಗೆತ್ತಿಕೊಳ್ಳಲಾಗುವುದೆಂದು ಸಿದ್ದರಾಮಯ್ಯ ಘೋಷಿಸಿದ್ದು, ಅನುದಾನ ಬಿಡುಗಡೆಯಾದ ಬೆನ್ನಲ್ಲೇ ಕಾಮಗಾರಿ ಆರಂಭಗೊಳ್ಳುವ ನಿರೀಕ್ಷೆ ಇದೆ.
10:49 PM (IST) Mar 09
10:23 PM (IST) Mar 09
‘ತೊಟ್ಟಿಲು ತೂಗುವ ಕೈ ದೇಶವನ್ನೂ ಆಳಬಲ್ಲದು’ ಎಂಬ ಮಾತಿನಂತೆ ಮಹಿಳೆಯರು ಇಂದು ಸಮಾಜದ ಎಲ್ಲ ಕ್ಷೇತ್ರಗಳಲ್ಲಿಯೂ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ ಎಂದು ಸಚಿವ ಈಶ್ವರ್ ಖಂಡ್ರೆ ಹೇಳಿದರು.
10:15 PM (IST) Mar 09
10:12 PM (IST) Mar 09
ಗ್ಯಾರಂಟಿ ಯೋಜನೆಗಳಿಂದ ಬಡತನವನ್ನು ಬೇರುಸಮೇತ ಕಿತ್ತೊಗೆಯುವ ಕಾರ್ಯ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಪಂಚ ಗ್ಯಾರಂಟಿ ಯೋಜನೆಗಳು ಮಾನವ ಹಕ್ಕುಗಳಾಗಿ ಪರಿಗಣಿಸಲ್ಪಡುವ ಕಾನೂನು ರೂಪುಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ತಿಳಿಸಿದರು.
09:57 PM (IST) Mar 09
ಎಚ್.ಎನ್.ವ್ಯಾಲಿ ನೀರಿನ ಮೂರನೇ ಹಂತದ ಶುದ್ಧೀಕರಣದ ಪರವಾಗಿ ಶಾಸಕನಾಗುವ ಮೊದಲೂ ಇದ್ದೆ, ಈಗಲೂ ಇದ್ದೇನೆ. ನನ್ನ ಬದ್ಧತೆಯಲ್ಲಿ ಬದಲಾವಣೆಯಿಲ್ಲ ಎಂದು ಶಾಸಕ ಪ್ರದೀಪ್ ಈಶ್ವರ್ ತಿಳಿಸಿದರು.
09:45 PM (IST) Mar 09
09:37 PM (IST) Mar 09
ಅಂತರ್ಜಲ ಹೆಚ್ಚಿಸುವ ನಿಟ್ಟಿನಲ್ಲಿ 400ಕ್ಕೂ ಹೆಚ್ಚಿನ ಕೆರೆಗಳು ತುಂಬಿಸುವ ನೀರಾವರಿ ಗ್ಯಾರಂಟಿ ಯೋಜನೆ ಕೈಗೆತ್ತಿಕೊಂಡಿದ್ದೇವೆ ಎಂದು ರಾಜ್ಯ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.
09:34 PM (IST) Mar 09
ಬ್ರಹ್ಮಗಂಟು ಧಾರಾವಾಹಿಯಲ್ಲಿ ಗೀತಾ ಭಟ್ ಅವರು ನಟಿಸಿದ್ದರು. ಆ ಬಳಿಕ ಲವ್ ಮಾಕ್ಟೇಲ್ ಸಿನಿಮಾದಲ್ಲಿ ನಟಿಸಿದ್ದರು. ಈ ಸಿನಿಮಾ ಡೈಲಾಗ್ ಬಗ್ಗೆ ಗೀತಾ ಭಾರತಿ ಭಟ್ ಆರೋಪ ಮಾಡಿದ್ದು, ಡಾರ್ಲಿಂಗ್ ಕೃಷ್ಣ ದಂಪತಿ ಸ್ಪಷ್ಟನೆ ನೀಡಿದ್ದರು. ಈಗ ಗೀತಾ ಮತ್ತೆ ದನಿ ಎತ್ತಿದ್ದಾರೆ.
09:29 PM (IST) Mar 09
ಬೆಲೆ ಏರಿಕೆ ನಡುವೆ ಗ್ಯಾಸ್ ಸರಬರಾಜು ಬಂದ್, ನಾಳೆಯಿಂದ ಎಲ್ಲಾ ಹೊಟೆಲ್ ಬಂದ್ ಆತಂಕ, ಏಕಾಏಕಿ ಗ್ಯಾಸ್ ಸರಬಾರದು ನಿಂತಿರುವುದೇ ಈ ಸಮಸ್ಯೆಗೆ ಕಾರಣವಾಗಿದೆ. ಅನಿವಾರ್ಯವಾಗಿ ಬಂದ್ ಮಾಡಬೇಕಾದ ಪರಿಸ್ಥಿತಿ ಎಂದು ಹೊಟೆಲ್ ಮಾಲೀಕರ ಸಂಘ ಎಚ್ಚಿರಿಸಿದೆ.
08:59 PM (IST) Mar 09
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ವಿಚಾರವಾಗಿ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಹಸ್ತಕ್ಷೇಪಕ್ಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಮೀರ್ ಅವರ ಹೇಳಿಕೆಗಳು ಮತ್ತು ಎಂಎಲ್ಸಿ ಅಬ್ದುಲ್ ಜಬ್ಬಾರ್ ಅವರ ನಡೆಗಳಿಂದ ಗೊಂದಲ ಸೃಷ್ಟಿಯಾಗಿದೆ ಎಂದರು.
08:56 PM (IST) Mar 09
ರಿಯಲ್ ಎಸ್ಟೇಟ್ ಎಜೆಂಟ್ ಕಿಡ್ನಾಪ್ & ಹತ್ಯೆ ಕೇಸ್, ನಮ್ಮ ಕಮ್ಯೂನಿಟಿ ಕೊಲೆ ಮಾಡಿಲ್ಲ ಎಂದ ಪ್ರದೀಪ್ ಈಶ್ವರ್, ಪ್ರಕರಣ ಸಂಬಂಧ ಇಬ್ಬರನ್ನು ಅರೆಸ್ಟ್ ಮಾಡಲಾಗಿದೆ. ಮತ್ತೊಬ್ಬಿರನ್ನು ಟ್ರೇಸ್ ಮಾಡಲಾಗಿದೆ ಎಂದಿದ್ದಾರೆ.
08:56 PM (IST) Mar 09
'ಲಕ್ಷ್ಮೀ ನಿವಾಸ' ಸೀರಿಯಲ್ನಲ್ಲಿ ನೆಗೆಟಿವ್ ಪಾತ್ರದಲ್ಲಿ ನಟಿಸುತ್ತಿರುವ ಮಾನಸಾ ಮನೋಹರ್ ಗರ್ಭಿಣಿಯಾಗಿದ್ದು, ತಮಗೆ ಅವಳಿ ಮಕ್ಕಳಾಗಬೇಕೆಂಬ ಆಸೆಯಿಂದ ಅವಳಿ ಬಾಳೆಹಣ್ಣುಗಳನ್ನು ತಿಂದಿದ್ದಾಗಿ ಹೇಳಿಕೊಂಡಿದ್ದಾರೆ. 2024ರಲ್ಲಿ ಉದ್ಯಮಿ ಪ್ರೀತಂ ಚಂದ್ರ ಅವರನ್ನು ಎರಡನೇ ಮದುವೆಯಾಗಿದ್ದಾರೆ.
08:34 PM (IST) Mar 09
ಮುಖದ ಮೇಲಿರುವ ಬ್ಲ್ಯಾಕ್ ಹೆಡ್ಸ್ ಸೌಂದರ್ಯ ಹಾಳು ಮಾಡುತ್ತೆ. ಪಾರ್ಲರ್ ನಲ್ಲಿ ಬ್ಲ್ಯಾಕ್ ಹೆಡ್ಸ್ ತೆಗೆಯೋ ಪ್ರೊಸೆಸ್ ನೋವಿನಿಂದ ಕೂಡಿರುತ್ತೆ. ಅಲ್ದೆ ಗಲ್ಲ ರೆಡ್ ಆಗುತ್ತೆ. ಮನೆಯಲ್ಲೇ ನೀವು ಬ್ಲ್ಯಾಕ್ ಹೆಡ್ಸ್ ತೆಗೆಯಬಹುದು. ಸುಲಭ ಮನೆ ಮದ್ದು ಇಲ್ಲಿದೆ.
08:30 PM (IST) Mar 09
'ಕೃಷ್ಣ ರುಕ್ಕು' ಧಾರಾವಾಹಿ ಆರಂಭವಾಗಿದ್ದು, ಇದು ಅಣ್ಣನ ಸಾವಿನ ನಂತರ ಕುಟುಂಬದ ಜವಾಬ್ದಾರಿ ಹೊರುವ ರುಕ್ಕು ಮತ್ತು ಹಾದಿ ತಪ್ಪಿದ ಕುಡುಕ ಕೃಷ್ಣನ ನಡುವಿನ ಕಥೆಯಾಗಿದೆ. ಕುಡುಕನ ಪಾತ್ರದಲ್ಲಿ ನಟ ಅಕ್ಷಯ್ ನಾಯಕ್ ಕಾಣಿಸಿಕೊಂಡಿದ್ದು, ಈ ಪಾತ್ರಕ್ಕಾಗಿ ತಾವು ಪಟ್ಟ ಶ್ರಮದ ಕುರಿತು ಹೇಳಿದ್ದಾರೆ.
07:17 PM (IST) Mar 09
ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಬಳಿ ಕುಡಿದ ಮತ್ತಿನಲ್ಲಿದ್ದ ಕಂಟೈನರ್ ಚಾಲಕನೋರ್ವ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ 8 ವರ್ಷದ ಬಾಲಕ ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
06:45 PM (IST) Mar 09
ಬಹುತೇಕ ರಾಜೀ- ಸಂಧಾನದಲ್ಲೇ ಪ್ರಕರಣಗಳು ಬಗೆಹರಿದಿರುವುದರಿಂದ ಮಂಡ್ಯ ಜಿಲ್ಲೆಯನ್ನು ದೌರ್ಜನ್ಯ ಮುಕ್ತಗೊಳಿಸಬಹುದು ಎಂದು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.
06:25 PM (IST) Mar 09
06:21 PM (IST) Mar 09
06:13 PM (IST) Mar 09
ಹಿರಿಯ ನಟ ದ್ವಾರಕೀಶ್ ಅವರ ಸೊಸೆ ವರ್ಷಾ ರೈ ವಿರುದ್ಧ ಹಣಕಾಸು ವಂಚನೆಯ ಗಂಭೀರ ಆರೋಪ ಕೇಳಿಬಂದಿದೆ. ಚೀಟಿ ವ್ಯವಹಾರ, ಚಿನ್ನ ಹಾಗೂ ಹಣ ಪಡೆದು ಮೋಸ ಮಾಡಿರುವ ಬಗ್ಗೆ ಹತ್ತಕ್ಕೂ ಹೆಚ್ಚು ಜನರು ದೂರು ನೀಡಿದ್ದಾರೆ.
05:50 PM (IST) Mar 09
ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಗಳಲ್ಲಿ ಉಪನ್ಯಾಸಕರ ಕೊರತೆಯಿಂದ ವಿದ್ಯಾರ್ಥಿಗಳ ದಾಖಲಾತಿಯಲ್ಲಿ ಇಳಿಕೆ ಕಂಡು ಬರುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಹೇಳಿದರು.
05:46 PM (IST) Mar 09
05:36 PM (IST) Mar 09
ನಟ ವಿಜಯ್ ಅವರ ವಿಚ್ಛೇದನದ ವದಂತಿಗಳ ನಡುವೆಯೇ, ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ನೀಡಿದ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. 'ಅಷ್ಟೊಂದು ವರ್ತ್ ಇಲ್ಲ' ಎಂಬ ಅವರ ಮಾತನ್ನು ನಟಿಯೊಬ್ಬರು ತೀವ್ರವಾಗಿ ಟೀಕಿಸಿದ್ದಾರೆ.
05:24 PM (IST) Mar 09
Kitchen Gardenನಲ್ಲಿ ಶುಂಠಿ ಮತ್ತು ಮೆಣಸಿನಕಾಯಿ ಬೆಸ್ಟ್ ಕಾಂಬಿನೇಷನ್. ಎರಡೂ ಗಿಡಗಳು ಕಡಿಮೆ ಜಾಗದಲ್ಲಿ ಚೆನ್ನಾಗಿ ಬೆಳೆಯುತ್ತವೆ. ಕೇವಲ 6 ಇಂಚಿನ ಪಾಟಲ್ಲಿ ಈ ಎರಡೂ ತರಕಾರಿಗಳನ್ನು ಹೇಗೆ ಬೆಳೆಸಬಹುದು ಎಂದು ತಿಳಿಯೋಣ.
05:00 PM (IST) Mar 09
ನಟ ದಳಪತಿ ವಿಜಯ್ ಮತ್ತು ನಟಿ ತ್ರಿಶಾ ನಡುವಿನ ಪ್ರೀತಿಯ ವಿಚಾರ ತಮಿಳುನಾಡಿನಲ್ಲಿ ಸಂಚಲನ ಸೃಷ್ಟಿಸಿದೆ. ರಾಜಕೀಯ ಪ್ರವೇಶಿಸಿರುವ ವಿಜಯ್, ಪತ್ನಿ ಸಂಗೀತಾ ಅವರಿಂದ ವಿಚ್ಛೇದನ ಪಡೆಯಲಿದ್ದಾರೆ ಎಂಬ ಸುದ್ದಿ ಹಬ್ಬಿದ್ದು, ಇದಕ್ಕೆ ತ್ರಿಶಾ ಜೊತೆಗಿನ ಸಂಬಂಧವೇ ಕಾರಣ ಎನ್ನಲಾಗುತ್ತಿದೆ.
04:42 PM (IST) Mar 09
ಉತ್ತರ ಕನ್ನಡ ಜಿಲ್ಲೆಗೆ ಕಾರವಾರದಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಘೋಷಣೆಯಾಗಿದ್ದು, ಸಚಿವ ಮಂಕಾಳು ವೈದ್ಯರ ಪುತ್ರಿ ಇದನ್ನು ತಮ್ಮ ತಂದೆಯ ಸಾಧನೆ ಎಂದಿದ್ದಾರೆ. ಆದರೆ, ಆಸ್ಪತ್ರೆಯ ಸ್ಥಳದ ಬಗ್ಗೆ ಜಿಲ್ಲೆಯ ದಕ್ಷಿಣ ಭಾಗದ ಜನರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.
04:01 PM (IST) Mar 09
03:54 PM (IST) Mar 09
Garden Tips : ಬೆಳಿಗ್ಗೆ ಮನೆಯಲ್ಲಿ ಅರಳಿದ ಗುಲಾಬಿ ಹೂ ನೋಡಿದ್ರೆ ಮನಸ್ಸು ಖುಷಿಯಾಗುತ್ತದೆ. ಅದೇ ಒಣಗಿದ ಗಿಡ ಮನಸ್ಸಿಗೆ ನೋವು ನೀಡುತ್ತದೆ. ಮನೆ ಬಾಲ್ಕನಿಯಲ್ಲಿರುವ ಗುಲಾಬಿ ಗಿಡದಲ್ಲಿ ಪ್ರತಿ ದಿನ ಒಂದೊಂದು ಹೂ ಅರಳಬೇಕು ಅಂದ್ರೆ ಈ ಟಿಪ್ಸ್ ಟ್ರೈ ಮಾಡಿ.
03:47 PM (IST) Mar 09
ಟಿ20 ವಿಶ್ವಕಪ್ ಗೆದ್ದ ಟೀಂ ಇಂಡಿಯಾಗೆ ಎಂ.ಎಸ್. ಧೋನಿ ಇನ್ಸ್ಟಾಗ್ರಾಂನಲ್ಲಿ ಅಭಿನಂದನೆ ಸಲ್ಲಿಸಿದ್ದು, ವಿಶೇಷವಾಗಿ ಕೋಚ್ ಗೌತಮ್ ಗಂಭೀರ್ ಅವರನ್ನು ಶ್ಲಾಘಿಸಿದ್ದಾರೆ. ಧೋನಿಯ ಈ ಭಾವುಕ ಪೋಸ್ಟ್ಗೆ ಗಂಭೀರ್ ಕೂಡ ಪ್ರೀತಿಯಿಂದ ಉತ್ತರಿಸಿದ್ದಾರೆ.
03:26 PM (IST) Mar 09
ಇರಾನ್-ಇಸ್ರೇಲ್-ಅಮೆರಿಕಾ ಯುದ್ಧದ ಪರಿಣಾಮವಾಗಿ, ಗಲ್ಫ್ ರಾಷ್ಟ್ರಗಳಿಗೆ ಬ್ಯಾಡಗಿ ಮೆಣಸಿನಕಾಯಿ ರಫ್ತು ಸ್ಥಗಿತಗೊಂಡಿದೆ. ಇದರಿಂದಾಗಿ ಮಾರುಕಟ್ಟೆಯಲ್ಲಿ ವಹಿವಾಟು ಕುಸಿಯುವ ಮತ್ತು ರೈತರು ಬೆಳೆದ ಮೆಣಸಿನಕಾಯಿ ಬೆಲೆ ಕಡಿಮೆಯಾಗುವ ಆತಂಕ ಎದುರಾಗಿದೆ.
01:39 PM (IST) Mar 09
01:24 PM (IST) Mar 09
01:02 PM (IST) Mar 09
ಬೂಕರ್ ಪ್ರಶಸ್ತಿ ವಿಜೇತೆ, ಲೇಖಕಿ ಭಾನು ಮುಷ್ತಾಕ್ ಅವರು ಮೆಸೆಂಜರ್ನಲ್ಲಿ 'ಸಾವಿತ್ರಿ ಮಜುಂದಾರ್' ಎಂಬ ಹೆಸರಿನಿಂದ ಬಂದ ಅಸಭ್ಯ ವಿಡಿಯೋ ಕಾಲ್ನಿಂದಾದ ಆಘಾತಕಾರಿ ಅನುಭವವನ್ನು ಹಂಚಿಕೊಂಡಿದ್ದಾರೆ. ಈ ಘಟನೆಯು ಸೈಬರ್ ಸ್ಪ್ಯಾಮ್ ಅಥವಾ ಸೆಕ್ಸ್ಟಾರ್ಶನ್ ಜಾಲದ ಬಗ್ಗೆ ಅನುಮಾನ ಮೂಡಿಸಿದೆ.
12:26 PM (IST) Mar 09
'ಎಂಎಸ್ ಸಿರೆನಾ' ಎಂಬ ವಿಲಾಸಿ ಹಡಗು 619 ಪ್ರಯಾಣಿಕರೊಂದಿಗೆ ನವಮಂಗಳೂರು ಬಂದರಿಗೆ ಆಗಮಿಸಿತು. ಪ್ರವಾಸಿಗರು ಗೋಕರ್ಣನಾಥೇಶ್ವರ ದೇವಸ್ಥಾನ, ಸಾವಿರ ಕಂಬದ ಬಸದಿ ಸೇರಿದಂತೆ ಸ್ಥಳೀಯ ಪ್ರವಾಸಿ ತಾಣಗಳಿಗೆ ಭೇಟಿ ನೀಡಿ, ಮಂಗಳೂರಿನ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಿದರು.
12:16 PM (IST) Mar 09
12:14 PM (IST) Mar 09
ಶ್ರೀರಂಗಪಟ್ಟಣದ ರೈತ ಹೇಮಂತ್ ಶೇಖರ್ ತಮ್ಮ ಜೋಡಿ ಕರುಗಳಿಗೆ 'ಆರ್ಯ-ಸೂರ್ಯ' ಎಂದು ಶಾಸ್ತ್ರೋಕ್ತವಾಗಿ ನಾಮಕರಣ ಮಾಡಿ ಪ್ರಾಣಿಪ್ರೀತಿ ಮೆರೆದಿದ್ದಾರೆ. ಶಾಸಕ ದರ್ಶನ್ ಪುಟ್ಟಣ್ಣಯ್ಯ ಪಾಂಡವಪುರದ ಒಣಭೂಮಿಗೆ ನೀರುಣಿಸುವ ದಶಕಗಳ ಕನಸಿನ ಏತ ನೀರಾವರಿ ಯೋಜನೆಗೆ ಚಾಲನೆ ನೀಡಿದ್ದು, ರೈತರಲ್ಲಿ ಸಂತಸ ಮೂಡಿಸಿದೆ.
11:52 AM (IST) Mar 09
ಬೆಂಗಳೂರು: ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಂ ಇಂಡಿಯಾ ಚಾಂಪಿಯನ್ ಪಟ್ಟ ಅಲಂಕರಿಸುವಲ್ಲಿ ಯಶಸ್ವಿಯಾಗಿದೆ. ಟೀಂ ಇಂಡಿಯಾ ಗೆಲುವಿಗೆ ನಿಜವಾದ ಕಾರಣ ಆಯ್ಕೆ ಸಮಿತಿಯ ಕಠಿಣ ನಿರ್ಧಾರ ಎನ್ನುವುದು ಬಹುತೇಕ ಮಂದಿಗೆ ಗೊತ್ತಿಲ್ಲ.
11:26 AM (IST) Mar 09
10:52 AM (IST) Mar 09
10:32 AM (IST) Mar 09
10:18 AM (IST) Mar 09
ಬಿಗ್ಬಾಸ್ ಖ್ಯಾತಿಯ ರಕ್ಷಿತಾ ಶೆಟ್ಟಿ, ತಮ್ಮ ಹಿರಿವಯಸ್ಸಿನ ಅಭಿಮಾನಿಯೊಬ್ಬರನ್ನು ಭೇಟಿ ಮಾಡಿದ್ದಾರೆ. ಅಜ್ಜಿಯ ಆಸೆಯಂತೆ ಅವರ ಮನೆಗೆ ತೆರಳಿ, ಅವರೊಂದಿಗೆ ಸಮಯ ಕಳೆದು ಆಶೀರ್ವಾದ ಪಡೆದಿದ್ದು, ಈ ವೀಡಿಯೋಗಳು ನೆಟ್ಟಿಗರ ಮನಗೆದ್ದಿವೆ.