LIVE NOW
Published : Aug 14, 2026, 07:29 AM ISTUpdated : Aug 14, 2026, 12:54 PM IST

State News Live: ಮಂಗಳೂರಿನಲ್ಲಿ BSNL ಹೊಸ ಅಲೆ - ಮೀನುಗಾರರಿಂದ ವ್ಯಾಪಕ ಬೇಡಿಕೆ? 1 ರೂಪಾಯಿಗೆ ಸಿಮ್

ಸಾರಾಂಶ

ಬೆಂಗಳೂರು (ಆ.14):ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಹಗರಣದ ಆರೋಪಿಯಾಗಿರುವ ನೂತನ ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ -ಪ್ರಮುಖ ಪ್ರತಿಪಕ್ಷ ಬಿಜೆಪಿ ಕಲ್ಯಾಣ ಕರ್ನಾಟಕದಲ್ಲಿ -ಪಾದಯಾತ್ರೆ ನಡೆಸಲು ಮುಂದಾಗಿದೆ. ಪಕ್ಷದ ವರಿಷ್ಠರು ಒಪ್ಪಿಗೆ ನೀಡಿದಲ್ಲಿ ವಿಧಾನಮಂಡಲದ ಅಧಿವೇಶನದೊಳಗಾಗಿಯೇ ಅಂದರೆ, ಮುಂದಿನ ವಾರದ ವೇಳೆಗೆ ಮಾಜಿ ಸಚಿವ ಬಿ.ಶ್ರೀರಾಮುಲು ನೇತೃತ್ವದಲ್ಲಿ ಪಾದಯಾತ್ರೆ ಆರಂಭವಾಗಲಿದೆ. ಅದರೊಂದಿಗೆ ಇಂದಿನ ರಾಜ್ಯ ಸುದ್ದಿಗಳ ಅಪ್‌ಡೇಟ್‌ ಇಲ್ಲಿದೆ.

 

12:54 PM (IST) Aug 14

ಮಂಗಳೂರಿನಲ್ಲಿ BSNL ಹೊಸ ಅಲೆ - ಮೀನುಗಾರರಿಂದ ವ್ಯಾಪಕ ಬೇಡಿಕೆ? 1 ರೂಪಾಯಿಗೆ ಸಿಮ್

ಬಿಎಸ್‌ಎನ್‌ಎಲ್‌ ಇತ್ತೀಚೆಗೆ ಪರಿಚಯಿಸಿರುವ ಸ್ಯಾಟಲೈಟ್‌ ಫೋನ್‌ಗೆ ಮಂಗಳೂರಿನಲ್ಲಿ, ವಿಶೇಷವಾಗಿ ಮೀನುಗಾರರಿಂದ, ವ್ಯಾಪಕ ಬೇಡಿಕೆ ವ್ಯಕ್ತವಾಗಿದೆ. ಇದರೊಂದಿಗೆ, ಭಾರತ್‌ ನೆಟ್‌ ಯೋಜನೆಯಡಿ ಗ್ರಾಮೀಣ ಪ್ರದೇಶಗಳಿಗೆ ಬ್ರಾಡ್‌ಬ್ಯಾಂಡ್‌ ವಿಸ್ತರಣೆ ಮತ್ತು ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಕರ್ಷಕ ಸಿಮ್ ಹಾಗೂ ಎಫ್‌ಟಿಟಿಎಚ್‌ ಕೊಡುಗೆಗಳನ್ನು ಸಂಸ್ಥೆ ಘೋಷಿಸಿದೆ.
Read Full Story

12:47 PM (IST) Aug 14

Belagavi - ಚಿಕ್ಕೋಡಿಯಲ್ಲಿ ಶವ ತೆಗೆಯಲು ಕೋಳಿ ಬಲಿ ನೀಡಲು ಮುಂದಾದ್ರಾ ಅಧಿಕಾರಿಗಳು?

ಚಿಕ್ಕೋಡಿ ತಾಲೂಕಿನ ಖಡಕಲಾಟ ಗ್ರಾಮದಲ್ಲಿ, ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಕೊಲೆಯಾದ ವ್ಯಕ್ತಿಯ ಶವವನ್ನು ಹೊರತೆಗೆಯುವ ಮೊದಲು ಅಧಿಕಾರಿಗಳು ಕೋಳಿ ಬಲಿ ನೀಡಲು ಮುಂದಾಗಿದ್ದಾರೆ. ಮಾಧ್ಯಮಗಳ ಕ್ಯಾಮರಾ ಕಣ್ಣಿಗೆ ಬಿದ್ದಾಗ ಈ ಪ್ರಯತ್ನವನ್ನು ಕೈಬಿಡಲಾಗಿದ್ದು, ಈ ಘಟನೆಯು ಸರ್ಕಾರಿ ಕಾರ್ಯಾಚರಣೆಯಲ್ಲಿನ ಮೂಢನಂಬಿಕೆಯ ಬಗ್ಗೆ ಚರ್ಚೆ ಹುಟ್ಟುಹಾಕಿದೆ.
Read Full Story

12:25 PM (IST) Aug 14

ಶಾಸಕ ಸುರೇಶ್ ಗೌಡ ಪುತ್ರಿಯಿಂದ ಪಿಎಸ್‌ಐಗೆ ಕಪಾಳಮೋಕ್ಷ, ಮಗಳ ತಪ್ಪಿಗೆ ಕ್ಷಮೆಗೆ ಮುಂದಾದ ಅಪ್ಪ!

ತುಮಕೂರು ಶಾಸಕ ಬಿ. ಸುರೇಶ್‌ಗೌಡರ ಪುತ್ರಿ ಐಶ್ವರ್ಯ, ದೇವಸ್ಥಾನದಲ್ಲಿ ದರ್ಶನ ವಿಳಂಬವಾದ ಕಾರಣಕ್ಕೆ ಮಹಿಳಾ ಪಿಎಸ್‌ಐ ಜೊತೆ ವಾಗ್ವಾದ ನಡೆಸಿ ಕಪಾಳಮೋಕ್ಷ ಮಾಡಿದ್ದಾರೆಂಬ ಆರೋಪ ಕೇಳಿಬಂದಿದೆ. ಈ ಘಟನೆಗೆ ಸಂಬಂಧಿಸಿದಂತೆ ಶಾಸಕರು ಪ್ರತಿಕ್ರಿಯಿಸಿದ್ದು, ಮಗಳದ್ದು ತಪ್ಪಿದ್ದರೆ ಕ್ಷಮೆ ಕೇಳುವುದಾಗಿ ತಿಳಿಸಿದ್ದಾರೆ.
Read Full Story

12:19 PM (IST) Aug 14

36 ವರ್ಷಗಳ ಹಿಂದೆ ಇದೇ ದಿನ 17ರ ಪೋರನೊಬ್ಬ ಇತಿಹಾಸ ಬರೆದಿದ್ದ! ಸಚಿನ್ ತೆಂಡೂಲ್ಕರ್ ಮೊದಲ ಶತಕದ ರೋಚಕ ಕಥೆ

1990ರ ಆಗಸ್ಟ್ 14ರಂದು, 17 ವರ್ಷದ ಸಚಿನ್ ತೆಂಡೂಲ್ಕರ್ ಇಂಗ್ಲೆಂಡ್ ವಿರುದ್ಧ ತಮ್ಮ ಮೊದಲ ಅಂತಾರಾಷ್ಟ್ರೀಯ ಶತಕ (119*) ಬಾರಿಸಿ, ಸೋಲಿನಂಚಿನಲ್ಲಿದ್ದ ಭಾರತ ತಂಡವನ್ನು ಪಾರುಮಾಡಿದರು. ಈ ಶತಕವು ಅವರ 100 ಅಂತಾರಾಷ್ಟ್ರೀಯ ಶತಕಗಳ ದಾಖಲೆಯ ಪ್ರಯಾಣಕ್ಕೆ ಮುನ್ನುಡಿ ಬರೆಯಿತು, ನಂತರ ಅವರು ಏಕದಿನದಲ್ಲೂ ತಮ್ಮ ಚೊಚ್ಚಲ ಶತಕವನ್ನು ಸಿಡಿಸಿದರು.
Read Full Story

12:12 PM (IST) Aug 14

ನಾಗಸಂದ್ರ ಮೆಟ್ರೋ ಸಮೀಪದ ಐಕಿಯಾ ಭೂ ಒಪ್ಪಂದದಲ್ಲಿ ಎಡವಿದ BMRCL - 104 ಕೋಟಿ ರೂಪಾಯಿ ನಷ್ಟ ಎಂದ ಸಿಎಜಿ!

ಸಿಎಜಿ ವರದಿಯ ಪ್ರಕಾರ, ನಾಗಸಂದ್ರ ಬಳಿಯ ಭೂಮಿಯನ್ನು ಐಕಿಯಾಗೆ ಲೀಸ್ ನೀಡಿದ ಒಪ್ಪಂದದಲ್ಲಿ ಬಿಎಂಆರ್‌ಸಿಎಲ್‌ಗೆ ಸುಮಾರು 104 ಕೋಟಿ ರೂ. ನಷ್ಟವಾಗಿದೆ. ಅಲ್ಲದೆ, ಮೆಟ್ರೋ ನಿಲ್ದಾಣಗಳಲ್ಲಿನ ವಾಣಿಜ್ಯ ಸ್ಥಳಗಳನ್ನು ಬಾಡಿಗೆಗೆ ನೀಡದ ಕಾರಣದಿಂದಲೂ ಭಾರೀ ನಷ್ಟವಾಗಿದೆ ಎಂದಿದೆ.

Read Full Story

11:27 AM (IST) Aug 14

ಆಗಸ್ಟ್ 15 - ನಾಳೆ ವಿಧಾನಸೌಧದಲ್ಲಿ ಫ್ರೀಡಂ ಹಬ್ಬ, ಪ್ರವೇಶ ಸಿಗಬೇಕು ಅಂದ್ರೆ ನೀವು ಈ ವಿಷಯ ತಿಳ್ಕೊಳ್ಳಿ!

ಆಗಸ್ಟ್ 15 ನಾಳೆ ಸ್ವಾತಂತ್ರ್ಯ ದಿನಾಚರಣೆ. ವಿಧಾನಸೌಧ ಎದುರು ನಡೆಯಲಿರುವ ವರ್ಣರಂಜಿತ ಫ್ರೀಡಂ ಹಬ್ಬ ನಡೆಯಲಿದೆ. ಕಾರ್ಯಕ್ರಮದ ಸಮಯ, ಮಾರ್ಗ, ರಿಜಿಸ್ಟ್ರೇಷನ್ ಕುರಿತು ಮಾಹಿತಿ ಇಲ್ಲಿದೆ.

Read Full Story

10:30 AM (IST) Aug 14

ನಿಮಗೆ ತಾಕತ್ ಇದ್ದರೆ ಆರೆಸ್ಸೆಸ್ ಬ್ಯಾನ್ ಮಾಡಿ - ಪ್ರಿಯಾಂಕ್ ಖರ್ಗೆಗೆ ವಿಜಯೇಂದ್ರ ನೇರ ಸವಾಲು!

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸ್ಥಾನ ನೀಡದಿರುವುದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದು ರಾಜ್ಯದ ಮಹಿಳೆಯರಿಗೆ ಮಾಡಿದ ಅವಮಾನ. ಆರೆಸ್ಸೆಸ್ ಬ್ಯಾನ್ ಮಾಡುವ ತಾಕತ್ತಿದ್ದರೆ ಮಾಡಿ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಸವಾಲು ಹಾಕಿದ್ದಾರೆ.

Read Full Story

10:24 AM (IST) Aug 14

IVF ಪ್ರಕ್ರಿಯೆಗೆ ಇನ್ನೊಬ್ಬ ವ್ಯಕ್ತಿಯ ವೀರ್ಯ ಪತ್ನಿ ಪಡೆದುಕೊಳ್ಳಬಹುದೇ? ಹೈಕೋರ್ಟ್‌ಗೆ ನಿಯಮ ತಿಳಿಸಿದ ಕೇಂದ್ರ ಸರ್ಕಾರ

ಬೆಂಗಳೂರಿನ ಮಹಿಳೆಯೊಬ್ಬರು ಪತಿಯ ಅನುಮತಿಯಿಲ್ಲದೆ ಆತನ ಫ್ರೋಜನ್ ಸ್ಪರ್ಮ್ ಬಳಸಿ ಗರ್ಭಧರಿಸಲು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಆದರೆ, ಪತಿಯ ಲಿಖಿತ ಸಮ್ಮತಿಯಿಲ್ಲದೆ ಐವಿಎಫ್ ಪ್ರಕ್ರಿಯೆ ನಡೆಸುವಂತಿಲ್ಲ ಎಂದು ಕೇಂದ್ರ ಸರ್ಕಾರ ಮತ್ತು ART ಕಾಯ್ದೆ ಸ್ಪಷ್ಟಪಡಿಸಿದೆ.

Read Full Story

10:00 AM (IST) Aug 14

ಕಂಬಿ ಹಿಂದೆ ದಾಸ ವಾಸವಾಗಿ ಒಂದು ವರ್ಷ; 'ಗಾಯ ಮಾಸಿಲ್ಲ, ನೋವು ತಡೆಯಲಾಗ್ತಿಲ್ಲ' ಎಂದು ವಿಜಯಲಕ್ಷ್ಮಿ ಭಾವುಕ ಪೋಸ್ಟ್!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಸೇರಿ ಒಂದು ವರ್ಷವಾದ ಹಿನ್ನೆಲೆಯಲ್ಲಿ, ಅವರ ಪತ್ನಿ ವಿಜಯಲಕ್ಷ್ಮಿ ಇನ್‌ಸ್ಟಾಗ್ರಾಮ್‌ನಲ್ಲಿ ಭಾವುಕ ಪೋಸ್ಟ್ ಹಂಚಿಕೊಂಡಿದ್ದಾರೆ. ಒಂದು ವರ್ಷವಾದರೂ ಗಾಯ ಮಾಸಿಲ್ಲ, ನೋವು ಅಸಹನೀಯವಾಗಿದೆ ಎಂದು ಬರೆದುಕೊಂಡಿದ್ದಾರೆ.

Read Full Story

07:56 AM (IST) Aug 14

ವಾಲ್ಮೀಕಿ ನಿಗಮ ಹಗರಣ - ಬಿ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಬೃಹತ್ ಪಾದಯಾತ್ರೆಗೆ ಸಜ್ಜು!

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಹಿನ್ನೆಲೆಯಲ್ಲಿ ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪಾದಯಾತ್ರೆಗೆ ಸಜ್ಜಾಗಿದೆ. ಮಾಜಿ ಸಚಿವ ಬಿ.ಶ್ರೀರಾಮುಲು ನೇತೃತ್ವದಲ್ಲಿ ರಾಯಚೂರಿನಿಂದ ಬಳ್ಳಾರಿಯವರೆಗೆ ಈ ಯಾತ್ರೆ ನಡೆಯಲಿದ್ದು, ಸರ್ಕಾರದ ಮೇಲೆ ಒತ್ತಡ ಹೇರುವುದು ಇದರ ಪ್ರಮುಖ ಉದ್ದೇಶವಾಗಿದೆ.
Read Full Story

07:35 AM (IST) Aug 14

ಸಭಾಪತಿ ಸ್ಥಾನಕ್ಕೆ ಇಂದು ಬಿಗ್ ಫೈಟ್! ಸಂಖ್ಯಾಬಲ ಇಲ್ಲದಿದ್ರೂ ಬಿಜೆಪಿ-ಜೆಡಿಎಸ್ ಸ್ಪರ್ಧಿಸಿದ್ದು ಏಕೆ ಗೊತ್ತಾ?

ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಸಲೀಂ ಅಹ್ಮದ್ ನಾಮಪತ್ರ ಸಲ್ಲಿಸಿದ್ದು, ಸಂಖ್ಯಾಬಲ ಇಲ್ಲದಿದ್ದರೂ ಬಿಜೆಪಿ-ಜೆಡಿಎಸ್ ಮೈತ್ರಿಕೂಟವು ಪಿ.ಎಚ್. ಪೂಜಾರ್ ಅವರನ್ನು ಕಣಕ್ಕಿಳಿಸಿ ಕುತೂಹಲ ಮೂಡಿಸಿದೆ.

 

Read Full Story

07:34 AM (IST) Aug 14

ಬಂಟ್ವಾಳ: ಬಾಲಕನ ಸಮಯ ಪ್ರಜ್ಞೆಯಿಂದ ಉಳಿಯಿತು ದಾಸೋಹ ಸಿಬ್ಬಂದಿ ಜೀವ! ಸಿಎಂ ಮೆಚ್ಚುಗೆ

ಬಂಟ್ವಾಳದ ನರಿಕೊಂಬು ಶಾಲೆಯ 5ನೇ ತರಗತಿ ವಿದ್ಯಾರ್ಥಿ ಮನ್ವಿತ್, ಅಕ್ಷರ ದಾಸೋಹ ಸಿಬ್ಬಂದಿಯ ಕೈಬೆರಳು ಕಾಯಿ ತುರಿಯುವ ಯಂತ್ರಕ್ಕೆ ಸಿಲುಕಿದಾಗ ತಕ್ಷಣ ಸ್ವಿಚ್ ಆಫ್ ಮಾಡಿ ದೊಡ್ಡ ಅನಾಹುತ ತಪ್ಪಿಸಿದ್ದಾನೆ. ಈ ಬಾಲಕನ ಸಮಯಪ್ರಜ್ಞೆ ಮತ್ತು ಧೈರ್ಯಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮೆಚ್ಚುಗೆ.

 

Read Full Story

07:34 AM (IST) Aug 14

ಸಿದ್ದರಾಮಯ್ಯ ಪುತ್ರ ಯತೀಂದ್ರ ಮೊದಲ ಬಾರಿ ಸಚಿವ ಸ್ಥಾನ ಬೆನ್ನಲ್ಲೇ ಈಗ ವಿಧಾನಪರಿಷತ್‌ ಸಭಾನಾಯಕ!

ಮೊದಲ ಬಾರಿಗೆ ಸಚಿವ ಸ್ಥಾನದ ಜೊತೆಗೆ ಸಭಾನಾಯಕ ಜವಾಬ್ದಾರಿ ನಿಭಾಯಿಸುವ ಸಂದರ್ಭದಲ್ಲಿ ತಪ್ಪುಗಳಾದರೆ ಪ್ರತಿಪಕ್ಷದ ಸದಸ್ಯರು ಸೇರಿದಂತೆ ಎಲ್ಲರೂ ಸಹಕರಿಸುವಂತೆ ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ(Yathindra Siddaramaiah) ಮನವಿ ಮಾಡಿದರು.

 

Read Full Story

07:33 AM (IST) Aug 14

ಲಂಚ ಪ್ರಕರಣದಲ್ಲಿ ವಶಕ್ಕೆ ಪಡೆದ ಹಣ ದೂರುದಾರನಿಗೆ ವಾಪಸ್ ನೀಡಿ: ಹೈಕೋರ್ಟ್ ಮಹತ್ವದ ತೀರ್ಪು

ಲಂಚ ಪ್ರಕರಣಗಳಲ್ಲಿ ಸಿಕ್ಕಿಬಿದ್ದ ಆರೋಪಿಯಿಂದ ವಶಪಡಿಸಿಕೊಂಡ 'ಟ್ರ್ಯಾಪ್ ಹಣ'ವನ್ನು ವಿಚಾರಣೆ ಮುಗಿಯುವವರೆಗೆ ಕಾಯದೆ, ರಾಜ್ಯದ ಬೊಕ್ಕಸದಿಂದ ದೂರುದಾರನಿಗೆ ಶೀಘ್ರವೇ ಹಿಂದಿರುಗಿಸಬೇಕು ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.

 

Read Full Story

07:33 AM (IST) Aug 14

ಸರ್ಕಾರಿ ಜಾಗದಲ್ಲಿ ಕಾರ್ಯಕ್ರಮಕ್ಕೆ ಇನ್ಮುಂದೆ ‘ಪರ್ಮಿಷನ್’ ಕಡ್ಡಾಯ! RSS ಚಟುವಟಿಕೆಗಳಿಗೆ ಕಡಿವಾಣ ಹಾಕಲು ಹೊಸ ವಿಧೇಯಕ?

ಕರ್ನಾಟಕ ಸಚಿವ ಸಂಪುಟವು 'ಕರ್ನಾಟಕ ಸರ್ಕಾರಿ ಆವರಣ ಮತ್ತು ಸಾರ್ವಜನಿಕ ಆಸ್ತಿಗಳ ಬಳಕೆ ನಿಯಂತ್ರಣ ವಿಧೇಯಕ-2026'ಕ್ಕೆ ಅನುಮೋದನೆ ನೀಡಿದೆ. ಈ ಮೂಲಕ, ಆರ್‌ಎಸ್‌ಎಸ್‌ ಸೇರಿದಂತೆ ಯಾವುದೇ ಖಾಸಗಿ ಸಂಘ ಸಂಸ್ಥೆಗಳು ಸಾರ್ವಜನಿಕ ಸ್ಥಳಗಳಲ್ಲಿ ಕಾರ್ಯಕ್ರಮ ನಡೆಸಲು ಕಾನೂನುಬದ್ಧ ಅನುಮತಿ ಪಡೆಯುವುದು ಕಡ್ಡಾಯ.

 

Read Full Story

07:32 AM (IST) Aug 14

Health Minister Warns: ಚೀಸ್‌, ಪನ್ನೀರ್‌, ಬೆಣ್ಣೆ ಸೇರಿ ಯಾವುದೇ ಕೃತಕ ಆಹಾರ ಉತ್ಪನ್ನ ಬಳಸುವಂತಿಲ್ಲ: ಖಾದರ್‌ ಎಚ್ಚರಿಕೆ

ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ಕೃತಕ ಪನ್ನೀರ್, ಚೀಸ್‌ನಂತಹ ಆಹಾರ ಪದಾರ್ಥಗಳ ಉತ್ಪಾದನೆ ಮತ್ತು ಮಾರಾಟದ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ ಬೆಂಗಳೂರಿನ ಹಲವು ಹೋಟೆಲ್‌ಗಳ ಮೇಲೆ ವೈದ್ಯಾಧಿಕಾರಿಗಳು ದಾಳಿ ನಡೆಸಿ, ಅಶುಚಿತ್ವ ತ್ಯಾಜ್ಯ ವಿಂಗಡಿಸದ ಕಾರಣಕ್ಕಾಗಿ ಲಕ್ಷಾಂತರ ರೂಪಾಯಿ ದಂಡ ವಿಧಿಸಿದ್ದಾರೆ.

 

Read Full Story

07:32 AM (IST) Aug 14

ಪಾಕ್ ಉಗ್ರರ ಜೊತೆ ನಂಟು; ಕಲಬುರಗಿಯಲ್ಲಿ ಇಬ್ಬರು ಶಂಕಿತರು ವಶಕ್ಕೆ!

ಕಲಬುರಗಿಯಲ್ಲಿ ಪಾಕಿಸ್ತಾನಿ ಉಗ್ರರೊಂದಿಗೆ ಸಂಪರ್ಕ ಮತ್ತು ದೇಶ ವಿರೋಧಿ ಜಾಲತಾಣ ಚಟುವಟಿಕೆಗಳ ಶಂಕೆಯ ಮೇಲೆ ಉತ್ತರ ಪ್ರದೇಶ ಮೂಲದ ಇಬ್ಬರು ಯುವಕರನ್ನು ಸಿಸಿಬಿ ಪೊಲೀಸರು ವಶಕ್ಕೆ.. ವಿಚಾರಣೆ ಬಳಿಕ ಒಬ್ಬನನ್ನು ಬಿಡುಗಡೆ ಮಾಡಲಾಗಿದ್ದು, ಮತ್ತೊಬ್ಬ ಆರೋಪಿ ಸಮೀರ್‌ ಬಂಧಿಸಿ ತನಿಖೆ ಮುಂದುವರಿಸಲಾಗಿದೆ.

 

Read Full Story

07:30 AM (IST) Aug 14

ಗುಟ್ಕಾ ಬ್ಯಾನ್‌: ಕಂತೆ ಕಂತೆ ಹಣ ತಂದು ಗುಟ್ಕಾ ಖರೀದಿಸಿದ ಜನ!

ರಾಜ್ಯದಲ್ಲಿ ಗುಟ್ಕಾ ನಿಷೇಧದ ಸುದ್ದಿ ಹಬ್ಬುತ್ತಿದ್ದಂತೆ, ಕೊಪ್ಪಳ ಜಿಲ್ಲೆಯಲ್ಲಿ ಜನರು ಗುಟ್ಕಾ ಖರೀದಿಗೆ ಮುಗಿಬಿದ್ದಿದ್ದಾರೆ. ಸಾಲ ಮಾಡಿಕೊಂಡು ಬಂದು ಚೀಲಗಟ್ಟಲೆ ಗುಟ್ಕಾ ಖರೀದಿಸುತ್ತಿದ್ದು, ಇದನ್ನೇ ಬಂಡವಾಳ ಮಾಡಿಕೊಂಡ ವ್ಯಾಪಾರಿಗಳು ಕೃತಕ ಅಭಾವ ಸೃಷ್ಟಿಸಿ ದುಬಾರಿ ಬೆಲೆಗೆ ಮಾರಾಟ ಮಾಡುತ್ತಿದ್ದಾರೆ.

 

Read Full Story

More Trending News