ಕಾಂಗ್ರೆಸ್ ಸರ್ಕಾರದ 3ನೇ ವರ್ಷದ ಸಂಭ್ರಮದ ಅಂಗವಾಗಿ ತುಮಕೂರಿನಲ್ಲಿ ಬೃಹತ್ ಸಾಧನಾ ಸಮಾವೇಶ ನಡೆಯಲಿದ್ದು, ಒಂದೇ ವೇದಿಕೆಯಲ್ಲಿ 1.52 ಲಕ್ಷ ಮಂದಿಗೆ ಹಕ್ಕು ಪತ್ರ ನೀಡುವ ಮೂಲಕ ಗಿನ್ನೆಸ್ ದಾಖಲೆ ನಿರ್ಮಿಸಲು ಸಿದ್ಧತೆ ನಡೆಸಲಾಗಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಭಾಗಿಯಾಗಲಿದ್ದಾರೆ. ಇನ್ನು ಸಮಾವೇಶದಲ್ಲಿ ಕಂದಾಯ ಇಲಾಖೆಯ 60 ಸಾವಿರ, ಗ್ರಾಮೀಣಾಭಿವೃದ್ಧಿ ಇಲಾಖೆಯ 80 ಸಾವಿರ ಫಲಾನುಭವಿಗಳು ಪಾಲ್ಗೊಳ್ಳಲಿದ್ದಾರೆ. ಅಲ್ಲದೆ ಒಟ್ಟಾರೆ 2 ಲಕ್ಷ ಜನ ಸೇರುವ ನಿರೀಕ್ಷೆ ಇದೆ.

10:19 PM (IST) May 19
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಕೋಮು ಸೌಹಾರ್ದತೆಯ ದ್ಯೋತಕವೆಂದು ಭಾವಿಸಿ ಹಿಂದೂ ವಿಧವೆಯೊಬ್ಬರಿಗೆ ಮನೆ ಕೊಡಿಸಲು ಬಂದ ಬುರ್ಖಾಧಾರಿ ಮಹಿಳೆಯರಿಗೆ ಸಹಾಯ ಮಾಡಲು ಮುಂದಾದರು. ಆದರೆ, ಆ ಬುರ್ಖಾಧಾರಿ ಮಹಿಳೆಯರಲ್ಲಿ ಒಬ್ಬರು ಆ ವಿಧವೆಯ ಮತಾಂತರಗೊಂಡ ಮಗಳೇ ಎಂಬ ಸತ್ಯ ಬಯಲಾಗಿದೆ, ಮುಂದೇನು?
09:27 PM (IST) May 19
09:22 PM (IST) May 19
ರಾಕಿಂಗ್ ಸ್ಟಾರ್ ಯಶ್ ಅವರ 'ಟಾಕ್ಸಿಕ್' ಸಿನಿಮಾ ಮತ್ತೆ ಸುದ್ದಿಯಲ್ಲಿದೆ. ಚಿತ್ರದ ರಿಲೀಸ್ ಡೇಟ್ ಬಗ್ಗೆ ಹೊಸ ಅಪ್ಡೇಟ್ ಒಂದು ಹೊರಬಿದ್ದಿದ್ದು, ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿಸಿದೆ. ನಿರ್ದೇಶಕಿ ಗೀತು ಮೋಹನ್ದಾಸ್ ಅವರ ಈ ಚಿತ್ರದ ಬಿಡುಗಡೆ ದಿನಾಂಕವನ್ನು ಈ ಹಿಂದೆ ಹಲವು ಬಾರಿ ಮುಂದೂಡಲಾಗಿತ್ತು.
08:48 PM (IST) May 19
ಬಳ್ಳಾರಿಯ ಕಂಪ್ಲಿಯಲ್ಲಿ, ಪತಿ ಮತ್ತು ಅತ್ತೆಯ ಮಾನಸಿಕ ಕಿರುಕುಳಕ್ಕೆ ಬೇಸತ್ತು ಐಶ್ವರ್ಯ ಎಂಬ ಗೃಹಿಣಿ ಆ*ತ್ಮಹ*ತ್ಯೆ ಮಾಡಿಕೊಂಡಿದ್ದಾರೆ. ಪ್ರೀತಿಸಿ ಮದುವೆಯಾಗಿದ್ದರೂ, ನಿರಂತರ ಗೃಹಹಿಂಸೆಯಿಂದ ನೊಂದು ತವರುಮನೆಯಲ್ಲಿ ನೇಣಿಗೆ ಶರಣಾಗಿದ್ದು, ಡೆತ್ನೋಟ್ ಆಧರಿಸಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
08:27 PM (IST) May 19
ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರಕಾರ ಮತ್ತು ಪಕ್ಷ ಗಂಗಾವತಿ ವಿಧಾನ ಸಭಾ ಕ್ಷೇತ್ರದ ಸ್ಥಳೀಯ ಮುಖಂಡರನ್ನು ಕಡೆಗಣಿಸುತ್ತಿದ್ದಾರೆಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಚ್.ಆರ್.ಶ್ರೀನಾಥ ಆಕ್ರೋಶ ವ್ಯಕ್ತಪಡಿಸಿದ್ದಾರೆ.
07:41 PM (IST) May 19
06:20 PM (IST) May 19
06:17 PM (IST) May 19
ಬಾಗಲಕೋಟೆಯ ಪ್ರಸಿದ್ಧ ಬಾದಾಮಿ ಗುಹಾಂತರ ದೇವಾಲಯದ ಆವರಣದಲ್ಲಿ ಚಪ್ಪಲಿ ಧರಿಸಿದ್ದ ಮುಸ್ಲಿಂ ಮಹಿಳೆಯನ್ನು ಇನ್ನೊಬ್ಬ ಮಹಿಳಾ ಪ್ರವಾಸಿಗರು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಇಬ್ಬರ ನಡುವಿನ ವಾಗ್ವಾದದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
05:37 PM (IST) May 19
ಶಿವಂ ಅಸೋಸಿಯೇಟ್ಸ್ನ ₹4500 ಕೋಟಿ ಠೇವಣಿ ವಂಚನೆ ಪ್ರಕರಣವು ಹೊಸ ತಿರುವು ಪಡೆದಿದೆ. ಸಾರ್ವಜನಿಕರ ಹಣದಿಂದ ಪ್ರಭಾವಿ ವ್ಯಕ್ತಿಯೊಬ್ಬರಿಗೆ ₹1.5 ಕೋಟಿ ಮೌಲ್ಯದ ಐಷಾರಾಮಿ ಕಾರನ್ನು ಉಡುಗೊರೆಯಾಗಿ ನೀಡಿದ ಶಂಕೆ ವ್ಯಕ್ತವಾಗಿದ್ದು, ಸಿಐಡಿ ಈ ಕುರಿತು ತನಿಖೆ ನಡೆಸುತ್ತಿದೆ.
05:35 PM (IST) May 19
05:28 PM (IST) May 19
ಮನಸಾರೆ ಪ್ರೀತಿಸಿ, ಮನೆಯವರನ್ನೂ ಒಪ್ಪಿಸಿ ಧರ್ಮಕ್ಷೇತ್ರದಲ್ಲಿ ಮದುವೆಯೂ ಆಗಿ ಒಂದು ಮುದ್ದಾದ ಗಂಡು ಮಗುವಿಗೆ ಜನ್ಮ ಕೊಟ್ಟಿದ್ದ ದರ್ಶನ್ರ ಮುದ್ದು ರಾಕ್ಷಸಿ ವಿಜಯಲಕ್ಷ್ಮೀ ಜೀವನ ಬೀದಿಗೆ ಬಂದಿದ್ದು 2011ರಲ್ಲಿ.
05:10 PM (IST) May 19
ಎಂತದ್ದೇ ಕಷ್ಟಗಳು ಎದುರಾದ್ರು, ಎದೆಗುಂದದೆ ಇಷ್ಟು ವರ್ಷಗಳಿಂದ ಸಂಸಾರದ ದೋಣಿಯನ್ನ ಮುನ್ನಡೆಸುತ್ತಿರೋ ದರ್ಶನ್ ವಿಜಯಲಕ್ಷ್ಮೀಗೆ ಇದೇ ಮೊದಲ ಭಾರಿಗೆ ದೂರಾಗಿ ವಿವಾಹ ವಾರ್ಷಿಕೋತ್ಸವ ಮಾಡಿಕೊಳ್ಳಬೇಕಿದೆ.
04:48 PM (IST) May 19
04:45 PM (IST) May 19
ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್, 8 ತಿಂಗಳ ನಂತರ ಮೊದಲ ಬಾರಿಗೆ ತಮ್ಮ ಪತ್ನಿ ವಿಜಯಲಕ್ಷ್ಮಿ ಮತ್ತು ಮಗ ವಿನೀಶ್ ಅವರನ್ನು ಪರಪ್ಪನ ಅಗ್ರಹಾರ ಜೈಲಿನಲ್ಲಿ ಭೇಟಿಯಾದರು. 23ನೇ ಮದುವೆ ವಾರ್ಷಿಕೋತ್ಸವದಂದು ನಡೆದ ಈ ವಿಶೇಷ ಮುಖಾಮುಖಿಗೆ ಅವಕಾಶ ನೀಡಲಾಗಿತ್ತು.
04:38 PM (IST) May 19
ತನ್ನ ತಂಗಿ ಹಂಸಿಕಾಳಿಗೆ ಕೊರಿಯನ್ ಬಾಯ್ಫ್ರೆಂಡ್ ಬೇಕು ಅನ್ನೋ ಆಸೆ ಇದೆ. ಅಷ್ಟೇ ಅಲ್ಲ, ಅಮ್ಮನಿಗೂ ಕೊರಿಯನ್ ಅಳಿಯ ಬೇಕು ಅನ್ನೋ ಆಸೆ ಬಂದಿತ್ತು ಅಂತ ನಟಿ ಅಹಾನಾ ಕೃಷ್ಣ ಹೇಳಿಕೊಂಡಿದ್ದಾರೆ.
04:24 PM (IST) May 19
ಹವಾಮಾನ ಇಲಾಖೆಯ ಚಂಡಮಾರುತ ಹಾಗೂ ಭಾರೀ ಮಳೆಯ ಮುನ್ಸೂಚನೆಯಿಂದಾಗಿ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಜಲಸಾಹಸ ಕ್ರೀಡೆ ಮತ್ತು ಪ್ರವಾಸಿ ಬೋಟಿಂಗ್ ಅನ್ನು ನಿಷೇಧಿಸಲಾಗಿದೆ. ಪ್ರವಾಸಿಗರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಗೋಕರ್ಣ, ಮುರುಡೇಶ್ವರ, ಮತ್ತು ನೇತ್ರಾಣಿ ದ್ವೀಪದಂತಹ ಪ್ರಮುಖ ತಾಣಗಳಲ್ಲಿ ನಿರ್ಬಂಧ.
04:19 PM (IST) May 19
ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಚುರುಕುಗೊಂಡಿದ್ದು, ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. 10 ಜಿಲ್ಲೆಗಳಿಗೆ 'ಆರೆಂಜ್ ಅಲರ್ಟ್' ಹಾಗೂ ಬೆಂಗಳೂರು ಸೇರಿದಂತೆ ಉಳಿದ ಜಿಲ್ಲೆಗಳಿಗೆ 'ಯೆಲ್ಲೋ ಅಲರ್ಟ್' ಘೋಷಿಸಲಾಗಿದ್ದುದೆ.
03:47 PM (IST) May 19
02:51 PM (IST) May 19
02:30 PM (IST) May 19
01:05 PM (IST) May 19
Actor Vijayalakshmi Darshan: ವಿಜಯಲಕ್ಷ್ಮೀ ಹಾಗೂ ನಟ ದರ್ಶನ್ ತೂಗುದೀಪ ಅವರು 2003 ಮೇ 19ರಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಇಂದು ವಿವಾಹ ವಾರ್ಷಿಕೋತ್ಸವದ ಖುಷಿಯಿದ್ದರೂ ಕೂಡ, ದರ್ಶನ್ ಮಾತ್ರ ಜೈಲಿನಲ್ಲಿದ್ದಾರೆ. ಈಗ ವಿಜಯಲಕ್ಷ್ಮೀ ಅವರು ಭಾವುಕ ಪೋಸ್ಟ್ ಹಂಚಿಕೊಂಡಿದ್ದಾರೆ.
12:49 PM (IST) May 19
ವಿಜಯಪುರ ಜಿಲ್ಲೆಯ ತಿಕೋಟ ಭಾಗದಲ್ಲಿ ಇಂದು ಬೆಳಿಗ್ಗೆ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನರು ಆತಂಕ. ಭಾರೀ ಶಬ್ಧದೊಂದಿಗೆ ಭೂಮಿ ನಡುಗಿದ ಅನುಭವವಾದ ಕಾರಣ, ಹಲವು ಗ್ರಾಮಗಳ ಜನರು ಮನೆಗಳಿಂದ ಹೊರಗೆ ಓಡಿ ಬಂದಿದ್ದಾರೆ. ಈ ಭಾಗದಲ್ಲಿ ಪದೇಪದೆ ಭೂಕಂಪನ ಸಂಭವಿಸುತ್ತಿರುವುದು ಜನರಲ್ಲಿ ಭಯ ಮೂಡಿಸಿದೆ.
12:41 PM (IST) May 19
12:07 PM (IST) May 19
ಕೆಎಸ್ಆರ್ಟಿಸಿ ಸಿಬ್ಬಂದಿ ಕರೆ ನೀಡಿರುವ ಸಾರಿಗೆ ಮುಷ್ಕರಕ್ಕೆ ಆಕ್ಷೇಪಿಸಿ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ಮುಷ್ಕರದಿಂದ ವಿದ್ಯಾರ್ಥಿಗಳು, ಮಹಿಳೆಯರು ಸೇರಿದಂತೆ ಸಾರ್ವಜನಿಕರಿಗೆ ಆಗುವ ತೊಂದರೆಯನ್ನು ಅರ್ಜಿಯಲ್ಲಿ ವಿವರಿಸಲಾಗಿದೆ.
08:59 AM (IST) May 19
08:59 AM (IST) May 19
08:12 AM (IST) May 19
07:36 AM (IST) May 19
ಕಾಂಗ್ರೆಸ್ ಸರ್ಕಾರದ ಮೂರನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ತುಮಕೂರಿನಲ್ಲಿ 'ಸಾಧನಾ ಸಮಾವೇಶ' ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ 1.52 ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರಗಳನ್ನು ವಿತರಿಸುವ ಮೂಲಕ ಗಿನ್ನೆಸ್ ವಿಶ್ವ ದಾಖಲೆ ನಿರ್ಮಿಸಲು ಸಿದ್ಧತೆ ನಡೆಸಲಾಗಿದೆ.