LIVE NOW
Published : Aug 29, 2026, 07:13 AM ISTUpdated : Aug 29, 2026, 10:01 AM IST

State News Live: ಪರ್ತಗಾಳಿ ಶ್ರೀರಾಮನ ಕಂಚಿನ ಪ್ರತಿಮೆಗೆ ಇಂಡಿಯಾ, ಏಷ್ಯಾ ಬುಕ್ ಆಫ್ ರೆಕಾರ್ಡ್ಸ್ ಗರಿ

ಸಾರಾಂಶ

ಬೆಂಗಳೂರು (ಆ.29): ಕಳೆದ ಕೆಲವು ವಾರಗಳಿಂದ ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ನೇತೃತ್ವದಲ್ಲಿ ನಡೆಯತ್ತಿದ್ದ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದ್ದು, ವಾಲ್ಮೀಕಿ ಹಗರಣದಲ್ಲಿ 2ನೇ ಬಾರಿ ಸಚಿವ ನಾಗೇಂದ್ರ ಅವರ ತಲೆದಂಡವಾಗಿದೆ. ಅದರೊಂದಿಗೆ ದೋಸ್ತಿ ಹೋರಾಟಕ್ಕೆ ಕಾಂಗ್ರೆಸ್‌ ಮಣಿದಿದ್ದು, ಡಿಕೆ ಸಂಪುಟದ ಮೊದಲ ವಿಕೆಟ್‌ ಪತನವಾದಂತಾಗಿದೆ.ವಾಲ್ಮೀಕಿ ನಿಗಮದಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಪಟ್ಟಂತೆ 2ನೇ ವರ್ಷದಲ್ಲಿ 2ನೇ ಬಾರಿಗೆ ಸಚಿವ ಸ್ಥಾನಕ್ಕೆ ಕಾಂಗ್ರೆಸ್ ನಾಯಕ ರಾಜೀನಾಮೆ ನೀಡಿದ್ದಾರೆ. ಸಚಿವರಾಗಿ ಪದಗ್ರಹಣ ಮಾಡಿದ 25 ದಿನಕ್ಕೆ ಪದತ್ಯಾಗ ಮಾಡಿದಂತಾಗಿದೆ. ನಾಗೇಂದ್ರ ಅವರ ರಾಜೀನಾಮೆಗೆ ಪಟ್ಟು ಹಿಡಿದಿದ್ದ ಬಿಜೆಪಿ-ಜೆಡಿಎಸ್‌ ಹೋರಾಟಕ್ಕೆ ದೊಡ್ಡ ಗೆಲುವು ಸಿಕ್ಕಂತಾಗಿದೆ. ಅದರೊಂದಿಗೆ ಇಂದಿನ ರಾಜ್ಯ ಸುದ್ದಿಗಳ ಅಪ್‌ಡೇಟ್‌ ಇಲ್ಲಿದೆ.

Parthagali bronze statue of Lord Rama

10:01 AM (IST) Aug 29

ಪರ್ತಗಾಳಿ ಶ್ರೀರಾಮನ ಕಂಚಿನ ಪ್ರತಿಮೆಗೆ ಇಂಡಿಯಾ, ಏಷ್ಯಾ ಬುಕ್ ಆಫ್ ರೆಕಾರ್ಡ್ಸ್ ಗರಿ

ಗೋವಾದ ಪರ್ತಗಾಳಿಯ ಶ್ರೀ ಸಂಸ್ಥಾನ ಗೋಕರ್ಣ ಮಠದಲ್ಲಿ ಸ್ಥಾಪಿಸಲಾದ ಶ್ರೀರಾಮನ ಕಂಚಿನ ಪ್ರತಿಮೆಯು ಅತ್ಯಂತ ಎತ್ತರದ ಕಂಚಿನ ಪ್ರತಿಮೆ ಎಂದು ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಮತ್ತು ಏಷ್ಯಾ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ದಾಖಲಾಗಿದೆ.

Read Full Story

09:54 AM (IST) Aug 29

ಅನುಮೋದನೆ ಸಿಕ್ಕರೂ ಗದಗ-ಯಲವಿಗಿ ರೈಲು ಮಾರ್ಗದ ಯೋಜನೆ ವಿಳಂಬಕ್ಕೆ ಕಾರಣ ಏನು? ಮನವಿ ಸಲ್ಲಿಕೆ

ಗದಗ-ಯಲವಿಗಿ ರೈಲು ಮಾರ್ಗ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆ ವಿಳಂಬವಾಗಿದ್ದು, ಕಾಮಗಾರಿ ಸ್ಥಗಿತಗೊಂಡಿದೆ. ಈ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ಮತ್ತು ಯೋಜನೆಯನ್ನು ಕಾರ್ಯರೂಪಕ್ಕೆ ತರಲು ರೈಲ್ವೆ ಮಾರ್ಗ ಹೋರಾಟ ಸಮಿತಿಯು ನೂತನ ಸಭಾಪತಿ ಜಿ.ಎಸ್. ಪಾಟೀಲ ಅವರಿಗೆ ಮನವಿ ಸಲ್ಲಿಸಿದೆ.
Read Full Story

08:53 AM (IST) Aug 29

ಬಿ ನಾಗೇಂದ್ರ ರಾಜೀನಾಮೆ ಆಯ್ತು, ಕೆಪಿಎಸ್‌ಸಿ ಎಇಇ ನೇಮಕಾತಿ ಹಗರಣದಲ್ಲಿ ಈಗ ಪ್ರಿಯಾಂಕ್ ಖರ್ಗೆ ಸರದಿ! ಹೆಚ್‌ಡಿಕೆ ಗಂಭೀರ ಆರೋಪ!

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, ಪ್ರಿಯಾಂಕ್ ಖರ್ಗೆ ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದಾಗ ನಡೆದ ಎಇಇ ನೇಮಕಾತಿಯಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಈ ಹಗರಣಕ್ಕೆ ಸಂಬಂಧಿಸಿದಂತೆ ದಾಖಲೆ ಬಿಡುಗಡೆ. ರಾಜೀನಾಮೆಗೆ ಆಗ್ರಹ

Read Full Story

08:52 AM (IST) Aug 29

ಮೈಸೂರು ರೈಲ್ವೆ ವಲಯಕ್ಕೆ ಸೇರ್ಪಡೆ ಬೆನ್ನಲ್ಲೇ, ಮಂಗಳೂರಿನಿಂದ ಬೆಂಗಳೂರಿಗೆ ಕೊಂಕಣ ಸುತ್ತಿ ಮೈಲಾರಕ್ಕೆ ಹೋಗುವ ಸ್ಪೆಷಲ್‌ ಟ್ರೇನ್‌!

ಓಣಂ ಹಬ್ಬದ ಪ್ರಯಾಣಿಕರ ದಟ್ಟಣೆ ನಿಭಾಯಿಸಲು, ದಕ್ಷಿಣ ರೈಲ್ವೆಯು ಮಂಗಳೂರು ಜಂಕ್ಷನ್‌ನಿಂದ ಬೆಂಗಳೂರಿನ SMVT ಟರ್ಮಿನಲ್‌ಗೆ ಏಕಮುಖ ವಿಶೇಷ ಎಕ್ಸ್‌ಪ್ರೆಸ್ ರೈಲು (06072) ಓಡಿಸಲಿದೆ. ಶನಿವಾರ ಮಂಗಳೂರಿನಿಂದ ಹೊರಟು, ಹಲವು ಪ್ರಮುಖ ನಿಲ್ದಾಣಗಳಲ್ಲಿ ನಿಲುಗಡೆ ನೀಡಿ, ಭಾನುವಾರ ಮುಂಜಾನೆ ಬೆಂಗಳೂರು ತಲುಪಲಿದೆ.

Read Full Story

08:51 AM (IST) Aug 29

ಮಕ್ಕಾದಲ್ಲಿ ಕಣ್ಣೀರಿಟ್ಟ ರಾಖಿ ಸಾವಂತ್.. ನೇಪಾಳಕ್ಕಾಗಿ ಪ್ರಾರ್ಥನೆ, ಆದ್ರೆ ನೆಟ್ಟಿಗರು ಏನಂದ್ರು ಗೊತ್ತಾ?

ಬಾಲಿವುಡ್ ನಟಿ ರಾಖಿ ಸಾವಂತ್ ಮಕ್ಕಾದಲ್ಲಿ ಉಮ್ರಾ ನೆರವೇರಿಸುವ ವೇಳೆ ನೇಪಾಳದ ಭೀಕರ ಪ್ರವಾಹ ಪೀಡಿತರ ರಕ್ಷಣೆಗಾಗಿ ಕಣ್ಣೀರಿಟ್ಟು ಪ್ರಾರ್ಥಿಸಿದ್ದಾರೆ. ಪವಿತ್ರ ಕಾಬಾ ಮುಂದೆ ಅವರು ಭಾವುಕರಾಗಿ ಪ್ರಾರ್ಥಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ನೆಟ್ಟಿಗರಿಂದ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ.

Read Full Story

07:59 AM (IST) Aug 29

ಕಸ್ತೂರಿ ರಂಗನ್ ವರದಿ ತಿರಸ್ಕರಿಸಿ ಕೇಂದ್ರಕ್ಕೆ ನಿರ್ಣಯ ಕಳುಹಿಸಲು ಸಿದ್ಧತೆ; ಅರಣ್ಯ ಸಚಿವ ರಾಮಲಿಂಗಾರೆಡ್ಡಿ

ಕೊಡಗಿನಲ್ಲಿ ಮಾನವ-ವನ್ಯಜೀವಿ ಸಂಘರ್ಷ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಸಭೆ ನಡೆಸಿದರು. ಆನೆ ಕಾರಿಡಾರ್ ಅಭಿವೃದ್ಧಿ, ರೈಲ್ವೆ ಬ್ಯಾರಿಕೇಡ್ ವಿಸ್ತರಣೆ ಹಾಗೂ ಕಸ್ತೂರಿ ರಂಗನ್ ವರದಿ ತಿರಸ್ಕರಿಸುವ ನಿರ್ಣಯವನ್ನು ಕೇಂದ್ರಕ್ಕೆ ಕಳುಹಿಸುವ ಬಗ್ಗೆ ಚರ್ಚಿಸಲಾಯಿತು. ಭೂಮಿ ಸಮಸ್ಯೆಗಳ ಪರಿಹಾರದ ಬಗ್ಗೆಯೂ ಸಭೆಯಲ್ಲಿ ಪ್ರಸ್ತಾಪಿಸಲಾಯಿತು.
Read Full Story

07:48 AM (IST) Aug 29

B Nagendra Redux - ಒಂದೇ ಹಗರಣಕ್ಕೆ ಎರಡು ಬಾರಿ ನಾಗೇಂದ್ರ ರಾಜೀನಾಮೆ, ಸಂಪುಟದ 2 ಖಾಲಿ ಸ್ಥಾನಗಳು ಯಾರಿಗೆ?

ಸಚಿವ ಬಿ. ನಾಗೇಂದ್ರ ಅವರ ಸಂಭಾವ್ಯ ರಾಜೀನಾಮೆಯಿಂದಾಗಿ ಸಂಪುಟದಲ್ಲಿ ಎರಡು ಸ್ಥಾನಗಳು ಖಾಲಿಯಾಗುವ ನಿರೀಕ್ಷೆಯಿದೆ. ಈ ಸ್ಥಾನಗಳಿಗಾಗಿ ವಾಲ್ಮೀಕಿ, ಕುರುಬ ಸಮುದಾಯದ ಶಾಸಕರು ಹಾಗೂ ಪ್ರಿಯಕೃಷ್ಣ, ಲಕ್ಷ್ಮೀ ಹೆಬ್ಬಾಳ್ಕರ್‌ರಂತಹ ಪ್ರಭಾವಿ ನಾಯಕರು ತೀವ್ರ ಲಾಬಿ, ಯಾರಿಗೆ ಸಿಗಲಿದೆ ಸಚಿವ ಸ್ಥಾನ?

Read Full Story

07:19 AM (IST) Aug 29

ಕರ್ನಾಟಕ ಕರಾವಳಿಯ ಹೆಬ್ಬಾಗಿಲು ಮಂಗಳೂರು, ಈಗ ರೈಲ್ವೆ ಅಭಿವೃದ್ಧಿಗೆ ಸೂಕ್ತ ಸಮಯ

ದಶಕಗಳಿಂದ ದಕ್ಷಿಣ ರೈಲ್ವೆಯ ಪಾಲಕ್ಕಾಡ್ ವಿಭಾಗದಿಂದ ನಿರ್ಲಕ್ಷ್ಯಕ್ಕೊಳಗಾಗಿದ್ದ ಮಂಗಳೂರು ರೈಲ್ವೆ ವ್ಯಾಪ್ತಿಯನ್ನು ನೈಋತ್ಯ ರೈಲ್ವೆಯ ಮೈಸೂರು ವಿಭಾಗಕ್ಕೆ ಹಸ್ತಾಂತರಿಸಲಾಗಿದೆ. ಈ ಬದಲಾವಣೆಯು ಕರಾವಳಿ ಕರ್ನಾಟಕದ ರೈಲ್ವೆ ಅಭಿವೃದ್ಧಿಗೆ ಹೊಸ ಭರವಸೆ ಮೂಡಿಸಿದೆ.

 

Read Full Story

07:18 AM (IST) Aug 29

ಮೈಸೂರಲ್ಲಿ ಅಪರೂಪದ ಬಿಳಿ ಅಳಿಲು ದರ್ಶನ

ಮೈಸೂರಿನಲ್ಲಿ ಅಪರೂಪದ ಬಿಳಿ ಅಳಿಲು ಪತ್ತೆಯಾಗಿದ್ದು, ಛಾಯಾಗ್ರಾಹಕರ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಬಿಳಿ ಬಣ್ಣಕ್ಕೆ ಕಾರಣವಾದ 'ಲೌಕಿಸಮ್' ಮತ್ತು 'ಆಲ್ಬಿನಿಸಂ' ಸ್ಥಿತಿಗಳ ಬಗ್ಗೆ ಲೇಖನವು ವಿವರಿಸುತ್ತದೆ. ಈ ಹಿಂದೆ ನಗರದಲ್ಲಿ ನಿಜವಾದ ಆಲ್ಬಿನೋ ಅಳಿಲು ಕೂಡ ಕಂಡುಬಂದಿತ್ತು.

 

Read Full Story

07:18 AM (IST) Aug 29

Shivamogga: ತನ್ನ ಸಾಕುನಾಯಿಗೆ ಕಚ್ಚಿತೆಂದು ಬೀದಿ ನಾಯಿಗೆ ಗುಂಡಿಕ್ಕಿ ಕೊಂದ

ಶಿವಮೊಗ್ಗ ಜಿಲ್ಲೆಯ ನಾಡವಳ್ಳಿ ಗ್ರಾಮದಲ್ಲಿ, ತನ್ನ ಸಾಕು ನಾಯಿಯನ್ನು ಕಚ್ಚಿತು ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬ ಬೀದಿ ನಾಯಿಯನ್ನು ಗುಂಡಿಕ್ಕಿ ಕೊಂದಿದ್ದಾನೆ. ಈ ಘಟನೆಗೆ ಸಂಬಂಧಿಸಿದಂತೆ, ಆನಂದಪುರ ಪೊಲೀಸರು ಆರೋಪಿ ಲಿಂಗಮೂರ್ತಿಯನ್ನು ಬಂಧಿಸಿದ್ದಾರೆ.

 

Read Full Story

07:17 AM (IST) Aug 29

ಪಂಪ್‌ಸೆಟ್‌ಗೆ ನಾಡಬಾಂಬ್‌ ಕಟ್ಟಿ ರೈತನ ಕೊ*ಗೆ ಯತ್ನ, ಮೋಟಾರ್‌ ಆನ್‌ ಮಾಡುತ್ತಿದ್ದಂತೆ ಸ್ಫೋಟ

ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನಲ್ಲಿ ಜಮೀನು ವಿವಾದದ ಹಿನ್ನೆಲೆಯಲ್ಲಿ ರೈತನೋರ್ವನನ್ನು ನಾಡಬಾಂಬ್ ಸ್ಫೋಟಿಸಿ ಕೊಲೆ ಮಾಡಲು ಯತ್ನಿಸಲಾಗಿದೆ. ರೈತ ಕರಿಯಣ್ಣ ಪಂಪ್‌ಹೌಸ್‌ನ ಸ್ಟಾಟರ್ ಆನ್ ಮಾಡಿದಾಗ ಬಾಂಬ್ ಸ್ಫೋಟಗೊಂಡಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

 

Read Full Story

07:17 AM (IST) Aug 29

ಮೃತರ ಹೆಸರಲ್ಲಿ 5 ಲಕ್ಷ ರು. ವಸೂಲಿಗೆ ಯತ್ನ: ಇಬ್ಬರ ಬಂಧನ

ಎಂಟು ವರ್ಷಗಳ ಹಿಂದೆ ಮೃತಪಟ್ಟ ವ್ಯಕ್ತಿಯ ಹೆಸರಿನಲ್ಲಿ 5 ಲಕ್ಷ ರುಪಾಯಿ ಹಣಕ್ಕೆ ಬೇಡಿಕೆ ಇಟ್ಟು ಕುಟುಂಬಕ್ಕೆ ಬೆದರಿಕೆ ಹಾಕಿದ ಇಬ್ಬರು ಆರೋಪಿಗಳನ್ನು ಉಡುಪಿ ನಗರ ಪೊಲೀಸರು ಬಂಧಿಸಿದ್ದಾರೆ.

 

Read Full Story

07:17 AM (IST) Aug 29

ಆಂಧ್ರ, ತೆಲಂಗಾಣ ಮಾದರಿಯಲ್ಲಿ ಪೊಲೀಸರ ಸಂಕಷ್ಟ ಭತ್ಯೆ 50% ಏರಿಕೆ: ಸಿಎಂ ಡಿಕೆ ಶಿವಕುಮಾರ್‌

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಆಂಧ್ರ ಮತ್ತು ತೆಲಂಗಾಣ ಮಾದರಿಯಲ್ಲಿ ರಾಜ್ಯ ಪೊಲೀಸರ ಸಂಕಷ್ಟ ಭತ್ಯೆಯನ್ನು ಶೇ.50ರಷ್ಟು ಹೆಚ್ಚಿಸಲು ಸರ್ಕಾರ ಸಮ್ಮತಿಸಿದೆ ಎಂದು ಘೋಷಿಸಿದ್ದಾರೆ. ಜೊತೆಗೆ, ಎನ್‌ಎಸ್‌ಜಿ ವತಿಯಿಂದ ಪೊಲೀಸರಿಗೆ ವಿಶೇಷ ಸಾಮರ್ಥ್ಯ ವೃದ್ಧಿ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

 

Read Full Story

07:16 AM (IST) Aug 29

ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ ನಿಂತ್ಕುಂಡ್ರೂ ಮಂಗ್ಳೂರು ರೈಲ್ವೆ ಬದಲಿಸಲ್ಲ: ಸೋಮಣ್ಣ

ಮಂಗಳೂರು ರೈಲ್ವೆ ವಿಭಾಗವನ್ನು ಮೈಸೂರು ವಿಭಾಗಕ್ಕೆ ಸೇರಿಸುವ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಕೇಂದ್ರ ರೈಲ್ವೆ ಸಚಿವ ವಿ. ಸೋಮಣ್ಣ ಸ್ಪಷ್ಟಪಡಿಸಿದ್ದಾರೆ. ಆಡಳಿತಾತ್ಮಕ ಅನುಕೂಲ, ಕರ್ನಾಟಕದ ಹಿತದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ತಮ್ಮ ನಿಲುವನ್ನು ಸಮರ್ಥಿಸಿಕೊಂಡಿದ್ದಾರೆ.

 

Read Full Story

07:16 AM (IST) Aug 29

ದೋಸ್ತಿ ಹೋರಾಟಕ್ಕೆ ಮಣಿದ ಕಾಂಗ್ರೆಸ್‌, ಡಿಕೆ ಸಂಪುಟದ ಮೊದಲ ವಿಕೆಟ್‌ ಪತನ

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪದ ಹಿನ್ನೆಲೆಯಲ್ಲಿ, ಪ್ರತಿಪಕ್ಷಗಳ ತೀವ್ರ ಒತ್ತಡಕ್ಕೆ ಮಣಿದು ಸಚಿವ ಬಿ.ನಾಗೇಂದ್ರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಭಾವನಾತ್ಮಕವಾಗಿ ರಾಜೀನಾಮೆ ಪ್ರಕಟಿಸಿದ ಅವರು, ಇದೊಂದು ದಲಿತರ ಮೇಲಿನ ದಬ್ಬಾಳಿಕೆ ಎಂದು ಆರೋಪಿಸಿದ್ದಾರೆ.

 

Read Full Story

More Trending News