LIVE NOW
Published : May 24, 2026, 08:07 AM ISTUpdated : May 24, 2026, 12:05 PM IST

Karnataka News Live: ಶಿವಮೊಗ್ಗ-ಶೃಂಗೇರಿ-ಮಂಗಳೂರು ಹೊಸ ರೈಲು ಮಾರ್ಗ, 3,300 ಕೋಟಿ ರು. ಯೋಜನಾ ವೆಚ್ಚ, ವಂದೇ ಭಾರತ್ ಶೀಘ್ರ!

ಸಾರಾಂಶ

ಬಿಜೆಪಿ ರಾಷ್ಟ್ರೀಯ ನಾಯಕ ನಿತಿನ್ ನಬಿನ್ ಬೆಂಗಳೂರಿಗೆ ಆಗಮಿಸಿದ್ದು, ಹೆಬ್ಬಾಳದ ಹೋಟೆಲ್ ಹಯಾತ್‌ನಲ್ಲಿ ತಂಗಿದ್ದಾರೆ. ರಾಜ್ಯ ಬಿಜೆಪಿ ನಾಯಕರು ಇವರನ್ನು ಹೂಗುಚ್ಛ ನೀಡಿ ಆತ್ಮೀಯವಾಗಿ ಸ್ವಾಗತಿಸಿದರು. ನಾಳೆ (ಸೋಮವಾರ) ಜಿಬಿಎ ಚುನಾವಣೆ, ಸ್ಥಳೀಯ ಸಂಸ್ಥೆಗಳ ಚುನಾವಣೆ ಹಾಗೂ 2028ರ ವಿಧಾನಸಭಾ ಚುನಾವಣೆ ಗೆಲುವಿನ ಕುರಿತು ಅವರು ರಾಜ್ಯ ನಾಯಕರೊಂದಿಗೆ ಸರಣಿ ಸಭೆ ನಡೆಸಿ ರಣತಂತ್ರ ರೂಪಿಸಲಿದ್ದಾರೆ.

17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್:

ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಚುರುಕಾಗಿದ್ದು, ಹವಾಮಾನ ಇಲಾಖೆಯು ಮೇ 24ರ ಭಾನುವಾರ ಬೆಂಗಳೂರು ನಗರ, ಗ್ರಾಮಾಂತರ, ದಕ್ಷಿಣ ಕನ್ನಡ, ಉಡುಪಿ, ಕೋಲಾರ ಮತ್ತು ತುಮಕೂರು ಸೇರಿದಂತೆ ಒಟ್ಟು 17 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ. ಈ ಭಾಗಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಇಂದಿನ ಮತ್ತಷ್ಟು ಪ್ರಮುಖ ಸುದ್ದಿಗಳಿಗಾಗಿ ಲೈವ್ ಬ್ಲಾಗ್ ವೀಕ್ಷಿಸಿ.

12:05 PM (IST) May 24

ಶಿವಮೊಗ್ಗ-ಶೃಂಗೇರಿ-ಮಂಗಳೂರು ಹೊಸ ರೈಲು ಮಾರ್ಗ, 3,300 ಕೋಟಿ ರು. ಯೋಜನಾ ವೆಚ್ಚ, ವಂದೇ ಭಾರತ್ ಶೀಘ್ರ!

ಶಿವಮೊಗ್ಗ-ಶೃಂಗೇರಿ-ಮಂಗಳೂರು ಹೊಸ ರೈಲು ಮಾರ್ಗದ ಸಮೀಕ್ಷೆ ಪೂರ್ಣಗೊಂಡಿದ್ದು, ಶೀಘ್ರದಲ್ಲೇ ಟೆಂಡರ್ ಕರೆಯಲಾಗುವುದು ಎಂದು ರೈಲ್ವೆ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ. ಇದರೊಂದಿಗೆ, ಮಂಗಳೂರು-ಬೆಂಗಳೂರು ನಡುವೆ ಜೂನ್‌ನಿಂದ ವಂದೇ ಭಾರತ್ ಎಕ್ಸ್‌ಪ್ರೆಸ್‌ ಸಂಚಾರ ಆರಂಭವಾಗಲಿದೆ.

Read Full Story

10:56 AM (IST) May 24

ಮಾದಾವರ-ತುಮಕೂರು ಮೆಟ್ರೋ ಡಿಪಿಆರ್ ಸಿದ್ಧ - ಮಹತ್ವದ ಯೋಜನೆಗೆ ಸರ್ಕಾರದ ಒಪ್ಪಿಗೆ ಮಾತ್ರ ಬಾಕಿ

ಮಾದಾವರ-ತುಮಕೂರು ಮೆಟ್ರೋ ಯೋಜನೆಯ ವಿಸ್ತೃತ ಯೋಜನಾ ವರದಿ (ಡಿಪಿಆರ್‌) ಸಿದ್ಧವಾಗಿದ್ದು, ಶೀಘ್ರದಲ್ಲೇ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ. ಸುಮಾರು 20 ಸಾವಿರ ಕೋಟಿ ರೂ. ವೆಚ್ಚದ ಈ ಯೋಜನೆಯನ್ನು  ಪಿಪಿಪಿ ಕೈಗೆತ್ತಿಕೊಳ್ಳಲು ಸರ್ಕಾರ ಚಿಂತನೆ ನಡೆಸಿದೆ.

Read Full Story

10:24 AM (IST) May 24

ಚಾಮರಾಜನಗರ - ಬಾಲಕನನ್ನು ಬಲಿ ಪಡೆದಿದ್ದ ನರಭಕ್ಷಕ ಚಿರತೆ ಸೆರೆ? 15 ದಿನಗಳ ಬಳಿಕ ತಾನೇ ತಾನಾಗಿ ಬೋನಿಗೆ ಬಿದ್ದಿದ್ದುಹೇಗೆ?

ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟದ ಬಳಿ ಪೋಷಕರ ಮುಂದೆಯೇ ಬಾಲಕನನ್ನು ಎಳೆದೊಯ್ದು ಕೊಂದಿದ್ದ ಚಿರತೆಯು, 15 ದಿನಗಳ ನಿರಂತರ ಕಾರ್ಯಾಚರಣೆಯ ನಂತರ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದಿದೆ. ಆದರೆ, ಸೆರೆಸಿಕ್ಕಿರುವುದು ಅದೇ ನರಭಕ್ಷಕ ಚಿರತೆಯೇ ಎಂಬ ಅನುಮಾನ ಮೂಡಿಸಿದೆ.

Read Full Story

10:14 AM (IST) May 24

ಕಾಳಿ ನದಿ ರಾಫ್ಟಿಂಗ್ - ಕರೆಂಟ್ ಶಾಕ್ ಮೂಲಕ ಓರ್ವನ ಸಾವಿನಲ್ಲಿ ಅಂತ್ಯವಾದ ಬೆಂಗಳೂರು ಟೆಕ್ಕಿಗಳ ಸಾಹಸ ಯಾತ್ರೆ!

ಉತ್ತರ ಕನ್ನಡದ ಕಾಳಿ ನದಿಯಲ್ಲಿ ರಿವರ್ ರಾಫ್ಟಿಂಗ್ ಮಾಡುವಾಗ ವಿದ್ಯುತ್ ಸ್ಪರ್ಶಿಸಿ ಬೆಂಗಳೂರಿನ ಸಾಫ್ಟ್‌ವೇರ್ ಇಂಜಿನಿಯರ್ ಒಬ್ಬರು ಮೃತಪಟ್ಟಿದ್ದಾರೆ. ರೆಸಾರ್ಟ್‌ನವರು ಅಳವಡಿಸಿದ್ದ ಪಂಪ್ ಸೆಟ್‌ನಿಂದ ನೀರಿಗೆ ವಿದ್ಯುತ್ ಪ್ರವಹಿಸಿದ್ದೇ ಈ ದುರಂತಕ್ಕೆ ಕಾರಣವಾಗಿದೆ.

Read Full Story

10:05 AM (IST) May 24

ಕರಾವಳಿಯ ಕನಸಿನ ರೈಲು ವಂದೇ ಭಾರತ್ ಸಂಚಾರ ಜೂನ್‌ನಿಂದ ಅಧಿಕೃತ ಆರಂಭ - ಸಚಿವ ವಿ ಸೋಮಣ್ಣ

ಮಂಗಳೂರು-ಬೆಂಗಳೂರು ನಡುವಿನ ಬಹುನಿರೀಕ್ಷಿತ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು ಸಂಚಾರವು ಜೂನ್‌ನಿಂದ ಅಧಿಕೃತವಾಗಿ ಆರಂಭಗೊಳ್ಳಲಿದೆ ಎಂದು ಕೇಂದ್ರ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ. ಸಕಲೇಶಪುರ-ಕುಕ್ಕೆ ಸುಬ್ರಹ್ಮಣ್ಯ ಮಾರ್ಗದ ವಿದ್ಯುದೀಕರಣ ಪೂರ್ಣಗೊಂಡಿದ್ದು, ಇದು ಹೆಚ್ಚುವರಿ ರೈಲು ಸಂಚಾರಕ್ಕೆ ಅವಕಾಶ ಕಲ್ಪಿಸಿದೆ. ಅಲ್ಲದೆ, ಕಾರವಾರದವರೆಗೆ ರೈಲು ವಿಸ್ತರಣೆ, ಶಿವಮೊಗ್ಗ-ಮಂಗಳೂರು ಹೊಸ ಮಾರ್ಗದ ಬಗ್ಗೆಯೂ ಪ್ರಸ್ತಾಪಿಸಲಾಗಿದೆ.

Read Full Story

09:24 AM (IST) May 24

Cockroach Janata Part - ಕಾಕ್ರೋಚ್ ಭಯ ಕಾಂಗ್ರೆಸ್‌ಗೆ ಹೊರತು ಬಿಜೆಪಿಗಲ್ಲ; ಪ್ರಲ್ಹಾದ್ ಜೋಶಿ ಕೊಟ್ಟ ಉತ್ತರ ಕೇಳಿ ಶಾಕ್!

ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರು, 'ಕಾಕ್ರೋಚ್ ಜನತಾ ಪಾರ್ಟಿ'ಯಿಂದ ಕಾಂಗ್ರೆಸ್‌ಗೆ ಭಯವಾಗಿದೆ, ಬಿಜೆಪಿಗಲ್ಲ ಎಂದು ತಿರುಗೇಟು ನೀಡಿದ್ದಾರೆ. ಅಲ್ಲದೆ, ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ರಚಿಸುವ ಹೋರಾಟಕ್ಕೆ ತಮ್ಮ ಬೆಂಬಲವಿದೆ ಎಂದು ಸ್ಪಷ್ಟಪಡಿಸಿದ್ದಾರೆ.
Read Full Story

09:13 AM (IST) May 24

ಮುಳ್ಳಯ್ಯನಗಿರಿಯಲ್ಲಿ ಸೃಷ್ಟಿಯಾಯ್ತು ‘ಮಿನಿ ಹಿಮಾಲಯ’ - ಮುಂಗಾರಿಗೂ ಮುನ್ನವೇ ಮಂಜಿನ ನಗರಿಯಾದ ಕಾಫಿನಾಡು!

ಮುಂಗಾರು ಪೂರ್ವ ಮಳೆಯಿಂದಾಗಿ ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ ಶಿಖರವು ದಟ್ಟವಾದ ಮಂಜಿನಿಂದ ಆವೃತವಾಗಿದ್ದು, 'ಮಿನಿ ಹಿಮಾಲಯ'ದಂತೆ ಕಂಗೊಳಿಸುತ್ತಿದೆ. ಈ ಸ್ವರ್ಗೀಯ ವಾತಾವರಣವು ವಾರಾಂತ್ಯದಲ್ಲಿ ಸಹಸ್ರಾರು ಪ್ರವಾಸಿಗರನ್ನು ಆಕರ್ಷಿಸುತ್ತಿದ್ದು, ಅವರು ಈ ವಿಹಂಗಮ ನೋಟವನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ.
Read Full Story

More Trending News