ಕೊಪ್ಪಳ: ಹೊಸ ಪಕ್ಷ ಕಟ್ಟುವ ಕುರಿತು ಈಗಲೇ ಏನು ಹೇಳಲು ಆಗದು, ರಾಜ್ಯಾದ್ಯಂತ ಸುತ್ತಾಟ ನಡೆಸಿ ಜನರ ಅಭಿಪ್ರಾಯ ಪಡೆದ ನಂತರ ಹೊಸ ಪಕ್ಷ ಕಟ್ಟುವ ತೀರ್ಮಾನ ಮಾಡುತ್ತೇನೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಹದಗೆಟ್ಟು ಹೋಗಿದೆ. ಯಾರಾದರೂ ಸಿಎಂ ಆಗಲಿ ನಮಗೆ ಗೊತ್ತಿಲ್ಲ. ಆದರೆ, ಉತ್ತಮ ಆಡಳಿತ ಕೊಡಲಿ ಎಂದರು.
ಪಂಚಮಸಾಲಿ ಸಮುದಾಯದ ಎರಡೂ ಟ್ರಸ್ಟ್ಗಳಲ್ಲಿ ಭ್ರಷ್ಟರೇ ಇದ್ದಾರೆ. ಟ್ರಸ್ಟ್ ರಾಜಕೀಯೇತರ ಇರಬೇಕು. ರಾಜಕೀಯದಿಂದ ಕೂಡಿದ್ದರೆ ಹೀಗೆಯೇ ಆಗುವುದು. ಕೂಡಲಸಂಗಮ ಮತ್ತು ಹರಿಹರ ಪಂಚಮಸಾಲಿ ಟ್ರಸ್ಟ್ಗಳು ರದ್ದಾಗಬೇಕು ಎಂದರು.
ಐಪಿಎಲ್ ಟಿಕೆಟ್ ಕೇಳಿದ್ದರಿಂದ ಬೆಂಗಳೂರಿಂದ ಗುಜರಾತಿಗೆ ಫೈನಲ್ ಪಂದ್ಯ ಕಿತ್ತುಕೊಂಡು ಹೋಯಿತು. ತಮ್ಮ ಭಾಗದ ಸಮಸ್ಯೆ ಕೇಳದವರು ಐಪಿಎಲ್ ಟಿಕೆಟ್ ಕೇಳುತ್ತಾರೆ. ತಮ್ಮ ಕುಟುಂಬದವರಿಗೆ ಎಸಿ ಕುರ್ಚಿ ಕೇಳುತ್ತಾರೆ ಅಂದರೆ ಏನರ್ಥ? ಎಂದು ಕಿಡಿಕಾರಿದರು.
10:14 AM (IST) May 09
ಐಪಿಎಲ್ ಫೈನಲ್ ಪಂದ್ಯವನ್ನು ರಾಜಕೀಯ ಪ್ರಭಾವ ಬಳಸಿ ಬೆಂಗಳೂರಿನಿಂದ ಅಹಮದಾಬಾದ್ಗೆ ಸ್ಥಳಾಂತರಿಸಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ. ಬಿಸಿಸಿಐ ಸುಳ್ಳು ಹೇಳುತ್ತಿದ್ದು, ಗುಜರಾತ್ಗೆ ಆರ್ಥಿಕ ಲಾಭ ಮಾಡಿಕೊಡಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ಕಿಡಿಕಾರಿದ್ದಾರೆ.
09:59 AM (IST) May 09
09:53 AM (IST) May 09
09:41 AM (IST) May 09
Amruthadhaare Kannada Serial Episode: ಅಮೃತಧಾರೆ ಧಾರಾವಾಹಿಯಲ್ಲಿ ಜಯದೇವ್ನನ್ನು ದಿಯಾ ಜೈಲಿಗೆ ಹಾಕಿಸಿದ್ದಳು. ಈಗ ಅವನಿಗೆ ಜಾಮೀನು ಸಿಕ್ಕಿದ್ದು, ಹೊರಗಡೆ ಬಂದಿದ್ದಾನೆ. ಇದರ ಹಿಂದೆ ಇದ್ದೋರು ಯಾರು?
09:05 AM (IST) May 09
ಐಪಿಎಲ್ ವೇಳೆ ಸಂಭವನೀಯ ಹನಿಟ್ರ್ಯಾಪ್ ಮತ್ತು ಭದ್ರತಾ ಅಪಾಯಗಳ ಬಗ್ಗೆ ಬಿಸಿಸಿಐ ಆಟಗಾರರಿಗೆ ಎಚ್ಚರಿಕೆ ನೀಡಿದೆ. ಅನಧಿಕೃತ ವ್ಯಕ್ತಿಗಳ ಪ್ರವೇಶವನ್ನು ನಿರ್ಬಂಧಿಸುವಂತೆ ಎಲ್ಲಾ 10 ಫ್ರಾಂಚೈಸಿಗಳಿಗೆ ಮಾರ್ಗಸೂಚಿಗಳನ್ನು ನೀಡಿದ್ದು, ತಂಡದ ಮಾಲೀಕರಿಗೂ ಪಂದ್ಯದ ವೇಳೆ ಆಟಗಾರರೊಂದಿಗೆ ಸಂವಹನ ನಡೆಸದಂತೆ ಸೂಚನೆ
09:00 AM (IST) May 09
ಮೂಲ್ಕಿ, ಸುಳ್ಯ, ಪುತ್ತೂರು ಸೇರಿದಂತೆ ದಕ್ಷಿಣ ಕನ್ನಡದ ಹಲವೆಡೆ ಗುಡುಗು ಸಹಿತ ಮಳೆಯಾಗಿದೆ. ಮೂಲ್ಕಿ ತಾಲೂಕಿನಲ್ಲಿ ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ರಸ್ತೆಗಳಲ್ಲಿ ನೀರು ನಿಂತು ಕೃತಕ ನೆರೆ ಸೃಷ್ಟಿಯಾಗಿದ್ದು, ವಾಹನ ಸಂಚಾರಕ್ಕೆ ಮತ್ತು ಸ್ಥಳೀಯರಿಗೆ ತೀವ್ರ ತೊಂದರೆಯಾಗಿದೆ.
08:55 AM (IST) May 09
08:46 AM (IST) May 09
Corruption" ಯಾದಗಿರಿ ಜಿಲ್ಲೆಯ ಗುರುಮಠಕಲ್ ಸಿಪಿಐ ವೀರಣ್ಣ ಎಸ್. ದೊಡ್ಡಮನಿ 1 ಲಕ್ಷ ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಪ್ರಕರಣದ ಸಂಪೂರ್ಣ ವಿವರ ಇಲ್ಲಿದೆ.
08:24 AM (IST) May 09
ಹುಬ್ಬಳ್ಳಿಯ ಬಹುನಿರೀಕ್ಷಿತ ಮೇಲ್ಸೇತುವೆ ಕಾಮಗಾರಿಯು ಶೇ.70ರಷ್ಟು ಪೂರ್ಣಗೊಂಡಿದ್ದು, ಡಿಸೆಂಬರ್ ಅಂತ್ಯದೊಳಗೆ ಸಂಚಾರಕ್ಕೆ ಮುಕ್ತವಾಗುವ ನಿರೀಕ್ಷೆಯಿದೆ. ಶಾಸಕ ಮಹೇಶ ಟೆಂಗಿನಕಾಯಿ ಕಾಮಗಾರಿ ಪರಿಶೀಲನೆ ನಡೆಸಿ, ಕಾಮಗಾರಿ ಚುರುಕುಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.
08:02 AM (IST) May 09
07:57 AM (IST) May 09
07:43 AM (IST) May 09
07:18 AM (IST) May 09