LIVE NOW
Published : Sep 18, 2026, 07:15 AM ISTUpdated : Sep 18, 2026, 09:32 AM IST

Karnataka News Live: ಶಿವಮೊಗ್ಗ - ಉದ್ಯೋಗಕಾಂಕ್ಷಿಗಳಿಗೆ ಗುಡ್‌ ನ್ಯೂಸ್; ಶನಿವಾರ ‘ಮಲೆನಾಡು ಮೆಗಾ ಜಾಬಥಾನ್‌ 2026’

ಸಾರಾಂಶ

ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ 9 ಅಂಶಗಳ ಹೊಸ ಮಿಷನ್‌ ಆರಂಭಿಸಿದ ಸಿಎಂ ಡಿ.ಕೆ. ಶಿವಕುಮಾರ್

1. ಹೂಡಿಕೆ ಹೆಚ್ಚಳಕ್ಕೆ ಆರ್ಥಿಕ ಮಿಷನ್‌ 2. ಕೃಷಿ ಮೌಲ್ಯವರ್ಧನೆಗೆ ಜೈವಿಕ ಆರ್ಥಿಕ ಮಿಷನ್‌ 3. ರಕ್ತಹೀನತೆ ವಿರುದ್ಧ ಅಭಿಯಾನ 4. ಕಲಬುರಗಿಗೆ ಮೂಲಸೌಕರ್ಯ 5. 50000 ನಿವೇಶನ 6. ಕಲಬುರಗಿಯಲ್ಲಿ ಐಟಿ ಪಾರ್ಕ್‌ 7. ಪ್ರವಾಸೋದ್ಯಮ, ಪಾರಂಪರಿಕ ತಾಣಗಳ ಅಭಿವೃದ್ಧಿ 8. ಕ್ರೀಡಾಭಿವೃದ್ಧಿಗೆ ಸ್ಪೋರ್ಟ್ಸ್‌ ಸಿಟಿ 9. ಹಸಿರು ಹೊದಿಕೆ ಹೆಚ್ಚಳಕ್ಕೆ ಕೋಟಿ ವೃಕ್ಷ ಅಭಿಯಾನ

ಕಲ್ಯಾಣ ನಾಡಿನ ಹೆಬ್ಬಾಗಿಲು ಕಲಬುರಗಿಯಲ್ಲಿ ಗುರುವಾರ ನಡೆದ 79ನೇ ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಪಾಲ್ಗೊಂಡು, ರಾಷ್ಟ್ರಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಇದೇ ವೇಳೆ, ಕಲ್ಯಾಣ ಕರ್ನಾಟಕ ಭಾಗದ ಏಳು ಜಿಲ್ಲೆಗಳಿಗೆ ಸಂಬಂಧಿಸಿದ 1,917.13 ಕೋಟಿ ರು. ಮೊತ್ತದ 940 ಕಾಮಗಾರಿಗಳಿಗೆ ಚಾಲನೆ ನೀಡಿದರು.

ಇದೇ ಮೊದಲ ಬಾರಿಗೆ ಕರಾವಳಿಯ ‘ಬಿಸಿನೆಸ್‌ ಹಬ್‌’ ಮಂಗಳೂರಿನಲ್ಲಿ ಶುಕ್ರವಾರ ರಾಜ್ಯ ಸಚಿವ ಸಂಪುಟದ ಸಭೆ ನಡೆಯಲಿದ್ದು, ಇದಕ್ಕಾಗಿ ಮಂಗಳೂರು ನಗರ ಸಕಲ ಸಜ್ಜಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಹೆಸರನ್ನು ‘ಮಂಗಳೂರು ಜಿಲ್ಲೆ’ ಎಂಬುದಾಗಿ ಬದಲಾವಣೆ ಮಾಡುವ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆಯಿದೆ. ಜೊತೆಗೆ, ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿಗೆ ಒತ್ತು ನೀಡಲು ಸಿಆರ್‌ಝೆಡ್‌ ನಿಯಮ ಸಡಿಲಿಕೆ ಘೋಷಣೆ ಮಾಡುವ ನಿರೀಕ್ಷೆಯಿದೆ.

09:32 AM (IST) Sep 18

ಶಿವಮೊಗ್ಗ - ಉದ್ಯೋಗಕಾಂಕ್ಷಿಗಳಿಗೆ ಗುಡ್‌ ನ್ಯೂಸ್; ಶನಿವಾರ ‘ಮಲೆನಾಡು ಮೆಗಾ ಜಾಬಥಾನ್‌ 2026’

ಶಿವಮೊಗ್ಗದ ಎನ್‌ಇಎಸ್ ಮೈದಾನದಲ್ಲಿ ಸೆಪ್ಟೆಂಬರ್ 19ರಂದು ಡಾ. ಶರತ್ ಮರಿಯಪ್ಪ ಫೌಂಡೇಷನ್ ವತಿಯಿಂದ 'ಮಲೆನಾಡು ಮೆಗಾ ಜಾಬಥಾನ್ 2026' ಆಯೋಜಿಸಲಾಗಿದೆ. ಈ ಬೃಹತ್ ಉದ್ಯೋಗ ಮೇಳದಲ್ಲಿ 166 ಕಂಪನಿಗಳು ಭಾಗವಹಿಸುತ್ತಿದ್ದು, 10 ಸಾವಿರಕ್ಕೂ ಅಧಿಕ ಉದ್ಯೋಗಾವಕಾಶಗಳು ಲಭ್ಯವಿವೆ. 8ನೇ ತರಗತಿಯಿಂದ ಸ್ನಾತಕೋತ್ತರ ಪದವೀಧರರು ಹಾಗೂ ಅಂಗವಿಕಲರು ಇದರಲ್ಲಿ ಪಾಲ್ಗೊಳ್ಳಬಹುದು.
Read Full Story

09:22 AM (IST) Sep 18

ಮಂಗಳೂರಿನಲ್ಲಿ ಸಿಎಂ ಡಿನ್ನರ್ ಪಾರ್ಟಿಗೆ ಬಿಜೆಪಿ ಗೈರು, ಕಾರಣ ಹೇಳಿ ಊಟಕ್ಕೆ ಬಾರದ ಕಮಲ ನಾಯಕರು

ಮಂಗಳೂರಿನಲ್ಲಿ ಐತಿಹಾಸಿಕ ಸಚಿವ ಸಂಪುಟ ಸಭೆಗೂ ಮುನ್ನ ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ನಡೆದ ಡಿನ್ನರ್ ಸಭೆಗೆ ಬಿಜೆಪಿ ಶಾಸಕರು ಗೈರಾಗಿದ್ದಾರೆ. ಪ್ರಧಾನಿ ಮೋದಿ ಜನ್ಮದಿನದ ಹಿನ್ನೆಲೆಯಲ್ಲಿ ತಾವು ಭಾಗವಹಿಸುತ್ತಿಲ್ಲ ಎಂದು ಬಿಜೆಪಿ ಮೊದಲೇ ತಿಳಿಸಿತ್ತು. ಇದೇ ವೇಳೆ ನೂತನ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯಲಿರುವ ಸಂಪುಟ ಸಭೆಗೆ ಸಕಲ ಸಿದ್ಧತೆ ಪೂರ್ಣಗೊಂಡಿದೆ.
Read Full Story

09:20 AM (IST) Sep 18

ಟ್ಯಾಟೂ ಘೋಸ್ಟ್ ಅರ್ಜುನ್ ಮೇಲೆ ಹಲ್ಲೆ ಕೇಸಲ್ಲಿ ಟ್ವಿಸ್ಟ್ - ವಿಡಿಯೋ ಹೇಳಿಕೆಯಲ್ಲಿ ಮಹಿಳೆ ಹೇಳಿದ್ದೇನು?

ಟ್ಯಾಟೂ ಘೋಸ್ಟ್ ಖ್ಯಾತಿಯ ಟ್ಯಾಟೂ ಆರ್ಟಿಸ್ಟ್ ಅರ್ಜುನ್ ಮತ್ತು ಸಂಪ್ರಿತಾ ಎಂಬ ಮಹಿಳೆಯ ನಡುವಿನ ಹಲ್ಲೆ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಅರ್ಜುನ್ ದೂರಿನ ಬೆನ್ನಲ್ಲೇ, ಆತನೇ ತನ್ನ ಮೇಲೆ ಹಲ್ಲೆ ಹಾಗೂ ಬ್ಲ್ಯಾಕ್‌ಮೇಲ್ ಮಾಡಿದ್ದಾನೆ ಎಂದು ಮಹಿಳೆ ಗಂಭೀರ ಆರೋಪ ಮಾಡಿದ್ದಾರೆ. ಇದಕ್ಕೆ ಅರ್ಜುನ್, ಕಾನೂನು ಹೋರಾಟದ ಮೂಲಕ ನ್ಯಾಯ ಪಡೆಯುವುದಾಗಿ ಸ್ಪಷ್ಟಪಡಿಸಿದ್ದಾರೆ.

Read Full Story

08:56 AM (IST) Sep 18

SSLC ವಿದ್ಯಾರ್ಥಿಗಳೇ ಗಮನಿಸಿ! ಈ ಬಾರಿ ಪ್ರಿಪರೇಟರಿ ಮಾದರಿಯಲ್ಲೇ ಎಸ್‌ಎ-1 ಪರೀಕ್ಷೆ, ಏನಿದು ಹೊಸ ಬದಲಾವಣೆ?

SSLC Exam Update: ಎಸ್‌ಎಸ್‌ಎಲ್‌ಸಿ(SSCL) ವಿದ್ಯಾರ್ಥಿಗಳಿಗೆ 2026-27ನೇ ಸಾಲಿನ ರಾಜ್ಯಮಟ್ಟದ 1ನೇ ಸಂಕಲನಾತ್ಮಕ ಮೌಲ್ಯಮಾಪನವನ್ನು (ಎಸ್‌ಎ-1) ಸೆ.23 ರಿಂದ 30 ರವರೆಗೆ ನಡೆಸಲು ಶಾಲಾ ಶಿಕ್ಷಣ ಇಲಾಖೆ ವೇಳಾಪಟ್ಟಿ ಪ್ರಕಟಿಸಿದೆ.

Read Full Story

08:55 AM (IST) Sep 18

ಕರಾವಳಿ, ಮಲೆನಾಡು ಅಭಿವೃದ್ಧಿಗೆ ಸರ್ಕಾರದ ಹೊಸ ಪ್ಲಾನ್, ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಿಎಂ ಡಿಕೆಶಿ ಹೇಳಿಕೆ

ಕರಾವಳಿ ಮತ್ತು ಮಲೆನಾಡು ಭಾಗದ ಮಾನವ ಹಾಗೂ ನೈಸರ್ಗಿಕ ಸಂಪನ್ಮೂಲಗಳನ್ನು ಬಳಸಿಕೊಂಡು ಅಭಿವೃದ್ಧಿಯ ಹೊಸ ರೂಪ ನೀಡಲು ಸರ್ಕಾರ ಮುಂದಾಗಿದೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಮಂಗಳೂರಿನಲ್ಲಿ ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಈ ಭಾಗದ ಬೇಡಿಕೆಗಳು ಹಾಗೂ ಕಸ್ತೂರಿರಂಗನ್ ವರದಿ ಕುರಿತು ಚರ್ಚಿಸಲಾಗುವುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.
Read Full Story

08:45 AM (IST) Sep 18

ಧರ್ಮಸ್ಥಳಕ್ಕೆ ರೈಲು - ಮಂಗಳೂರು-ಉಜಿರೆ-ಧರ್ಮಸ್ಥಳ ಮೂಲಕ ಸುಬ್ರಹ್ಮಣ್ಯಕ್ಕೆ ಹೊಸ ರೈಲು ಮಾರ್ಗಕ್ಕೆ ಬೇಡಿಕೆ!

ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಪುಣ್ಯಕ್ಷೇತ್ರ ಧರ್ಮಸ್ಥಳಕ್ಕೆ ರೈಲ್ವೆ ಜಾಲವನ್ನು ವಿಸ್ತರಿಸಬೇಕೆಂಬ ಕೂಗು ಪ್ರವಾಸಿಗರು ಹಾಗೂ ಸ್ಥಳೀಯರಿಂದ ಕೇಳಿಬರುತ್ತಿದೆ. ಮಂಗಳೂರು-ಉಜಿರೆ-ಧರ್ಮಸ್ಥಳ ಮೂಲಕ ಸುಬ್ರಹ್ಮಣ್ಯಕ್ಕೆ ಹೊಸ ರೈಲು ಮಾರ್ಗ ನಿರ್ಮಾಣವಾದರೆ ಭಕ್ತರಿಗೆ, ವಿದ್ಯಾರ್ಥಿಗಳಿಗೆ ಮತ್ತು ಉದ್ಯೋಗಿಗಳಿಗೆ ಅಪಾರ ಅನುಕೂಲವಾಗಲಿದೆ.

Read Full Story

08:29 AM (IST) Sep 18

Bengaluru Traffic Jam - 5 ಕಿಮೀಗೆ ಎರಡು ಗಂಟೆ ಪ್ರಯಾಣ! ಈ ಏರಿಯಾ ಟ್ರಾಫಿಕ್ ಕಂಡು IFS ಅಧಿಕಾರಿ ಶಾಕ್

ಬೆಂಗಳೂರಿನ ವೈಟ್‌ಫೀಲ್ಡ್, ಗುಂಜೂರು ಮತ್ತು ವರ್ತೂರು ಭಾಗಗಳಲ್ಲಿ ತೀವ್ರ ಟ್ರಾಫಿಕ್ ಸಮಸ್ಯೆ ಎದುರಾಗಿದ್ದು, ಶಾಲಾ ಮಕ್ಕಳು ಕೇವಲ ನಾಲ್ಕೈದು ಕಿಲೋಮೀಟರ್ ದೂರದ ಶಾಲೆ ತಲುಪಲು ಎರಡು ಗಂಟೆಗಳ ಕಾಲ ರಸ್ತೆಯಲ್ಲೇ ಕಳೆಯುವಂತಾಗಿದೆ. ತುರ್ತು ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

Read Full Story

08:29 AM (IST) Sep 18

ಕಂಟೋನ್ಮೆಂಟ್ ರೈಲ್ವೆ ನಿಲ್ದಾಣ ಡಿಸೆಂಬರ್‌ಗೆ ಪೂರ್ಣ, ₹485 ಕೋಟಿ ವೆಚ್ಚದಲ್ಲಿ ಮರು ಅಭಿವೃದ್ಧಿ - ಸಚಿವ ಸೋಮಣ್ಣ

ಕೇಂದ್ರ ಸಚಿವ ವಿ.ಸೋಮಣ್ಣ ಅವರು ಬೆಂಗಳೂರು ಕಂಟೋನ್ಮೆಂಟ್ ಮತ್ತು ಯಶವಂತಪುರ ರೈಲು ನಿಲ್ದಾಣಗಳ ಮರು ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಪ್ರಧಾನಿ ಮೋದಿಯವರ ಜನ್ಮದಿನದ ಅಂಗವಾಗಿ ನಡೆದ 'ಸೇವಾ ದಿವಸ' ಕಾರ್ಯಕ್ರಮದಲ್ಲಿ ಅವರು ಈ ವಿಷಯ ತಿಳಿಸಿದರು.
Read Full Story

08:08 AM (IST) Sep 18

ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಸಿಎಂ ಡಿ.ಕೆ.ಶಿವಕುಮಾರ್ ಘೋಷಿಸಿದ 9 ಯೋಜನೆಗಳೇನು? ಯಾರಿಗೆ ಲಾಭ?

ಕಲಬುರಗಿಯಲ್ಲಿ ನಡೆದ 79ನೇ ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕಲ್ಯಾಣ ಕರ್ನಾಟಕದ ಅಭಿವೃದ್ಧಿಗಾಗಿ 9 ಅಂಶಗಳ ಯೋಜನೆಯನ್ನು ಘೋಷಿಸಿದ್ದಾರೆ. ಇದರಲ್ಲಿ ಎಕಾನಮಿ ಮಿಷನ್, ಐಟಿ ಪಾರ್ಕ್, ಪ್ರವಾಸೋದ್ಯಮ ಅಭಿವೃದ್ಧಿ ಮತ್ತು 50,000 ನಿವೇಶನಗಳ ವಿತರಣೆ ಸೇರಿವೆ. ಜೊತೆಗೆ 1,917.13 ಕೋಟಿ ರೂ. ಮೊತ್ತದ 940 ಕಾಮಗಾರಿಗಳಿಗೆ ಚಾಲನೆ ನೀಡಿದರು.

Read Full Story

08:03 AM (IST) Sep 18

ಪ್ರಧಾನಿ ಮೋದಿ ಜನ್ಮದಿನದಂದು ದೀಪ ಹಚ್ಚಿದ ಕುರಿತು ಬಿಕೆ ಹೇಳಿದ ಆ ಮಾತಿಗೆ ಬಿಜೆಪಿ ಕಿಡಿ!

ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನವನ್ನು ಯುವ ಕಾಂಗ್ರೆಸ್ 'ವಿಶ್ವ ನಿರುದ್ಯೋಗ ದಿನ'ವನ್ನಾಗಿ ಆಚರಿಸಿ ಪ್ರತಿಭಟನೆ ನಡೆಸಿದೆ. ದೇಶದಲ್ಲಿ ಶೇ.72ರಷ್ಟು ಯುವಕರು ನಿರುದ್ಯೋಗದಿಂದ ಬಳಲುತ್ತಿದ್ದು, ಉದ್ಯೋಗ ಸೃಷ್ಟಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಬಿ.ಕೆ. ಹರಿಪ್ರಸಾದ್ ಆರೋಪಿಸಿದರು.

Read Full Story

07:27 AM (IST) Sep 18

ಕರಾವಳಿಯಲ್ಲಿ ಮೊದಲ ಕ್ಯಾಬಿನೆಟ್‌ - ದ.ಕ.ಬದಲು ಮಂಗಳೂರು, ತುಳುಗೆ 2ನೇ ರಾಜ್ಯ ಭಾಷೆ, ಟೂರಿಸಂಗಾಗಿ CRZ ನೀತಿ ಪರಿಷ್ಕಾರ?

ಮಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದ್ದು, ಕರಾವಳಿ ಅಭಿವೃದ್ಧಿಗೆ 5000 ಕೋಟಿ ರೂ. ಪ್ಯಾಕೇಜ್ ಸೇರಿದಂತೆ ಹಲವು ಮಹತ್ವದ ಘೋಷಣೆಗಳ ನಿರೀಕ್ಷೆಯಿದೆ. ತುಳು ಭಾಷೆಗೆ 2ನೇ ರಾಜ್ಯ ಭಾಷೆ ಸ್ಥಾನಮಾನ, ಜಿಲ್ಲೆಯ ಹೆಸರು ಬದಲಾವಣೆ ಸಾಧ್ಯತೆಯಿದೆ. ಸಭೆಗೂ ಮುನ್ನ ಮುಖ್ಯಮಂತ್ರಿ ಹಾಗೂ ಸಚಿವರು ತೆರೆದ ಬಸ್‌ನಲ್ಲಿ ರೋಡ್ ಶೋ ನಡೆಸಲಿದ್ದಾರೆ.

Read Full Story

More Trending News