ಬೆಂಗಳೂರು (ಆ.1): ಜೆನ್ಝೀ ಹೋರಾಟ ಬೆನ್ನಲ್ಲೇ ಕೆಪಿಎಸ್ಸಿ ಹಾಗೂ ಕೆಇಎ ನಡೆಸುವ ನೇಮಕಾತಿ ಪರೀಕ್ಷೆ ಸಮರ್ಪಕತೆ ಪರಿಶೀಲನೆಗಾಗಿ ಸರ್ಕಾರ ನಿವೃತ್ತ ಮುಖ್ಯ ಕಾರ್ಯದರ್ಶಿ ಎಸ್.ವಿ. ರಂಗನಾಥ್ ಅಧ್ಯಕ್ಷತೆಯ ಸಮಿತಿ ರಚಿಸಿದೆ. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ದ ನಡೆದ ಜೆನ್ಝೀ ಪ್ರತಿಭಟನೆ ಗಮನದಲ್ಲಿರಿಸಿ ರಾಜ್ಯದಲ್ಲಿ ನಡೆಯಲಿರುವ 70 ಸಾವಿರಕ್ಕೂ ಹೆಚ್ಚಿನ ಹುದ್ದೆಗಳನೇಮಕಾತಿ ಪ್ರಕ್ರಿಯೆಯಲ್ಲಿ ಯಾವುದೇ ಅಕ್ರಮ ನಡೆಯದಂತೆ ತಡೆಯಲು ಸರ್ಕಾರ ಹೆಜ್ಜೆ ಇಟ್ಟಿದೆ. ಅದರೊಂದಿಗೆ ಇಂದಿನ ರಾಜ್ಯ ಸುದ್ದಿಗಳ ಅಪ್ಡೇಟ್ ಇಲ್ಲಿದೆ.
11:18 AM (IST) Aug 01
ರಾಜ್ಯದಲ್ಲಿ ಆಗಸ್ಟ್ 2ರಂದು ಪೊಲೀಸ್ ಕಾನ್ಸ್ಸ್ಟೇಬಲ್ ಪರೀಕ್ಷೆ ನಡೆಯಲಿದೆ. ಪರೀಕ್ಷೆ ಕುರಿತ ಗೊಂದಲಗಳಿಗೆ ಗೃಹ ಸಚಿವ ಪ್ರಿಯಾಂಕ ಖರ್ಗೆ ಸ್ಪಷ್ಟನೆ ನೀಡಿದ್ದಾರೆ. ಪ್ರಮುಖವಾಗಿ ಹಿಜಾಬ್ ಹಾಕಿ ಪರೀಕ್ಷೆ ಬರೆಯಲು ಅವಕಾಶವಿಲ್ಲ ಎಂದಿದ್ದಾರೆ.
11:05 AM (IST) Aug 01
ಉದ್ಯಮಿ ಮತ್ತು ಆರ್ಸಿಬಿ ಒಡತಿ ಅನನ್ಯ ಬಿರ್ಲಾ ಅವರು ಅಸ್ಸಾಂ ಪ್ರವಾಹ ಪೀಡಿತ ಪ್ರದೇಶಗಳಿಗೆ ಸ್ವತಃ ಭೇಟಿ ನೀಡಿ, ಸಂತ್ರಸ್ತರ ಕಷ್ಟಗಳನ್ನು ಆಲಿಸಿದ್ದಾರೆ. ಅವರು ಆಹಾರ ಮತ್ತು ಅಗತ್ಯ ವಸ್ತುಗಳನ್ನು ವಿತರಿಸಿ, ತಮ್ಮ ಮಾನವೀಯ ನಡೆಯ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದು, ಈ ಅನುಭವವನ್ನು ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿದ್ದಾರೆ.
11:01 AM (IST) Aug 01
ಕೆಆರ್ಎಸ್ ಜಲಾಶಯದಿಂದ ತಮಿಳುನಾಡಿಗೆ ರಾತ್ರಿ ವೇಳೆ ಕದ್ದುಮುಚ್ಚಿ ನೀರು ಹರಿಸಲಾಗುತ್ತಿದೆ ಎಂಬ ಶಂಕೆಯ ಮೇರೆಗೆ, ಶ್ರೀರಂಗಪಟ್ಟಣದ ಯುವಕನೊಬ್ಬ ಸತ್ಯಾಸತ್ಯತೆ ಪರೀಕ್ಷಿಸಲು ಮುಂದಾಗಿದ್ದಾನೆ.
10:51 AM (IST) Aug 01
09:49 AM (IST) Aug 01
ಯುನೈಟೆಡ್ ಕಿಂಗ್ಡಮ್ ಮತ್ತು ಭಾರತ ನಡುವಿನ ಸಮಗ್ರ ಆರ್ಥಿಕ ಮತ್ತು ವ್ಯಾಪಾರ ಒಪ್ಪಂದದ (ಸಿಇಟಿಎ) ಅಡಿಯಲ್ಲಿ, ಯಾವುದೇ ಆಮದು ಸುಂಕವಿಲ್ಲದ ಸ್ಕಾಟಿಷ್ ಸಾಲ್ಮನ್ ಮೀನಿನ ಮೊದಲ ಲೋಡ್ ಬೆಂಗಳೂರನ್ನು ತಲುಪಿದೆ.
09:13 AM (IST) Aug 01
07:26 AM (IST) Aug 01
ಜೆನ್ಝೀ ಹೋರಾಟದ ಪರೋಕ್ಷ ಪರಿಣಾಮವೋ ಎಂಬಂತೆ ಕೆಪಿಎಸ್ಸಿ ಹಾಗೂ ಕೆಇಎ ನಡೆಸುವ ನೇಮಕಾತಿ ಪರೀಕ್ಷೆ ಸಮರ್ಪಕತೆ ಪರಿಶೀಲನೆಗಾಗಿ ರಾಜ್ಯ ಸರ್ಕಾರ ನಿವೃತ್ತ ಮುಖ್ಯ ಕಾರ್ಯದರ್ಶಿ ಎಸ್.ವಿ.ರಂಗನಾಥ್ ಅಧ್ಯಕ್ಷತೆಯಲ್ಲಿ ಸಮಿತಿಯೊಂದನ್ನು ರಚಿಸಿದೆ.
07:25 AM (IST) Aug 01
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) 3,991 ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಲಿಖಿತ ಪರೀಕ್ಷೆ ನಡೆಸುತ್ತಿದೆ. ಈ ಬಾರಿ ಹೊಸ ಓಎಂಆರ್ ಸ್ಕ್ಯಾನಿಂಗ್ ವ್ಯವಸ್ಥೆ, ಕಟ್ಟುನಿಟ್ಟಿನ ವಸ್ತ್ರ ಸಂಹಿತೆ ಮತ್ತು ಎಲೆಕ್ಟ್ರಾನಿಕ್ ಸಾಧನಗಳ ನಿಷೇಧದಂತಹ ಬಿಗಿ ಭದ್ರತಾ ಕ್ರಮಗಳನ್ನು ಜಾರಿಗೊಳಿಸಲಾಗಿದೆ.
07:25 AM (IST) Aug 01
ದಕ್ಷಿಣ ಕನ್ನಡದ ಉಜಿರೆಯಲ್ಲಿ 6.20 ಎಕ್ರೆ ಜಮೀನು ರಾಷ್ಟ್ರಪತಿಗಳ ಹೆಸರಿನಲ್ಲಿರುವುದು ಸರ್ಕಾರದ ದಿಶಾಂಕ್ ಆ್ಯಪ್ ಮೂಲಕ ಬೆಳಕಿಗೆ ಬಂದಿದೆ. ಸರ್ವೇ ನಂಬರ್ 208ರ ಈ ಭೂಮಿಯ ಮಾಲೀಕತ್ವದ ಕುರಿತು ಗೊಂದಲ ಸೃಷ್ಟಿ ಈ ಬಗ್ಗೆ ಕಂದಾಯ ಇಲಾಖೆ ಸ್ಪಷ್ಟನೆ ನೀಡಬೇಕೆಂದು ಎಂಜಿನಿಯರ್ ಜಗದೀಶ್ ಪ್ರಸಾದ್ ಆಗ್ರಹಿಸಿದ್ದಾರೆ.
07:24 AM (IST) Aug 01
ಸಿಎಂ ಆಗಿದ್ದಾಗ ಸದಾ ಬ್ಯುಸಿಯಾಗಿರುತ್ತಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಬಳಿಕ ಈಗ ಫುಲ್ ರಿಲ್ಯಾಕ್ಸ್ ಮೂಡ್ನಲ್ಲಿದ್ದಾರೆ. ಸಂಪಿಗೆ ರಸ್ತೆಯ ಮಂತ್ರಿ ಮಾಲ್ಗೆ ಆಗಮಿಸಿ ಸಾಮಾನ್ಯರಂತೆ ಶಾಪಿಂಗ್ ಮಾಡಿದ್ದು ವಿಡಿಯೋ ವೈರಲ್ ಆಗಿದೆ.