LIVE NOW
Published : May 09, 2026, 07:00 AM ISTUpdated : May 09, 2026, 10:14 AM IST

Karnataka News Live: ರಾಜಕೀಯ ಪ್ರಭಾವ ಬಳಸಿ ಐಪಿಎಲ್‌ ಫೈನಲ್ ಶಿಫ್ಟ್‌ - ಬಿಸಿಸಿಐ ಹೇಳಿಕೆಯೇ ಬೋಗಸ್ ಎಂದ ಡಿಕೆಶಿ!

ಸಾರಾಂಶ

ಕೊಪ್ಪಳ: ಹೊಸ ಪಕ್ಷ ಕಟ್ಟುವ ಕುರಿತು ಈಗಲೇ ಏನು ಹೇಳಲು ಆಗದು, ರಾಜ್ಯಾದ್ಯಂತ ಸುತ್ತಾಟ ನಡೆಸಿ ಜನರ ಅಭಿಪ್ರಾಯ ಪಡೆದ ನಂತರ ಹೊಸ ಪಕ್ಷ ಕಟ್ಟುವ ತೀರ್ಮಾನ ಮಾಡುತ್ತೇನೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ಹೇಳಿದ್ದಾರೆ. ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಹದಗೆಟ್ಟು ಹೋಗಿದೆ. ಯಾರಾದರೂ ಸಿಎಂ ಆಗಲಿ ನಮಗೆ ಗೊತ್ತಿಲ್ಲ. ಆದರೆ, ಉತ್ತಮ ಆಡಳಿತ ಕೊಡಲಿ ಎಂದರು.

ಪಂಚಮಸಾಲಿ ಸಮುದಾಯದ ಎರಡೂ ಟ್ರಸ್ಟ್‌ಗಳಲ್ಲಿ ಭ್ರಷ್ಟರೇ ಇದ್ದಾರೆ. ಟ್ರಸ್ಟ್ ರಾಜಕೀಯೇತರ ಇರಬೇಕು. ರಾಜಕೀಯದಿಂದ ಕೂಡಿದ್ದರೆ ಹೀಗೆಯೇ ಆಗುವುದು. ಕೂಡಲಸಂಗಮ ಮತ್ತು ಹರಿಹರ ಪಂಚಮಸಾಲಿ ಟ್ರಸ್ಟ್‌ಗಳು ರದ್ದಾಗಬೇಕು ಎಂದರು.

ಐಪಿಎಲ್ ಟಿಕೆಟ್ ಕೇಳಿದ್ದರಿಂದ ಬೆಂಗಳೂರಿಂದ ಗುಜರಾತಿಗೆ ಫೈನಲ್ ಪಂದ್ಯ ಕಿತ್ತುಕೊಂಡು ಹೋಯಿತು. ತಮ್ಮ ಭಾಗದ ಸಮಸ್ಯೆ ಕೇಳದವರು ಐಪಿಎಲ್ ಟಿಕೆಟ್ ಕೇಳುತ್ತಾರೆ. ತಮ್ಮ ಕುಟುಂಬದವರಿಗೆ ಎಸಿ ಕುರ್ಚಿ ಕೇಳುತ್ತಾರೆ ಅಂದರೆ ಏನರ್ಥ? ಎಂದು ಕಿಡಿಕಾರಿದರು.

10:14 AM (IST) May 09

ರಾಜಕೀಯ ಪ್ರಭಾವ ಬಳಸಿ ಐಪಿಎಲ್‌ ಫೈನಲ್ ಶಿಫ್ಟ್‌ - ಬಿಸಿಸಿಐ ಹೇಳಿಕೆಯೇ ಬೋಗಸ್ ಎಂದ ಡಿಕೆಶಿ!

ಐಪಿಎಲ್‌ ಫೈನಲ್‌ ಪಂದ್ಯವನ್ನು ರಾಜಕೀಯ ಪ್ರಭಾವ ಬಳಸಿ ಬೆಂಗಳೂರಿನಿಂದ ಅಹಮದಾಬಾದ್‌ಗೆ ಸ್ಥಳಾಂತರಿಸಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ. ಬಿಸಿಸಿಐ ಸುಳ್ಳು ಹೇಳುತ್ತಿದ್ದು, ಗುಜರಾತ್‌ಗೆ ಆರ್ಥಿಕ ಲಾಭ ಮಾಡಿಕೊಡಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ಕಿಡಿಕಾರಿದ್ದಾರೆ. 

Read Full Story

09:59 AM (IST) May 09

ವಿಜಯನಗರ - ತಾಯಿಯನ್ನು ಚಿಕಿತ್ಸೆಗೆ ಕರೆತಂದ ಅಪ್ರಾಪ್ತೆಯ ಮೇಲೆ ಅತ್ಯಾ*ಚಾರವೆಸಗಿದ ಆಸ್ಪತ್ರೆ ನೌಕರ!

ವಿಜಯನಗರ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯೊಂದರಲ್ಲಿ, ಗ್ರೂಪ್ ‘ಡಿ’ ನೌಕರನೊಬ್ಬ 16 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ತಾಯಿಯ ಚಿಕಿತ್ಸೆಗಾಗಿ ಆಸ್ಪತ್ರೆಗೆ ಬರುತ್ತಿದ್ದ ಬಾಲಕಿಯನ್ನು ನಂಬಿಸಿ, ಕ್ವಾರ್ಟರ್ಸ್‌ಗೆ ಕರೆದೊಯ್ದು ಈ ಕೃತ್ಯ ಎಸಗಿದ್ದು, ಆರೋಪಿಯನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಲಾಗಿದೆ.
Read Full Story

09:53 AM (IST) May 09

ಸಂಪುಟ ವಿಸ್ತರಣೆ ಬಗ್ಗೆ ಮಹತ್ವದ ಸುಳಿವು ನೀಡಿದ ದಿನೇಶ್ ಗುಂಡೂರಾವ್, ಹೇಳಿದ್ದೇನು?

ರಾಜ್ಯ ಸರ್ಕಾರಕ್ಕೆ ಮೂರು ವರ್ಷ ತುಂಬಿದ ಬಳಿಕ ಸಚಿವ ಸಂಪುಟ ವಿಸ್ತರಣೆ ಮಾಡುವ ತೀರ್ಮಾನವಿದೆ. ಕೇರಳದಲ್ಲಿ ಸರ್ಕಾರ ರಚನೆಯಾದ ನಂತರ ವರಿಷ್ಠರು ಕರ್ನಾಟಕದ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ.
Read Full Story

09:41 AM (IST) May 09

Amruthadhaare Serial - ಜಯದೇವ್ ಜೈಲಿಂದ ಹೊರಬರುವಂತೆ ಮಾಡಿದ ಗೌತಮ್‌ ಮನೇಲಿರೋ ಅಸಲಿ ವಿಲನ್;‌ ಯಾರದು?

Amruthadhaare Kannada Serial Episode: ಅಮೃತಧಾರೆ ಧಾರಾವಾಹಿಯಲ್ಲಿ ಜಯದೇವ್‌ನನ್ನು ದಿಯಾ ಜೈಲಿಗೆ ಹಾಕಿಸಿದ್ದಳು. ಈಗ ಅವನಿಗೆ ಜಾಮೀನು ಸಿಕ್ಕಿದ್ದು, ಹೊರಗಡೆ ಬಂದಿದ್ದಾನೆ. ಇದರ ಹಿಂದೆ ಇದ್ದೋರು ಯಾರು?

 

Read Full Story

09:05 AM (IST) May 09

BCCI Warns - ಐಪಿಎಲ್ ವೇಳೆ ಹನಿಟ್ರ್ಯಾಪ್ ಬಗ್ಗೆ ಆಟಗಾರರಿಗೆ ಬಿಸಿಸಿಐ ನೀಡಿದ ಗುಪ್ತ ಎಚ್ಚರಿಕೆ ಏನು?

ಐಪಿಎಲ್‌ ವೇಳೆ ಸಂಭವನೀಯ ಹನಿಟ್ರ್ಯಾಪ್‌ ಮತ್ತು ಭದ್ರತಾ ಅಪಾಯಗಳ ಬಗ್ಗೆ ಬಿಸಿಸಿಐ ಆಟಗಾರರಿಗೆ ಎಚ್ಚರಿಕೆ ನೀಡಿದೆ. ಅನಧಿಕೃತ ವ್ಯಕ್ತಿಗಳ ಪ್ರವೇಶವನ್ನು ನಿರ್ಬಂಧಿಸುವಂತೆ ಎಲ್ಲಾ 10 ಫ್ರಾಂಚೈಸಿಗಳಿಗೆ ಮಾರ್ಗಸೂಚಿಗಳನ್ನು ನೀಡಿದ್ದು, ತಂಡದ ಮಾಲೀಕರಿಗೂ ಪಂದ್ಯದ ವೇಳೆ ಆಟಗಾರರೊಂದಿಗೆ ಸಂವಹನ ನಡೆಸದಂತೆ ಸೂಚನೆ

Read Full Story

09:00 AM (IST) May 09

ಮೂಲ್ಕಿ, ಸುಳ್ಯ, ಬಂಟ್ವಾಳ, ಪುತ್ತೂರಿನಲ್ಲಿ ಮಳೆ - ಕೆರೆಗಳಾದ ರಸ್ತೆಗಳು, ಕೃತಕ ನೆರೆ ಸೃಷ್ಟಿ

ಮೂಲ್ಕಿ, ಸುಳ್ಯ, ಪುತ್ತೂರು ಸೇರಿದಂತೆ ದಕ್ಷಿಣ ಕನ್ನಡದ ಹಲವೆಡೆ ಗುಡುಗು ಸಹಿತ ಮಳೆಯಾಗಿದೆ. ಮೂಲ್ಕಿ ತಾಲೂಕಿನಲ್ಲಿ ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ರಸ್ತೆಗಳಲ್ಲಿ ನೀರು ನಿಂತು ಕೃತಕ ನೆರೆ ಸೃಷ್ಟಿಯಾಗಿದ್ದು, ವಾಹನ ಸಂಚಾರಕ್ಕೆ ಮತ್ತು ಸ್ಥಳೀಯರಿಗೆ ತೀವ್ರ ತೊಂದರೆಯಾಗಿದೆ.

Read Full Story

08:55 AM (IST) May 09

ಬೆಂಗಳೂರು - ತಡರಾತ್ರಿ ಹೊಟೇಲ್ ನಲ್ಲಿ ಅಗ್ನಿ ದುರಂತ, ಗಾಢ ನಿದ್ರೆಯಲ್ಲಿದ್ದ ಓರ್ವ ಉಸಿರುಗಟ್ಟಿ ಸಾವು

ಬೆಂಗಳೂರಿನಲ್ಲಿ ತಡರಾತ್ರಿ ಎರಡು ಪ್ರತ್ಯೇಕ ಅಗ್ನಿ ಅವಘಡಗಳು ಸಂಭವಿಸಿವೆ. ನಾಗರಬಾವಿ ಬಳಿಯ ಹೊಟೇಲ್‌ನಲ್ಲಿ ನಡೆದ ದುರಂತದಲ್ಲಿ ಓರ್ವ ವ್ಯಕ್ತಿ ಮೃತಪಟ್ಟು ನಾಲ್ವರು ಗಾಯಗೊಂಡರೆ, ಕೆ.ಆರ್ ಪುರಂ ಬಳಿಯ ಬೈಕ್ ಶೋರೂಂನಲ್ಲಿ 20 ಹೊಸ ಬೈಕ್‌ಗಳು ಸುಟ್ಟು ಕರಕಲಾಗಿವೆ.
Read Full Story

08:46 AM (IST) May 09

ಸಿಪಿಐ ವೀರಣ್ಣ ದೊಡ್ಡಮನಿ ಲೋಕಾಯುಕ್ತ ಬಲೆಗೆ - 1 ಲಕ್ಷ ರೂ. ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಅರೆಸ್ಟ್!

Corruption" ಯಾದಗಿರಿ ಜಿಲ್ಲೆಯ ಗುರುಮಠಕಲ್ ಸಿಪಿಐ ವೀರಣ್ಣ ಎಸ್‌. ದೊಡ್ಡಮನಿ 1 ಲಕ್ಷ ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಪ್ರಕರಣದ ಸಂಪೂರ್ಣ ವಿವರ ಇಲ್ಲಿದೆ.

Read Full Story

08:24 AM (IST) May 09

ಹುಬ್ಬಳ್ಳಿ ಮೇಲ್ಸೇತುವೆ ಸಂಚಾರಕ್ಕೆ ಯಾವಾಗ ಮುಕ್ತ; ಇಲ್ಲಿಗೆ ಕಾಮಗಾರಿಯ ಲೇಟೆಸ್ಟ್ ಮಾಹಿತಿ

ಹುಬ್ಬಳ್ಳಿಯ ಬಹುನಿರೀಕ್ಷಿತ ಮೇಲ್ಸೇತುವೆ ಕಾಮಗಾರಿಯು ಶೇ.70ರಷ್ಟು ಪೂರ್ಣಗೊಂಡಿದ್ದು, ಡಿಸೆಂಬರ್ ಅಂತ್ಯದೊಳಗೆ ಸಂಚಾರಕ್ಕೆ ಮುಕ್ತವಾಗುವ ನಿರೀಕ್ಷೆಯಿದೆ. ಶಾಸಕ ಮಹೇಶ ಟೆಂಗಿನಕಾಯಿ ಕಾಮಗಾರಿ ಪರಿಶೀಲನೆ ನಡೆಸಿ, ಕಾಮಗಾರಿ ಚುರುಕುಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ. 

Read Full Story

08:02 AM (IST) May 09

Karnataka temperature - ಮಳೆಯಿಂದಾಗಿ ತಾಪಮಾನ 3-5°C ಇಳಿಕೆ! ರಾಜ್ಯದ ಬಹುತೇಕ ಕಡೆ ಈಗ 40 ಡಿಗ್ರಿಗಿಂತ ಕಮ್ಮಿ!

ಉತ್ತರ ಒಳನಾಡು ಮತ್ತು ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗಿದ್ದು, ತಾಪಮಾನದಲ್ಲಿ 3 ರಿಂದ 5 ಡಿಗ್ರಿ ಸೆಲ್ಸಿಯಸ್‌ನಷ್ಟು ಇಳಿಕೆಯಾಗಿದೆ. ಕಲಬುರಗಿಯಂತಹ ಜಿಲ್ಲೆಗಳಲ್ಲಿ ತಾಪಮಾನ ಗಣನೀಯವಾಗಿ ಇಳಿದಿದ್ದು, ಬಿಸಿಲಿನಿಂದ ಕಂಗೆಟ್ಟಿದ್ದ ಜನರಿಗೆ ಇದು ನಿರಾಳತೆ ತಂದಿದೆ.
Read Full Story

07:57 AM (IST) May 09

ಸೂರ್ಯಕಾಂತಿ ರೈತರಿಗೆ ಸಿಹಿಸುದ್ದಿ ನೀಡಿದ ಸರ್ಕಾರ; ಫಿಕ್ಸ್ ಆಯ್ತು ಪ್ರತಿ ಕ್ವಿಂಟಾಲ್‌ ದರ

ಸಚಿವ ಶಿವಾನಂದ ಪಾಟೀಲ ಅವರು 2025-26ನೇ ಸಾಲಿನ ಹಿಂಗಾರು ಹಂಗಾಮಿನ ಸೂರ್ಯಕಾಂತಿಯನ್ನು ಬೆಂಬಲ ಬೆಲೆ ಯೋಜನೆಯಡಿ ಪ್ರತಿ ಕ್ವಿಂಟಾಲ್‌ಗೆ ₹7,721 ದರದಲ್ಲಿ ಖರೀದಿಸಲು ಆದೇಶಿಸಿದ್ದಾರೆ. ಈ ಹಿನ್ನೆಲೆಯಲ್ಲಿ, ರಾಜ್ಯದ 11 ಜಿಲ್ಲೆಗಳಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲು ನಿರ್ದೇಶನ ನೀಡಿದ್ದು, ನೋಂದಣಿ ಮತ್ತು ಖರೀದಿ ಪ್ರಕ್ರಿಯೆಗೆ ನಿರ್ದಿಷ್ಟ ಸಂಸ್ಥೆಗಳನ್ನು ನೇಮಕ ಮಾಡಲಾಗಿದೆ.
Read Full Story

07:43 AM (IST) May 09

Umesh Meti Kodimath visit - ಕೋಡಿಮಠ ಶ್ರೀಗಳಗೆ ಬೆಳ್ಳಿ ಕೀರಿಟ ಅರ್ಪಿಸಿದ ಶಾಸಕ ಉಮೇಶ್ ಮೇಟಿ

ಬಾಗಲಕೋಟೆ ಉಪಚುನಾವಣೆಯಲ್ಲಿ ಗೆದ್ದ ನೂತನ ಶಾಸಕ ಉಮೇಶ್ ಮೇಟಿ, ಅರಸೀಕೆರೆಯ ಹಾರನಹಳ್ಳಿ ಕೋಡಿಮಠಕ್ಕೆ ಭೇಟಿ ನೀಡಿದರು. ಅವರು ಪೀಠಾಧ್ಯಕ್ಷ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಯವರಿಗೆ ಬೆಳ್ಳಿ ಕಿರೀಟ ಅರ್ಪಿಸಿ, ಗಂಟೆಗೂ ಹೆಚ್ಚು ಕಾಲ ಗೋಪ್ಯ ಸಮಾಲೋಚನೆ ನಡೆಸಿದರು.
Read Full Story

07:18 AM (IST) May 09

ಚಾಮರಾಜನಗರ - ಸಲೂನ್‌ಗೆ ಬಂದ ಮಂಗಕ್ಕೆ ಹೇರ್‌ ಕಟ್ ಮಾಡಿಸಿದ ಕ್ಷೌರಿಕ!

ಚಾಮರಾಜನಗರ ತಾಲೂಕಿನ ಸಂತೇಮರಹಳ್ಳಿಯ ಸಲೂನ್‌ ಒಂದಕ್ಕೆ ನಿತ್ಯ ಭೇಟಿ ನೀಡುತ್ತಿದ್ದ ಕೋತಿಗೆ, ಅದರ ಮಾಲೀಕ ದೇವರಾಜ್ ತಮಾಷೆಗಾಗಿ ಹೇರ್‌ ಸ್ಟೈಲ್ ಮಾಡಿದ್ದಾರೆ. ಮನುಷ್ಯರಂತೆ ತಲೆಬಗ್ಗಿಸಿ ಕುಳಿತು ಕೋತಿ ಸಹಕರಿಸಿದ್ದು, ಈ ಅಪರೂಪದ ಘಟನೆಯನ್ನು ಗ್ರಾಹಕರೊಬ್ಬರು ವೀಡಿಯೋ ಮಾಡಿದ್ದಾರೆ.
Read Full Story

More Trending News