LIVE NOW
Published : Aug 01, 2026, 07:23 AM ISTUpdated : Aug 01, 2026, 11:18 AM IST

State News Live: ಪರೀಕ್ಷೆ ವೇಳೆ ಹಿಜಾಬ್ ಹಾಕುವಂತಿಲ್ಲ, ಧಾರ್ಮಿಕ ಉಡುಪುಗಳ ಗೊಂದಲ ಬಗ್ಗೆ ಪ್ರಿಯಾಂಕ ಖರ್ಗೆ ಸ್ಪಷ್ಟನೆ

ಸಾರಾಂಶ

ಬೆಂಗಳೂರು (ಆ.1): ಜೆನ್‌ಝೀ ಹೋರಾಟ ಬೆನ್ನಲ್ಲೇ ಕೆಪಿಎಸ್ಸಿ ಹಾಗೂ ಕೆಇಎ ನಡೆಸುವ ನೇಮಕಾತಿ ಪರೀಕ್ಷೆ ಸಮರ್ಪಕತೆ ಪರಿಶೀಲನೆಗಾಗಿ ಸರ್ಕಾರ ನಿವೃತ್ತ ಮುಖ್ಯ ಕಾರ್ಯದರ್ಶಿ ಎಸ್.ವಿ. ರಂಗನಾಥ್ ಅಧ್ಯಕ್ಷತೆಯ ಸಮಿತಿ ರಚಿಸಿದೆ. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ದ ನಡೆದ ಜೆನ್‌ಝೀ ಪ್ರತಿಭಟನೆ ಗಮನದಲ್ಲಿರಿಸಿ ರಾಜ್ಯದಲ್ಲಿ ನಡೆಯಲಿರುವ 70 ಸಾವಿರಕ್ಕೂ ಹೆಚ್ಚಿನ ಹುದ್ದೆಗಳನೇಮಕಾತಿ ಪ್ರಕ್ರಿಯೆಯಲ್ಲಿ ಯಾವುದೇ ಅಕ್ರಮ ನಡೆಯದಂತೆ ತಡೆಯಲು ಸರ್ಕಾರ ಹೆಜ್ಜೆ ಇಟ್ಟಿದೆ. ಅದರೊಂದಿಗೆ ಇಂದಿನ ರಾಜ್ಯ ಸುದ್ದಿಗಳ ಅಪ್‌ಡೇಟ್‌ ಇಲ್ಲಿದೆ.

 

11:18 AM (IST) Aug 01

ಪರೀಕ್ಷೆ ವೇಳೆ ಹಿಜಾಬ್ ಹಾಕುವಂತಿಲ್ಲ, ಧಾರ್ಮಿಕ ಉಡುಪುಗಳ ಗೊಂದಲ ಬಗ್ಗೆ ಪ್ರಿಯಾಂಕ ಖರ್ಗೆ ಸ್ಪಷ್ಟನೆ

ರಾಜ್ಯದಲ್ಲಿ ಆಗಸ್ಟ್ 2ರಂದು ಪೊಲೀಸ್ ಕಾನ್ಸ್‌ಸ್ಟೇಬಲ್ ಪರೀಕ್ಷೆ ನಡೆಯಲಿದೆ. ಪರೀಕ್ಷೆ ಕುರಿತ ಗೊಂದಲಗಳಿಗೆ ಗೃಹ ಸಚಿವ ಪ್ರಿಯಾಂಕ ಖರ್ಗೆ ಸ್ಪಷ್ಟನೆ ನೀಡಿದ್ದಾರೆ. ಪ್ರಮುಖವಾಗಿ ಹಿಜಾಬ್ ಹಾಕಿ ಪರೀಕ್ಷೆ ಬರೆಯಲು ಅವಕಾಶವಿಲ್ಲ ಎಂದಿದ್ದಾರೆ.

Read Full Story

11:05 AM (IST) Aug 01

Ananya Birla - ಬದುಕು ಕಳೆದುಕೊಂಡವರ ಬಾಳಿಗೆ ಬೆಳಕಾದ ಆರ್‌ಸಿಬಿ ಒಡತಿ ಅನನ್ಯ ಬಿರ್ಲಾ!

ಉದ್ಯಮಿ ಮತ್ತು ಆರ್‌ಸಿಬಿ ಒಡತಿ ಅನನ್ಯ ಬಿರ್ಲಾ ಅವರು ಅಸ್ಸಾಂ ಪ್ರವಾಹ ಪೀಡಿತ ಪ್ರದೇಶಗಳಿಗೆ ಸ್ವತಃ ಭೇಟಿ ನೀಡಿ, ಸಂತ್ರಸ್ತರ ಕಷ್ಟಗಳನ್ನು ಆಲಿಸಿದ್ದಾರೆ. ಅವರು ಆಹಾರ ಮತ್ತು ಅಗತ್ಯ ವಸ್ತುಗಳನ್ನು ವಿತರಿಸಿ, ತಮ್ಮ ಮಾನವೀಯ ನಡೆಯ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದು, ಈ ಅನುಭವವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ.

Read Full Story

11:01 AM (IST) Aug 01

ಕದ್ದುಮುಚ್ಚಿ ತಮಿಳುನಾಡಿಗೆ ಕಾವೇರಿ ನೀರು? ಪತ್ತೆ ಹಚ್ಚಲು ಮಂಡ್ಯ ಹುಡುಗನ ಖತರ್ನಾಕ್‌ ಪ್ಲ್ಯಾನ್‌

ಕೆಆರ್‌ಎಸ್ ಜಲಾಶಯದಿಂದ ತಮಿಳುನಾಡಿಗೆ ರಾತ್ರಿ ವೇಳೆ ಕದ್ದುಮುಚ್ಚಿ ನೀರು ಹರಿಸಲಾಗುತ್ತಿದೆ ಎಂಬ ಶಂಕೆಯ ಮೇರೆಗೆ, ಶ್ರೀರಂಗಪಟ್ಟಣದ ಯುವಕನೊಬ್ಬ ಸತ್ಯಾಸತ್ಯತೆ ಪರೀಕ್ಷಿಸಲು ಮುಂದಾಗಿದ್ದಾನೆ.

Read Full Story

10:51 AM (IST) Aug 01

'ಇವರೇನು ಪೊಲೀಸ್ ಅಧಿಕಾರಿಯೋ? ರಾಜಕಾರಣಿಯೋ?' ಆ ವಿಡಿಯೋ ನೋಡಿ ಚಾಮರಾಜನಗರ ಎಸ್‌ಪಿ ವಿರುದ್ಧ ಹೈಕೋರ್ಟ್ ಗರಂ ಆಗಿದ್ದೇಕೆ?

ಕೊಳ್ಳೇಗಾಲದ ಮಸಣಾಪುರದಲ್ಲಿ ಅಂಬೇಡ್ಕರ್ ನಾಮಫಲಕಕ್ಕೆ ಅವಮಾನಿಸಿದ ಆರೋಪದ ಮೇಲೆ ಮಾನಸಿಕ ಅಸ್ವಸ್ಥ ಯುವಕನನ್ನು ಬೆತ್ತಲೆಗೊಳಿಸಿ ಥಳಿಸಲಾಗಿದೆ. ಈ ಘಟನೆಗೆ ತೀವ್ರ ಆಘಾತ ವ್ಯಕ್ತಪಡಿಸಿದ ಹೈಕೋರ್ಟ್, ರಾಜ್ಯದಲ್ಲಿ ಅರಾಜಕತೆ ತಲೆ ಎತ್ತಿದೆ ಎಂದು ಕಿಡಿಕಾರಿದ್ದು, ವಿಸ್ತೃತ ತನಿಖೆಗೆ ಆದೇಶಿಸಿದೆ.
Read Full Story

09:49 AM (IST) Aug 01

ನಗರದಲ್ಲಿ ಇನ್ಮುಂದೆ ಇಂಗ್ಲೆಂಡ್‌ನ ಸ್ಕಾಟಿಷ್‌ ಸಾಲ್ಮನ್‌ ಮೀನು ಲಭ್ಯ

ಯುನೈಟೆಡ್ ಕಿಂಗ್ಡಮ್ ಮತ್ತು ಭಾರತ ನಡುವಿನ ಸಮಗ್ರ ಆರ್ಥಿಕ ಮತ್ತು ವ್ಯಾಪಾರ ಒಪ್ಪಂದದ (ಸಿಇಟಿಎ) ಅಡಿಯಲ್ಲಿ, ಯಾವುದೇ ಆಮದು ಸುಂಕವಿಲ್ಲದ ಸ್ಕಾಟಿಷ್ ಸಾಲ್ಮನ್ ಮೀನಿನ ಮೊದಲ ಲೋಡ್ ಬೆಂಗಳೂರನ್ನು ತಲುಪಿದೆ.

Read Full Story

09:13 AM (IST) Aug 01

Viral Robot - ಈ ರೋಬೋಟ್ ನೋಡೋಕೆ ರಾಕ್ಷಸನ ತರ, ಆದರೆ ಆಪತ್ಬಾಂಧವ, ರಕ್ಷಿಸೋಕೆ ಬಂದ್ರೂ ಜನ ಹೆದರಿ ಸಾಯ್ತಾರೆ!

ಕೊಂಬು, ಚೈನ್‍ಸಾ ಮತ್ತು ನಾಲ್ಕು ಕಾಲುಗಳಿರುವ 'ತ್ರೀಹಾಲ್ವ್ಸ್' ಎಂಬ ರೋಬೋಟ್ ತನ್ನ ಭಯಾನಕ ರೂಪದಿಂದ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಆದರೆ, ಕಾಡು ಕಡಿಯುವಂತಹ ಅಪಾಯಕಾರಿ ಕೆಲಸಗಳಲ್ಲಿ ಮನುಷ್ಯರಿಗೆ ಸಹಾಯ ಮಾಡಲು ಕ್ಯಾಲಿಫೋರ್ನಿಯಾದ 'ಸ್ಯಾಟಿರಸ್' ಕಂಪನಿ ಇದನ್ನು ವಿನ್ಯಾಸಗೊಳಿಸಿದೆ.
Read Full Story

07:26 AM (IST) Aug 01

Gen-Z ಹೋರಾಟದ ಬೆನ್ನಲ್ಲೇ ಎಚ್ಚೆತ್ತ ಸಿಎಂ: ಯಾವುದೇ ಲೋಪವಾಗದಂತೆ ಪರೀಕ್ಷೆ ನಡೆಸಲು ತಾಕೀತು, ಪರಿಶೀಲನೆಗಾಗಿ ರಂಗನಾಥ್‌ ಸಮಿತಿ ರಚನೆ

ಜೆನ್‌ಝೀ ಹೋರಾಟದ ಪರೋಕ್ಷ ಪರಿಣಾಮವೋ ಎಂಬಂತೆ ಕೆಪಿಎಸ್ಸಿ ಹಾಗೂ ಕೆಇಎ ನಡೆಸುವ ನೇಮಕಾತಿ ಪರೀಕ್ಷೆ ಸಮರ್ಪಕತೆ ಪರಿಶೀಲನೆಗಾಗಿ ರಾಜ್ಯ ಸರ್ಕಾರ ನಿವೃತ್ತ ಮುಖ್ಯ ಕಾರ್ಯದರ್ಶಿ ಎಸ್‌.ವಿ.ರಂಗನಾಥ್ ಅಧ್ಯಕ್ಷತೆಯಲ್ಲಿ ಸಮಿತಿಯೊಂದನ್ನು ರಚಿಸಿದೆ.

 

Read Full Story

07:25 AM (IST) Aug 01

ನಾಳೆ 3991 ಪೇದೆ ನೇಮಕಾತಿ ಪರೀಕ್ಷೆ: ಮೊದಲ ಬಾರಿಗೆ ಒಎಂಆರ್ ದೊಡ್ಡ ಬದಲಾವಣೆ, ಅಭ್ಯರ್ಥಿಗಳೇ ಈ ವಿಷಯ ತಿಳಿದಿರಲಿ!

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) 3,991 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಲಿಖಿತ ಪರೀಕ್ಷೆ ನಡೆಸುತ್ತಿದೆ. ಈ ಬಾರಿ ಹೊಸ ಓಎಂಆರ್ ಸ್ಕ್ಯಾನಿಂಗ್ ವ್ಯವಸ್ಥೆ, ಕಟ್ಟುನಿಟ್ಟಿನ ವಸ್ತ್ರ ಸಂಹಿತೆ ಮತ್ತು ಎಲೆಕ್ಟ್ರಾನಿಕ್ ಸಾಧನಗಳ ನಿಷೇಧದಂತಹ ಬಿಗಿ ಭದ್ರತಾ ಕ್ರಮಗಳನ್ನು ಜಾರಿಗೊಳಿಸಲಾಗಿದೆ.

 

Read Full Story

07:25 AM (IST) Aug 01

Ujire: ಉಜಿರೆಯಲ್ಲಿ ರಾಷ್ಟ್ರಪತಿಗಳ ಹೆಸರಲ್ಲಿದೆ 6.20 ಎಕ್ರೆ ಜಮೀನು!

ದಕ್ಷಿಣ ಕನ್ನಡದ ಉಜಿರೆಯಲ್ಲಿ 6.20 ಎಕ್ರೆ ಜಮೀನು ರಾಷ್ಟ್ರಪತಿಗಳ ಹೆಸರಿನಲ್ಲಿರುವುದು ಸರ್ಕಾರದ ದಿಶಾಂಕ್ ಆ್ಯಪ್ ಮೂಲಕ ಬೆಳಕಿಗೆ ಬಂದಿದೆ. ಸರ್ವೇ ನಂಬರ್ 208ರ ಈ ಭೂಮಿಯ ಮಾಲೀಕತ್ವದ ಕುರಿತು ಗೊಂದಲ ಸೃಷ್ಟಿ ಈ ಬಗ್ಗೆ ಕಂದಾಯ ಇಲಾಖೆ ಸ್ಪಷ್ಟನೆ ನೀಡಬೇಕೆಂದು ಎಂಜಿನಿಯರ್ ಜಗದೀಶ್ ಪ್ರಸಾದ್ ಆಗ್ರಹಿಸಿದ್ದಾರೆ.

 

Read Full Story

07:24 AM (IST) Aug 01

Siddaramaiah Shopping: ಮಂತ್ರಿ ಮಾಲ್‌ನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಶಾಪಿಂಗ್‌!

ಸಿಎಂ ಆಗಿದ್ದಾಗ ಸದಾ ಬ್ಯುಸಿಯಾಗಿರುತ್ತಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಬಳಿಕ ಈಗ ಫುಲ್ ರಿಲ್ಯಾಕ್ಸ್ ಮೂಡ್‌ನಲ್ಲಿದ್ದಾರೆ. ಸಂಪಿಗೆ ರಸ್ತೆಯ ಮಂತ್ರಿ ಮಾಲ್‌ಗೆ ಆಗಮಿಸಿ ಸಾಮಾನ್ಯರಂತೆ ಶಾಪಿಂಗ್ ಮಾಡಿದ್ದು ವಿಡಿಯೋ ವೈರಲ್ ಆಗಿದೆ.

 

Read Full Story

More Trending News