Published : May 24, 2026, 08:07 AM ISTUpdated : May 24, 2026, 11:51 PM IST

Karnataka News Live: Upendra Movie - ಆಗ ಇದೊಂದು ಹುಚ್ಚು ಸಿನಿಮಾ ಅಂದ್ಕೊಂಡಿದ್ವಿ - ಆದ್ರೆ ಇದರೊಳಗಿನ ಲೈಫ್ ಲೆಸನ್ ಗೊತ್ತಾ?

ಸಾರಾಂಶ

ಬಿಜೆಪಿ ರಾಷ್ಟ್ರೀಯ ನಾಯಕ ನಿತಿನ್ ನಬಿನ್ ಬೆಂಗಳೂರಿಗೆ ಆಗಮಿಸಿದ್ದು, ಹೆಬ್ಬಾಳದ ಹೋಟೆಲ್ ಹಯಾತ್‌ನಲ್ಲಿ ತಂಗಿದ್ದಾರೆ. ರಾಜ್ಯ ಬಿಜೆಪಿ ನಾಯಕರು ಇವರನ್ನು ಹೂಗುಚ್ಛ ನೀಡಿ ಆತ್ಮೀಯವಾಗಿ ಸ್ವಾಗತಿಸಿದರು. ನಾಳೆ (ಸೋಮವಾರ) ಜಿಬಿಎ ಚುನಾವಣೆ, ಸ್ಥಳೀಯ ಸಂಸ್ಥೆಗಳ ಚುನಾವಣೆ ಹಾಗೂ 2028ರ ವಿಧಾನಸಭಾ ಚುನಾವಣೆ ಗೆಲುವಿನ ಕುರಿತು ಅವರು ರಾಜ್ಯ ನಾಯಕರೊಂದಿಗೆ ಸರಣಿ ಸಭೆ ನಡೆಸಿ ರಣತಂತ್ರ ರೂಪಿಸಲಿದ್ದಾರೆ.

17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್:

ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಚುರುಕಾಗಿದ್ದು, ಹವಾಮಾನ ಇಲಾಖೆಯು ಮೇ 24ರ ಭಾನುವಾರ ಬೆಂಗಳೂರು ನಗರ, ಗ್ರಾಮಾಂತರ, ದಕ್ಷಿಣ ಕನ್ನಡ, ಉಡುಪಿ, ಕೋಲಾರ ಮತ್ತು ತುಮಕೂರು ಸೇರಿದಂತೆ ಒಟ್ಟು 17 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ. ಈ ಭಾಗಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಇಂದಿನ ಮತ್ತಷ್ಟು ಪ್ರಮುಖ ಸುದ್ದಿಗಳಿಗಾಗಿ ಲೈವ್ ಬ್ಲಾಗ್ ವೀಕ್ಷಿಸಿ.

11:51 PM (IST) May 24

Upendra Movie - ಆಗ ಇದೊಂದು ಹುಚ್ಚು ಸಿನಿಮಾ ಅಂದ್ಕೊಂಡಿದ್ವಿ - ಆದ್ರೆ ಇದರೊಳಗಿನ ಲೈಫ್ ಲೆಸನ್ ಗೊತ್ತಾ?

ಉಪೇಂದ್ರ ಒಂದು ಸಾಮಾನ್ಯ ಕಮರ್ಷಿಯಲ್ ಚಿತ್ರವಲ್ಲ. ಇದು ಮನುಷ್ಯನ ಜೀವನ, ಅವನ ಆಸೆ, ಅಹಂಕಾರ ಮತ್ತು ಸಂಬಂಧಗಳನ್ನು ಬಹಳ ಆಳವಾಗಿ ಪ್ರಶ್ನಿಸುವ ಒಂದು ಸೈಕಲಾಜಿಕಲ್ ಡ್ರಾಮಾ. ಆಗ ಈ ಸಿನಿಮಾ ನೋಡಿದವರಿಗೆ ಇದೊಂದು ಶಾಕ್ ರೀತಿ ಅನಿಸಿತ್ತು.

Read Full Story

10:59 PM (IST) May 24

ಮನೆ ಬಿಟ್ಟು ಬಂದ ರೈತ, 'ಸಾಯುತ್ತೇನೆ' ಎಂದಿದ್ದ - ಕೊನೆಗೆ ಪೊಲೀಸರು ಮಾಡಿದ್ದು ಕೇಳಿದ್ರೆ ಅಚ್ಚರಿ ಪಡ್ತೀರಾ!

ಆರೋಗ್ಯ ಹಾಗೂ ಸಣ್ಣ ಮಟ್ಟಿಗಿನ ಹಣಕಾಸು ಸಮಸ್ಯೆ ಇದ್ದ ಹಾಸನ ಮೂಲದ ಈ ವ್ಯಕ್ತಿ ಶುಕ್ರವಾರ ಬೆಳಗ್ಗೆ ಯಾರಿಗೂ ಹೇಳದೆ ಮನೆ ಬಿಟ್ಟು ಬಂದಿದ್ದು ಮೊಬೈಲ್ ಫೋನ್‌ನ್ನು ಮಾತ್ರ ಆನ್‌ನಲ್ಲಿ ಇಟ್ಟುಕೊಂಡಿದ್ದರು.

Read Full Story

10:31 PM (IST) May 24

ಏರಿಳಿತ ಅರಿಯದೇ ನದಿಗೆ ಇಳಿದರು, ಒಬ್ಬರಿಗೆ ಈಜು ಬಂದರೂ ಸಾಕಿತ್ತು, ಭಟ್ಕಳ ದುರಂತ ಕಾರಣ ಬಯಲು

ಭಟ್ಕಳ ದುರಂತದಲ್ಲಿ ಮಡಿದವರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ದುರಂತಕ್ಕೆ ಕಾರಣವೇನು? ಈ ಕುರಿತು ರಕ್ಷಣಾ ತಂಡ ಮಾಹಿತಿ ಬಹಿರಂಗಪಡಿಸಿದೆ. ಒಬ್ಬರಿಗೆ ಈಜು ಬಂದರೂ ಎಲ್ಲರ ರಕ್ಷಣೆ ಮಾಡಬಹುದಿತ್ತು ಎಂದಿದ್ದಾರೆ.

Read Full Story

09:16 PM (IST) May 24

ತುಮಕೂರಿನಲ್ಲಿ ಅಸ್ವಸ್ಥಗೊಂಡು ರಸ್ತೆಯಲ್ಲೇ ಕುಸಿದು ಬಿದ್ದ ಪೊಲೀಸ್ ಪೇದೆ - ಆಮೇಲೆನಾಯ್ತು?

ತುಮಕೂರಿನಲ್ಲಿ ಕರ್ತವ್ಯ ನಿರತ ಪೊಲೀಸ್ ಪೇದೆಯೊಬ್ಬರು ದಿಢೀರ್ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತರನ್ನು 55 ವರ್ಷದ ಶಾಂತಕುಮಾರ್ ಎಂದು ಗುರುತಿಸಲಾಗಿದೆ. ಕೋತಿತೋಪು ರಸ್ತೆಯಲ್ಲಿ..

Read Full Story

09:10 PM (IST) May 24

DON 3 Controversy - ರಣವೀರ್ ಸಿಂಗ್ ವಿರುದ್ಧ ತಿರುಗಿ ಬಿದ್ದ ಫರ್ಹಾನ್ ಅಖ್ತರ್; ಇರ್ತಾರಾ ಇಲ್ವಾ 'ಧುರಂಧರ್' ನಟ?

ಭಾರತೀಯ ನಿರ್ಮಾಪಕರ ಸಂಘ ಮತ್ತು ಸಿನಿಮಾ ಒಕ್ಕೂಟಗಳು ಈಗ ಮಧ್ಯಸ್ಥಿಕೆ ವಹಿಸಿ ಈ ಸಮಸ್ಯೆಯನ್ನು ಬಗೆಹರಿಸಲು ಪ್ರಯತ್ನಿಸುತ್ತಿವೆ. ಫರ್ಹಾನ್ ಅಖ್ತರ್ ಅವರು ಬೇರೆ ನಟನ ಮೊರೆ ಹೋಗುತ್ತಾರಾ ಅಥವಾ ರಣವೀರ್ ಅವರನ್ನೇ ಒಪ್ಪಿಸುತ್ತಾರಾ?

Read Full Story

08:56 PM (IST) May 24

ದಾಳಿಕೋರರ ಕೇಸ್‌ ವಾಪಸ್ ಮೂಲಕ ಸರ್ಕಾರ ಯಾವ ಸಂದೇಶ ನೀಡುತ್ತಿದೆ - ಸಿ.ಟಿ.ರವಿ ಪ್ರಶ್ನೆ

ಭಗವಂತ ಖೂಬಾ ಅವರ ಮೇಲೆ ಹಿಂದೂಗಳನ್ನು ಗುರಿಯಾಗಿಸಿಕೊಂಡು ದಾಳಿ ಮಾಡಿದವರ ಕೇಸ್ ವಾಪಸ್ ಪಡೆದು ಸರ್ಕಾರ ಏನು ಸಂದೇಶ ನೀಡುತ್ತಿದೆ ಎಂದು ವಿಧಾನಪರಿಷತ್‌ ಸದಸ್ಯ ಸಿ.ಟಿ.ರವಿ ಪ್ರಶ್ನಿಸಿದ್ದಾರೆ.

Read Full Story

08:23 PM (IST) May 24

ಗೋವಾ ಅಂದ್ರೆ ಬರೀ ಪಾರ್ಟಿ, ಗದ್ದಲ ಅಲ್ಲ - ಶಾಂತಿಪ್ರಿಯರಿಗಾಗಿ ಇಲ್ಲಿದೆ ಸೀಕ್ರೆಟ್ ಸ್ಪಾಟ್ಸ್

ಗೋವಾ ಅಂದ್ರೆ ಬರೀ ಪಾರ್ಟಿ, ಗದ್ದಲ ಅಷ್ಟೇ ಅಲ್ಲ. ಜನಜಂಗುಳಿಯಿಂದ ದೂರ ಇರಲು ಇಷ್ಟಪಡೋರಿಗೆ ಇಲ್ಲಿ ಸಖತ್ ಜಾಗಗಳಿವೆ. ಅಶ್ವೆಮ್, ಕೋಲಾ ಬೀಚ್‌ಗಳಂತಹ ಶಾಂತ ಕಡಲತೀರಗಳು, ದಿವಾರ್‌ನಂತಹ ಸುಂದರ ಹಳ್ಳಿಗಳು, ಗಡಿಬಿಡಿ ಇಲ್ಲದ ಕೆಫೆಗಳು... ಹೀಗೆ ಗೋವಾದ ಇನ್ನೊಂದು ಮುಖವನ್ನು ಇಲ್ಲಿ ಪರಿಚಯಿಸಲಾಗಿದೆ.

Read Full Story

07:22 PM (IST) May 24

Shocking Truth - ಪುರುಷರೇ, ಈ ಬೀಜ ಬಳಿಸಿ.. ಕುದುರೆ ಹಾಗೆ ಜಿಗಿಯುತ್ತ ನೆಗೆಯುತ್ತ ಲೈಫ್ ಎಂಜಾಯ್ ಮಾಡಿ!

ದಿನಕ್ಕೆ ಒಂದು ಚಮಚದಷ್ಟು ಬೀಜಗಳ ಸೇವನೆ ನಿಮ್ಮ ಒಟ್ಟಾರೆ ಆರೋಗ್ಯದ ಚಿತ್ರಣವನ್ನೇ ಬದಲಿಸಬಲ್ಲದು. ನೆನಪಿಡಿ, ಆರೋಗ್ಯಕ್ಕಾಗಿ ಸಾವಿರಾರು ರೂಪಾಯಿ ವೆಚ್ಚ ಮಾಡುವ ಬದಲು, ಈ ಶಕ್ತಿಯುತ ಬೀಜಗಳನ್ನು ಬಳಿಸಿ, ಕುದುರೆಯ ಶಕ್ತಿ ಪಡೆದು ಸಂತೋಷವಾಗಿರಿ..

Read Full Story

06:53 PM (IST) May 24

ಮೀಸಲಾತಿ ವಿಚಾರದಲ್ಲಿ ಸರ್ಕಾರಗಳ ಬೇಜವಾಬ್ದಾರಿ ಸಲ್ಲದು - ವಿ.ಎಸ್.ಉಗ್ರಪ್ಪ ಅಸಮಾಧಾನ

ಮೀಸಲಾತಿ ಸರಿಯಾಗಿ ಜಾರಿಯಾಗದಿದ್ದರಿಂದ ಶೋಷಿತ ವರ್ಗಗಳಿಗೆ ತೀವ್ರ ಅನ್ಯಾಯವಾಗಲಿದೆ ಎಂದು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಅಸಮಾಧಾನ ವ್ಯಕ್ತಪಡಿಸಿದರು. ವಿವಿಧ ಸಮುದಾಯಗಳನ್ನು ಎಸ್‌ಸಿ, ಎಸ್‌ಟಿಗೆ..

Read Full Story

06:44 PM (IST) May 24

ಕೊಂಕಣ ರೈಲ್ವೆಯ ಮೂಲ್ಕಿ ರೈಲು ನಿಲ್ದಾಣದ ಬಹುದೊಡ್ಡ ಬದಲಾವಣೆ, ಬಹುವರ್ಷದ ಪ್ರಯಾಣಿಕರ ಬಹುದಿನಗಳ ಕನಸು ನನಸು

ಮೂಲ್ಕಿ ರೈಲು ನಿಲ್ದಾಣದಲ್ಲಿ ಸಂಸದರ ಅನುದಾನದಿಂದ 1.42 ಕೋಟಿ ರು. ವೆಚ್ಚದಲ್ಲಿ ನಿರ್ಮಿಸಲಾದ ನೂತನ ಪ್ಲಾಟ್‌ಫಾರ್ಮ್ ಲೋಕಾರ್ಪಣೆಗೆ ಸಿದ್ಧವಾಗಿದೆ. ಈ ಅಭಿವೃದ್ಧಿಯ ನಡುವೆಯೂ, ನಿಲ್ದಾಣದ ಸಂಪರ್ಕ ರಸ್ತೆಯ ದುಸ್ಥಿತಿ ಮತ್ತು ಪ್ರಮುಖ ರೈಲುಗಳ ನಿಲುಗಡೆಗೆ ಬೇಡಿಕೆಯಂತಹ ಸಮಸ್ಯೆಗಳು ಇನ್ನೂ ಉಳಿದಿವೆ.
Read Full Story

06:34 PM (IST) May 24

ಬತ್ತಿರುವ ಬೋರ್‌ವೆಲ್‌ನ್ನು ಮೂರು ವಿಧಾನಗಳಿಂದ ರೀಚಾರ್ಜ್ ಮಾಡಿ; ನೀರಿನ ಸಮಸ್ಯೆ ಇರಲ್ಲ

ಬೇಸಿಗೆಯಲ್ಲಿ ಬತ್ತಿಹೋಗುವ ಬೋರ್‌ವೆಲ್‌ಗಳನ್ನು ಮಳೆಗಾಲದಲ್ಲಿ ಸುಲಭವಾಗಿ ರೀಚಾರ್ಜ್ ಮಾಡಬಹುದು. ಅಂತರ್ಜಲ ಮಟ್ಟವನ್ನು ಹೆಚ್ಚಿಸುವ ಮತ್ತು ನೀರಿನ ಸಮಸ್ಯೆಯನ್ನು ನೀಗಿಸುವ ಮೂರು ಸರಳ ವಿಧಾನಗಳನ್ನು ಈ ಲೇಖನದಲ್ಲಿ ವಿವರಿಸಲಾಗಿದೆ.
Read Full Story

06:34 PM (IST) May 24

ಮಣಿಪಾಲದಲ್ಲಿ ರಾಜ್ಯದ ಪ್ರಥಮ ಹೋಮ್ ಅವೇ ಫ್ರಮ್ ಹೋಮ್ - ಏನಿದು ಹೊಸ ವ್ಯವಸ್ಥೆ?

ಯಾವುದೇ ಕಾರಣಕ್ಕೆ ಕ್ಯಾನ್ಸರ್ ಪೀಡಿತ ಮಕ್ಕಳು ಚಿಕಿತ್ಸೆಯಿಂದ ದೂರ ಉಳಿಯಬಾರದು ಎಂಬ ಉದ್ದೇಶವನ್ನು ಹೊಂದಿರುವ ನೋಂದಾಯಿತ ಭಾರತೀಯ ಲಾಭರಹಿತ ಸಂಸ್ಥೆಯಾದ ಆಕ್ಸೆಸ್ ಲೈಫ್ ಮತ್ತು ಚೆಲ್ಲಾರಾಮ್..

Read Full Story

06:22 PM (IST) May 24

ಬರಾಕ್ ಒಬಾಮಾ ಮಂಡ್ಯ ಭೇಟಿ ಹಿನ್ನೆಲೆ, ಈ ಹಳ್ಳಿಯ ರಸ್ತೆ ಅಭಿವೃದ್ಧಿಗೆ ₹11.4ಕೋಟಿ ಮಂಜೂರು ಮಾಡಿದ ರಾಜ್ಯ ಕ್ಯಾಬಿನೆಟ್

ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಅವರ ಮಂಡ್ಯ ಭೇಟಿಯ ನಿರೀಕ್ಷೆಯಲ್ಲಿ, ರಾಜ್ಯ ಸರ್ಕಾರವು ಹಲ್ಲೆಗೆರೆ ಗ್ರಾಮದ 7.5 ಕಿ.ಮೀ ರಸ್ತೆ ಅಭಿವೃದ್ಧಿಗೆ ₹11.4 ಕೋಟಿ ಅನುದಾನ ಮಂಜೂರು ಮಾಡಿದೆ. ದಲೈ ಲಾಮಾ ಕೂಡ ಭಾಗವಹಿಸಲಿರುವ ಈ ಕಾರ್ಯಕ್ರಮವು, ಡಾ. ಲಕ್ಷ್ಮಿ ನರಸಿಂಹ ಮೂರ್ತಿ ನೇತೃತ್ವದ ₹80 ಕೋಟಿ ವೆಚ್ಚದ ಅಂತರಾಷ್ಟ್ರೀಯ ಯೋಗ ಮತ್ತು ಧ್ಯಾನ ಕೇಂದ್ರದ ಶಿಲಾನ್ಯಾಸ ಸಮಾರಂಭವಾಗಿದೆ.
Read Full Story

06:21 PM (IST) May 24

ಭಟ್ಕಳ ಕಪ್ಪೆಚಿಪ್ಪು ದುರಂತದಲ್ಲಿ ನಾಪತ್ತೆಯಾಗಿದ್ದ ಮಂಜಮ್ಮ ಶವ ಪತ್ತೆ, ಸಾವಿನ ಸಂಖ್ಯೆ 9ಕ್ಕೆ ಏರಿಕೆ

ಭಟ್ಕಳ ಕಡಲ ತೀರದಲ್ಲಿ ಕಪ್ಪೆ ಚಿಪ್ಪು ಹೆಕ್ಕಲು ಹೋಗಿ ಮುಳುಗಿದ ದುರಂತ ಘಟನೆಯಲ್ಲಿ ಸಾವಿನ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. ನಾಪತ್ತೆಯಾಗಿದ್ದ ಮತ್ತೊಬ್ಬರ ಮೃತದೇಹ ಪತ್ತೆಯಾಗಿದೆ. ಶೋಧ ಕಾರ್ಯಾಚರಣೆ ಮುಂದುವರಿದಿದೆ.

Read Full Story

05:48 PM (IST) May 24

ಮಂಗಳೂರು ಹೆದ್ದಾರಿಯ ಹೊಸ ಅಧ್ಯಾಯ, ಬೈಕಂಪಾಡಿಗೆ ಎಲಿವೇಟೆಡ್ ಫ್ಲೈಓವರ್, 414 ಕೋಟಿ ರೂ ಯೋಜನೆಗೆ ಕೇಂದ್ರದ ಅನುಮೋದನೆ

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬೈಕಂಪಾಡಿಯಿಂದ ಕೆಐಒಸಿಎಲ್‌ ಜಂಕ್ಷನ್‌ವರೆಗೆ 414.16 ಕೋಟಿ ರು. ವೆಚ್ಚದಲ್ಲಿ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಈ ಯೋಜನೆಯು ನವ ಮಂಗಳೂರು ಬಂದರಿಗೆ ನೇರ ಸಂಪರ್ಕವನ್ನು ಸುಧಾರಿಸುವ ಗುರಿ ಹೊಂದಿದ್ದು, ಹೆದ್ದಾರಿ ಸಂಚಾರ ಮತ್ತು ಸ್ಥಳೀಯ ವಾಹನಗಳ ಓಡಾಟವನ್ನು ಪ್ರತ್ಯೇಕಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಿದೆ.
Read Full Story

05:38 PM (IST) May 24

ಕ್ರಿಕೆಟ್ ಆಡುತ್ತಿರುವಾಗಲೇ ಕುಸಿದು ಬಿದ್ದ ಆಟಗಾರ; ಶಿವಮೊಗ್ಗ ಮೂಲದ ಕರ್ನಾಟಕ ಕ್ರಿಕೆಟಿಗ ಹೃದಯಾಘಾತದಿಂದ ನಿಧನ!

ಬೆಂಗಳೂರು: ಇತ್ತೀಚಿಗಿನ ದಿನಗಳಲ್ಲಿ ನಡುವಯಸ್ಸಿನ ವ್ಯಕ್ತಿಗಳು ಹೃದಯಾಘಾತದಿಂದ ಕೊನೆಯುಸಿರೆಳೆಯುತ್ತಿರುವ ಆಘಾತಕಾರಿ ಘಟನೆಗಳು ನಡೆಯುತ್ತಲೇ ಇದೆ. ಇದೀಗ 2015ರ ಕರ್ನಾಟಕ ರಣಜಿ ತಂಡದ ಆಟಗಾರ ಶಿವಮೊಗ್ಗ ಮೂಲದ ಅಕ್ಷಯ್ ಎಸ್‌.ಎಲ್ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.

 

Read Full Story

05:35 PM (IST) May 24

ಸೈಕಲ್, ಬೈಕ್ ಪ್ರಯಾಣ ಕೇವಲ ಪ್ರಚಾರದ ಗಿಮಿಕ್ - ಬಿಜೆಪಿ ನಾಯಕರ ವಿರುದ್ಧ ಜಾರಕಿಹೊಳಿ ವಾಗ್ದಾಳಿ

ಮೋದಿ ಅವರ ಹೇಳಿಕೆ ಹಿನ್ನೆಲೆಯಲ್ಲಿ ಅವರ ಕರೆಗೆ ಓಗೊಟ್ಟು ಸೈಕಲ್ ಹಾಗೂ ಬೈಕ್ ಮೂಲಕ ಪ್ರಯಾಣಿಸುತ್ತಿರುವ ಬಿಜೆಪಿ ನಾಯಕರು ಪ್ರಚಾರಕ್ಕಾಗಿ ಕೇವಲ ಎರಡು ದಿನ ಇದನ್ನು ಪಾಲಿಸಿದ್ದಾರೆ ಎಂದು ಸಚಿವ ಸತೀಶ್ ಜಾರಕಿಹೊಳಿ ಟೀಕಿಸಿದ್ದಾರೆ.

Read Full Story

05:21 PM (IST) May 24

ರಾಜ್ಯ ರಾಜಕಾರಣದಲ್ಲಿ ಹೊಸ ಬೆಳವಣಿಗೆ - ನಾಯಕತ್ವ ಬದಲಾವಣೆ ಬಗ್ಗೆ ಸಚಿವ ತಿಮ್ಮಾಪೂರ ಹೇಳಿದ್ದೇನು?

ಸದ್ಯಕ್ಕೆ ಹೈಕಮಾಂಡ್ ಮಟ್ಟದಲ್ಲಿ ನಾಯಕತ್ವ ಬದಲಾವಣೆ ಕುರಿತು ಯಾವುದೇ ಚರ್ಚೆ ನಡೆದಿಲ್ಲ. ಈ ಸುದ್ದಿಗಳು ಕೇವಲ ಮಾಧ್ಯಮಗಳಲ್ಲಿ ಸುಖಾಸುಮ್ಮನೆ ಓಡಾಡುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಹೇಳಿದರು. 

Read Full Story

05:11 PM (IST) May 24

ಬೆಂಗಳೂರು ಬಾಡಿಗೆ ಮನೆಯ ಕರಾಳತೆ - ಗಾಳಿ-ಬೆಳಕಿಲ್ಲದ ಫ್ಲಾಟ್‌ಗೆ 35ಸಾವಿರ ರೆಂಟ್, ಎಸಿ ಹಾಕಿದ್ದಕ್ಕೆ ಮಾಲೀಕನಿಂದ ಕಿರುಕುಳ!

ಕೋರಮಂಗಲದಲ್ಲಿ ₹35,000 ಬಾಡಿಗೆ ಪಾವತಿಸುತ್ತಿದ್ದ ಯುವಕನೊಬ್ಬ, ಎಸಿ ಹೆಚ್ಚು ಬಳಸಿದ್ದಾನೆಂದು ಮನೆಮಾಲೀಕನಿಂದ ನಿಂದನೆಗೊಳಗಾದ ಘಟನೆ ರೆಡ್ಡಿಟ್‌ನಲ್ಲಿ ವೈರಲ್ ಆಗಿದೆ. ಈ ಘಟನೆಯು ಬೆಂಗಳೂರಿನಲ್ಲಿ ದುಬಾರಿ ಬಾಡಿಗೆ ಮತ್ತು ಮನೆಮಾಲೀಕರ ಕಿರುಕುಳದ ಬಗ್ಗೆ ವ್ಯಾಪಕ ಚರ್ಚೆಯನ್ನು ಹುಟ್ಟುಹಾಕಿದೆ.
Read Full Story

05:08 PM (IST) May 24

ತುಮಕೂರು ಜಿಲ್ಲೆಯ ಗುಬ್ಬಿ ಬಳಿ HALಗೆ 300 ಎಕರೆ ಜಾಗ - ಸಚಿವ ಡಾ. ಜಿ. ಪರಮೇಶ್ವರ್

ಗೃಹ ಸಚಿವ ಡಾ.ಜಿ. ಪರಮೇಶ್ವರ್ ತುಮಕೂರಿನಲ್ಲಿ ಹಲವು ಮಹತ್ವದ ವಿಷಯಗಳನ್ನು ಪ್ರಸ್ತಾಪಿಸಿದ್ದಾರೆ. ಗುಬ್ಬಿ ಬಳಿ ಎಚ್‌ಎಎಲ್‌ಗೆ 300 ಎಕರೆ ಜಾಗ, ಬೆಂಗಳೂರು-ತುಮಕೂರು ಮೆಟ್ರೋಗೆ ಡಿಪಿಆರ್ ಸಿದ್ಧವಾಗಿರುವುದಾಗಿ ತಿಳಿಸಿದ್ದಾರೆ. ಜೊತೆಗೆ, ತಮಗೆ ಮುಖ್ಯಮಂತ್ರಿ ಹುದ್ದೆ ನಿಭಾಯಿಸುವ ಸಾಮರ್ಥ್ಯವಿದೆ ಎಂದು ಪುನರುಚ್ಚರಿಸಿದ್ದಾರೆ.
Read Full Story

04:46 PM (IST) May 24

Emotional Post - ಹೀಗೆಲ್ಲಾ ಮಾಡಿದ್ರೆ 'ನಾನು ಕನ್ನಡಿಗ' ಅಂತ ಹೇಳೋದ್ ಹ್ಯಾಗೆ? BBK ಸ್ಪರ್ಧಿಯ ಕಣ್ಣೀರು!

"ಒಬ್ಬ ಮನುಷ್ಯ ತನಗೆ ಇಷ್ಟ ಬಂದ ಕಂಟೆಂಟ್ ಮಾಡುವ ಸ್ವಾತಂತ್ರ್ಯ ಇರುತ್ತದೆ. ನಾನು ಫಿಟ್ನೆಸ್ ಬಗ್ಗೆ ಮಾಹಿತಿ ನೀಡುತ್ತಿದ್ದೇನೆ. ಒಂದು ವೇಳೆ ನನ್ನ ಕಂಟೆಂಟ್ ಕೆಟ್ಟದಾಗಿದ್ದರೆ ಇನ್ಸ್ಟಾಗ್ರಾಮ್ ಅವರೇ ನನ್ನನ್ನು ಬ್ಲಾಕ್ ಮಾಡುತ್ತಿದ್ದರು. ಆದರೆ ಕೆಲವರು ಬೇಕಂತಲೇ ನನ್ನ ವೈಯಕ್ತಿಕ ವಿಚಾರಗಳನ್ನು ಎಳೆದು ತಂದು ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದಾರೆ.

Read Full Story

04:42 PM (IST) May 24

ಭಟ್ಕಳದ ಕಪ್ಪೆಚಿಪ್ಪು ದುರಂತದಲ್ಲಿ ಮೃತರ ಮಾಹಿತಿ; 5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಉತ್ತರ ಕನ್ನಡದ ಭಟ್ಕಳದಲ್ಲಿ ಕಪ್ಪೆಚಿಪ್ಪು ತರಲು ನದಿಗೆ ತೆರಳಿದ್ದ ಒಂದೇ ಕುಟುಂಬದ ಎಂಟು ಮಂದಿ ನೀರುಪಾಲಾಗಿದ್ದಾರೆ. ಈ ದುರಂತಕ್ಕೆ ಮರುಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಇನ್ನೂ ಮೂವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ.
Read Full Story

04:20 PM (IST) May 24

ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ - ಉತ್ತರ-ದಕ್ಷಿಣ ಒಳನಾಡು ಮತ್ತು ಕರಾವಳಿಯಲ್ಲಿ 5 ದಿನ ಮಳೆ ಅಬ್ಬರ!

ನೈಋತ್ಯ ಮುಂಗಾರು ಚುರುಕುಗೊಂಡಿದ್ದು, ರಾಜ್ಯಕ್ಕೆ ಪ್ರವೇಶಿಸಲು ಸಜ್ಜಾಗಿದೆ. ಇದರ ಪ್ರಭಾವದಿಂದಾಗಿ, ಮುಂದಿನ ಐದು ದಿನಗಳ ಕಾಲ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಹಾಗೂ ಆಲಿಕಲ್ಲು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Read Full Story

04:02 PM (IST) May 24

ಉತ್ತರ ಕರ್ನಾಟಕ ರೈಲು ಅಭಿವೃದ್ಧಿ ಬಗ್ಗೆ ಮಹತ್ವದ ಸಭೆ, ಗದಗ-ಮುಂಬೈ ವಂದೇ ಭಾರತ್ ಎಕ್ಸಪ್ರೆಸ್‌ಗೆ ಡಿಮ್ಯಾಂಡ್

ಹುಬ್ಬಳ್ಳಿಯಲ್ಲಿ ದಕ್ಷಿಣ ಪಶ್ಚಿಮ ರೈಲ್ವೆ ಮಹಾ ವ್ಯವಸ್ಥಾಪಕರ ಸಭೆಯಲ್ಲಿ, ರಾಜ್ಯಸಭಾ ಸಂಸದ ನಾರಾಯಣಸಾ ಭಾಂಡಗೆ ಅವರು ಉತ್ತರ ಕರ್ನಾಟಕದ ರೈಲು ಅಭಿವೃದ್ಧಿಗೆ ಸಂಬಂಧಿಸಿದ ಹಲವು ಪ್ರಮುಖ ಬೇಡಿಕೆಗಳನ್ನು ಮಂಡಿಸಿದರು. ಹೊಸ ವಂದೇ ಭಾರತ್, ಬಾಗಲಕೋಟೆ-ಕುಡಚಿ ಮಾರ್ಗ, ಮತ್ತು ವಿಜಯಪುರ-ತಿರುಪತಿ ರೈಲು ಸೇರಿದಂತೆ ಹಲವು ಯೋಜನೆಗಳ ಕುರಿತು ಚರ್ಚಿಸಲಾಗಿದ್ದು, ಈ ಯೋಜನೆಗಳು ಪ್ರಾದೇಶಿಕ ಸಂಪರ್ಕ ಮತ್ತು ಆರ್ಥಿಕ ಬೆಳವಣಿಗೆಗೆ ಪೂರಕವಾಗಿವೆ.

Read Full Story

03:47 PM (IST) May 24

ಭಟ್ಕಳ ನದಿಯಲ್ಲಿ ಕಪ್ಪೆಚಿಪ್ಪು ದುರಂತ - ಸಾವಿನ ಸಂಖ್ಯೆ 8ಕ್ಕೇರಿಕೆ, ಮೂವರಿಗಾಗಿ ಹುಡುಕಾಟ

ಉತ್ತರ ಕನ್ನಡದ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆಚಿಪ್ಪು ಸಂಗ್ರಹಿಸಲು ಹೋದ 11 ಜನರ ಪೈಕಿ 8 ಮಂದಿ ಮೃತಪಟ್ಟಿದ್ದಾರೆ. ಒಂದೇ ಕುಟುಂಬದವರಾದ ಇವರಲ್ಲಿ, ಉಳಿದ ಮೂವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ.
Read Full Story

03:24 PM (IST) May 24

ಆಂಧ್ರದ ಕುಪ್ಪಂನಿಂದ ಬೆಂಗಳೂರಿಗೆ ಹೊಸ ಮಾರ್ಗ; ಬಂಗಾರಪೇಟೆ ರೈತರ ಬದುಕಿನಲ್ಲಿ ಬಿರುಗಾಳಿ?

ಆಂಧ್ರದ ಕುಪ್ಪಂನಿಂದ ಬೆಂಗಳೂರಿಗೆ ಬಂಗಾರಪೇಟೆ ಮೂಲಕ ಹೊಸ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಮುಂದಾಗಿದೆ. ಈ ಯೋಜನೆಯಿಂದಾಗಿ ಬಂಗಾರಪೇಟೆ ತಾಲೂಕಿನ 17 ಗ್ರಾಮಗಳ ರೈತರು ತಮ್ಮ ಕೃಷಿ ಜಮೀನುಗಳನ್ನು ಕಳೆದುಕೊಳ್ಳುವ ಆತಂಕದಲ್ಲಿದ್ದಾರೆ.
Read Full Story

03:12 PM (IST) May 24

ಕರ್ನಾಟಕದಲ್ಲಿ ಕನಿಷ್ಠ ವೇತನ ಭಾರಿ ಪರಿಷ್ಕರಣೆ - ಬೆಂಗಳೂರಿನಲ್ಲಿ ಕೌಶಲ್ಯರಹಿತ ಕಾರ್ಮಿಕರಿಗೂ ₹23376 ವೇತನ ನಿಗದಿ

ಕರ್ನಾಟಕ ಸರ್ಕಾರವು ಕಾರ್ಮಿಕರ ಕನಿಷ್ಠ ವೇತನವನ್ನು ಶೇ. 60ರಷ್ಟು ಹೆಚ್ಚಿಸಿ ಅಂತಿಮ ಅಧಿಸೂಚನೆ ಹೊರಡಿಸಿದೆ. ಈ ಹೊಸ ಆದೇಶದಿಂದ ಬೆಂಗಳೂರಿನ ಕೌಶಲ್ಯರಹಿತ ಕಾರ್ಮಿಕರಿಗೆ ಮಾಸಿಕ ₹23,376 ಸಿಗಲಿದ್ದು, ಉದ್ಯೋಗದಾತರ ಸಂಘವು ಕಾನೂನಾತ್ಮಕ ಕಾರಣ ನೀಡಿ ಇದನ್ನು ತೀವ್ರವಾಗಿ ವಿರೋಧಿಸಿದೆ.
Read Full Story

02:53 PM (IST) May 24

Bhatkal - ಕಪ್ಪೆಚಿಪ್ಪು ತೆಗೆಯಲು ಹೋದ ಒಂದೇ ಕುಟುಂಬದ ಮೂವರು ನೀರುಪಾಲು; 9 ಮಂದಿ ಗಂಭೀರ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆಚಿಪ್ಪು ತೆಗೆಯಲು ಹೋದ ಮೂವರು ನೀರುಪಾಲಾಗಿದ್ದಾರೆ. ಒಂದೇ ಕುಟುಂಬದ 8 ಮಂದಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದ್ದು, ನಾಪತ್ತೆಯಾದವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ.
Read Full Story

02:11 PM (IST) May 24

Underrated Movies - ಸೌಂಡ್‌ ಮಾಡಿಲ್ಲ ಅನ್ಕೋಬೇಡಿ; ಕಂಟೆಂಟ್‌ನಲ್ಲಿ ಕನ್ನಡದ ಚಿನ್ನದಂಥ ಸಿನಿಮಾಗಳಿವು!

ಕೆಲ ಸಿನಿಮಾಗಳು ಯಾವುದ್ಯಾವುದೋ ಕಾರಣಕ್ಕೆ ಸದ್ದು ಮಾಡೋದಿಲ್ಲ, ಆದರೆ ನಿಜಕ್ಕೂ ಅದ್ಭುತವಾದ ಕಂಟೆಂಟ್‌ ಹೊಂದಿರುತ್ತವೆ. ಹಾಗಿದ್ದರೆ ಕನ್ನಡದಲ್ಲಿ Most underrated Movies ಕೂಡ ಇದೆ, ಹಾಗಾದರೆ ಅವು ಯಾವುವು? 

Read Full Story

01:10 PM (IST) May 24

ಬೆಂಗಳೂರು - 50 ವರ್ಷದ ಬಾಕ್ಸಿಂಗ್ ಕೋಚ್‌ನಿಂದ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ, ಪೋಕ್ಸೋ ಕೇಸ್ ದಾಖಲು

ಬೆಂಗಳೂರಿನ ಕಂಠೀರವ ಕ್ರೀಡಾಂಗಣದ ಬಾಕ್ಸಿಂಗ್ ತರಬೇತುದಾರನೊಬ್ಬ 17 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಪೋಕ್ಸೋ ಕಾಯ್ದೆಯಡಿ ಬಂಧಿತನಾಗಿದ್ದಾನೆ. ಕಳೆದ ನಾಲ್ಕು ವರ್ಷಗಳಿಂದ ಈ ದೌರ್ಜನ್ಯ ನಡೆಯುತ್ತಿದ್ದು, ಚೆನ್ನೈ ಪ್ರವಾಸದ ವೇಳೆ ಇದು ತಾರಕಕ್ಕೇರಿತ್ತು ಎಂದು ಸಂತ್ರಸ್ತೆಯ ತಾಯಿ ದೂರಿನಲ್ಲಿ ತಿಳಿಸಿದ್ದಾರೆ.
Read Full Story

12:05 PM (IST) May 24

ಶಿವಮೊಗ್ಗ-ಶೃಂಗೇರಿ-ಮಂಗಳೂರು ಹೊಸ ರೈಲು ಮಾರ್ಗ, 3,300 ಕೋಟಿ ರು. ಯೋಜನಾ ವೆಚ್ಚ, ವಂದೇ ಭಾರತ್ ಶೀಘ್ರ!

ಶಿವಮೊಗ್ಗ-ಶೃಂಗೇರಿ-ಮಂಗಳೂರು ಹೊಸ ರೈಲು ಮಾರ್ಗದ ಸಮೀಕ್ಷೆ ಪೂರ್ಣಗೊಂಡಿದ್ದು, ಶೀಘ್ರದಲ್ಲೇ ಟೆಂಡರ್ ಕರೆಯಲಾಗುವುದು ಎಂದು ರೈಲ್ವೆ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ. ಇದರೊಂದಿಗೆ, ಮಂಗಳೂರು-ಬೆಂಗಳೂರು ನಡುವೆ ಜೂನ್‌ನಿಂದ ವಂದೇ ಭಾರತ್ ಎಕ್ಸ್‌ಪ್ರೆಸ್‌ ಸಂಚಾರ ಆರಂಭವಾಗಲಿದೆ.

Read Full Story

10:56 AM (IST) May 24

ಮಾದಾವರ-ತುಮಕೂರು ಮೆಟ್ರೋ ಡಿಪಿಆರ್ ಸಿದ್ಧ - ಮಹತ್ವದ ಯೋಜನೆಗೆ ಸರ್ಕಾರದ ಒಪ್ಪಿಗೆ ಮಾತ್ರ ಬಾಕಿ

ಮಾದಾವರ-ತುಮಕೂರು ಮೆಟ್ರೋ ಯೋಜನೆಯ ವಿಸ್ತೃತ ಯೋಜನಾ ವರದಿ (ಡಿಪಿಆರ್‌) ಸಿದ್ಧವಾಗಿದ್ದು, ಶೀಘ್ರದಲ್ಲೇ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ. ಸುಮಾರು 20 ಸಾವಿರ ಕೋಟಿ ರೂ. ವೆಚ್ಚದ ಈ ಯೋಜನೆಯನ್ನು  ಪಿಪಿಪಿ ಕೈಗೆತ್ತಿಕೊಳ್ಳಲು ಸರ್ಕಾರ ಚಿಂತನೆ ನಡೆಸಿದೆ.

Read Full Story

10:24 AM (IST) May 24

ಚಾಮರಾಜನಗರ - ಬಾಲಕನನ್ನು ಬಲಿ ಪಡೆದಿದ್ದ ನರಭಕ್ಷಕ ಚಿರತೆ ಸೆರೆ? 15 ದಿನಗಳ ಬಳಿಕ ತಾನೇ ತಾನಾಗಿ ಬೋನಿಗೆ ಬಿದ್ದಿದ್ದುಹೇಗೆ?

ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟದ ಬಳಿ ಪೋಷಕರ ಮುಂದೆಯೇ ಬಾಲಕನನ್ನು ಎಳೆದೊಯ್ದು ಕೊಂದಿದ್ದ ಚಿರತೆಯು, 15 ದಿನಗಳ ನಿರಂತರ ಕಾರ್ಯಾಚರಣೆಯ ನಂತರ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದಿದೆ. ಆದರೆ, ಸೆರೆಸಿಕ್ಕಿರುವುದು ಅದೇ ನರಭಕ್ಷಕ ಚಿರತೆಯೇ ಎಂಬ ಅನುಮಾನ ಮೂಡಿಸಿದೆ.

Read Full Story

10:14 AM (IST) May 24

ಕಾಳಿ ನದಿ ರಾಫ್ಟಿಂಗ್ - ಕರೆಂಟ್ ಶಾಕ್ ಮೂಲಕ ಓರ್ವನ ಸಾವಿನಲ್ಲಿ ಅಂತ್ಯವಾದ ಬೆಂಗಳೂರು ಟೆಕ್ಕಿಗಳ ಸಾಹಸ ಯಾತ್ರೆ!

ಉತ್ತರ ಕನ್ನಡದ ಕಾಳಿ ನದಿಯಲ್ಲಿ ರಿವರ್ ರಾಫ್ಟಿಂಗ್ ಮಾಡುವಾಗ ವಿದ್ಯುತ್ ಸ್ಪರ್ಶಿಸಿ ಬೆಂಗಳೂರಿನ ಸಾಫ್ಟ್‌ವೇರ್ ಇಂಜಿನಿಯರ್ ಒಬ್ಬರು ಮೃತಪಟ್ಟಿದ್ದಾರೆ. ರೆಸಾರ್ಟ್‌ನವರು ಅಳವಡಿಸಿದ್ದ ಪಂಪ್ ಸೆಟ್‌ನಿಂದ ನೀರಿಗೆ ವಿದ್ಯುತ್ ಪ್ರವಹಿಸಿದ್ದೇ ಈ ದುರಂತಕ್ಕೆ ಕಾರಣವಾಗಿದೆ.

Read Full Story

10:05 AM (IST) May 24

ಕರಾವಳಿಯ ಕನಸಿನ ರೈಲು ವಂದೇ ಭಾರತ್ ಸಂಚಾರ ಜೂನ್‌ನಿಂದ ಅಧಿಕೃತ ಆರಂಭ - ಸಚಿವ ವಿ ಸೋಮಣ್ಣ

ಮಂಗಳೂರು-ಬೆಂಗಳೂರು ನಡುವಿನ ಬಹುನಿರೀಕ್ಷಿತ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು ಸಂಚಾರವು ಜೂನ್‌ನಿಂದ ಅಧಿಕೃತವಾಗಿ ಆರಂಭಗೊಳ್ಳಲಿದೆ ಎಂದು ಕೇಂದ್ರ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ. ಸಕಲೇಶಪುರ-ಕುಕ್ಕೆ ಸುಬ್ರಹ್ಮಣ್ಯ ಮಾರ್ಗದ ವಿದ್ಯುದೀಕರಣ ಪೂರ್ಣಗೊಂಡಿದ್ದು, ಇದು ಹೆಚ್ಚುವರಿ ರೈಲು ಸಂಚಾರಕ್ಕೆ ಅವಕಾಶ ಕಲ್ಪಿಸಿದೆ. ಅಲ್ಲದೆ, ಕಾರವಾರದವರೆಗೆ ರೈಲು ವಿಸ್ತರಣೆ, ಶಿವಮೊಗ್ಗ-ಮಂಗಳೂರು ಹೊಸ ಮಾರ್ಗದ ಬಗ್ಗೆಯೂ ಪ್ರಸ್ತಾಪಿಸಲಾಗಿದೆ.

Read Full Story

09:24 AM (IST) May 24

Cockroach Janata Part - ಕಾಕ್ರೋಚ್ ಭಯ ಕಾಂಗ್ರೆಸ್‌ಗೆ ಹೊರತು ಬಿಜೆಪಿಗಲ್ಲ; ಪ್ರಲ್ಹಾದ್ ಜೋಶಿ ಕೊಟ್ಟ ಉತ್ತರ ಕೇಳಿ ಶಾಕ್!

ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರು, 'ಕಾಕ್ರೋಚ್ ಜನತಾ ಪಾರ್ಟಿ'ಯಿಂದ ಕಾಂಗ್ರೆಸ್‌ಗೆ ಭಯವಾಗಿದೆ, ಬಿಜೆಪಿಗಲ್ಲ ಎಂದು ತಿರುಗೇಟು ನೀಡಿದ್ದಾರೆ. ಅಲ್ಲದೆ, ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ರಚಿಸುವ ಹೋರಾಟಕ್ಕೆ ತಮ್ಮ ಬೆಂಬಲವಿದೆ ಎಂದು ಸ್ಪಷ್ಟಪಡಿಸಿದ್ದಾರೆ.
Read Full Story

09:13 AM (IST) May 24

ಮುಳ್ಳಯ್ಯನಗಿರಿಯಲ್ಲಿ ಸೃಷ್ಟಿಯಾಯ್ತು ‘ಮಿನಿ ಹಿಮಾಲಯ’ - ಮುಂಗಾರಿಗೂ ಮುನ್ನವೇ ಮಂಜಿನ ನಗರಿಯಾದ ಕಾಫಿನಾಡು!

ಮುಂಗಾರು ಪೂರ್ವ ಮಳೆಯಿಂದಾಗಿ ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ ಶಿಖರವು ದಟ್ಟವಾದ ಮಂಜಿನಿಂದ ಆವೃತವಾಗಿದ್ದು, 'ಮಿನಿ ಹಿಮಾಲಯ'ದಂತೆ ಕಂಗೊಳಿಸುತ್ತಿದೆ. ಈ ಸ್ವರ್ಗೀಯ ವಾತಾವರಣವು ವಾರಾಂತ್ಯದಲ್ಲಿ ಸಹಸ್ರಾರು ಪ್ರವಾಸಿಗರನ್ನು ಆಕರ್ಷಿಸುತ್ತಿದ್ದು, ಅವರು ಈ ವಿಹಂಗಮ ನೋಟವನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ.
Read Full Story

More Trending News