ಬೆಂಗಳೂರು (ಆ.14):ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಹಗರಣದ ಆರೋಪಿಯಾಗಿರುವ ನೂತನ ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ -ಪ್ರಮುಖ ಪ್ರತಿಪಕ್ಷ ಬಿಜೆಪಿ ಕಲ್ಯಾಣ ಕರ್ನಾಟಕದಲ್ಲಿ -ಪಾದಯಾತ್ರೆ ನಡೆಸಲು ಮುಂದಾಗಿದೆ. ಪಕ್ಷದ ವರಿಷ್ಠರು ಒಪ್ಪಿಗೆ ನೀಡಿದಲ್ಲಿ ವಿಧಾನಮಂಡಲದ ಅಧಿವೇಶನದೊಳಗಾಗಿಯೇ ಅಂದರೆ, ಮುಂದಿನ ವಾರದ ವೇಳೆಗೆ ಮಾಜಿ ಸಚಿವ ಬಿ.ಶ್ರೀರಾಮುಲು ನೇತೃತ್ವದಲ್ಲಿ ಪಾದಯಾತ್ರೆ ಆರಂಭವಾಗಲಿದೆ. ಅದರೊಂದಿಗೆ ಇಂದಿನ ರಾಜ್ಯ ಸುದ್ದಿಗಳ ಅಪ್ಡೇಟ್ ಇಲ್ಲಿದೆ.
12:54 PM (IST) Aug 14
12:47 PM (IST) Aug 14
12:25 PM (IST) Aug 14
12:19 PM (IST) Aug 14
12:12 PM (IST) Aug 14
ಸಿಎಜಿ ವರದಿಯ ಪ್ರಕಾರ, ನಾಗಸಂದ್ರ ಬಳಿಯ ಭೂಮಿಯನ್ನು ಐಕಿಯಾಗೆ ಲೀಸ್ ನೀಡಿದ ಒಪ್ಪಂದದಲ್ಲಿ ಬಿಎಂಆರ್ಸಿಎಲ್ಗೆ ಸುಮಾರು 104 ಕೋಟಿ ರೂ. ನಷ್ಟವಾಗಿದೆ. ಅಲ್ಲದೆ, ಮೆಟ್ರೋ ನಿಲ್ದಾಣಗಳಲ್ಲಿನ ವಾಣಿಜ್ಯ ಸ್ಥಳಗಳನ್ನು ಬಾಡಿಗೆಗೆ ನೀಡದ ಕಾರಣದಿಂದಲೂ ಭಾರೀ ನಷ್ಟವಾಗಿದೆ ಎಂದಿದೆ.
11:27 AM (IST) Aug 14
ಆಗಸ್ಟ್ 15 ನಾಳೆ ಸ್ವಾತಂತ್ರ್ಯ ದಿನಾಚರಣೆ. ವಿಧಾನಸೌಧ ಎದುರು ನಡೆಯಲಿರುವ ವರ್ಣರಂಜಿತ ಫ್ರೀಡಂ ಹಬ್ಬ ನಡೆಯಲಿದೆ. ಕಾರ್ಯಕ್ರಮದ ಸಮಯ, ಮಾರ್ಗ, ರಿಜಿಸ್ಟ್ರೇಷನ್ ಕುರಿತು ಮಾಹಿತಿ ಇಲ್ಲಿದೆ.
10:30 AM (IST) Aug 14
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸ್ಥಾನ ನೀಡದಿರುವುದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದು ರಾಜ್ಯದ ಮಹಿಳೆಯರಿಗೆ ಮಾಡಿದ ಅವಮಾನ. ಆರೆಸ್ಸೆಸ್ ಬ್ಯಾನ್ ಮಾಡುವ ತಾಕತ್ತಿದ್ದರೆ ಮಾಡಿ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಸವಾಲು ಹಾಕಿದ್ದಾರೆ.
10:24 AM (IST) Aug 14
ಬೆಂಗಳೂರಿನ ಮಹಿಳೆಯೊಬ್ಬರು ಪತಿಯ ಅನುಮತಿಯಿಲ್ಲದೆ ಆತನ ಫ್ರೋಜನ್ ಸ್ಪರ್ಮ್ ಬಳಸಿ ಗರ್ಭಧರಿಸಲು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಆದರೆ, ಪತಿಯ ಲಿಖಿತ ಸಮ್ಮತಿಯಿಲ್ಲದೆ ಐವಿಎಫ್ ಪ್ರಕ್ರಿಯೆ ನಡೆಸುವಂತಿಲ್ಲ ಎಂದು ಕೇಂದ್ರ ಸರ್ಕಾರ ಮತ್ತು ART ಕಾಯ್ದೆ ಸ್ಪಷ್ಟಪಡಿಸಿದೆ.
10:00 AM (IST) Aug 14
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಸೇರಿ ಒಂದು ವರ್ಷವಾದ ಹಿನ್ನೆಲೆಯಲ್ಲಿ, ಅವರ ಪತ್ನಿ ವಿಜಯಲಕ್ಷ್ಮಿ ಇನ್ಸ್ಟಾಗ್ರಾಮ್ನಲ್ಲಿ ಭಾವುಕ ಪೋಸ್ಟ್ ಹಂಚಿಕೊಂಡಿದ್ದಾರೆ. ಒಂದು ವರ್ಷವಾದರೂ ಗಾಯ ಮಾಸಿಲ್ಲ, ನೋವು ಅಸಹನೀಯವಾಗಿದೆ ಎಂದು ಬರೆದುಕೊಂಡಿದ್ದಾರೆ.
07:56 AM (IST) Aug 14
07:35 AM (IST) Aug 14
ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್ನಿಂದ ಸಲೀಂ ಅಹ್ಮದ್ ನಾಮಪತ್ರ ಸಲ್ಲಿಸಿದ್ದು, ಸಂಖ್ಯಾಬಲ ಇಲ್ಲದಿದ್ದರೂ ಬಿಜೆಪಿ-ಜೆಡಿಎಸ್ ಮೈತ್ರಿಕೂಟವು ಪಿ.ಎಚ್. ಪೂಜಾರ್ ಅವರನ್ನು ಕಣಕ್ಕಿಳಿಸಿ ಕುತೂಹಲ ಮೂಡಿಸಿದೆ.
07:34 AM (IST) Aug 14
ಬಂಟ್ವಾಳದ ನರಿಕೊಂಬು ಶಾಲೆಯ 5ನೇ ತರಗತಿ ವಿದ್ಯಾರ್ಥಿ ಮನ್ವಿತ್, ಅಕ್ಷರ ದಾಸೋಹ ಸಿಬ್ಬಂದಿಯ ಕೈಬೆರಳು ಕಾಯಿ ತುರಿಯುವ ಯಂತ್ರಕ್ಕೆ ಸಿಲುಕಿದಾಗ ತಕ್ಷಣ ಸ್ವಿಚ್ ಆಫ್ ಮಾಡಿ ದೊಡ್ಡ ಅನಾಹುತ ತಪ್ಪಿಸಿದ್ದಾನೆ. ಈ ಬಾಲಕನ ಸಮಯಪ್ರಜ್ಞೆ ಮತ್ತು ಧೈರ್ಯಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮೆಚ್ಚುಗೆ.
07:34 AM (IST) Aug 14
ಮೊದಲ ಬಾರಿಗೆ ಸಚಿವ ಸ್ಥಾನದ ಜೊತೆಗೆ ಸಭಾನಾಯಕ ಜವಾಬ್ದಾರಿ ನಿಭಾಯಿಸುವ ಸಂದರ್ಭದಲ್ಲಿ ತಪ್ಪುಗಳಾದರೆ ಪ್ರತಿಪಕ್ಷದ ಸದಸ್ಯರು ಸೇರಿದಂತೆ ಎಲ್ಲರೂ ಸಹಕರಿಸುವಂತೆ ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ(Yathindra Siddaramaiah) ಮನವಿ ಮಾಡಿದರು.
07:33 AM (IST) Aug 14
ಲಂಚ ಪ್ರಕರಣಗಳಲ್ಲಿ ಸಿಕ್ಕಿಬಿದ್ದ ಆರೋಪಿಯಿಂದ ವಶಪಡಿಸಿಕೊಂಡ 'ಟ್ರ್ಯಾಪ್ ಹಣ'ವನ್ನು ವಿಚಾರಣೆ ಮುಗಿಯುವವರೆಗೆ ಕಾಯದೆ, ರಾಜ್ಯದ ಬೊಕ್ಕಸದಿಂದ ದೂರುದಾರನಿಗೆ ಶೀಘ್ರವೇ ಹಿಂದಿರುಗಿಸಬೇಕು ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.
07:33 AM (IST) Aug 14
ಕರ್ನಾಟಕ ಸಚಿವ ಸಂಪುಟವು 'ಕರ್ನಾಟಕ ಸರ್ಕಾರಿ ಆವರಣ ಮತ್ತು ಸಾರ್ವಜನಿಕ ಆಸ್ತಿಗಳ ಬಳಕೆ ನಿಯಂತ್ರಣ ವಿಧೇಯಕ-2026'ಕ್ಕೆ ಅನುಮೋದನೆ ನೀಡಿದೆ. ಈ ಮೂಲಕ, ಆರ್ಎಸ್ಎಸ್ ಸೇರಿದಂತೆ ಯಾವುದೇ ಖಾಸಗಿ ಸಂಘ ಸಂಸ್ಥೆಗಳು ಸಾರ್ವಜನಿಕ ಸ್ಥಳಗಳಲ್ಲಿ ಕಾರ್ಯಕ್ರಮ ನಡೆಸಲು ಕಾನೂನುಬದ್ಧ ಅನುಮತಿ ಪಡೆಯುವುದು ಕಡ್ಡಾಯ.
07:32 AM (IST) Aug 14
ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ಕೃತಕ ಪನ್ನೀರ್, ಚೀಸ್ನಂತಹ ಆಹಾರ ಪದಾರ್ಥಗಳ ಉತ್ಪಾದನೆ ಮತ್ತು ಮಾರಾಟದ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ ಬೆಂಗಳೂರಿನ ಹಲವು ಹೋಟೆಲ್ಗಳ ಮೇಲೆ ವೈದ್ಯಾಧಿಕಾರಿಗಳು ದಾಳಿ ನಡೆಸಿ, ಅಶುಚಿತ್ವ ತ್ಯಾಜ್ಯ ವಿಂಗಡಿಸದ ಕಾರಣಕ್ಕಾಗಿ ಲಕ್ಷಾಂತರ ರೂಪಾಯಿ ದಂಡ ವಿಧಿಸಿದ್ದಾರೆ.
07:32 AM (IST) Aug 14
ಕಲಬುರಗಿಯಲ್ಲಿ ಪಾಕಿಸ್ತಾನಿ ಉಗ್ರರೊಂದಿಗೆ ಸಂಪರ್ಕ ಮತ್ತು ದೇಶ ವಿರೋಧಿ ಜಾಲತಾಣ ಚಟುವಟಿಕೆಗಳ ಶಂಕೆಯ ಮೇಲೆ ಉತ್ತರ ಪ್ರದೇಶ ಮೂಲದ ಇಬ್ಬರು ಯುವಕರನ್ನು ಸಿಸಿಬಿ ಪೊಲೀಸರು ವಶಕ್ಕೆ.. ವಿಚಾರಣೆ ಬಳಿಕ ಒಬ್ಬನನ್ನು ಬಿಡುಗಡೆ ಮಾಡಲಾಗಿದ್ದು, ಮತ್ತೊಬ್ಬ ಆರೋಪಿ ಸಮೀರ್ ಬಂಧಿಸಿ ತನಿಖೆ ಮುಂದುವರಿಸಲಾಗಿದೆ.
07:30 AM (IST) Aug 14
ರಾಜ್ಯದಲ್ಲಿ ಗುಟ್ಕಾ ನಿಷೇಧದ ಸುದ್ದಿ ಹಬ್ಬುತ್ತಿದ್ದಂತೆ, ಕೊಪ್ಪಳ ಜಿಲ್ಲೆಯಲ್ಲಿ ಜನರು ಗುಟ್ಕಾ ಖರೀದಿಗೆ ಮುಗಿಬಿದ್ದಿದ್ದಾರೆ. ಸಾಲ ಮಾಡಿಕೊಂಡು ಬಂದು ಚೀಲಗಟ್ಟಲೆ ಗುಟ್ಕಾ ಖರೀದಿಸುತ್ತಿದ್ದು, ಇದನ್ನೇ ಬಂಡವಾಳ ಮಾಡಿಕೊಂಡ ವ್ಯಾಪಾರಿಗಳು ಕೃತಕ ಅಭಾವ ಸೃಷ್ಟಿಸಿ ದುಬಾರಿ ಬೆಲೆಗೆ ಮಾರಾಟ ಮಾಡುತ್ತಿದ್ದಾರೆ.