Published : Apr 08, 2026, 05:58 AM ISTUpdated : Apr 08, 2026, 07:56 PM IST

Karnataka News Live: ಬಂಡೀಪುರದಲ್ಲಿ ಡ್ರೋನ್‌ ಮೂಲಕ ನಿಗಾವಹಿಸುತ್ತಿದ್ದ ಅಧಿಕಾರಿಗಳಿಗೆ ಕಂಡ ಬೇಟೆಗಾರ, ಡ್ರೋನ್‌ ಕಣ್ಣಿಗೆ ಸೆರೆಯಾದವನ ಬಂಧನ!

ಸಾರಾಂಶ

ಪಿಟಿಐ ನವದೆಹಲಿ: ಬಿಹಾರ, ಪಶ್ಚಿಮ ಬಂಗಾಳದಲ್ಲಿ ಭಾರೀ ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿದ್ದ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ಮೇ ತಿಂಗಳಿನಿಂದ ಕರ್ನಾ ಟಕ ಸೇರಿದಂತೆ ದೇಶದ 22 ರಾಜ್ಯಗಳಲ್ಲಿ ಆರಂಭವಾಗಲಿದೆ. ಈ ತಿಂಗಳ 29ಕ್ಕೆ ಪಂಚರಾಜ್ಯ ಚುನಾವಣೆಗಳು ಮುಗಿದ ಬಳಿಕ, ಕರ್ನಾಟಕ ಸೇರಿದಂತೆ ಬಾಕಿ ಉಳಿದಿರುವ 22 ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ (ಎಸ್ ಐಆರ್) ಆರಂಭಿಸಲಾಗುತ್ತದೆ. ಇದಕ್ಕೆ ಸಿದ್ಧತೆ ಆರಂಭಿಸುವಂತೆ ರಾಜ್ಯಗಳಿಗೆ ಚುನಾವಣಾ ಆಯೋಗದಿಂದ ಸೂಚನೆ ಬಂದಿದೆ. ಪ್ರಕ್ರಿಯೆ ವೇಳೆ ಪ್ರತಿ ಮತದಾರನ ದಾಖಲೆಗಳನ್ನು ಸಿಬ್ಬಂದಿ ಪರಿಶೀಲಿಸಲಿದ್ದಾರೆ. ಈಗಾಗಲೇ 11 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ಪರಿಷ್ಕರಣೆ ಪೂರ್ಣಗೊಂಡಿದೆ.

Bandipur Buffer Zone

07:56 PM (IST) Apr 08

ಬಂಡೀಪುರದಲ್ಲಿ ಡ್ರೋನ್‌ ಮೂಲಕ ನಿಗಾವಹಿಸುತ್ತಿದ್ದ ಅಧಿಕಾರಿಗಳಿಗೆ ಕಂಡ ಬೇಟೆಗಾರ, ಡ್ರೋನ್‌ ಕಣ್ಣಿಗೆ ಸೆರೆಯಾದವನ ಬಂಧನ!

ಗುಂಡ್ಲುಪೇಟೆಯ ಬಂಡೀಪುರ ಅರಣ್ಯದಲ್ಲಿ ಥರ್ಮಲ್ ಡ್ರೋನ್ ಬಳಸಿ ಅಕ್ರಮ ಬೇಟೆಗಾರನನ್ನು ನಾಡ ಬಂದೂಕು ಸಮೇತ ಬಂಧಿಸಲಾಗಿದೆ. ಎಸ್‌ಟಿಪಿಎಫ್ ಸಿಬ್ಬಂದಿ ನಡೆಸಿದ ಈ ಕಾರ್ಯಾಚರಣೆಯು ಯಶಸ್ವಿಯಾದರೂ, ಬಂಧಿತನ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಪ್ರತಿಭಟನೆಗೆ ಕಾರಣವಾಗಿದೆ.
Read Full Story

07:18 PM (IST) Apr 08

ಮಧ್ಯಪ್ರಾಚ್ಯ ಯುದ್ಧದಿಂದ ಕರಾವಳಿ ಜಿಲ್ಲೆಯಲ್ಲಿ ಮದುವೆಗಳೇ ಕ್ಯಾನ್ಸಲ್‌! ವಿವಾಹ ನಿಶ್ಚಯ ಆದವರಿಗೆ ಆತಂಕ

ಮಧ್ಯಪ್ರಾಚ್ಯದಲ್ಲಿನ ಯುದ್ಧದ ಪರಿಸ್ಥಿತಿಯಿಂದಾಗಿ ದಕ್ಷಿಣ ಕನ್ನಡದಲ್ಲಿ ನಡೆಯಬೇಕಿದ್ದ ಹಲವು ಮದುವೆಗಳು ಮುಂದೂಡಿಕೆಯಾಗಿವೆ. ವಿದೇಶದಲ್ಲಿರುವ ಕುಟುಂಬ ಸದಸ್ಯರಿಗೆ ಭಾರತಕ್ಕೆ ಬರಲು ಸಾಧ್ಯವಾಗದಿರುವುದು ಮತ್ತು ಆರ್ಥಿಕ ಅನಿಶ್ಚಿತತೆಯೇ ಇದಕ್ಕೆ ಪ್ರಮುಖ ಕಾರಣವಾಗಿದೆ. ಈ ಬೆಳವಣಿಗೆಯು ಕ್ಯಾಟರಿಂಗ್, ಡೆಕೋರೇಷನ್ ಸೇರಿದಂತೆ ಹಲವು ಸ್ಥಳೀಯ ಉದ್ಯಮಗಳ ಮೇಲೆ ಗಂಭೀರ ಪರಿಣಾಮ ಬೀರಿದೆ.
Read Full Story

06:25 PM (IST) Apr 08

ಮನೆಯಲ್ಲಿ ಬ್ರಾಹ್ಮಣರನ್ನು ಇಟ್ಟುಕೊಂಡು ಅವರನ್ನೇ ಟೀಕಿಸ್ತೀರಾ? - ಮಲ್ಲಿಕಾರ್ಜುನ ಖರ್ಗೆಗೆ ಚಲವಾದಿ ನೇರ ಪ್ರಶ್ನೆ

ಬಿಜೆಪಿ ನಾಯಕ ಚಲವಾದಿ ನಾರಾಯಣಸ್ವಾಮಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಖರ್ಗೆಯವರ ವೈಯಕ್ತಿಕ ಜೀವನ, ಅವರ ತಂದೆಯ ಹಿನ್ನೆಲೆ, ಮತ್ತು ಮಕ್ಕಳ ವಿವಾಹದ ಕುರಿತು ಕಟುವಾಗಿ ಟೀಕಿಸಿ, ಹೇಟ್ ಸ್ಪೀಚ್ ಅಡಿ ಅಪ್ಪ-ಮಗನನ್ನು ತಿಹಾರ್ ಜೈಲಿಗೆ ಹಾಕಬೇಕೆಂದು ಆಗ್ರಹಿಸಿದ್ದಾರೆ.
Read Full Story

05:06 PM (IST) Apr 08

ಮಲ್ಲಿಕಾರ್ಜುನ ಖರ್ಗೆ 21ನೇ ಶತಮಾನದ ಮಹಮದ್ ಅಲಿ ಜಿನ್ನಾ, ಪ್ರತಾಪ್ ಸಿಂಹ ಕೆಂಡಾಮಂಡಲ!

ಆರ್‌ಎಸ್‌ಎಸ್‌ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿದ ವಿವಾದಾತ್ಮಕ ಹೇಳಿಕೆಗೆ ಮಾಜಿ ಸಂಸದ ಪ್ರತಾಪ್ ಸಿಂಹ ತೀವ್ರವಾಗಿ ಪ್ರತಿಕ್ರಿಯಿಸಿದ್ದಾರೆ. ಖರ್ಗೆಯವರನ್ನು '21ನೇ ಶತಮಾನದ ಮಹಮ್ಮದ್ ಅಲಿ ಜಿನ್ನಾ' ಎಂದು ಕರೆದಿರುವ ಸಿಂಹ, ಅವರ ಹೇಳಿಕೆಯು ಹಿಂದೂ ಸಮುದಾಯಕ್ಕೆ ಮಾಡಿದ ಅವಮಾನ ಎಂದು ಆರೋಪಿಸಿದ್ದಾರೆ. ಈ ರಾಜಕೀಯ ವಾಕ್ಸಮರವು ರಾಜ್ಯ ಹಾಗೂ ರಾಷ್ಟ್ರ ರಾಜಕಾರಣದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.
Read Full Story

04:13 PM (IST) Apr 08

ಕರ್ನಾಟಕದಲ್ಲಿ ಅಂತರ್ಜಲ ಬಳಕೆ ಗಣನೀಯ ಇಳಿಕೆ, ಭೂಗರ್ಭದಲ್ಲಿ ಅಚ್ಚರಿಯ ತಿರುವು!

2025ನೇ ಸಾಲಿನ ಅಂತರ್ಜಲ ಮೌಲ್ಯಮಾಪನ ವರದಿಯ ಪ್ರಕಾರ, ರಾಜ್ಯದಲ್ಲಿ ಉತ್ತಮ ಮಳೆ ಮತ್ತು ಜಲಸಂರಕ್ಷಣಾ ಕ್ರಮಗಳಿಂದಾಗಿ ಅಂತರ್ಜಲ ಬಳಕೆಯು ಗಣನೀಯವಾಗಿ ಕಡಿಮೆಯಾಗಿದೆ. ಇದರ ಪರಿಣಾಮವಾಗಿ, ಅಂತರ್ಜಲ ಮರುಪೂರಣ ಸಾಮರ್ಥ್ಯವು ಹೆಚ್ಚಾಗಿದ್ದು, 11 ತಾಲೂಕುಗಳ ಅಂತರ್ಜಲ ಸ್ಥಿತಿಗತಿಯಲ್ಲಿ ಸುಧಾರಣೆ ಕಂಡುಬಂದಿದೆ.
Read Full Story

03:56 PM (IST) Apr 08

ನಟ ಧನಂಜಯ್ ಹೊಸ ಸಾಹಸ - ZEE5 ಬೆನ್ನೇರಿ ಬರ್ತಿದೆ 'ಜೆರಾಕ್ಸ್'! ಡಾಲಿಯ ಮೊದಲ ಒಟಿಟಿ ಧಮಾಕಾ ಶುರು!

ಕನ್ನಡದ ಮಣ್ಣಿನ ಸೊಗಡಿನ ಕಥೆಗಳಿಗೆ ಮತ್ತು ಹೊಸ ಪ್ರತಿಭೆಗಳಿಗೆ ಸದಾ ಕೆಂಪು ಹಾಸು ಹಾಸುವ ZEE5 ಒಟಿಟಿ ವೇದಿಕೆ, ಈ ಸರಣಿಗಾಗಿ ಡಾಲಿ ಪಿಕ್ಚರ್ಸ್ ಜೊತೆ ಕೈಜೋಡಿಸಿದೆ. ಈ ಬಗ್ಗೆ ಮಾತನಾಡಿರುವ ಡಾಲಿ ಧನಂಜಯ, "ಓಟಿಟಿ ಕ್ಷೇತ್ರದಲ್ಲಿ ನಿರ್ಮಾಣ ಮಾಡಬೇಕೆಂಬ ಆಸೆ ಬಹಳ ದಿನಗಳಿಂದ ಇತ್ತು. ಆದರೆ ಅದಕ್ಕೆ ಸರಿಯಾದ ಕಥೆ ಮತ್ತು ವೇದಿಕೆಗಾಗಿ ಕಾಯುತ್ತಿದ್ದೆ.

 

Read Full Story

03:53 PM (IST) Apr 08

ಇದು ಬೆಂಗಳೂರಲ್ಲಿ ಮಾತ್ರ, ಸಿಗ್ನಲ್‌ನಲ್ಲಿ ನಿಂತಾದ ಆಟೋ ಚಾಲಕನಿಂದ ಕ್ರಿಪ್ಟೋ ಟ್ರೇಡಿಂಗ್

ಇದು ಬೆಂಗಳೂರಲ್ಲಿ ಮಾತ್ರ, ಸಿಗ್ನಲ್‌ನಲ್ಲಿ ನಿಂತಾದ ಆಟೋ ಚಾಲಕನಿಂದ ಕ್ರಿಪ್ಟೋ ಟ್ರೇಡಿಂಗ್, ಹಲವು ಬಾರಿ ಬೆಂಗಳೂರಿನ ಆಟೋ ಚಾಲಕರು ಟೆಕ್, ಆ್ಯಪ್ ಸೇರಿದಂತೆ ಹಲವು ಕಾರಣಗಳಿಂದ ಭಾರಿ ಸುದ್ದಿಯಾಗಿದ್ದಾರೆ.

 

Read Full Story

03:42 PM (IST) Apr 08

ಈ ಪೌಡರ್ ತಗೊತರ ನಟಿ ಸಂಜನಾ ಆನಂದ್? ಇಷ್ಟು ಕಾಲದ ಬಳಿಕ ಈಗ ಕೊನೆಗೂ ಸತ್ಯ ಬಯಲಾಯ್ತು!

ಇಂಜಿನಿಯರಿಂಗ್ ಪದವೀಧರೆಯಾದ ಸಂಜನಾ ಭರತನಾಟ್ಯ ಕಲಾವಿದೆಯೂ ಹೌದು. ಕನ್ನಡದ ಜೊತೆಗೆ ತೆಲುಗು ಚಿತ್ರರಂಗದಲ್ಲೂ ನಟಿಸಿದ್ದಾರೆ. ಸದ್ಯಕ್ಕೆ ನಟಿ ಸಂಜನಾ ಆನಂದ್ ಕೈನಲ್ಲಿ ಸಾಕಷ್ಟು ಸಿನಿಮಾಗಳಿವೆ. ಸದ್ಯಕ್ಕೆ ನಟಿ ಸಂಜನಾ ಆನಂದ್ ಈ ಸೀಕ್ರೆಟ್ ಹೊರಬಂದಿದ್ದು ಸಖತ್ ವೈರಲ್ ಆಗಿದೆ.

Read Full Story

03:37 PM (IST) Apr 08

ಕನ್ನಡ ಪರ ಹೋರಾಟಗಾರನ ಬಂಧನಕ್ಕೆ ಇಂಗ್ಲಿಷ್‌ ವಾರಂಟ್, ಒಪ್ಪದ ವಾಟಾಳ್‌ರನ್ನು ರಿಕ್ಷಾದಲ್ಲಿ ಎತ್ತಾಕ್ಕೊಂಡು ಹೋದ ಪೊಲೀಸರು!

ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಬಸವೇಶ್ವರನಗರ ಪೊಲೀಸರು ಬಂಧಿಸಿದ್ದಾರೆ. 2021ರಲ್ಲಿ ನಡೆದ ಪ್ರತಿಭಟನೆಗೆ ಸಂಬಂಧಿಸಿದ ಪ್ರಕರಣದಲ್ಲಿ ನ್ಯಾಯಾಲಯದ ವಿಚಾರಣೆಗೆ ಗೈರಾದ ಹಿನ್ನೆಲೆಯಲ್ಲಿ 42ನೇ ಎಸಿಎಂಎಂ ನ್ಯಾಯಾಲಯವು ಅರೆಸ್ಟ್ ವಾರಂಟ್ ಹೊರಡಿಸಿತ್ತು. ಬಂಧನದ ವೇಳೆ ಪೊಲೀಸರು ಮತ್ತು ವಾಟಾಳ್ ನಡುವೆ ವಾಗ್ವಾದ ನಡೆದು, ಹೈಡ್ರಾಮ ಸೃಷ್ಟಿಯಾಯಿತು.
Read Full Story

02:38 PM (IST) Apr 08

ಪತ್ನಿಯಿಂದ ಬೇರೆಯಾದ ನಂತರವೂ ಒತ್ತಾಯದ ದೈಹಿಕ ಸಂಪರ್ಕ, ಪತಿಯ ವಿರುದ್ಧ ಕೇಸ್ ರದ್ದುಪಡಿಸಲು ಹೈಕೋರ್ಟ್ ನಕಾರ

ಪತ್ನಿಯಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದರೂ, ಆಕೆಯ ಇಚ್ಛೆಗೆ ವಿರುದ್ಧವಾಗಿ ದೈಹಿಕ ಸಂಪರ್ಕ ಹೊಂದಿದ ಆರೋಪ ಎದುರಿಸುತ್ತಿದ್ದ ಪತಿಯೊಬ್ಬ, ತನ್ನ ಮೇಲಿನ ಪ್ರಕರಣ ರದ್ದುಪಡಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ತಿರಸ್ಕರಿಸಿದೆ. ಆರೋಪಗಳು ವಿಚಾರಣೆಗೆ ಅರ್ಹವಾಗಿವೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.
Read Full Story

02:35 PM (IST) Apr 08

ಬೆಂಗಳೂರು STRR - ಕೇವಲ 54 ಮೀಟರ್ ರೈಲ್ವೆ ಗರ್ಡರ್ ವಿಳಂಬದಿಂದ ಎರಡು ವರ್ಷ 21 ಕಿ.ಮೀ ರಸ್ತೆ ಸಂಚಾರಕ್ಕೆ ಬ್ರೇಕ್!

ಬೆಂಗಳೂರಿನ ಸ್ಯಾಟಲೈಟ್ ಟೌನ್ ರಿಂಗ್ ರೋಡ್ (STRR) ಯೋಜನೆಯ ಹೊಸಕೋಟೆ ಭಾಗವು, ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಮತ್ತು ನೈಋತ್ಯ ರೈಲ್ವೆ ನಡುವಿನ ರೈಲ್ವೆ ಮೇಲ್ಸೇತುವೆ ಅನುಮೋದನೆ ವಿವಾದದಿಂದಾಗಿ ಅಪೂರ್ಣಗೊಂಡಿದೆ. .

Read Full Story

02:19 PM (IST) Apr 08

ಬೇಸಿಗೆ ಸೆಖೆಗೆ ಮನೆ ಹೊರಗೆ ಮಲಗಿದ್ದವರ ಮೇಲೆ 'ಸೈಕೋ' ದಾಳಿ - ಆರು ಜನರ ತಲೆ ಒಡೆದ ಮಾನಸಿಕ ಅಸ್ವಸ್ಥ

ಗದಗ ಜಿಲ್ಲೆಯ ದೋಣಿ ತಾಂಡಾದಲ್ಲಿ, ಮಾನಸಿಕ ಅಸ್ವಸ್ಥನೋರ್ವ ಮನೆಯಿಂದ ಹೊರಗೆ ಮಲಗಿದ್ದ ಆರು ಜನರ ಮೇಲೆ ದೊಣ್ಣೆಯಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಈ ಘಟನೆಯಲ್ಲಿ ಹಲವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದು, ಹಲ್ಲೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
Read Full Story

01:37 PM (IST) Apr 08

ಹೆಜ್ಜೆ ಮೇಲೆ ಹೆಜ್ಜೆ ಇಟ್ಟು ಬರ್ತಾನೆ, ಮಹಿಳೆಯರ ಒಳಉಡುಪು ಕದ್ದುಕೊಂಡು ಹೋಗ್ತಾನೆ - ಸೈಕೋ ಕಾಟಕ್ಕೆ ಬೆಚ್ಚಿದ ಹೆಂಗಸರು!

ಚಾಮರಾಜನಗರದ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ, ವ್ಯಕ್ತಿಯೊಬ್ಬ ಮಹಿಳೆಯರ ಒಳಉಡುಪುಗಳನ್ನು ಕದ್ದು ವಿಕೃತಿ ಮೆರೆಯುತ್ತಿದ್ದಾನೆ. ಈತನ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ವಿಡಿಯೋ ವೈರಲ್ ಆದ ನಂತರ ಸ್ಥಳೀಯರು ಆತಂಕಗೊಂಡಿದ್ದಾರೆ. ಪೊಲೀಸರು ಆರೋಪಿಗಾಗಿ ಶೋಧ ನಡೆಸುತ್ತಿದ್ದಾರೆ.
Read Full Story

01:17 PM (IST) Apr 08

ಲಕ್ಷ್ಮಣ ಸವದಿ ಬಿಜೆಪಿಗೆ ಬರಲ್ಲ, ಬಂದ್ರೆ ಸೇರಿಸಿಕೊಳ್ಳಲು ಬಿಡಲ್ಲ, ಯತ್ನಾಳರನ್ನ ನಾನೇ ಕರೆತರುತ್ತೇನೆ - ರಮೇಶ್ ಜಾರಕಿಹೊಳಿ

ಶಾಸಕ ಲಕ್ಷ್ಮಣ ಸವದಿ ಯಾವುದೇ ಕಾರಣಕ್ಕೂ ಬಿಜೆಪಿಗೆ ಮರಳುವುದಿಲ್ಲ ಮತ್ತು ಅವರನ್ನು ಸೇರಿಸಿಕೊಳ್ಳುವುದಿಲ್ಲ ಎಂದು ರಮೇಶ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ. ಉಚ್ಚಾಟಿತ ನಾಯಕ ಯತ್ನಾಳರನ್ನು ಪಕ್ಷಕ್ಕೆ ಮರಳಿ ಕರೆತರುವ ಪ್ರಯತ್ನ ಮಾಡುತ್ತಿರುವುದಾಗಿ ತಿಳಿಸಿದರು.

Read Full Story

01:10 PM (IST) Apr 08

ಭಾಗ್ಯಲಕ್ಷ್ಮಿ ಧಾರಾವಾಹಿಯಲ್ಲಿ ಬಿಗ್ ಟ್ವಿಸ್ಟ್ - ತಾಂಡವ್ ಅಸಲಿ ಮುಖವಾಡ ಕಳಚಿದ ಭಾಗ್ಯ, ಈಗ ಶ್ರೇಷ್ಠಾ ಕಿಡ್ನ್ಯಾಪ್.. ಮುಂದೇನು ಗತಿ?

ತಾಂಡವ್‌ನ ಈ ಅತಿಯಾದ ಆತ್ಮವಿಶ್ವಾಸದ ಹಿಂದೆ ಏನಿದೆ? ಶ್ರೇಷ್ಠಾಳನ್ನು ಕಿಡ್ನ್ಯಾಪ್ ಮಾಡಿಸಿದ್ದು ಯಾರು? ಭಾಗ್ಯ ಈ ಸಂಚನ್ನು ಹೇಗೆ ಮೆಟ್ಟಿ ನಿಲ್ಲುತ್ತಾಳೆ? ಎಂಬುದು ಈಗ ಕುತೂಹಲ ಮೂಡಿಸಿದೆ. ಶ್ರೇಷ್ಠಾ ಮದುವೆ ಮನೆಗೆ ಬಾರದಿದ್ದರೆ ಭಾಗ್ಯಳ ಮುಂದಿನ ನಡೆ ಏನು? ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿಯಬೇಕಾದರೆ ಸೀರಿಯಲ್ ನೋಡೋದೊಂದೇ ದಾರಿ.

Read Full Story

12:53 PM (IST) Apr 08

ಕೃತಿಕಾ ರೆಡ್ಡಿ ಕೊ*ಲೆ ಪ್ರಕರಣ - ಲವರ್‌ಗೆ ಮಹೇಂದ್ರ ರೆಡ್ಡಿ ಕಳಿಸಿದ 'ಆ' ಮೆಸೇಜ್‌ಗಳೇ ಈಗ ಆತನಿಗೆ ಮುಳ್ಳು!

ವೈದ್ಯೆ ಕೃತಿಕಾ ರೆಡ್ಡಿ ಹತ್ಯೆ ಪ್ರಕರಣದಲ್ಲಿ, ಎಫ್‌ಎಸ್‌ಎಲ್ ತಜ್ಞರು ಆರೋಪಿ ಪತಿ ಮಹೇಂದ್ರ ರೆಡ್ಡಿಯ ಫೋನ್‌ನಿಂದ ಡಿಲೀಟ್ ಮಾಡಲಾಗಿದ್ದ ಡಿಜಿಟಲ್ ದಾಖಲೆಗಳನ್ನು ಮರುಸಂಪಾದಿಸಿದ್ದಾರೆ. ಈ ದಾಖಲೆಗಳಲ್ಲಿ, ಆತ ತನ್ನ ಮತ್ತೊಬ್ಬ ಪ್ರಿಯತಮೆಗೆ ಕೊಲೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡ ಸಂದೇಶಗಳು ಪತ್ತೆಯಾಗಿದೆ.

Read Full Story

12:53 PM (IST) Apr 08

Bigg Boss ಬಳಿಕದ ಯಾತನೆ, 40 ಸಾವಿರ ಕಾಪಿರೈಟ್ಸ್, 850 ಲಿಂಕ್ಸ್​- ಅಶ್ವಿನಿ ಗೌಡ ಶಾಕಿಂಗ್​ ವಿಷ್ಯ ರಿವೀಲ್​

ಬಿಗ್​ಬಾಸ್​ 11ನೇ ಸೀಸನ್​ನ ಸ್ಪರ್ಧಿ ಅಶ್ವಿನಿ ಗೌಡ ಅವರು ಷೋ ನಂತರ ತಮಗಾದ ಮಾನಸಿಕ ಹಿಂಸೆಯ ಬಗ್ಗೆ ಮಾತನಾಡಿದ್ದಾರೆ. ಟ್ರೋಲ್‌ಗಳಿಂದಾಗಿ ತಮ್ಮ ಆರೋಗ್ಯ ಹದಗೆಟ್ಟು, 15 ದಿನಗಳ ಕಾಲ ಆಸ್ಪತ್ರೆಯಲ್ಲಿ ಡ್ರಿಪ್ಸ್ ಹಾಕಿಸಿಕೊಂಡು ಚಿಕಿತ್ಸೆ ಪಡೆದ ಕರಾಳ ದಿನಗಳನ್ನು ಅವರು ಸಂದರ್ಶನದಲ್ಲಿ ಹಂಚಿಕೊಂಡಿದ್ದಾರೆ.
Read Full Story

12:39 PM (IST) Apr 08

ಕನ್ನಡ ರಂಗಭೂಮಿಗೆ ಬೆಳ್ಳಂಬೆಳಗ್ಗೆ ಶಾಕ್, ಯುವ ನಟ ನೇಣು ಬಿಗಿದು ಸಾವಿಗೆ ಶರಣು, ಕಾರಣ ನಿಗೂಢ!

ಬೆಂಗಳೂರಿನಲ್ಲಿ ಯುವ ರಂಗಭೂಮಿ ಕಲಾವಿದ ಮುರಳಿ ಆತ್ಮಹತ್ಯೆಗೆ ಶರಣಾಗಿದ್ದು, ಅವರ ಮೃತದೇಹ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕಿರುಚಿತ್ರಗಳಲ್ಲಿಯೂ ನಟಿಸಿದ್ದ ಅವರ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ, ಈ ಘಟನೆ ಕನ್ನಡ ರಂಗಭೂಮಿ ವಲಯದಲ್ಲಿ ತೀವ್ರ ಆಘಾತವನ್ನುಂಟುಮಾಡಿದೆ.
Read Full Story

12:15 PM (IST) Apr 08

ನಂಬಿಕೆ-ಪವಾಡಗಳ ಬಗ್ಗೆ ಚೈತ್ರಾ ಕುಂದಾಪುರ ಮಾಡಿರೋ ಪೋಸ್ಟ್; ಸೋಷಿಯಲ್ ಮೀಡಿಯಾದಲ್ಲಿ ಭಾರೀ ಟ್ರಾಫಿಕ್!

ಸದ್ಯ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ಈ ವಿಡಿಯೋಗೆ ಸಾವಿರಾರು ಲೈಕ್ಸ್ ಮತ್ತು ಕಾಮೆಂಟ್‌ಗಳು ಹರಿದು ಬರುತ್ತಿವೆ. "ಲಕ್ಷಣವಾದ ಸೀರೆ ಉಟ್ಟು ದೇವಸ್ಥಾನಕ್ಕೆ ಹೋಗಿರುವ ನಿಮ್ಮ ರೂಪ ಅದ್ಭುತವಾಗಿದೆ", "ಗಂಡ ಕೊಟ್ಟ ಉಡುಗೊರೆಯನ್ನು ಇಂದಿಗೂ ಜೋಪಾನವಾಗಿ ಬಳಸುತ್ತಿರುವುದು ನಿಮ್ಮ ಸಂಸ್ಕಾರವನ್ನು ತೋರಿಸುತ್ತದೆ" ಎಂದು ಅಭಿಮಾನಿಗಳು ಪ್ರಶಂಸಿಸುತ್ತಿದ್ದಾರೆ.

Read Full Story

12:02 PM (IST) Apr 08

ಬಾಗಲಕೋಟೆ - ಯುವ ಪ್ರೇಮಿಗಳು ಸಾವಿಗೆ ಶರಣು - ಗೆಳತಿ ಮೃತಪಟ್ಟ ವಿಚಾರ ತಿಳಿದು ಗೆಳೆಯನೂ ಸಾವು

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನಲ್ಲಿ, ಕ್ಷುಲ್ಲಕ ಜಗಳದ ನಂತರ ಮನನೊಂದು ಪ್ರೇಮಿಗಳು ಸಾವಿಗೆ ಶರಣಾಗಿದ್ದಾರೆ. ಯುವತಿ ಆತ್ಮ*ಹತ್ಯೆ ಮಾಡಿಕೊಂಡಿರುವ ವಿಚಾರ ತಿಳಿದು ಯುವಕನೂ ಸಾವಿಗೆ ಶರಣಾಗಿದ್ದಾನೆ.

Read Full Story

11:13 AM (IST) Apr 08

Breaking - PUC ವಿದ್ಯಾರ್ಥಿಗಳೇ ಗಮನಿಸಿ - ನಾಳೆ ಪ್ರಕಟವಾಗಲಿದೆ ದ್ವಿತೀಯ ಪಿಯುಸಿ ಫಲಿತಾಂಶ

ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವು ಏಪ್ರಿಲ್ 9 ರಂದು ಪ್ರಕಟಗೊಳ್ಳಲಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಖಚಿತಪಡಿಸಿದ್ದಾರೆ. ಉಪ ಚುನಾವಣೆ ಮುಗಿದ ನಂತರ ಸಂಜೆ ವೇಳೆಗೆ ಫಲಿತಾಂಶ ಘೋಷಣೆಯಾಗಲಿದೆ.

Read Full Story

11:05 AM (IST) Apr 08

IPL ಮತ್ತು PSL ಎರಡೂ ಟೂರ್ನಿಯಲ್ಲೂ ಕ್ಯಾಪ್ಟನ್ ಆದ ಟಾಪ್ 8 ನಾಯಕರಿವರು!

ಬೆಂಗಳೂರು: ಸದ್ಯ ಏಕಕಾಲದಲ್ಲಿ ಐಪಿಎಲ್ ಹಾಗೂ ಪಾಕಿಸ್ತಾನ ಸೂಪರ್ ಲೀಗ್ ಟಿ20 ಟೂರ್ನಿ ನಡೆಯುತ್ತಿದೆ. ಕರಾಚಿ ಕಿಂಗ್ಸ್ ನಾಯಕ ಡೇವಿಡ್ ವಾರ್ನರ್ ಅರೆಸ್ಟ್‌ ಆದ ಬೆನ್ನಲ್ಲೇ ಕ್ಯಾಪ್ಟನ್ಸ್ ವಿಚಾರ ಮುನ್ನಲೆಗೆ ಬಂದಿದೆ. ಇದೀಗ ಐಪಿಎಲ್ & ಪಿಎಸ್‌ಎಲ್‌ನಲ್ಲಿ ಕ್ಯಾಪ್ಟನ್ ಆದ ಟಾಪ್-8 ಆಟಗಾರರು ಯಾರೆಂದು ನೋಡೋಣ.

 

Read Full Story

10:55 AM (IST) Apr 08

ಕಲಬುರಗಿ - ಶರಣಬಸವೇಶ್ವರ ರಥೋತ್ಸವ ವೇಳೆ ದುರಂತ - ಭಕ್ತನ ತೊಡೆ ಮೇಲೆ ಹರಿದ ಚಕ್ರ, ಸ್ಥಳದಲ್ಲೇ ದುರ್ಮರಣ

ಕಲಬುರಗಿ ತಾಲೂಕಿನ ಹಾಗರಗುಂಡಗಿ ಗ್ರಾಮದಲ್ಲಿ ನಡೆದ ಶ್ರೀ ಶರಣಬಸವೇಶ್ವರ ರಥೋತ್ಸವದ ವೇಳೆ ದುರಂತವೊಂದು ಸಂಭವಿಸಿದೆ. ರಥ ಎಳೆಯುವಾಗ ನೂಕುನುಗ್ಗಲಿನಲ್ಲಿ ಆಯತಪ್ಪಿ ಬಿದ್ದ ಭಕ್ತ ವಿನೋದ ರೆಡ್ಡಿ (49) ಅವರ ಮೇಲೆ ರಥದ ಚಕ್ರ ಹರಿದು, ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
Read Full Story

10:23 AM (IST) Apr 08

ಡಿಕೆಶಿ ಅನುಭವಿ ರಾಜಕಾರಣಿ ಆಗಿದ್ರೂ ರಾಹುಲ್ ಗಾಂಧಿಯನ್ನ ಮೆಚ್ಚಿಸಲು ಕೇಂದ್ರದ ವಿರುದ್ಧ ಟೀಕೆ - ಪ್ರಲ್ಹಾದ್ ಜೋಶಿ ಖಡಕ್ ತಿರುಗೇಟು

ಎಲ್‌ಪಿಜಿ ಕೊರತೆ ಕುರಿತ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಆರೋಪಗಳನ್ನು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಳ್ಳಿಹಾಕಿದ್ದಾರೆ. ರಾಹುಲ್ ಗಾಂಧಿಯವರನ್ನು ಮೆಚ್ಚಿಸಲು ಈ ರೀತಿ ಹೇಳಿಕೆ ನೀಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

Read Full Story

10:04 AM (IST) Apr 08

ಐಪಿಎಲ್‌ನಿಂದ ತನ್ನ ಕ್ರಿಕೆಟ್ ಬದುಕೇ ಹಾಳು ಮಾಡಿಕೊಂಡೆ - ಅಚ್ಚರಿ ಹೇಳಿಕೆ ಕೊಟ್ಟ ಕೆವಿನ್ ಪೀಟರ್‌ಸನ್!

ಗುವಾಹಟಿ: ಇಂಗ್ಲೆಂಡ್ ದಿಗ್ಗಜ ಕ್ರಿಕೆಟಿಗ ಕೆವಿನ್ ಪೀಟರ್‌ಸನ್ ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಿ ಬೆಂಬಲಿಸಲು ಹೋಗಿ ತಮ್ಮ ಕ್ರಿಕೆಟ್ ಬದುಕು ಹಾಳು ಮಾಡಿಕೊಂಡೆ ಎಂದು ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಅಷ್ಟಕ್ಕೂ ಕೆವಿನ್ ಪೀಟರ್‌ಸನ್ ಏನಂದ್ರು ನೋಡೋಣ ಬನ್ನಿ.

Read Full Story

09:36 AM (IST) Apr 08

ಲೋಕಾಯುಕ್ತ ದಾಳಿ - ಬಳ್ಳಾರಿ ಅಧಿಕಾರಿ ಬಳಿ 44 ಎಕರೆ, 14 ಸೈಟ್‌, 3 ಮನೆ!

ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಆರೋಪದ ಮೇಲೆ ಲೋಕಾಯುಕ್ತ ಪೊಲೀಸರು ರಾಜ್ಯದ 8 ಸರ್ಕಾರಿ ಅಧಿಕಾರಿಗಳ ಮೇಲೆ ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಒಟ್ಟು 36.92 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಚರ ಹಾಗೂ ಸ್ಥಿರಾಸ್ತಿ ಪತ್ತೆಯಾಗಿದ್ದು, ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
Read Full Story

09:19 AM (IST) Apr 08

ಚಿನ್ನಸ್ವಾಮಿ ಸ್ಟೇಡಿಯಂ; ಫ್ಯಾನ್ಸ್‌ಗೆ ಮತ್ತೊಂದು ಗುಡ್ ನ್ಯೂಸ್ ಕೊಡಲು ರೆಡಿಯಾದ ಕೆಎಸ್‌ಸಿಎ!

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣವನ್ನು ನವೀಕರಿಸಲು ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ (ಕೆಎಸ್‌ಸಿಎ) ಮುಂದಾಗಿದೆ. ಈ ಮಹತ್ವಾಕಾಂಕ್ಷೆಯ ಯೋಜನೆಯಲ್ಲಿ, ಕ್ರೀಡಾಂಗಣದ ಆಸನ ಸಾಮರ್ಥ್ಯವನ್ನು 20,000ದಷ್ಟು ಹೆಚ್ಚಿಸಲು ಮತ್ತು ಪ್ರೇಕ್ಷಕರಿಗೆ ಸುಧಾರಿತ ಸೌಲಭ್ಯಗಳನ್ನು ಒದಗಿಸಲು ಟೆಂಡರ್ ಪ್ರಕ್ರಿಯೆ ಆರಂಭಿಸಲಾಗಿದೆ.
Read Full Story

09:08 AM (IST) Apr 08

ನನ್ನ ಅಣ್ಣ ಸಿಎಂ ಆಗಬೇಕೆಂಬ ಆಸೆ ಇದೆ, ಈಗಲೇ ಆಗ್ತಾನೆ ಅಂತಾ ನಾನು ಹೇಳಿಲ್ಲ - ಡಿಕೆ ಸುರೇಶ್

ನನ್ನ ಅಣ್ಣ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಬೇಕೆಂಬ ಆಸೆಯಿದೆ, ಆದರೆ ಈಗಲೇ ಅಲ್ಲ ಎಂದು ಸಂಸದ ಡಿ.ಕೆ. ಸುರೇಶ್ ಸ್ಪಷ್ಟಪಡಿಸಿದ್ದಾರೆ. ಇದೇ ವೇಳೆ, ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆಯಿಂದ ದಕ್ಷಿಣ ಭಾರತಕ್ಕೆ ಅನ್ಯಾಯವಾಗಲಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಅವರು ಗಂಭೀರ ಆರೋಪ ಮಾಡಿದ್ದಾರೆ.
Read Full Story

08:50 AM (IST) Apr 08

ಬೇಸಿಗೆ ಸೆಕೆ ಅಂತಾ ಬಾಗಿಲು ತೆರೆದು ಮಲಗ್ತೀರಾ ಎಚ್ಚರ, ತಾಳಿ ಬಿಚ್ಚಿಟ್ಟು ಮಲಗಿದ್ದ ಮಹಿಳೆ ಬೆಳಗ್ಗೆ ನೋಡಿದಾಗ ಶಾಕ್!

ಬೆಂಗಳೂರಿನಲ್ಲಿ ಬೇಸಿಗೆಯ ಸೆಕೆಯಿಂದಾಗಿ ರಾತ್ರಿ ಮನೆಯ ಬಾಗಿಲು ತೆರೆದು ಮಲಗಿದ್ದ ಮಹಿಳೆಯ ಮನೆಯೊಳಗೆ ನುಗ್ಗಿದ ಕಳ್ಳರು, ಚಿನ್ನದ ತಾಳಿ ಹಾಗೂ ಎರಡು ಮೊಬೈಲ್‌ಗಳನ್ನು ಕಳವು ಮಾಡಿದ್ದಾರೆ. ಈ ಸಂಬಂಧ ಅಶೋಕನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
Read Full Story

08:02 AM (IST) Apr 08

ಸಂಸ್ಕೃತ ಭಾರತದ ಶ್ರೀಮಂತ ಭಾಷೆ - ದೀಕ್ಷಾಂತ ಘಟಿಕೋತ್ಸವದಲ್ಲಿ ರಾಜ್ಯಪಾಲರ ಮಾತು

ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ, ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ಸಂಸ್ಕೃತದ ಜ್ಞಾನವನ್ನು ತಂತ್ರಜ್ಞಾನದೊಂದಿಗೆ ಮಿಳಿತಗೊಳಿಸಲು ಕರೆ ನೀಡಿದರು. ಸಾಕ್ಷರತೆ ಹೆಚ್ಚಾದಂತೆ ನೈತಿಕ ಮೌಲ್ಯಗಳು ಕುಸಿಯುತ್ತಿವೆ ಎಂದು ಡಾ.ಸಿ.ಎನ್.ಮಂಜುನಾಥ್ ಕಳವಳ ವ್ಯಕ್ತಪಡಿಸಿದರು. 

Read Full Story

07:39 AM (IST) Apr 08

Kali Tiger Reserve Eco-Sensitive Zone - ಕಾಳಿ ಹುಲಿ ಸಂರಕ್ಷಿತ ಪ್ರದೇಶ ಇನ್ನು ಪರಿಸರ ಸೂಕ್ಷ್ಮ ವಲಯ - ಕೇಂದ್ರ ಸರ್ಕಾರ ಮಹತ್ವದ ಘೋಷಣೆ

ಕೇಂದ್ರ ಅರಣ್ಯ ಮತ್ತು ಪರಿಸರ ಇಲಾಖೆಯು ಉತ್ತರ ಕನ್ನಡ ಜಿಲ್ಲೆಯ ಕಾಳಿ ಹುಲಿ ಸಂರಕ್ಷಿತ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದು ಘೋಷಿಸಿ ಕರಡು ಅಧಿಸೂಚನೆ ಹೊರಡಿಸಿದೆ. ಈ ಅಧಿಸೂಚನೆಯ ಪ್ರಕಾರ, 663 ಚದರ ಕಿಲೋಮೀಟರ್ ವ್ಯಾಪ್ತಿಯ ಪ್ರದೇಶವನ್ನು ಸೂಕ್ಷ್ಮ ವಲಯವೆಂದು ಪರಿಗಣಿಸಲಾಗಿದೆ.

Read Full Story

07:12 AM (IST) Apr 08

Nadoja award controversy - ಡಾಕ್ಟರೆಟ್‌ ಕೊಡುವ ವಿಚಾರದಲ್ಲಿ ವಿವಿಗಳು ಸ್ವತಂತ್ರ, ಹಸ್ತಕ್ಷೇಪ ಮಾಡೋಲ್ಲ ಎಂದ ಹೈಕೋರ್ಟ್‌

ಡಾ. ಎಚ್.ಸಿ. ಸತ್ಯನ್ ಅವರಿಗೆ ಹಂಪಿ ಕನ್ನಡ ವಿಶ್ವವಿದ್ಯಾಲಯವು ನೀಡಿದ ನಾಡೋಜ ಪದವಿಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಪದವಿ ಪ್ರದಾನದಂತ ವಿಷಯಗಳಲ್ಲಿ ವಿಶ್ವವಿದ್ಯಾಲಯಗಳು ಸ್ವತಂತ್ರವಾಗಿವೆ ಮತ್ತು ಆಧಾರರಹಿತ ಆರೋಪ ಸಲ್ಲ ಎಂದಿದೆ.

Read Full Story

06:58 AM (IST) Apr 08

ಕಲಬುರಗಿ ಸರ್ಕಾರಿ ಶಿಕ್ಷಕಿ ಹತ್ಯೆ ರಹಸ್ಯ ಬಯಲು; ಕೊಟ್ಟ ಹಣ ವಾಪಸ್ ಕೇಳಿದ್ದಕ್ಕೆ ಸ್ನೇಹಿತನಿಂದಲೇ ಕೊಲೆ!

ಕಮಲಾಪುರ ತಾಲೂಕಿನ ಕಲಮೂಡ ಬಳಿ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾದ ಶಿಕ್ಷಕಿ ಜ್ಯೋತಿ ಕಪಾಳ ಹತ್ಯೆ ಪ್ರಕರಣವನ್ನು ಪೊಲೀಸರು 24 ಗಂಟೆಯೊಳಗೆ ಭೇದಿಸಿದ್ದಾರೆ. ಹಣಕಾಸಿನ ವಿಚಾರಕ್ಕೆ ಸ್ನೇಹಿತನೇ ಜ್ಯೋತಿಯನ್ನು ಕೊಲೆ ಮಾಡಿ, ಸಾಕ್ಷ್ಯ ನಾಶಪಡಿಸಲು ಪೆಟ್ರೋಲ್ ಹಾಕಿ ಸುಟ್ಟಿರುವುದಾಗಿ ತನಿಖೆಯಿಂದ ತಿಳಿದುಬಂದಿದೆ.
Read Full Story

06:40 AM (IST) Apr 08

Mallikarjun Kharge - ಬಿಜೆಪಿ, ಆರೆಸ್ಸೆಸ್‌ ಅನ್ನು ವಿಷ ಸರ್ಪಕ್ಕೆ ಹೋಲಿಸಿದ ಕೇಸ್‌ - ಖರ್ಗೆ ಬಂಧನಕ್ಕೆ ರಾಜ್ಯ ಬಿಜೆಪಿ ದೂರು

ಬಿಜೆಪಿ ಮತ್ತು ಆರೆಸ್ಸೆಸ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಬಂಧನಕ್ಕೆ ಆಗ್ರಹಿಸಿ ಬಿಜೆಪಿ ನಾಯಕರು ಡಿಜಿ-ಐಜಿಪಿಗೆ ದೂರು ನೀಡಿದ್ದಾರೆ. ಜೊತೆಗೆ, ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಜಾಹೀರಾತು ವೆಚ್ಚ ಅಭ್ಯರ್ಥಿಗಳ ಖಾತೆಗೆ ಸೇರಿಸುವಂತೆ ಚುನಾವಣಾ ಆಯೋಗಕ್ಕೂ ದೂರು

Read Full Story

06:17 AM (IST) Apr 08

1 ಐಪಿಎಲ್ ಟಿಕೆಟ್ ₹20,000! ಬ್ಲ್ಯಾಕ್‌ ಟಿಕೆಟ್ ಮಾರುತ್ತಿದ್ದ 11 ಮಂದಿ ಅರೆಸ್ಟ್

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಆರ್‌ಸಿಬಿ ಮತ್ತು ಸಿಎಸ್‌ಕೆ ಪಂದ್ಯದ ಐಪಿಎಲ್ ಟಿಕೆಟ್‌ಗಳನ್ನು ಕಾಳ ಸಂತೆಯಲ್ಲಿ ದುಬಾರಿ ಬೆಲೆಗೆ ಮಾರಾಟ ಮಾಡುತ್ತಿದ್ದ 11 ಮಂದಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆನ್‌ಲೈನ್ ಟಿಕೆಟ್ ವರ್ಗಾವಣೆ ವ್ಯವಸ್ಥೆಯನ್ನು ದುರ್ಬಳಕೆ ಮಾಡಿಕೊಂಡು ಕೃತ್ಯ.

Read Full Story

More Trending News